Tag: tirupathi

  • 2 ವರ್ಷದ ಬಳಿಕ ದರ್ಶನ್, ಅಭಿ ಜೊತೆ ಸುಮಲತಾ ತಿರುಪತಿ ಭೇಟಿ

    2 ವರ್ಷದ ಬಳಿಕ ದರ್ಶನ್, ಅಭಿ ಜೊತೆ ಸುಮಲತಾ ತಿರುಪತಿ ಭೇಟಿ

    ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪುತ್ರ ಅಭಿಷೇಕ್ ಅಂಬರೀಶ್ ಜೊತೆ ತಿರುಪತಿಗೆ ಭೇಟಿ ನೀಡಿದ್ದಾರೆ.

    ಈ ಸಂಬಂಧ ತಮ್ಮ ಇನ್ಸ್ ಸ್ಟಾ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿಕೊಂಡು 2 ವರ್ಷಗಳ ಬಳಿಕ ತಿಮ್ಮಪ್ಪನ ದರ್ಶನ ಪಡೆದಿರುವುದಾಗಿ ತಿಳಿಸಿದ್ದಾರೆ.

    ಸುಮಾರು 2 ವರ್ಷಗಳ ನಂತರ ತಿರುಪತಿ ವೆಂಕಟೇಶ್ವರ ದೇವರ ದಿವ್ಯ ದರ್ಶನವನ್ನು ಪಡೆದೆ. ನನ್ನ ಹುಡುಗರಾದ ದರ್ಶನ್ ತೂಗುದೀಪ ಶ್ರೀನಿವಾಸ್, ಅಭಿಷೇಕ್ ಅಂಬರೀಶ್ ಮತ್ತು ಸ್ನೇಹಿತರ ಜೊತೆ ತಿಮ್ಮಪ್ಪನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಇಲ್ಲಿಗೆ ಬರುವುದೆಂದರೆ ನನಗೆ ತುಂಬಾನೆ ಖುಷಿ ನೀಡುತ್ತದೆ. ಅಲ್ಲದೆ ಇಲ್ಲಿಗೆ ಭೇಟಿ ನೀಡಿದರೆ ಒಂದು ರೀತಿಯಲ್ಲಿ ಮನಸ್ಸಿಗೆ ಶಾಂತಿ ಸಿಗುತ್ತದೆ. ಅಲ್ಲದೆ ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿರುವುದಾಗಿ ಸುಮಲತಾ ಇನ್ ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಂಜನ ಅಪ್ಪ, ಅಮ್ಮನ ಜೊತೆ ಮದುವೆ ಬಗ್ಗೆ ಮಾತನಾಡಿದ್ದೇನೆ: ದಿವ್ಯಾ ಸುರೇಶ್

    ಕೆಲ ದಿನಗಳ ಹಿಂದೆ ಕೆಆರ್‍ಎಸ್ ಆಣೆಕಟ್ಟು ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಲೋಕಸಭೆಯಲ್ಲಿ ಸುಮಲತಾ ದನಿ ಎತ್ತಿದ್ದರು. ಕೆಆರ್ ಎಸ್ ಸುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇದಕ್ಕಾಗಿ ರಾಸಾಯನಿಕ ಸ್ಫೋಟಕಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲದ ಗುಣಮಟ್ಟ ಕುಸಿದಿದೆ. ಬೆಳೆಗಳ ಮೇಲೆ ಪರಿಣಾಮ ಬೀರಿದೆ. ವಾಯುಮಾಲಿನ್ಯದಿಂದ ಜನರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುಬೇಕು ಎಂದು ಆಗ್ರಹಿಸಿದ್ದರು. ರಾಜಕೀಯ ಜಂಜಾಟಗಳಿಂದ ಮನಸ್ಸಿಗೆ ಶಾಂತಿ ಸಿಗಲೆಂದು ಸಂಸದೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.

  • ಚಾಮರಾಜನಗರ ದುರಂತದ ಬೆನ್ನಲ್ಲೇ ತಿರುಪತಿಯಲ್ಲಿ ಆಕ್ಸಿಜನ್ ಸಿಗದೆ 11 ಮಂದಿ ಸಾವು

    ಚಾಮರಾಜನಗರ ದುರಂತದ ಬೆನ್ನಲ್ಲೇ ತಿರುಪತಿಯಲ್ಲಿ ಆಕ್ಸಿಜನ್ ಸಿಗದೆ 11 ಮಂದಿ ಸಾವು

    – ರಿಸೈನ್ ಜಗನ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್

    ಹೈದರಾಬಾದ್: ಕರ್ನಾಟಕದ ಚಾಮರಾಜನಗರದಲ್ಲಿ ನಡೆದ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದ ತಿರುಪತಿಯಲ್ಲಿ ಕೂಡ ಆಕ್ಸಿಜನ್ ಸಿಗದೆ 11 ಮಂದಿ ಕೊರೊನಾ ರೋಗಿಗಳು ದಾರುಣವಾಗಿ ಮೃತಪಟ್ಟಿದ್ದಾರೆ.

