Tag: tipper

  • ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

    ಈ ಘಟನೆ ಹೊಸೂರು ಮುಖ್ಯರಸ್ತೆ ಹೊಸರೋಡ್ ಜಂಕ್ಷನ್ ನಲ್ಲಿ ನಡೆದಿದೆ. ತನ್ನ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಮಂಜುನಾಥ್ ಕೆಳಗೆ ಬಿದ್ದಿದ್ದು, ಅವರ ಮೇಲೆ ಟಿಪ್ಪರ್ ಹರಿದಿದೆ. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಟಿಪ್ಪರ್ ಚಾಲಕ ಗಣೇಶನನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

    ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

  • ವೇಗವಾಗಿ ಬಂದ ಬೈಕ್ ಪಿಕಪ್ ಟ್ರಕ್ ಗೆ ಡಿಕ್ಕಿ- ಸವಾರರಿಬ್ಬರ ದುರ್ಮರಣ

    ವೇಗವಾಗಿ ಬಂದ ಬೈಕ್ ಪಿಕಪ್ ಟ್ರಕ್ ಗೆ ಡಿಕ್ಕಿ- ಸವಾರರಿಬ್ಬರ ದುರ್ಮರಣ

    ಕಾರವಾರ: ಬೈಕ್ ಮತ್ತು ಪಿಕಪ್ ಟ್ರಕ್ ನಡುವೆ ನಡೆದ ಡಿಕ್ಕಿಯ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿವಾಡದಲ್ಲಿ ನಡೆದಿದೆ.

    ತಾಲೂಕಿನ ಕಿರವತ್ತಿಯ ಮಾಲತೇಶ್(31) ರವಿದಾಸ್ (25) ಮೃತ ವ್ಯಕ್ತಿಗಳಾಗಿದ್ದಾರೆ.  ಯಲ್ಲಾಪುರದಿಂದ ಅಂಕೋಲದ ಕಡಗೆ ಪಿಕಪ್ ಟ್ರಕ್ ಸಾಗುತಿದ್ದ ವೇಳೆ ಕಿರುವತ್ತಿಯಿಂದ ಯಲ್ಲಾಪುರಕ್ಕೆ ಸಾಗುತ್ತಿದ್ದ ಬೈಕ್ ವೇಗದಲ್ಲಿ ಬಂದು ಪಿಕಪ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಾಲತೇಶ್ ಹಾಗೂ ರವಿದಾಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಘಟನೆಯಿಂದ ಚಾಲಕ ರವಿಶಂಕರ್ ಘಾಟಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವವನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಟಿಪ್ಪರ್

    ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಟಿಪ್ಪರ್

    ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಟಿಪ್ಪರ್‍ವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

    ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಸಂಸ್ಥೆಗೆ ಸೇರಿದ ಟಿಪ್ಪರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಟಿಪ್ಪರ್ ಹೆದ್ದಾರಿಯಲ್ಲಿ ಹೋಗುತ್ತಿದ್ದಂತೆ ಮೊದಲು ಮುಂಭಾಗದ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕೆಲ ಕ್ಷಣದಲ್ಲಿಯೇ ಟಿಪ್ಪರ್ ಹೊತ್ತಿ ಉರಿಯಲು ಆರಂಭಿಸಿದೆ.

    ಇದನ್ನು ಗಮನಿಸಿದ ಚಾಲಕ ತಕ್ಷಣ ಟಿಪ್ಪರ್ ನಿಲ್ಲಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಿ ಟಿಪ್ಪರ್ ನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆ ಮಂಚೇನಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ನಿಂತಿದ್ದ ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

    ನಿಂತಿದ್ದ ಟಿಪ್ಪರ್ ಗೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

    ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಹಿಂದಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋದಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಬಳ್ಳಾಪುರ ತಾಲೂಕು ಅರೂರು ಗೇಟ್ ಬಳಿ ನಡೆದಿದೆ.

    ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರ ಕಡೆಗೆ ಬರುತ್ತಿದ್ದ ಟೆಂಪೋ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಿಂದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಚಿಕ್ಕಬಳ್ಳಾಪುರ ತಾಲೂಕು ಮಂಚನಬಲೆ ಗ್ರಾಮದ 21 ವರ್ಷ ವಿಜಯ್ ಕುಮಾರ್ ಮೃತ ದುರ್ದೈವಿ.

     

    ಎಲ್ಲರೂ ಕೂಲಿ ಕೆಲಸಕ್ಕೆಂದು ತರಕಾರಿ ಕೀಳಲು ಹೋಗಿ ವಾಪಸ್ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ಸಂಬಂಧ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

    ಕಾಸರಗೋಡಿನ ನಟೋರಿಯಸ್ ರೌಡಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

    ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್‍ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

    ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ 45 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಕಾಲಿಯಾ ರಫೀಕ್ ಆರೋಪಿಯಾಗಿದ್ದು, ಮೂಲತಃ ಕೇರಳದ ಕಾಸರಗೋಡಿನ ಉಪ್ಪಳ ಗ್ರಾಮದ ನಿವಾಸಿ.

    ತಡರಾತ್ರಿ ಸ್ನೇಹಿತರ ಜೊತೆ ಕಾರಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ರಫೀಕ್ ಕಾರಿಗೆ ಟಿಪ್ಪರ್‍ನಲ್ಲಿ ಡಿಕ್ಕಿ ಹೊಡೆದು, ಬಳಿಕ ತಲ್ವಾರ್‍ಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ವೇಳೆ ಪರಾರಿಯಾಗಲು ಯತ್ನಿಸಿದ ರಫೀಕ್ ಮೇಲೆ ಫೈರಿಂಗ್ ಮಾಡಿದ್ದಾರೆ.

    ರಫೀಕ್ ಜೊತೆಯಿದ್ದ ಸ್ನೇಹಿತರ ಮೇಲೆಯೂ ತಲ್ವಾರಗಳಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಹಲ್ಲೆಗೊಳಗಾದ ರಫೀಕ್ ಸ್ನೇಹಿತರು ಬೆರಳಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಸ್ನೇಹಿತರು ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉಪ್ಪಳದ ನೂರ್ ಅಲಿ ಹಾಗೂ ಐವರ ತಂಡ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.

    ಸ್ಥಳಕ್ಕೆ ಎಸಿಪಿ ಶೃತಿ, ಉಳ್ಳಾಲ ಇನ್ಸ್ ಪೆಕ್ಟರ್ ಗೋಪಿಕೃಷ್ಣ, ಮಂಗಳೂರು ಸಿಸಿಬಿ ಪೊಲೀಸ್, ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.