Tag: Tour

  • ಜೆಡಿಎಸ್ ಭದ್ರ ಕೋಟೆಯಲ್ಲಿ ಕೈ ಅರಳಿಸಲು ಬರಲಿದ್ದಾರೆ ರಾಹುಲ್ ಗಾಂಧಿ

    ಜೆಡಿಎಸ್ ಭದ್ರ ಕೋಟೆಯಲ್ಲಿ ಕೈ ಅರಳಿಸಲು ಬರಲಿದ್ದಾರೆ ರಾಹುಲ್ ಗಾಂಧಿ

    ಹಾಸನ: ಜೆಡಿಎಸ್‍ನ ಭದ್ರ ಕೋಟೆಯಾಗಿರುವ ಮೈಸೂರು ವಿಭಾಗದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ ಕೊನೆಯ ವಾರದಲ್ಲಿ ಪ್ರವಾಸ ಮಾಡಲಿದ್ದಾರೆ.

    ಮಾರ್ಚ್ 20, 21 ಮತ್ತು 22 ಮೂರು ದಿನಗಳ ಕಾಲ ಮೈಸೂರು ವಿಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಆದರೆ ಈ ದಿನಾಂಕವನ್ನು ಕೆಪಿಸಿಸಿ ಅಂತಿಮಗೊಳಿಸಿದ್ದರೂ ರಾಹುಲ್ ಗಾಂಧಿ ಅಂತಿಮಗೊಳಿಸಿಲ್ಲ. ಬಹತೇಕ ಈ ದಿನವೇ ಅಂತಿಮವಾಗುವ ಸಾಧ್ಯತೆಯಿದೆ.

    ಹಾಸನದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಆನಂದ್ ಮಾತನಾಡಿ, ಮೈಸೂರು ವಿಭಾಗದಲ್ಲಿ ಜನಾಶಿರ್ವಾದ ಯಾತ್ರೆ ನಡೆಸಲಿರುವ ರಾಹುಲ್. ಹಾಸನಕ್ಕೂ ಆಗಮಿಸುತ್ತಾರೆ. ಅವರು ಮೂರು ದಿನಗಳಲ್ಲಿ ಸುಮಾರು 10 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದು ತಿಳಿಸಿದರು.

    ರಾಹುಲ್ ಅವರು ಪ್ರವಾಸ ವೇಳೆ ದೇವಾಲಯ, ಚರ್ಚ್, ಮತ್ತು ಮಸೀದಿಗಳಿಗೆ ಭೇಟಿ ನೀಡುತ್ತಾರೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳು ಮತ್ತು ರೈತರೊಂದಿಗೆ ಸಂವಾದ ನಡೆಸುವ ಬಗ್ಗೆಯು ಕೂಡ ನಾಯಕರು ಚಿಂತನೆ ನಡೆಸಿದ್ದು, ಹಾಸನದಲ್ಲಿ ರಾಹುಲ್ ಓಡಾಟ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.

  • ಒಂದೇ ದಿನದಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಪ್ರವಾಸ

    ಒಂದೇ ದಿನದಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಪ್ರವಾಸ

    ಕೊಪ್ಪಳ: ರಾಜ್ಯದ ಹೈದರಾಬಾದ್ ಕರ್ನಾಟಕ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ತಮ್ಮ ಎರಡನೇ ದಿನದ ಪ್ರವಾಸ ಮುಗಿಸಿದ್ದಾರೆ. ಇವತ್ತು ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಬಸ್ ನಲ್ಲಿ ಯಾತ್ರೆ ಮಾಡಿ 6 ಕ್ಕೂ ಹೆಚ್ಚು ಸಮಾವೇಶ ಗಳಲ್ಲಿ ಮಾತನಾಡಿದರು.

    ಬೆಳಿಗ್ಗೆ 9-30 ಕ್ಕೆ ಕುಕನೂರಿನ ಗೆಸ್ಟ್ ಹೌಸ್ ನಿಂದ ಹೊರಟ ರಾಹುಲ್ ಗಾಂಧಿ ರಾಯಭಾಗದ ಚೆನ್ನಮ್ಮ ಸರ್ಕಲ್ ನಲ್ಲಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಾತ್ರೆಗೆ ಚಾಲನೆ ನೀಡಿದರು. ಬೆಂಡಿ ಕ್ರಾಸ್ ನಲ್ಲಿ ರೋಡ್ ಶೋ ಮಾಡಿದ ರಾಹುಲ್ ಗಾಂಧಿ ಭಾಷಣ ಮಾಡಿದರು. ನಂತರ ಅಲ್ಲಿಂದ ನೇರವಾಗಿ ಕುಷ್ಟಗಿಗೆ ಬಂದ ಅವರು ಬಸ್ಸಿನಲ್ಲೇ ನಿಂತು ಜನರಿಂದ ಹಾರ ತುರಾಯಿ ಸ್ವೀಕಾರ ಮಾಡಿದರು.

    ಕುಷ್ಟಗಿಯಲ್ಲಿ ಜನರ ಗುಂಪು ಕಂಡು ರಸ್ತೆಗಿಳಿದ ರಾಹುಲ್, ಪರಮೇಶ್ವರ್ ಜೊತೆ ಕುಷ್ಟಗಿ ರಸ್ತೆಯಲ್ಲಿ ನಡೆದುಕೊಂಡು ಹೋದರು. ಸಾರ್ವಜನಿಕ ಸಮಾವೇಶದಲ್ಲಿ ನಮಸ್ಕಾರ ಚೆನ್ನಾಗಿದ್ದೀರಾ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿ ಕಾರ್ಯಕರ್ತರ ಕುರಿತು ಮಾತನಾಡಿದರು. ನಂತರ ಕುಷ್ಟಗಿ ಯಿಂದ ಕನಕಗಿರಿ ಪ್ರಯಾಣಿಸಿದ ಅವರು ಮಾರ್ಗ ಮಧ್ಯೆ ಹೆಚ್ಚು ಜನ ಕಂಡ ವೇಳೆ ಬಸ್ ನಿಲ್ಲಿಸಿ ಎಲ್ಲರತ್ತ ಕೈಬಿಸಿದರು.

    ಈ ವೇಳೆ ರಾಹುಲ್ ಕಂಡ ಜನ ಸೆಕ್ಯುರಿಟಿ ಲೆಕ್ಕಿಸದೇ ಬಸ್ ಹತ್ತಿ ಹಾರ ಹಾಕಿ ಗೌರವಿಸಿದರು. ಕನಕಗಿರಿಯ ಹುಲಿಹೈದರ್ ಊರಿನಲ್ಲಿ ಶಾಸಕ ಶಿವರಾಜ್ ತಂಗಡಗಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು. ಈ ವೇಳೆ ಬಸ್ ನಿಂದ ಇಳಿದು ಜನರ ಬಳಿ ಬರುವಂತೆ ಮನವಿ ಮಾಡಿದರು. ಆದರೆ ಬಸ್ ಇಳಿಯದೇ ತೆರಳಿದ ಅವರು ಕನಕಗಿರಿಯ ನಿರೀಕ್ಷಣಾ ಮಂದಿರದಲ್ಲಿ ಭೋಜನ ಸ್ವೀಕರಿಸಿದರು.

