Tag: Tiruvannamalai

  • ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

    ತಿರುವಣ್ಣಾಮಲೈನಲ್ಲಿ ಭೂಕುಸಿತಕ್ಕೆ 7 ಮಂದಿ ಬಲಿ – ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ

    ಚೆನ್ನೈ: ತಮಿಳುನಾಡಿನ (Tamil Nadu) ದೇವಸ್ಥಾನದ ಪಟ್ಟಣ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದೆ. ಮೊದಲನೇ ಭೂಕುಸಿತದಲ್ಲಿ ವಸತಿ ಕಟ್ಟಡದ ಮೇಲೆ ಬಂಡೆಯೊಂದು ಕುಸಿದು, ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದರು.

    ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಭಾನುವಾರ ಸಂಜೆ 4:30 ಕ್ಕೆ ಈ ದುರಂತ ನಡೆದಿತ್ತು. ಇದನ್ನೂ ಓದಿ: ಸಂಸತ್ ಲೈಬ್ರರಿಯಲ್ಲಿ `ಸಾಬರಮತಿ ರಿಪೋರ್ಟ್‌’ ಸಿನಿಮಾ ವೀಕ್ಷಿಸಿದ ಮೋದಿ

    ಚೆನ್ನೈನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದ ಅಡಚಣೆಯಾಗಿದೆ. ಎರಡನೇ ಭೂಕುಸಿತ ಸ್ಥಳೀಯ ದೇವಸ್ಥಾನದ ಬಳಿಯ ಸ್ಥಳದಲ್ಲಿ ಸಂಭವಿಸಿದೆ.

    ತಿರುವಣ್ಣಾಮಲ್ಲೈನಲ್ಲಿ ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: Fengal Cyclone| ತಮಿಳುನಾಡು-ಪುದುಚ್ಚೆರಿಯಲ್ಲಿ ಜಲ ಪ್ರಳಯ – ಕೊಚ್ಚಿ ಹೋಯ್ತು ವಾಹನಗಳು

    ರಾಜಕುಮಾರ್ ಎಂಬ ವ್ಯಕ್ತಿಯ ನಿವಾಸದ ಮೇಲೆ ಭಾನುವಾರ ಸಂಜೆ 4 ಗಂಟೆಗೆ ಗುಡ್ಡ ಕುಸಿದಿತ್ತು. ಭಾನುವಾರದಿಂದ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ.

  • ಕಾರು, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿ ದುರ್ಮರಣ

    ಕಾರು, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿ ದುರ್ಮರಣ

    ಚೆನ್ನೈ: ಕಾರು (Car) ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ (Tamil Nadu) ತಿರುವಣ್ಣಾಮಲೈನಲ್ಲಿ (Tiruvannamalai) ನಡೆದಿದೆ. ತಿರುವಣ್ಣಾಮಲೈ-ಬೆಂಗಳೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

    ಕಾರಿನಲ್ಲಿದ್ದವರು ತಮಿಳುನಾಡಿನ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಬೆಂಗಳೂರಿಗೆ (Bengaluru) ವಾಪಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದಾರೆ. ಇನ್ನಿಬ್ಬರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದ ಟಿಟಿ – 12 ಮಂದಿ ಸಾವು, 23 ಮಂದಿಗೆ ಗಾಯ

    ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ತೀವ್ರ ಹಾನಿಗೊಳಗಾಗಿವೆ. ಇದರಿಂದಾಗಿ ವಾಹನಗಳು ಮಿತಿಮೀರಿದ ವೇಗದಲ್ಲಿ ಅಪಘಾತಕ್ಕೊಳಗಾಗಿವೆ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]