Tag: tirupati temple

  • ಕೂದಲಿನಿಂದ 126 ಕೋಟಿ, ಲಡ್ಡು ಪ್ರಸಾದದಿಂದ 365 ಕೋಟಿ – ಟಿಟಿಡಿ ನಿರೀಕ್ಷಿತ ಆದಾಯ

    ಅಮರಾವತಿ: ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಗುರುವಾರ ತನ್ನ 2022-23ನೇ ಸಾಲಿನ ಬಜೆಟ್ ಮಂಡಿಸಿದೆ.

    ತಿರುಮಲದ ಪುರಾತನ ವೆಂಕಟೇಶ್ವರ ದೇವಾಲಯದ ಆಡಳಿತ ಮಂಡಳಿ 2022-23ರ ವಾರ್ಷಿಕ ಬಜೆಟ್‌ನಲ್ಲಿ 3,096.40 ಕೋಟಿ ರೂ. ಆದಾಯವನ್ನು ಅಂದಾಜಿಸಿದೆ.

    ಮುಂದಿನ 12 ತಿಂಗಳ ಹಣಕಾಸು ಯೋಜನೆಯನ್ನು ಬಜೆಟ್ ಸಭೆಯಲ್ಲಿ ಪರಿಶೀಲಿಸಿದ ಬಳಿಕ ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಜವಾಹರ ರೆಡ್ಡಿ ವಾರ್ಷಿಕ ಬಜೆಟ್ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: 290 ಗ್ರಾಂ ತೂಕದ ಸ್ಟ್ರಾಬೆರಿ ಬೆಳೆದು ವಿಶ್ವ ದಾಖಲೆ

    ದೇವಾಲಯದ ವಾರ್ಷಿಕ ಆದಾಯದಲ್ಲಿ ಸುಮಾರು 1,000 ಕೋಟಿ ರೂ. ಹುಂಡಿಯಲ್ಲಿ (ದಾನ-ಪಾತ್ರೆ) ಭಕ್ತರಿಂದ ಬರುತ್ತದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿನ ಠೇವಣಿ ಮೇಲಿನ ಬಡ್ಡಿ ಸುಮಾರು 668.5 ಕೋಟಿ ರೂ., ವಿವಿಧ ರೀತಿಯ ಟಿಕೆಟ್‌ಗಳ ಮಾರಾಟದಿಂದ 362 ಕೋಟಿ ರೂ. ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ.

    ಲಡ್ಡು ಪ್ರಸಾದ ಮಾರಾಟದಿಂದ 365 ಕೋಟಿ ರೂ., ವಸತಿ ಹಾಗೂ ಮದುವೆ ಮಂಟಪದ ಬಾಡಿಗೆಯಿಂದ 95 ಕೋಟಿ ರೂ., ಭಕ್ತರು ಅರ್ಪಿಸುವ ಕೂದಲು ಮಾರಾಟದಿಂದ 126 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಮಂಡಳಿಯ ವಿವಿಧ ಸೇವೆಗಳ ವೆಚ್ಚವನ್ನು 1,360 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ

    ಭಕ್ತರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಬಂದು ತಮ್ಮ ಕೂದಲನ್ನು ದಾನ ಮಾಡಿದರೆ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯುತ್ತಾರೆ ಹಾಗೂ ಅವರ ಎಲ್ಲಾ ತೊಂದರೆಗಳು ದೂರವಾಗುತ್ತದೆ ಎಂಬುದು ಜನಪ್ರಿಯ ನಂಬಿಕೆ. ಲಕ್ಷ್ಮಿ ದೇವಿ ಇಲ್ಲಿ ಎಲ್ಲಾ ಪಾಪಗಳನ್ನು ಹಾಗೂ ದುಷ್ಟತನವನ್ನು ತೊರೆಯುವ ವ್ಯಕ್ತಿಯ ಎಲ್ಲಾ ದುಃಖಗಳನ್ನು ದೂರ ಮಾಡುತ್ತಾಳೆ ಎಂದು ನಂಬಲಾಗುತ್ತದೆ.