    ಮೋದಿ ಘೋಷಣೆಯೊಂದಿಗೆ ಸ್ವಾಗತ: ಕನಕಗಿರಿ ಕನಕಚಲಾಲಕ್ಷ್ಮಿ ನರಸಿಂಹ ಪುರಾತನ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ಕೊಟ್ಟು ಪೂಜೆ ಸಲ್ಲಿಸಿಸಲು ತೆರಳುವ ವೇಳೆ ಕೆಲವು ಯುವಕರು “ಮೋದಿ ಮೋದಿ” ಎಂದು ಕೂಗುತ್ತ ಸ್ವಾಗತಿಸಿದರು. ನಂತರ ದೇವಾಲಯಕ್ಕೆ ಭೇಟಿ ನೀಡಿದ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅಲ್ಲಿಯೂ ಜನರ ಬಳಿ ತೆರಳಿ ಮಾತನಾಡಿದರು.

    ಪ್ಲೆಕ್ಸ್ ರಾಜಕೀಯ: ಗಂಗಾವತಿಯ ಹೇರೂರಿನಲ್ಲಿ ಫ್ಲೆಕ್ಸ್ ಸ್ಪರ್ಧೆ ಕಂಡು ಬಂತು. ರಸ್ತೆ ಒಂದು ಬದಿ ಮೋದಿ ಫ್ಲೆಕ್ಸ್, ಮತ್ತೊಂದೆಡೆ ರಾಹುಲ್ ಫ್ಲೆಕ್ಸ್ ಹಾಕಲಾಗಿತ್ತು. ಈ ವೇಳೆ ಜೆಡಿಎಸ್ ನಿಂದ ಅಮಾನತುಗೊಂಡಿದ್ದ ಶಾಸಕ ಇಕ್ಬಾಲ್ ಅನ್ಸಾರಿ ರಾಹುಲ್ ಜೊತೆ ಪ್ರಯಾಣಿಸಿದರು. ಗಂಗಾವತಿ ರಸ್ತೆಯ ಎರಡು ಕಡೆಗಳಲ್ಲಿ ರಾಹುಲ್‍ಗಾಗಿ ಜನರು ಕಾದು ನಿಂತಿದ್ದರು.

    ಗಂಗಾವತಿ ಸರ್ಕಲ್ ನಲ್ಲಿ ಗಾಂಧಿ ಪ್ರತಿಮೆಗೆ ಹಾಗೂ ಇಂದಿರಾಗಾಂಧಿ ಪ್ರತಿಮೆಗೆ ರಾಹುಲ್ ಮಾಲಾರ್ಪಣೆ ಮಾಡಿ ಜನರನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಆದರೆ ಅವರ ಪಕ್ಷದಲ್ಲಿ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಜೈಲಿಗೆ ಹೋಗಿದ್ದು ಹೇಳಿಲ್ಲ. ಬಿಎಸ್‍ವೈ ನಂತರ ಅವಧಿಯಲ್ಲಿ ನಾಲ್ಕು ಜನ ಸಚಿವರು ಜೈಲಿಗೆ ಹೋಗಿದ್ದು ಹೇಳಲ್ಲ. 11 ಸಚಿವರು ರಾಜೀನಾಮೆ ಕೊಟ್ಟಿದ್ದು ಹೇಳಲ್ಲ ಎಂದರು.

    ಕಪ್ಪು ಬಾವುಟ ಪ್ರದರ್ಶನ: ಗಂಗಾವತಿಯಲ್ಲಿ ಭಾಷಣ ಮಾಡಿ ಹೊರಟ ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಯಿತು. ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆ ಕರಪತ್ರ ತೂರಿ ಕಪ್ಪು ಭಾವುಟ ಪ್ರದರ್ಶನ ಮಾಡಿದರು. ಅಲ್ಲಿಂದ ನೇರವಾಗಿ ಕಾರಟಗಿಗೆ ಬಂದು ಬೃಹತ್ ಸಮಾವೇಶದಲ್ಲಿ ಭಾಗವಹಿಸಿದರು. ಅಲ್ಲಿ ಶಾಸಕ ಶಿವರಾಜ್ ತಂಗಡಗಿ ನೀಡಿದ ಬೆಳ್ಳಿ ಖಡ್ಗವನ್ನು ಕನಕಚಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

    ನಿನ್ನೆ ಹೊಸಪೇಟೆಯಲ್ಲಿ ಶಾಸಕ ನಾಗೇಂದ್ರ ನೀಡಿದ ದುಬಾರಿ ವಾಲ್ಮಿಕಿ ಪ್ರತಿಮೆಯನ್ನು ಯಾವುದಾದರೂ ಸಂಘ ಸಂಸ್ಥೆಗೆ ನೀಡುವಂತೆ ರಾಹುಲ್ ಗಾಂಧಿ ಸೂಚಿಸಿದ್ದಾರೆ. ಒಟ್ಟಾರೆ ಇಂದು ರಾಹುಲ್ ಗಾಂಧಿ ರಾಯಚೂರು ಹಾಗೂ ಕೊಪ್ಪಳ ಎರಡು ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದರು. ಇಂದು ರಾತ್ರಿ ರಾಯಚೂರು ಸರ್ಕಿಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

  • ಅಧಿಕಾರಿಯಿಂದಾಗಿ ಪ್ರವಾಸಕ್ಕೆ ಬಿತ್ತು ಬ್ರೇಕ್- ತಟ್ಟೆ ಹಿಡಿದು ವಿದ್ಯಾರ್ಥಿಗಳಿಂದ ರಾತ್ರಿಯಿಡೀ ಧರಣಿ

    ಅಧಿಕಾರಿಯಿಂದಾಗಿ ಪ್ರವಾಸಕ್ಕೆ ಬಿತ್ತು ಬ್ರೇಕ್- ತಟ್ಟೆ ಹಿಡಿದು ವಿದ್ಯಾರ್ಥಿಗಳಿಂದ ರಾತ್ರಿಯಿಡೀ ಧರಣಿ

    ಬಾಗಲಕೋಟೆ: ಶಾಲಾ ಪ್ರವಾಸಕ್ಕೆಂದು ಸಿದ್ಧಗೊಂಡ ವಿದ್ಯಾರ್ಥಿಗಳು ಅಧಿಕಾರಿಯ ಸ್ಪಂದನೆ ಸಿಗದ ಕಾರಣ ರಾತ್ರಿಪೂರ್ತಿ ವಸತಿ ಶಾಲೆಯ ಆವರಣದಲ್ಲೇ ಪ್ರತಿಭಟನೆ ನಡೆಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