    ಹೌದು. ಎಸ್‍ವಿಆರ್ ಆರ್ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. ಆಕ್ಸಿಜನ್ ಟ್ಯಾಂಕರ್ ಬರುವುದು ತಡವಾಗಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಆಂಧ್ರ ಸರ್ಕಾರ ತನಿಖೆ ನಡೆಸುವಂತೆ ಆದೇಶ ನೀಡಿದೆ.

    ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಯಲ್ಲಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ರೋಗಿಗಳಲ್ಲಿ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಕಂಡುಬಂತು. ಕೂಡಲೇ ಬೇರೆ ಕಡೆಯಿಂದ ಆಕ್ಸಿಜನ್ ತರಿಸಲು ವ್ಯವಸ್ಥೆ ಮಾಡಲಾಯಿತು. ಆದರೆ ಆಕ್ಸಿಜನ್ ಟ್ಯಾಂಕರ್ ಆಸ್ಪತ್ರೆಗೆ ಆಗಮಿಸಿದೆ.

    ಆಕ್ಸಿಜನ್ ಅನ್ನು ಟ್ಯಾಂಕರ್‍ನಿಂದ ರಿಲೋಡ್ ಮಾಡಲು 5 ನಿಮಿಷ ಬೇಕಾಯಿತು. ಆದರೆ ಈ ಮಧ್ಯೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ಮಂದಿ ರೋಗಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಕೊರೊನಾ ರೋಗಿಗಳು ಆಕ್ಸಿಜನ್ ಸಿಗದೆ ಸುಮಾರು 45 ನಿಮಿಷಗಳ ಕಾಲ ಒದ್ದಾಡಿ ಪ್ರಾಣಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ರೋಗಿಗಳನ್ನು ಉಳಿಸಿಕೊಳ್ಳಲು ನಡೆಸಿದ ಪ್ರಯತ್ನ ವಿಫಲವಾಗಿದೆ ಎಂದು ಚಿತ್ತೂರು ಡಿಸಿ ಎಂ ಹರಿ ನಾರಾಯಣ ತಿಳಿಸಿದ್ದಾರೆ.

    ಒಟ್ಟಿನಲ್ಲಿ ತುರ್ತಾಗಿ ಆಕ್ಸಿಜನ್ ಟ್ಯಾಂಕರ್ ತರಿಸಿ ಪೂರೈಕೆ ಮಾಡಿದ್ದರಿಂದ ಉಳಿದ ರೋಗಿಗಳ ಜೀವ ಉಳಿದಿದೆ. ದುರಾದೃಷ್ಟವಶಾತ್ 11 ರೋಗಿಗಳು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆದೇಶಿಸಿದ್ದಾರೆ.

    ಇತ್ತ ಘಟನೆಯ ಬಳಿಕ ಆಂಧ್ರಪ್ರದೇಶದ ಜನ ಸಿಎಂ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದು, ರಿಸೈನ್ ಜಗನ್ ಹ್ಯಾಶ್ ಟ್ಯಾಗ್ ಹಾಕಿ ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.

  • ತಿರುಪತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

    ತಿರುಪತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

    ಹೈದರಾಬಾದ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ.

    ನಟ ಇಂದು ಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ. ಈ ವೇಳೆ ದಾಸನಿಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ಸಿನಿಮಾ ತೆಲುಗು ವಿತರಕ ಕೂಡ ಸಾಥ್ ನೀಡಿದ್ದಾರೆ.

    ನಮ್ಮ ಮನೆ ದೇವರು, ಹೀಗಾಗಿ ದರ್ಶನಕ್ಕೆ ಬಂದಿದ್ದೇನೆ. ಇಲ್ಲಿಗೆ ಬರದೆ 5 ವರ್ಷ ಆಗಿತ್ತು, ಈಗ ಸಮಯ ಕೂಡಿ ಬಂತು. ರಾಬರ್ಟ್ ಸಿನಿಮಾ ಬಿಡುಗಡೆಯಾಗಲಿ. ಆಮೇಲೆ ಮಾತನಾಡ್ತೀನಿ ಎಂದರು.

