Tag: Tirath Singh Rawat

  • ಉತ್ತರಾಖಂಡ ನೂತನ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

    ಉತ್ತರಾಖಂಡ ನೂತನ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

    ಡೆಹ್ರಾಡೂನ್: ತೀರ್ಥ್ ಸಿಂಗ್ ರಾವತ್ ರಾಜೀನಾಮೆಯಿಂದ ನೀಡಿದ್ದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಆಯ್ಕೆ ಮಾಡಲಾಗಿದ್ದು, ಪಕ್ಷದ ಕಚೇರಿಯಲ್ಲಿ ನಡೆದ ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

     

    ತೀರ್ಥ್ ಸಿಂಗ್ ರಾವತ್ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಕಳುಹಿಸಿತ್ತು. ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಶಾಸಕರ ಒಪ್ಪಿಗೆ ಮೇರೆಗೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್ ಮುಂದಿನ ಮುಖ್ಯಮಂತ್ರಿ ಯಾರು?

     

    ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡನ ಹತ್ತನೇ ಸಿಎಂ ಆಗಿ ಶೀಘ್ರದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದಿಂದ ಪುಷ್ಕರ್ ಸಿಂಗ್ ಧಾಮಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

    ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರ್ಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಕೊರೊನಾದಿಂದಾಗಿ ಬೈ ಎಲೆಕ್ಷನ್ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದರು. ಇದೀಗ ಮುಖ್ಯ ಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ.

  • ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

    ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

    ಡೆಹರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರ್ಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

    ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಕೊರೊನಾದಿಂದಾಗಿ ಬೈ ಎಲೆಕ್ಷನ್ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದಾರೆ.

    ಈಗಾಗಲೇ ರಾವತ್ ಕಳೆದ ಮೂರು ದಿನಗಳಿಂದ ಕೇಂದ್ರ ಬಿಜೆಪಿಯ ನಾಯಕರೊಂದಿಗೆ ಚರ್ಚಿಸಿ ಬಳಿಕ ಈ ನಿರ್ಧಾರ ಮಾಡಿದ್ದಾರೆ. ಈಗಾಗಲೇ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ನೀಡಿದ್ದಾರೆ. ಇದಾದ ಬಳಿಕ ಉತ್ತಾರಖಂಡದ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ : ಶಾರ್ಟ್ಸ್ ಧರಿಸಿ ಅಂಗಾಂಗ ಪ್ರದರ್ಶನಕ್ಕೆ ಕಾಲೇಜಿಗೆ ಬರೋದಾ? ಮತ್ತೆ ಮಹಿಳೆಯರ ಉಡುಪು ಪ್ರಶ್ನಿಸಿದ ಸಿಎಂ ರಾವತ್

    ತೀರ್ಥ್ ಸಿಂಗ್ ರಾವತ್ ಸಂಸತ್ ಸದಸ್ಯರಾಗಿ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಸಿಎಂ ಆದ 6 ತಿಂಗಳ ಒಳಗೆ ರಾಜ್ಯ ವಿಧಾನಸಭೆ ಸದಸ್ಯರಾಗಬೇಕಾಗಿತ್ತು. ಆದರೆ ಇದೀಗ ಚುನಾವಣೆ ನಡೆಸಲು ಸಾಧ್ಯವಾಗದೆ ಇರುವ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಈ ಹಿಂದೆ ಉತ್ತರಾಖಂಡದ ಮುಖ್ಯಮಂತ್ರಿ ತೀವೇಂದ್ರ ಸಿಂಗ್ ರಾವತ್ ಕೂಡ ಇದೇ ರೀತಿಯ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡಿದ್ದರು ಬಳಿಕ ತೀರ್ಥ್ ಸಿಂಗ್ ರಾವತ್ ಸಿಎಂ ಆಗಿದ್ದರು. ಅದಾದ ಬಳಿಕ ಉತ್ತರಾಖಂಡದಲ್ಲಿ ಉಂಟಾದ ನಾಯಕತ್ವ ಬಿಕ್ಕಟ್ಟಿನಿಂದಾಗಿ ರಾವತ್ ಮೇಲೆ ಕೇಂದ್ರದಿಂದಲೂ ಅಲ್ಪ ಮಟ್ಟಿನ ಹಿನ್ನಡೆ ಉಂಟಾಗಿತ್ತು. ಅದಲ್ಲದೆ ಮಹಿಳೆಯರು ಧರಿಸುವ ರಿಪ್ಪಡ್ ಜೀನ್ಸ್ ಪ್ಯಾಂಟ್ ಬಗ್ಗೆ ರಾವತ್ ಹೇಳಿದ ಹೇಳಿಕೆಯಿಂದ ವ್ಯಾಪಕ ವಿರೋಧ ಕೂಡ ಉಂಟಾಗಿತ್ತು. ಇದನ್ನೂ ಓದಿ : ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

    ಇದೀಗ ಮತ್ತೆ ಉತ್ತರಾಖಂಡದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಬೇಕಾಗಿದ್ದು, ಶಾಸಕರಾದ ಸತ್ಪಲ್ ಮಹಾರಾಜ್ ಮತ್ತು ದಾನ್ ಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

    ಇಂದು ಮಧ್ಯಾಹ್ನ ಬಿಜೆಪಿ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದರ ಬಗ್ಗೆ ಚರ್ಚೆಗಳು ನಡೆದಿವೆ. ಉತ್ತರಾಖಂಡ ಬಿಜೆಪಿಯ ಮಾಜಿ ಅಧ್ಯಕ್ಷ ಬಿಶನ್ ಸಿಂಗ್ ಚುಪ್ಲಾ ಮತ್ತು ಮಾಜಿ ಸಿಎಂ ತ್ರೀವೇಂದ್ರ ಸಿಂಗ್ ಹೆಸರಗಳು ಮುಖ್ಯಮಂತ್ರಿ ರೇಸ್ ನಲ್ಲಿವೆ.

  • ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

    ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

    – ಕೊರೊನಾ ಮಾರ್ಗಸೂಚಿ ಪಾಲಿಸಿ ಕುಂಭಮೇಳ
    – ಕುಂಭಮೇಳ, ಮರ್ಕಜ್ ನಡುವಿನ ಹೋಲಿಕೆ ತಪ್ಪು

    ಡೆಹ್ರಾಡೂನ್: ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು, ನಿಜಾಮುದ್ದೀನ್ ಮರ್ಕಜ್‍ನೊಂದಿಗೆ ಹೋಲಿಕೆ ಮಾಡಬೇಡಿ. ಕುಂಭಮೇಳದಲ್ಲಿ ಗಂಗಾಸ್ಥಾನ ಮಾಡಿದರೆ ಕೊರೊನಾ ಬರುವುದಿಲ್ಲ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರ್ಥ್ ಸಿಂಗ್ ರಾವತ್ ಹೇಳಿಕೆ ನೀಡಿದ್ದಾರೆ.

    ಉತ್ತರಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಮತ್ತು ನಿಜಾಮುದ್ದೀನ್ ಮರ್ಕಜ್ ಕುರಿತು ಸ್ಥಳೀಯ ಮಾಧ್ಯಮವೊಂದರ ಪ್ರಶ್ನೆಗೆ ಉತ್ತರಿಸಿದ ತೀರ್ಥ್ ಸಿಂಗ್ ರಾವತ್ ಅವರು, ಕುಂಭಮೇಳ ಮತ್ತು ನಿಜಾಮುದ್ದೀನ್ ಮರ್ಕಜ್ ಎರಡು ಧಾರ್ಮಿಕ ಕಾರ್ಯಕ್ರಮಗಳನ್ನು ಹೋಲಿಕೆ ಮಾಡಬೇಡಿ. ನಿಜಾಮುದ್ದೀನ್ ಮರ್ಕಜ್ ಕಟ್ಟಡದಲ್ಲಿ ನಡೆದರೆ ಕುಂಭಮೇಳ ತೆರೆದ ಜಾಗದಲ್ಲಿ ನಡೆಯುತ್ತದೆ. ಅದಲ್ಲದೆ ನಿಜಾಮುದ್ದೀನ್ ಮರ್ಕಜ್ ಕಾರ್ಯಕ್ರಮಕ್ಕೆ ವಿದೇಶಿಗರು ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಕುಂಭಮೇಳದಲ್ಲಿ ಹೊರಗಿನಿಂದ ಯಾರು ಬರುವುದಿಲ್ಲ ಎಲ್ಲರು ನಮ್ಮವರೆ ಆಗಿರುತ್ತಾರೆ. ಆದರೆ ನಿಜಾಮುದ್ದೀನ್ ಮರ್ಕಜ್‍ಗೆ ಬೇರೆ ದೇಶಗಳಿಂದ ಜನ ಬರುತ್ತಾರೆ. ಮರ್ಕಜ್ ನಡೆದಾಗ ಕೊರೊನಾ ಕುರಿತು ಹೆಚ್ಚಿನ ಅರಿವು ಇರಲಿಲ್ಲ ಮತ್ತು ಮಾರ್ಗಸೂಚಿಗಳಿರಲಿಲ್ಲ. ಇದರೊಂದಿಗೆ ಮರ್ಕಜ್‍ಗೆ ಆಗಮಿಸಿದವರು ಯಾರು ಎಷ್ಟು ದಿನ ಉಳಿದುಕೊಳ್ಳಲಿದ್ದಾರೆ ಮತ್ತು ಒಟ್ಟು ಜನಸಂಖ್ಯೆಯ ಸರಿಯಾದ ಯೋಜನೆ ಇರಲಿಲ್ಲ ಎಂದಿದ್ದಾರೆ.

    ಆದರೆ ಪ್ರಸ್ತುತ ಕೊರೊನಾ ಕುರಿತು ಹೆಚ್ಚಿನ ಅರಿವು ಮೂಡಿದ್ದು, ಸರಿಯಾದ ಮಾರ್ಗಸೂಚಿಗಳನ್ನು ತೆಗೆದುಕೊಂಡು ಕುಂಭಮೇಳ ನಡೆಸಲಾಗುತ್ತಿದೆ. ಕುಂಭಮೇಳ 12 ವರ್ಷಗಳಿಗೊಮ್ಮೆ ಬರುತ್ತದೆ. ಹಾಗೆ ಕುಂಭಮೇಳ ಲಕ್ಷಾಂತರ ಜನರ ನಂಬಿಕೆ ಮತ್ತು ಭಾವನೆಗಳೊಂದಿಗೆ ನಂಬಿಕೆ ಹೊಂದಿರುತ್ತದೆ ಎಂದು ಅಭಿಪ್ರಾಯಪಟ್ಟರು.

    ಈಗಾಗಲೇ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಕುಂಭಮೇಳವನ್ನು ಯಶಸ್ವಿಯಾಗಿ ನಡೆಸಲು ಕೋವಿಡ್-19ನ ಸವಾಲು ಮುಂದಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಿ ಜನರ ಆರೋಗ್ಯ ದೃಷ್ಟಿಯಿಂದ ಸರಿಯಾದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡು ಕುಂಭಮೇಳ ನಡೆಸುವುದಾಗಿ ತಿಳಿಸಿದ್ದಾರೆ.

  • ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಸಿಎಂ ತೀರ್ಥ್ ಸಿಂಗ್ – ಇತ್ತ ನಟಿ ಚಿತ್ರಾಶಿ ರಾವತ್ ಫೋಟೋ ವೈರಲ್

    ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಸಿಎಂ ತೀರ್ಥ್ ಸಿಂಗ್ – ಇತ್ತ ನಟಿ ಚಿತ್ರಾಶಿ ರಾವತ್ ಫೋಟೋ ವೈರಲ್

    – ನನ್ನ ತಂದೆ ಹೆಸ್ರು ತೀರ್ಥ್ ಸಿಂಗ್, ಆದ್ರೆ ಸಿಎಂ ನಮ್ಮ ತಂದೆ ಅಲ್ಲ

    ಡೆಹರಾಡೂನ್: ಉತ್ತರಾಖಂಡ ಸಿಎಂ ತೀರ್ಥ್ ಸಿಂಗ್ ರಾವತ್ ತಮ್ಮ ವಿವಾದತ್ಮಕ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಮತ್ತೊಂದು ನಟಿ ಚಿತ್ರಾಶಿ ರಾವತ್ ಹರಿದ ಜೀನ್ಸ್ ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮಹಿಳೆಯರು ಜೀನ್ಸ್ ಧರಿಸೋದಕ್ಕೆ ನನ್ನ ವಿರೋಧವಿಲ್ಲ. ಆದ್ರೆ ಹರಿದ ಜೀನ್ಸ್ ಧರಿಸೋದು ಒಳ್ಳೆಯದಲ್ಲ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ಇಂದು ಮಕ್ಕಳು ದುಬಾರಿ ಜೀನ್ಸ್ ಗಳನ್ನ ತಂದೆ ಮನೆಯಲ್ಲಿ ಕತ್ತರಿಸಿ ಧರಿಸುತ್ತಾರೆ. ಈ ಶೈಲಿ ಮನೆಯ ವಾತಾವರಣದ ಮೇಲೆ ಪ್ರಭಾವ ಬೀರಲಿದೆ. ನಾವು ಚಿಕ್ಕವರಿದ್ದಾಗ ನಮ್ಮ ಪ್ಯಾಂಟುಗಳ ಹರಿದಿದ್ದರೆ ಶಿಕ್ಷಕಕರು ಗದರಿಸುತ್ತಿದ್ರು. ನಾವು ಹರಿದ ಪ್ಯಾಂಟ್ ಗೆ ತೇಪೆ ಹಚ್ಚಿಕೊಂಡು ಹೋಗಿದ್ದೇವೆ ಎಂದು ಸಿಎಂ ರಾವತ್ ಹೇಳಿದ್ದಾರೆ.

    ಚಿತ್ರಾಶಿ ಫೋಟೋ ವೈರಲ್: ಇತ್ತ ಸಿಎಂ ಹೇಳಿಕೆಗೆ ಆಕ್ರೋಶವಾಗುತ್ತಿದ್ದಂತೆ ಅವರ ನಟಿ ಚಿತ್ರಾಶಿ ರಾವತ್ ರಿಪ್ಪಡ್ ಜೀನ್ಸ್ ಧರಿಸಿದ ಫೋಟೋಗಳು ವೈರಲ್ ಆಗಿವೆ. ತಮ್ಮ ಫೋಟೋಗಳು ವೈರಲ್ ಆಗುತ್ತಿದ್ದಂತೆ ಚಿತ್ರಾಶಿ ರಾವತ್ ಸ್ಪಷ್ಟನೆ ನೀಡಿದ್ದಾರೆ. ಜನರು ನನ್ನನ್ನು ಸಿಎಂ ಪುತ್ರಿ ಎಂದು ಟ್ರೋಲ್ ಮಾಡುತ್ತಿದ್ದಾರೆ. ನಮ್ಮ ತಂದೆಯ ಹೆಸರು ಮತ್ತು ಸಿಎಂ ಹೆಸರು ಒಂದೇ. ಹಾಗಾಗಿ ಈ ಗೊಂದಲ ಉಂಟಾಗಿದೆ. ಸಿಎಂ ತೀರ್ಥ್ ಸಿಂಗ್ ರಾವತ್ ನಮ್ಮ ತಂದೆ ಅಲ್ಲ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

    ಸಿಎಂ ರಾವತ್ ಹೇಳಿದ್ದೇನು?:
    ಹರಿದ ಜೀನ್ಸ್ ಧರಿಸುವ ಮಹಿಳೆಯರು ಸಮಾಜಕ್ಕೆ ಏನು ಸಂದೇಶ ನೀಡುತ್ತಾರೆ? ಹರಿದ ಜೀನ್ಸ್ ಧರಿಸುವಿಕೆ ಇದ್ಯಾವ ಸಂಸ್ಕೃತಿ ಎಂದು ಪ್ರಶ್ನಿಸಿದ್ದಾರೆ. ಈ ಜೀವನಶೈಲಿ ಪೋಷಕರ ಮೇಲೆ ನಿರ್ಧರಿತವಾಗಿರುತ್ತೆ ಎಂದು ಹೇಳಿದ್ದರು.

    ಒಂದು ದಿನ ವಿಮಾನಯಾನ ಮಾಡುವಾಗ ಮಹಿಳೆ ಇಬ್ಬರು ಮಕ್ಕಳ ಜೊತೆ ಬಂದು ಪಕ್ಕದಲ್ಲಿ ಕುಳಿತರು. ಮಹಿಳೆ ಹರಿದ ಜೀನ್ಸ್ ಧರಿಸಿದ್ದರು. ಸೋದರಿ ಎಲ್ಲಿಗೆ ಹೋಗ್ತೀದ್ದೀರಾ ಅಂತ ಕೇಳಿದಾಗ ಮಹಿಳೆ ತಮ್ಮ ಕಿರು ಪರಿಚಯ ಮಾಡಿಕೊಂಡರು. ಪತಿ ಜೆಎನ್‍ಯುನಲ್ಲಿ ಉಪನ್ಯಾಸಕರಾಗಿದ್ದು, ತಾನು ಎನ್‍ಜಿಓ ನಡೆಸುತ್ತಿರೋದಾಗಿ ತಿಳಿಸಿದರು. ಹರಿದ ಜೀನ್ಸ್ ಧರಿಸಿದ ಮಹಿಳೆ ಎನ್‍ಜಿಓ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಾರೆ. ನಮ್ಮ ಶಾಲಾ ದಿನಗಳಲ್ಲಿ ಈ ರೀತಿಯ ಜೀವನ ಶೈಲಿ ಇರಲಿಲ್ಲ.

    ಹಳೆ ವೀಡಿಯೋ ವೈರಲ್: ನಾನು ಶ್ರೀನಗರದಲ್ಲಿ ಓದುತ್ತಿರುವಾಗ ಚಂಡಿಗಢನಿಂದ ಓರ್ವ ಯುವತಿ ಬಂದಿದ್ದಳು. ಶ್ರೀನಗರದವರೇ ಆಗಿದ್ರೂ ಚಂಡೀಗಢನಿಂದ ಬಂದಿದ್ದರಿಂದ ಯುವತಿಯ ಉಡುಗೆ ಭಿನ್ನವಾಗಿತ್ತು. ಅದಕ್ಕೇ ಏನಂತಾರೆ ಅಂದ್ರೆ ಕಟ್ ಡ್ರೆಸ್ ಅಲ್ವಾ? ನಾವು ಆಕೆಯನ್ನ ಹಾಸ್ಯ ಮಾಡುತ್ತಿದ್ದೇವೆ. ಕಾರಣ ಎಲ್ಲ ಹುಡುಗರು ಆಕೆ ಹಿಂದೆಯೇ ತಿರುಗುತ್ತಿದ್ರು. ಯುನಿವರ್ಸಿಟಿಗೆ ಓದೋದಕ್ಕೆ ಬರೋದಾ ಅಥವಾ ಅಂಗಾಂಗ ಪ್ರದರ್ಶನಕ್ಕೆ ಬರೋದಾ ಎಂದು ತೀರ್ಥ್ ಸಿಂಗ್ ವೀಡಿಯೋದಲ್ಲಿ ಪ್ರಶ್ನೆ ಮಾಡಿದ್ದರು.

