Tag: title

  • ಯುವ ರಾಜ್‌ಕುಮಾರ್‌ ಸಿನಿಮಾದ ಟೈಟಲ್: ‘ಜ್ವಾಲಾಮುಖಿ’ನಾ? ಅಥವಾ ‘ಅಶ್ವಮೇಧ’ನಾ?

    ಯುವ ರಾಜ್‌ಕುಮಾರ್‌ ಸಿನಿಮಾದ ಟೈಟಲ್: ‘ಜ್ವಾಲಾಮುಖಿ’ನಾ? ಅಥವಾ ‘ಅಶ್ವಮೇಧ’ನಾ?

    ಇಂದು ಸಂಜೆ 6.55ಕ್ಕೆ ಯುವ ರಾಜ್‌ಕುಮಾರ್‌ (Yuva Rajkumar) ನಟನೆಯ ಚೊಚ್ಚಲು ಸಿನಿಮಾದ ಟೈಟಲ್ ಟೀಸರ್ ಅನಾವರಣಗೊಳ್ಳುತ್ತಿದೆ. ಟೀಸರ್ ಬಿಡುಗಡೆ ಕ್ಷಣಗಣನೆಯ ಹೊತ್ತಿನಲ್ಲಿ ಚಿತ್ರದ ಟೈಟಲ್ (Title) ಏನಿರಬಹುದು ಎನ್ನುವ ಚರ್ಚೆ ಶುರುವಾಗಿದೆ. ಜೊತೆಗೆ ಎರಡು ಶೀರ್ಷಿಕೆಗಳು ಕೂಡ ಗಾಂಧಿನಗರದಲ್ಲಿ ಕೇಳಿ ಬರುತ್ತಿವೆ. ಡಾ.ರಾಜ್‌ಕುಮಾರ್‌ ನಟನೆಯ ‘ಅಶ್ವಮೇಧ’ (Ashwamedha) ಅಥವಾ ‘ಜ್ವಾಲಾಮುಖಿ’ (Jwalamukhi) ಚಿತ್ರಗಳ ಹೆಸರನ್ನೇ ಯುವ  ಸಿನಿಮಾಗೆ ಇಡಲಾಗಿದೆ ಎಂದು ಕೇಳಿ ಬರುತ್ತಿದೆ.

    ಡಾ.ರಾಜ್ ಕುಟುಂಬದ ಅಭಿಮಾನಿಗಳು ಕೂಡ ಈ ಎರಡೂ ಹೆಸರಿನ ಪೋಸ್ಟರ್ ಗಳನ್ನು ತಮ್ಮದೇ ಆದ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಈ ಎರಡು ಶೀರ್ಷಿಕೆಗಳಲ್ಲಿ ಒಂದಂತೂ ಪಕ್ಕಾ ಎಂದೇ ಹೇಳಲಾಗುತ್ತಿದೆ. ಅಲ್ಲದೇ, ಜ್ವಾಲಮುಖಿಯೇ ಫಿಕ್ಸ್ ಆಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಸಹಜವಾಗಿಯೇ ಟೈಟಲ್ ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಯಾವ ಟೈಟಲ್ ಅನ್ನು ಚಿತ್ರತಂಡ ಘೋಷಿಸಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ಹೃತಿಕ್ ರೋಷನ್- ಸಬಾ ಮದುವೆ ಬಗ್ಗೆ ಇಲ್ಲಿದೆ ಬಿಗ್ ಅಪ್‌ಡೇಟ್

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್‌ಕುಮಾರ್‌ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 14 ದಿನ ಬಾಕಿ ಇರುವಾಗಲೇ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಶುಕ್ರವಾರ ಸಂಜೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜ್‌ಕುಮಾರ್‌ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜ್ ಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್  ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    ಅಂದುಕೊಂಡಂತೆ ಆಗಿದ್ದರೆ ಯುವ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ಪ್ರತಿಷ್ಠಿತ ಹೋಟೆಲ್ ನಲ್ಲಿ ಯುವರಾಜ ಚಿತ್ರದ ಟೈಟಲ್ ಲಾಂಚ್: ಯಾರೆಲ್ಲ ಗೆಸ್ಟ್?

    ಪ್ರತಿಷ್ಠಿತ ಹೋಟೆಲ್ ನಲ್ಲಿ ಯುವರಾಜ ಚಿತ್ರದ ಟೈಟಲ್ ಲಾಂಚ್: ಯಾರೆಲ್ಲ ಗೆಸ್ಟ್?

    ಯುವರಾಜಕುಮಾರ್ (Yuva Rajkumar) ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ (Santosh Anand Ram) ಕಾಂಬಿನೇಷನ್ ನ ಮೊದಲ ಸಿನಿಮಾದ ಟೈಟಲ್ (Title) ಲಾಂಚ್ ಟೀಸರ್ ಇಂದು ರಿಲೀಸ್ ಆಗುತ್ತಿದೆ. ಸಂಜೆ ಸಿನಿಮಾದ ಮುಹೂರ್ತ ಮುಗಿಸಿಕೊಂಡು ನಂತರ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಖಾಸಗಿಯಾಗಿ ಟೀಸರ್ ಲಾಂಚ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅಭಿಮಾನಿಗಳಿಗೆ ಎರಡು ಕಡೆ ಟೈಟಲ್ ಟೀಸರ್ ನೋಡಲು ಅವಕಾಶ ಕಲ್ಪಿಸಲಾಗಿದ್ದು, ಚಿತ್ರತಂಡಕ್ಕೆ ಮತ್ತು ಡಾ.ರಾಜ್ ಕುಟುಂಬಕ್ಕಾಗಿ ಹೋಟೆಲ್ ವೊಂದರಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

    ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್,  ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬವೇ ಸೇರಲಿದೆ. ಅಲ್ಲದೇ, ನಿರ್ಮಾಪಕ ವಿಜಯ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ರಮ್ಯಾ ಕೂಡ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಚಿತ್ರತಂಡದ ಸದಸ್ಯರು, ಹೊಂಬಾಳೆ ಫಿಲ್ಮ್ಸ್ ಸಿಬ್ಬಂದಿ ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು ಸಂಜೆ 5 ಗಂಟೆಗೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6.55ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.  ಅಲ್ಲದೇ, ಕುರುಬರಹಳ್ಳಿಯ ಡಾ.ರಾಜ್ ಪ್ರತಿಮೆಯ ಮುಂದೆಯೇ ಟೀಸರ್ ತೋರಿಸಲಾಗುತ್ತಿದೆ.  ಇದನ್ನೂ ಓದಿ: ಸದ್ದಿಲ್ಲದೇ ʻಟೋಬಿʼ ಚಿತ್ರದ ಶೂಟಿಂಗ್‌ ಮುಗಿಸಿದ ರಾಜ್‌ ಬಿ ಶೆಟ್ಟಿ

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    Yuvaraj Kumar

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • Exclusive Details- ಇಂದು ಯುವರಾಜ ಹೊಸ ಚಿತ್ರದ ಟೈಟಲ್, ಟೀಸರ್ ಅನಾವರಣ

    Exclusive Details- ಇಂದು ಯುವರಾಜ ಹೊಸ ಚಿತ್ರದ ಟೈಟಲ್, ಟೀಸರ್ ಅನಾವರಣ

    ಯುವರಾಜಕುಮಾರ್ (Yuva Rajkumar) ಹೊಸ ಸಿನಿಮಾದ ಮಹತ್ವದ ವಿಷಯಗಳು ಇಂದು ಅನಾವರಣಗೊಳ್ಳಲಿವೆ. ಕಳೆದ ಒಂದು ವರ್ಷದಿಂದ ಈ ಸಿನಿಮಾದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹೊರ ಬರುತ್ತಿದ್ದವು. ಇಂದು ನಾಳೆ ಅಂದುಕೊಂಡು ಒಂದು ವರ್ಷಗಳ ಕಾಲ ಸಿನಿಮಾದ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಇವತ್ತು ಹಲವು ವಿಚಾರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ಅಲ್ಲಿಗೆ ಅಧಿಕೃತ ಮಾಹಿತಿಗಳು ಹೊರಬೀಳಲಿವೆ.