    ತಮ್ಮ ಬಹು ನಿರೀಕ್ಷಿತ ಸಿನಿಮಾ ರಾಬರ್ಟ್ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ಕನ್ನಡ ಹಾಗೂ ತೆಲುಗಿನಲ್ಲಿ ಒಂದೇ ದಿನ ತೆರೆ ಕಾಣಲಿದೆ. ತೆಲುಗು ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದಿಗೆ ತೆರಳಲಿರುವ ದರ್ಶನ್, ಅದಕ್ಕೂ ಮೊದಲು ತಿರುಪತಿಗೆ ಭೇಟಿ ಕೊಟ್ಟಿದ್ದು, ತಿಮ್ಮನ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ.

    ಮಾರ್ಚ್ 11ರಂದು ಕನ್ನಡ ಹಾಗೂ ತೆಲುಗಿನಲ್ಲಿ ರಾಬರ್ಟ್ ತೆರೆ ಕಾಣಲಿದೆ. ಈ ಮಧ್ಯೆ ತೆಲುಗು ಇಂಡಸ್ಟ್ರಿಯಲ್ಲಿ ರಾಬರ್ಟ್ ಸಿನಿಮಾ ಬಿಡುಗಡೆಗೆ ಅಡ್ಡಿಪಡಿಸಲಾಗಿದೆ. ಇದರಿಂದ ನೊಂದಿದ್ದ ದಾಸ, ಫಿಲಂ ಚೇಂಬರ್ ಗೆ ದೂರು ನೀಡಿದ್ದರು.

  • ತಿರುಪತಿ ಶಾಪದಿಂದ್ಲೇ ಆಂಧ್ರ ಸಿಎಂ ತಂದೆ ಸಾವು: ಮುತಾಲಿಕ್

    ತಿರುಪತಿ ಶಾಪದಿಂದ್ಲೇ ಆಂಧ್ರ ಸಿಎಂ ತಂದೆ ಸಾವು: ಮುತಾಲಿಕ್

    ಧಾರವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಂದೆ ತಿರುಪತಿ ದೇವರ ಶಾಪದಿಂದಲೇ ಮೃತಪಟ್ಟಿದ್ದಾರೆ ಎಂದು ಹಿಂದೂಪರ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ತಿರುಪತಿ ಆಸ್ತಿ ಮಾರಾಟ ವಿಚಾರವಾಗಿ ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರ ರಾಜ್ಯಪಾಲರಿಗೆ ಮನವಿ ಮಾಡಿ ಮಾತನಾಡಿದ ಅವರು, ಸೆಕ್ಯೂಲರ್ ಎನ್ನುವ ಇವರು ಹಿಂದೂ ದೇವಸ್ಥಾನದ ಮೇಲೆ ಆಘಾತ ಮಾಡುವ ಪ್ರಕ್ರಿಯೆ ನಡೆದಿದೆ. ಮದರಸಾ, ಚರ್ಚ್ ಆಸ್ತಿ ಬಗ್ಗೆ ಸರ್ಕಾರ ಮಾತಾನಾಡೋದಿಲ್ಲ. ಬದಲಾಗಿ ಹಿಂದೂಗಳ ಮೇಲೆನೇ ಕಣ್ಣು. ಜಗನ್ ತಂದೆ ಇದೇ ರೀತಿ ಮಾಡಿ ತಿರುಪತಿಯ ಶಾಪದಿಂದ ಸತ್ತು ಹೋದ. ಈ ರೀತಿ ಮಾಡಿದರೆ ನಿಮಗೂ ಕೂಡ ತಿರುಪತಿಯ ಶಾಪ ತಟ್ಟುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಆಂಧ್ರಪ್ರದೇಶ ಸರ್ಕಾರ ತಿರುಪತಿ ತಿಮ್ಮಪ್ಪನ ಆಸ್ತಿ ಮಾರಾಟ ಮಾಡಿ ಸರ್ಕಾರಕ್ಕೆ ಹಣ ಜಮಾ ಮಾಡುವ ಪ್ರಕ್ರಿಯೆ ಮಾಡುತ್ತಿದೆ. ಸದ್ಯ ಅದನ್ನ ತಾತ್ಕಾಲಿಕವಾಗಿ ತಡೆ ಹಿಡಿದಿದ್ದಾರೆ. ಆದರೆ ಮುಂದೆಯಾದರೂ ಈ ಪ್ರಕ್ರಿಯೆ ಮಾಡಿಯೇ ಮಾಡುತ್ತಾರೆ. ಅದಕ್ಕೆ ನಮ್ಮ ವಿರೋಧ ಇದೆ ಎಂದರು.

    ತಿರುಪತಿ ದೇವಸ್ಥಾನ ಆಂಧ್ರದಷ್ಟೇ ಅಲ್ಲ, ಇಡಿ ಜಗತ್ತಿನ ಜನ ಬರುವ ದೇವಸ್ಥಾನವಾಗಿದೆ. ಈ ದೇವಸ್ಥಾನಕ್ಕೆ ಬಂದ ಭಕ್ತರ ಕಾಣಿಕೆ ಹಣ ಅದೇ ದೇವಸ್ಥಾನಕ್ಕೆ ಬಳಕೆ ಮಾಡಬೇಕು. ನಿಮ್ಮ ಸ್ವಾರ್ಥಕ್ಕೊಸ್ಕರ ಬಳಸಿಕೊಳ್ಳಬಾರದು. ಸ್ಥಿರ ಆಸ್ತಿ ಮಾರಾಟ ಮಾಡಬಾರದು ಎಂದು ಒತ್ತಾಯಿಸಿದರು.

  • ಜ್ವರ, ಕೆಮ್ಮು ಇದ್ರೆ ತಿರುಪತಿಗೆ ಬರಲೇ ಬೇಡಿ- ಟಿಟಿಡಿ

    ಜ್ವರ, ಕೆಮ್ಮು ಇದ್ರೆ ತಿರುಪತಿಗೆ ಬರಲೇ ಬೇಡಿ- ಟಿಟಿಡಿ

    ಹೈದರಾಬಾದ್: ಚೀನಾದಲ್ಲಿ ಮರಣ ಮೃದಂಗ ಬಾರಿಸಿದ ಕೊರೋನಾ ವೈರಸ್ ಭೀತಿ ಭಾರತೀಯರಿಗೂ ತಟ್ಟಿದೆ. ರಾಜ್ಯದಲ್ಲೂ ಕೊರೊನಾ ಆತಂಕ ಸೃಷ್ಟಿ ಮಾಡಿದ್ದು, ಬಿಸಿ ಜನರಿಗೆ ಮಾತ್ರವಲ್ಲ ದೇವರಿಗೂ ತಟ್ಟಿದೆ.

    ತಿರುಮಲ ತಿರುಪತಿ ದೇವಾಲಯದ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನ) ಭಕ್ತರಿಗೆ ಮನವಿ ಮಾಡಿಕೊಂಡಿದೆ. ಈ ಮೂಲಕ ಜ್ವರ ಕೆಮ್ಮು, ನೆಗಡಿ ಇದ್ದರೆ ದೇವಾಲಯಕ್ಕೆ ಬರಬೇಡಿ ಎಂದು ತಿಳಿಸಿದೆ. ಜೊತೆಗೆ ಮುಂಜಾಗ್ರತಾ ಕ್ರಮವನ್ನು ಕೂಡ ಟಿಟಿಡಿ ತೆಗೆದುಕೊಂಡಿದೆ.

    ಭಕ್ತರ ವೈದ್ಯಕೀಯ ತಪಾಸಣೆ ಕೂಡ ಮಾಡಿಸಿ ದೇವಾಲಯಕ್ಕೆ ಬಿಡುವಂತಹ ಕೆಲಸ ಮಾಡುತ್ತಿದ್ದಾರೆ. ತಪಾಸಣೆಯ ವೇಳೆ ಶಿತ, ಕಫ ಹಾಗೂ ಜ್ವರ ಕಂಡುಬಂದಲ್ಲಿ ಭಕ್ತರ ದೇವಾಲಯ ಪ್ರವೇಶವನ್ನು ಕ್ಯಾನ್ಸಲ್ ಮಾಡುತ್ತಾರೆ. ಅಲ್ಲದೆ ಇನ್ನೊಂದು ದಿನ ದೇವಸ್ಥಾನಕ್ಕೆ ಬರುವಂತೆ ಹೇಳಿ ವಾಪಸ್ ಕಳುಹಿಸುತ್ತಿದ್ದಾರೆ.

    ಒಟ್ಟಿನಲ್ಲಿ ತಿರುಪತಿಗೆ ಬರುವ ಭಕ್ತರ ಮೇಲೆ ಆಡಳಿತ ಮಂಡಳಿ ತೀವ್ರ ನಿಗಾ ವಹಿಸಿದೆ. ಯಾಕಂದ್ರೆ ತಿರುಪತಿಗೆ ದಿನಂಪ್ರತಿ ಸಾವಿರಾರು ಭಕ್ತರು ಭೇಟಿ ಕೊಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಲ್ಲದೆ ದೇವಾಲಯಕ್ಕೆ ಪ್ರವೇಶ ಮಾಡುವ ಪ್ರತಿಯೊಬ್ಬರು ಮಾಸ್ಕ್ ಹಾಕಿ ಬರಬೇಕು ಎಂದು ಸೂಚಿಸಿದೆ.

    ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಅದರ ಒಂದು ಭಾಗವಾಗಿ ಜಾಗ್ರತೆ ವಹಿಸುವಂತೆ ಅಲ್ಲಲ್ಲಿ ಅನೌನ್ಸ್ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

    ಒಟ್ಟಿನಲ್ಲಿ ರಾಜ್ಯದಿಂದ ಹೋಗುವ ಭಕ್ತರು ಸಹ ಆರೋಗ್ಯದ ಕಡೆ ಗಮನ ಕೋಡಬೇಕಾಗಿದೆ.

  • ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಹೆಗಲ ಮೇಲೆ 4 ಕಿ.ಮೀ ಹೊತ್ತುಕೊಂಡು ಹೋದ ಪೇದೆ

    ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಹೆಗಲ ಮೇಲೆ 4 ಕಿ.ಮೀ ಹೊತ್ತುಕೊಂಡು ಹೋದ ಪೇದೆ

    ಹೈದರಾಬಾದ್: ಆಂಧ್ರ ಪ್ರದೇಶದ ಕಡಪದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಪೇದೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಮಾನವೀಯತೆ ತೋರಿಸಿದ್ದಾರೆ.

    ಮಾಜಿ ಶಾಸಕ ಅಕಪತಿ ಅಮರನಾಥ ರೆಡ್ಡಿ ಜೊತೆ ಹಲವು ಮಂದಿ ತಿರುಪತಿಗೆ ಹೋಗಿದ್ದರು. ಇದರಲ್ಲಿ ಒಬ್ಬ ಮಹಿಳೆ ಕೂಡ ಭಾಗಿಯಾಗಿದ್ದು, ನಡೆದುಕೊಂಡು ಹೋಗುವಾಗ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಯಾತ್ರಿಗಳಿಗೆ ಇಲ್ಲಿ ಯಾವುದೇ ವಾಹನ ಕೂಡ ಇರಲಿಲ್ಲ. ಹಾಗಾಗಿ ಎಲ್ಲರೂ ನಡೆದುಕೊಂಡು ಹೋಗುತ್ತಿದ್ದರು.

    ಮಹಿಳೆಯ ಸ್ಥಿತಿ ನೋಡಿದ ಮಾಜಿ ಶಾಸಕರ ಭದ್ರತಾ ಸಿಬ್ಬಂದಿ ಕುಲ್ಲಯಪ್ಪ ಮಹಿಳೆಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು 4 ಕಿ.ಮೀ ನಡೆದುಕೊಂಡು ಆಸ್ಪತ್ರೆಗೆ ಹೋಗಿದ್ದಾರೆ. ಸದ್ಯ ಮಹಿಳೆ ತಿರುಮಲದ ಅಶ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ.

    ಪೇದೆ ಅವರ ಈ ಕರ್ತವ್ಯಕ್ಕೆ ಎಸ್‍ಪಿ ಕೆಕೆಎನ್ ಅನ್ಬುರಾಜನ್ ಶ್ಲಾಘಿಸಿದ್ದಾರೆ. ಅಲ್ಲದೆ ಕುಲ್ಲಯಪ್ಪ ಅವರನ್ನು ಸ್ಫೂರ್ತಿಯಾಗಿ ತೆಗೆದುಕೊಂಡು ಎಲ್ಲರಿಗೂ ಸಹಾಯ ಮಾಡಬೇಕು ಎಂದು ತಮ್ಮ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡಿದ್ದರು.

    ಪೇದೆ ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ನೋಡಿ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಪೇದೆಯನ್ನು ಹೊಗಳುತ್ತಿದ್ದಾರೆ.

  • ತಿಮ್ಮಮ್ಮಪ್ಪನ ಹೆಸರಲ್ಲಿ ಭಕ್ತರಿಗೆ ಉಂಡೆ ನಾಮ

    ತಿಮ್ಮಮ್ಮಪ್ಪನ ಹೆಸರಲ್ಲಿ ಭಕ್ತರಿಗೆ ಉಂಡೆ ನಾಮ

    ಬೆಂಗಳೂರು: ತಿಮ್ಮಪ್ಪನ ಹೆಸರಿನಲ್ಲಿ ಭಕ್ತರಿಗೆ ಮಹಾಮೋಸ ಮಾಡಿರುವ ಖದೀಮನನ್ನು ಭಕ್ತರೇ ಹಿಡಿದು ಬಸವನಗುಡಿ ಪೊಲೀಸ್ ಠಾಣೆಗೆ ಹಿಡಿದುಕೊಟ್ಟಿದ್ದಾರೆ.

    ಮೋಸ ಮಾಡಿ ತಲೆಮರಿಸಿಕೊಂಡಿದ್ದ ಆರೋಪಿ ರಾಘವೇಂದ್ರ ಬೆಂಗಳೂರಿಗೆ ಬಂದು ಬೇರೆಯವರಿಗೆ ಮಕ್ಮಲ್ ಟೋಪಿ ಹಾಕಲು ಮುಂದಾಗಿದ್ದನು. ಈ ಹಿಂದೆ ಮೋಸ ಹೋಗಿದ್ದ ಭಕ್ತರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ರಾಘವೇಂದ್ರ ಮೂಲತಃ ಆಂಧ್ರ ಪ್ರದೇಶದವನಾಗಿದ್ದು, ತಿರುಪತಿಗೆ ಹೋಗುವ ಭಕ್ತಾದಿಗಳನ್ನು ಟಾರ್ಗೆಟ್ ಮಾಡಿ ಹಲವು ಅಮೀಷಗಳನೊಡ್ಡಿ ಹಣ ಪಡೆದು ಮೋಸ ಮಾಡುತ್ತಿದ್ದನು.

    ಆರೋಪಿ ರಾಘವೇಂದ್ರ ಮೊದಲು ಭಕ್ತಾದಿಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ಬಳಿಕ ನಾನು ತಿಮ್ಮಪ್ಪನ ಆಡಳಿತ ಮಂಡಳಿಯಲ್ಲಿ ಸದಸ್ಯ ಆಗಿದ್ದೇನೆ. ನಿಮಗೆ ನೇರವಾಗಿ ಸ್ವಾಮಿಯ ಪಾದಕ್ಕೆ ಕರೆದುಕೊಂಡು ಹೋಗಿ ದರ್ಶನ ಕೊಡಿಸುತ್ತೇನೆ. ಅಷ್ಟೇ ಅಲ್ಲದೆ ತಿರುಪತಿಯಲ್ಲಿ ನಿಮಗೆ ಉಳಿದುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ಭಕ್ತಾದಿಗಳಿಗೆ ನಂಬಿಸುತ್ತಿದ್ದನು.

    ವಿಶೇಷ ಎಂದರೆ ಬ್ರಾಹ್ಮಣ ಭಕ್ತಾದಿಗಳನ್ನು ಬಲೆಗೆ ಬೀಳಿಸಿಕೊಂಡು ಹಣ ಪಡೆದುಕೊಳ್ಳುತ್ತಿದ್ದನು. ಭಕ್ತರು ಹಣ ಕೊಟ್ಟ ಬಳಿಕ ತಿರುಪತಿಗೆ ಬರುವುದಕ್ಕೆ ದಿನಾಂಕ ನಿಗದಿ ಮಾಡಿ ಕರೆಸಿಕೊಳ್ಳುತ್ತಿದ್ದನು. ತಿರುಪತಿಗೆ ಬರುವ ತನಕ ಭಕ್ತಾದಿಗಳಿಗೆ ಸಂಪರ್ಕಕ್ಕೆ ಸಿಗುತ್ತಿದ್ದನು. ತಿರುಪತಿ ತಲುಪಿದ್ದೀವಿ ಎಂದು ಆರೋಪಿ ರಾಘವೇಂದ್ರನಿಗೆ ಭಕ್ತರು ವಿಷಯ ಮುಟ್ಟಿಸುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ಯಾಮಾರಿಸುತ್ತಿದ್ದನು.

    ಆರೋಪಿ ರಾಘವೇಂದ್ರನಿಗೆ ನಂಬಿ ತಿರುಪತಿಗೆ ಹೋಗುತ್ತಿದ್ದ ಭಕ್ತರು ಬರಿಗೈಯಲ್ಲಿ ಮನೆ ಬರುತ್ತಿದ್ದರು. ಸದ್ಯ ಆರೋಪಿ ರಾಘವೇಂದ್ರನ ವಿರುದ್ಧ ಬಸವನಗುಡಿಯಲ್ಲಿ ದೂರು ದಾಖಲಾಗಿದೆ.

