Tag: Toll Tax

  • ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ಇರಲ್ಲ: ನಿತಿನ್‌ ಗಡ್ಕರಿ

    ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ಇರಲ್ಲ: ನಿತಿನ್‌ ಗಡ್ಕರಿ

    ನವದೆಹಲಿ: 60 ಕಿ.ಮೀ. ವ್ಯಾಪ್ತಿಯೊಳಗಡೆ ಸಂಚರಿಸುವವರಿಗೆ ಇನ್ಮುಂದೆ ಟೋಲ್‌ ತೆರಿಗೆ ಇರುವುದಿಲ್ಲ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

    ಮುಂದಿನ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಸಂಗ್ರಹ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಲೋಕಸಭೆಯಲ್ಲಿ ಸಚಿವರು ಘೋಷಿಸಿದ್ದಾರೆ. ಇದನ್ನೂ ಓದಿ: ಜನರೇ ಬಿಜೆಪಿ ಆಡಳಿತ ಮೆಚ್ಚಿದ್ದಾರೆ, ಅದ್ಕೆ ನಾವು ಜಾಸ್ತಿ ಮಾತಾಡಲ್ಲ: ಡಿ.ಕೆ ಸುರೇಶ್ ವ್ಯಂಗ್ಯ

    Nitin Gadkari

    ಏಪ್ರಿಲ್ 1 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷದ ಬಜೆಟ್‌ನ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆಯ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸುವಾಗ ಸಚಿವರು, ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯಲ್ಲಿ ಕೇವಲ ಒಂದು ಟೋಲ್ ಸಂಗ್ರಹವಿರುತ್ತದೆ ಎಂದು ತಿಳಿಸಿದ್ದಾರೆ.

    ರಸ್ತೆಗಳ ನಿರ್ಮಾಣ ಕುರಿತು ಮಾತನಾಡಿದ ಅವರು, ದೆಹಲಿ-ಅಮೃತಸರ-ಕತ್ರಾ ಎಕ್ಸ್‌ಪ್ರೆಸ್‌ವೇ ಸಿದ್ಧವಾಗುತ್ತಿದೆ. ದೆಹಲಿ-ಅಮೃತಸರ ಭಾಗವನ್ನು ಈ ವರ್ಷದ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು. ಮುಂದೆ ಕತ್ರಾ-ಅಮೃತಸರ-ದೆಹಲಿ ರಸ್ತೆಗೆ ಶ್ರೀನಗರ-ಜಮ್ಮು ರಸ್ತೆ ಸಂಪರ್ಕ ಕಲ್ಪಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಗ್ಯಾಸ್, ಡೀಸೆಲ್, ಪೆಟ್ರೋಲ್‍ಗೆ ವಿಧಿಸಲಾದ ಲಾಕ್‍ಡೌನ್‍ ತೆಗೆಯಲಾಗಿದೆ: ರಾಹುಲ್ ಗಾಂಧಿ

    ಈ ರಸ್ತೆಯ ಮೂಲಕ ಶ್ರೀನಗರದಿಂದ ಮುಂಬೈಗೆ 20 ಗಂಟೆಗಳಲ್ಲಿ ಪ್ರಯಾಣ ಮಾಡಬಹುದು. ಜಮ್ಮು-ಶ್ರೀನಗರ ಹೆದ್ದಾರಿ ನವೀಕರಣವನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಲವು ಪಾಕಿಸ್ತಾನಗಳನ್ನು ಹುಟ್ಟುಹಾಕಲು ಬಿಜೆಪಿ ಬಯಸುತ್ತಿದೆ: ಮೆಹಬೂಬಾ ಮುಫ್ತಿ

    ದೆಹಲಿ-ಜೈಪುರ, ದೆಹಲಿ-ಮುಂಬೈ ಮತ್ತು ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುವುದು. ಜೈಪುರ ಮತ್ತು ಡೆಹ್ರಾಡೂನ್‌ಗೆ ಎರಡು ಗಂಟೆಗಳಲ್ಲಿ ತಲುಪಬಹುದಾದರೆ, ದೆಹಲಿ-ಮುಂಬೈ ದೂರವನ್ನು 12 ಗಂಟೆಗಳಲ್ಲಿ ಕಾರಿನಲ್ಲಿ ಕ್ರಮಿಸಬಹುದು ಎಂದು ಹೇಳಿದ್ದಾರೆ.

  • ವಕೀಲರಿಗೆ ಟೋಲ್ ವಿನಾಯತಿ- ವೈರಲ್ ಸುದ್ದಿಯ ಸತ್ಯ

    ವಕೀಲರಿಗೆ ಟೋಲ್ ವಿನಾಯತಿ- ವೈರಲ್ ಸುದ್ದಿಯ ಸತ್ಯ

    ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯವು ವಕೀಲರಿಗೆ ದೇಶಾದ್ಯಂತ ಟೋಲ್ ಫೀ ವಿನಾಯತಿ ನೀಡಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.

    ಈ ಸಂಬಂಧ ಐಎಎಸ್ ಅಧಿಕಾರಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಲಾಯದ ಖಾಸಗಿ ಕಾರ್ಯದರ್ಶಿ ಸಂಕೇತ್ ಭೋಂಡ್ವೆ ಅವರು ವಕೀಲ ರವಿಗೌಡ ಅವರಿಗೆ ಡಿಸೆಂಬರ್ 3ರಂದು ಪತ್ರ ಬರೆದಿದ್ದಾರೆ. ಈ ಮೂಲಕ ಡಿಸೆಂಬರ್ 1ರಿಂದ ಅನ್ವಯವಾಗುವಂತೆ ಭಾರತದ ಎಲ್ಲಾ ರಾಜ್ಯಗಳ ವಕೀಲರಿಗೆ ದೇಶಾದ್ಯಂತ ಟೋಲ್ ಫೀ ವಿನಾಯತಿ ನೀಡಲಾಗಿದೆ. ಹೀಗಾಗಿ ವಕೀಲರು ಟೋಲ್ ಪ್ಲಾಜಾಗಳಲ್ಲಿ ತಮ್ಮ ಐಡಿ ಕಾರ್ಡ್ ತೋರಿಸಿದರೆ ಸಾಕು ಎಂದು ಪತ್ರದಲ್ಲಿ ಬರೆಯಲಾಗಿತ್ತು.

    ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪತ್ರ ಎನ್ನಲಾಗಿದ್ದ ಪತ್ರವು ವಾಟ್ಸಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಅಸಲಿಗೆ ಇದು ಸುಳ್ಳು ಪತ್ರವಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟ್ವೀಟ್ ಮೂಲಕ ಡಿಸೆಂಬರ್ 11ರಂದು ಸ್ಪಷ್ಟನೆ ನೀಡಿದ್ದು, ವಕೀಲರಿಗೆ ಟೋಲ್ ಪ್ಲಾಜಾಗಳಲ್ಲಿ ಯಾವುದೇ ರೀತಿಯ ಶುಲ್ಕ ವಿನಾಯತಿ ನೀಡಿಲ್ಲ ಎಂದು ತಿಳಿಸಿದೆ.

    ಈ ಕುರಿತು ಉತ್ತರ ನೀಡುವಂತೆ ಭೋಂಡ್ವೆ ಅವರು ಡಿಸೆಂಬರ್ 3ರಂದು ವಕೀಲ ಆರ್.ಬಾಸ್ಕರದಾಸ್ ಅವರಿಗೆ ಪತ್ರ ಬರೆದಿದ್ದರು. ಸಚಿವಾಲಯ ಕೇಳಿದ್ದ ಪ್ರಶ್ನೆಗಳಿಗೆ ಬಾಸ್ಕರದಾಸ್ ಅವರು ಉತ್ತರಿಸಿದ ಪತ್ರವನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ರವಾನಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಮುಂದಿನ ಕ್ರಮ ಜರುಗಿಸಲಿದೆ ಎಂದು ಭೋಡ್ವೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.