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು ಸಂಜೆ 5.45 ಗಂಟೆಗೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6.55ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.  ಅಲ್ಲದೇ, ಕುರುಬರಹಳ್ಳಿಯ ಡಾ.ರಾಜ್ ಪ್ರತಿಮೆಯ ಮುಂದೆಯೇ ಟೀಸರ್ ತೋರಿಸಲಾಗುತ್ತಿದೆ. ಇದನ್ನೂ ಓದಿ: ಮತ್ತೆ ಕಿರುತೆರೆಗೆ ಮರಳಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾಮ್ (Santhosh Anand Ram) ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ನಾಳೆಯೇ ರಿಲೀಸ್ ಆಗಲಿದೆ ಯುವರಾಜ ನಟನೆಯ ಹೊಸ ಚಿತ್ರದ ಟೀಸರ್

    ನಾಳೆಯೇ ರಿಲೀಸ್ ಆಗಲಿದೆ ಯುವರಾಜ ನಟನೆಯ ಹೊಸ ಚಿತ್ರದ ಟೀಸರ್

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ (Yuva Rajkumar) ನಟನೆಯ ಹೊಸ ಸಿನಿಮಾದ ಮುಹೂರ್ತ ನಾಳೆ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ (Title) ಮತ್ತು ಟೀಸರ್ (Teaser) ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films)ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ (Santhosh Anand Ram) ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ. ಇದನ್ನೂ ಓದಿ:`ಸಿಟಾಡೆಲ್’ ಫಸ್ಟ್ ಲುಕ್ ಔಟ್: ಆ್ಯಕ್ಷನ್ ಅವತಾರದಲ್ಲಿ ಪ್ರಿಯಾಂಕಾ ಚೋಪ್ರಾ

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ಐಎಎಸ್-ಐಪಿಎಸ್ ಕಿತ್ತಾಟ ಸಿನಿಮಾ : ಟೈಟಲ್ ಕೊಡುತ್ತಾ ಫಿಲ್ಮ್ ಚೇಂಬರ್?

    ಐಎಎಸ್-ಐಪಿಎಸ್ ಕಿತ್ತಾಟ ಸಿನಿಮಾ : ಟೈಟಲ್ ಕೊಡುತ್ತಾ ಫಿಲ್ಮ್ ಚೇಂಬರ್?

    ಪಿಎಸ್ ಮತ್ತು ಐಎಎಸ್ ಮಹಿಳಾ ಅಧಿಕಾರಿಗಳ ಕಿತ್ತಾಟಕ್ಕೆ ಸಂಬಂಧಿಸಿದಂತೆ ಇಬ್ಬರು ನಿರ್ಮಾಪಕರು ಸಿನಿಮಾ ಮಾಡಲು ಮುಂದೆ ಬಂದಿದ್ದು, ಆ ಸಿನಿಮಾಗೆ ಟೈಟಲ್ ಕೊಡುವಂತೆ ಮೊನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿಯ ಕುರಿತಂತೆ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದ್ದು, ನಿರ್ಮಾಪಕರು ಕೇಳಿರುವ ಶೀರ್ಷಿಕೆಯನ್ನು ವಾಣಿಜ್ಯ ಮಂಡಳಿ ನೀಡುತ್ತಾ ಎನ್ನುವ ಕುತೂಹಲ ಮೂಡಿದೆ.

    ಜನರ ಮನಸ್ಸನ್ನು ಸೆಳೆದ ಘಟನೆಗಳನ್ನು ಆಧರಿಸಿ ಸಿನಿಮಾಗಳು ಬರುವುದು ಹೊಸದೇನೂ ಅಲ್ಲ. ಅದರಲ್ಲೂ ಕಾಂಟ್ರವರ್ಸಿ ಆಗಿರುವಂತಹ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲು ನಾಮುಂದು ತಾಮುಂದು ಎಂದು ಬಂದವರ ಸಂಖ್ಯೆ ಕಡಿಮೆಯೇನೂ ಇಲ್ಲ. ಇದೀಗ ಅದಕ್ಕೆ ಹೊಸ ಸೇರ್ಪಡೆ ಐಎಎಸ್, ಐಪಿಎಸ್ ಅಧಿಕಾರಿಗಳ ಜಗಳ. ನಾಲ್ಕೈದು ದಿನಗಳ ಕಾಲ ಸಾಕಷ್ಟು ಸುದ್ದಿಯಾಗಿದ್ದ ಘಟನೆಯನ್ನು ಆಧರಿಸಿ ಸಿನಿಮಾ ಮಾಡಲು ಇಬ್ಬರು ನಿರ್ಮಾಪಕರು ಮುಂದೆ ಬಂದಿದ್ದಾರೆ.

    ಇಬ್ಬರು ಮಹಿಳಾ ಅಧಿಕಾರಿಗಳು ನಾಲ್ಕೈದು ದಿನಗಳ ಕಾಲ ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದು ಎಲ್ಲರಿಗೂ ತಿಳಿದೇ ಇದೆ. ಇದೀಗ ಅದೇ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿದ್ದಾರೆ. ಸಿನಿಮಾದ ಟೈಟಲ್ ಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿಯನ್ನೂ ಹಾಕಿದ್ದಾರೆ. ಒಂದು ಸಿನಿಮಾದ ಟೈಟಲ್ ಅಧಿಕಾರಿಗಳ ಹೆಸರನ್ನು ಒಳಗೊಂಡಿದ್ದರೆ, ಮತ್ತೊಂದು ಸಿನಿಮಾದ ಟೈಟಲ್ ಆರ್ ವರ್ಸಸ್ ಆರ್ ಎಂದು ಇಟ್ಟಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಟೈಟಲ್ ಗಾಗಿ ಅರ್ಜಿ ಸಲ್ಲಿಸಿದ್ದರ ಕುರಿತು ವಾಣಿಜ್ಯ ಮಂಡಳಿಯ ಅಧ್ಯಕ್ಷರೇ ಖಚಿತ ಪಡಿಸಿದ್ದು ಟೈಟಲ್ ಕಮೀಟಿ ಮುಂದೆ ಇಟ್ಟು ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ. ಒಂದು ಸಿನಿಮಾವನ್ನು ಬಿಯಾಂಡ್ ಡ್ರೀಮ್ಸ್ ಸಂಸ್ಥೆ ನಿರ್ಮಿಸಲು ಮುಂದೆ ಬಂದಿದ್ದರೆ, ಮತ್ತೊಂದು ಚಿತ್ರದ ಟೈಟಲ್ ಗಾಗಿ ಪ್ರವೀಣ್ ಶೆಟ್ಟಿ ಎನ್ನುವ ನಿರ್ಮಾಪಕರು ಅರ್ಜಿ ಸಲ್ಲಿಸಿದ್ದಾರೆ. ಎರಡೂ ಅರ್ಜಿಗಳು ಟೈಟಲ್ ಕಮಿಟಿ ಮುಂದೆ ಇಂದು ಬಂದಿವೆ. ಟೈಟಲ್ ಕೊಡುತ್ತಾ ಅಥವಾ ತಿರಸ್ಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕು.

  • ಐಪಿಎಸ್, ಐಎಎಸ್ ಅಧಿಕಾರಿಗಳ ಕಿತ್ತಾಟ: ಸಿನಿಮಾ ಮಾಡಲು ಟೈಟಲ್ ಗಾಗಿ ಅರ್ಜಿ

    ಐಪಿಎಸ್, ಐಎಎಸ್ ಅಧಿಕಾರಿಗಳ ಕಿತ್ತಾಟ: ಸಿನಿಮಾ ಮಾಡಲು ಟೈಟಲ್ ಗಾಗಿ ಅರ್ಜಿ

    ನರ ಮನಸ್ಸನ್ನು ಸೆಳೆದ ಘಟನೆಗಳನ್ನು ಆಧರಿಸಿ ಸಿನಿಮಾಗಳು ಬರುವುದು ಹೊಸದೇನೂ ಅಲ್ಲ. ಅದರಲ್ಲೂ ಕಾಂಟ್ರವರ್ಸಿ ಆಗಿರುವಂತಹ ಘಟನೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲು ನಾಮುಂದು ತಾಮುಂದು ಎಂದು ಬಂದವರ ಸಂಖ್ಯೆ ಕಡಿಮೆಯೇನೂ ಇಲ್ಲ. ಇದೀಗ ಅದಕ್ಕೆ ಹೊಸ ಸೇರ್ಪಡೆ ಐಎಎಸ್ (IAS), ಐಪಿಎಸ್ (IPS) ಅಧಿಕಾರಿಗಳ ಜಗಳ. ನಾಲ್ಕೈದು ದಿನಗಳ ಕಾಲ ಸಾಕಷ್ಟು ಸುದ್ದಿಯಾಗಿದ್ದ ಘಟನೆಯನ್ನು ಆಧರಿಸಿ ಸಿನಿಮಾ ಮಾಡಲು ಇಬ್ಬರು ನಿರ್ಮಾಪಕರು ಮುಂದೆ ಬಂದಿದ್ದಾರೆ.

    ಇಬ್ಬರು ಮಹಿಳಾ ಅಧಿಕಾರಿಗಳು ನಾಲ್ಕೈದು ದಿನಗಳ ಕಾಲ ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದು ಎಲ್ಲರಿಗೂ ತಿಳಿದೇ ಇದೆ. ಇದೀಗ ಅದೇ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿದ್ದಾರೆ. ಸಿನಿಮಾದ ಟೈಟಲ್ ಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅರ್ಜಿಯನ್ನೂ ಹಾಕಿದ್ದಾರೆ. ಒಂದು ಸಿನಿಮಾದ ಟೈಟಲ್ ಅಧಿಕಾರಿಗಳ ಹೆಸರನ್ನು ಒಳಗೊಂಡಿದ್ದರೆ, ಮತ್ತೊಂದು ಸಿನಿಮಾದ ಟೈಟಲ್ ಆರ್ ವರ್ಸಸ್ ಆರ್ ಎಂದು ಇಟ್ಟಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಟೈಟಲ್ ಗಾಗಿ ಅರ್ಜಿ ಸಲ್ಲಿಸಿದ್ದರ ಕುರಿತು ವಾಣಿಜ್ಯ ಮಂಡಳಿಯ ಅಧ್ಯಕ್ಷರೇ ಖಚಿತ ಪಡಿಸಿದ್ದು ಟೈಟಲ್ ಕಮಿಟಿ ಮುಂದೆ ಇಟ್ಟು ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ. ಒಂದು ಸಿನಿಮಾವನ್ನು ಬಿಯಾಂಡ್ ಡ್ರೀಮ್ಸ್ ಸಂಸ್ಥೆ ನಿರ್ಮಿಸಲು ಮುಂದೆ ಬಂದಿದ್ದರೆ, ಮತ್ತೊಂದು ಚಿತ್ರದ ಟೈಟಲ್ ಗಾಗಿ ಪ್ರವೀಣ್ ಶೆಟ್ಟಿ ಎನ್ನುವ ನಿರ್ಮಾಪಕರು ಅರ್ಜಿ ಸಲ್ಲಿಸಿದ್ದಾರೆ. ಎರಡೂ ಅರ್ಜಿಗಳು ಟೈಟಲ್ ಕಮಿಟಿ ಮುಂದೆ ಸೋಮವಾರ ಬರಲಿವೆ ಎಂದು ಹೇಳಲಾಗುತ್ತಿದೆ.

  • ‘ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ: ಮಾ.5ಕ್ಕೆ ಟೈಟಲ್ ಡಿಸೈನ್ ರಿಲೀಸ್

    ‘ಭೈರತಿ ರಣಗಲ್’ ಪ್ಯಾನ್ ಇಂಡಿಯಾ ಸಿನಿಮಾ: ಮಾ.5ಕ್ಕೆ ಟೈಟಲ್ ಡಿಸೈನ್ ರಿಲೀಸ್

    ಫ್ತಿ (Mufti,) ಸಿನಿಮಾದ ನಂತರ ನಿರ್ದೇಶಕ ನರ್ತನ್ (Narthan) ಹಾಗೂ ನಟ ಶಿವರಾಜ್ ಕುಮಾರ್ (Shivraj Kumar) ಮತ್ತೆ ಒಂದಾಗಿದ್ದು, ಈ ಬಾರಿ ಜೋಡಿಯು ಪ್ಯಾನ್ ಇಂಡಿಯಾ (Pan India) ಸಿನಿಮಾವನ್ನು ಮಾಡಲಿದೆ. ‘ಭೈರತಿ ರಣಗಲ್’ (Bhairati Rangal) ಹೆಸರಿನಲ್ಲಿ ಈ ಸಿನಿಮಾ ಹಲವು ಭಾಷೆಗಳಲ್ಲಿ ಮೂಡಿ ಬರುತ್ತಿದ್ದು, ಸಿನಿಮಾದ ಟೈಟಲ್ ಡಿಸೈನ್ ಅನ್ನು ಮಾರ್ಚ್ 5ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.

    ಗೀತಾ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು,  ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ನರ್ತನ್ ಈ ಸಿನಿಮಾದ ಮೂಲಕ ಮತ್ತೆ ಒಂದಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಐದು ವರ್ಷಗಳ ನಂತರ ಮಫ್ತಿ ಸಿನಿಮಾದ ಭೈರತಿ ರಣಗಲ್ ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

    ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಸೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.

    ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದಳಪತಿ ವಿಜಯ್ ಸಿನಿಮಾಕ್ಕೆ ‘ಲಿಯೋ’ ಶೀರ್ಷಿಕೆ ಫಿಕ್ಸ್

    ದಳಪತಿ ವಿಜಯ್ ಸಿನಿಮಾಕ್ಕೆ ‘ಲಿಯೋ’ ಶೀರ್ಷಿಕೆ ಫಿಕ್ಸ್

    ಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಚಿತ್ರಕ್ಕೆ ‘ಲಿಯೋ’ ಶೀರ್ಷಿಕೆ ಅಂತಿಮವಾಗಿದೆ. ಶೀರ್ಷಿಕೆ ಟೀಸರ್‌ ಬಿಡುಗಡೆ ಆಗಿದ್ದು, ಚಾಕಲೇಟ್‌ ತಯಾರಕನಾಗಿ ವಿಜಯ್‌ ಕಾಣಿಸಿಕೊಂಡಿದ್ದಾರೆ. ಮತ್ತೊಂದು ಬದಿಯಲ್ಲಿ ಕೈಯಲ್ಲಿ ಕತ್ತಿ ಹಿಡಿದು ಶತ್ರುಗಳ ಸಂಹಾರಕ್ಕೂ ಸಜ್ಜಾಗಿದ್ದಾರೆ.

    ಮಾಸ್ಟರ್‌ ಸಿನಿಮಾ ಬಳಿಕ ಲೋಕೇಶ್‌ ಕನಗರಾಜ್‌ ಮತ್ತು ವಿಜಯ್‌ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿದ್ದು, ಈಗಾಗಲೇ ಚಿತ್ರದ ಬಹುತೇಕ ಸ್ಟಾರ್‌ ಕಾಸ್ಟ್‌ ಸಹ ಬಹಿರಂಗವಾಗಿದೆ. ತ್ರಿಷಾ ಕೃಷ್ಣನ್‌ ಈ ಚಿತ್ರದಲ್ಲಿ ವಿಜಯ್‌ಗೆ ಜೋಡಿಯಾದರೆ, ಪ್ರಿಯಾ ಆನಂದ್‌ ಸಹ ಪ್ರಮುಖ ಪಾತ್ರದಲ್ಲಿದ್ದಾರೆ. ಇದನ್ನೂ ಓದಿ: ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

    ಫೆ. 2ರಂದು ಚೆನ್ನೈನಲ್ಲಿ ‘ಲಿಯೋ’ ಚಿತ್ರದ ಅದ್ದೂರಿ ಮುಹೂರ್ತ ನೆರವೇರಿತ್ತು. ಆದರೆ, ಶೀರ್ಷಿಕೆ ಮಾತ್ರ ಘೋಷಣೆ ಆಗಿರಲಿಲ್ಲ. ಮುಹೂರ್ತ ಮುಗಿದ ಒಂದು ದಿನದ ಬಳಿಕ ಅಂದರೆ ಫೆ. 3ರಂದು ಶೀರ್ಷಿಕೆ ಟೀಸರ್‌ ರಿಲೀಸ್‌ ಮಾಡುವ ಮೂಲಕ ಕುತೂಹಲಕ್ಕೆ ತೆರೆ ಎಳೆದರು.

    7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ‘ಲಿಯೋ’ ಚಿತ್ರಕ್ಕೆ ಅನಿರುದ್ಧ ರವಿಚಂದ್ರನ್‌ ಸಂಗೀತ ನೀಡಲಿದ್ದಾರೆ. ಈ ಹಿಂದೆ ವಿಜಯ್‌ ಅವರ ಕೈದಿ, ಮಾಸ್ಟರ್‌ ಮತ್ತು ಬೀಸ್ಟ್‌ ಸಿನಿಮಾಗಳಿಗೆ ಅನಿರುದ್ಧ ಸಂಗೀತ ನೀಡಿದ್ದರು. ಲಿಯೋ ಮೂಲಕ ನಾಲ್ಕನೇ ಬಾರಿ ಒಂದಾಗಿದ್ದಾರೆ.

    ಮನೋಜ್‌ ಪರಮಹಂಸ ಛಾಯಾಗ್ರಹಣ, ಅನ್ಬರವೀ ಸಾಹಸ, ಫಿಲೋಮಿನ್‌ ರಾಜ್‌ ಸಂಕಲನ, ಸತೀಸ್‌ ಕುಮಾರ್‌ ಕಲೆ, ದಿನೇಶ್‌ ನೃತ್ಯ ನಿರ್ದೇಶನ, ಸಂಭಾಷಣೆ ಲೋಕೇಶ್‌ ಕನಗರಾಜ್‌, ರತ್ನ ಕುಮಾರ್‌, ಧೀರಜ್‌ ವೈದ್ಯ, ರಾಮಕುಮಾರ್‌ ಬಾಲಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಯವದನ ನಿರ್ದೇಶನದ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ ಫಿಕ್ಸ್

    ಹಯವದನ ನಿರ್ದೇಶನದ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ ಫಿಕ್ಸ್

    ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ (Hayavadana) ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ನೀಡಿ ಗೆದ್ದಿರುವ ಹಯವದನ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ್ದಾರೆ. ಚೊಚ್ಚಲ ಚಿತ್ರದ ಫಸ್ಟ್ ಲುಕ್ (First Look) ಹಾಗೂ ಟೈಟಲ್ (Title) ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

    ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರದಲ್ಲಿ ನಾಯಕ ನಟನಾಗಿ ಕಂಬ್ಳಿಹುಳ ಸಿನಿಮಾ ಖ್ಯಾತಿಯ ಅಂಜನ್ ನಾಗೇಂದ್ರ (Anjan Nagendra) ನಟಿಸುತ್ತಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಪೂಜೆ ನಡೆಸಿ ಚಿತ್ರೀಕರಣವನ್ನು ಆರಂಭಿಸಿದೆ ಚಿತ್ರತಂಡ. ಸೋಶಿಯಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಜರ್ನಿ ಸಿನಿಮಾವಿದು. ಅಪ್ಪ ಮಗನ ಸೆಂಟಿಮೆಂಟ್ ಚಿತ್ರದ ಮೈನ್ ಹೈಲೈಟ್. ಅಪ್ಪನ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಚಿತ್ರದಲ್ಲಿದೆ. ಲವ್ ಟ್ರ್ಯಾಕ್, ಕಾಮಿಡಿ, ಭಾವನಾತ್ಮಕ ಜರ್ನಿ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಇದನ್ನೂ ಓದಿ: ಸದ್ಯಕ್ಕಿಲ್ಲ ‘ಕಿರಿಕ್ ಪಾರ್ಟಿ 2’ : ಈಗೇನಿದ್ದರೂ ರಿಚರ್ಡ್ ಆಂಟನಿ ಗುಂಗಿನಲ್ಲಿ ರಕ್ಷಿತ್

    ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಹಾಗೂ ಪತ್ರಕರ್ತ ರವೀಂದ್ರ ಮುದ್ದಿ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಟೈಟಲ್ ಬದಲಾಯಿಸಿ: ಮುಸ್ಲಿಂ ಮುಖಂಡರ ಒತ್ತಾಯ

    ‘ಪಠಾಣ್’ ಟೈಟಲ್ ಬದಲಾಯಿಸಿ: ಮುಸ್ಲಿಂ ಮುಖಂಡರ ಒತ್ತಾಯ

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ಹಾಡಿನ ಬಗ್ಗೆ ಈವರೆಗೂ ವಿವಾದ ಎದ್ದಿತ್ತು. ಈ ಬಾರಿ ಟೈಟಲ್ ಬಗ್ಗೆಯೂ ಅಪಸ್ವರ ಶುರುವಾಗಿದೆ. ಈ ಟೈಟಲ್ ಇಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೂಡಲೇ ಈ ಶೀರ್ಷಿಕೆಯನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಮುಸ್ಲಿಂ ಸಮುದಾಯದಲ್ಲಿ ಪಠಾಣರು ಎಂದರೆ ಗೌರವದಿಂದ ಇರುವವರು ಎಂದರ್ಥ. ಆದರೆ, ಈ ಸಿನಿಮಾದಲ್ಲಿ ಅದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ಮಾಡಲಾಗಿದೆ. ಕೂಡಲೇ ಶೀರ್ಷಿಕೆಯನ್ನು ಬದಲಾಯಿಸಿ ಎಂದು ಹಲವು ಮುಸ್ಲಿಂ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೇ, ಈ ಟೈಟಲ್ ಇಟ್ಟುಕೊಂಡು ನಾಯಕಿಗೆ ಬಿಕಿನಿ ಹಾಕಿಸುವ ಮೂಲಕ ಗೌರವವನ್ನು ಕಳೆಯುವ ಪ್ರಯತ್ನ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮಗು ಯಾವ ಧರ್ಮಕ್ಕೆ ಸೇರುತ್ತೆ ಎಂದು ಕೇಳಿದವರಿಗೆ ಖಡಕ್ ಉತ್ತರ ಕೊಟ್ಟ ನಟಿ ದೆವೊಲೀನಾ

    ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದ ವಿಚಾರ, ಇದೀಗ ದೇಶಭಕ್ತಿಯನ್ನು ಪ್ರಶ್ನಿಸುವಲ್ಲಿಗೆ ಹೋಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ತರುವುದಕ್ಕಾಗಿಯೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ನಟ ಶಾರುಖ್ ಖಾನ್ ಮೇಲೆ ಆರೋಪಗಳನ್ನು ಮಾಡಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಮತ್ತೊಂದು ಟ್ವಿಟ್ ಮಾಡಿದ್ದು, ‘ಪಠಾಣ್ ಸಿನಿಮಾ ಕೂಡ ದೇಶಭಕ್ತಿಯನ್ನು ಸಾರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಸಿನಿಮಾವನ್ನು ಬಾಯ್ಕಾಟ್ ಮಾಡುವುದರಲ್ಲಿ ಅರ್ಥವೇ ಇಲ್ಲವೆಂದಿದ್ದಾರೆ.

    ಪಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    Live Tv
    [brid partner=56869869 player=32851 video=960834 autoplay=true]