  • ಶೃಂಗೇರಿ ನಂತರ ತಿರುಪತಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

    ಶೃಂಗೇರಿ ನಂತರ ತಿರುಪತಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

    ಬೆಂಗಳೂರು: ಸರ್ಕಾರ ಉಳಿಯಲಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ.

    ರೇವಣ್ಣ ಅವರು ಇಂದು ಬೆಳ್ಳಂಬೆಳಗ್ಗೆ ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ಹೇಗಾದರೂ ಮಾಡಿ ಸರ್ಕಾರ ಉಳಿಸಪ್ಪ ಎಂದು ಬೇಡಿಕೊಂಡಿದ್ದಾರಂತೆ. ಅಲ್ಲದೆ ಕಳೆದ ಆರು ದಿನಗಳಿಂದ ಬರಿಗಾಲಲ್ಲೇ ಓಡಾಡುತ್ತಿರೋ ರೇವಣ್ಣ ಅವರಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬುಧವಾರ ತಿರುಪತಿಗೆ ಹೋಗುವ ಮುನ್ನ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗುತ್ತಿಗೆದಾರರಿಗೆ 1,500 ಕೋಟಿ ರೂ. ಬಿಲ್ ಚುಕ್ತಾ ಮಾಡಿದ್ದಾರೆ ಎನ್ನಲಾಗಿದೆ.

    ಮಂಗಳವಾರ ಬೆಳಗ್ಗೆಯೇ ರೇವಣ್ಣ ಅವರು ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಶಾರದಾಂಬೆ ದೇವೇಗೌಡರ ಕುಟುಂಬದ ಇಷ್ಟದ ದೇವರಾಗಿದ್ದು, ಹೀಗಾಗಿ ಒಂದೇ ವಾರದಲ್ಲಿ ಎರಡು ಬಾರಿ ಶೃಂಗೇರಿಗೆ ರೇವಣ್ಣ ಬಂದು ಪೂಜೆ ಸಲ್ಲಿಸಿದ್ದರು.

    ಈ ಹಿಂದೆ ದೇವೇಗೌಡರು ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ ನಡೆಸಿದ್ದರು. ನಂತರ ಸರ್ಕಾರಕ್ಕೆ ಸಂಚಕಾರ ಬಂದಾಗ ದೇವೇಗೌಡರು ಒಂದೊಂದು ಯಾಗ ನಡೆಸಿದ್ದರು. ಅಷ್ಟೇ ಅಲ್ಲದೇ ಸಿಎಂ ಕೂಡ ಶೃಂಗೇರಿಯಲ್ಲಿ ಮೂರ್ನಾಲ್ಕು ಯಾಗ ಮಾಡಿಸಿದ್ದರು. ಗುರುವಾರ ಸಚಿವ ರೇವಣ್ಣ ಮತ್ತೆ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಮಾಡಿಸಿದ್ದರು.

  • ರಾಜಕೀಯ ಅಗ್ನಿಪರೀಕ್ಷೆ, ಮೊಮ್ಮಕ್ಕಳ ಭವಿಷ್ಯ- ಜನ್ಮದಿನದ ನೆಪದಲ್ಲಿ ಗೌಡ್ರ ಕುಟುಂಬ ತಿರುಪತಿಗೆ

    ರಾಜಕೀಯ ಅಗ್ನಿಪರೀಕ್ಷೆ, ಮೊಮ್ಮಕ್ಕಳ ಭವಿಷ್ಯ- ಜನ್ಮದಿನದ ನೆಪದಲ್ಲಿ ಗೌಡ್ರ ಕುಟುಂಬ ತಿರುಪತಿಗೆ

    ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರಿಗಿಂದು 87 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆ ದೇವೇಗೌಡರು ಕುಟುಂಬ ಸಮೇತ ತಿರುಪತಿಗೆ ತೆರಳಿದ್ದಾರೆ.

    ದೇವೇಗೌಡರ ಕುಟುಂಬ ಶುಕ್ರವಾರ ಸಂಜೆ ವಿಶೇಷ ವಿಮಾನದಲ್ಲಿ ತಿರುಪತಿಗೆ ತೆರಳಿತ್ತು. ದೇವೇಗೌಡರು, ಚೆನ್ನಮ್ಮ, ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಸೇರಿದಂತೆ 23 ಜನ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆ 5 ಗಂಟೆಗೆ ದೇವೇಗೌಡರು ತಿರುಪತಿ ತಿಮ್ಮಪ್ಪನಿಗೆ ಸುಪ್ರಭಾತ ಸೇವೆ ಸಲ್ಲಿಸಿದರು.

