Tag: Tippu Jayanti

  • ಟಿಪ್ಪುವನ್ನು ಬ್ರಿಟಿಷರು ಹತ್ಯೆ ಮಾಡಿದ್ದರಿಂದ ರಾಜ್ಯಕ್ಕೆ ಲಾಭವಾಗಿದೆ: ಪ್ರತಾಪ್ ಸಿಂಹ

    ಟಿಪ್ಪುವನ್ನು ಬ್ರಿಟಿಷರು ಹತ್ಯೆ ಮಾಡಿದ್ದರಿಂದ ರಾಜ್ಯಕ್ಕೆ ಲಾಭವಾಗಿದೆ: ಪ್ರತಾಪ್ ಸಿಂಹ

    ಮೈಸೂರು: ಬ್ರಿಟಿಷರು ಟಿಪ್ಪುವನ್ನು ಹತ್ಯೆ ಮಾಡಿ ಯದುವಂಶಕ್ಕೆ ಅಧಿಕಾರ ಕೊಟ್ಟಿದ್ದರಿಂದ ರಾಜ್ಯಕ್ಕೆ ಲಾಭವಾಗಿದೆ. ಇದನ್ನು ಸಿಎಂ ಅರ್ಥ ಮಾಡಿಕೊಳ್ಳಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

    ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಟಿಪ್ಪು ಹತ್ಯೆಯಾಗದಿದ್ದರೆ ಕನ್ನಂಬಾಡಿ ಕಟ್ಟೆ ನಿರ್ಮಾಣವಾಗುತ್ತಿತ್ತಾ? ಮೈಸೂರು ವಿವಿ ನಿರ್ಮಿಸಲು ಸಾಧ್ಯವಾಗುತ್ತಿತ್ತಾ ಎಂದು ಪ್ರಶ್ನಿಸುವ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡರು.


    ಟಿಪ್ಪು ಧಾರಾವಾಹಿ ತೆಗೆಯಲು ಮೈಸೂರಿಗೆ ಬಂದಿದ್ದ ಬಾಲಿವುಡ್ ನಟ ಮೈ ಸುಟ್ಟುಕೊಂಡ. ಅಷ್ಟೇ ಅಲ್ಲದೇ ಟಿಪ್ಪು ಖಡ್ಗವನ್ನು ತಂದ ವಿಜಯ್ ಮಲ್ಯ ವ್ಯಾಪಾರದಲ್ಲಿ ಕೈ ಸುಟ್ಟುಕೊಂಡ. ಮುಂದಿನ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹ ಅಧಿಕಾರ ಸುಟ್ಟುಕೊಳ್ಳುತ್ತಾರೆ ಎಂದು ಭವಿಷ್ಯ ನುಡಿದರು.

    ಇದೀಗ ಟಿಪ್ಪು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಬಿಜೆಪಿ ಹೆಸರು ತೆಗೆಯುವ ಮೂಲಕ ಸಿಎಂ ನಮ್ಮ ಹೋರಾಟಕ್ಕೆ ಹೆದರಿದ್ದಾರೆ. ನಾವು ಕಾರ್ಯಕ್ರಮಕ್ಕೆ ಬಂದರೆ ಟಿಪ್ಪುವಿನ ನಿಜಬಣ್ಣ ಬಯಲಾಗುತ್ತದೆ ಎಂಬ ಭಯ ಅವರಿಗಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ವ್ಯಂಗ್ಯವಾಡಿದರು.

    ಟಿಪ್ಪು ಜಯಂತಿಯನ್ನು ವಿರೋಧಿಸಿ ಮಹಿಳೆಯರು ಕೈಯಲ್ಲಿ ಒನಕೆ ಹಿಡಿದು ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಎಸ್.ಎ. ರಾಮದಾಸ್, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

     

  • ಟಿಪ್ಪು ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

    ಟಿಪ್ಪು ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

    ಬೆಂಗಳೂರು: ನವೆಂಬರ್ 10 ರಂದು ರಾಜ್ಯ ಸರ್ಕಾರದ ವತಿಯಿಂದ ಆಯೋಜನೆಗೊಂಡಿರುವ ಟಿಪ್ಪು ಜಯಂತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

    ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸುವಂತೆ ಕೋರಿ ಕೊಡಗಿನ ಕೆ.ಪಿ. ಮಂಜುನಾಥ್ ಎಂಬವರು ಹೈ ಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‍ನ ಹಂಗಾಮಿ ಸಿಜೆ ವಿಭಾಗೀಯ ಪೀಠವು ತಡೆ ನೀಡಲು ನಿರಾಕರಿಸಿದೆ.

