Tag: Tipu Jayanti

  • ಟಿಪ್ಪು ವೀರ, ಶೂರ, ಜಾತ್ಯಾತೀತ, ಸಹೃದಯಿ – ಹಾಡಿ ಹೊಗಳಿದ ಸಚಿವೆ ಜಯಮಾಲಾ

    ಟಿಪ್ಪು ವೀರ, ಶೂರ, ಜಾತ್ಯಾತೀತ, ಸಹೃದಯಿ – ಹಾಡಿ ಹೊಗಳಿದ ಸಚಿವೆ ಜಯಮಾಲಾ

    ಬೆಂಗಳೂರು: ಟಿಪ್ಪು ಸುಲ್ತಾನ್ ಬಗ್ಗೆ ವಿರೋಧಿ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಟಿಪ್ಪು ಒಬ್ಬ ವೀರ, ಶೂರ, ಜ್ಯಾತ್ಯಾತೀತ, ಸಹೃದಯಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹಾಡಿ ಹೊಗಳಿದ್ದಾರೆ.

    ವಿಧಾನಸೌಧದಲ್ಲಿ ಇಂದು ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾ ಅವರು ಮಾತನಾಡಿ, ಪುಲಿಕೇಶಿ, ಕೃಷ್ಣದೇವರಾಯರ ಸಾಲಿನಲ್ಲಿ ಟಿಪ್ಪು ಸುಲ್ತಾನರನ್ನು ಸೇರಿಸಿ ಗೌರವಿಸುವುದು ನಮ್ಮ ಸರ್ಕಾರದ ಉದ್ದೇಶ. ಮಸೀದಿ, ದೇವಸ್ಥಾನ, ಶಾರದಾಂಬೆ, ನಂಜನಗೂಡು ಉಳಿಸಿದವರು ಟಿಪ್ಪು ಸುಲ್ತಾನ್. ಅಲ್ಲದೇ ಶ್ರೀರಂಗನಾಥನ ಮೊದಲ ಪೂಜೆ ಮಾಡುತ್ತಿದ್ದ ವ್ಯಕ್ತಿ ಟಿಪ್ಪು ಸುಲ್ತಾನ್ ಆಗಿದ್ದು, ಇಂತಹ ವೀರನ ಬಗ್ಗೆ ವಿರೋಧ ಪಕ್ಷದವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ವಿರೋಧ ಮಾಡುವ ಮೊದಲಿಗೆ ಬಿಜೆಪಿ ನಾಯಕರು ಶೃಂಗೇರಿಯ ಶಾರದಾಂಬೆ ದೇವಾಲಯದ ದಾಖಲೆ ಓದಲಿ ಎಂದು ಕಿಡಿಕಾರಿದರು.

    ಭಾರತ ಚರಿತ್ರೆಯನ್ನು ಜಾಗತಿಕ ಮಟ್ಟದಲ್ಲಿ ಹೆಸರು ಮಾಡುವಂತೆ ಮಾಡಿದವರು ಟಿಪ್ಪು ಸುಲ್ತಾನ್. ಇಂತಹ ಟಿಪ್ಪು ಜಯಂತಿ ವಿಚಾರವಾಗಿ ಅನಗತ್ಯವಾಗಿ ಗೊಂದಲ ಮೂಡಿಸಿ ಬೇರೆ ಅರ್ಥ ಬರುವಂತೆ ವರ್ತಿಸಬಾರದು. ಶ್ರೀರಂಗಪಟ್ಟಣವನ್ನ ಕರ್ಮಭೂಮಿ ಮಾಡಿಕೊಂಡಿದ್ದ ಟಿಪ್ಪುವಿನ ಸೌಹಾರ್ದ, ಸಹಿಷ್ಣುತೆಯನ್ನ ಇವತ್ತಿನ ರಾಜಕಾರಣಿಗಳಿಗೆ ಕಲಿಸಬೇಕು. ಶಾರದಾಂಬೆ, ಶ್ರೀರಂಗಪಟ್ಟಣದ ಇತಿಹಾಸ ಬಿಜೆಪಿ ಅವರು ತಿಳಿದುಕೊಳ್ಳಲಿ. ಇತಿಹಾಸ ತಿಳಿಯದೇ ಬಿಜೆಪಿ ವಿರೋಧ ಮಾಡುತ್ತಿದೆ ಎಂದು ಆರೋಪಿಸಿದರು.

    ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದಿದ್ದಾರೆ. ಜಯಂತಿ ವ್ಯಕ್ತಿ ಪೂಜೆಯಾಗಿ ಮಾಡದೆ, ಧರ್ಮ, ಸಹಿಷ್ಣುತೆ ಸಂಕೇತವಾಗಿ ಆಚರಣೆ ಮಾಡುತ್ತಿದ್ದೇವೆ. ಸಾಮಾನ್ಯ ಜನರ ಅಭಿವೃದ್ಧಿಗೆ ಕೆಲಸ ಮಾಡಿದ ಟಿಪ್ಪು ಸುಲ್ತಾನ್, ಪ್ರಜೆಗಳಿಗಾಗಿ ಪ್ರಾಣ ಕೊಟ್ಟ ಹಾಗೂ ರಾಜ್ಯಕ್ಕಾಗಿ ತನ್ನ ಮಕ್ಕಳ ಪ್ರಾಣವನ್ನ ತ್ಯಾಗ ಮಾಡಿದ. ಕೃಷಿ ಕ್ರಾಂತಿ ಮಾಡಿ ಮೈಸೂರನ್ನ ಶ್ರೀಮಂತ ರಾಜ್ಯ ಮಾಡಿದ್ದಾರೆ. ರೈತರ ಬೆವರಿಗೆ ಬೆಲೆ ಕೊಟ್ಟ ಟಿಪ್ಪು, ಬಡವರಿಗೆ ಮನೆ, ಕ್ಷಿಪಣಿ ತಂತ್ರಜ್ಞಾನ ನೀಡಿದ್ದಾರೆ ಎಂದು ಟಿಪ್ಪು ಜಯಂತಿ ಮಾಡುವುದನ್ನು ಸಮರ್ಥಿಸಿಕೊಂಡರು.

    ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಜಮೀರ್ ಅಹಮದ್, ಶಾಸಕ ರೋಷನ್ ಬೇಗ್, ಶಾಸಕ ಹ್ಯಾರಿಸ್, ಪರಿಷತ್ ಸದಸ್ಯ ರಿಜ್ವಾನ್ ಹರ್ಷದ್ ಸೇರಿದಂತೆ ಹಲವು ಮುಸ್ಲಿಂ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜನಾರ್ದನ ರೆಡ್ಡಿಗೆ ಲೂಟಿ ಮಾಡು ಅಂತಾ ನಾವು ಹೇಳಿಕೊಟ್ಟಿದ್ವಾ: ಸಿದ್ದರಾಮಯ್ಯ ಪ್ರಶ್ನೆ

    ಜನಾರ್ದನ ರೆಡ್ಡಿಗೆ ಲೂಟಿ ಮಾಡು ಅಂತಾ ನಾವು ಹೇಳಿಕೊಟ್ಟಿದ್ವಾ: ಸಿದ್ದರಾಮಯ್ಯ ಪ್ರಶ್ನೆ

    -ಬಿಜೆಪಿಯವರು ಮನುಷ್ಯರನ್ನೇ ದ್ವೇಷಿಸುವ ಮತಾಂಧರು

    ಚಿತ್ರದುರ್ಗ: ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿಗೆ ಲೂಟಿ ಮಾಡು, ಕಳ್ಳತನ ಮಾಡು ಅಂತಾ ನಾವು ಹೇಳಿಕೊಟ್ಟಿದ್ದೇವಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಕಬೀರಾನಂದ ಶ್ರೀ ಮಠದ ಸಮುದಾಯ ಭವನದ ಉದ್ಘಾಟನೆಗೆ ಆಗಮಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ಜನಾರ್ದನ ರೆಡ್ಡಿ ವಿರುದ್ಧ ಸರ್ಕಾರದಿಂದ ಷಡ್ಯಂತ್ರ ನಡೆಯುತ್ತಿಲ್ಲ. ಬಿಜೆಪಿಯವರು ಮನುಷ್ಯರನ್ನೇ ದ್ವೇಷಿಸುವ ಮತಾಂಧರು. ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂತಾ ಹೇಳುತ್ತಾರೆ. ಆದರೆ ಅವರೇ ಸಮಾಜ ಛಿದ್ರ ಮಾಡಲು ಯತ್ನಿಸುತ್ತಿದ್ದಾರೆ. ಜೆಡಿಎಸ್ ಒಂದು ಪ್ರಾದೇಶಿಕ ಪಕ್ಷ. ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರ ಪ್ರಬಲವಾಗಿದ್ದು, ನಾವು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

    ಚರಿತ್ರೆ ಓದಿಕೊಳ್ಳದೆ ಮಾತನಾಡುವವರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ ಅವರು, ಅವನ್ಯಾವನೋ ಅನಂತಕುಮಾರ್ ಹೆಗ್ಡೆ ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾವಣೆ ಮಾಡುವುದಕ್ಕೆ ಅಂತಾನೆ. ಅವನೊಬ್ಬ ಮನುಷ್ಯನೇ, ದೇಶದ ಪ್ರಜೆ ಹೌದೋ ಅಲ್ಲವೋ ಎಂದು ಲೇವಡಿ ಮಾಡಿದರು.

    ಸಿಎಂ ಪರ ಸಿದ್ದರಾಮಯ್ಯ ಬ್ಯಾಟಿಂಗ್:
    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆರೋಗ್ಯ ಸರಿಯಿಲ್ಲ. ಹೀಗಾಗಿ ಟಿಪ್ಪು ಜಯಂತಿಯಿಂದ ಗೈರು ಆಗಿದ್ದಾರೆ ಎಂದು ಸಮರ್ಥಿಸಿಕೊಂಡ ಮಾಜಿ ಸಿಎಂ, ಟಿಪ್ಪು ಜಯಂತಿಯಿಂದ ಜೆಡಿಎಸ್ ದೂರ ಉಳಿದಿಲ್ಲ. ಕುಮಾರಸ್ವಾಮಿ ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಜಯಂತಿ ವಿರೋಧಿಗಳಿಗೆ ಸಿದ್ದರಾಮಯ್ಯ ಫುಲ್‍ಕ್ಲಾಸ್

    ಟಿಪ್ಪು ಜಯಂತಿ ವಿರೋಧಿಗಳಿಗೆ ಸಿದ್ದರಾಮಯ್ಯ ಫುಲ್‍ಕ್ಲಾಸ್

    -ಟಿಪ್ಪು ದೇಶಪ್ರೇಮ, ಜಾತ್ಯತೀತ ಧೋರಣೆ ತಿಳಿಸುತ್ತವೆ ಲಾವಣಿ ಪದಗಳು
    -ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಯಾವ ಗುಂಪಿಗೆ ಸೇರಿಸ್ತಿರಿ?

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿ ಶುಭಕೋರಿದ್ದು, ಸರಣಿ ಟ್ವೀಟ್ ಮೂಲಕ ಟಿಪ್ಪುವನ್ನು ಕೊಂಡಾಡಿದ್ದಾರೆ. ಅಷ್ಟೇ ಅಲ್ಲದೆ ಟಿಪ್ಪು ಜಯಂತಿ ವಿರೋಧಿಗಳಿಗೆ ಫುಲ್‍ಕ್ಲಾಸ್ ತೆಗೆದುಕೊಂಡಿದ್ದಾರೆ.

    ಟ್ವಿಟ್ ನಲ್ಲೇನಿದೆ?:
    ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ. ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ. ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಸಿಂಧೂರ ಲಕ್ಷ್ಮಣ, ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.

    ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಕಿಡಿಕಾರಿದ್ದಾರೆ.

    ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ, ಜಾತ್ಯತೀತ ಧೋರಣೆ, ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ, ಹಾಡುಗಳೇ ನಿಜವಾದ ಇತಿಹಾಸ ಎಂದು ತಿಳಿಸಿದ್ದಾರೆ.

    ಸರ್ಕಾರವೇ ಜಯಂತಿಗಳನ್ನು ಆಚರಿಸುವುದಕ್ಕೆ ಕಾರಣವಿದೆ. ಇದನ್ನು ಸಾರ್ವಜನಿಕರಿಗೆ ಬಿಟ್ಟರೆ ತಮ್ಮ ಜಾತಿ-ಧರ್ಮಗಳಿಗೆ ಸೇರಿರುವ ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯನ್ನಷ್ಟೇ ಮಾಡಿ ಅವರನ್ನು ತಮ್ಮ ಜಾತಿ-ಧರ್ಮಗಳಿಗೆ ಸೀಮಿತಗೊಳಿಸುತ್ತಾರೆ. ಇದು ಮಹಾನ್ ವ್ಯಕ್ತಿಗಳಿಗೆ ಅಗೌರವವೂ ಹೌದು. ಮಹಾಪುರುಷ-ಮಹಿಳೆಯರ ಜಯಂತಿ ಆಚರಣೆಯ ಸಂಪ್ರದಾಯವನ್ನು ಹಿಂದಿನ ನಮ್ಮ ಸರ್ಕಾರ ಹುಟ್ಟುಹಾಕಿದ್ದಲ್ಲ, ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಜಯಂತಿ ಆಚರಣೆ ಪಟ್ಟಿಗೆ ಇನ್ನಷ್ಟು ಹೆಸರುಗಳನ್ನು ಸೇರಿಸುತ್ತಾ ಬಂದಿವೆ. ಆಗ ಕಾಣಿಸಿಕೊಳ್ಳದ ಪ್ರತಿರೋಧ ಟಿಪ್ಪು ಆಚರಣೆ ಬಗ್ಗೆ ಮಾತ್ರ ಯಾಕೆ ಎಂದಿದ್ದಾರೆ.

    ಟಿಪ್ಪು ಜಯಂತಿ ಆಚರಣೆ ಬಗ್ಗೆ ನಿಲುವು ಆತ್ಮವಂಚನೆಯಿಂದ ಕೂಡಿದ್ದಾಗಿದೆ. ತಾವು ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿ, ಟಿಪ್ಪುವನ್ನು ಹಾಡಿ-ಹೊಗಳಿ, ಪುಸ್ತಕ ಬರೆಸಿ ಈಗ ವಿರೋಧಿಸುತ್ತಿರುವುದು ಸ್ವಾರ್ಥರಾಜಕಾರಣವಲ್ಲದೆ ಮತ್ತೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶ್ರೀರಾಮುಲು, ಸಿ.ಪಿ.ಯೋಗೇಶ್ ಸೇರಿದಂತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

    ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ ದೇಶ ಪ್ರೇಮಿ ಮೈಸೂರು ಹುಲಿ ಟಿಪ್ಪು ಸುಲ್ತಾನರ ಜನ್ಮದಿನದಂದು ಅವರ ದೇಶಪ್ರೇಮ, ತ್ಯಾಗ ಮತ್ತು ಜನಪರ ಆಡಳಿತವನ್ನು ನಾವೆಲ್ಲರೂ ಸ್ಮರಿಸೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಜಯಂತಿ ಮಾಡಬೇಕಂತಾ ಹೇಳಿ ಎಚ್‍ಡಿಕೆ ಓಡಿಹೋದ್ರು: ಗೋ.ಮಧುಸೂಧನ್ ವ್ಯಂಗ್ಯ

    ಟಿಪ್ಪು ಜಯಂತಿ ಮಾಡಬೇಕಂತಾ ಹೇಳಿ ಎಚ್‍ಡಿಕೆ ಓಡಿಹೋದ್ರು: ಗೋ.ಮಧುಸೂಧನ್ ವ್ಯಂಗ್ಯ

    ಮೈಸೂರು: ಟಿಪ್ಪು ಜಯಂತಿ ಮಾಡಬೇಕು ಅಂತಾ ಹೇಳಿದವರು ನೀವೇ. ಈಗ ಓಡಿಹೋಗಿರುವವರು ನೀವೇ. ನಿಮ್ಮ ಎರಡು ನಾಲಿಗೆ ಬುದ್ಧಿಯನ್ನು ಜನ ನಂಬಬೇಕಾ ಕುಮಾರಸ್ವಾಮಿ ಅವರೇ ಎಂದು ಗೋ.ಮಧುಸೂಧನ್ ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಟಿಪ್ಪು ಜಯಂತಿ ಬೇಕಿಲ್ಲ. ಹೀಗಾಗಿ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್‍ನವರ ಜೊತೆಗೆ ಜೆಡಿಎಸ್ ಆಡಳಿತ ನಡೆಸುತ್ತಿದೆ. ಹೀಗಾಗಿ ಕೈ ನಾಯಕರ ನಿಲುವಿಗೆ ವಿರೋಧ ವ್ಯಕ್ತಪಡಿಸಲು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಇದು ಜೆಡಿಎಸ್ ಕರ್ಮ. ಹೀಗಾಗಿ ಜೆಡಿಎಸ್ ಯಾವಾಗಲೂ ಡಬಲ್ ಸ್ಟ್ಯಾಂಡ್ ಕಾಯ್ದುಕೊಳ್ಳುತ್ತದೆ ಎಂದು ಆರೋಪಿಸಿದರು.

    ಹೆತ್ತವರಿಗೆ ಹೆಗ್ಗಣ್ಣ ಮುದ್ದು ಎನ್ನುವಂತೆ ಜೆಡಿಎಸ್‍ಗೆ ಈಗ ಕಾಂಗ್ರೆಸ್ ಮುದ್ದಾಗಿದೆ ಅಷ್ಟೇ. ದೇಶ ಮುಸ್ಲಿಂ ಗುಲಾಮಗಿರಿಯಿಂದ ಹೊರಬರುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಹಿಂದೂ ವಿರೋಧಿ ಟಿಪ್ಪು ಜಯಂತಿ ಮಾಡಲಾಗುತ್ತಿದೆ. ಟಿಪ್ಪು ಒಬ್ಬ ಮತಾಂಧ ಹಾಗೂ ಇಂತವನ ಜಯಂತಿಗೆ ಹೋದರೆ ನನಗೂ ಏನೋ ಕಾದಿದೆ ಅಂತಾ ಕುಮಾರಸ್ವಾಮಿ ಅವರಿಗೆ ಗೊತ್ತು. ಅದೇ ಕಾರಣಕ್ಕೆ ಜಯಂತಿಗೆ ಹೋಗಿಲ್ಲ ಎಂದು ಕುಟುಕಿದರು.

    ಮೈಸೂರಿನಲ್ಲಿನ ನಜ್ಹರ್ ಬಾದ್ ಹೆಸರನ್ನು ಬದಲಾಯಿಸಬೇಕು. ಇದು ಟಿಪ್ಪು ಇಟ್ಟ ಹೆಸರಾಗಿದ್ದು, ಮೂಲ ಹೆಸರನ್ನು ಇಡಬೇಕು ಎಂದು ಒತ್ತಾಯಿಸಿದ ಅವರು, ಟಿಪ್ಪು ಸುಲ್ತಾನ್ ಅಲ್ಲ. ಆತ ಸುಲ್ತಾನ್ ಆಗಬೇಕು ಅಂತಾ ಆಸೆ ಪಟ್ಟಿದ್ದ ಅಷ್ಟೇ. ಅದು ಆಗಲಿಲ್ಲ. ಆತ ಬರೀ ಟಿಪ್ಪು, ಮೈಸೂರು ಹುಲಿಯೂ ಅಲ್ಲ. ಇಲಿಯೂ ಅಲ್ಲ ಎಂದು ವಾಗ್ದಾಳಿ ನಡೆಸಿದರು.

    ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಟಿಪ್ಪು ಜಯಂತಿ ಜಾರಿಗೆ ತಂದಿದ್ದಕ್ಕೆ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ ಎನ್ನುವುದಕ್ಕೆ ಮಾಜಿ ಸಿಎಂ ಉದಾಹರಣೆ. ಅವರು ಸಿದ್ದರಾಮಯ್ಯ ಅಲ್ಲ. ಸಿದ್ದುಖಾನ್ ಎಂದು ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ವಿಚಾರದಲ್ಲಿ ಕ್ಯಾತೆ ತೆಗೆದ್ರೆ ಹುಷಾರ್ – ಇಷ್ಟ ಇಲ್ಲ ಅಂದ್ರೆ ಮನೇಲಿ ಇರ್ಲಿ : ಸಿಎಂ ಎಚ್‍ಡಿಕೆ

    ಟಿಪ್ಪು ವಿಚಾರದಲ್ಲಿ ಕ್ಯಾತೆ ತೆಗೆದ್ರೆ ಹುಷಾರ್ – ಇಷ್ಟ ಇಲ್ಲ ಅಂದ್ರೆ ಮನೇಲಿ ಇರ್ಲಿ : ಸಿಎಂ ಎಚ್‍ಡಿಕೆ

    ಬೆಂಗಳೂರು: ನಾನು ಯಾವತ್ತು ಟಿಪ್ಪು ಜಯಂತಿ ವಿರೋಧ ಮಾಡಿಲ್ಲ. ಇಷ್ಟ ಇಲ್ಲದವರು ಮನೆಯಲ್ಲೇ ಇರುವಂತೆ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಉಪಚುನಾವಣೆಯ ಫಲಿತಾಂಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಎಚ್‍ಡಿಕೆ, ನಾನು ಯಾವತ್ತು ಟಿಪ್ಪು ಜಯಂತಿ ವಿರೋಧ ಮಾಡಿಲ್ಲ. ಬಿಜೆಪಿಯವರಿಗೆ ಇಷ್ಟ ಇಲ್ಲ ಅಂದರೆ ಮನೆಯಲ್ಲಿ ಇರಿ. ಅದು ಬಿಟ್ಟು ರಾಜಕೀಯ ಮಾಡಬೇಡಿ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದು ಖಡಕ್ ಆಗಿಯೇ ಹೇಳಿದರು.

    ಈ ಹಿಂದೆ ನಮ್ಮ ಪಕ್ಷದ ಕಚೇರಿಯಲ್ಲಿಯೇ ಟಿಪ್ಪು ಜಯಂತಿ ಆಚರಣೆ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಈ ಕಾರ್ಯಕ್ರಮ ನಡೆಯುತ್ತದೆ. ಸಾರ್ವಜನಿಕ ಆಸ್ತಿಗೆ ಯಾರು ಹಾನಿ ಮಾಡಿದರು ಸಹಿಸುವುದಿಲ್ಲ. ಆದರೆ ಶಾಂತಿಯುತವಾಗಿ ಯಾರು ಬೇಕಾದರೂ ಪ್ರತಿಭಟನೆ ಮಾಡಲಿ. ಶಾಂತಿಗೆ ಭಂಗ ಮಾಡಿದರೆ ಅಂತಹವರನ್ನ ಬಲಿ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನು ಓದಿ: ಧಮ್ ಇದ್ರೆ ಬಂಧಿಸಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವೈಫಲ್ಯವಾದ್ರೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್

    ಸಮ್ಮಿಶ್ರ ಸರ್ಕಾರದ ಕಾರ್ಯಗಳು ರಾಜ್ಯದ ಜನತೆಗೆ ಇಷ್ಟವಾಗಿದ್ದು, ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ಜನ ಆಶೀರ್ವಾದ ಮಾಡಿದ್ದಾರೆ. ಈ ಗೆಲುವಿನಿಂದ ನಾವು ತಲೆ ತಿರುಗಿ ಹೋಗುವುದಿಲ್ಲ. ಮುಂದಿನ ಲೋಕಸಭೆಯಲ್ಲಿ 28 ಸ್ಥಾನ ಗೆಲ್ಲುವ ಗುರಿ ಇದೆ. ಇದಕ್ಕೆ ಅಗತ್ಯವಾದ ಕೆಲಸ ಸಮ್ಮಿಶ್ರ ಸರ್ಕಾರ ಮಾಡುತ್ತೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸುತ್ತೇವೆ. ಜವಾಬ್ದಾರಿಯನ್ನ ಹೆಚ್ಚು ನಿರ್ವಹಣೆ ಮಾಡಲು ಜನ ಅವಕಾಶ ನೀಡುವ ಸಂದೇಶ ನೀಡಿದ್ದಾರೆ. ನಮ್ಮ ನಡವಳಿಕೆಯನ್ನ ಮತ್ತಷ್ಟು ಉತ್ತಮ ಮಾಡಿಕೊಂಡು ಜನರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗ್ಲೇಬೇಕು- ಜಮೀರ್ ಅಹ್ಮದ್

    ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗ್ಲೇಬೇಕು- ಜಮೀರ್ ಅಹ್ಮದ್

    ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ

    ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ ಮಾಡಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ಜೊತೆ ಮಸೀದಿಯೂ ನಿರ್ಮಾಣ ಆಗಲಿ ಎನ್ನುವುದು ಮುಸ್ಲಿಂ ಆಶಯ ಅಂದ್ರು.

    ಬಿಜೆಪಿ ವಿರುದ್ಧ ಕಿಡಿ:
    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ರಾಮಮಂದಿರದ ನೆನಪು ಆಗುತ್ತಿದೆ. 2014ರಲ್ಲೇ ಅಧಿಕಾರಕ್ಕೆ ಬಂದರೂ ಅಲ್ಲಿಂದ ಇಲ್ಲಿಯವರೆಗೆ ಈ ವಿಚಾರ ಮಾತನಾಡಿಲ್ಲ. ಚುನಾವಣೆಗಾಗಿ ಮತ್ತೆ ರಾಮ ಮಂದಿರದ ಬಗ್ಗೆ ಮಾತನಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಮತ್ತೆ ಸುಮ್ಮನಾಗುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದರು.

    ಟಿಪ್ಪು ಜಯಂತಿ ವಿಚಾರವನ್ನ ವೋಟ್ ಬ್ಯಾಂಕ್ ಗಾಗಿ ಬಿಜೆಪಿಯವರು ವಿವಾದ ಮಾಡ್ತಿದ್ದಾರೆ. ಅವರಿಗೆ ಚುನಾವಣೆಗೆ ಯಾವುದೇ ವಿಚಾರ ಇಲ್ಲ. ಹಿಂದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಮಾಡಿದ್ದರು. ಯಡಿಯೂರಪ್ಪ, ಆರ್ ಅಶೋಕ್, ಶೋಭಾ ಕರಂದ್ಲಾಜೆ ಜಯಂತಿ ಮಾಡಿಲ್ವಾ….? ಈಗ್ಯಾಕೆ ಇವರಿಗೆ ಟಿಪ್ಪು ಜಯಂತಿ ಬೇಡ ಎಂದು ಪ್ರಶ್ನಿಸಿದರು.

    ಕಾಂಟ್ರವರ್ಸಿ ಬೇಡ:
    ಸಿದ್ದರಾಮಯ್ಯ ಸರ್ಕಾರ ಈ ಹಿಂದೆ ಮೂರು ಬಾರಿ ಟಿಪ್ಪು ಜಯಂತಿ ಆಚರಣೆ ಮಾಡಿದ್ದಾರೆ. ಹಾಗಾಗಿ ಸಮ್ಮಿಶ್ರ ಸರ್ಕಾರದಲ್ಲಿಯೂ ಟಿಪ್ಪು ಜಯಂತಿ ಅಚರಣೆ ಮಾಡಲಾಗುತ್ತಿದೆ. ಎಲ್ಲ ತಾಲೂಕು ಮಟ್ಟದಲ್ಲಿಯೂ ಜಯಂತಿ ಮಾಡಲಾಗುತ್ತಿದೆ. ಟಿಪ್ಪು ವಿವಿ ಮತ್ತು ಟಿಪ್ಪು ಪುತ್ಥಳಿ ನಿರ್ಮಾಣ ವಿಚಾರ ಸದ್ಯ ಬೇಡ. ಇಂತಹ ಕಾಂಟ್ರರ್ವಸಿ ಮಾತಾಡೋದು ಬೇಡ. ಮುಂದಿನ ದಿನಗಳಲ್ಲಿ ಈ ವಿಚಾರದ ಬಗ್ಗೆ ಮಾತಾಡೋಣ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟಿಪ್ಪು ಜಯಂತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಜಯಮಾಲಾ

    ಟಿಪ್ಪು ಜಯಂತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಜಯಮಾಲಾ

    ಮಡಿಕೇರಿ: ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ಆಚರಿಸಲು ಸಮ್ಮಿಶ್ರ ಸರ್ಕಾರ ಮುಂದಾಗಿದೆ.

    ಸರ್ಕಾರದ ಸೂಚನೆ ಮೇರೆಗೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಸುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚರ್ಚೆ ನಡೆಸಿದೆ. ಜಯಂತಿ ಆಚರಣೆ ಸಂಬಂಧಪಟ್ಟಂತೆ ಸಿಎಂ ಸೂಚನೆಯ ಮೇರೆಗೆ ಸಭೆ ಕರೆಯಲಾಗಿದೆ ಎಂದು ಸಚಿವೆ ಜಯಮಾಲಾ ಸ್ಪಷ್ಟಪಡಿಸಿದ್ದಾರೆ.

    ಸಭೆ ಬಳಿಕ ಮಾತನಾಡಿದ ಸಚಿವೆ ಜಯಮಾಲಾ ಅವರು, ಸದ್ಯ ವಿರೋಧ ಪಕ್ಷದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಟಿಪ್ಪು ಜಯಂತಿ ಆಚರಣೆ ಮಾಡಿದ ಫೋಟೋಗಳು ಇದೆ. ಅವರೇ ಆಚರಣೆ ಮಾಡಿದ್ದ ಜಯಂತಿಗೆ ಅವರೇ ಏಕೆ ವಿರೋಧ ವ್ಯಕ್ತಪಡಿಸುತ್ತಾರೆ. ಸರ್ಕಾರದಲ್ಲಿ ಈ ಕುರಿತು ನಿಯಮ ಜಾರಿ ಮಾಡಲಾಗಿದೆ. ಅದ್ದರಿಂದ ಜಯಂತಿ ಆಚರಣೆ ನಡೆಯುತ್ತದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ವಿರೋಧಿ ಚಟುವಟಿಕೆ ನಡೆಸಿದರೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಆದರೆ ಜನರ ರಕ್ಷಣೆ ಅವರ ಕರ್ತವ್ಯವೂ ಆಗಿದೆ. ಇದಕ್ಕೆ ಏನೇ ಆದರೂ ಅವರೇ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.

    ನಂ.10ರ ಆಚರಣೆಗೆ ಸಿದ್ಧತೆ ನಡೆಸಲು ಅಧಿಕೃತವಾಗಿ ಸಭೆ ನಡೆಸುವ ಮೂಲಕ ಖಚಿತ ಮಾಹಿತಿ ನೀಡಿದೆ. ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಆಚರಣೆ ಮಾಡುವ ಕುರಿತು ಸಿದ್ಧತೆ ನಡೆಸಲಾಗಿದೆ. ಸಭೆಯಲ್ಲಿ ಸಚಿವೆ ಜಯಮಾಲಾ ಅವರೊಂದಿಗೆ ಸಚಿವ ಜಮೀರ್ ಅಹ್ಮದ್ ಭಾವಹಿಸಿದ್ದರು. ಇದಕ್ಕೆ ಸಮ್ಮಿಶ್ರ ಸರ್ಕಾರ ಬೆಂಬಲವೂ ಇದೆ ಎಂಬ ಸೂಚನೆಯನ್ನು ಈ ಸಭೆಯ ಮೂಲಕ ನೀಡಲಾಗಿದೆ. ಅಲ್ಲದೇ ಕಳೆದ 2 ದಿನಗಳ ಟಿಪ್ಪು ಜಯಂತಿ ಆಚರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಈ ಹಿಂದಿನ ಸರ್ಕಾರ ಯಾವ ಯೋಜನೆಗಳನ್ನು ಜಾರಿಗೆ ತಂದಿದೆ ಅದೆಲ್ಲವನ್ನು ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದರು.

    ಕನ್ನಡ ವಿರೋಧಿ ಟಿಪ್ಪು: ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಸಿಟಿ ರವಿ ಅವರು, ಟಿಪ್ಪು ಕನ್ನಡ ವಿರೋಧಿ ಆಗಿದ್ದು. ಅಂತಹ ಟಿಪ್ಪು ವಿರೋಧಿ ಮಾಡುವುದಕ್ಕೆ ನಮ್ಮ ವಿರೋಧ ಇದೆ. ಒಂದೊಮ್ಮೆ ಇಂತಹ ಪ್ರಯತ್ನ ಮುಂದುವರಿಸಿದರೆ ಅವರ ರಕ್ತದ ಗುಂಪು ಯಾವುದು ಎಂದು ಪ್ರಶ್ನೆ ಮಾಡಬೇಕಾಗುತ್ತದೆ. ಸಂತ ಶಿಶುನಾಳ ಶರೀಫರ ಜಯಂತಿ ಆಚರಣೆ ಮಾಡಿ ಎಂದು ಸಲಹೆ ನೀಡಿದರು.

    ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿ, ಜಯಂತಿ ಆಚರಣೆಗೆ ನಮ್ಮ ವಿರೋಧ ಇದೆ. ಕಳೆದ ಬಾರಿ ಸರ್ಕಾರದ ಭಂಡತನದಿಂದ ಒಂದು ಸಾವು ಸಂಭವಿಸಿದೆ. ಅದ್ದರಿಂದ ಮೈಸೂರು ದಿವಾನ್ ಅಗಿದ್ದ ಸರ್. ಮಿರ್ಜಾ ಇಸ್ಮಾಯಿಲ್ ಅವರ ದಿನಾಚರಣೆ ಆಚರಣೆ ಮಾಡಲಿ. ನಾವು ಬೆಂಬಲ ನೀಡುತ್ತೇವೆ. ಅದ್ದರಿಂದ ಇತಿಹಾಸಕ್ಕೆ ಅಪಚಾರ ಮಾಡುವುದು ಬೇಡ. ಇದರ ವಿರುದ್ಧ ನ.5ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

    ಮಡಿಕೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಅಭಿಮನ್ಯು ಕುಮಾರ್ ಸಿಎಂ ಅವರಿಗೆ ಆಚರಣೆ ಮಾಡದಂತೆ ಆಗ್ರಹಿಸಿದ್ದಾರೆ. ಈ ಹಿಂದೆ ಒಂದು ಕಡೆ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಜಾರಿಗೆ ತಂದು ಗಲಭೆಗೆ ಕಾರಣವಾಗಿದ್ದ ಕಾಂಗ್ರೆಸ್‍ಗೆ ಇದೆಲ್ಲಾ ಬೇಕಿತ್ತಾ ಎಂದು ಕುಮಾರಸ್ವಾಮಿ ಅವರು ಅಂದು ಹೇಳಿದ್ದರು. ಅಲ್ಲದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ಆಚರಿಸುವುದಿಲ್ಲ ಎಂದು ಹೇಳಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ, ಜಯಂತಿಯನ್ನು ನಿಷೇಧಿಸಲಿ ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದು ಸರ್ಕಾರ ಮುಂದುವರಿದ್ರೆ ಮುಂದೆ ಉಗ್ರ ಕಸಬ್ ಜಯಂತಿ ಆಚರಣೆ: ಅನಂತ್ ಕುಮಾರ್ ಹೆಗಡೆ

    ಸಿದ್ದು ಸರ್ಕಾರ ಮುಂದುವರಿದ್ರೆ ಮುಂದೆ ಉಗ್ರ ಕಸಬ್ ಜಯಂತಿ ಆಚರಣೆ: ಅನಂತ್ ಕುಮಾರ್ ಹೆಗಡೆ

    ಉಡುಪಿ: ಹಠಮಾಡಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡಿದರು. ಇದೇ ಸರ್ಕಾರ ರಾಜ್ಯದಲ್ಲಿ ಮುಂದುವರೆದರೆ ಉಗ್ರ ಕಸಬ್ ಜಯಂತಿಯನ್ನೂ ಆಚರಿಸುತ್ತಾರೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ಪರಿವರ್ತನಾ ಯಾತ್ರೆಯ ಕುಂದಾಪುರ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರಕ್ಕೆ ನಾಡು ನುಡಿಯ ಕಲ್ಪನೆಯಿಲ್ಲ. ಟಿಪ್ಪು ಜಯಂತಿಯನ್ನು ಹಠಮಾಡಿ ಆಚರಣೆ ಮಾಡಿದರು. ಇದೇ ರೀತಿ ಸಿದ್ದರಾಮಯ್ಯ ಸರ್ಕಾರ ಮುಂದುವರೆದರೆ ಕಸಬ್ ಜಯಂತಿಯನ್ನು ಆಚರಿಸುತ್ತಾರೆ. ಇವರು ದೇಶದ್ರೋಹಿಗಳ ಜಯಂತಿಯನ್ನೂ ಆಚರಿಸಲು ಸಿದ್ಧರಿದ್ದಾರೆ ಎಂದು ಹೇಳಿದರು.

    ನಾವು ಸ್ವಾಭಿಮಾನ ಬಿಟ್ಟು ಬದುಕಲು ಸಾಧ್ಯವಿಲ್ಲ. ಅಭಿವೃದ್ಧಿಯ ಜೊತೆ ರಕ್ತಕ್ಕೆ ಗೌರವ ಕೊಡುವ ಸರ್ಕಾರ ನಮಗೆ ಬೇಕು. ದೇಶದ್ರೋಹಿಗಳ ಓಟೇ ಕಾಂಗ್ರೆಸ್ಸಿಗೆ ಬೇಕು ಎಂದು ಹೆಗಡೆ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಬೇಕು. ಭಗವಾಧ್ವಜದ ನೇತೃತ್ವದಲ್ಲಿ ಧರ್ಮರಾಜ್ಯ ನಿರ್ಮಾಣವಾಗಬೇಕು. ರಾವಣರಾಜ್ಯ ಹೋಗಬೇಕು ರಾಮರಾಜ್ಯ ನಿರ್ಮಾಣ ಆಗಬೇಕು. ಸಿದ್ದರಾಮಯ್ಯ ಅವರ ದುರಹಂಕಾರಿ ಆಡಳಿತ ಕೊನೆಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

     

  • ಅನಂತ್ ಕುಮಾರ ಹೆಗಡೆ ಹೆಸ್ರು ಕೈ ಬಿಟ್ಟು ಬೆಳಗಾವಿ ಜಿಲ್ಲಾಡಳಿತದಿಂದ ಹೊಸ ಆಹ್ವಾನ ಪತ್ರಿಕೆ ಮುದ್ರಣ

    ಅನಂತ್ ಕುಮಾರ ಹೆಗಡೆ ಹೆಸ್ರು ಕೈ ಬಿಟ್ಟು ಬೆಳಗಾವಿ ಜಿಲ್ಲಾಡಳಿತದಿಂದ ಹೊಸ ಆಹ್ವಾನ ಪತ್ರಿಕೆ ಮುದ್ರಣ

    ಬೆಳಗಾವಿ: ನವೆಂಬರ್ 10 ರಂದು ನಡೆಯಲಿರುವ ಟಿಪ್ಪು ಜಯಂತಿ ಆಚರಣೆಗೆ ಜಿಲ್ಲಾಡಳಿತ ಬಿಜೆಪಿ ನಾಯಕರ ಹೆಸರನ್ನು ಕೈಬಿಟ್ಟು ಹೊಸ ಆಹ್ವಾನ ಪತ್ರಿಕೆ ಮುದ್ರಿಸಿದೆ.

    ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಮತ್ತು ಸಂಸದ ಸುರೇಶ್ ಅಂಗಡಿ ಅವರು ಈ ಹಿಂದೆ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸುವುದು ಬೇಡ ಎಂದು ತಿಳಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

    ಪತ್ರ ಬರೆದಿದ್ದರೂ ಬೆಳಗಾವಿ ಜಿಲ್ಲಾಡಳಿತ ಶಿಷ್ಟಾಚಾರದ ಪ್ರಕಾರ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಇಬ್ಬರು ನಾಯಕರ ಹೆಸರನ್ನು ಪ್ರಕಟಿಸಿ ಆಹ್ವಾನ ಪತ್ರಿಕೆಯನ್ನು ಮುದ್ರಿಸಿತ್ತು. ಆದರೆ ಈಗ ಸರ್ಕಾರ ನಿರ್ದಿಷ್ಟ ಪ್ರಕರಣಗಳಲ್ಲಿ ತಮ್ಮ ಹೆಸರನ್ನು ನಮೂದಿಸದಂತೆ ಜನಪ್ರತಿನಿಧಿಗಳು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಲ್ಲಿ ಆ ಜನಪ್ರತಿನಿಧಿಗಳ ಹೆಸರನ್ನು ನಮೂದಿಸಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಹೆಸರನ್ನು ಕೈಬಿಟ್ಟು ಹೊಸದಾಗಿ ಆಹ್ವಾನ ಪತ್ರಿಕೆಯನ್ನು ಮುದ್ರಿಸಲಾಗಿದೆ.

    ಈ ಹಿಂದೆ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಶಿಷ್ಟಾಚಾರದ ಪ್ರಕಾರ ನಾವು ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನು ಹಾಕುತ್ತೇವೆ. ಈ ಕಾರ್ಯಕ್ರಮಕ್ಕೆ ಬರುವುದು ಬಿಡುವುದು ಬಿಜೆಪಿ ನಾಯಕರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದರು.

    ಅನಂತ್ ಕುಮಾರ ಹೆಗಡೆ ಪ್ರತಿಕ್ರಿಯಿಸಿ, ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿ ಮುದ್ರಿಸಬೇಡಿ ಎಂದು ಹೇಳಿದ್ದೇನೆ. ಒಂದು ವೇಳೆ ಹೆಸರನ್ನು ಮುದ್ರಿಸಿದರೆ ಆ ಕಾರ್ಯಕ್ರಮದಲ್ಲಿ ಭಾಗವಹಿಸಿ ಟಿಪ್ಪು ನಿಜ ಬಣ್ಣವನ್ನು ಬಯಲು ಮಾಡುತ್ತೇನೆ ಎಂದು ತಿಳಿಸಿದ್ದರು.

    ಮೈಸೂರಿನಲ್ಲಿ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಸಂಸದ ಪ್ರತಾಪ್ ಸಿಂಹ, ಇದೀಗ ಟಿಪ್ಪು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಬಿಜೆಪಿ ನಾಯಕರ ಹೆಸರು ತೆಗೆಯುವ ಮೂಲಕ ಸಿಎಂ ನಮ್ಮ ಹೋರಾಟಕ್ಕೆ ಹೆದರಿದ್ದಾರೆ. ನಾವು ಕಾರ್ಯಕ್ರಮಕ್ಕೆ ಬಂದರೆ ಟಿಪ್ಪುವಿನ ನಿಜಬಣ್ಣ ಬಯಲಾಗುತ್ತದೆ ಎಂಬ ಭಯ ಅವರಿಗಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.

    ಇದನ್ನೂ ಓದಿ: ಆಹ್ವಾನಪತ್ರಿಕೆಯಲ್ಲಿ ಹೆಸರು ಹಾಕ್ಸೋದು ಪ್ರೋಟೋಕಾಲ್, ಬರೋದು ಬಿಡೋದು ಸಚಿವರಿಗೆ ಬಿಟ್ಟಿದ್ದು- ಸಿಎಂ

    ಇದನ್ನೂ ಓದಿ: ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಮುದ್ರಣ-ಸಚಿವ ಅನಂತ್ ಕುಮಾರ್ ಹೆಗಡೆ ಹೀಗಂದ್ರು

     

  • ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಪ್ಲಾನ್

    ಟಿಪ್ಪು ಜಯಂತಿ ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಪ್ಲಾನ್

    ಬೆಂಗಳೂರು: ಈ ಬಾರಿಯೂ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

    ಟಿಪ್ಪು ಜಯಂತಿ ವಿರೋಧಿ ಸಮಿತಿ ವೇದಿಕೆಯಲ್ಲಿ ಆಕ್ಟೋಬರ್ 23ರಂದು ಬಿಜೆಪಿ ಮತ್ತು ಸಂಘಪರಿವಾರದ ಸಭೆ ನಡೆಯಲಿದೆ. ಸಂಘ ಪರಿವಾರದ ಮುಖಂಡರು, ಬಿಜೆಪಿ ಸಂಸದರಾದ ಪ್ರತಾಪ್ ಸಿಂಹ, ಶ್ರೀರಾಮುಲು ಸೇರಿದಂತೆ ಹಲವರು ಬೆಂಗಳೂರಿನಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಟಿಪ್ಪು ಜಯಂತಿ ಆಚರಣೆ ವಿರುದ್ಧ ಹೋರಾಟ ನಡೆಸಲು ತೀರ್ಮಾನ ಮಾಡಿದ್ದು, 23ರ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲು ಬಿಜೆಪಿ ಪ್ಲ್ಯಾನ್ ಮಾಡಿದೆ.

    ಕಳೆದ ಬಾರಿ ಮಡಿಕೇರಿಯಲ್ಲಿ ಗಲಾಟೆಯಾಗಿ ಸಂಘ ಪರವಾರದ ಕಾರ್ಯಕರ್ತ ಕುಟ್ಟಪ್ಪ ಸಾವನ್ನಪ್ಪಿದ್ರು. ಆಗ ಟಿಪ್ಪು ಜಯಂತಿಗೆ ಬಿಜೆಪಿ, ಸಂಘ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿತು. ಅಷ್ಟೇ ಅಲ್ಲ ವಿಧಾನಸೌಧದಲ್ಲಿ ನಡೆದ ಟಿಪ್ಪು ಜಯಂತಿಯಲ್ಲೂ ಗಲಾಟೆಯಾಗಿತ್ತು. ಇನ್ನು ಈ ವರ್ಷವೂ ಸಹ ಟಿಪ್ಪು ಜಯಂತಿ ವಿರೋಧಕ್ಕೆ ಬಿಜೆಪಿ ನಿರ್ಧಾರ ಮಾಡಿದ್ದು, ದೊಡ್ಡ ಮಟ್ಟದ ಹೋರಾಟಕ್ಕೆ ಪ್ಯ್ಲಾನ್ ಮಾಡಿದೆ.