    ದೇವೇಗೌಡರು ಪ್ರತಿ ಹುಟ್ಟುಹಬ್ಬಕ್ಕೆ ತಿರುಪತಿಗೆ ತೆರಳಿ ಪೂಜೆ ಸಲ್ಲಿಸುತ್ತಾರೆ. ಅದರಲ್ಲೂ ಈ ಬಾರಿ ರಾಜಕೀಯ ಆಗ್ನಿಪರೀಕ್ಷೆ, ಮೊಮ್ಮಕ್ಕಳ ಭವಿಷ್ಯದ ನಿರ್ಧಾರಕ್ಕೆ 5 ದಿನ ಬಾಕಿ ಇರೋದು ವಿಶೇಷವಾಗಿದೆ. ಈ ಹಿನ್ನೆಲೆಯಲ್ಲಿ ತಿಮ್ಮಪ್ಪ ಕಡೆಯ ರಾಜಕೀಯ ಆಟದಲ್ಲಿ ಕಾಪಾಡಪ್ಪ ಎಂದು ದೇವೇಗೌಡರ ಪ್ರಾರ್ಥನೆ ಮಾಡಲಿದ್ದಾರೆ ಎನ್ನಲಾಗಿದೆ.

    ದೇವೇಗೌಡರು ಮೇ 18, 1933 ರಂದು ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದ ಬಳಿಕ, ದೇವೇಗೌಡ ಅವರು ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ದೇವೇಗೌಡ ಅವರ ಮಗಳು ಚೆನ್ನಮ್ಮ ಅವರನ್ನು 1954ರಲ್ಲಿ ವಿವಾಹವಾದರು. ಈ ದಂಪತಿಗೆ ಇದೀಗ ನಾಲ್ಕು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಜನತಾ ದಳಕ್ಕೆ ರಾಜ್ಯ ಮಟ್ಟದಲ್ಲಿ ಅಧ್ಯಕ್ಷರಾದ ದೇವೇಗೌಡರು 1994 ರಲ್ಲಿ ಕರ್ನಾಟಕ ರಾಜ್ಯದ 14ನೇ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜಾಹುಲಿಯ ಕುಚುಕು ಗೆಳೆಯ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜಾಹುಲಿಯ ಕುಚುಕು ಗೆಳೆಯ

    ಬೆಂಗಳೂರು: ರಾಜಾಹುಲಿಯ ಕುಚುಕು ಗೆಳೆಯ ನಟ ಹರ್ಷವರ್ಧನ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಮಾಡೆಲ್ ಐಶ್ವರ್ಯ ಅವರೊಂದಿಗೆ ಇಂದು ಹರ್ಷವರ್ಧನ್ ತಿರುಪತಿಯಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಇದೇ ತಿಂಗಳ 8ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

    ರಾಜಾಹುಲಿ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಸ್ನೇಹಿತರಾಗಿ ಕಾಣಿಸಿಕೊಂಡಿದ್ದ ಹರ್ಷವರ್ಧನ್ ಮಾಡೆಲ್ ಐಶ್ವರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೇ ವರ್ಷ ಮೇ ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಹರ್ಷವರ್ಧನ್ ಮತ್ತು ಮಾಡೆಲ್ ಐಶ್ವರ್ಯ ಅವರ ನಿಶ್ಚಿತಾರ್ಥ ನೆರವೇರಿತ್ತು.

    ಹರ್ಷವರ್ಧನ್ `ಮೊಗ್ಗಿನ ಮನಸ್ಸು’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಮೊಗ್ಗಿನ ಮನಸ್ಸು ಸಿನಿಮಾ ನಂತರ, ರಾಜಹುಲಿ, ಗಜಪಡೆ ಹೀಗೇ ಕೆಲವು ಸಿನಿಮಾಗಳಲ್ಲಿ ಹರ್ಷವರ್ಧನ್ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಪುನೀತ್ ರಾಜ್ ಕುಮಾರ್ ಜೊತೆ `ಪವರ್’ ಸಿನಿಮಾದಲ್ಲಿ ಕೂಡಾ ಅಭಿನಯಿಸಿದ್ದಾರೆ. ಆದರೆ ಯಶ್ ಅಭಿನಯದ `ರಾಜಾಹುಲಿ’ ಸಿನಿಮಾದಲ್ಲಿ ಹರ್ಷವರ್ಧನ ಯಶ್ ಸ್ನೇಹಿತನಾಗಿ ನಟಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. `ರಘುವೀರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಹರ್ಷ ಅವರು ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv