Tag: Tourist Workers

  • ಹಸಿವಿನಿಂದ ಸಾವನ್ನಪ್ಪಿದ ಕಾರ್ಮಿಕ ಮಹಿಳೆಯನ್ನು ಎಬ್ಬಿಸಲು ಪುಟ್ಟ ಕಂದನ ಪರದಾಟ

    ಹಸಿವಿನಿಂದ ಸಾವನ್ನಪ್ಪಿದ ಕಾರ್ಮಿಕ ಮಹಿಳೆಯನ್ನು ಎಬ್ಬಿಸಲು ಪುಟ್ಟ ಕಂದನ ಪರದಾಟ

    -ಮನಕಲಕುವ ವೈರಲ್ ವಿಡಿಯೋ

    ಪಾಟ್ನಾ: ಪ್ರವಾಸಿ ಕಾರ್ಮಿಕರು ಲಾಕ್‍ಡೌನ್ ಕಾರಣದಿಂದ ಕೆಲಸವಿಲ್ಲದೇ ಸ್ವ-ಸ್ಥಳಗಳಿಗೆ ಮರಳುವ ಸಂದರ್ಭದಲ್ಲಿ ವಿವಿಧ ಕಾರಣಗಳಿಂದ ಸಾವನ್ನಪ್ಪುವ ಪ್ರಕರಣಗಳು ಮುಂದುವರಿದಿದೆ. ಆಹಾರ, ವಸತಿ ಹಾಗೂ ಅನಾರೋಗ್ಯದ ಕಾರಣದಿಂದ ಕಾರ್ಮಿಕರು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗಿವೆ. ಇಂತಹ ಸಾಲಿನಲ್ಲೇ ನಿಲ್ಲುವ ಮನಕಲಕುವ ದೃಶ್ಯ ಬಿಹಾರದ ಮುಜಾಫರ್ ನಗರದ ರೈಲ್ವೇ ನಿಲ್ದಾಣವೊಂದರಲ್ಲಿ ನಡೆದಿದೆ.

    ಕೊರೊನಾ ಲಾಕ್‍ಡೌನ್‍ನಿಂದ ಸಿಲುಕಿದ ನರಳುತ್ತಿರುವ ಪ್ರವಾಸಿ ಕಾರ್ಮಿಕರ ದೈನಂದಿನ ವರದಿಗಳಲ್ಲಿ ಈ ದುರಂತ ಘಟನೆ ಒಂದಾಗಿದೆ. ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್ಟ ಕಂದಮ್ಮ, ಸಾವನ್ನಪ್ಪಿರುವ ತನ್ನ ಅಮ್ಮನನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದಾಗಿದೆ. ಮಹಿಳೆ ಶಮ್ರಿಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಕುಸಿದು ಸಾವನ್ನಪ್ಪಿದ್ದು, ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೇ ನಿಲ್ದಾಣವೊಂದರಲ್ಲಿ ಬಟ್ಟೆಯಿಂದ ಸುತ್ತಿ ಇಡಲಾಗಿತ್ತು.

    23 ವರ್ಷದ ಬಿಹಾರ ಮೂಲದ ಕಾರ್ಮಿಕರ ಮಹಿಳೆ ಗುಜರಾತ್‍ನ ಅಲಹಾಬಾದ್‍ನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದಳು. ಲಾಕ್‍ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಒಂದು ಹೊತ್ತಿನ ಊಟಕ್ಕೂ ಸಮಸ್ಯೆ ಎದುರಿಸಿದ್ದ ಮಹಿಳೆ ಅನಾರೋಗ್ಯದ ಸಮಸ್ಯೆಗೆ ಗುರಿಯಾಗಿದ್ದಳು. ಇದೇ ಸಂದರ್ಭದಲ್ಲಿ ಸರ್ಕಾರ ಶ್ರಮಿಕ್ ಎಕ್ಸ್ ಪ್ರೆಸ್ ರೈಲು ಆರಂಭಿಸಿದ್ದ ಕಾರಣ ತನ್ನ ಸ್ವ-ಸ್ಥಳಕ್ಕೆ ತೆರಳಲು ನಿರ್ಧರಿಸಿದ್ದ ಮಹಿಳೆ ಮೇ 24 ರಂದು ರೈಲಿನಲ್ಲಿ ಸಹೋದರಿ ಹಾಗೂ ಇತರರೊಂದಿಗೆ ಮುಜಾಫರ್ ನಗರಕ್ಕೆ ಹೊರಟ್ಟಿದ್ದಳು. ಆದರೆ ರೈಲಿನ ಪ್ರಯಾಣದ ಸಂದರ್ಭದಲ್ಲೂ ಆಹಾರ ಸಿಗದೆ ಮತ್ತಷ್ಟು ಬಳಲಿದ್ದ ಮಹಿಳೆ ಮುಜಾಫರ್ ನಗರಕ್ಕೆ ಆಗಮಿಸುವ ಮುನ್ನವೇ ರೈಲಿನಲ್ಲೇ ಕುಸಿದು ಸಾವನ್ನಪ್ಪಿದ್ದಳು.