    ಬಾಗಲಕೋಟೆಯ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯ 200 ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಪ್ರವಾಸಕ್ಕೆ ಹೋಗಲು ಸಿದ್ಧವಾಗಿದ್ದರು. ಅವರಿಗಾಗಿ ಕೆಎಸ್ ಆರ್‍ಟಿಸಿಯ ನಾಲ್ಕು ಬಸ್ ಗಳು ಸಿದ್ಧಗೊಂಡಿದ್ದವು. ಅದರೆ ಪ್ರವಾಸಕ್ಕೆ ಅಲ್ಪಸಂಖ್ಯಾತ ಮೊರಾರ್ಜಿ ಶಾಲೆಯ ಜಿಲ್ಲಾ ಅಧಿಕಾರಿ ಅನುಮತಿ ನೀಡಿಲ್ಲ. ಸ್ಥಳಕ್ಕೆ ಅಧಿಕಾರಿ ಬಂದು ಅನುಮತಿ ನೀಡುತ್ತಾರೆ ಎಂದು ವಿದ್ಯಾರ್ಥಿಗಳು ಇಡೀ ರಾತ್ರಿ ಬ್ಯಾಗ್, ತಿಂಡಿತಿನಿಸು ಸಮೇತ ಕಾದು ಕುಳಿತಿದ್ದರು. ಆದ್ರೆ ಸ್ಥಳಕ್ಕೆ ಅಧಿಕಾರಿ ಬಾರದೇ ಇದ್ದಾಗ ಅಧಿಕಾರಿ ವಿರುದ್ಧ ಘೋಷಣೆ ಕೂಗಿದರು.

    ಊಟದ ತಟ್ಟೆಗಳನ್ನು ಬಾರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳಿನಿಂದ ನಿರಂತರವಾಗಿ ಅನುಮತಿಗೆ ಪ್ರಯತ್ನ ಮಾಡುತ್ತಿದ್ದು, ಅಧಿಕಾರಿಗಳು ಅನುಮತಿ ನೀಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಗೊಂದಲಕ್ಕೆ ಶಾಲಾ ಪ್ರಾಂಶುಪಾಲ ಮತ್ತು ಸಹಶಿಕ್ಷಕರ ಮಧ್ಯೆ ಹೊಂದಾಣಿಕೆ ಇಲ್ಲದಿರೋದು ಕಾರಣವಾಗಿದೆ ಎನ್ನಲಾಗಿದೆ.

    ಒಟ್ಟಿನಲ್ಲಿ ಅಪ್ಪ ಅಮ್ಮ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ವಿದ್ಯಾರ್ಥಿಗಳ ಪ್ರವಾಸಕ್ಕೆ ಇದೀಗ ಬ್ರೆಕ್ ಬಿದ್ದಿದೆ.

  • ತನಗೆ ನೀಡಿದ ‘ಆ’ ವಿಶೇಷ ಸ್ವಾಗತಕ್ಕೆ ಶಿಷ್ಟಾಚಾರ ಬದಿಗಿರಿಸಿ ಮೋದಿಯಿಂದ ಇಸ್ರೇಲ್ ಪ್ರಧಾನಿಗೆ ಸ್ವಾಗತ

    ತನಗೆ ನೀಡಿದ ‘ಆ’ ವಿಶೇಷ ಸ್ವಾಗತಕ್ಕೆ ಶಿಷ್ಟಾಚಾರ ಬದಿಗಿರಿಸಿ ಮೋದಿಯಿಂದ ಇಸ್ರೇಲ್ ಪ್ರಧಾನಿಗೆ ಸ್ವಾಗತ

    ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತಕ್ಕೆ ಆಗಮಿಸಿದ್ದು, 15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಶಿಷ್ಟಾಚಾರ ಬದಿಗಿರಿಸಿ ವಿಮಾನ ನಿಲ್ದಾಣಕ್ಕೆ ತೆರಳಿ ಬೆಂಜಮಿನ್ ಅವರಿಗೆ ಸ್ವಾಗತ ಕೋರಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿರುವ ಮೋದಿ ಅವರು, ನನ್ನ ಆತ್ಮೀಯ ಗೆಳೆಯನಿಗೆ ಭಾರತಕ್ಕೆ ಸ್ವಾಗತ, ನಿಮ್ಮ ಭೇಟಿ ಐತಿಹಾಸಿಕವಾದದ್ದು, ನಮ್ಮ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    ಇಸ್ರೇಲ್ ಗೆ ಪ್ರಧಾನಿ ನರೇಂದ್ರ ಮೋದಿ ಜುಲೈ ನಲ್ಲಿ ಭೇಟಿ ನೀಡಿದ್ದಾಗ ಇಸ್ರೇಲ್ ಪ್ರಧಾನಿ ನೆತನ್ಯಾಹು ಸಹ ಶಿಷ್ಟಾಚಾರ ಬದಿಗಿರಿಸಿ ನಮ್ಮ ಪ್ರಧಾನಿಯನ್ನು ಟೆಲ್ ಅವೀವ್‍ ವಿಮಾನ ನಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಧರ್ಮ ಗುರು ಪೋಪ್ ಅವರಿಗೆ ಈ ಸ್ವಾಗ ನೀಡಿದ್ದರು. ಇಸ್ರೇಲ್ ಪ್ರಧಾನಿಯಿಂದ ಈ ವಿಶೇಷ ಸ್ವಾಗತ ಪಡೆದ ಮೂರನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದರು.

    ಆರು ದಿನಗಳ ಭಾರತದ ಭೇಟಿಗೆ ಆಗಮಿಸುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಅವರಿಗೆ ಪ್ರಧಾನಿ ಮೋದಿ ರಾತ್ರಿ ಔತಣ ಕೂಟ ಏರ್ಪಡಿಸಿದ್ದಾರೆ. ಅಲ್ಲದೇ ಇಸ್ರೇಲ್ ಪ್ರಧಾನಿ ತಾಜ್ ಮಹಲ್ ಗೂ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಇಸ್ರೇಲ್ ಪ್ರಧಾನಿ ಬೆಂಜಮಿನ್ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ಭವನದ ಮುಂದೆ ಅಧಿಕೃತ ಸ್ವಾಗತ ಕಾರ್ಯಕ್ರಮ ನಡೆಯಿತು. ನಂತರ ಅವರು ತೀನ್ ಮೂರ್ತಿ ಸ್ಮಾರಕಕ್ಕೆ ಭೇಟಿ ನೀಡಿದರು. 100 ವರ್ಷಗಳ ಹಿಂದೆ ಭಾರತದ ಮೂರು ರೆಜಿಮೆಂಟ್ ಗಳು ಹೈಫಾ ಯುದ್ಧದಲ್ಲಿ ಭಾಗವಹಿಸಿದ್ದ ಸ್ಮರಣೆಗಾಗಿ ಈ ಸ್ಮಾರಕ ನಿರ್ಮಿಸಲಾಗಿದೆ. ಅಲ್ಲದೇ ಈ ವೇಳೆ ತೀನ್ ಮೂರ್ತಿ ಮಾರ್ಗ್ ಚೌಕಕ್ಕೆ ತೀನ್ ಮೂರ್ತಿ ಹೈಫಾ ಚೌಕ್ ಎಂದು ಮರುನಾಮಕರಣ ಮಾಡಲಾಯಿತು. ಇದನ್ನೂ ಓದಿ: ಟ್ರಂಪ್, ಪೋಪ್ ಬಳಿಕ ಇಸ್ರೇಲಿನಲ್ಲಿ ಮೋದಿಗೆ ಸಿಕ್ತು ‘ಆ’ ವಿಶೇಷ ಸ್ವಾಗತ: ವಿಡಿಯೋ ನೋಡಿ

    ಈ ಸ್ಮಾರಕದಲ್ಲಿ ಸ್ಥಾಪನೆ ಮಾಡಲಾಗಿರುವ ಮೂರು ಕಂಚಿನ ಪ್ರತಿಮೆಗಳು ಮೈಸೂರು, ಹೈದರಾಬಾದ್ ಮತ್ತು ಜೋಧ್ಪುರ್ ಪಡೆಗಳನ್ನು ಪ್ರತಿನಿಧಿಸುತ್ತವೆ. ಮೊದಲ ವಿಶ್ವ ಯುದ್ಧ ಸಮಯದಲ್ಲಿ ಇಸ್ರೇಲ್ ನ ಹೈಫಾ ನಗರವನ್ನು 1918, ಸೆಪ್ಟೆಂಬರ್ 23 ಬ್ರಿಟಿಷ್ ಒಕ್ಕೂಟ ಸೈನ್ಯ ಜಯಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೈನಿಕರ ತೋರಿದ ಸಾಧನೆಯ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಾಣ ಮಾಡಲಾಗಿತ್ತು. ಹೈಫಾ ನಗರವನ್ನು ವಿಮೋಚನೆ ಮಾಡುವ ಸಮರದಲ್ಲಿ ಭಾರತದ 44 ಸೈನಿಕರು ತಮ್ಮ ಜೀವವನ್ನು ತ್ಯಾಗ ಮಾಡಿದ್ದರು.

    ಪ್ರಧಾನಿ ಮೋದಿ ಶಿಷ್ಟಾಚಾರ ಉಲ್ಲಂಘಿಸುವುದು ಇದೇ ಮೊದಲೆನಲ್ಲ. ಈ ಹಿಂದೆ 2015ರ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಭಾರತಕ್ಕೆ ಆಗಮಿಸಿದ್ದ ವೇಳೆ ಮೋದಿ ವಿಮಾನ ನಿಲ್ದಾಣಕ್ಕೆ ಹೋಗಿ ಅವರನ್ನು ಸ್ವಾಗತಿಸಿದ್ದರು. ಇದಾದ ಬಳಿಕ ಬುಲೆಟ್ ರೈಲು ಯೋಜನೆ ಶಂಕುಸ್ಥಾಪನೆಗೆ ಆಗಮಿಸಿದ್ದ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರನ್ನು 2017ರ ಸೆಪ್ಟೆಂಬರ್ ನಲ್ಲಿ ಮೋದಿ ಗುಜರಾತ್ ನ ಅಹಮದಬಾದ್ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತ ಕೋರಿದ್ದರು.

    ಭಾರತಕ್ಕೆ ಭೇಟಿ ನೀಡುತ್ತಿರುವ ಎರಡನೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಗಿದ್ದು, ಈ ಹಿಂದೆ 2003ರಲ್ಲಿ ಏರಿಯಲ್ ಶರೋನ್ ಭಾರತ ಪ್ರವಾಸ ಕೈಗೊಂಡಿದ್ದರು.

  • ಪ್ರವಾಸಕ್ಕೆ ಬಂದು ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿ ರಕ್ಷಣೆ ಮಾಡಿದ ಲೈಫ್ ಗಾರ್ಡ್ ಸಿಬ್ಬಂದಿ – ವಿಡಿಯೋ ನೋಡಿ

    ಪ್ರವಾಸಕ್ಕೆ ಬಂದು ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿ ರಕ್ಷಣೆ ಮಾಡಿದ ಲೈಫ್ ಗಾರ್ಡ್ ಸಿಬ್ಬಂದಿ – ವಿಡಿಯೋ ನೋಡಿ

    ಕಾರವಾರ: ಪ್ರವಾಸಕ್ಕೆ ಬಂದಿದ್ದ ವೇಳೆ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ ನಲ್ಲಿ ನಡೆದಿದೆ.

    ಶಿವಮೊಗ್ಗದ ರಾಘವೇಂದ್ರ ಪ್ಯಾರಾ ಮೆಡಿಕಲ್ ಕಾಲೇಜಿನ ಗಗನ್ (18) ರಕ್ಷಿಸಲ್ಪಟ್ಟ ವಿದ್ಯಾರ್ಥಿ. ಕಾಲೇಜಿನ ಪ್ರವಾಸಕ್ಕೆಂದು ಸುಮಾರು 15 ಜನ ವಿದ್ಯಾರ್ಥಿಗಳು ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಬಂದಿದ್ದರು. ಇಂದು ಮುರಡೇಶ್ವರ ಕಡಲ ತೀರದಲ್ಲಿ ಈಜುವಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಗಗನ್ ಕೊಚ್ಚಿ ಹೋಗಿದ್ದಾನೆ.

    ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಲೈಫ್ ಗಾರ್ಡ ಸಿಬ್ಬಂದಿಗಳಾದ ರೋಹಿತ ಹರಿಕಾಂತ, ಶಶಿಧರ, ಮತ್ತು ಬೋಟ್ ಸಿಬ್ಬಂದಿಗಳು ಯುವಕ ಕೊಚ್ವಿ ಹೋಗಿದ್ದನ್ನು ಗಮನಿಸಿದ್ದಾರೆ. ತಕ್ಷಣ ಬೋಟ್ ತೆಗೆದುಕೊಂಡು ಹೋಗಿ ಗಗನ್‍ನನ್ನು ರಕ್ಷಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದು ಪ್ರವಾಸೋದ್ಯಮ ಅಧಿಕಾರಿಗಳಾದ ರವಿ ವಾಲೇಕರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ನಂತರ ಮುರುಡೇಶ್ವರ ಪೊಲೀಸ್ ಠಾಣೆಗೆ ಹೋಗಿ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಯುವಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ.

    https://youtu.be/49iPtd2iSZE

  • ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

    ಹೊಸ ವರ್ಷಾಚರಣೆಗೆ ಸಿಂಗಾಪುರಕ್ಕೆ ಹಾರಿದ ಹೆಚ್‍ಡಿಕೆ ಕುಟುಂಬ- ಇತ್ತ ಸಿಎಂ ವಿರುದ್ಧ ಎಚ್‍ಡಿಡಿ ವಾಗ್ದಾಳಿ

    ಬೆಂಗಳೂರು: ಹೊಸ ವರ್ಷದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರ ಕುಟುಂಬ ಸಿಂಗಾಪುರಕ್ಕೆ ಪ್ರವಾಸ ಬೆಳೆಸಿದೆ.

    ಕುಮಾರಸ್ವಾಮಿ ಅವರಿಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಶಾಸಕ ಸಾ.ರಾ ಮಹೇಶ್ ಸಾಥ್ ನೀಡಿದ್ದಾರೆ. ಪ್ರತಿ ವರ್ಷದಂತೆ ಕುಮಾರಸ್ವಾಮಿ ಕುಟುಂಬ ಈ ವರ್ಷವೂ ಸಿಂಗಾಪುರಕ್ಕೆ ತೆರಳಿದ್ದು, ಹೊಸ ವರ್ಷ ಆಚರಣೆಯ ನಂತರ ಜನವರಿ 2 ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

    ಇತ್ತ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅಯ್ಯೋ ಯಾವ ಮುಖ್ಯಮಂತ್ರಿಯೂ ಇವರ ರೀತಿ ಮಾಡಿಲ್ಲ. ಏನ್ ಕಿರೀಟ, ಕತ್ತಿ, ಗುರಾಣಿ ಹಿಡಿದುಕೊಳ್ಳುತ್ತಿದ್ದಾರೆ. ಇವರೊಬ್ಬರೇ ನವ ಕರ್ನಾಟಕ ನಿರ್ಮಾಣ ಮಾಡುವವರು. ಇಷ್ಟು ದಿನ ಎಲ್ಲಿ ಹೋಗಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯ ಅವರು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳುವ ಭರದಲ್ಲಿ, ಹಿಂದಿನವರು ಸಾಧನೆ ಮಾಡಿಲ್ಲ ಎಂದು ಜರಿದಿದ್ದಾರೆ. ಈ ವೇಳೆ ನನ್ನ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ಎಷ್ಟು ಕೆಲಸ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸರ್ಕಾರಿ ಹಣದಿಂದ ದುಂದುವೆಚ್ಚ ಮಾಡಿ ಪ್ರವಾಸ ಮಾಡುತ್ತಾರೆ. ನವ ಕರ್ನಾಟಕ ನಿರ್ಮಾಣ ಮಾಡುವುದಕ್ಕೆ ಇವರೊಬ್ಬರೇ ಹುಟ್ಟಿದ್ದು, ಎಲ್ಲವು ಜನರಿಗೆ ಗೊತ್ತಾಗುತ್ತದೆ. ಬಿರುಸಿನ ಮಾತು ಸ್ವಲ್ಪ ಕಡಿಮೆ ಮಾಡಬೇಕು, ಇಲ್ಲವಾದರೆ ಅದಕ್ಕೆ ಪ್ರತಿಯಾಗಿ ಬಿರುಸಿನ ಪ್ರತಿಕ್ರಿಯೆ ಕೊಡುವ ಶಕ್ತಿ ನಮಗೂ ಇದೆ ಎಂದರು.

    ಕಾಂಗ್ರೆಸ್ ಭಿನ್ನಾಭಿಪ್ರಾಯ: ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಒಂದು ಪ್ರವಾಸ ಮಾಡಿದರೆ, ಸಿಎಂ ಅವರು ಒಂದು ಪ್ರವಾಸ ಮಾಡುತ್ತಾರೆ. ಆದರೆ ನಮ್ಮದು ಹಾಗಲ್ಲ. ಕುಮಾರಸ್ವಾಮಿ ನಾನು ಇಬ್ಬರು ಪ್ರವಾಸ ಮಾಡುತ್ತೇವೆ. ಕಾಂಗ್ರೆಸ್ ಪ್ರವಾಸ ಸಭೆಗೆ ಎಷ್ಟು ಜನ ಸೇರಿದ್ದಾರೆ ಅಂತಾ ನೋಡಿದ್ದೇನೆ. ಅವರದ್ದು ಸರ್ಕಾರಿ ಕಾರ್ಯಕ್ರಮವೋ, ಪ್ರಚಾರ ಕಾರ್ಯಕ್ರಮವೋ ಗೊತ್ತಾಗುತ್ತಿಲ್ಲ. ಕಳೆದ ಬಾರಿ 120 ಸ್ಥಾನ ಗೆಲ್ಲಲು ಕಾರಣ ಏನು? ಎಂಬುವುದು ತಿಳಿದಿದೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಸಿಎಂ ಎಂದು ಘೋಷಣೆ ಮಾಡಿ ರಾಹುಲ್ ಗಾಂಧಿ ಗೆದ್ದು ಬರಲಿ ನೋಡೋಣ ಎಂದು ಸಿಎಂ ವಿರುದ್ಧ ಕಿಡಿಕಾರಿದರು.

    ಜನವರಿ ಬಳಿಕ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡುತ್ತಾರೆ. ಇನ್ನೊಂದು ದಿಕ್ಕಿನಲ್ಲಿ ನಾನು ಪ್ರವಾಸ ಮಾಡುತ್ತೇನೆ. ಯಡಿಯೂರಪ್ಪ, ಕುಮಾರಸ್ವಾಮಿ ಸಿಎಂ ಆಗಲ್ಲ ಎಂದು ಅಹಂನಿಂದ ಹೇಳುತ್ತಾರೆ. ಹಾಗಾಂತ ಅವರ ಹಣೆಮೇಲೆ ಬರೆದಿದ್ದಾರಾ? ಸ್ವಲ್ಪ ದಿನ ತಡೆದುಕೊಳ್ಳಿ, ಎಲ್ಲವನ್ನು ಗಮನಿಸುತ್ತಿದ್ದೇನೆ. ತಾಳ್ಮೆ ನನಗೂ ಇದೆ. ತಾಳ್ಮೆ ಮೀರಿದಾಗ ಏನಾಗುತ್ತೆ ನೋಡೋಣ. ಬೇಲ್ ತೆಗೆದುಕೊಂಡವರೆಲ್ಲ ಸಿಎಂ ಆಗೋಕೆ ಸಾಧ್ಯ ಎಂದು ಸಿಎಂ ಪ್ರಶ್ನಿಸುತ್ತಾರೆ. ಆದರೆ ಇದೇ ಸಿದ್ದರಾಮಯ್ಯ ಅವರು ಆಪರೇಷನ್ ಕಮಲದಲ್ಲಿ ಏನು ಮಾಡಿದ್ದರು. ಯಡಿಯೂರಪ್ಪ ಸಿಎಂ ಇದ್ದಾಗ ವಿಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಏನ್ ಮಾಡಿದ್ದರು ಅಂತಾ ಪ್ರಶ್ನೆ ಮಾಡಿದರು.

    ಯಾರ ಬಗ್ಗೆಯೂ ಲಘುವಾಗಿ ಮಾತನಾಡಲ್ಲ: ನಾನು ಪ್ರಧಾನಿ ಮೋದಿ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಮುಂದೆಯೂ ಮಾತನಾಡಲ್ಲ. ಹಾಗೆಯೇ ನಾನು ರಾಹುಲ್ ಗಾಂಧಿ, ಸೋನಿಯಾಗಾಂಧಿ ಯಾರ ಬಗ್ಗೆಯೂ ಲಘುವಾಗಿ ಮಾತಾನಾಡಿಲ್ಲ, ಮಾತನಾಡಲ್ಲ ಎಂದರು.

    ನಮ್ಮ ಕೈಯಲ್ಲಿ ಅಧಿಕಾರ ಇಲ್ಲ. ಅದರೂ ರಾಜ್ಯದ ಎಲ್ಲಾ ಕಡೆಯೂ ಪ್ರವಾಸ ಮಾಡುತ್ತೇವೆ. ನಮಗೆ ಹೋರಾಟ ಮಾಡೋ ಕೆಚ್ಚಿದೆ. ಆದರೆ ಪರಮೇಶ್ವರ್ ಅವರಿಗೆ ಅಧಿಕಾರ ಇಲ್ಲದಿರಬಹುದು, ಕಾಂಗ್ರೆಸ್ ಸರ್ಕಾರದ ಬೆಂಬಲ, ಸಿಬಿಐ ಬೆಂಬಲವಿದೆ. ಈ ಹಿಂದೆ ಸಿದ್ದರಾಮಯ್ಯ ಅವರನ್ನ ಕರೆದುಕೊಂಡು ಹೋದ ತಕ್ಷಣ ಜೆಡಿಎಸ್ ಮುಗೀತು ಅಂದುಕೊಂಡಿದ್ದರು. ಆದರೆ ಅಮೇಲೆ ಏನಾಯಿತು ಎಂದು ಪ್ರಶ್ನಿಸಿದರು.

    ಮಹದಾಯಿ ಹೋರಾಟಕ್ಕೆ ಸಿದ್ದ: ರಾಜ್ಯದ ನಾಯಕರ ಜೊತೆ ಪರಸ್ಪರ ದೋಷಾರೋಪದಿಂದ ಮಹದಾಯಿ ಏನಾಯಿತು. ನದಿಗೆ ಕಟ್ಟಿರುವ ತಡೆಗೋಡೆಯ ರಕ್ಷಣೆ ಜವಾಬ್ದಾರಿ ಕರ್ನಾಟಕ ಸರ್ಕಾರದ್ದು ಅದು ಈಗಲೂ ಹಾಗೆ ಮುಂದುವರೆಯುತ್ತೆ ಎಂದು ಭಾವಿಸಿದ್ದೇನೆ. ಅವಶ್ಯಕತೆ ಇದ್ದರೆ ಮಹದಾಯಿ ಹೋರಟಕ್ಕಾಗಿ ನಾನು ಮತ್ತೆ ಪ್ರಧಾನಿ ಅವರನ್ನ ಭೇಟಿ ಮಾಡುತ್ತೇನೆ. ಆದರೆ ಈ ವೇಳೆ ತನಗೆ ಫೋಟೋ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಇದರಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿದರು.

    https://www.youtube.com/watch?v=AGeBU4rObUc

  • ಸತತ ನಾಲ್ಕೂವರೆ ಗಂಟೆಗಳ ಬಳಿಕ ಗೋವಾ ಸಮುದ್ರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

    ಸತತ ನಾಲ್ಕೂವರೆ ಗಂಟೆಗಳ ಬಳಿಕ ಗೋವಾ ಸಮುದ್ರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ

    ಬೆಂಗಳೂರು: ಸಮುದ್ರದ ಮಧ್ಯೆ ಬೋಟ್ ಕೆಟ್ಟುನಿಂತ ಪರಿಣಾಮವಾಗಿ ಸತತ ನಾಲ್ಕು ಗಂಟೆಗಳ ಕಾಲ ಸಹಾಯಕ್ಕಾಗಿ ಕಾದು ನಿಂತಿದ್ದ ಕನ್ನಡಿಗರನ್ನು ರಕ್ಷಣೆ ಮಾಡಿರುವ ಘಟನೆ ಗೋವಾದ ರಾಯಬಾಗ್ ಪ್ರದೇಶದಲ್ಲಿ ನಡೆದಿದೆ.

    ನಗರದ ಪೀಣ್ಯ ಪ್ರದೇಶದಿಂದ ಸುಮಾರು 47 ಕನ್ನಡಿಗರು ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಮುದ್ರವನ್ನು ನೋಡಲು ಗೋವಾದ ಪಣಜಿಯ ರಾಯಬಾಗ್ ನ ಸಮುದ್ರಕ್ಕೆ ಬೋಟ್ ನಲ್ಲಿ ಹೋಗುತ್ತಿದ್ದಾಗ  ಪ್ರಯಾಣದ  ಮಧ್ಯೆ ಕೆಟ್ಟು ನಿಂತಿದೆ.

    ಈ ಸಂದರ್ಭದಲ್ಲಿ ಎರಡು ಗಂಟೆಗಳಾದರೂ ಅಲ್ಲಿನ ಸಿಬ್ಬಂದಿ ನೆರವಿಗೆ ಬಾರದೇ ಇದ್ದ ಕಾರಣ ಪ್ರವಾಸಿಗರಲ್ಲಿ ಹೆದರಿಕೆ ಆರಂಭವಾಗಿದೆ. ಬೋಟ್ ನಲ್ಲಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಅತಂಕ ಹೆಚ್ಚಳವಾಗಿದೆ. ಅಲ್ಲದೇ ಸಂಜೆಯಾಗುತ್ತಿದ್ದಂತೆ ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಾಗಿದ್ದು, ಅಲೆಗಳ ವೇಗಕ್ಕೆ ಬೇಟ್ ಅಲುಗಾಡತೊಡಗಿ ಚಲಿಸುತ್ತಿದ್ದ ಕಾರಣ ಮತ್ತಷ್ಟು ಅತಂಕ ಉಂಟಾಗಿತ್ತು.

    ಸುಮಾರು ನಾಲ್ಕೂವರೆ ಗಂಟೆಗಳ ಬಳಿಕ ಆ ಪ್ರದೇಶಕ್ಕೆ ತೆರಳಿದ ಮತ್ತೊಂದು ಬೋಟ್ ನಲ್ಲಿದ್ದ ಕನ್ನಡಿಗರು ಇವರ ಧ್ವನಿ ಕೇಳಿ ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.

  • ಕುಡಿಯಲು ನೀರು ಕೇಳಿದ್ರೆ ಎಣ್ಣೆ ಕೊಟ್ರು ಮೇಷ್ಟ್ರು- ವಾಂತಿ ಮಾಡಿ ಸುಸ್ತಾದ ಹೈಸ್ಕೂಲ್ ಮಕ್ಕಳು

    ಕುಡಿಯಲು ನೀರು ಕೇಳಿದ್ರೆ ಎಣ್ಣೆ ಕೊಟ್ರು ಮೇಷ್ಟ್ರು- ವಾಂತಿ ಮಾಡಿ ಸುಸ್ತಾದ ಹೈಸ್ಕೂಲ್ ಮಕ್ಕಳು

    ತುಮಕೂರು: ಶಾಲಾ ಮಕ್ಕಳು ಕುಡಿಯಲು ನೀರು ಕೇಳಿದರೆ ಮದ್ಯವನ್ನ ನೀಡಿ, ಅವರಿಗೂ ಮದ್ಯಪಾನ ಮಾಡಿಸಿರುವ ಗಂಭೀರ ಆರೋಪವೊಂದು ಶಾಲಾ ಶಿಕ್ಷಕರ ಮೇಲೆ ಕೇಳಿಬಂದಿದೆ.

    ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮೂವರು ಶಿಕ್ಷಕರ ಮೇಲೆ ಈ ಆರೋಪ ಕೇಳಿ ಬಂದಿದೆ. ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಶೈಕ್ಷಣಿಕ ಪ್ರವಾಸ ಹೋಗಿದ್ದರು. ಇದೇ ವೇಳೆ ಪ್ರವಾಸ ಮುಗಿಸಿಕೊಂಡು ಭಾನುವಾರ ರಾತ್ರಿ ವಾಪಸ್ಸಾಗುವಾಗ ಮಕ್ಕಳು ಮನೋರಂಜನೆಗಾಗಿ ಬಸ್ ನಲ್ಲಿ ಡ್ಯಾನ್ಸ್ ಮಾಡಿದ್ದರು. ಈ ಸಂದರ್ಭದಲ್ಲಿ ದಣಿದಿದ್ದ 9 ಹಾಗೂ 10ನೇ ತರಗತಿಯ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಶಿಕ್ಷಕರ ಬಳಿ ಕುಡಿಯಲು ನೀರು ಕೇಳಿದ್ದಾರೆ. ಪ್ರವಾಸದುದ್ದಕ್ಕೂ ಮದ್ಯ ಸೇವಿಸಿ, ಮದ್ಯದೊಂದಿಗೆ ಬೆರಸಿದ್ದ ನೀರಿನ ಬಾಟಲಿಯನ್ನು ಬಸ್ ನಲ್ಲಿ ಇಟ್ಟುಕೊಂಡಿದ್ದ ಶಿಕ್ಷಕರು ಅದೇ ಬಾಟಲಿಯನ್ನು ನೀರು ಎಂದು ಮಕ್ಕಳಿಗೆ ಕೊಟ್ಟು ಕುಡಿಸಿದ್ದಾರೆ ಎಂದು ಶಾಲಾ ಮಕ್ಕಳು ಆರೋಪಿಸಿದ್ದಾರೆ.

    ಮುಖ್ಯಶಿಕ್ಷಕ ಸಚ್ಚಿದಾನಂದ್, ಸಹಶಿಕ್ಷಕರಾದ ಶೇಕ್ ಮುಜಾಮಿಲ್ ಹಾಗೂ ರಾಥೋಡ್ ಎನ್ನುವವರ ಮೇಲೆ ಈ ಆರೋಪ ಕೇಳಿಬಂದಿದೆ. ಧರ್ಮಸ್ಥಳ, ಹೊರನಾಡು ಹಾಗೂ ದಕ್ಷಿಣಕನ್ನಡದ ಕೆಲವೆಡೆ ಪ್ರವಾಸ ತೆರಳಿದ್ದು, ಪ್ರವಾಸದಿಂದ ವಾಪಸ್ಸಾಗುವ ಮಾರ್ಗ ಮಧ್ಯೆ ಹಾಸನದ ಬೇಲೂರು ಬಳಿ ಟೀ ಕುಡಿಯಲು ಬಸ್ ನಿಲ್ಲಿಸಿದ್ದ ವೇಳೆ ಮದ್ಯ ತುಂಬಿದ್ದ ನೀರಿನ ಬಾಯಲಿಯನ್ನು ಶಿಕ್ಷಕರು ಮಕ್ಕಳಿಗೆ ಕುಡಿಯಲು ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

    ಇದೇ ವೇಳೆ ಕೆಲ ವಿದ್ಯಾರ್ಥಿಗಳು ಜ್ಞಾನ ತಪ್ಪಿದ್ದು, ನಿದ್ರೆಗೆ ಜಾರಿದ್ದಾರೆ. ಇನ್ನೂ ಕೆಲವರು ವಾಂತಿ ಮಾಡಿಕೊಂಡು ಸುಸ್ತಾಗಿದ್ದಾರೆ. ಮಕ್ಕಳು ಇಷ್ಟೆಲ್ಲಾ ಹೇಳಿದರೂ ನಾವು ಯಾವ ತಪ್ಪು ಮಾಡಿಲ್ಲ. ಬೇಕಿದ್ದರೆ ದೇವರ ಮೇಲೆ ಪ್ರಮಾಣ ಮಾಡುತ್ತೀವಿ ಎಂದು ಶಿಕ್ಷಕ ಶೇಕ್ ಮುಜಾಮಿಲ್ ಪ್ರತಿಕ್ರಿಯೆ ನೀಡಿದ್ದಾರೆ. ವಿಷಯ ತಿಳಿದ ಪೋಷಕರು ಶಾಲೆಯ ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    +

  • ಪ್ರವಾಸ ಹೋಗಲು ಪೋಷಕರು ಅನುಮತಿ ನೀಡದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

    ಪ್ರವಾಸ ಹೋಗಲು ಪೋಷಕರು ಅನುಮತಿ ನೀಡದ್ದಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಂತಾಮಣಿ ತಾಲೂಕು ಇರಗಂಪಲ್ಲಿ ಗ್ರಾಮದಲ್ಲಿ ನಡೆದಿದೆ.

    ಪ್ರವಾಸ ಹೋಗಲು ಪೋಷಕರು ಅನುಮತಿ ನೀಡದ ಹಿನ್ನೆಲೆಯಲ್ಲಿ ಸುಧಾಕರ್ (14) ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

     

     

    ಅಜ್ಜಿ ಮನೆಯಲ್ಲಿದ್ದುಕೊಂಡು ಸ್ಥಳೀಯ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಧಾಕರ್, ಶಾಲೆಯಿಂದ ಎಲ್ಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ತನ್ನನ್ನು ಕೂಡ ಪ್ರವಾಸಕ್ಕೆ ಕಳುಹಿಸುವಂತೆ ಪೀಡಿಸಿದ್ದಾನೆ. ಆದ್ರೆ ಮನೆಯವರು ಸುಧಾಕರ್ ಆಸೆಗೆ ಅಡ್ಡಿಪಡಿಸಿದ್ದಾರೆ. ತನ್ನನ್ನು ಪ್ರವಾಸಕ್ಕೆ ಕಳುಹಿಸಲು ನಿರಾಕರಿಸಿದ್ದಕ್ಕೆ ಬೇಸರಗೊಂಡ ಸುಧಾಕರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಇನ್ನೂ ವಿದ್ಯಾರ್ಥಿಯ ತಾಯಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನವೆಂಬರ್‍ನಿಂದ ಹೆಚ್‍ಡಿಕೆ ರಾಜ್ಯ ಪ್ರವಾಸ- ಜೊತೆಗಿರಲಿದ್ದಾರೆ ಯೋಗಗುರು, ಬಾಣಸಿಗ, ಮೇಲ್ ನರ್ಸ್

    ನವೆಂಬರ್‍ನಿಂದ ಹೆಚ್‍ಡಿಕೆ ರಾಜ್ಯ ಪ್ರವಾಸ- ಜೊತೆಗಿರಲಿದ್ದಾರೆ ಯೋಗಗುರು, ಬಾಣಸಿಗ, ಮೇಲ್ ನರ್ಸ್

    ಬೆಂಗಳೂರು: ಹೃದಯ ಚಿಕಿತ್ಸೆ ಬಳಿಕ ಮೊದಲ ಬಾರಿಗೆ ಅಖಾಡಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಳಿಯಲಿದ್ದು, ಜೆಡಿಎಸ್ ಸಂಘಟನಾ ರ್ಯಾಲಿಯ ಚಾಲನೆಗೆ ಮುಂದಾಗಿದ್ದಾರೆ.

    2018 ರ ಚುನಾವಣಾ ಪ್ರಯುಕ್ತ ನವೆಂಬರ್ 3 ರಂದು ಜೆಡಿಎಸ್ ಸಂಘಟನಾ ರ್ಯಾಲಿಗೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ನಂತರ ರಾಜ್ಯ ಪ್ರವಾಸ ಮಾಡಲಿಸಿದ್ದಾರೆ. ಈ ಸಂಬಂಧ ಪತ್ನಿ ಅನಿತಾ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರವಾಸದ ರೂಪುರೇಷೆ ಸಿದ್ಧಪಡಿಸಲಾಗಿದೆ.

    ಮೊದಲ ಹಂತದಲ್ಲಿ ಉತ್ತರ ಕರ್ನಾಟಕದ 62 ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಪ್ರವಾಸ ಮಾಡಲಿದ್ದಾರೆ. ಈ ಪ್ರವಾಸದಲ್ಲಿ ಅವರ ಆರೋಗ್ಯ ಕಾಪಾಡಿಕೊಳ್ಳಲು ವಿಶೇಷ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರವಾಸದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ತಯಾರಿ ಮಾಡಿಕೊಂಡಿದ್ದಾರೆ. ಆರೋಗ್ಯದ ಸಮಸ್ಯೆ ಇರುವುದರಿಂದ ಮುಂಜಾಗೃತವಾಗಿ ಅಡುಗೆಯವರು, ಯೋಗ ಗುರು ಹಾಗೂ ಓರ್ವ ಪುರುಷ ನರ್ಸ್ ಹೆಚ್‍ಡಿಕೆ ಜೊತೆಗೆ ಇರಲಿದ್ದಾರೆ. ನಿಮಗೆ ಪಕ್ಷ ಮುಖ್ಯ ಆದರೆ ನಮಗೆ ನಿಮ್ಮ ಆರೋಗ್ಯ ಮುಖ್ಯ ಎಂಬ ಕುಟುಂಬದವರ ಮಾತಿಗೆ ತಲೆ ಬಾಗಿ ಹೆಚ್‍ಡಿಕೆ ಈ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದಾರೆ.

    ಪ್ರವಾಸಕ್ಕಾಗಿಯೇ 1 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಬಸ್ ಸಿದ್ಧವಾಗಿದೆ. ವಿಶೇಷ ಬಸ್‍ನಲ್ಲೇ ಊಟ, ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್‍ಡಿಕೆ ಜೊತೆ ಅವರ ನೆಚ್ಚಿನ ಬಾಣಸಿಗ ಇರಲಿದ್ದಾರೆ. ಪ್ರತಿದಿನ ಮನೆ ಅಡುಗೆ ಬಸ್ಸಿನಲ್ಲೇ ಸಿದ್ಧವಾಗಲಿದೆ. ಪ್ರವಾಸ ಮುಗಿಯುವವರಗೆ ನಾನ್ ವೆಜ್ ತಿನ್ನದಿರಲು ಹೆಚ್‍ಡಿಕೆ ನಿರ್ಧರಿಸಿದ್ದಾರೆ. ಆತರೋಗ್ಯದ ಹಿತದೃಷ್ಟಿಯಿಂದ ರಾತ್ರಿ 8 ಗಂಟೆ ಒಳಗಾಗಿ ಊಟ, ರಾತ್ರಿ 11 ಗಂಟೆಯೊಳಗಾಗಿ ನಿದ್ರೆ ಕಡ್ಡಾಯವಾಗಿದೆ. ಹೆಚ್‍ಡಿಕೆ ಆರೋಗ್ಯ ತಪಾಸಣೆಗಾಗಿ ಜೊತೆಯಲ್ಲೇ ಒಬ್ಬ ಮೇಲ್ ನರ್ಸ್ ಇರಲಿದ್ದಾರೆ. ಪ್ರತಿ ದಿನದ ವ್ಯಾಯಾಮಕ್ಕೆ ಜೊತೆಗೊಬ್ಬ ಯೋಗ ಗುರುವನ್ನು ಎಚ್‍ಡಿಕೆ ಕರೆದೊಯ್ಯಲಿದ್ದಾರೆ.

    ಇದನ್ನೂ ಓದಿ: ಹೆಚ್‍ಡಿಕೆ ಚುನಾವಣಾ ಪ್ರಚಾರಕ್ಕೆ 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್: ಒಳಗಡೆ ಏನೆಲ್ಲಾ ಇದೆ ಗೊತ್ತಾ!