Tag: tirupati laddu

  • ತಿರುಪತಿ ಲಡ್ಡು ವಿವಾದ | ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂ ಕೋರ್ಟ್

    ತಿರುಪತಿ ಲಡ್ಡು ವಿವಾದ | ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂ ಕೋರ್ಟ್

    – ಸಾಕ್ಷಿ ಇಲ್ಲದೇ ಹೇಗೆ ಸುದ್ದಿಗೋಷ್ಠಿ ಮಾಡಿದ್ರಿ? – ಆಂಧ್ರ ಸರ್ಕಾರಕ್ಕೆ ಚಾಟಿ

    ನವದೆಹಲಿ: ತಿರುಪತಿ ದೇವಸ್ಥಾನದ ಲಡ್ಡು (Tirupati laddu) ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂಬ ಆರೋಪದ ಹಿನ್ನಲೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಆರಂಭಿಸಿದೆ. ವಿಚಾರಣೆ ವೇಳೆ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಗಳು ರಾಜಕೀಯದಿಂದ ಧರ್ಮವನ್ನು ದೂರವಿಡಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಒತ್ತಿ ಹೇಳಿದೆ.

    ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ಆಂಧ್ರಪ್ರದೇಶ ಸರ್ಕಾರ ಮತ್ತು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಗೆ ಹಾಗೂ ಆಂಧ್ರ ಸರ್ಕಾರಕ್ಕೆ (Andhra Pradesh) ಹಲವು ಪ್ರಶ್ನೆಗಳನ್ನು ಹಾಕಿತು. ಈ ವಿಷಯದ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಿರುವಾಗ ಸಾರ್ವಜನಿಕ ಹೇಳಿಕೆ ನೀಡುವುದು ಏಕೆ? ಪತ್ರಿಕಾಗೋಷ್ಠಿ ನಡೆಸುವ ಅಗತ್ಯವೇನಿತ್ತು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ನೀವು ಎಸ್‍ಐಟಿ ತನಿಖೆಗೆ ಆದೇಶಿಸಿದ್ದೀರಿ. ತನಿಖೆಯ ವರದಿ ಬರುವ ಮುನ್ನ, ಪತ್ರಿಕಾಗೋಷ್ಠಿ ನಡೆಸುವ ಅವಶ್ಯಕತೆ ಏನು? ನೀವು ಯಾವಾಗಲೂ ಅಂತಹದ್ದಕ್ಕಾಗಿ ಕಾಣಿಸಿಕೊಳ್ಳುತ್ತಿದ್ದೀರಿ ಎಂದು ನ್ಯಾಯಾಲಯ ಆಂಧ್ರ ಪ್ರದೇಶ ಸರ್ಕಾರದ ಪರ ವಕೀಲ ರೋಹಟಗಿಯವರಿಗೆ ಪ್ರಶ್ನಿಸಿತು.

    ಲಡ್ಡು ತಯಾರಿಕೆಯಲ್ಲಿ ಕಲುಷಿತ ತುಪ್ಪವನ್ನು ಬಳಸಲಾಗಿದೆ ಎಂಬುದಕ್ಕೆ ಸಾಕ್ಷಿ ಏನು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಈ ಕುರಿತು ತಿರುಪತಿ ದೇವಸ್ಥಾನದ ಪರ ವಾದ ಮಂಡಿಸಿದ ವಕೀಲ ಸಿದ್ಧಾರ್ಥ್ ಲೂತ್ರಾ, `ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ನೀವು `ಮಾಧ್ಯಮದ ಮುಂದೆ ಹೋಗುವ ಅಗತ್ಯವೇನಿತ್ತು?’ ನೀವು ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತು.

    ತುಪ್ಪದಲ್ಲಿ ಕಲಬೆರಕೆ ನಡೆದಿದೆ ಎನ್ನುವುದಕ್ಕೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಸಾಕ್ಷಿ ಇಲ್ಲದೇ ಇರುವಾಗ ಸುದ್ದಿಗೋಷ್ಠಿ ನಡೆಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿತು. ತುಪ್ಪದಲ್ಲಿ ಕಲಬೆರಕೆ ಆಗಿದೆಯೇ ಎಂದು `ನೀವು ಎರಡನೇ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕು ಎಂದು ವಿವೇಕವಿಲ್ಲವೇ? ಎಂದು ಸರ್ಕಾರಕ್ಕೆ ನ್ಯಾಯಮೂರ್ತಿ ವಿಶ್ವನಾಥನ್ ಅವರು ಪ್ರಶ್ನಿಸಿದರು.

    ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ರಾಜ್ಯಸಭಾ ಸಂಸದ ಮತ್ತು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಸಲ್ಲಿಸಿದ್ದ ಮೂರು ಅರ್ಜಿಗಳು ಮತ್ತು ಇತಿಹಾಸಕಾರ ವಿಕ್ರಮ್ ಸಂಪತ್ ಮತ್ತು ಆಧ್ಯಾತ್ಮಿಕ ಪ್ರವಚನಕಾರ ದುಷ್ಯಂತ್ ಶ್ರೀಧರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

    ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡೂ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ತಿಂಗಳ ಆರಂಭದಲ್ಲಿ ಆರೋಪಿಸಿದ್ದರು. ಇದು ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ

  • ಲಡ್ಡು ಲಡಾಯಿ | ಭದ್ರತೆಯ ನೆಪವೊಡ್ಡಿ ತಿರುಪತಿ ಭೇಟಿ ರದ್ದುಗೊಳಿಸಿದ ಜಗನ್ – ಚಂದ್ರಬಾಬು ನಾಯ್ಡು ತಿರುಗೇಟು

    ಲಡ್ಡು ಲಡಾಯಿ | ಭದ್ರತೆಯ ನೆಪವೊಡ್ಡಿ ತಿರುಪತಿ ಭೇಟಿ ರದ್ದುಗೊಳಿಸಿದ ಜಗನ್ – ಚಂದ್ರಬಾಬು ನಾಯ್ಡು ತಿರುಗೇಟು

    – ಸಂಪ್ರದಾಯ, ಭಕ್ತರ ನಂಬಿಕೆಗಳನ್ನ ಗೌರವಿಸಿ ಎಂದ ಹಾಲಿ ಸಿಎಂ

    ತಿರುಪತಿ: ಆಂಧ್ರ ರಾಜಕೀಯದಲ್ಲಿ ತಿರುಪತಿ ಲಡ್ಡು ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾರೀ ಹೈಡ್ರಾಮಾ, ತೀವ್ರ ವಿರೋಧದ ನಡುವೆ ಮಾಜಿ ಸಿಎಂ ವೈ.ಎಸ್ ಜಗನ್ ಮೋಹನ್‌ ರೆಡ್ಡಿ (Jagan Mohan Reddy) ತಿರುಪತಿಗೆ ಭೇಟಿಯನ್ನು ರದ್ದು ಮಾಡಿಕೊಂಡರು. ದೇವರ ದರ್ಶನಕ್ಕೆ ಹೋಗ್ತಿದ್ರೆ ನೊಟೀಸ್ ಕೊಟ್ಟು ತಡೆ ಹಿಡೀತಿದ್ದಾರೆ ಎಂದು ಚಂದ್ರಬಾಬು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ದೇವರ ದರ್ಶನಕ್ಕೆ ಹೋಗ್ತಿದ್ದಾಗ ಅಡ್ಡಿಪಡಿಸಿರೋದು ದೇಶದಲ್ಲೇ ಇದು ಮೊದಲ ಕೇಸ್. ಆಂಧ್ರದಲ್ಲಿ ರಾಕ್ಷಸ ರಾಜ್ಯವಿದೆ ಎಂದು ಜಗನ್ ವಾಗ್ದಾಳಿ ನಡೆಸಿದ್ರು.

    ಲಡ್ಡು ವಿವಾದವನ್ನು (Tirupati Laddu Controversy) ಮರೆಮಾಚಲು ಡಿಕ್ಲರೇಷನ್ ವಿಚಾರ ದೊಡ್ಡದು ಮಾಡಿದ್ದಾರೆ. ಬರೆದುಕೊಳ್ಳಿ ನನ್ನ ಮತ ಮಾನವೀಯತೆ.. ನಾಲ್ಕು ಗೋಡೆ ಮಧ್ಯೆ ಬೈಬಲ್ ಓದುತ್ತೇನೆ.. ಹೊರಗೆ ಹೋದ್ರೆ ಎಲ್ಲಾ ಧರ್ಮ ಗೌರವಿಸ್ತೇನೆ.. ಹಿಂದೂ ಆಚರಣೆ ಮಾಡ್ತೇನೆ ಎಂದಿದ್ದಾರೆ. ಧರ್ಮದ ಹೆಸರಲ್ಲಿ ಕೀಳು ರಾಜಕೀಯ ನಡೀತಿದೆ ಎಂದು ಜಗನ್ ಕಿಡಿಕಾರಿದ್ದಾರೆ. ಈ ಮಧ್ಯೆ, ಲಡ್ಡು ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಇದನ್ನೂ ಓದಿ: MUDA Case| ರಾಜಧರ್ಮ ಪಾಲಿಸದಿದ್ದರೆ ಅದು ರಾವಣ ರಾಜ್ಯ ಆಗಲಿದೆ: ಕೋರ್ಟ್ ಆದೇಶದಲ್ಲಿ ಏನಿದೆ?

    ಜಗನ್‌ V/S ಚಂದ್ರಬಾಬು ನಾಯ್ಡು:
    ಇನ್ನೂ ಮಾಜಿ ಸಿಎಂ ಜಗನ್‌ ತಿರುಪತಿ ವೆಂಕಟೇಶ್ವರ ದೇವಸ್ಥಾನ ಭೇಟಿಯನ್ನು ಮುಂದೂಡಿದ ಬಳಿಕ ಮತ್ತು ಹಾಲಿ ಮುಖ್ಯಮಂತ್ರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಜಗನ್‌ ತಿರುಪತಿ ಭೇಟಿ ರದ್ದುಗೊಳಿಸಿದ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಪ್ರತಿಕ್ರಿಯಿಸಿದ್ದಾರೆ. ಜಗನ್ ತಿರುಮಲ ದೇವಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ) ಸರ್ಕಾರ ಅಡ್ಡಿಪಡಿಸಿದೆ ಎಂದು ಸುಳ್ಳು ಹರಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಯಾರಾದರೂ ನಿಮ್ಮನ್ನು ಹೋಗದಂತೆ ತಡೆದಿದ್ದಾರಾ? ನೋಟಿಸ್ ಇದ್ದರೇ ಮಾಧ್ಯಮದವರಿಗೆ ತೋರಿಸಿ, ಏಕೆ ಸುಳ್ಳುಗಳನ್ನು ಹರಡುತ್ತಿದ್ದೀರಿ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ; 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಕೇಂದ್ರ ಸಚಿವ ಹೆಚ್‌ಡಿಕೆ

    ಸಾರ್ವಜನಿಕ ಜೀವನದಲ್ಲಿ ಜನರು ಸಂಪ್ರದಾಯಗಳನ್ನು ಅನುಸರಿಸಬೇಕು ಮತ್ತು ಏನು ಮಾಡಬೇಕೋ ಅದನ್ನು ಮಾಡಲೇಬೇಕು. ಪೂಜಾ ಸ್ಥಳಕ್ಕೆ ಭೇಟಿ ನೀಡಬೇಕಾದ್ರೆ, ಅಲ್ಲಿನ ಸಂಪ್ರದಾಯಗಳನ್ನು ಗೌರವಿಸಬೇಕು. ಸಂಪ್ರದಾಯಗಳನ್ನು ಮತ್ತು ಭಕ್ತರ ನಂಬಿಕೆಗಳನ್ನು ಅಗೌರವಗೊಳಿಸಬಾರದು. ಏಕೆಂದರೆ ಅಲ್ಲಿನ ನಂಬಿಕೆಗಳಿಗಿಂತ ಯಾರೂ ಮೇಲಲ್ಲ, ಯಾರೂ ದೇವರಲ್ಲ ಎಂದು ತಿರುಗೇಟು ನೀಡಿದ್ದಾರೆ.

  • ತಿರುಪತಿ ಬಳಿಕ ತಮಿಳುನಾಡಿನ ಪಳನಿ ದೇವಸ್ಥಾನ ಪ್ರಸಾದದಲ್ಲೂ ವಿವಾದ – ನಿರ್ದೇಶಕ ಮೋಹನ್‌ ಅರೆಸ್ಟ್‌

    ತಿರುಪತಿ ಬಳಿಕ ತಮಿಳುನಾಡಿನ ಪಳನಿ ದೇವಸ್ಥಾನ ಪ್ರಸಾದದಲ್ಲೂ ವಿವಾದ – ನಿರ್ದೇಶಕ ಮೋಹನ್‌ ಅರೆಸ್ಟ್‌

    ಚೆನ್ನೈ: ಪಳನಿ ದೇವಸ್ಥಾನದಲ್ಲಿ (Palani temple) ನೀಡುವ ಪಂಚಾಮೃತ ಪ್ರಸಾದಕ್ಕೆ ಪುರುಷರಲ್ಲಿ ದುರ್ಬಲತೆ ಉಂಟುಮಾಡುವ ಔಷಧಿ ಬೆರಸಿದ್ದಾರೆ ಎಂಬ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಮೋಹನ್‌ ಜಿ (Tamil director Mohan G) ಅವರನ್ನ ಬಂಧಿಸಲಾಗಿದೆ.

    ತಿರುಪತಿ ಲಡ್ಡು (Tirupati laddu) ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬೆರಸಿದ್ದಾರೆ ಎಂಬ ಆರೋಪದ ಬಗ್ಗೆ ಯೂಟ್ಯೂಬ್‌ ಚಾನೆಲ್‌ವೊಂದರ ಸಂದರ್ಶನದಲ್ಲಿ ಮೋಹನ್‌ ಮಾತನಾಡುತ್ತಿದ್ದರು. ಈ ವೇಳೆ ಪಳನಿ ದೇವಸ್ಥಾನದಲ್ಲಿ ಬಡಿಸುವ ಪಂಚಾಮೃತ ಪ್ರಸಾದಕ್ಕೆ ಪುರುಷರಲ್ಲಿ ದುರ್ಬಲತೆ ಉಂಟುಮಾಡುವ ಔಷಧಿ ಬೆರಸಲಾಗಿದೆ ಎಂದು ಆರೋಪಿಸಿದ್ದರು. ಅವರ ಈ ಹೇಳಿಕೆಯನ್ನು ಆಧರಿಸಿ ತಿರುಚ್ಚಿ ಸೈಬರ್‌ ಪೊಲೀಸರು (Trichy Cyber Police) ಬಂಧಿಸಿದ್ದಾರೆ. ಮಂಗಳವಾರ ಚೆನ್ನೈನಲ್ಲಿ ಬಂಧಿಸಿದ್ದು, ತಿರುಚ್ಚಿಗೆ ಕರೆತರಲಾಗುವುದು ಎಂದು ತಿರುಚ್ಚಿ ಜಿಲ್ಲಾ ಎಸ್ಪಿ ವರುಣ್ ಕುಮಾರ್ ತಿಳಿಸಿದ್ದಾರೆ.

    ನಿರ್ದೇಶಕ ಮೋಹನ್‌ ಸಂದರ್ಶನದಲ್ಲಿ ಮಾತನಾಡುವಾಗ, ತಮಿಳುನಾಡಿನಲ್ಲೂ ಇಂತಹ ಘಟನೆಗಳು ನಡೆದಿವೆ. ಪಳನಿ ದೇವಸ್ಥಾನ ಪ್ರಸಾದದಲ್ಲಿ ಪುರುಷರಲ್ಲಿ ಶಕ್ತಿಹೀನತೆ ಉಂಟುಮಾಡುವ ಔಷಧ ಬೆರಸಿದ್ದರು ಅಂತ ಕೇಳಿದ್ದೆ. ಆದ್ರೆ ಅದನ್ನು ಮರೆಮಾಚಲಾಯಿತು. ನಮ್ಮ ಬಳಿ ಸಾಕ್ಷಿಯಿಲ್ಲದ ಕಾರಣ ಏನನ್ನೂ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ 100 ಬಾರಿ ಯೋಚಿಸಿ ಮಾತನಾಡಿ: ಕಾರ್ತಿ ವಿರುದ್ಧ ಪವನ್‌ ಕಲ್ಯಾಣ್‌ ಕಿಡಿ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿಂದೂ ಧಾರ್ಮಿಕ ಮತ್ತು ಧರ್ಮ ದತ್ತಿ ಸಚಿವ ಸೇಕರ್ ಬಾಬು, ಪಳನಿ ದೇವಸ್ಥಾನ ಪಂಚಾಮೃತದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಮಿಶ್ರಣ ಆರೋಪ – ಸರ್ಕಾರಕ್ಕೆ 40 ಪುಟಗಳ ವರದಿ ಸಲ್ಲಿಸಿದ ಟಿಟಿಡಿ