    ಈ ನಂಬಿಕೆಯನ್ನು ಪೂರ್ಣಗೊಳಿಸಲು ಜನರು ಎಲ್ಲಾ ದುಷ್ಟತನ ಹಾಗೂ ಪಾಪವನ್ನು ತಮ್ಮ ಕೂದಲ ರೂಪದಲ್ಲಿ ಬಿಡುತ್ತಾರೆ. ಪ್ರತಿದಿನ ಸುಮಾರು 20 ಸಾವಿರ ಭಕ್ತರು ತಿರುಪತಿ ದೇವಸ್ಥಾನಕ್ಕೆ ಕೇಶ ದಾನಕ್ಕೆ ಹೋಗುತ್ತಾರೆ. ಈ ಕೆಲಸಕ್ಕಾಗಿ ಸುಮಾರು 600 ಕ್ಷೌರಿಕರನ್ನು ದೇವಾಲಯದ ಆವರಣದಲ್ಲಿ ಇರಿಸಲಾಗಿದೆ.

  • 2021ರಲ್ಲಿ 1 ಕೋಟಿ ಭಕ್ತರು ತಿರುಮಲಕ್ಕೆ ಭೇಟಿ – ಹುಂಡಿಯಲ್ಲಿ 833 ಕೋಟಿ ರೂ. ಸಂಗ್ರಹ

    2021ರಲ್ಲಿ 1 ಕೋಟಿ ಭಕ್ತರು ತಿರುಮಲಕ್ಕೆ ಭೇಟಿ – ಹುಂಡಿಯಲ್ಲಿ 833 ಕೋಟಿ ರೂ. ಸಂಗ್ರಹ

    ಹೈದರಾಬಾದ್: ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಆಂಧ್ರಪ್ರದೇಶದ ಪ್ರಸಿದ್ಧ ದೇವಾಲಯ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ಈ ವರ್ಷ ಕೋಟಿ, ಕೋಟಿ ಹಣ ಹರಿದು ಬಂದಿದ್ದು, ಸುಮಾರು 833 ಕೋಟಿ ರೂಪಾಯಿ ಸಂಗ್ರಹವಾಗಿದೆ.

    ತಿರುಪತಿ ದೇವಾಲಯದ (ಟಿಟಿಡಿ) ಮಂಡಳಿಯು ನಡೆಸಿದ ಹುಂಡಿ ಎಣಿಕೆಯಲ್ಲಿ 2021ರ ಜನವರಿ 1 ರಿಂದ ಡಿಸೆಂಬರ್ 30ರವರೆಗೂ 833 ಕೋಟಿ ರೂ. ಸಂಗ್ರಹವಾಗಿದೆ. ಕೊರೊನಾ ಎರಡನೇ ಅಲೆಯ ನಂತರ ಈ ವರ್ಷದಲ್ಲಿ ಸುಮಾರು 1.4 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯ ಆಡಳಿತ ಮಂಡಳಿಯು 5.96 ಕೋಟಿ ಲಡ್ಡು ಪ್ರಸಾದವನ್ನು ಭಕ್ತರಿಗೆ ನೀಡಿದೆ ಮತ್ತು ಸುಮಾರು 1.37 ಕೋಟಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 1.4 ಕೋಟಿ ಭಕ್ತರಲ್ಲಿ 48.75 ಲಕ್ಷ ಮಂದಿ ದೇವರಿಗೆ ಮುಡಿ ನೀಡಿದ್ದಾರೆ. ಇದನ್ನೂ ಓದಿ: ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ

    ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಬ್ರಹ್ಮರಥೋತ್ಸವಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ

  • ಆರ್ಥಿಕ ಸಂಕಷ್ಟ – ತಿರುಪತಿ ದೇವಾಲಯದ 500 ಕೋಟಿ ಸ್ಥಿರಾಸ್ತಿ ಮಾರಾಟ?

    ಆರ್ಥಿಕ ಸಂಕಷ್ಟ – ತಿರುಪತಿ ದೇವಾಲಯದ 500 ಕೋಟಿ ಸ್ಥಿರಾಸ್ತಿ ಮಾರಾಟ?

    – ಬ್ಯಾಂಕುಗಳಲ್ಲಿದೆ 14 ಸಾವಿರ ಕೋಟಿ ನಗದು
    – 8 ಸಾವಿರ ಕೆಜಿ ಚಿನ್ನ, ವಾರ್ಷಿಕ 750 ಕೋಟಿ ರೂ. ಬಡ್ಡಿ

    ಹೈದರಾಬಾದ್: ಕೋವಿಡ್ 19 ಲಾಕ್‍ಡೌನ್ ನಿಂದ ಸೃಷ್ಟಿಯಾಗಿರುವ ಹಣಕಾಸು ಸಮಸ್ಯೆಯನ್ನು ಪರಿಹಾರ ಮಾಡಲು ತನ್ನ ಕೆಲ ಸ್ಥಿರಾಸ್ತಿಗಳನ್ನು ಮಾರಾಟ ಮಾಡಲು ತಿರುಪತಿ ತಿರುಮಲ ದೇಗುಲ (ಟಿಟಿಡಿ)ದ ಆಡಳಿತ ಮಂಡಳಿ ಚಿಂತನೆ ನಡೆಸಿದೆ.

    ಹೌದು. ಮಾರ್ಚ್ ಮೂರನೇ ವಾರದಲ್ಲಿ ತಿರುಪತಿ ದೇಗುಲದ ಬಾಗಿಲು ಮುಚ್ಚಿದ್ದು, ಜೂನ್ ತಿಂಗಳಿನಲ್ಲಿ ಬಾಗಿಲು ತೆರೆಯಲು ತೆರೆಯಲು ಅನುಮತಿ ಸಿಗುತ್ತದೆಯೋ ಇಲ್ಲವೋ ಎನ್ನುವುದು ಸ್ಪಷ್ಟವಾಗಿಲ್ಲ. ಒಂದು ವೇಳೆ ಜೂನ್ ತಿಂಗಳಿನಲ್ಲೂ ದೇವಾಲಯದ ಬಾಗಿಲು ತೆರೆಯದಿದ್ದರೆ ಭಕ್ತರು ದೇಣಿಗೆ ರೂಪದಲ್ಲಿ ನೀಡಿದ್ದ ಕೆಲ ಸ್ಥಿರಾಸ್ತಿಯನ್ನು ಮಾರಾಟ ಮಾಡಲು ಟಿಟಿಡಿ ಮುಂದಾಗಿದೆ.

    ಚೆನ್ನೈ, ಮುಂಬೈ, ಸೇರಿದಂತೆ ಕೆಲ ಮಹಾನಗರಗಳಲ್ಲಿ ಭಕ್ತರು ಆಸ್ತಿ ನೀಡಿದ್ದು, ಆ ಸ್ಥಿರಾಸ್ತಿಗಳು ದಶಕಗಳಿಂದ ನಿರುಪಯುಕ್ತ ಸ್ಥಿತಿಯಲ್ಲಿದೆ. ಇವುಗಳ ಪೈಕಿ 500 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಿ ಹಣ ತುಂಬಿಸಲು ಚಿಂತನೆ ನಡೆಸಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ಟಿಟಿಡಿಯಲ್ಲಿ ಖಾಯಂ ಮತ್ತು ಗುತ್ತಿಗೆ ರೂಪದಲ್ಲಿ ಒಟ್ಟು 22 ಸಾವಿರ ಸಿಬ್ಬಂದಿ ಇದ್ದು, ಇವರ ತಿಂಗಳ ವೇತನ ಪಾವತಿಗೆ 115 ಕೋಟಿ ರೂ. ಬೇಕಾಗುತ್ತದೆ. ಆದಾಯ ಸಮಸ್ಯೆಯಾದ ಹಿನ್ನೆಲೆಯಲ್ಲಿ 7 ಸಾವಿರ ರೂ. ಕಾಯಂ ಸಿಬ್ಬಂದಿಗೆ ಅರ್ಧ ಸಂಬಳ ಪಾವತಿಸಲಾಗುತ್ತಿದೆ. ಜೂನ್ ತಿಂಗಳಿನಲ್ಲಿ ದೇವಾಲಯ ತೆರೆಯದಿದ್ದರೆ ಭಾರೀ ಕಷ್ಟವಾಗುವ ಸಾಧ್ಯತೆಯಿದೆ. ಈ ಕಾರಣಕ್ಕೆ ಮೇ 28ಕ್ಕೆ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಸ್ಥಿರಾಸ್ತಿ ಮಾರಾಟದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

    2020-21ನೇ ಸಾಲಿನಲ್ಲಿ ಹುಂಡಿ ಮೂಲಕ 1,350 ಕೋಟಿ ರೂ., ಲಡ್ಡು, ವಿಶೇಷ ದರ್ಶನ ಟಿಕೆಟ್ ಮೂಲಕ 900 ಕೋಟಿ ರೂ. ಸಂಗ್ರಹವಾಗಬಹುದು ಎಂದು ಟಿಟಿಡಿ ಅಂದಾಜಿಸಿತ್ತು. ಆದರೆ ಲಾಕ್‍ಡೌನ್ ನಿಂದಾಗಿ ದೇವಾಲ ಮುಚ್ಚಿದ್ದು, ಪ್ರತಿ ತಿಂಗಳು 115 ಕೋಟಿ ರೂ. ಆದಾಯ ನಷ್ಟವಾಗುತ್ತಿದೆ.

    ವಿವಿಧ ಬ್ಯಾಂಕ್‍ಗಳಲ್ಲಿ 14 ಸಾವಿರ ಕೋಟಿ ನಗದು, ಮತ್ತು 8 ಸಾವಿರ ಕೆಜಿ ಚಿನ್ನವನ್ನು ಟಿಟಿಡಿ ಇಟ್ಟಿದ್ದು, ಇದರಿಂದ ಒಟ್ಟು ವರ್ಷಕ್ಕೆ 750 ಕೋಟಿ ರೂ. ಬಡ್ಡಿ ಬರುತ್ತದೆ. ಈ ಆಸ್ತಿಯನ್ನು ಮಾರಾಟ ಮಾಡುವುದಿಲ್ಲ ಎಂದು ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಹೇಳಿದ್ದಾರೆ.

  • ತಿರುಪತಿ ಮಾದರಿಯಲ್ಲಿ ರಾಮನಗರದಲ್ಲಿ ತಲೆ ಎತ್ತಲಿದೆ ತಿಮ್ಮಪ್ಪನ ದೇವಾಲಯ

    ತಿರುಪತಿ ಮಾದರಿಯಲ್ಲಿ ರಾಮನಗರದಲ್ಲಿ ತಲೆ ಎತ್ತಲಿದೆ ತಿಮ್ಮಪ್ಪನ ದೇವಾಲಯ

    ಬೆಂಗಳೂರು: ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನ ಮಾದರಿಯಲ್ಲಿ ರಾಜ್ಯದಲ್ಲೂ ತಿರುಪತಿ ತಿಮ್ಮಪ್ಪನ ದೇವಾಲಯ ತಲೆ ಎತ್ತಲಿದೆ.

    ಆಂಧ್ರಪ್ರದೇಶದ ತಿರುಪತಿಗೆ ಪ್ರತಿ ದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಕೆಲ ಕ್ಷಣಗಳಷ್ಟೇ ದೇವರ ದರ್ಶನ ಪಡೆಯುವ ಅವಕಾಶ ಸಿಗುತ್ತದೆ. ಇದರಿಂದ ಗಂಟೆಗಂಟಲೇ ಸರತಿ ಸಾಲಿನಲ್ಲಿ ನಿಂತು ದರ್ಶನಕ್ಕಾಗಿ ಕಾಯುವ ಭಕ್ತರು ನಿರಾಸೆಯನ್ನ ಅನುಭವಿಸುತ್ತಾರೆ. ಇಂತಹ ಭಕ್ತರಿಗೆ ರಾಜ್ಯದಲ್ಲೇ ತಿಮ್ಮಪ್ಪನ ದರ್ಶನ ಪಡೆಯುವ ಅವಕಾಶ ಲಭಿಸಿದೆ.

    ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಮುಜರಾಯಿ ಇಲಾಖೆಯ ಸಭೆಯಲ್ಲಿ ರಾಮನಗರದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

    ರಾಮನಗರದಲ್ಲಿ ದೇವಾಲಯ ನಿರ್ಮಾಣಕ್ಕೆ ಬೇಕಾದ ಅಗತ್ಯವಾದ 15 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ತಿರುಪತಿ ತಿಮ್ಮಪ್ಪನ ದೇವಸ್ಥಾನದ ಮಾದರಿಯಲ್ಲೇ ರಾಜ್ಯದಲ್ಲೂ ದೇವಸ್ಥಾನ ನಿರ್ಮಾಣವಾಗಲಿದೆ. ದೇವಸ್ಥಾನ ನಿರ್ಮಾಣ ಕಾರ್ಯವನ್ನ ಸಂಪೂರ್ಣವಾಗಿ ಟಿಟಿಡಿಯೇ ನೋಡಿಕೊಳ್ಳಲಿದ್ದು, ಅದರ ನಿರ್ವಹಣೆ ಕೂಡಾ ಟಿಟಿಡಿಯೇ ಮಾಡಲಿದೆ.

    ಉಳಿದಂತೆ ಇಂದು ನಡೆದ ಸಭೆಯಲ್ಲಿ ಸಚಿವ ರೇವಣ್ಣ, ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್ ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

  • ತೋಮಲ ಸೇವೆ ನೀಡೋದಾಗಿ ಹೇಳಿ ವಂಚನೆ: ತಿರುಪತಿ ದೇವಾಲಯಕ್ಕೆ 3ಲಕ್ಷ ರೂ. ದಂಡ

    ತೋಮಲ ಸೇವೆ ನೀಡೋದಾಗಿ ಹೇಳಿ ವಂಚನೆ: ತಿರುಪತಿ ದೇವಾಲಯಕ್ಕೆ 3ಲಕ್ಷ ರೂ. ದಂಡ

    ಕಲಬುರಗಿ: ಭಕ್ತರಿಗೆ ತೋಮಲ ಸೇವೆ ನೀಡುವುದಾಗಿ ಹೇಳಿ ವಂಚಿಸಿದ್ದ ಆರೋಪದಡಿ ತಿರುಪತಿ ತಿರುಮಲ ಟ್ರಸ್ಟ್‍ಗೆ ದಂಡ ವಿಧಿಸಲಾಗಿದೆ. ಕಲಬುರಗಿ ಜಿಲ್ಲಾ ಗ್ರಾಹಕರ ವೇದಿಕೆ ಮೂರು ಲಕ್ಷ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

    ಕಲಬುರಗಿ ನಗರದ ವಕೀಲರಾದ ಮದನರಾವ್ ಕಮಲಾಪುರಕರ್ ಅವರು ತಿರುಮಲ ತಿರುಪತಿ ದೇವಾಲಯದಲ್ಲಿ ಕುಟುಂಬದ 12 ಸದಸ್ಯರ ಸಮೇತ ತೋಮಲ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ತಲಾ ಒಬ್ಬರಿಗೆ 220 ರೂ. ವಿನಂತೆ ಒಟ್ಟು 2,640 ರೂ. ಡಿಡಿಯನ್ನು 2007ರ ಅಕ್ಟೋಬರ್ 4ರಂದು ದೇವಾಲಯಕ್ಕೆ ನೀಡಿದ್ದರು. ಈ ಡಿಡಿಗೆ ಪ್ರತಿಕ್ರಿಯಿಸಿದ ದೇವಾಲಯ ಆಡಳಿತ ಮಂಡಳಿ, ತಲಾ 3 ಜನರಂತೆ 660 ಮೌಲ್ಯದ ಪ್ರತ್ಯೇಕ ಡಿಡಿ ಪಾವತಿಸುವಂತೆ ತಿಳಿಸಿತ್ತು. ಮದನ್ ರಾವ್ ಅವರು ಈ ಮೊತ್ತವನ್ನು ಡಿಡಿ ಮೂಲಕ ಪಾವತಿಸಿದ್ದರು.

    2007ರ ಅಕ್ಟೋಬರ್ 9ರಂದು ಎರಡು ಸೇವಾ ಟಿಕೆಟ್‍ಗಳನ್ನು ವಿತರಿಸಿದ ದೇವಾಲಯ ಆಡಳಿತ ಮಂಡಳಿ 2015ರ ಫೆಬ್ರವರಿ 11ರಂದು ತೋಮಲ ಸೇವೆ ಮಾಡಬಹುದು ಎಂದು ತಿಳಿಸಿತ್ತು. ಅಷ್ಟೇ ಅಲ್ಲದೇ ಒಂದು ಟಿಕೆಟ್‍ನಲ್ಲಿ ತಲಾ 6 ಮಂದಿ ಪೂಜೆ ಸಲ್ಲಿಸಬಹುದು ಎಂದು ಹೇಳಿತ್ತು. 2015ರ ಫೆಬ್ರುವರಿ 2ರಂದು ಮತ್ತೊಂದು ಪತ್ರವನ್ನು ಕಳುಹಿಸಿದ ಟ್ರಸ್ಟ್ ಒಂದು ಟಿಕೆಟ್ ರದ್ದುಗೊಳಿಸಿ ಒಂದು ಟಿಕೆಟ್ ಮೂಲಕ 6 ಮಂದಿ ತೋಮಲ ಸೇವೆ ಮಾಡಬಹುದು ಎಂದು ತಿಳಿಸಿತ್ತು.

    ಒಂದು ಸೇವಾ ಟಿಕೆಟ್ ರದ್ದು ಪಡಿಸಿದ್ದನ್ನು ಪ್ರಶ್ನಿಸಿ ಮದನರಾವ್ ಅವರು ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿ ದೂರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವೇದಿಕೆ 3 ಲಕ್ಷ ರೂ. ದಂಡ ಮತ್ತು ದೂರುದಾರರಿಗೆ ವಕಾಲತ್ತಿನ ಖರ್ಚು 5 ಸಾವಿರ ರೂಪಾಯಿಯನ್ನು 4 ವಾರದ ಒಳಗಡೆ ಪಾವತಿಸುವಂತೆ ಸೂಚಿಸಿದೆ.