    ವಿಚಾರಣೆ ವೇಳೆ ಟಿಪ್ಪು ಜಯಂತಿ ಆಚರಣೆ ತಡೆಯಲು ಕಾನೂನಿನಲ್ಲಿ ಅವಕಾಶವಿದೆಯಾ? ಅಥವಾ ಈ ಹಿಂದೆ ಆಚರಣೆ ರದ್ದು ಪಡಿಸಿರುವ ಕುರಿತು ಸುಪ್ರೀಂ ಕೋರ್ಟ್ ಅಥವಾ ಯಾವುದಾದರೂ ಹೈಕೋರ್ಟ್ ಆದೇಶವಿದೆಯೇ ಎಂದು ಅರ್ಜಿದರರನ್ನು ಪ್ರಶ್ನಿಸಿದೆ.

    ಟಿಪ್ಪು ಜಯಂತಿ ಆಚರಣೆಗೆ ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ. ಇದೊಂದು ದೊಡ್ಡ ವಿಚಾರವಾಗಿದ್ದು, ಸಮಗ್ರವಾಗಿ ವಿಚಾರಣೆ ನಡೆಯ ಬೇಕಿದೆ ಎಂದು ನ್ಯಾಯ ಪೀಠವು ಅಭಿಪ್ರಾಯಪಟ್ಟಿದೆ.

    ವರ್ಷ ಟಿಪ್ಪು ಜಯಂತಿ ವೇಳೆ ಕೊಡಗಿನ ಅಹಿತಕರ ಘಟನೆ ನಡೆದಿದೆ. ಹೀಗಾಗಿ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಪಿಐಎಲ್‍ನಲ್ಲಿ ಮನವಿ ಮಾಡಿದ್ದರು.

     

  • ಟಿಪ್ಪು ಜಯಂತಿ ಆಚರಣೆ ಅಂಗವಾಗಿ ಬೈಕ್ ರ‌್ಯಾಲಿ : ಪೊಲೀಸರ ಮೇಲೆ ಕಲ್ಲು ತೂರಾಟ

    ಟಿಪ್ಪು ಜಯಂತಿ ಆಚರಣೆ ಅಂಗವಾಗಿ ಬೈಕ್ ರ‌್ಯಾಲಿ : ಪೊಲೀಸರ ಮೇಲೆ ಕಲ್ಲು ತೂರಾಟ

    ಬಾಗಲಕೋಟೆ: ಟಿಪ್ಪು ಜಯಂತಿ ಆಚರಣೆ ಅಂಗವಾಗಿ ಬೈಕ್ ರ‌್ಯಾಲಿ ನಡೆಸಲು ಮುಂದಾದವರನ್ನು ತಡೆಯಲು ಯತ್ನಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್ ನಗರದಲ್ಲಿ ನಡೆದಿದೆ.

    ರಾಜ್ಯ ಸರ್ಕಾರ ಹಲವು ವಿರೋಧಗಳ ನಡುವೆಯೇ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲು ಮುಂದಾಗಿದೆ. ಈ ಕುರಿತು ಬಾಗಲಕೋಟೆಯ ಇಳಕಲ್ ನಗರದಲ್ಲಿ ಪೂರ್ವಭಾವಿಯಾಗಿ ಇಂದು ಬೈಕ್ ರ‌್ಯಾಲಿ ನಡೆಸಲು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೇಹದ್-ಉಲ್ ಮುಸ್ಲಿಮೀನ್(ಎಂಐಎಂ) ಕಾರ್ಯಕರ್ತರು ಮುಂದಾಗಿದ್ದರು.

    ಇಳಕಲ್ ನಗರದ ಅಂಬೇಡ್ಕರ್ ವೃತ್ತದಿಂದ ಎಂಐಎಂ ಸಂಘಟನೆಯ ಕಾರ್ಯಕರ್ತರು ಬ್ಯಾಕ್ ರ‌್ಯಾಲಿ ಆರಂಭಿಸಿದ್ದಾರೆ. ಈ ವೇಳೆ ಪೊಲೀಸರು ರ‌್ಯಾಲಿಯನ್ನು ತಡೆಯಲು ಯತ್ನಿಸಿದಾಗ ಅವರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

    ಕಲ್ಲು ತೂರಾಟದಿಂದಾಗಿ ಒಮ್ಮೆ ಇಳಕಲ್ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈಗ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದು ಘಟನೆ ಸಂಬಂಧ ಎಂಐಎಂ ಸಂಘಟನೆಯ ಮುಖ್ಯಸ್ಥ ಉಸ್ಮನ್ ಗಣಿ ಹುಮನಾಬಾದ್, ಬಾವುದ್ದೀನ್ ಖಾಜಿ, ಸೇರಿದಂತೆ ಹತ್ತು ಮಂದಿಯನ್ನು ಇಳಕಲ್ ಪೆÇಲೀಸರು ವಶಕ್ಕೆ ಪಡೆದಿದ್ದಾರೆ.

    https://www.youtube.com/watch?v=shm9ra8k-rg

     

  • ಈ ಕಾರಣಕ್ಕಾದ್ರೆ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿಲ್ಲ: ಮುತಾಲಿಕ್

    ಈ ಕಾರಣಕ್ಕಾದ್ರೆ ಟಿಪ್ಪು ಜಯಂತಿ ಆಚರಣೆಗೆ ನಮ್ಮ ವಿರೋಧವಿಲ್ಲ: ಮುತಾಲಿಕ್

    ಚಿಕ್ಕಬಳ್ಳಾಪುರ: ಟಿಪ್ಪು ಮುಸ್ಲಿಂ ಎಂಬ ಕಾರಣಕ್ಕೆ ಜಯಂತಿ ಆಚರಣೆಗೆ ನಮ್ಮ ವಿರೋಧವಿಲ್ಲ. ಆದರೆ ಟಿಪ್ಪು ಒರ್ವ ಮತಾಂಧ, ಕನ್ನಡ ವಿರೋಧಿ ಎಂಬ ಕಾರಣಕ್ಕೆ ಮಾತ್ರ ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಮುತಾಲಿಕ್, ಮುಸ್ಲಿಂ ಸಮುದಾಯದಲ್ಲಿ ಅಲ್ಲಾ ಹಾಗೂ ಪೈಗಂಬರ್ ಮಾತ್ರ ಪೂಜೆ ಮಾಡುತ್ತಾರೆ. ಆದರೆ ಮುಸ್ಲಿಮರ ವೋಟ್ ಬ್ಯಾಂಕಿಗಾಗಿ ರಾಜ್ಯ ಸರ್ಕಾರ ಜಯಂತಿ ಆಚರಣೆ ಮಾಡುತ್ತಿದೆ. ಹೀಗಾಗಿ ಈ ಬಾರಿ ರಾಜ್ಯಾದ್ಯಂತ ಮನೆ ಮನೆಗೆ ಟಿಪ್ಪುವಿನ ಮತಾಂಧತೆಯ 1 ಲಕ್ಷ ದಾಖಲೆಗಳ ಪುಸ್ತಕ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

    ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಗೆ ಕಳೆದ 2 ವರ್ಷಗಳಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈ ಬಾರಿಯೂ ಟಿಪ್ಪು ಜಯಂತಿ ಆಚರಣೆಗೆ ನಮ್ಮ ಖಂಡನೆ ಹಾಗೂ ವಿರೋಧವಿದೆ. ಇನ್ನೂ ವಿಧಾನಸೌಧ ವಜ್ರಮಹೋತ್ಸವ ವೇಳೆ ರಾಷ್ಟ್ರಪತಿಗಳಿಂದ ಟಿಪ್ಪು ಗುಣಗಾನ ವಿಚಾರ ಮಾಡಿದ್ದು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಆದರೆ ಅವರೇ ಫೈನಲ್ ಅಲ್ಲ ಅದಕ್ಕೂ ನಮ್ಮ ವಿರೋಧವಿದೆ ಎಂದು ಹೇಳಿದರು.

    ಇದೇ ವೇಳೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಫರ್ಧೆ ಮಾಡಲು ನಿರ್ಧಾರ ಮಾಡಿದ್ದು, ಬಿಜೆಪಿ ಪಕ್ಷದಿಂದ ಟಿಕೆಟ್ ಕೊಟ್ಟರೆ ಸ್ಫರ್ಧಿಸುವೆ ಇಲ್ಲವಾದರೂ ಪಕ್ಷೇತರನಾಗಿ ಸ್ಫರ್ಧೆ ಮಾಡುವುದಾಗಿ ಮುತಾಲಿಕ್ ಹೇಳಿದ್ದಾರೆ.

     

  • ಹಂದಿ ಮಾಂಸ ಪ್ರಸ್ತಾಪಿಸಿ ಮುಸ್ಲಿಂ ಸಮುದಾಯವನ್ನು ಕೆಣಕುತ್ತಿದೆ ಬಿಜೆಪಿ: ಸಚಿವ ಮಲ್ಲಿಕಾರ್ಜುನ್

    ಹಂದಿ ಮಾಂಸ ಪ್ರಸ್ತಾಪಿಸಿ ಮುಸ್ಲಿಂ ಸಮುದಾಯವನ್ನು ಕೆಣಕುತ್ತಿದೆ ಬಿಜೆಪಿ: ಸಚಿವ ಮಲ್ಲಿಕಾರ್ಜುನ್

    ದಾವಣಗೆರೆ: ಹಂದಿ ತಿಂದು ಮಸೀದಿಗೆ ಹೋಗುವಂತೆ ಸಿಎಂಗೆ ಬಿಜೆಪಿಯವರು ಆಹ್ವಾನ ನೀಡುವ ಮೂಲಕ ಬಿಜೆಪಿಯವರು ಮುಸ್ಲಿಂ ಸಮುದಾಯವನ್ನು ಕೆಣಕುವ ಕೆಲಸ ಮಾಡುತ್ತಿದ್ದಾರೆ ಎಂದು ತೋಟಗಾರಿಕೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್ ವಾಗ್ದಾಳಿ ನಡೆಸಿದ್ದಾರೆ.

    ದಾವಣಗೆರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಅವರಿಗೆ ಒಣ ತರಲೆ ಮಾಡುವುದೇ ಕೆಲಸ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೀನು ತಿಂದು ದೇವಸ್ಥಾನದ ಒಳಗೆ ಹೋಗಿಲ್ಲ. ಅವರು ದೇವಾಲಯದ ಹೊರಗೆ ನಿಂತು ಪೂಜೆ ಮಾಡಿದ್ದಾರೆ. ನಾನು ಕೂಡ ಮಾಂಸ ಸೇವನೆ ಮಾಡುತ್ತೇನೆ. ಅದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದರು.

    ಯಡಿಯೂರಪ್ಪನವರು ಟಿಪ್ಪು ಜಯಂತಿ ಆಚರಣೆ ಮಾಡಿದ್ದು, ಅವರು ಈಗ ಏಕೆ ಸುಮ್ಮನಿದ್ದಾರೆ. ನಾವು ಟಿಪ್ಪು ಜಯಂತಿ ಆಚರಣೆ ಮಾಡುತ್ತೇನೆ. ಶಿಷ್ಟಾಚಾರವಾಗಿ ಎಲ್ಲರನ್ನೂ ಆಹ್ವಾನ ಮಾಡುತ್ತೇವೆ ಬರುವುದು ಬಿಡುವುದು ಅವರಿಗೆ ಬಿಟ್ಟವಿಚಾರ ಎಂದು ಮಲ್ಲಿಕಾರ್ಜುನ್ ತಿಳಿಸಿದರು.

    ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಬಂಟ್ವಾಳದಲ್ಲಿ ಕಾರ್ಯಕ್ರಮ ಮುಗಿಸಿ, ಬಂಟ್ವಾಳ ಐಬಿಯಲ್ಲಿ ಕರಾವಳಿ ಖಾದ್ಯ ಮೀನಿನ ಊಟವನ್ನು ಸೇವಿಸಿದ್ದರು. ಆ ಬಳಿಕ ಸಿಎಂ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು. ಈ ವಿಚಾರದ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಎಂ ನಡೆಯ ಬಗ್ಗೆ ಭಾರೀ ಚರ್ಚೆ ನಡೆದಿತ್ತು.

