Tag: toranagal

  • ಚಿಕಿತ್ಸೆ ಬೇಕಾದ್ರೆ ಮಧ್ಯರಾತ್ರಿಯಿಂದಲೇ ಕ್ಯೂ ನಿಲ್ಲಬೇಕು-ಇದು ತೋರಣಗಲ್ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ..!

    ಚಿಕಿತ್ಸೆ ಬೇಕಾದ್ರೆ ಮಧ್ಯರಾತ್ರಿಯಿಂದಲೇ ಕ್ಯೂ ನಿಲ್ಲಬೇಕು-ಇದು ತೋರಣಗಲ್ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ..!

    -ಪ್ರಶ್ನೆ ಮಾಡಿದ್ರೆ ಪ್ರವೇಟ್‍ಗೆ ಹೋಗಿ ಅಂತಾ ಅವಾಜ್

    ಬಳ್ಳಾರಿ: ಈ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕೆಂದರೆ ಮಧ್ಯರಾತ್ರಿಯಿಂದಲೇ ಕ್ಯೂ ಹಚ್ಚಬೇಕು. ಇದು ಬಳ್ಳಾರಿ ಜಿಲ್ಲೆಯ ಸಂಡೂರು ತೋರಣಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸ್ಥಿತಿ.

    ಈ ಆಸ್ಪತ್ರೆಯಲ್ಲಿ ಪ್ರತಿ ಬುಧವಾರ ಗರ್ಭಿಣಿಯರಿಗೆ ತಪಾಸಣೆ ಮಾಡಲಾಗುತ್ತದೆ. ಬುಧವಾರ ಚಿಕಿತ್ಸೆ ಪಡೆಯಬೇಕಾದ್ರೆ ಮಂಗಳವಾರವೇ ಟೋಕನ್ ಪಡೆದುಕೊಳ್ಳಬೇಕು. ಹೀಗಾಗಿ ತುಂಬು ಗರ್ಭಿಣಿಯರು ಮಧ್ಯರಾತ್ರಿಯವರೆಗೂ ನಿಂತು ಟೋಕನ್ ಪಡೆದುಕೊಳ್ಳುತ್ತಾರೆ. ಟೋಕನ್ ಪಡೆದ ಮೇಲೆ ಚಿಕಿತ್ಸೆ ನೀಡುವ ಡಾಕ್ಟರ್ ಬರೋದು ಲೇಟ್. ಡಾಕ್ಟರ್ ಬಂದ ಮೇಲೆ ಚಿಕಿತ್ಸೆ ಪಡೆಯಲು ನೂಕು ನುಗ್ಗಲು ಉಂಟಾಗುತ್ತದೆ.

    ಇಷ್ಟೆಲ್ಲಾ ಕಷ್ಟಪಟ್ಟರೇ ಗರ್ಭಿಣಿಯರಿಗೆ ಚಿಕಿತ್ಸೆ ನೀಡೋದು ಮಾತ್ರ ಹಲ್ಲಿನ ಡಾಕ್ಟರ್. ರೋಗ ಮತ್ತು ಪ್ರಸೂತಿ ತಜ್ಞರ ಕೊರತೆ ಹಿನ್ನೆಲೆಯಲ್ಲಿ ಹಲ್ಲಿನ ಡಾಕ್ಟರ್ ವಿಶಾಲಾಕ್ಷಿ ಗರ್ಭಿಣಿಯರಿಗೆ ಟ್ರೀಟ್‍ಮೆಂಟ್ ಕೊಡುತ್ತಾರೆ. ತಮಗೆ ಡೆಂಟಿಸ್ಟ್ ಟ್ರೀಟ್‍ಮೆಂಟ್ ಕೊಡುತ್ತಿರೋದನ್ನು ತಿಳಿದು ಗರ್ಭಿಯರು ಮತ್ತು ಅವರ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಏನಾದ್ರೂ ಹೆಚ್ಚು ಕಮ್ಮಿ ಆದ್ರೇ ಹೇಗೆ ಅಂತಾ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

    ತೋರಣಗಲ್ ಸರ್ಕಾರಿ ಆಸ್ಪತ್ರೆಗೆ ಹೆರಿಗೆ ವೈದ್ಯರನ್ನ ನೀಡಿ ಅಂತಾ ಗ್ರಾಮಸ್ಥರು ಕಂಡ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ರೂ ಉಪಯೋಗವಾಗಿಲ್ಲ. ಅಲ್ಲದೇ ಗರ್ಭಿಣಿಯರ ಹೆರಿಗೆ ಮಾಡಿಸಲು ಬಳ್ಳಾರಿವರೆಗೆ ಅಂಬುಲೈನ್ಸ್ ಗೂ ಸಹ ಗರ್ಭಿಣಿಯರೇ ಹಣ ನೀಡಬೇಕಾಗಿರುವುದು ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನ ಎತ್ತಿ ತೋರಿಸುತ್ತಿದೆ. ಇನ್ನಾದರೂ ಆರೋಗ್ಯ ಕರ್ನಾಟಕ ಎನ್ನುವ ಸರ್ಕಾರ ಈ ಗರ್ಭಿಣಿಯರಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ವೈದ್ಯರನ್ನ ಒದಗಿಸಿ ಕೊಟ್ಟರೇ ಒಳ್ಳೆಯದಾಗುತ್ತೆ ಅಂತಾ ತೋರಣಗಲ್ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