    ಆಕೆಯ ಸಂಬಂಧಿಗಳು ರೈಲ್ವೇ ನಿಲ್ದಾಣದಲ್ಲಿ ದೇಹವನ್ನ ಬಟ್ಟೆಯಲ್ಲಿ ಸುತ್ತಿ ಇಟ್ಟಿದ್ದರು. ಆದರೆ ತನ್ನ ಅಮ್ಮ ಸಾವನ್ನಪ್ಪಿರುವ ಅರಿವಿಲ್ಲದ ಪುಟ್ಟ ಕಂದಮ್ಮ ಬಟ್ಟೆಯೊಂದಿಗೆ ಆಡುತ್ತಾ ಅಮ್ಮನನ್ನು ಎಬ್ಬಿಸುವ ಪ್ರಯತ್ನ ನಡೆಸಿತ್ತು. ಘಟನೆ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ರೈಲ್ವೆ ಇಲಾಖೆ, ಮೃತ ಮಹಿಳೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಈಗಾಗಲೇ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಸುಳ್ಳು ಮಾಹಿತಿಯನ್ನು ಹಬ್ಬಿಸಬೇಡಿ ಎಂದು ತಿಳಿಸಿದೆ. ಹಸಿವು, ರಣ ಬೀಸಿಲು ಹಾಗೂ ಡಿಹೈಡ್ರೇಷನ್ ಕಾರಣದಿಂದ ಮಹಿಳೆ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • ಕಲಬುರಗಿಯಿಂದ ಶ್ರಮಿಕ್ ಎಕ್ಸ್‌ಪ್ರೆಸ್ ಮೂಲಕ ಬಿಹಾರಕ್ಕೆ ಹೊರಟ 1,436 ಪ್ರವಾಸಿ ಕಾರ್ಮಿಕರು

    ಕಲಬುರಗಿಯಿಂದ ಶ್ರಮಿಕ್ ಎಕ್ಸ್‌ಪ್ರೆಸ್ ಮೂಲಕ ಬಿಹಾರಕ್ಕೆ ಹೊರಟ 1,436 ಪ್ರವಾಸಿ ಕಾರ್ಮಿಕರು

    ಕಲಬುರಗಿ: ಉದ್ಯೋಗ ಆರಿಸಿ ಇಲ್ಲಿಗೆ ಒಂದು ಲಾಕ್‍ಡೌನ್‍ನಿಂದ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದ ಬಿಹಾರಿಗಳು ಬುಧವಾರ ರಾತ್ರಿ 8 ಗಂಟೆಗೆ ಶ್ರಮಿಕ್ ಎಕ್ಸ್‌ಪ್ರೆಸ್ ರೈಲಿನ ಮೂಲಕ ತಮ್ಮ ಸ್ವ-ಸ್ಥಳದತ್ತ ಪ್ರಯಾಣ ಬೆಳೆಸಿದರು.