    ಇದನ್ನೂ ಓದಿ: ಹಂದಿ ತಿಂದು ಮಸೀದಿಗೆ ಹೋಗ್ಲಿ, ಅಹಂಕಾರಿ ಸಿಎಂಗೆ ಆ ಧೈರ್ಯ ಇದ್ಯಾ: ಸೊಗಡು ಶಿವಣ್ಣ ಸವಾಲು

    ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ತಾಕತ್ತಿದ್ದರೆ ಹಂದಿ ಮಾಂಸ ಸೇವಿಸಿ ಮಸೀದಿಗೆ ಭೇಟಿ ನೀಡಲಿ ಎಂದು ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಮಂಗಳವಾರ ತಿರುಗೇಟು ನೀಡಿದ್ದರು.

    ಸಿಎಂ ಸಿದ್ದರಾಮಯ್ಯ ಅವರು ಮೀನು ಮಾಂಸ ಸೇವಿಸಿ ಮಂಜುನಾಥನ ದರ್ಶನ ಪಡೆದಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯನವರು ಧಾರವಾಡದ ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ದೇವರು ಮಾಂಸ ಆಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಬರಬೇಡಿ ಎಂದು ಹೇಳಿಲ್ಲ. ಬೇಡರ ಕಣ್ಣಪ್ಪ ಕೂಡಾ ಶಿವನಿಗೆ ಜಿಂಕೆ ಮಾಂಸ ನೈವೇದ್ಯ ಮಾಡಿದ್ದ. ಮಾಂಸ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದು ತಪ್ಪಲ್ಲ ಎಂದು ಹೇಳಿದ್ದರು.

  • ಶಿಷ್ಟಾಚಾರದ ಪ್ರಕಾರ ಹೆಸರು ಹಾಕ್ತೀವಿ. ಬರೋದು, ಬಿಡೋದು ಅವ್ರಿಗೆ ಬಿಟ್ಟಿದ್ದು: ಸಿಎಂ

    ಶಿಷ್ಟಾಚಾರದ ಪ್ರಕಾರ ಹೆಸರು ಹಾಕ್ತೀವಿ. ಬರೋದು, ಬಿಡೋದು ಅವ್ರಿಗೆ ಬಿಟ್ಟಿದ್ದು: ಸಿಎಂ

    ಮಂಗಳೂರು: ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದು, ಟಿಪ್ಪು ಜಯಂತಿಯನ್ನು ಆಚರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ಸಿಎಂ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟಿಸಿ ಒಟ್ಟು 252.50 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಯಲ್ಲಿ ಮಿನಿ ವಿಧಾನಸೌಧ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, 100 ಹಾಸಿಗೆಗಳ ಹೊಸ ಆಸ್ಪತ್ರೆ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ ನೀಡಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಟಿಪ್ಪು ಜಯಂತಿಯು ರಾಜ್ಯ ಸರ್ಕಾರದ ಕಾರ್ಯಕ್ರಮ. ಟಿಪ್ಪು ಜಯಂತಿಯನ್ನು ಮಾಡಿಯೇ ಮಾಡ್ತೀವಿ. ಇದರಲ್ಲಿಯೂ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಶಿಷ್ಟಾಚಾರದ ಪ್ರಕಾರ ಹೆಸರು ಹಾಕ್ತೇವೆ. ಬರುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.

    ಇದನ್ನೂ ಓದಿ: ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದು ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು: ಪ್ರಮೋದ್ ಮುತಾಲಿಕ್

    ಯಡಿಯೂರಪ್ಪ ಕೆಜೆಪಿ ಪಕ್ಷಕಟ್ಟಿದ್ದಾಗ ಟಿಪ್ಪು ಜಯಂತಿ ಮಾಡಿಲ್ವೇ? ಟಿಪ್ಪು ಖಡ್ಗ ಕಿರೀಟ ಕೂಡ ಹಾಕ್ಕೊಂಡಿದ್ದರು. ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಟಿಪ್ಪು ಇತಿಹಾಸ ಏನು ಗೊತ್ತಿದೆ. ಮೈಸೂರಿನಲ್ಲಿ ಟಿಪ್ಪು ನಡೆಸಿದ ನಾಲ್ಕು ಯುದ್ಧಗಳು ಗೊತ್ತಿದ್ಯಾ? ಟಿಪ್ಪು ಹೇಗೆ ಸತ್ತಾ ಗೊತ್ತಾ ಇವರಿಗೆ. ಟಿಪ್ಪು ಮಕ್ಕಳನ್ನು ಅಡ ಇಟ್ಟಿದ್ದು ಯಾಕೆ ಗೊತ್ತಿದ್ಯಾ ಎಂದು ಸಿದ್ದರಾಮಯ್ಯನವರು ಪ್ರಶ್ನೆಹಾಕಿದರು.

    ಇದನ್ನೂ ಓದಿ: ಬಿಎಸ್‍ವೈ ಜೊತೆ ಕೆಜೆಪಿ ಪಕ್ಷ ಸೇರ್ಕೊಂಡು ಶೋಭಾ ಕರಂದ್ಲಾಜೆ ಟಿಪ್ಪು ಜಯಂತಿ ಆಚರಿಸಿದ್ದರು- ರಾಮಲಿಂಗಾರೆಡ್ಡಿ

    ಸಚಿವ ಡಿಕೆ ಶಿವಕುಮಾರ್ ವಿರುದ್ಧ ಕಲ್ಲಿದ್ದಲು ಹಗರಣ ಆರೋಪ ದುರುದ್ದೇಶ ಪೂರಕವಾಗಿದೆ. ಬಿಎಸ್‍ವೈ ಆಧಾರ ರಹಿತ ಆರೋಪ ಮಾಡಿದ್ದಾರೆ. ಡಿಕೆಶಿ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಬಿಎಸ್‍ವೈ ಚುನಾವಣೆ ದೃಷ್ಟಿಯಿಂದ ಆರೋಪ ಮಾಡಿದ್ದಾರೆ ಎಂದು ಹೇಳಿದರು.

    ಇದನ್ನೂ ಓದಿ: ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಹಾಕ್ಬೇಡಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರ

    ಇದನ್ನೂ ಓದಿ: ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಪ್ಲಾನ್

  • ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದು ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು: ಪ್ರಮೋದ್ ಮುತಾಲಿಕ್

    ಟಿಪ್ಪು ಜಯಂತಿಯನ್ನು ಆಚರಿಸುತ್ತಿರುವುದು ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು: ಪ್ರಮೋದ್ ಮುತಾಲಿಕ್

    ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಟಿಪ್ಪು ಜಯಂತಿಯನ್ನು ಆಚರಿಸುತ್ತರುವುದು ಕೇವಲ ಮುಸ್ಲಿಂ ಮತ ಬ್ಯಾಂಕ್ ಭದ್ರಪಡಿಸಲು ಮಾತ್ರ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ನವೆಂಬರ್ 10 ರಂದು ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದಕ್ಕೆ ನಮ್ಮ ವಿರೋಧವಿದೆ. ಸ್ವಾರ್ಥ ರಾಜಕಾರಣಕ್ಕಾಗಿ ಹಾಗೂ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಇಂತಹ ಆಚರಣೆ ಮಾಡಲಾಗುತ್ತಿದೆ. ಟಿಪ್ಪು ತನ್ನ ಅವಧಿಯಲ್ಲಿ ಹಲವರನ್ನು ಮತಾಂತರಗೊಳಿಸಿದ್ದು, ಇದಕ್ಕೆ ಟಿಪ್ಪು ಮಗ ಬರೆದಿರುವ ಪತ್ರಗಳೇ ಸಾಕ್ಷಿಯಾಗಿವೆ. ಅಲ್ಲದೇ ಟಿಪ್ಪು ಆಡಳಿತ ಅವಧಿಯಲ್ಲಿ ಪರ್ಶಿಯನ್ ಭಾಷೆಯನ್ನು ಜಾರಿಗೆ ತಂದಿರುವ ನಾಡದ್ರೋಹಿ. ಇದನ್ನು ಜನತೆಗೆ ತಿಳಿಸಲು ಮುಂದಿನ ದಿನಗಳಲ್ಲಿ ಶ್ರೀರಾಮ ಸೇನೆ ಒಂದು ಪುಸ್ತಕವನ್ನು ಹೊರತರುತ್ತದೆ ಎಂದು ಹೇಳಿದರು.

    ಮುಂದಿನ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಆಚರಣೆ ರದ್ದು ಮಾಡಬೇಕು. ಅಲ್ಲದೇ ಟಿಪ್ಪುವಿನ ಹೆಸರಿನಲ್ಲಿರುವ ಬೋರ್ಡ್ ಹಾಗೂ ಸರ್ಕಲ್‍ಗಳನ್ನೂ ತೆಗೆದು ಹಾಕಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಗೌರಿ ಹತ್ಯೆ ಪ್ರಕರಣದ ಆರೋಪಿಗಳ ಗುರುತು ಪತ್ತೆಗೆ ಎಸ್‍ಐಟಿ ಅಧಿಕಾರಿಗಳು ಬಿಡುಗಡೆಗೊಳಿಸಿರುವ ಶಂಕಿತ ವ್ಯಕ್ತಿಗಳ ಹಣೆಯಲ್ಲಿ ಕುಂಕುಮ ಇರುವುದರ ಕುರಿತು ಕಿಡಿಕಾರಿದ ಅವರು, ತಲೆಯ ಮೇಲೆ ಟೋಪಿ ಹಾಕಿರುವವರ ಭಾವ ಚಿತ್ರ ಬಿಡುಗಡೆ ಮಾಡಿ ಎಂದು ಸವಾಲ್ ಹಾಕಿದರು. ಎಸ್‍ಐಟಿ ಯ ಈ ನಡೆ ಹಿಂದೂಗಳಿಗೆ ಮಾಡಿದ ಅವಮಾನವಾಗಿದ್ದು ತಕ್ಷಣ ಚಿತ್ರಗಳನ್ನು ಹಿಂಪಡೆದು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

    ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ ಅವರು, ಆರ್‍ಎಸ್‍ಎಸ್ ಹಾಗೂ ಬಿಜೆಪಿ ಮುಖಂಡರಿಗೆ ಐದು ತಿಂಗಳ ಹಿಂದೆಯೇ ಪತ್ರವನ್ನು ಬರೆದಿದ್ದೇನೆ, ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಿಜೆಪಿಯವರು ನನಗೆ ಟಿಕೆಟ್ ಕೊಟ್ಟರು, ಕೊಡದಿದ್ದರು ರಾಜಕೀಯ ಪ್ರವೇಶ ಮಾಡುವುದು ಖಚಿತ. ಶ್ರೀರಾಮ ಸೇನೆಯ ಸಂಘಟನೆ ಬಲಪಡಿಸುವುದು ಹಾಗೂ ಹಿಂದೂತ್ವಕ್ಕೆ ಬಲ ತುಂಬುದು ನನ್ನ ಉದ್ದೇಶ ಎಂದು ಸ್ಪಷ್ಟಪಡಿಸಿದರು.

    ಕಲಬುರ್ಗಿ ಆಂದೋಲ್ ಗ್ರಾಮದಲ್ಲಿ ನಡೆದ ಗಲಾಟೆ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತ ಬಾಬು ಲಾಖನೆ ಮೇಲೆ ಹಲ್ಲೆಯಾಗಿದೆ. ಇದರಲ್ಲಿ ಅನಾವಶ್ಯಕವಾಗಿ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರು ತಳಕು ಹಾಕಲಾಗುತ್ತಿದೆ. ಒಂದು ವೇಳೆ ಸಿದ್ದಲಿಂಗ ಸ್ವಾಮೀಜಿ ಅವರ ಮೇಲೆ ಕೇಸ್ ದಾಖಲಿಸಿ, ಬಂಧಿಸಿದರೆ ಅಕ್ಟೋಬರ್ 23ರಂದು ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

  • ಬಿಎಸ್‍ವೈ ಜೊತೆ ಕೆಜೆಪಿ ಪಕ್ಷ ಸೇರ್ಕೊಂಡು ಶೋಭಾ ಕರಂದ್ಲಾಜೆ ಟಿಪ್ಪು ಜಯಂತಿ ಆಚರಿಸಿದ್ದರು- ರಾಮಲಿಂಗಾರೆಡ್ಡಿ

    ಬಿಎಸ್‍ವೈ ಜೊತೆ ಕೆಜೆಪಿ ಪಕ್ಷ ಸೇರ್ಕೊಂಡು ಶೋಭಾ ಕರಂದ್ಲಾಜೆ ಟಿಪ್ಪು ಜಯಂತಿ ಆಚರಿಸಿದ್ದರು- ರಾಮಲಿಂಗಾರೆಡ್ಡಿ

    ಬೆಂಗಳೂರು: ಟಿಪ್ಪು ಜಯಂತಿ ವಿಚಾರದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೆಜೆಪಿಯಲ್ಲಿ ಇದ್ದಾಗ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಕೆಜೆಪಿ ಪಕ್ಷಕ್ಕೆ ಹೋಗಿದ್ದರು. ಆ ಸಂದರ್ಭದಲ್ಲಿ ಬಿಎಸ್‍ವೈ ಜೊತೆಯಲ್ಲಿ ಟಿಪ್ಪು ಜಯಂತಿ ಆಚರಣೆಯಲ್ಲಿ ಭಾಗವಹಿಸಿದ್ದರು. ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸುತ್ತದೆ, ಭಾಗವಹಿಸುವುದು ಬಿಡುವುದು ಅವರವರಿಗೆ ಬಿಟ್ಟದ್ದು. ಆದರೆ, ಆಗ ವಿರೋಧ ವ್ಯಕ್ತಪಡಿಸಿದವರು ಈಗ ಯಾಕೆ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ಬಿಜೆಪಿಯಲ್ಲಿದ್ದಾಗ ಒಂದು ನಿಲುವು, ಕೆಜೆಪಿಯಲ್ಲಿ ಇದ್ದಾಗ ಒಂದು ನಿಲುವು ಯಾಕೆ ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

    ಇದನ್ನೂ ಓದಿ: 418 ಕೋಟಿ ರೂ. ಹಗರಣದ ಆರೋಪ- ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಎಸ್‍ವೈ ದಾಖಲೆ ಬಿಡುಗಡೆ

    ಇದೇ ಸಂದರ್ಭದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಬಿಎಸ್ ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ಕುರಿತಂತೆ ಮಾತನಾಡಿದ ಅವರು, ಯಡಿಯೂರಪ್ಪ ಹತ್ತಿರ ದಾಖಲೆ ಇದ್ರೆ ಕೊಡಲಿ. ದಾಖಲೆ ಕೊಟ್ರೆ ಅದಕ್ಕೆ ಒಂದು ಅರ್ಥ ಇರುತ್ತದೆ. ಹಿಂದೆ ಬಿಜೆಪಿ ಅಧಿಕಾರದಲ್ಲೂ ಇಂಧನ ಸಚಿವರ ಮೇಲೆ ಆರೋಪ ಕೇಳಿ ಬಂದಿತ್ತು. ಆದರೆ ಸಚಿವರ ಮೇಲೆ, ಸಿಎಂ ಮೇಲೆ ದಾಖಲೆ ಬಿಡುಗಡೆ ಮಾಡೋದಾಗಿ ಯಡಿಯೂರಪ್ಪ 2-3 ತಿಂಗಳಿಂದ ಹೇಳುತ್ತಾನೆ ಇದ್ದಾರೆ. ಬಿಡುಗಡೆ ಮಾಡಿದ್ದು ಯಾವುದೂ ಇಲ್ಲ ಎಂದು ಬಿಎಸ್‍ವೈ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.

    ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಮಾಧ್ಯಮದ ಮುಂದೆ ಗೊತ್ತಿರುವ ಎಲ್ಲ ವಿಚಾರ ಹೇಳೋದಕ್ಕೆ ಆಗುವುದಿಲ್ಲ. ಸಮಯ ಬಂದಾಗ ಎಲ್ಲವನ್ನೂ ಹೇಳ್ತೀವಿ ಎಂದು ತಿಳಿಸಿದರು.