Tag: Tirumala Tirupati Temple

  • ತಿರುಪತಿ ಕಾಲ್ತುಳಿತಕ್ಕೆ ಸಾವಿನ ಸಂಖ್ಯೆ 7ಕ್ಕೆ ಏರಿಕೆ – ಅಸ್ವಸ್ಥರ ಏರ್‌ಲಿಫ್ಟ್‌ಗೆ ಸಿಎಂ ಸೂಚನೆ

    ತಿರುಪತಿ ಕಾಲ್ತುಳಿತಕ್ಕೆ ಸಾವಿನ ಸಂಖ್ಯೆ 7ಕ್ಕೆ ಏರಿಕೆ – ಅಸ್ವಸ್ಥರ ಏರ್‌ಲಿಫ್ಟ್‌ಗೆ ಸಿಎಂ ಸೂಚನೆ

    -ಭದ್ರತಾ ವೈಫಲ್ಯ ಕುರಿತು ಅಧಿಕಾರಿಗಳಿಗೆ ಆಂಧ್ರ ಸಿಎಂ ಕ್ಲಾಸ್

    ಅಮರಾವತಿ: ತಿರುಪತಿ ಕಾಲ್ತುಳಿತ (Tirupati Stampede) ಪ್ರಕರಣದಲ್ಲಿ ಅಸ್ವಸ್ಥಗೊಂಡವರನ್ನು ಏರ್‌ಲಿಫ್ಟ್ ಮೂಲಕ ರವಾನಿಸುವಂತೆ ಆಂಧ್ರ ಸಿಎಂ ಎನ್.ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

    ಆಂಧ್ರಪ್ರದೇಶ ಸಿಎಂ ಅವರು ಡಿಜಿಪಿ, ಟಿಟಿಡಿ ಇಒ, ಜಿಲ್ಲಾಧಿಕಾರಿ, ಎಸ್ಪಿ ಅವರೊಂದಿಗೆ ಕಾಲ್ತುಳಿತದ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕೆಂಡಾಮಂಡಲರಾಗಿ, ಒಂದೇ ಒಂದು ಜೀವಹಾನಿಯಾಗಬಾರದೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಜೊತೆಗೆ ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಡೆಯಲು ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ತಿರುಪತಿಯಲ್ಲಿ ಭಾರಿ ಅನಾಹುತ – ಕಾಲ್ತುಳಿತಕ್ಕೆ 4 ಮಂದಿ ಸಾವು

    ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಜ.10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ-ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ದರ್ಶನಕ್ಕೆ ಬಂದ ಭಕ್ತರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ತಂದಿದೆ. ಜೊತೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಗೊತ್ತಿದ್ದರೂ ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಏನಿದು ಪ್ರಕರಣ?
    ತಿರುಪತಿಯಲ್ಲಿ ನೂರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಈ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: ದೆಹಲಿ ಚುನಾವಣೆಗೆ ಆಪ್‌ಗೆ ಟಿಎಂಸಿ ಬೆಂಬಲ – ಧನ್ಯವಾದ ಎಂದ ಕೇಜ್ರಿವಾಲ್

  • ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್‌ಎಂಕೆ!

    ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್‌ಎಂಕೆ!

    ಎಸ್‌ಎಂ ಕೃಷ್ಣ ಅವರು ತಿರುಪತಿ ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿದ್ದೇ ತಡ ಅದು ಅವರ ಜೀವನದಲ್ಲಿ ಒಂದು ವಿಶೇಷ ಬೆಳವಣಿಗೆಗೆ ನಾಂದಿ ಹಾಡಿತ್ತು. ಈ ಮೂಲಕ ಕೇಂದ್ರ ಸಚಿವರಾಗುವ ಸುದ್ದಿ ಸಿಕ್ಕಿತ್ತು.

    ಹೌದು, 1983ರಲ್ಲಿ ಎಸ್.ಎಂ.ಕೃಷ್ಣ ಅವರು ತಿರುಪತಿ ದೇವಸ್ಥಾನಕ್ಕೆ ತೆರಳಿದ್ದರು. ಆ ಸಮಯದಲ್ಲಿ ಮಂಗಳಾರತಿ ತೆಗೆದುಕೊಳ್ಳಬೇಕಾದರೆ ಅವರ ವಾಚು ಕೈಯಿಂದ ಕಳಚಿ ಬಿತ್ತು. ಇದನ್ನು ದೇವಾಲಯದ ಅರ್ಚಕರು ಗಮನಿಸಿ, ಕೃಷ್ಣರ ಸ್ನೇಹಿತರಾಗಿದ್ದ ಸಿಂಗಾರಿಗೌಡರಿಗೆ ಕಳಚಿದ ವಾಚ್‌ನ್ನು ಹುಂಡಿಗೆ ಹಾಕಿಸಿ ಎಂದು ಹೇಳಿದರು.ಇದನ್ನೂ ಓದಿ: ದಿನ ಭವಿಷ್ಯ 11-12-2024