    ಮಹಾಮಾರಿ ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕಳೆದೆರಡು ತಿಂಗಳಿನಿಂದ ದೇಶದಾದ್ಯಂತ ಲಾಕ್‍ಡೌನ್ ಪರಿಣಾಮ ಪ್ರವಾಸಿ ಕಾರ್ಮಿಕರು ಸಿಲುಕಿದ್ದರು. ಇದೀಗ ಲಾಕ್‍ಡೌನ್ ಸಡಿಲಿಕೆ ನೀಡಿ ಆಯಾ ಕಾರ್ಮಿಕರು ತಮ್ಮ ತವರು ರಾಜ್ಯಕ್ಕೆ ಪ್ರಯಾಣ ಬೆಳಸಲು ಸರ್ಕಾರ ಅವಕಾಶ ನೀಡಿರುವುದರಿಂದ ಬುಧವಾರ ಸಂಜೆ ಕಲಬುರಗಿ ರೈಲ್ವೆ ನಿಲ್ದಾಣದಿಂದ ಬಿಹಾರಕ್ಕೆ ವಲಸಿಗರು ಮುಖ ಮಾಡಿದರು. ತವರಿನತ್ತ ಹೊರಟ ವಲಸಿಗರ ಮುಖದಲ್ಲಿ ಮಂದಹಾಸ ಕಂಡಿತು.

    ಈ ಸಂದರ್ಭದಲ್ಲಿ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಹಾಜರಿದ್ದ ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸುಮಾರು 1,436 ಬಿಹಾರದ ನಿವಾಸಿಗಳು ಪ್ರಯಾಣಕ್ಕೆ ನೋಂದಣಿ ಮಾಡಿಕೊಂಡಿದ್ದು, ಅವರೆಲ್ಲರು ಇಂದು ತಮ್ಮ ರಾಜ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದರು.

    ಬಿಹಾರಕ್ಕೆ ಪ್ರಯಾಣ ಬೆಳೆಸಲು ಬೇರೆ ಜಿಲ್ಲೆಯಿಂದ ಬಂದವರನ್ನು ಆಯಾ ಜಿಲ್ಲೆಯಿಂದಲೇ ಸ್ಕ್ರೀನಿಂಗ್ ಮಾಡಿ ತರಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿದ್ದ ಕಾರ್ಮಿಕರಿಗೆ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಕ್ರೀನಿಂಗ್ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

    ಮಂಗಳವಾರಷ್ಟೇ ಕಲಬುರಗಿ ರೈಲು ನಿಲ್ದಾಣದಿಂದ ಮೊದಲನೇ ಶ್ರಮಿಕ್ ಎಕ್ಸ್‍ಪ್ರೆಸ್ ರೈಲು ಸುಮಾರು 1,500 ಜನ ಕಾರ್ಮಿಕರನ್ನು ಉತ್ತರ ಪ್ರದೇಶಕ್ಕೆ ಕರೆದುಕೊಂಡು ಹೋಗಿತ್ತು. ಇಂದು ಕಲಬುರಗಿಯಿಂದ ಬಿಹಾರಕ್ಕೆ ಹೋಗುತ್ತಿರುವ 2ನೇ ಶ್ರಮಿಕ್ ಎಕ್ಸ್ ಪ್ರೆಸ್ ರೈಲು ಇದಾಗಿದ್ದು, ಶುಕ್ರವಾರ ರೈಲು ಬಿಹಾರ ತಲುಪಲಿದೆ ಎಂದರು.

    ಗುರುವಾರ ಮತ್ತೊಂದು ರೈಲು ಬಿಹಾರಕ್ಕೆ: ಬಿಹಾರದ ವಲಸಿಗ ಕಾರ್ಮಿಕರ ಪ್ರಯಾಣಕ್ಕೆ ಕಲಬುರಗಿ ರೈಲ್ವೆ ನಿಲ್ದಾಣದಿಂದ ಗುರುವಾರ ಮತ್ತೊಂದು ಶ್ರಮಿಕ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ಶರತ್ ಬಿ. ಮಾಹಿತಿ ನೀಡಿದರು. ಡಿ.ಸಿ.ಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಸ್ಟೇಷನ್ ಮಾಸ್ಟರ್ ಪ್ರಸಾದ ರಾವ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಪ್ರವಾಸಿ ಕಾರ್ಮಿಕರನ್ನು ಬೀಳ್ಕೊಟ್ಟರು.

