Tag: Tippu

  • ಟಿಪ್ಪು ಪಠ್ಯ ಗೊಂದಲದಲ್ಲಿ ಸರ್ಕಾರ

    ಟಿಪ್ಪು ಪಠ್ಯ ಗೊಂದಲದಲ್ಲಿ ಸರ್ಕಾರ

    ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿರುವ ಟಿಪ್ಪು ಸುಲ್ತಾನ್ ಪಠ್ಯ ವಿಚಾರ ಸರ್ಕಾರಕ್ಕೆ ಗೊಂದಲ ತಂದಿದೆ. ಯಾವ ನಿರ್ಧಾರ ತೆಗೆದುಕೊಳ್ಳಬೇಕು ಅನ್ನೋ ಗೊಂದಲದಲ್ಲಿ ಸರ್ಕಾರ ಇದ್ದು, ಅಂತಿಮ ನಿರ್ಧಾರಕ್ಕಾಗಿ ತಲೆ ಕೆಡಿಸಿಕೊಂಡಿದೆ.

    ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಪಠ್ಯವನ್ನು ತೆಗೆಯಬೇಕು ಅಂತ ಬಿಜೆಪಿ ಸರ್ಕಾರ ಬಂದಾಗ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ರು. ಟಿಪ್ಪು ದೇಶದ್ರೋಗಿ, ಮತಾಂಧ, ನರಹಂತಕ ಅನ್ನೋದು ಶಾಸಕ ಅಪ್ಪಚ್ಚು ರಂಜನ್ ವಾದವಾಗಿದೆ. ಶಾಸಕರ ಮನವಿ ಮೇರೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಠ್ಯ ಇರಬೇಕೋ ಬೇಡವೋ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಕಮಿಟಿ ನೇಮಕ ಮಾಡಿ ವರದಿ ನೀಡುವಂತೆ ಸೂಚನೆ ನೀಡಿದರು. ಈಗಾಗಲೇ ಪಠ್ಯಪುಸ್ತಕ ಕಮಿಟಿ ತನ್ನ ವರದಿಯನ್ನ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಕಮಿಟಿ ಅಭಿಪ್ರಾಯದಲ್ಲಿ ಪಠ್ಯ ತೆಗೆಯೋದು ಬೇಡ ಅಂತ ಸಲಹೆ ನೀಡಲಾಗಿದೆ.

    ವರದಿ ಈಗ ಸರ್ಕಾರದ ಮುಂದೆ ಇದೆ. ಈಗಾಗಲೇ ಟಿಪ್ಪು ಜಯಂತಿ ರದ್ದು ಮಾಡಿರುವ ಸರ್ಕಾರಕ್ಕೆ ಪಠ್ಯವನ್ನು ತೆಗೆಯೋದು ದೊಡ್ಡ ಚಾಲೆಂಜ್ ಆಗಿದೆ. ಅನೇಕ ವರ್ಷಗಳಿಂದ ಟಿಪ್ಪು ಪಠ್ಯ ಇದೆ. ಈಗ ದಿಢೀರ್ ಅಂತ ತೆಗೆದರೆ ವಿರೋಧಗಳು ವ್ಯಕ್ತವಾಗೋದು ಸಹಜ. ಹೀಗಾಗಿ ತಾಳ್ಮೆಯಿಂದ ಪ್ರಕರಣ ಬಗೆಹರಿಸಲು ಸರ್ಕಾರ ತೀರ್ಮಾನ ಮಾಡಿದೆ. ಈಗಾಗಲೇ ವರದಿ ಸಂಬಂಧ ಸಿಎಂ ಜೊತೆ ಚರ್ಚೆ ಮಾಡೋದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸಿಎಂ ಜೊತೆ ಚರ್ಚೆ ಬಳಿಕ ಅಂತಿಮ ನಿರ್ಧಾರ ಸರ್ಕಾರ ತೆಗೆದುಕೊಳ್ಳುತ್ತೆ. ಆದ್ರೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅನ್ನೋದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.

  • ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ಕೈಬಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಪತ್ರ

    ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ಕೈಬಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಪತ್ರ

    ಮಡಿಕೇರಿ: ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‍ಗೆ ಪತ್ರ ಬರೆದಿರುವ ಅವರು, ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಆದರೆ ಸ್ವಾತಂತ್ರ್ಯ ಹೋರಾಟಗಾರ ಎಂದು ಪಠ್ಯಪುಸ್ತಕಗಳಲ್ಲಿ ವೈಭವೀಕರಿಸಲಾಗಿದೆ. ಟಿಪ್ಪು ಫ್ರೆಂಚ್‍ರೊಂದಿಗೆ ಕೈ ಜೋಡಿಸಿದ್ದ, ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ ಸಹಾಯ ಪಡೆಯುತ್ತಿದ್ದನು. ಅಲ್ಲದೆ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು. ಕೊಡಗಿನಲ್ಲಿಯೂ ಹಿಂದೂಗಳನ್ನು ಮತಾಂತರ ಮಾಡಿದ್ದ ಮತ್ತು ಹತ್ಯೆ ಮಾಡಿದ್ದ. ಟಿಪ್ಪು ಒಬ್ಬ ಮತಾಂಧನಾಗಿದ್ದ. ಇಂತಹವನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಎಂದು ಆರೋಪಿಸಿದ್ದಾರೆ.

    ಈ ಎಲ್ಲ ಕಾರಣಗಳಿಂದ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.

  • ಟಿಪ್ಪು ಯಾರು..!?

    ಟಿಪ್ಪು ಯಾರು..!?

    https://www.youtube.com/watch?v=v2VBQNJ1pFc