Tag: title

  • ‘ಕರಡಿಗುಡ್ಡ’ ಕನ್ನಡ ಚಲನಚಿತ್ರದ ಟೈಟಲ್ ಅನಾವರಣ

    ‘ಕರಡಿಗುಡ್ಡ’ ಕನ್ನಡ ಚಲನಚಿತ್ರದ ಟೈಟಲ್ ಅನಾವರಣ

    ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಪಂಚಮುಖಿ ವಿನಾಯಕ ದೇವಸ್ಥಾನದಲ್ಲಿ ವಿ ನಾಗೇಂದ್ರ ಪ್ರಸಾದ್ (Nagendra Prasad) ‘ಕರಡಿಗುಡ್ಡ’ (Karadigudda) ಸಿನಿಮಾದ ಶೀರ್ಷಿಕೆ (Title) ಮತ್ತು ಕಾನ್ಸೆಪ್ಟ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮುಖೇನ ನಿರ್ಮಾಪಕರಾದ ವೀಣಾ ವೆಂಕಟೇಶ್. ವಿ , ಅಂಬಿಕಾ ಚಂದ್ರಪ್ಪ ಅವರಿಗೆ ಹಾಗೂ ನಿರ್ದೇಶಕರಾದ ಅಮಿತ್ ರಾವ್ ಅವರಿಗೆ ಮತ್ತು ಚಿತ್ರತಂಡಕ್ಕೆ ಶುಭ ಕೋರಿದರು.

    ಈಗಾಗಲೇ ಹವಾಲಾ ಹಾಗೂ ಅಂತರಾಷ್ಟ್ರೀಯ  ಚಲನಚಿತ್ರೋತ್ಸವಗಳಲ್ಲಿ  72 ಪ್ರಶಸ್ತಿಗಳನ್ನು ಬಾಚಿಕೊಂಡಿರುವ ‘ಯಾದ್ಭಾವಂ ತದ್ಭವತಿ’ ಚಿತ್ರ ನಿರ್ದೇಶನದ ಜೊತೆಗೆ ನಟನೆಯನ್ನು ಮಾಡಿರುವ  ಅಮಿತ್ ರಾವ್ (Amit Rao)  ಅವರ ಮೂರನೇ ನಿರ್ದೇಶನದ ಚಿತ್ರ ಇದಾಗಿದ್ದು, ಚಿತ್ರಕ್ಕೆ ಕಥೆ ಜಯಂತ್ ಚಂದ್ರಪ್ಪ ಅವರ ಕಥೆ ಇದ್ದು, ಮಕ್ಕಳ ಸಾಹಸಮಯ ಚಿತ್ರ ಇದಾಗಿರುತ್ತದೆ.

     

    ವಿ ನಾಗೇಂದ್ರ ಪ್ರಸಾದ್ ಕೂಡ ಈ ಚಿತ್ರದಲ್ಲಿ ಸಾಹಿತ್ಯದ ಜೊತೆ ತಂಡದಲ್ಲಿ ಒಬ್ಬರಾಗಿ ಜೊತೆ ಸಾಗುತ್ತಿದ್ದಾರೆ. ಅದಲ್ಲದೆ ತಂತ್ರಜ್ಞರಾಗಿ – ಛಾಯಾಗ್ರಹಕರಾಗಿ ವಿ. ಪವನ್ ಕುಮಾರ್, ಸಂಗೀತ ನಿರ್ದೇಶಕ ಕಿಶೋರ್ ಎಕ್ಸ, ಪ್ರೊಡಕ್ಷನ್ ಡಿಸೈನರ್ ಆಗಿ ನಿರ್ದೇಶಕ ನಟ ಮಂಜುನಾಥ್ ದೈವಜ್ಞ ಹಾಗೂ ತಂತ್ರಜ್ಞರ ಜೊತೆಗೆ ಹೊಸ ಪ್ರತಿಭೆಯಾಗಿ ವಿಶೇಷ ವೆಂಕಟೇಶ್, ವೆಂಕಟೇಶ್ ಗೌಡ, ನಾಗೇಂದ್ರ ಅರಸ್, ಭವಾನಿಪ್ರಕಾಶ್, ಮತ್ತು ಪುಟಾಣಿ ಮಕ್ಕಳು ಕಲಾವಿದರಾಗಿ  ಇನ್ನಿತರೆ ಕಲಾವಿದರೊಂದಿಗೆ ಮುಂದಿನ ದಿನಗಳಲ್ಲಿ ಚಿತ್ರೀಕರಣಕ್ಕೆ ತಯಾರಿಯಲ್ಲಿದೆ ಚಿತ್ರತಂಡ. ತಲಕಾಡಿನ ಸುತ್ತಮುತ್ತಲ್ಲಲ್ಲಿ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಹುಲಿ ನಾಯಕ’ನಿಗೆ ಡಿ.ಜೆ.ಚಕ್ರವರ್ತಿ ಡೈರೆಕ್ಷನ್ : ಟೈಟಲ್ ಅನಾವರಣ ಮಾಡಿದ ಉಪ್ಪಿ

    ‘ಹುಲಿ ನಾಯಕ’ನಿಗೆ ಡಿ.ಜೆ.ಚಕ್ರವರ್ತಿ ಡೈರೆಕ್ಷನ್ : ಟೈಟಲ್ ಅನಾವರಣ ಮಾಡಿದ ಉಪ್ಪಿ

    ರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್. ಡಿ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ (Title) ಅನಾವರಣಗೊಳಿಸಿದ್ದಾರೆ.

    ಚಿತ್ರದ ಹೆಸರು ‘ಹುಲಿ ನಾಯಕ’ (Huli Nayaka) ಎಂದು ಘೋಷಣೆ ಮಾಡಿದ ಉಪೇಂದ್ರ, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ:ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

    ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಚಿತ್ರದ ಪೋಸ್ಟರ್ ರಿಲೀಸ್:  ವಿ.ನಾಗೇಂದ್ರ ಪ್ರಸಾದ್ ಸಾಥ್

    ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಚಿತ್ರದ ಪೋಸ್ಟರ್ ರಿಲೀಸ್: ವಿ.ನಾಗೇಂದ್ರ ಪ್ರಸಾದ್ ಸಾಥ್

    ನ್ನಡ ಚಿತ್ರರಂಗದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ (Devara Hesarinalli Pramana Maduttene). ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಸೆಕೆಂಡ್ ಹಾಫ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾದ ಬರಹಗಾರರಾಗಿ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಗುರುಪ್ರಸಾದ್ ಚಂದ್ರಶೇಖರ್ (Guruprasad Chandrasekhar) ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ವರಮಹಾಲಕ್ಷ್ಮೀ ಹಬ್ಬಕ್ಕೆ ಅನಾವರಣಗೊಂಡಿದೆ.

    ಸೋಷಿಯೋ ಪೊಲಿಟಿಕಲ್ ಲಿಗ್ವಿಸ್ಟಿಕ್ ಡ್ರಾಮಾ ಕಥಾಹಂದರ ಹೊಂದಿರುವ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಸಿನಿಮಾ ಶೂಟಿಂಗ್ ಹಂತದಲ್ಲಿದ್ದು, ಕವಿರತ್ನ ವಿ.ನಾಗೇಂದ್ರ ಪ್ರಸಾದ್ (V. Nagendra Prasad), ಬಾಲ ರಾಜವಾಡಿ, ವೈಜನಾಥ್ ಬಿರಾದಾರ್, ಅಶ್ವಿತಾ ಹೆಗ್ಡೆ, ಡಿಂಪನ ಜೀವನ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಭಾಷೆ ವಿಚಾರದ ಸುತ್ತ ಸಾಗುವ ಈ ಚಿತ್ರಕ್ಕೆ ಬಿ.ಶಿವಶಂಕರ್, ದತ್ತಾತ್ರೇಯ ವಿ ಜಮಾದಾರ್ ಬಂಡವಾಳ ಹೂಡಿದ್ದಾರೆ.

     

    ಶಿವಶಂಕರ್ ನೂರಬಂಡ ಛಾಯಾಗ್ರಹಣ, ಚರಣ್ ಅರ್ಜುನ್ ಸಂಗೀತ, ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಮಧು ತುಂಬಕೆರೆ ಸಂಕಲನ ಚಿತ್ರಕ್ಕಿದೆ. ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಸಿನಿಮಾ ಕನ್ನಡದ ಜೊತೆಗೆ ತೆಲುಗು ಭಾಷೆಯಲ್ಲಿಯೂ ತಯಾರಾಗುತ್ತಿದೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿಯೂ ಹೊಸ ಪೋಸ್ಟರ್ ಹಬ್ಬದ ವಿಶೇಷವಾಗಿ ರಿಲೀಸ್ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

    ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

    ಚೂರಿಕಟ್ಟೆ, ಪೆಂಟಗನ್ ರೀತಿಯ ಹೊಸ ಬಗೆಯ ಸಿನಿಮಾಗಳನ್ನು ನಿರ್ದೇಶಿಸಿರುವ ನಟ ಕಂ ನಿರ್ದೇಶಕ ರಾಘು ಶಿವಮೊಗ್ಗ(Raghu Shivamogga) ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ (Title) ಅನ್ನು ಭೀಮ ದುನಿಯಾ ವಿಜಯ್ (Duniy Vijay) ಅನಾವರಣ ಮಾಡಿ ಶುಭಾಶಯ ಕೋರಿದ್ದಾರೆ.

    ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ ವಿಶೇಷ ಟೈಟಲ್ ಅನ್ನು ಆಯ್ಕೆ ಮಾಡಿಕೊಂಡಿದ್ದು, ಚಿತ್ರಕ್ಕೆ ಅವರು ‘ತುಕ್ರ ತನಿಯ’ (Thukra-Taniya) ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಟ್ಟಿದ್ದಾರೆ. ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. ತನಿಯ ಅಂದರೆ ಶನಿವಾರ ಹುಟ್ಟಿದವನು. ಶುಕ್ರವಾರ-ಶನಿವಾರ ಹುಟ್ಟಿದ ಇಬ್ಬರ ನಡುವಿನ ಕಥಾಹಂದರ ಇದಾಗಿದೆ.

    ಪ್ರವೀಣ್ ತೇಜ್ (Praveen Tej) ಹಾಗೂ ಅಚ್ಯುತ್ ಕುಮಾರ್ (Achyut Kumar) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಪದ್ಮಾ ಪಿಕ್ಚರ್ಸ್ ಹಾಗೂ ಗೌರಿ ಟಾಕೀಸ್ ನಡಿ ನಿರ್ಮಾಣ ಮಾಡಲಾಗುತ್ತಿದೆ. ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಡಿಸೆಂಬರ್ ನಿಂದ ಚಿತ್ರೀಕರಣ ನಡೆಸೋದಿಕ್ಕೆ ಚಿತ್ರತಂಡ ತಯಾರಿ ನಡೆಸಿದೆ. ತುಕ್ರ ತನಿಯ ಸಿನಿಮಾಗೆ ಶಾಂತಿ ಸಾಗರ್ ಛಾಯಾಗ್ರಹಣ, ಕದ್ರಿ ಮಣಿಕಾಂತ್ ಸಂಗೀತ, ಪ್ರಕಾಶ್ ಕಾರಿಂಜ ಸಂಕಲನವಿದೆ.

    ನಿರ್ದೇಶಕನ ಕನಸ್ಹೊತ್ತು ಚಿತ್ರೋದ್ಯಮಕ್ಕೆ ಬಂದಿದ್ದ ರಾಘು, ಮೊದಲು ಚೌಕಬಾರ ಹೆಸರಿನ ಕಿರುಚಿತ್ರ ಮಾಡಿದರು. ಆ ಸಿನಿಮಾವನ್ನು ಥಿಯೇಟರ್ ಗೆ ರಿಲೀಸ್ ಮಾಡಿ, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಈ ಕಿರು ಚಿತ್ರಕ್ಕೆ ಕರ್ನಾಟಕ ಸರಕಾರದ ರಾಜ್ಯ ಪ್ರಶಸ್ತಿ ಕೂಡ ಬಂತು. ಸೈಮಾ ಆವಾರ್ಡ್ ಅನ್ನು ಕೂಡ ಪಡೆದುಕೊಂಡರು. ಕಿರುಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದ ಕಾರಣದಿಂದಾಗಿ ಅವರಿಗೆ ಸಿನಿಮಾ ನಿರ್ದೇಶನ ಮಾಡಲು ಅವಕಾಶ ಸಿಕ್ಕಿತು.

    ಚೂರಿಕಟ್ಟೆ ರಾಘು ನಿರ್ದೇಶನದ ಮೊದಲ ಸಿನಿಮಾ. ಮೊದಲ ಸಿನಿಮಾದಲ್ಲೇ ರಾಘು ಭರವಸೆ ಮೂಡಿಸಿದರು. ಈ ಸಿನಿಮಾ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಯಿತು. ಅವರಿಗೂ ಒಳ್ಳೆಯ ಹೆಸರು ಬಂತು. ನಂತರ ಆಕ್ಟ್ 1978 ಸಿನಿಮಾಗೆ ನಟರಾಗಿ ಪ್ರವೇಶ ಮಾಡಿದರು. ಈ ಸಿನಿಮಾದಲ್ಲಿನ ಪಾತ್ರ ಅವರನ್ನು ಬ್ಯುಸಿ ನಟನನ್ನಾಗಿ ಮಾಡಿತು. ಸಾಕಷ್ಟು ಸಿನಿಮಾಗಳಲ್ಲಿ ನಟನಾಗಿಯೇ ಬ್ಯುಸಿಯಾದರು. ಈಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಗಾಯಕ ಚಂದನ್ ಶೆಟ್ಟಿ (Chandan Shetty) ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತೂಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾಗಿದ್ದರಿಂದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyere ) ಎಂಬ ಶಿರ್ಷಿಕೆಯನ್ನಿಡಲಾಗಿದೆ (Title). ಅದನ್ನು ವಿದ್ಯಾರ್ಥಿಗಳೇ ಬಿಡುಗಡೆಗೊಳಿಸಿ ಸಂಭ್ರಮಿಸಿದ್ದಾರೆ.

    ಇದು ಯುವ ನಿರ್ದೇಶಕ ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರ. ಈ ಹಿಂದೆ ಶ್ರೀಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದವರು ಅರುಣ್. ಅವರೀಗ ಈ ದಿನಮಾನದ ಟ್ರೆಂಡಿಗೆ ತಕ್ಕಂತೆ, ಹೊಸಾ ಬಗೆಯ ಕಥಾನಕದೊಂದಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ರೂಪಿಸಲು ಮುಂದಾಗಿದ್ದಾರಂತೆ. ಈ ಶೀರ್ಷಿಕೆಯ ಅನಾವರಣದ ವಿಚಾರದಲ್ಲಿಯೇ ಚಿತ್ರತಂಡ ಒಂದಷ್ಟು ಕ್ರಿಯಾಶೀಲ ನಡೆಯನ್ನು ಅನುಸರಿಸಿದೆ. ರಾಜ್ಯದ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವತಃ ಈ ಶೀರ್ಷಿಕೆ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಅದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

    ಕಿರಿಕ್ ಪಾರ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಂತಹ ಚಿತ್ರಗಳು ದೊಡ್ಡ ಪ್ರಮಾಣದಲ್ಲಿಯೇ ಗೆಲುವು ದಾಖಲಿಸಿದ್ದವು. ಆ ನಂತರ ಒಂದಷ್ಟು ವರ್ಷಗಳ ಕಾಲ ಆ ಶೈಲಿಯ ಸಿನಿಮಾಗಳು ಬಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ಡೇರ್ ಡೆವಿಲ್ ಮುಸ್ತಫಾದಂತಹ ಕಾಲೇಜು ಕೇಂದ್ರಿತ ಕಥನಗಳು ಸೂಪರ್ ಹಿಟ್ ಆಗಿವೆ. ಈ ಮೂಲಕ ಆ ಬಗೆಯ ಸಿನಿಮಾಗಳ ಕೊರತೆ ಒಂದು ಮಟ್ಟಿಗೆ ನೀಗಿದಂತಾಗಿದೆ. ಈ ಸಾಲಿನಲ್ಲಿ ದೊಡ್ಡ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಕನಸು, ಭರವಸೆಯೊಂದಿಗೆ, ಅರುಣ್ ಅಮುಕ್ತ ಸಾರಥ್ಯದಲ್ಲಿ ಈ ತಂಡ ಅಖಾಡಕ್ಕಿಳಿದಿದೆ. ಅಂದಹಾಗೆ, ಈ ಬಗೆಯ ಸಿನಿಮಾಗಳ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವಂಥಾ ಅನೇಕ ಅಂಶಗಳು ಈ ಚಿತ್ರದಲ್ಲಿರಲಿವೆ ಎಂಬುದು ಚಿತ್ರತಂಡದ ಮಾತು.

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ಭಿನ್ನವಾಗಿ ಕಟ್ಟಿಕೊಡಲು ಚಿತ್ರತಂಡ ತಯಾರಾಗಿದೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

     

    ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಇನ್ನುಳಿದ ಒಂದಷ್ಟು ಮಹತ್ವದ ಸುದ್ದಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿ ನಟಿಯ ಚಿತ್ರಕ್ಕೆ ‘ಸಿ.ಡಿ’ ಎಂದ ಹೆಸರಿಟ್ಟ ತಂಡ

    ದಿ ಕೇರಳ ಸ್ಟೋರಿ ನಟಿಯ ಚಿತ್ರಕ್ಕೆ ‘ಸಿ.ಡಿ’ ಎಂದ ಹೆಸರಿಟ್ಟ ತಂಡ

    ದಿ ಕೇರಳ ಸ್ಟೋರಿ ಯಶಸ್ಸಿನ ನಂತರ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ ಬಾಲಿವುಡ್ (Bollywood)ನಟಿ ಅದಾ ಶರ್ಮಾ (Adah Sharma). ಅವುಗಳಲ್ಲಿ ಒಂದು ಚಿತ್ರಕ್ಕೆ ವಿಚಿತ್ರ ಹೆಸರನ್ನು ಇಡಲಾಗಿದೆ. ಅದು ಹಾರರ್ ಸಿನಿಮಾವಾಗಿದ್ದರಿಂದ ‘ಸಿ.ಡಿ’ (CD) ಎಂದು ಹೆಸರಿಡಲಾಗಿದೆ ಎನ್ನುತ್ತಾರೆ ನಿರ್ದೇಶಕರು. ಸಿಡಿ ಅಂದರೆ ಕ್ರಿಮಿನಲ್ ಅಥವಾ ಡೆವಿಲ್ ಎಂದೂ ಅರ್ಥೈಸಿದ್ದಾರೆ.

    ಟೈಟಲ್ (Title) ಹೊಂದಿರುವ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಅದಾ ಶರ್ಮಾ ಕೆಂಪು ಡ್ರೆಸ್‍ ನಲ್ಲಿದ್ದಾರೆ. ಅವರ ಸುತ್ತಲೂ ಅನೇಕ ಕೈಗಳು ಇವೆ. ಆ ನಟಿ ಗಾಬರಿಗೊಂಡಿದ್ದಾಳೆ ಎಂದು ಬಿಂಬಿಸುವ ಪ್ರಯತ್ನವನ್ನು ಪೋಸ್ಟರ್ ನಲ್ಲಿ ಮಾಡಲಾಗಿದೆ. ಇದೊಂದು ಸೈಕಲಾಜಿಕಲ್ ಮತ್ತು ಹಾರರ್ ಸಿನಿಮಾವಾಗಿದ್ದು, ಕೃಷ್ಣ ಅನ್ನಮ್ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ.

     

    ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ ಟೀಮ್. ಭರಣಿ ಶಂಕರ್, ರೋಹಿ, ಮಹೇಶ್ ವಿಟ್ಟಾ ಸೇರಿದಂತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರ ಪಾತ್ರದ ಬಗ್ಗೆ ಈವರೆಗೂ ಒಂದೇ ಒಂದು ಸುಳಿವನ್ನೂ ಬಿಟ್ಟುಕೊಟ್ಟಿಲ್ಲ ಟೀಮ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನ್ ಶೆಟ್ಟಿ ಹೊಸ ಚಿತ್ರದ ಟೈಟಲ್ ಅನಾವರಣ: ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಪ್ರೈಸ್

    ಚಂದನ್ ಶೆಟ್ಟಿ ಹೊಸ ಚಿತ್ರದ ಟೈಟಲ್ ಅನಾವರಣ: ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಪ್ರೈಸ್

    ಗಾಯಕನಾಗಿ ಪ್ರವರ್ಧಮಾನಕ್ಕೆ ಬಂದು, ಆ ವಲಯದಲ್ಲಿಯೇ ಒಂದಷ್ಟು ಖ್ಯಾತಿ ಪಡೆದಿರುವವರು ಚಂದನ್ ಶೆಟ್ಟಿ (Chandan Shetty). ತಮ್ಮ ವೃತ್ತಿಯಲ್ಲಿ ಬಹು ಬೇಡಿಕೆ ಚಾಲ್ತಿಯಲ್ಲಿರುವಾಗಲೇ ಚಂದನ್ ನಟನೆಯತ್ತ ಮುಖ ಮಾಡಿದ್ದಾರೆ. ಅವರು ನಾಯಕ ನಟನಾಗಿ ನಟಿಸಿರುವ ಒಂದೆರಡು ಸಿನಿಮಾಗಳು ಅಂತಿಮ ಘಟ್ಟದಲ್ಲಿರುವಾಗಲೇ ಚಂದನ್ ಮತ್ತೊಂದು ಸಿನಿಮಾಗೆ (New Movie) ಸಹಿ ಮಾಡಿದ್ದಾರೆ. ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರಲಿರೋ ಈ ಚಿತ್ರದ ಟೈಟಲ್ ಇದೇ 25ರಂದು ಅಂದರೆ, ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಅನಾವರಣಗೊಳ್ಳಲಿದೆ.

    ಇದೇ ಹದಿನೆಂಟನೇ ತಾರೀಕಿನಂದು ಚಿತ್ರತಂಡ ಟೈಟಲ್ ಪ್ರೋಮೋ ಒಂದನ್ನು ಬಿಡುಗಡೆಗೊಳಿಸಿದೆ. ಅದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗಳೂ ಸಿಕ್ಕಿವೆ. ಈ ಮೂಲಕವೇ ಸದರಿ ಚಿತ್ರದ ಶೀರ್ಷಿಕೆ ಏನಿರಬಹುದೆಂಬ ಕುತೂಹಲವೂ ಮೂಡಿದೆ. ಒಂದು ಪ್ರತಿಭಾನ್ವಿತ ಯುವ ತಂಡ, ಒಂದೊಳ್ಳೆ ಕಥೆಯ ಮೂಲಕ ಈ ಸಿನಿಮಾದೊಂದಿಗೆ ಚಂದನ್ ಪ್ರೇಕ್ಷಕರ ಮುಂದೆ ಬರುವ ಲಕ್ಷಣಗಳೂ ದಟ್ಟವಾಗಿವೆ. ಒಟ್ಟಾರೆ ಸಿನಿಮಾ ಹೇಗಿರಬಹುದೆಂಬ ಸಣ್ಣ ಸೂಚನೆ ಈ ಟೈಟಲ್ ಜೊತೆಗೇ ಅನಾವರಣಗೊಳ್ಳುವ ನಿರೀಕ್ಷೆಗಳಿವೆ. ಇದನ್ನೂ ಓದಿ:ಉರ್ಫಿಗೆ ಕೊಲೆ ಬೆದರಿಕೆ: ವ್ಯಕ್ತಿಯ ಹೆಸರು ಬಹಿರಂಗ ಪಡಿಸಿದ ನಟಿ

    ಈ ಹಿಂದೆ ಶ್ರೀಮುರಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಅರುಣ್ ಅಮುಕ್ತ (Arun Mukta). ಮೂಲತಃ ಆಡ್ ಫಿಲಂ ಮೇಕರ್ ಆಗಿರುವ ಅರುಣ್, ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೆಲ್ಲ ಅನುಭವಗಳನ್ನು ಒಗ್ಗೂಡಿಸಿಕೊಂಡು ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರಂತೆ. ಸದ್ಯದ ಮಟ್ಟಿಗೆ ಇದೊಂದು ಟೀನೇಜ್ ಡ್ರಾಮಾ ಆಗಿರಲಿದೆ ಎಂಬ ಸಣ್ಣ ಸುಳಿವು ಚಿತ್ರತಂಡದ ಕಡೆಯಿಂದ ಸಿಕ್ಕಿದೆಯಷ್ಟೇ.

     

    ಈ ಚಿತ್ರದ ತಾರಾಗಣದಲ್ಲಿ ಚಂದನ್ ಶೆಟ್ಟಿ ಜೊತೆಗೆ ಅಮರ್ (Amar), ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ತಾಂತ್ರಿಕ ವರ್ಗವೂ ಸೇರಿದಂತೆ, ಬಹುಮುಖ್ಯವಾದ ಇನ್ನೊಂದಷ್ಟು ವಿಚಾರಗಳನ್ನು ಹಂತ ಹಂತವಾಗಿ ಪ್ರೇಕ್ಷಕರ ಮುಂದಿಡಲು ಚಿತ್ರತಂಡ ತೀರ್ಮಾನಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಟ್ಟುಹಬ್ಬಕ್ಕೆ ‘ಅಧಿಪತ್ರ’ ಹೊರಡಿಸಿದ ರೂಪೇಶ್ ಶೆಟ್ಟಿ : ಸರ್ಕಸ್ ನಂತರ ಇನ್ನೇನಿದ್ರೂ ಸುನಾಮಿನೇ ಎಂದ ಫ್ಯಾನ್ಸ್

    ಹುಟ್ಟುಹಬ್ಬಕ್ಕೆ ‘ಅಧಿಪತ್ರ’ ಹೊರಡಿಸಿದ ರೂಪೇಶ್ ಶೆಟ್ಟಿ : ಸರ್ಕಸ್ ನಂತರ ಇನ್ನೇನಿದ್ರೂ ಸುನಾಮಿನೇ ಎಂದ ಫ್ಯಾನ್ಸ್

    ರ್ಕಸ್ ಎಲ್ಲಾ ಮುಗೀತು ಇನ್ನೇನಿದ್ರೂ ಸುನಾಮಿನೇ ಹೀಗಂತ ರೂಪೇಶ್ ಶೆಟ್ಟಿ (Rupesh Shetty) ಹೇಳುವ ಮೊದಲೇ ಅವರ ಅಭಿಮಾನಿ ಬಳಗ ಸಾರಿ ಸಾರಿ ಹೇಳ್ತಿದೆ. ‘ಶೆಟ್ರೆ ಅಖಾಡನೂ ನಿಮ್ದೆ, ಆಟನೂ ನಿಮ್ದೆ ನುಗ್ತಾಯಿರಿ’ ಅಂತ ಧೈರ್ಯ ತುಂಬುತ್ತಿದೆ. ಭಕ್ತಬಳಗ ಇಷ್ಟೊಂದು  ಸ್ಫೂರ್ತಿ ತುಂಬುವಾಗ, ಅಭಿಮಾನಿ ದೇವರುಗಳು ಇಷ್ಟೊಂದು ಸ್ಥೈರ್ಯ ಹೇಳುವಾಗ ಶೆಟ್ರು ಸುಮ್ನಿರೋದಕ್ಕೆ ಸಾಧ್ಯಾವಾ? ಯಾವುದೇ ಕಾರಣಕ್ಕೂ ಇಲ್ಲ. ಹೀಗಾಗಿಯೇ ರಾಕ್‍ಸ್ಟಾರ್ ರೂಪೇಶ್ ಶೆಟ್ರು ಮೈ ಕೊಡವಿಕೊಂಡು ಅಖಾಡಕ್ಕೆ ಇಳಿದಿದ್ದಾರೆ. ಹೊಸ ಹುರುಪಿನಿಂದ, ಹೊಸ ಹುಮ್ಮಸ್ಸಿನಿಂದ ಹುಟ್ಟುಹಬ್ಬದಂದೇ (Birthday) ಕಣಕ್ಕಿಳಿದಿದ್ದಾರೆ. ಅದು `ಅಧಿಪತ್ರ’ ಹೆಸರಿನ ಹೊಸ ಚಿತ್ರದ ಮೂಲಕ ಎನ್ನುವುದು ವಿಶೇಷ

    ಅಂದ್ಹಾಗೇ, ಇವತ್ತು ರಾಕ್‍ಸ್ಟಾರ್ ರೂಪೇಶ್ ಶೆಟ್ಟಿಯವರ ಹುಟ್ಟುಹಬ್ಬ. ಬರ್ತ್‍ಡೇ ಸಂಭ್ರಮದಲ್ಲಿರೋ ಶೆಟ್ರಿಗೆ `ಅಧಿಪತ್ರ’ (Adhipatra) ಉಡುಗೊರೆಯಾಗಿ ಸಿಕ್ಕಿದೆ. ಹುಟ್ಟುಹಬ್ಬದಂದು ಅಧಿಕೃತವಾಗಿ ಚಿತ್ರ ಘೋಷಣೆಯಾಗಿದೆ. ಚಯನ್ ಶೆಟ್ಟಿ (Chayan Shetty) ಅನ್ನೋರು ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಕೆ.ಆರ್ ಸಿನಿಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಕನ್ನಡದಲ್ಲಿ ಈ ಚಿತ್ರ ಮೂಡಿಬರಲಿದೆ. ಸದ್ಯಕ್ಕೆ ಇಷ್ಟು ಮಾಹಿತಿಯನ್ನ ಪೋಸ್ಟರ್ ಮೂಲಕ ಹಂಚಿಕೊಂಡಿರುವ ಚಿತ್ರತಂಡ, ಶೀರ್ಷಿಕೆಯಿಂದಲೇ ಚಿತ್ರಪ್ರೇಮಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ನಮಗೆಲ್ಲ ಅಧಿಪತಿ ಬಗ್ಗೆ ಗೊತ್ತಿದೆ, ಇದೇನಿದು `ಅಧಿಪತ್ರ’ ಅಂತ ಕಲಾಭಿಮಾನಿಗಳು ಕುತೂಹಲದ ಹುಳಬಿಟ್ಕೊಂಡು ತಲೆಕೆಡಿಸಿಕೊಳ್ಳುವಂತಾಗಿದೆ.

    ಟೈಟಲ್ ಮೂಲಕವೇ ಇಷ್ಟೊಂದು ಕುತೂಹಲ ಮೂಡಿಸಿರೋ ರೂಪೇಶ್ ಶೆಟ್ರು `ಅಧಿಪತ್ರ’ನಾಗಿ ಯಾವ ಅವತಾರ ತಾಳುತ್ತಾರೋ? `ಅಧಿಪತ್ರ’ನ ಪಕ್ಕದಲ್ಲಿ ಅದ್ಯಾವ ಮುದ್ದುಬೊಂಬೆ ನಾಯಕಿಯಾಗಿ ನಿಂತು ಸೌಂಡ್ ಮಾಡುತ್ತಾಳೋ ಗೊತ್ತಿಲ್ಲ. ಆದರೆ, ಸರ್ಕಸ್ ಮೂಲಕ ರೂಪೇಶ್ ಶೆಟ್ರು ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದ್ದಾರೆ. ಬಿಗ್‍ಬಾಸ್ ಮನೆಯಿಂದ ಹೊರಬಂದು `ಸರ್ಕಸ್’ ಹೆಸರಿನ ಸಿನಿಮಾಗೆ ಬಣ್ಣ ಹಚ್ಚಿದ ರೂಪೇಶ್, ನಿರ್ದೇಶನ, ನಿರ್ಮಾಣದ ಜವಬ್ದಾರಿ ಹೊತ್ತುಕೊಂಡರು. ತಾನೇನು, ತನ್ನ ತಾಕತ್ತೇನು ಎಂಬುದನ್ನ ಪ್ರೂ ಮಾಡಲು ಪಣತೊಟ್ಟರು. ಅದರಂತೇ ತುಳು ಭಾಷೆಯಲ್ಲಿ `ಸರ್ಕಸ್’ ಮಾಡಿ ಸಪ್ತಸಾಗರ ದಾಟಿದ್ದಾರೆ. ಕರ್ನಾಟಕ ಮಾತ್ರವಲ್ಲ ದುಬೈ, ಅಬುದಾಬಿ, ಪುಣೆ, ಕತಾರ್ ಸೇರಿದಂತೆ ಹತ್ತಾರು ಕಂಟ್ರಿಗಳಲ್ಲಿ `ಸರ್ಕಸ್’ ರಿಲೀಸ್ ಮಾಡಿ ಸಕ್ಸಸ್ ಕಂಡಿದ್ದಾರೆ. ಇದನ್ನೂ ಓದಿ:D51: ಧನುಷ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಹೀರೋಯಿನ್

    ಅಚ್ಚರಿ ಅಂದರೆ `ಸರ್ಕಸ್’ ಬಿಡುಗಡೆಗೊಂಡು 50 ದಿನ ಕಳೆದಿದೆ, ಆದರೆ, ಥಿಯೇಟರ್ ನಲ್ಲಿ ಸಿನಿಮಾ ಈಗಲೂ ಹೌಸ್‍ಫುಲ್ ಪ್ರದರ್ಶನ ಕಾಣ್ತಿದೆ. ರೂಪೇಶ್ ಶೆಟ್ರ ಶ್ರಮಕ್ಕೆ ಯಶಸ್ಸಿನ ಜೊತೆಗೆ ಝಣಝಣ ಕಾಂಚಾಣವೂ ಹರಿದುಬರುತ್ತಿದೆ. ಇದರ ಬೆನ್ನಲ್ಲೇ ರಾಕ್‍ಸ್ಟಾರ್ ರೂಪೇಶ್ `ಅಧಿಪತ್ರ’ನಾಗಿ ಗಂಧದಗುಡಿಗೆ ಅಡಿಯಿಡಲು ರೆಡಿಯಾಗಿದ್ದಾರೆ. ತುಳು ಮಾತ್ರವಲ್ಲ ಕನ್ನಡದಲ್ಲೂ ಒಳ್ಳೊಳ್ಳೆ ಸಿನಿಮಾ ಮಾಡಬೇಕು ಅದನ್ನು ಕರ್ನಾಟಕದ ಮೂಲೆಮೂಲೆಗೆ ತಲುಪಿಸಬೇಕು. ಹೊರರಾಜ್ಯ, ಹೊರದೇಶದಲ್ಲೂ ನನ್ನ ಸಿನಿಮಾಗಳು ಸದ್ದು ಮಾಡಬೇಕು ಎನ್ನುವ ಕನಸು ಕಂಡಿದ್ದಾರೆ. ಈಗಾಗಲೇ ಸರ್ಕಸ್ ಮೂಲಕ ಗಡಿದಾಟಿ ಗಹಗಹಿಸಿರೋ ರೂಪೇಶ್, ಕನ್ನಡ ಸಿನಿಮಾದ ಮೂಲಕ ಸಪ್ತಸಾಗರ ದಾಟುವ ಹಂಬಲದಲ್ಲಿದ್ದಾರೆ. ಅದನ್ನು `ಅಧಿಪತ್ರ’ದ ಮೂಲಕ ಈಡೇರಿಸಿಕೊಳ್ತಾರಾ ಕಾದುನೋಡಬೇಕಿದೆ.

    ಅಧಿಪತ್ರ ಸಿನಿಮಾದ ಶೂಟಿಂಗ್ ಸೆಪ್ಟೆಂಬರ್‍ನಿಂದ ಆರಂಭಗೊಳ್ಳಲಿದೆ. ಡೇಂಜರ್ ಝೋನ್, ಸ್ಮೈಲ್ ಪ್ಲೀಸ್, ನಿಶ್ಯಬ್ದ-2, ಅನುಷ್ಕಾ ಸೇರಿದಂತೆ ಕನ್ನಡದಲ್ಲಿ ಕೆಲ ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ಆದರೆ, ತುಳು ಸಿನಿಮಾಗಳಿಂದ ಸಿಕ್ಕಂತಹ ಯಶಸ್ಸು ರೂಪೇಶ್‍ಗೆ ಕನ್ನಡ ಚಿತ್ರಗಳಿಂದ ಸಿಕ್ಕಿಲ್ಲ. ಹೀಗಾಗಿ, ಕನ್ನಡ ಭಾಷೆಯ ಸಿನಿಮಾದ ಮೂಲಕ ದೊಡ್ಡ ಮಟ್ಟದ ಯಶಸ್ಸಿನ ನಿರೀಕ್ಷೆಯಲ್ಲಿದ್ದಾರೆ. ಬಿಗ್‍ಬಾಸ್ ಸೀಸನ್ 9 ವಿನ್ನರ್ ಆದ್ಮೇಲೆ ರೂಪೇಶ್ ಶೆಟ್ಟಿ ಕರ್ನಾಟಕದ ಮೂಲೆ ಮೂಲೆ ತಲುಪಿದ್ದಾರೆ. ಅಪಾರ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಹೀಗಾಗಿ, ಮುಂದಿನ ಕನ್ನಡ ಸಿನಿಮಾಗಳ ಮೂಲಕ ರೂಪೇಶ್ ಶೆಟ್ಟಿ ಗೆದ್ದು ಬೀಗೋದು ಗ್ಯಾರಂಟಿ ಎನ್ನುವ ಭರವಸೆಯಿದೆ. ಹತ್ತು ವರ್ಷದ ಸರ್ಕಸ್‍ಗೆ ಸಕ್ಸಸ್ ಸಿಕ್ಕಿದೆ. ಇನ್ನೇನಿದ್ರು ಸುನಾಮಿ ಎಬ್ಬಿಸಿ ಸಾಮ್ರಾಜ್ಯ ಕಟ್ಟೋದಷ್ಟೇ ಬಾಕಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್ ಹುಟ್ಟು ಹಬ್ಬಕ್ಕೆ ‘ಕಿಚ್ಚ 46’ ಸಿನಿಮಾದ ಟೈಟಲ್ ಲಾಂಚ್

    ಸುದೀಪ್ ಹುಟ್ಟು ಹಬ್ಬಕ್ಕೆ ‘ಕಿಚ್ಚ 46’ ಸಿನಿಮಾದ ಟೈಟಲ್ ಲಾಂಚ್

    ಸುದೀಪ್ (Sudeep) ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಈಗಾಗಲೇ ‘ಕಿಚ್ಚ 46’ ಹೆಸರಿನಲ್ಲಿ ಶೂಟಿಂಗ್ ಶುರು ಮಾಡಿರುವ ಚಿತ್ರದ ಹೆಸರನ್ನು ಅವರ ಹುಟ್ಟು ಹಬ್ಬದ ದಿನದಂದು ಲಾಂಚ್ ಮಾಡುವ ಸುದ್ದಿ ಹೊರ ಬಿದ್ದಿದೆ. ಸೆಪ್ಟಂಬರ್ 2 ರಂದು ಸುದೀಪ್ ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಹೊಸ ಸಿನಿಮಾದ ಟೈಟಲ್ ಘೋಷಣೆ ಆಗಲಿದೆ ಎನ್ನುವ ಮಾಹಿತಿ ಇದೆ.

    ಸದ್ಯ ಸುದೀಪ್ ಚೆನ್ನೈನಲ್ಲಿ ಬೀಡು ಬಿಟ್ಟಿದ್ದಾರೆ. ತಮಿಳುನಾಡಿನಲ್ಲಿ ಕನ್ನಡದ ಕಹಳೆ ಊದಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಹೀರೋ ಆಗಿದ್ದರೂ ಕನ್ನಡ ನಾಡಿನ ಋಣ ತೀರಿಸಲು ಏನು ಮಾಡಬೇಕೊ ಎಲ್ಲವನ್ನೂ ಮುಗಿಸಿದ್ದಾರೆ. `ಕೆ-46′ (K-46) ಚಿತ್ರದಲ್ಲಿ ಈ ಕಾಯಕ ಮಾಡಿ ಕನ್ನಡಿಗರಿಂದ ಶಹಬ್ಬಾಶ್‌ ಗಿರಿ ಪಡೆದಿದ್ದಾರೆ. ಇದನ್ನೂ ಓದಿ:ಸಕ್ಸಸ್ ಸೀಕ್ರೆಟ್ ಬಿಚ್ಚಿಟ್ಟ ನಟಿ- ಡಿಸೆಂಬರ್ ನನ್ನ ಲಕ್ಕಿ ತಿಂಗಳು ಎಂದ ರಶ್ಮಿಕಾ ಮಂದಣ್ಣ

    ಇದು ಕಿಚ್ಚನ ಹೊಸ ಸಿನಿಮಾ (New Cinema). ಟೈಟಲ್ ಇನ್ನೂ ಇಟ್ಟಿಲ್ಲ. ಇದರ ಶೂಟಿಂಗ್‌ಗಾಗಿ ಚೆನ್ನೈನ (Chennai) ಮಹಾಬಲಿಪುರಂನಲ್ಲಿ ಹಾಕಿದ ಸೆಟ್‌ನಲ್ಲಿ ಕಾರ್ಯ ನಿರತರಾಗಿದ್ದಾರೆ. ಇಲ್ಲಿಂದಲೇ ಅದೊಂದು ಮಹಾ ಗುಟ್ಟು ಹೊರ ಬಿದ್ದಿದೆ. ಇದರ ನಿರ್ಮಾಪಕ ಎಸ್ ಥಾನು (S Thanu), ನಿರ್ದೇಶಕ ವಿಜಯ್ (Vijay). ಇಬ್ಬರದೂ ತಮಿಳು ಮೂಲ. ಆದರೆ ಶೂಟಿಂಗ್ ಸೆಟ್‌ನಲ್ಲಿ ಬಹುತೇಕರು ಕನ್ನಡಿಗರೇ. ಅದಕ್ಕೆ ಕಾರಣ ಸುದೀಪ್. ತಮಿಳು ಭಾಷೆಯಲ್ಲೇ ಶೂಟಿಂಗ್ ಮಾಡೋಣ ಎಂದಿದ್ದ ನಿರ್ಮಾಪಕರ ಮಾತನ್ನು ಸುದೀಪ್ ನಿರಾಕರಿಸಿದ್ದು ಮೂಲ ಹೂರಣ.

    ‘ಮೊದಲು ಕನ್ನಡ ಭಾಷೆಯಲ್ಲೇ ಶೂಟಿಂಗ್ ಮಾಡೋಣ. ನಂತರ ಅದನ್ನು ತಮಿಳಿಗೆ ಡಬ್ ಮಾಡೋಣ’ ಹೀಗಂತ ಸುದೀಪ್ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ತಾಕೀತು ಮಾಡಿದ್ದಾರಂತೆ. ಅದೇ ರೀತಿ ಕೆಲಸ ನಡೆಯುತ್ತಿದೆ. ಕೆಲವು ಹೀರೋಗಳು ತಮಿಳು ಸಿನಿಮಾ ಸಿಕ್ಕಿದ ಮಾತ್ರಕ್ಕೆ ಹುಟ್ಟಿದ ನೆಲ ಮರೆಯುತ್ತಾರೆ. ಆದರೆ ಸುದೀಪ್ ಹಾಗೆ ಮಾಡಿಲ್ಲ. ಮಾಡುವುದೂ ಇಲ್ಲ. ಅದರ ಪರಿಣಾಮ ಕಣ್ಣ ಮುಂದಿದೆ. ಕನ್ನಡ ನಾಡಿನ ಜನರು ಕೇಕೆ ಹಾಕುವಂತೆ ಮಾಡಿದೆ.

     

    ಈ ಸಿನಿಮಾಗಾಗಿ ಸುದೀಪ್ ಒಂದೇ ಹಂತದ ಶೂಟಿಂಗ್ ಮಾಡಲು ತಯಾರಿ ಮಾಡಿಕೊಂಡಿದ್ದಾರಂತೆ. ಅಂದುಕೊಂಡಂತೆ ಶೂಟಿಂಗ್ ಮಾಡಿ, ಇದೇ ವರ್ಷವೇ ಸಿನಿಮಾವನ್ನು ತೆರೆಗೆ ತರಲು ಸಿದ್ದತೆ ಕೂಡ ಮಾಡಿಕೊಂಡಿದ್ದಾರಂತೆ. ಸುದೀಪ್ ಸಿನಿಮಾಗಾಗಿ ಕಾದ ಅಭಿಮಾನಿಗಳಿಗೆ ನಿಜಕ್ಕೂ ಇದೊಂದು ಗುಡ್ ನ್ಯೂಸ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿತಿನ್ ಚಿತ್ರಕ್ಕೆ ಟೈಟಲ್ ಫಿಕ್ಸ್: ‘ಎಕ್ಸ್ಟ್ರಾಡಿನರಿ ಮ್ಯಾನ್’ಗೆ ಶ್ರೀಲೀಲಾ ನಾಯಕಿ

    ನಿತಿನ್ ಚಿತ್ರಕ್ಕೆ ಟೈಟಲ್ ಫಿಕ್ಸ್: ‘ಎಕ್ಸ್ಟ್ರಾಡಿನರಿ ಮ್ಯಾನ್’ಗೆ ಶ್ರೀಲೀಲಾ ನಾಯಕಿ

    ತೆಲುಗು ಚಿತ್ರರಂಗದ ಪ್ರಾಮಿಸಿಂಗ್ ಹೀರೋ‌ ನಿತಿನ್ (Nikhil)  32ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವಕ್ಕಂತಂ ವಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ‘ಎಕ್ಸ್ಟ್ರಾಡಿನರಿ ಮ್ಯಾನ್’ (Extraordinary Man) ಎಂಬ ಕ್ಯಾಚಿ ಟೈಟಲ್ (Title) ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್ ನ ಒಂದು‌ ಫೋಟೋದಲ್ಲಿ ನಿತಿನ್ ಗಡ್ಡ, ಕೂದಲು ಬಿಟ್ಟು ರಗಡ್ ಆಗಿ ಕಾಣಿಸಿಕೊಂಡಿದ್ರೆ, ಮತ್ತೊಂದು ಫೋಟೋದಲ್ಲಿ ಸ್ಟೈಲೀಶ್ ಆಗಿ ಮಿಂಚಿದ್ದಾರೆ. ಎರಡು ಶೇಡ್‌ನಲ್ಲಿ ನಾಯಕನನ್ನು ಪರಿಚಯ ಮಾಡಿಕೊಡಲಾಗಿದೆ. ಹಿಂದೆಂದೂ ಕಾಣದ ವಿಭಿನ್ನ ಪಾತ್ರದಲ್ಲಿ ನಿತಿನ್ ನಟಿಸಿದ್ದಾರೆ.

    ಎಕ್ಸ್ಟ್ರಾಡಿನರಿ ಮ್ಯಾನ್ ಔಟ್ ಅಂಡ್ ಔಟ್ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು, ಈಗಾಗಲೇ ಶೇಕಡಾ 60ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಲಾಗಿದೆ. ಇನ್ನು, ನಿತಿನ್ ಗೆ ಜೋಡಿಯಾಗಿ ಮೋಸ್ಟ್ ಹ್ಯಾಪನಿಂಗ್ ನಟಿ ಶ್ರೀಲೀಲಾ (Sreeleela, ) ನಟಿಸುತ್ತಿದ್ದಾರೆ. ಇದನ್ನೂ ಓದಿ:ದುಬೈನಲ್ಲಿ ಬಿಗ್ ಬಾಸ್ ದೀಪಿಕಾ ದಾಸ್ ಮೋಜು-ಮಸ್ತಿ

    ಈ ಮೊದಲು ಈ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿರುವುದಾಗಿ ಚಿತ್ರತಂಡ ತಿಳಿಸಿತ್ತು. ನಿತಿನ್- ರಶ್ಮಿಕಾ ನಟನೆಯ ‘ಭೀಷ್ಮ’ ಸಿನಿಮಾ ಹಿಟ್ ಆಗಿತ್ತು. ಹಾಗಾಗಿ ಅದೇ ಕಾಂಬಿನೇಷನ್‌ನಲ್ಲಿ ಮತ್ತೊಂದು ಸಿನಿಮಾ ಘೋಷಣೆ ಆಗಿತ್ತು. ಚಿತ್ರದಲ್ಲಿ ರಶ್ಮಿಕಾ ನಟಿಸೋದು ಕನ್ಫರ್ಮ್ ಆಗಿತ್ತು. ಸಿನಿಮಾ ಮುಹೂರ್ತ ಸಮಾರಂಭದಲ್ಲೂ ರಶ್ಮಿಕಾ ಭಾಗಿ ಆಗಿದ್ದರು. ಡೇಟ್ಸ್ ಕಾರಣದಿಂದ ರಶ್ಮಿಕಾ ಚಿತ್ರದಿಂದ ಹೊರ ನಡೆದಿದ್ದು, ಆ ಜಾಗಕ್ಕೆ ಶ್ರೀಲೀಲಾ ಎಂಟ್ರಿಯಾಗಿದೆ.

    ಸುಧಾಕರ್ ರೆಡ್ಡಿ ಹಾಗೂ ನಿಖಿತಾ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿರುವ ಎಕ್ಸ್ಟ್ರಾಡಿನರಿ ಮ್ಯಾನ್ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ತಯಾರಾಗುತ್ತಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರುತ್ತಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಅನೌನ್ಸ್ ಮಾಡಿರುವ ಚಿತ್ರತಂಡ ಬಿಡುಗಡೆ ದಿನಾಂಕವನ್ನೂ ಸಹ ತಿಳಿಸಿದೆ. ಇದೇ ವರ್ಷಾಂತ್ಯಕ್ಕೆ ಅಂದರೆ ಡಿಸೆಂಬರ್ 23ಕ್ಕೆ ಎಕ್ಸ್ಟ್ರಾಡಿನರಿ ಮ್ಯಾನ್ ಸಿನಿಮಾ ತೆರೆಗೆ ಬರಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]