    2016ರಲ್ಲಿ ‘ಪಜ್ಯ ವನ್ನರಪೆಟ್ಟೈ ಚಿತ್ರದ ಮೂಲಕ ನಿರ್ದೇಶಕರಾಗಿ ವೃತ್ತಿ ಜೀವನ ಆರಂಭಿಸಿದ ಮೋಹನ್‌ ಜಿ. ಅನೇಕ ಹಿಟ್ಟ್‌ ಸಿನಿಮಾಗಳನ್ನ ಕೊಟ್ಟಿದ್ದಾರೆ. 2020ರಲ್ಲಿ ಇವರು ನಿರ್ದೇಶಿಸಿದ್ದ ದ್ರೌಪದಿ ಸಿನಿಮಾ ಭರ್ಜರಿ ಪ್ರದರ್ಶನ ಕಂಡಿತ್ತು. ಅಲ್ಲದೇ ‘ರುದ್ರ ತಾಂಡವಂ’, ‘ಬಕಾಸುರನ್’ ಅಂತಹ ಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

  • ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ಹೈದರಾಬಾದ್: ತೆಲಂಗಾಣದ (Telangana) ಖಮ್ಮಂ (Khammam) ಜಿಲ್ಲೆಯ ಭಕ್ತೆಯೊಬ್ಬರು ಪವಿತ್ರ ತಿರುಪತಿ ಲಡ್ಡು (Tirupati Laddu) ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟಿರುವ ತಂಬಾಕು (Tobacco) ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ.

    ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದೆ. ಇದನ್ನೂ ಓದಿ: ನನ್ನ ಮಗ ಪಟಾಕಿ ಹಾರಿಸಲು ಹೆದರುತ್ತಿದ್ದ, ಗುಂಡು ಹಾರಿಸಲು ಸಾಧ್ಯವೇ – ಮೃತ ರೇಪ್ ಆರೋಪಿಯ ತಾಯಿ ಕಣ್ಣೀರು

    ಗೊಲ್ಲಗುಡೆಂ (Gollagudem) ಪಂಚಾಯತ್‌ನ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ ತೆರಳಿದ್ದರು. ಪ್ರಸಾದ ರೂಪದಲ್ಲಿ ತಂದಿದ್ದ ಲಡ್ಡುವಿನಲ್ಲಿ ಸಣ್ಣ ಪೇಪರ್‌ನಲ್ಲಿ ಕಟ್ಟಿದ್ದ ಗುಟ್ಕಾ ಪತ್ತೆಯಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಪ್ರಸಾದದಲ್ಲಿ ಗುಟ್ಕಾ ಪತ್ತೆ – ಭಕ್ತೆಯಿಂದ ಆರೋಪ!

    ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿರುವುದು ಇದೇ ಮೊದಲಲ್ಲ. 2012ರಲ್ಲೂ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪ್ಯಾಕೆಟ್ ಸಿಕ್ಕಿರುವುದು ಗಮನಾರ್ಹ. ಈಗಾಗಲೇ ತುಪ್ಪದಲ್ಲಿ ಕಲಬೆರಕೆ ವಿಷಯ ವಿವಾದವಾಗಿದ್ದು, ಈ ಬೆನ್ನಲ್ಲೇ ಗುಟ್ಕಾ ಪತ್ತೆಯಾಗಿದೆ ಎಂಬ ಆರೋಪವೂ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಝೆಲೆನ್ಸ್ಕಿ ಭೇಟಿಯಾದ ಮೋದಿ – ಶಾಂತಿಮಂತ್ರ ಪಠಿಸಿದ ಪ್ರಧಾನಿ

    ಆಂಧ್ರಪ್ರದೇಶದ ತಿರುಪತಿ ದೇಗುಲದಲ್ಲಿ ಪ್ರಸಾದ ರೂಪದಲ್ಲಿ ನೀಡುತ್ತಿದ್ದ ಲಡ್ಡು ಈಗ ಮಹಾ ವಿವಾದಕ್ಕೆ ಕಾರಣವಾಗಿದೆ. ಲಡ್ಡುವಿನಲ್ಲಿಗೋವು, ಹಂದಿಯ ಕೊಬ್ಬು ಮಿಶ್ರಣ ಮಾಡಲಾಗಿದೆ, ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ ಬಳಿಕ ವಿವಾದ ಭುಗಿಲೆದ್ದಿದೆ. ಇದನ್ನೂ ಓದಿ: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

  • ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

    ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

    – ಹಾದಿಯಲ್ಲಿ ಹೋಗುವವರೆಲ್ಲಾ ರಾಜ್ಯಪಾಲರಿಗೆ ದೂರು ಕೊಟ್ಟರೆ ಹೇಗೆ? ಎಂದ ಸಚಿವ

    ವಿಜಯಪುರ: ತಿರುಪತಿ ಲಡ್ಡು ವಿಚಾರ (Tirupati Laddu controversy) ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬು ಬೆರಸುವುದು ಘೋರ ಅಪರಾಧ. ದನದ ಕೊಬ್ಬನ್ನು ಬೆರಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು ಎಂದು ಸಚಿವ ಎಂ.ಬಿ ಪಾಟೀಲ್‌ (MB Patil) ಆಗ್ರಹಿಸಿದ್ದಾರೆ.

    ವಿಜಯಪುರದಲ್ಲಿಂದು (Vijayapura) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು ಮಿಶ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಇದು ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬನ್ನು ಬೆರೆಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಭಕ್ತರ ಭಾವನೆಗಳ ಜೊತೆ ಆಟ ಆವಡುವುದು ಸರಿಯಲ್ಲ. ಅದರಲ್ಲಿ ಪಾವಿತ್ರ‍್ಯತೆ ಇದೆ, ದನದ ಕೊಬ್ಬು ಬೆರೆಸುವುದು ಘೋರ ಅಪರಾಧ. ಆಗಾಗ ಪ್ರಸಾದದ ತಪಾಸಣೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.

    ಇದೇ ವೇಳೆ ಶಾಸಕ ಮುನರತ್ನ (Munirathna) ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ವಾಭಾವಿಕವಾಗಿ ಯಾರೂ ಊಹಿಸದ ಆಪಾದನೆಗಳು ಅವರ ಮೇಲೆ ಬರುತ್ತಿವೆ. ಎಲ್ಲದರ ಕುರಿತು ತನಿಖೆ ಆಗಲಿ. ನಿಜವಾಗಿ ಆ ರೀತಿ ಘೋರವಾದಂತಹ ಕೃತ್ಯ ಮಾಡಿದ್ದರೇ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ. ಫಸ್ಟ್ ಟೈಮ್ ಊಹಿಸದಂತಹ ಆಪಾದನೆ ಕೇಳಿ ನಾನು ಗಾಬರಿಯಾದೆ. ಹನಿಟ್ರ‍್ಯಾಪ್, ಸಿಡಿ ಮಾಡೋದು, ಹೆಣ್ಣುಮಕ್ಕಳ ಬಳಕೆ ಇವೆಲ್ಲ ಹೇಯ ಕೃತ್ಯಗಳು ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ

    ರಾಜ್ಯಪಾಲರಿಗೆ ದೂರು ಕೊಡೊದೇ ಹೊಸ ದಂಧೆ ಆಗುತ್ತೆ:
    ರಾಜ್ಯಪಾಲರ ಹಸ್ತಕ್ಷೇಪ ವಿಚಾರ ಕುರಿತು ಮಾತನಾಡಿದ ಸಚಿವರು, ಇದು ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮದ್ಯೆದ ಸಂಘರ್ಷವಲ್ಲ. ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೆಪ ಮಾಡಬಾರದು. ಎಲ್ಲರೂ ಹೋಗಿ ರಾಜ್ಯಪಾಲರಿಗೆ ದೂರು ಕೊಡುವುದು, ಅವರು ಅದನ್ನು ಪರಿಗಣಿಸುವುದು ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ಸ್ಪಿನ್‌ ಮಾಂತ್ರಿಕ ಅಶ್ವಿನ್‌ ಆಲ್‌ರೌಂಡ್‌ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ

    ಪೊಲೀಸ್ ಸ್ಟೇಷನ್ ಬದಲು ರಾಜ್ಯಪಾಲಿಗೆ ದೂರು ಕೊಟ್ಟಂತೆ ಆಗುತ್ತದೆ. ರಾಜ್ಯಪಾಲರಿಗೆ ದೂರು ಕೊಡೊದೇ ಒಂದು ಹೊಸ ದಂಧೆ ಶುರು ಆಗುತ್ತದೆ. ಅದಾಗ್ಯೂ ರಾಜ್ಯಪಾಲರ ಹಸ್ತಕ್ಷೇಪದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಹಾದಿಯಲ್ಲಿ ಹೋಗುವವರು ಬಂದು ಸಿಕ್ಕ ಸಿಕ್ಕವರ ಮೇಲೆ ಮೇಲೆ ಅರ್ಜಿ ಹಾಕಿದರೆ ಹೇಗೆ? ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್‌ ಕೊಡಲು ಸರ್ಕಾರ ಪ್ಲ್ಯಾನ್!‌

  • ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!

    ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!

    – ಪ್ರಯೋಗಾಲಯದ ಪರೀಕ್ಷೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನೆಣ್ಣೆ ದೃಢ

    ಹೈದರಾಬಾದ್‌: ತಿರುಪತಿ ದೇವಸ್ಥಾನದಲ್ಲಿ (Tirupati Temple) ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ (Laddus) ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ (Beef Fat, Fish Oil) ಇದೆ ಎಂದು ಲ್ಯಾಬ್ ವರದಿ ದೃಢಪಡಿಸಿದೆ.

    ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಆರೋಪಿಸಿದ್ದರು.

    ಈ ಆರೋಪದ ಬೆನ್ನಲ್ಲೇ ಪಶು ಆಹಾರ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯ NDDB CALF ನ ವರದಿಯು ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

    ಲ್ಯಾಬ್ ವರದಿಯಲ್ಲಿ ಏನಿದೆ?
    ಲಡ್ಡುಗೆ ಬಳಸಿದ ತುಪ್ಪದಲ್ಲಿ ಮೀನೆಣ್ಣೆ,ಹಂದಿಯ ಕೊಬ್ಬು, ತಾಳೆ ಎಣ್ಣೆ ಕೊಬ್ಬು, ತೆಂಗಿನ ಎಣ್ಣೆಯ ಕೊಬ್ಬು ಪತ್ತೆಯಾಗಿದೆ. ಸೋಯಾ, ಸೂರ್ಯಕಾಂತಿ, ಆಲಿವ್, ಹತ್ತಿ ಬೀಜದೆಣ್ಣೆ ಸಿಕ್ಕಿದೆ. ತುಪ್ಪದಲ್ಲಿ ವ್ಹೀಟ್ ಜೆರ್ಮ್ ಆಯಿಲ್, ಮೇಜ್ ಜೆರ್ಮ್ ಆಯಿಲ್ ಪತ್ತೆಯಾಗಿದೆ.

    ಸಿಎಂ ಹೇಳಿಕೆಯನ್ನು ಟಿಟಿಡಿ ಭಾಗಶಃ ಒಪ್ಪಿದೆ. ಒಂದು ಕಂಪನಿಯ ತುಪ್ಪದಲ್ಲಿ ವೆಜಿಟೆಬಲ್ ಫ್ಯಾಟ್ ಬೆರೆಸಿರುವುದು ಗೊತ್ತಾಗಿದೆ ಎಂದು ಟಿಟಿಡಿ ಇಓ ಶ್ಯಾಮಲರಾವ್ ಹೇಳಿದ್ದಾರೆ. ಟಿಟಿಡಿ ಮಾಜಿ ಸದಸ್ಯ ಓವಿ ರಮಣ, ಚಂದ್ರಬಾಬು ಹೇಳಿದ್ದೆಲ್ಲಾ ಸತ್ಯ ಎಂದಿದ್ದಾರೆ.

    ಜಗನ್ ಸಿಎಂ ಆಗಿದ್ದಾಗ ವಿದೇಶದಿಂದ ಆಮದು ಮಾಡಿಕೊಂಡ ಬೆಣ್ಣೆಯನ್ನು ಲಡ್ಡು ತಯಾರಿಗೆ ಬಳಸಲಾಗುತ್ತಿತ್ತು ಎಂದು ಆಪಾದಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಬಿಜೆಪಿ ಆಗ್ರಹಿಸಿದೆ.

    ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರು ಸಿಹಿ ತಯಾರಿಸಲು ನಿಜವಾಗಿಯೂ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನಾಯ್ಡು ಅವರ ಆರೋಪಗಳು ವೆಂಕಟೇಶ್ವರನನ್ನು ಪೂಜ್ಯ ದೇವತೆ ಎಂದು ಪರಿಗಣಿಸುವ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಶರ್ಮಿಳಾ ಹೇಳಿದ್ದಾರೆ.

  • ತಿರುಪತಿ ಲಡ್ಡು ಟಿಟಿಡಿಗೆ ಕಹಿ – 140 ಕೋಟಿ ರೂ. ನಷ್ಟ

    ತಿರುಪತಿ ಲಡ್ಡು ಟಿಟಿಡಿಗೆ ಕಹಿ – 140 ಕೋಟಿ ರೂ. ನಷ್ಟ

    ತಿರುಪತಿ: ತಿರುಪತಿ ತಿಮ್ಮಪ್ಪನ ಲಡ್ಡು ಸೇವೆಯಿಂದಾಗಿ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ವಾರ್ಷಿಕ 140 ಕೋಟಿ ರೂ. ನಷ್ಟವಾಗುತ್ತಿದೆ. ತಿರುಪತಿ ಲಡ್ಡನ್ನು ಕಳೆದ ಮೂರು ವರ್ಷಗಳಿಂದ ಸಬ್ಸಿಡಿ ದರ ಹಾಗೂ ಕೆಲವು ಭಕ್ತರಿಗೆ ಉಚಿತವಾಗಿ ಹಂಚಿಕೆ ಮಾಡುತ್ತಿರುವುದರಿಂದ ಈ ನಷ್ಟವಾಗುತ್ತಿದೆ ಎಂದು ಟಿಟಿಡಿ ಮೂಲಗಳು ಪಿಟಿಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿವೆ.

    ಭಕ್ತರ ಬಾಯಲ್ಲಿ ನೀರೂರಿಸುವ ಲಡ್ಡು ಪ್ರಸಾದವನ್ನು ಕಳೆದ 11 ವರ್ಷಗಳಿಂದ 25 ರೂ.ಗಳ ಸಬ್ಸಿಡಿ ದರದಲ್ಲಿ ಮಾರಾಟ ಮಾಡುತ್ತಿದೆ. ಆದರೆ ಒಂದು ಲಡ್ಡುವಿನ ಉತ್ಪಾದನಾ ವೆಚ್ಚವೇ 32.50 ರೂಪಾಯಿ ಆಗುತ್ತದೆ.

    2016ರಲ್ಲಿ ಸುಮಾರು 10 ಕೋಟಿ ಲಡ್ಡು ತಯಾರಾಗಿ ಮಾರಾಟವಾಗಿವೆ. ಸಬ್ಸಿಡಿ ದರವಲ್ಲದೆ ಉಚಿತ ದರ್ಶನ ಹಾಗೂ ಸರತಿ ಸಾಲಲ್ಲಿ ನಿಂತು ದರ್ಶನ ಪಡೆದವರಿಗೆ ಕೇವಲ 10 ರೂ.ಗೆ ಲಡ್ಡು ಪ್ರಸಾದ ನೀಡಲಾಗುತ್ತದೆ. ಇದರಿಂದಾಗಿಯೇ ವರ್ಷಕ್ಕೆ 23 ಕೋಟಿ ರೂಪಾಯಿ ನಷ್ಟವಾಗುತ್ತದೆ ಎನ್ನಲಾಗಿದೆ.

    ತಿರುಮಲ ಬೆಟ್ಟವನ್ನು 11 ಕಿ.ಮೀ. ನಡೆದುಕೊಂಡು ಬರುವವರಿಗೆ 1 ಲಡ್ಡುವಿನಂತೆ ವಿತರಣೆ ಮಾಡುತ್ತಿದ್ದು ಇದರಿಂದಾಗಿ 22.7 ಕೋಟಿ ನಷ್ಟವಾಗುತ್ತದೆ. ಅಕ್ಟೋಬರ್ 2013ರಲ್ಲಿ ಈ ಯೋಜನೆ ಆರಂಭವಾಗಿತ್ತು. ಇದು ಆರಂಭವಾದ ಬಳಿಕ ವಾರ್ಷಿಕ ಸುಮಾರು 70 ಲಕ್ಷ ಭಕ್ತರು ಬೆಟ್ಟವನ್ನು ಹತ್ತಿ ಬರುತ್ತಾರೆ.

    70 ಲಕ್ಷಕ್ಕೂ ಹೆಚ್ಚು ಭಕ್ತರು 300 ರೂ.ಗಳ ವಿಶೇಷ ದರ್ಶನ ಹಾಗೂ 500 ರೂ.ಗಳ ವಿಐಪಿ ದರ್ಶನ ಪಡೆದುಕೊಂಡು ಬರುವವರಿಗೆ ತಲಾ 2 ಲಡ್ಡುಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ಇದು ಕೂಡಾ ಟಿಟಿಡಿಯ ನಷ್ಟದ ಲೆಕ್ಕಕ್ಕೆ ಸೇರ್ಪಡೆಯಾಗುತ್ತಿದೆ.