  • ‘ಸತ್ತರೆ ಅಲ್ಲೇ ಸಾಯಲಿ’, ಹೊರ ರಾಜ್ಯದವರು ನಮ್ಮ ರಾಜ್ಯಕ್ಕೆ ಬರೋದು ಬೇಡ: ಶಿವಲಿಂಗೇಗೌಡ

    ‘ಸತ್ತರೆ ಅಲ್ಲೇ ಸಾಯಲಿ’, ಹೊರ ರಾಜ್ಯದವರು ನಮ್ಮ ರಾಜ್ಯಕ್ಕೆ ಬರೋದು ಬೇಡ: ಶಿವಲಿಂಗೇಗೌಡ

    ಹಾಸನ: ಯಾರು ಎಲ್ಲಿ ಬದುಕುತ್ತಿದ್ದಾರೆ ಅಲ್ಲೇ ಬದುಕಲಿ. ಸತ್ತರೆ ಅಲ್ಲೇ ಸಾಯಲಿ, ಬದುಕಿದರೆ ಅಲ್ಲೇ ಬದುಕಲಿ ಎಂದು ಶಾಸಕ ಶಿವಲಿಂಗೇಗೌಡ ಅವರು ಹೇಳಿದ್ದು, ಹೊರರಾಜ್ಯದಿಂದ ಹಾಸನಕ್ಕೆ ಬರುವವರಿಗೆ ಅವಕಾಶ ನೀಡದಂತೆ ಮನವಿ ಮಾಡಿದ್ದಾರೆ.

    ಕೊರೊನಾ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಶಿವಲಿಂಗೇಗೌಡ ಅವರು, ಹೊರರಾಜ್ಯದಿಂದ ಹಾಸನಕ್ಕೆ ಬರುವವರಿಗೆ ಅವಕಾಶ ನೀಡದಂತೆ ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದ್ದಾರೆ.

    ಇಂದು ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ಸಭೆ ನಡೆಯುತ್ತಿತ್ತು. ಈ ವೇಳೆ ಮುಂಬೈನಿಂದ ಬಂದವರಿಂದ ಹಾಸನ ಗ್ರೀನ್‍ಝೋನ್ ಪಟ್ಟ ಕಳೆದುಕೊಂಡು ಜಿಲ್ಲೆಯ ಜನ ಆತಂಕಕ್ಕೊಳಪಟ್ಟ ವಿಚಾರವನ್ನು ಶಿವಲಿಂಗೇಗೌಡ ಅವರು ಪ್ರಸ್ತಾಪಿಸಿದರು.

    ಯಾರಿಗೂ ಹೊರರಾಜ್ಯದಿಂದ ಬರಲು ಅವಕಾಶ ನೀಡದಂತೆ ಮನವಿ ಮಾಡುತ್ತಿದ್ದೇನೆ. ಕಳೆದ 25 ವರ್ಷಗಳಿಂದ ಮುಂಬೈಯಲ್ಲಿ ವಾಸವಿದ್ದವರು ಈಗ ನಮ್ಮ ಜಿಲ್ಲೆ ಸೇಫ್ ಆಗಿದೆ ಎಂದು ಬರುತ್ತಿದ್ದಾರೆ. ಆದರೆ ಯಾರು ಎಲ್ಲಿ ಇದ್ದಾರೋ ಅಲ್ಲೇ ಇರಲಿ. ನಮ್ಮ ಜಿಲ್ಲೆ ಸೇಫ್ ಆಗಿದೆ. ಹೊರ ರಾಜ್ಯದವರ ಸಹವಾಸವೇ ಬೇಡ. ಅವರ ಜೀವನ ಅಲ್ಲಿ ಉತ್ತಮವಾಗಿದೆ. ಆದರೆ ಜೀವ ಭಯದಿಂದ ಮಾತ್ರ ಅವರು ಇಲ್ಲಿ ಬರಲು ಮುಂದಾಗುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಬೇಕು ಎಂದರೇ ಇದಕ್ಕೆ ಅವಕಾಶ ನೀಡಬಾರದು. ಮೋದಿ ಅವರು ಯಾವ ದೃಷ್ಟಿಯಿಂದ ಈ ಬಗ್ಗೆ ಅವಕಾಶ ನೀಡಿದ್ದರೆ ಎಂದು ತಿಳಿದಿಲ್ಲ. ಆದರೆ ನಮ್ಮ ಜಿಲ್ಲೆ ಸೇಫ್ ಆಗಬೇಕು ಎಂದರೇ ಜಿಲ್ಲಾಧಿಕಾರಿಗಳು ತಮಗೆ ಲಭಿಸಿರುವ ಅಧಿಕಾರವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