    ಮುಖ್ಯಮಂತ್ರಿಗಳ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಸದೆ ಜಯಾ ಬಚ್ಚನ್ ಸೇರಿದಂತೆ ಹಲವು ಮಹಿಳಾ ನಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನೂ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಆರ್‍ಎಸ್‍ಎಸ್ ಸಮವಸ್ತ್ರದಲ್ಲಿರುವ ಫೋಟೋಗಳನ್ನ ಹಂಚಿಕೊಂಡು, ಇವರ ಮೊಣಕಾಲುಗಳು ಕಾಣುತ್ತಿವೆ ಎಂದು ವ್ಯಂಗ್ಯ ಮಾಡಿದ್ದರು.

  • ತೀರ್ಥ್ ಸಿಂಗ್ ರಾವತ್ ಉತ್ತಾರಖಂಡ ಹೊಸ ಸಿಎಂ

    ತೀರ್ಥ್ ಸಿಂಗ್ ರಾವತ್ ಉತ್ತಾರಖಂಡ ಹೊಸ ಸಿಎಂ

    – ಸಂಜೆ 4 ಗಂಟೆಗೆ ಪದಗ್ರಹಣ

    ಡೆಹರಾಡೂನ್: ತೀರ್ಥ್ ಸಿಂಗ್ ರಾವತ್ ಉತ್ತಾರಖಂಡ ರಾಜ್ಯದ ಹೊಸ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದು, ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಸಂಸದರಾಗಿರುವ 56 ವರ್ಷದ ತೀರ್ಥ್ ಸಿಂಗ್ ರಾವತ್ 2013-15ರವರೆಗೆ ಉತ್ತಾರಖಂಡ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಶಾಸಕರಾಗಿಯೂ ತೀರ್ಥ್ ಸಿಂಗ್ ರಾವತ್ ಆಯ್ಕೆಯಾಗಿದ್ದರು.

    ತ್ರಿವೇಂದ್ರ ಸಿಂಗ್ ರಾವತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ ನಿಶಾಂಕ್ ಮತ್ತು ಉತ್ತಾರಖಂಡ ಸಚಿವರಾದ ಧನ್ ಸಿಂಗ್ ರಾವತ್ ಹೆಸರುಗಳು ಸಿಎಂ ರೇಸ್ ನಲ್ಲಿ ಕೇಳಿ ಬಂದಿದ್ದವು. ಅಂತಿಮವಾಗಿ ರಾಜ್ಯ ಬಿಜೆಪಿ ನಾಯಕರ ಜತೆ ಚರ್ಚಿಸಿದ ಹೈಕಮಾಂಡ್ ತೀರ್ಥ್ ಸಿಂಗ್ ಅವರ ಹೆಸರನ್ನ ಅಂತಿಮಗೊಳಿಸಿದೆ.

    ರಾಜೀನಾಮೆ ಯಾಕೆ?

    ಬಿಜೆಪಿ ಶಾಸಕರು ರಾವತ್ ಅವರ ಆಡಳಿತ ಶೈಲಿಯ ಬಗ್ಗೆ ಹೈಕಮಾಂಡ್ ಗೆ ದೂರು ನೀಡಿದ್ದರು. ಇವರೇ ಮುಂದುವರಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ತಿಳಿಸಿದ್ದರು ಎನ್ನಲಾಗುತ್ತಿದೆ.ಕೋರ್ ಕಮಿಟಿ ಸಭೆ ನಡೆದ ಬೆನ್ನಲ್ಲೇ ಮಾ.08 ರಂದು ದೆಹಲಿಗೆ ಭೇಟಿ ನೀಡಿದ್ದ ರಾವತ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು.

    ಒಟ್ಟು 69 ವಿಧಾನಸಭಾ ಕ್ಷೇತ್ರಗಳಿದ್ದು 2017ರ ವಿಧಾನಸಭೆಯಲ್ಲಿ ಬಿಜೆಪಿ 59 ಸ್ಥಾನವನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಏರಿತ್ತು. ಕಾಂಗ್ರೆಸ್ 11 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.