    ಜಿಂದಾಲ್ ನ ಬೃಹತ್ ಕಾರ್ಖಾನೆಯಿರುವ ಹಿನ್ನೆಲೆ ಹೆಚ್ಚಿರುವ ಜನಸಂಖ್ಯೆಗೆ ಅನುಗುಣವಾಗಿ ಇಲ್ಲಿನ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಹೀಗಾಗಿ ಇರೋ ಒಬ್ಬರು ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಪ್ರತಿ ಬುಧುವಾರದಂದು ಮಹಿಳೆಯರು ಚಿಕಿತ್ಸೆ ಪಡೆಯಲು ಸಾಕಷ್ಟು ಹರಸಾಹಸಪಡುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಳ್ಳಾರಿಯಲ್ಲಿ ಅದಿರು ಲಾರಿಗಳ ಅಬ್ಬರಕ್ಕೆ ನಿತ್ಯ ಅಮಾಯಕರು ಬಲಿ!

    -ಜನರ ಪಾಲಿಗೆ ಕಿಲ್ಲರ್ ಲಾರಿಗಳಾದ್ರೂ ಜಿಲ್ಲಾಡಳಿತಕ್ಕಿಲ್ಲ ವರಿ

    ಬಳ್ಳಾರಿ: ಜಿಲ್ಲೆಯಲ್ಲಿ ಅದಿರು ಲಾರಿಗಳ ಅಬ್ಬರ ಜೋರಾಗಿಬಿಟ್ಟಿದೆ. ಅದಿರು ಲಾರಿಗಳಿಗೆ ಸಿಲುಕಿ ನಿತ್ಯ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿದ್ದಾರೆ. ಗಣಿ ಪ್ರದೇಶವಾದ ಸಂಡೂರು, ತೋರಣಗಲ್‍ನಲ್ಲಿ ಅದಿರು ಲಾರಿಗಳು ಇದೀಗ ಅಕ್ಷರಶಃ ಕಿಲ್ಲರ್ ಲಾರಿಗಳಂತೆ ಓಡಾಡುತ್ತಿವೆ. ಹೀಗಾಗಿ ಜನರು ರಸ್ತೆಯ ಮೇಲೆ ಓಡಾಡಲೂ ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಅದಿರು ಲಾರಿಗಳ ಅಬ್ಬರಕ್ಕೆ ಬ್ರೇಕ್ ಹಾಕೋರೆ ಇಲ್ಲದಂತಾಗಿ ಬಿಟ್ಟಿದೆ. ಗಣಿಗಾರಿಕೆ ನಿಂತರೂ ಅದಿರು ಲಾರಿಗಳ ಅಬ್ಬರ ಮಾತ್ರ ಇನ್ನೂ ತಗ್ಗಿಲ್ಲ. ಸಾಕ್ಟ್ ಯಾರ್ಡ್ ಕಾರ್ಖಾನೆಗಳಿಗೆ ಬೇಗನೇ ಅದಿರು ಸರಬುರಾಜು ಮಾಡಲು ಲಾರಿಗಳು ಓವರ್ ಸ್ಪೀಡ್ ಆಗಿ ಓಡುತ್ತಿರುವುದರಿಂದ ನಿತ್ಯ ಒಂದಿಬ್ಬರು ಅದಿರು ಲಾರಿಗಳಿಗೆ ಆಹಾರವಾಗುವಂತಾಗಿದೆ.

    ಕಳೆದ 5 ವರ್ಷಗಳಲ್ಲಿ 73 ಜನರು ಅದಿರು ಲಾರಿಗಳ ಅಪಘಾತದಲ್ಲಿ ಮೃತಪಟ್ಟರೆ ಬರೋಬ್ಬರಿ 304 ಜನರು ಲಾರಿಗಳ ಅಪಘಾತದಿಂದ ಗಾಯಗೊಂಡು ನಿತ್ಯ ನರಕಯಾತನೆ ಪಡುವಂತಾಗಿದೆ. ಕಳೆದ ಜನವರಿ ತಿಂಗಳೊಂದರಲ್ಲೇ 6 ಜನರು ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೀಗಾಗಿ ಅದಿರು ಲಾರಿಗಳ ಅಬ್ಬರಕ್ಕೆ ಬ್ರೇಕ್ ಹಾಕೋರೂ ಯಾರು ಇಲ್ವಾ ಅನ್ನೋ ಪ್ರಶ್ನೆ ಎದುರಾಗಿದೆ.

    ಅದಿರು ಲಾರಿಗಳ ಅಬ್ಬರಕ್ಕೆ ಅಮಾಯಕ ಜನರು ಬಲಿಯಾಗಿರುವುದನ್ನು ವಿರೋಧಿಸಿ ಸ್ಥಳೀಯ ಸಂಘಟನೆಗಳು ಪ್ರತಿಭಟನೆ ಮಾಡಿದ್ರೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಇದೀಗ ಹೋರಾಟಗಾರರ ವಿರುದ್ಧವೇ ಪ್ರಕರಣ ದಾಖಲಿಸಿ ಹೋರಾಟ ಹತ್ತಿಕ್ಕುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ ಜನರ ಜೀವ ಕಾಪಾಡಬೇಕಾದ ಜಿಲ್ಲಾಧಿಕಾರಿಗಳೇ ಜನರ ಜೀವ ತಗೆಯುವ ಲಾರಿಗಳ ಪರವಾಗಿ ನಿಂತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.