    ಅದಾದ ಬಳಿಕ ಮತ್ತೆ ಅವರ ಪತ್ನಿ ಪ್ರೇಮಾ ಅವರ ಜೊತೆ ತಿರುಪತಿ ಹೋಗಿದ್ದರು. ಆಗ ತಮ್ಮ ವಾಚ್‌ನ್ನು ತಿಮ್ಮಪ್ಪನ ಹುಂಡಿಗೆ ಹಾಕಿ ಬಂದಿದ್ದರು. ಅಂದು ಮರಳಿ ಬೆಂಗಳೂರಿಗೆ ಬಂದು, ಮತ್ತೆ ಸಂಜೆ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಿದ್ದರು. ಟೆನಿಸ್ ಕ್ಲಬ್‌ಗೆ ತೆರಳಿ ಆಡುತ್ತಿದ್ದರು. ಆ ದಿನ ರಾತ್ರಿ ದೆಹಲಿ ಬರುವಂತೆ ತುರ್ತು ಕರೆ ಬಂದಿದೆ.

    ದೆಹಲಿಗೆ ತೆರಳಿದ ಎಸ್‌ಎಂ ಕೃಷ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಭೇಟಿಯಾದರು. ಆಗ ಪ್ರಧಾನಿಯವರು ಕೃಷ್ಣ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡುವ ಸುದ್ದಿ ಸಿಕ್ಕಿತ್ತು. ಬಳಿಕ ಪ್ರಮಾಣವಚನ ಸ್ವೀಕಾರ ಮಾಡಿ ಕೇಂದ್ರ ಸಚಿವರೂ ಆದರು. ಇದು ಅವರ ಜೀವನದಲ್ಲಾದ ವಿಶೇಷ ಬೆಳವಣಿಗೆ. ತಿರುಪತಿ ದೇವರ ಸನ್ನಿಧಿಯಲ್ಲಿ ಮಾತ್ರ ಇಂತಹ ಪವಾಡ ನಡೆಯಲು ಸಾಧ್ಯ ಎಂದು ಎಸ್‌ಎಂಕೆ ನಂಬಿದ್ದರು. ಅವರಿಗೆ ದೇವರಲ್ಲಿ ಅಪಾರ ನಂಬಿಕೆ ಇತ್ತು. ಆದರೆ ಅದನ್ನು ಬಹಿರಂಗವಾಗಿ ಎಲ್ಲಿಯೂ ತೋರಿಸಿಕೊಡುತ್ತಿರಲಿಲ್ಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 11-12-2024

  • ಶ್ರಾವಣ ಮಾಸದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಶ್ರಾವಣ ಮಾಸದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

    ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ (Tirumala Tirupati Temple) ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲರು ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಚಂದ್ರನ ಮಣ್ಣಿಗೆ ಹೋಲಿಕೆಯಾಗುತ್ತಂತೆ ತಮಿಳುನಾಡಿನ ಮಣ್ಣು – ಚಂದ್ರಯಾನ-3ಗೂ ಇದೆ ಈ ಮಣ್ಣಿನ ಕೊಡುಗೆ; ಏನಿದರ ವಿಶೇಷತೆ?

    ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು. ಇದನ್ನೂ ಓದಿ: ಚಂದ್ರಯಾನ ಯಶಸ್ಸಿಗಾಗಿ ರುದ್ರಾಭಿಷೇಕ, ಮಹಾಮೃತ್ಯುಂಜಯ ಹೋಮ – ಶ್ರೀಶೈಲ ಜಗದ್ಗುರುಗಳಿಂದಲೂ ಶುಭಹಾರೈಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಿರುಪತಿ ದೇವಸ್ಥಾನ ಮಂಡಳಿಗೆ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ ನೇಮಕ

    ತಿರುಪತಿ ದೇವಸ್ಥಾನ ಮಂಡಳಿಗೆ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ ನೇಮಕ

    ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ. ಟಿಟಿಡಿ ನೂತನ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ (Bhumana Karunakar Reddy) ನೇಮಕವಾಗಿದ್ದಾರೆ.

    ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಮನ ಕರುಣಾಕರ ರೆಡ್ಡಿ, ಆಗಸ್ಟ್ 8 ರಿಂದ ಟಿಟಿಡಿ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕನಸು ಭಗ್ನಗೊಂಡ ಹೆಚ್‌ಡಿಕೆ, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ: ದಿನೇಶ್‌ ಗುಂಡೂರಾವ್‌ ತಿರುಗೇಟು

    ಇದೀಗ ದೇವಾಲಯಕ್ಕೆ ಶೀಘ್ರವೇ ಪದಾಧಿಕಾರಿಗಳ ಆಯ್ಕೆ ಮಾಡುವುದಾಗಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]