  • ಲಾಕ್‍ಡೌನ್: ಗಣಿನಾಡಿನಿಂದ ಹೊರಟ 13,671 ಮಂದಿ ಪ್ರವಾಸಿ ಕಾರ್ಮಿಕರು

    ಲಾಕ್‍ಡೌನ್: ಗಣಿನಾಡಿನಿಂದ ಹೊರಟ 13,671 ಮಂದಿ ಪ್ರವಾಸಿ ಕಾರ್ಮಿಕರು

    ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಿಂದ ಹೊರ ರಾಜ್ಯಕ್ಕೆ ಹೊರಡಲು ಪ್ರವಾಸಿ ಕಾರ್ಮಿಕರು ತಯಾರಾಗಿದ್ದು, ಒಟ್ಟು 13,671 ಕಾರ್ಮಿಕರನ್ನು ಹೊರ ರಾಜ್ಯಕ್ಕೆ ಕಳಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

    ಪ್ರತಿಯೊಬ್ಬ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಹೊಸಪೇಟೆಯಿಂದ ಮೇ 17 ರಂದು ತೆರಳಲಿರುವ ಎರಡು ವಿಶೇಷ ರೈಲಿನಲ್ಲಿ ಕಾರ್ಮಿಕರನ್ನು ಕಳಿಸಿ ಕೊಡಲಿದೆ. ಬಹುತೇಕ ಕಾರ್ಮಿಕರು, ಬಳ್ಳಾರಿ ಸಂಡೂರು ಹೊಸಪೇಟೆ ಸೇರಿದಂತೆ ಜಿಲ್ಲೆಯಲ್ಲಿ ಇರುವ ಗಣಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಬಳ್ಳಾರಿ ಹೊಸ ಬಸ್ ನಿಲ್ದಾಣ ಹಾಗೂ ಸಂಡೂರು ಹೊಸಪೇಟೆಯಲ್ಲಿ ಕಾರ್ಮಿಕರ ಸ್ಕ್ರೀನಿಂಗ್ ನಡೆಯುತ್ತಲಿದೆ.

    ಪ್ರತಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದ ಬಳಿಕ ಜಿಲ್ಲಾಡಳಿತ ಆರೋಗ್ಯ ಕಾರ್ಡ್ ನೀಡಲಿದ್ದು, ಆರೋಗ್ಯ ಕಾರ್ಡ್ ಹೊಂದಿದವರು ಟಿಕೆಟ್ ಪಡೆದು ಪ್ರಯಾಣ ಮಾಡಬಹುದಾಗಿದೆ. ಉಳಿದಂತೆ ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರಕ್ಕೆ ಬಸ್‍ನಲ್ಲಿ ಸಂಚಾರ ಮಾಡುವ ಮನಸ್ಸು ಇದ್ದವರನ್ನು ಬಸ್‍ನಲ್ಲಿ ಕಳುಹಿಸಿ ಕೊಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಈವರೆಗೂ ಯಾರು ರಾಜ್ಯ ಸರ್ಕಾರದ ಸೇವಾ ಸಿಂಧು ವೆಬ್ ಸೈಟ್‍ನಲ್ಲಿ ಹೆಸರು ನೋಂದಾಯಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಬೇರೆ ಬೇರೆ ರಾಜ್ಯದ ಒಟ್ಟು 13,671 ಜನ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಸಿದ್ದರೆ. ಉತ್ತರ ಪ್ರದೇಶದ ಸುಮಾರು 3,300 ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ.