Tag: Tourist

  • ಕರ್ನಾಟಕದ ಕಾಶ್ಮೀರ ಕೊಡಗು ಖಾಲಿ ಖಾಲಿ- ಪ್ರವಾಸಿಗರಿಲ್ಲದೇ ಭಣಗುಡುತ್ತಿವೆ ಪ್ರವಾಸಿ ತಾಣಗಳು

    ಕರ್ನಾಟಕದ ಕಾಶ್ಮೀರ ಕೊಡಗು ಖಾಲಿ ಖಾಲಿ- ಪ್ರವಾಸಿಗರಿಲ್ಲದೇ ಭಣಗುಡುತ್ತಿವೆ ಪ್ರವಾಸಿ ತಾಣಗಳು

    ಮಡಿಕೇರಿ: ಮಹಾಮಳೆಗೆ ನಲುಗಿ ಹೋಗಿದ್ದ ಕೊಡಗು ಸಹಜ ಸ್ಥಿತಿಗೆ ಬರುತ್ತಿದೆ. ಮಳೆರಾಯ ಸದ್ಯ ರಜೆ ಪಡೆದಿದರೂ ಪ್ರವಾಸಿಗರು ಮಾತ್ರ ಕೊಡಗಿಗೆ ಕಾಲಿಡಲು ಭಯಪಡುತ್ತಿದ್ದಾರೆ. ಪ್ರವಾಸಿಗರನ್ನೇ ನೆಚ್ಚಿಕೊಂಡಿದ್ದ ಅನೇಕ ಉದ್ಯಮಗಳು ನೆಲೆಕಚ್ಚಿದೆ.

    ಕೊಡಗಿನ ರಣಭೀಕರ ಜಲಪ್ರವಾಹದ ಎಫೆಕ್ಟ್ ಪ್ರವಾಸೋದ್ಯಮದ ಮೇಲೂ ಬಿದ್ದಿದೆ. ಕೊಡಗಿನ ಬಹುತೇಕ ವ್ಯಾಪಾರ-ವಹಿವಾಟು ಪ್ರವಾಸಿಗರ ಮೇಲೆಯೇ ಅವಲಂಬಿತವಾಗಿದೆ. ದುರಂತದ ಬಳಿಕ ಕೊಡಗು ಜಿಲ್ಲಾಡಳಿತ ಒಂದೂವರೆ ತಿಂಗಳು ಪ್ರವಾಸಿಗರಿಗೆ ನಿಷೇಧ ಹೇರಿತ್ತು. ಸೆಪ್ಟೆಂಬರ್ 10ರ ಬಳಿಕ ನಿಷೇಧ ತೆರವು ಮಾಡಿದರೂ ಪ್ರವಾಸಿಗರ ಸಂಖ್ಯೆ ಒಂದೇ ಸಮನೆ ಇಳಿಮುಖವಾಗಿದೆ. ಹೀಗಾಗಿ ಪ್ರವಾಸಿಗರನ್ನೇ ನೆಚ್ಚಿಕೊಂಡು ವ್ಯಾಪಾರ ಮಾಡುತ್ತಿದ್ದ ಮಂದಿಗೆ ಬರಸಿಡಿಲು ಬಡಿದಂತಾಗಿದೆ. ಪ್ರವಾಸಿ ತಾಣ, ಹೋಟೆಲ್, ಹೋಂ ಸ್ಟೇ ಹಾಗೂ ರೆಸಾರ್ಟ್‍ಗಳು ಖಾಲಿ ಖಾಲಿಯಾಗಿವೆ.

    ತಲಕಾವೇರಿ, ಭಾಗಮಂಡಲಕ್ಕೆ ನಿತ್ಯ ಸಾವಿರಾರು ಮಂದಿ ಬರುತ್ತಿದ್ದರು. ಇತ್ತೀಚೆಗೆ ಪ್ರತಿನಿತ್ಯ 50 ಮಂದಿ ಪ್ರವಾಸಿಗರು ಬಂದರೆ ಹೆಚ್ಚು. ಭಾಗಮಂಡಲದ ದೇವಸ್ಥಾನದಲ್ಲಿ ಮಧ್ಯಾಹ್ನದ ವೇಳೆ ಸಾವಿರ ಮಂದಿ ಊಟ ಮಾಡುತ್ತಿದ್ದರು. ಆದರೆ ಈಗ ಯಾರೂ ಇಲ್ಲ. ವೀಕೆಂಡ್‍ನಲ್ಲಿ ರಾಜಾಸೀಟ್‍ಗೆ 5 ಸಾವಿರಕ್ಕೂ ಹೆಚ್ಚು ಮಂದಿ ಬರುತ್ತಿದ್ದರು. ಈಗ ನೂರು, ನೂರೈವತ್ತು ಜನ ಮಾತ್ರ ಬರುತ್ತಿದ್ದಾರೆ ಎಂದು ರಾಜಾಸೀ ಸಿಬ್ಬಂದಿ ನಟರಾಜ್ ಹೇಳಿದ್ದಾರೆ.

    ಕುಶಾಲನಗರದ ನಿಸರ್ಗಧಾಮ, ದುಬಾರೆ ಆನೆ ಶಿಬಿರದಲ್ಲಿ ಕಾಲಿಡಲು ಜಾಗ ಇರುತ್ತಿರಲಿಲ್ಲ. ಈಗ ಅಲ್ಲಿಯೂ ಕೂಡ ಬಿಕೋ ಎನ್ನುತ್ತಿದೆ. ಚೇಲವಾರ ಫಾಲ್ಸ್ ಹಾಗೂ ಇರ್ಪು ಜಲಪಾತ ಕೂಡ ಜನರಿಲ್ಲದೇ ಭಣಗುಡುತ್ತಿವೆ.

    ಭೀಕರ ಜಲಪ್ರವಾಹಕ್ಕೆ ತುತ್ತಾಗಿದ್ದ ಕೊಡಗು ಹಂತ ಹಂತವಾಗಿ ಚೇತರಿಸಿಕೊಳ್ತಿದೆ. ಪ್ರವಾಸಿಗರು ಯಾವುದೇ ಭೀತಿ ಇಲ್ಲದೇ ಕೊಡಗಿಗೆ ಭೇಟಿ ನೀಡಬಹುದು. ಇದು ಪ್ರವಾಸಿಗರನ್ನೇ ನಂಬಿಕೊಂಡಿರುವ ಜನರ ಜೀವನ ನಿರ್ವಹಣೆಗೂ ಅನುಕೂಲವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

    ಬಂಡೀಪುರದಲ್ಲಿ ಸಫಾರಿಗೆ ಹೋದಾಗ ದಾಳಿಗೆ ಮುಂದಾದ ಮರಿಯಾನೆ!

    ಚಾಮರಾಜನಗರ: ಸಫಾರಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

    ಭಾನುವಾರ ಸಂಜೆ ಪ್ರವಾಸಿಗರು ಬಂಡೀಪುರಕ್ಕೆ ಬಂದಿದ್ದರು. ಹೀಗೆ ಬಂದವರು ಸಫಾರಿ ಹೋಗುತ್ತಿದ್ದ ವೇಳೆ ನಾಲ್ಕು ಆನೆಗಳಿದ್ದ ಗುಂಪೊಂದನ್ನು ನೋಡಿದ್ದಾರೆ. ಆದ್ರೆ ಪ್ರವಾಸಿಗರು ತಮ್ಮ ಪಾಡಿಗೆ ತಾವು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಆನೆಗಳ ಪೈಕಿ ಮರಿಯಾನೆಯೊಂದು ಏಕಾಏಕಿ ದಾಳಿ ಮಾಡಲು ಮುಂದಾಗಿದೆ.

    ಅದೃಷ್ಟವಶಾತ್ ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪಾರಾಗಿದ್ದಾರೆ. ಮರಿಯಾನೆಗೆ ಪ್ರವಾಸಿಗರು ತೊಂದರೆ ಮಾಡಬಹುದು ಎಂದು ಭಾವಿಸಿ ಈ ದಾಳಿ ಮಾಡಲು ಮುಂದಾಗಿರಬಹುದು ಎಂದು ಅಂದಾಜಿಸಲಾಗಿದೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=o9_ovJwjnIY

  • ಸೆಲ್ಫಿ ಫೋಟೋಗಾಗಿ ಪ್ರಾಣವನ್ನೇ ಪಣಕ್ಕಿಟ್ಟು ಹುಚ್ಚು ಸಾಹಸ

    ಸೆಲ್ಫಿ ಫೋಟೋಗಾಗಿ ಪ್ರಾಣವನ್ನೇ ಪಣಕ್ಕಿಟ್ಟು ಹುಚ್ಚು ಸಾಹಸ

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮ, ಆಹ್ಲಾದಕರ ವಾತಾವರಣ, ಹಸಿರು ಸಿರಿಯ ನಡುವೆ ಅರುಣೋದಯ, ಸೂರ್ಯಾಸ್ತಮದ ದೃಶ್ಯ ಕಣ್ತುಂಬಿಕೊಳ್ಳೋದೇ ಒಂದು ಸೊಗಸು. ಆದರೆ ಈ ಅದ್ಭುತದ ಜೊತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳಬೇಕೆಂದು ಎಲ್ಲರ ಆಸೆ. ಆ ಒಂದು ಫೋಟೋಗಾಗಿ ಪ್ರವಾಸಿಗರು ಪ್ರಾಣವನ್ನೇ ಪಣಕ್ಕಿಟ್ಟು ಹುಚ್ಚು ಸಾಹಸ ಮಾಡುತ್ತಿದ್ದಾರೆ.

    ಒಂದೆಡೆ ಮಂಟಪ ಹತ್ತುವುದಕ್ಕೆ ಸರ್ಕಸ್, ಮತ್ತೊಂದೆಡೆ ಹತ್ತೋದು ಹತ್ತಿದ್ದಾಯ್ತು ಇಳಿಯೋದು ಹೆಂಗೆ ಎಂದು ಯುವಕ-ಯುವತಿಯರು ಚಿಂತೆ ಪಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಸೆಲ್ಫಿಗಾಗಿ ಇಲ್ಲಿಗೆ ಬರೋ ಸಾವಿರಾರು ಪ್ರವಾಸಿಗರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸರ್ಕಸ್ ಮಾಡುತ್ತಿದ್ದಾರೆ. ಮನಮೋಹಕ ದೃಶ್ಯದ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

    ಈಗಾಗಲೇ ಈ ಮಂಟಪಗಳು ಶಿಥಿಲಾವಸ್ಥೆಗೆ ತಲುಪಿದ್ದು, ಯಾವಾಗ ಬೇಕಾದರೂ ಕುಸಿಯಬಹುದು. ಇದರ ಮೇಲೆ ಹತ್ತುವುದು ಅಪಾಯ ಅಂತ ಬೋರ್ಡ್ ಹಾಕಿದರೂ ಅದನ್ನೇ ಅಡಿಪಾಯ ಮಾಡಿಕೊಂಡು ಪ್ರವಾಸಿಗರು ಮಂಟಪ ಏರುತ್ತಿದ್ದಾರೆ. ಇವರಿಗೆ ತಮ್ಮ ಜೀವದ ಬಗ್ಗೆ ಭಯವೇ ಇಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಒಂದು ದಿನದ ಎಂಜಾಯ್ ಮೆಂಟ್‍ಗೆ ಅಂತ ಸಾವಿರಾರು ಪ್ರವಾಸಿಗರು ನಂದಿ ಹಿಲ್ಸ್ ಗೆ ಬರುತ್ತಾರೆ. ಆದರೆ ಮೋಜಿನ ನಡುವೆ ಯಾರಾದರೂ ಬಿದ್ದು ಕೈ, ಕಾಲು ಕಳೆದುಕೊಂಡರೆ, ಪ್ರಾಣ ಹಾನಿಯಾದರೆ ಯಾರು ಹೊಣೆ. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಭದ್ರತೆ ಒದಗಿಸಬೇಕಿದೆ ಅಂತ ಸ್ಥಳೀಯರು ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೂರಾರು ಅಡಿ ಎತ್ತರದಿಂದ ಬಳುಕೋ ಬಳ್ಳಿಯಂತೆ ಶ್ವೇತವರ್ಣೆಯಾಗಿ ಧುಮುಕುತ್ತಿದೆ ಜಲಕನ್ಯೆ ಮಲ್ಲಳ್ಳಿ ಜಲಪಾತ!

    ನೂರಾರು ಅಡಿ ಎತ್ತರದಿಂದ ಬಳುಕೋ ಬಳ್ಳಿಯಂತೆ ಶ್ವೇತವರ್ಣೆಯಾಗಿ ಧುಮುಕುತ್ತಿದೆ ಜಲಕನ್ಯೆ ಮಲ್ಲಳ್ಳಿ ಜಲಪಾತ!

    ಮಡಿಕೇರಿ: ಕೊಡಗಿನಲ್ಲಿ ಮಳೆಗಾಲ ಶುರುವಾದರೆ ಗಿರಿಕಾನನದ ನಡುವಿನಿಂದ ದುಮ್ಮಿಕ್ಕೋ ಜಲಧಾರೆಗಳ ವಯ್ಯಾರ ನೋಡೋಕೆ ಎರಡು ಕಣ್ಣು ಸಾಲಲ್ಲ. ಕೊಡಗಿನ ಅತಿ ಸುಂದರ ಜಲಕನ್ಯೆ ಮಲ್ಲಳ್ಳಿ ಜಲಪಾತ ಮೊದಲ ಮಳೆಗೆ ತುಂಬಿ ಹರಿಯುತ್ತಿದ್ದು ನಯನ ಮನೋಹರವಾಗಿ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

    ಸುತ್ತಲೂ ಮುಗಿಲು ಚುಂಬಿಸೋ ಗಿರಿಶಿಖರಗಳು, ಹಚ್ಚ ಹಸಿರಿನಿಂದ ಕಂಗೊಳಿಸೋ ಪುಷ್ಪಗಿರಿ ಮೀಸಲು ಅರಣ್ಯದ ನಡುವೆ ನೂರಾರು ಅಡಿ ಎತ್ತರದಿಂದ ಬಳುಕೋ ಬಳ್ಳಿಯಂತೆ ಶ್ವೇತವರ್ಣೆಯಾಗಿ ಧುಮುಕುವ ಜಲರಾಶಿ. ಅಪರೂಪದ ಜಲರಾಶಿಯನ್ನು ಕಣ್ತುಂಬಿಕೊಳ್ಳುತ್ತಿರೋ ಪ್ರವಾಸಿಗರು ಇದು ಕೊಡಗಿನ ಅತಿಸುಂದರ ಜಲಕನ್ಯೆ ಮಲ್ಲಳ್ಳಿ ಜಲಪಾತದ ವಯ್ಯಾರ.

    ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿಯ ಈ ಜಲಪಾತ ನೋಡಲು ಸುಂದರ ಅತಿಸುಂದರ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವರ್ಷಧಾರೆಗೆ ಮೈದುಂಬಿ ಹರಿಯುತ್ತಿರೋ ಜಲರಾಶಿ ನೋಡುಗರ ಕಣ್ಣು ಕೊರೈಸುತ್ತಿದೆ. ಮುಗಿಲೆತ್ತರದಿಂದ ಹಾಳ್ನೊರೆಯಂತೆ ಇಳಿಯೋ ಜಲಪಾತದ ಸೌಂದರ್ಯ ಬಣ್ಣಿ ಸಲಸದಳ, ಹಸಿರ ನಡುವಿನಿಂದ ಬೋರ್ಗರೆಯುತ್ತಾ ಕರಿಕಲ್ಲುಗಳನ್ನು ಸೀಳಿಕೊಂಡು ರುದ್ರರಮಣೀಯ ಜಲಪಾತವನ್ನು ನೋಡೋದೆ ಅಂದ.

    ಅಕ್ಷರಶಃ ಸ್ವರ್ಗಕ್ಕೆ ಕಿಚ್ಚು ಹಚ್ಚುಂತಿರೋ ಇಲ್ಲಿನ ನಿಸರ್ಗದ ಸೌಂದರ್ಯ. ಇದರ ನಡುವೆ ಪ್ರಪಾತದಲ್ಲಿ ಕಾಣೋ ಜಲರಾಶಿ ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತದೆ. ಪುಷ್ಪಗಿರಿಯ ತಪ್ಪಲಿನಿಂದ ಹುಟ್ಟಿಬರೋ ಕುಮಾರಧಾರಾ ನದಿ ಸೃಷ್ಟಿಸಿರೋ ಈ ಅಪರೂಪದ ಜಲಧಾರೆಯ ಬಳುಕು ಬಿನ್ನಾಣ, ವಯ್ಯಾರದಿಂದ ಸಂಗೀತ ಲೋಕ ಸೃಷ್ಟಿಸಿ ಹರಿಯೋ ನೀರ ಝರಿ ದಣಿದ ಮನಕ್ಕೆ ನೆಮ್ಮದಿ ನೀಡುತ್ತೆ. ನೋಡಿದಷ್ಟು ಮತ್ತೆ ಮತ್ತೆ ನೋಡಬೇಕೆನಿಸೋ ಜಲಪಾತದ ಸೊಬಗು ನಯನ ಮನೋಹರವಾಗಿದೆ.

    ಈ ಜಲಪಾತದ ಸೌಂದರ್ಯವನ್ನು ಹತ್ತಿರದಿಂದ ಸವಿಯ ಬೇಕಾದರೆ ನೂರಾರು ಮೆಟ್ಟಿಲುಗಳನ್ನಿಳಿದು ಕೆಲವೇ ಕಿಲೋಮೀಟರ್ ಗಟ್ಟಲೆ ಬೆಟ್ಟವನ್ನಿಳಿಯಬೇಕು. ಇಷ್ಟು ಕಷ್ಟಪಟ್ಟು ಕೆಳಗಿಳಿದರೆ ಸ್ವರ್ಗವೇ ಕಣ್ಣೆದುರಿಗೆ ಬಂದ ಅನುಭವವಾಗುತ್ತೆ. ದುರಂತ ಅಂದ್ರೆ ಇಲ್ಲಿಗೆ ಬರುವ ಪ್ರವಾಸಿಗರು ಸೇಲ್ಫಿ ಕ್ರೇಜ್‍ನಿಂದ ಫೋಟೋ ತೆಗೆಯಲು ಹೋಗಿ ಸುಮಾರು 14 ಮಂದಿ ಈ ಜಲಪಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

    ಒಟ್ಟಿನಲ್ಲಿ ಮಳೆಗಾಲದಲ್ಲಿ ತನ್ನ ಸೌಂದರ್ಯವನ್ನು ಇಮ್ಮಡಿಗೊಳಿಸಿಕೊಂಡು ಪ್ರಕೃತಿ ಪ್ರಿಯರ ಮನತಣಿಸೋ ನಿಸರ್ಗದ ಸೊಬಗು ನಿಜಕ್ಕೂ ಅಚ್ಚರಿ ಮೂಡಿಸುತ್ತೆ. ಮಾಮೂಲಿಯಂತೆ ಅಬ್ಬಿ ಜಲಪಾತ ನೋಡಿ ಹರ್ಷಗೊಳ್ಳೊ ಮನಕ್ಕೆ ಒಮ್ಮೆ ರುದ್ರರಮಣೀಯ ಮಲ್ಲಳ್ಳಿ ಜಲಪಾತದ ದರ್ಶನವಾದರೆ ನಿಜಕ್ಕೂ ಸಂತಸ ಉಕ್ಕಿಬರೋದಂತು ಸುಳ್ಳಲ್ಲ.

  • ಸಿಂಹವನ್ನು ಮುಟ್ಟುತ್ತಿರುವ ಪ್ರವಾಸಿಗರ ವಿಡಿಯೋ ವೈರಲ್!

    ಸಿಂಹವನ್ನು ಮುಟ್ಟುತ್ತಿರುವ ಪ್ರವಾಸಿಗರ ವಿಡಿಯೋ ವೈರಲ್!

    ಜೊಹಾನ್ಸ್ ಬರ್ಗ್: ಸಫಾರಿ ವೇಳೆ ಮಾರ್ಗ ಮಧ್ಯೆ ಅಡ್ಡ ಬಂದ ಸಿಂಹವನ್ನು ಪ್ರವಾಸಿಗರು ಮುಟ್ಟುತ್ತಿರುವ ಘಟನೆ ಆಫ್ರಿಕಾದ ಸೆರೆಂಗೆಟಾ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ.

    ಆಫ್ರಿಕಾದ ಸೆರೆಂಗೆಟಾ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರು ಸಫಾರಿ ವೇಳೆ ಸಿಂಹವನ್ನು ಮುಟ್ಟುತ್ತಿರುವ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ.

    ಪ್ರವಾಸಿಗರ ಸಫಾರಿ ವೇಳೆ ಸಿಂಹಗಳ ಗುಂಪೊಂದು ಮಾರ್ಗಮಧ್ಯೆ ಬಂದಿದೆ. ಈ ವೇಳೆ ಸಿಂಹಗಳು ವಾಹನಗಳ ಸುತ್ತ ಸುತ್ತುವರಿಯುತ್ತಿರುವಾಗ ಪ್ರವಾಸಿಗರು ಸಿಂಹಗಳನ್ನು ಮುಟ್ಟಿದ್ದಾರೆ. ಸಿಂಹವು ಪ್ರವಾಸಿಗರ ಕಡೆ ತಿರುಗಿ ಘರ್ಜಿಸಿದಾಗ ಹೆದರಿ ಸಫಾರಿ ವಾಹನದ ಕಿಟಕಿಗಳನ್ನು ಮುಚ್ಚಿಕೊಂಡಿದ್ದಾರೆ. ಅಲ್ಲದೇ ಸಿಂಹಗಳು ವಾಹನದ ನೆರಳಲ್ಲೇ ಮಲಗಿರುವ ವಿಡಿಯೋ ತೆಗೆದು ಸೋಶಿಯಲ್ ಮಿಡಿಯಾಗಳಲ್ಲಿ ಹಾಕಿದ್ದಾರೆ. ಸಿಂಹವನ್ನು ಮುಟ್ಟುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

    ಸಿಂಹಗಳು ಮೊದಲು ತಮ್ಮ ಪಾಡಿಗೆ ತಾವು ವಾಹನದ ಸುತ್ತ ಸುತ್ತುವರಿದಿದ್ದವು, ಪ್ರವಾಸಿಗರೂ ಮುಟ್ಟಿದ ಮೇಲೆಯೇ ಅವರ ಮೇಲೆ ಘರ್ಜಿಸಿವೆ.

    ವನ್ಯಜೀವಿ ಪ್ರದೇಶಗಳಾದ ಮರಾ ಹಾಗೂ ಸೆರೆಂಗೆಟಾ ಪ್ರದೇಶಗಳಲ್ಲಿ ಮರಗಳ ನಾಶದಿಂದ ಬಿಸಿಲಿನ ಬೇಗೆಗೆ ಪ್ರಾಣಿಗಳು ತತ್ತರಿಸಿವೆ. ಸಫಾರಿ ವೇಳೆ ವಾಹನಗಳ ಬಳಿ ಬಂದು ಅವುಗಳ ನೆರಳಿನಲ್ಲಿ ವಿಶ್ರಾಂತಿ ಪಡೆಯುವುದು ಸರ್ವೇಸಾಮಾನ್ಯ ವಿಷಯವಾಗಿದೆ ಎಂದು ವರದಿಯಾಗಿದೆ.

    https://www.youtube.com/watch?v=fpOh7OQpZ4g&feature=youtu.be

  • ಹಾಲ್ನೊರೆ ಸೂಸುತ್ತಿರುವ ಅಬ್ಬೆ ಫಾಲ್ಸ್!

    ಹಾಲ್ನೊರೆ ಸೂಸುತ್ತಿರುವ ಅಬ್ಬೆ ಫಾಲ್ಸ್!

    ಮಡಿಕೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧವಾದ ಅಬ್ಬಿ ಜಲಪಾತ ಬೋರ್ಗರೆಯುತ್ತಿದೆ. ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿರುವ ಈ ಜಲಧಾರೆಯ ಸೊಬಗನ್ನು ನೋಡುವುದೇ ಈಗ ಕಣ್ಣಿಗೆ ಹಬ್ಬವಾಗಿದೆ. ಸಾವಿರಾರು ಪ್ರವಾಸಿಗರು ಈ ಜಲಪಾತವನ್ನು ನೋಡಲು ಮುಗಿಬೀಳುತ್ತಿದ್ದಾರೆ.

    ಮಡಿಕೇರಿಯಲ್ಲಿ ಮಳೆ ಆರಂಭವಾಯಿತೆಂದರೆ ಇಲ್ಲಿಯ ಅಬ್ಬೆ ಫಾಲ್ಸ್ ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗುತ್ತದೆ. ಕಾಫಿ ತೋಟದ ಮಧ್ಯೆ ಪ್ರವಾಸಿಗರ ದಂಡು ಸಾಗುತ್ತಿದೆ. ದೂರದಲ್ಲಿ ನೀರಿನ ನಿನಾದ ಕಿವಿಗೆ ಅಪ್ಪಳಿಸುತ್ತಿದೆ. ಆಗಾಗ ಬೀಳುವ ತುಂತುರು ಮಳೆಗೆ ಪ್ರವಾಸಿಗರು ಕಿಕ್ಕಿರಿದು ಸೇರಿದ್ದಾರೆ. ಈ ದೃಶ್ಯ ಮಡಿಕೇರಿಯ ಅಬ್ಬೆ ಜಲಪಾತದಲ್ಲಿ ಕಂಡು ಬರುತ್ತಿದೆ.

    ಮಡಿಕೇರಿಯಲ್ಲಿ ವರುಣ ಅಬ್ಬರಿಸುತ್ತಿರುವ ಕಾರಣ ಅಬ್ಬೆ ಜಲಪಾತ ದುಮ್ಮುಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮಡಿಕೇರಿಯಿಂದ 8 ಕಿ.ಮೀ ದೂರದಲ್ಲಿರುವ ಈ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿದೆ. ಇದನ್ನು ನೋಡಲು ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಇಲ್ಲಿಗೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ಜಲಪಾತ ಹಾಗೂ ಸುತ್ತಲಿನ ಪ್ರಕೃತಿ ಸೌಂದರ್ಯ ನೋಡಿ ಆನಂದಿಸುತ್ತಿದ್ದಾರೆ.

    ಅಬ್ಬೆ ಜಲಪಾತದ ವಿಶೇಷ ಎಂದರೆ ವಾಹನದಿಂದ ಇಳಿದು ಸುಮಾರು ಅರ್ಧ ಕಿ.ಮೀ ನಡೆದುಕೊಂಡು ಹೋಗಬೇಕು. ಇದು ಪ್ರವಾಸಿಗರಿಗೆ ಮತ್ತಷ್ಟು ಮಜಾ ನೀಡುತ್ತದೆ. ದೊಡ್ಡವರಿಂದ ಹಿಡಿದು ಪುಟ್ಟ ಪುಟ್ಟ ಮಕ್ಕಳವರೆಗೂ ಆಗಮಿಸಿ ಜಲಪಾತದ ಸೌಂದರ್ಯವನ್ನು ನೋಡಿ ಆನಂದಿಸುತ್ತಾರೆ. ಮಡಿಕೇರಿಯಿಂದ ಇಲ್ಲಿಗೆ ಬಸ್ ವ್ಯವಸ್ಥೆಯಿಲ್ಲ. ಆದ ಕಾರಣ ಪ್ರತಿಯೊಬ್ಬರು ವಾಹನದಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಇನ್ನೂ ಮುಂದಿನ ಐದು ತಿಂಗಳವರೆಗೂ ಜಲಪಾತದ ಈ ಸೌಂದರ್ಯ ಇದೇ ರೀತಿ ಇರುತ್ತದೆ.

    ಒಟ್ಟಿನಲ್ಲಿ ಧಾರಾಕಾರ ಮಳೆಯಿಂದಾಗಿ ಹಾಲ್ನೊರೆಯಂತೆ ಧುಮ್ಮುಕ್ಕುವ ಅಬ್ಬೆ ಫಾಲ್ಸ್ ವೀಕ್ಷಣೆ ಮಾಡುವುದೇ ಪ್ರವಾಸಿಗರ ಪಾಲಿಗೆ ಸ್ವರ್ಗ. ನೀವು ಕೂಡ ಬಿಡುವು ಮಾಡಿಕೊಂಡು ಬನ್ನಿ. ಅಬ್ಬೆ ಫಾಲ್ಸ್ ವನ್ನು ನೋಡಿ ಎಂಜಾಯ್ ಮಾಡಿ.

  • ಪ್ರವಾಸಿಗರಿಗೆ ಎರಡು ದಿನ ಕೆಆರ್ ಎಸ್, ಬೃಂದಾವನ ಪ್ರವೇಶ ನಿಷೇಧ

    ಪ್ರವಾಸಿಗರಿಗೆ ಎರಡು ದಿನ ಕೆಆರ್ ಎಸ್, ಬೃಂದಾವನ ಪ್ರವೇಶ ನಿಷೇಧ

    ಮಂಡ್ಯ: ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಪ್ರಾಣ ಹಾನಿಯಾಗಿದ್ದ ಪರಿಣಾಮ ಎರಡು ದಿನಗಳ ಕಾಲ ಪ್ರವಾಸಿಗರಿಗೆ ಕೆಆರ್‍ಎಸ್, ಬೃಂದಾವನ ಪ್ರವೇಶ ನಿಷೇಧಿಸಲಾಗಿದೆ.

    ಮಂಗಳವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ಕೆಆರ್ ಎಸ್‍ನ ಬೃಂದಾವನದ ಎರಡು ಮರಗಳು ಉರುಳಿಬಿದ್ದಿವೆ. 30 ಕ್ಕೂ ಹೆಚ್ಚು ಮರದ ರೆಂಬೆಕೊಂಬೆಗಳು ಮುರಿದು ಬಿದ್ದಿರುವುದರಿಂದ ಮರದಲ್ಲಿದ್ದ ನೂರಾರು ಪಕ್ಷಿಗಳು ಧರೆಗುರುಳಿ ನರಳಾಡುತ್ತಿವೆ. ತಮಿಳುನಾಡು ಮೂಲದ ಓರ್ವ, ಕೇರಳ ಮೂಲದ ಇಬ್ಬರು ಸೇರಿ ಮೂವರು ಮೃತಪಟ್ಟು, ಹನ್ನೊಂದು ಪ್ರವಾಸಿಗರು ಗಾಯಗೊಂಡಿದ್ದರು. ಈ ಹಿನ್ನೆಲೆ ಬೃಂದಾವನ ಪ್ರವೇಶ ನಿಷೇಧ ಮಾಡಲಾಗಿದೆ. ಮರಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪ್ರವೇಶ ನಿಷೇಧಿಸಲಾಗಿದೆ ಅಂತ ನಿಗಮದ ಇಇ ಬಸವರಾಜೇಗೌಡ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೆಆರ್​ಎಸ್ ಬಳಿ ವರುಣನ ಅವಾಂತರ – ಮರ ಬಿದ್ದು ಮೂವರು ಪ್ರವಾಸಿಗರ ಸಾವು

    ಕೆಲವು ಪಕ್ಷಿಗಳು ಮರದಿಂದ ಬಿದ್ದು ಗಾಯಗೊಂಡು ನರಳಾಡುತ್ತಿವೆ. ಪಕ್ಷಿಗಳ ಸ್ಥಿತಿ ನೋಡಿ ಸಂಕಟಪಡುತ್ತಿರುವ ಸಾರ್ವಜನಿಕರು ಗಾಯಗೊಂಡಿರುವ ಪಕ್ಷಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಅಧಿಕಾರಿಗಳನ್ನು ಆಗ್ರಹಿಸುತ್ತಿದ್ದಾರೆ.

    ವಿಶ್ವವಿಖ್ಯಾತ ಕೆಆರ್ ಎಸ್ ಬೃಂದಾವನದಲ್ಲಿ ಮೊದಲ ಬಾರಿಗೆ ಈ ರೀತಿಯ ಅವಘಡ ನಡೆದಿದ್ದು, ಮುರಿದು ಬಿದ್ದ ಮರಗಳು, ರೆಂಬೆಕೊಂಬೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ತೊಂದರೆಯಾಗದಂತೆ ಪ್ರವಾಸಿಗರಿಗೆ ಎರಡು ದಿನ ಕೆಆರ್‍ಎಸ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

  • ದುಬಾರೆಯಲ್ಲಿ ರ‍್ಯಾಫ್ಟಿಂಗ್ ವೇಳೆ ಪ್ರವಾಸಿಗನ ಕೊಲೆ

    ದುಬಾರೆಯಲ್ಲಿ ರ‍್ಯಾಫ್ಟಿಂಗ್ ವೇಳೆ ಪ್ರವಾಸಿಗನ ಕೊಲೆ

    ಮಡಿಕೇರಿ: ಕೊಡಗು ಅಂದ್ರೆ ಎಲ್ಲರ ಮೈ ರೋಮಾಂಚನವಾಗುತ್ತದೆ. ಪ್ರಕೃತಿಯ ಮಡಿಲಲ್ಲಿ ಒಂದು ನಾಲ್ಕು ದಿನ ಕಳೆದು ಎಂಜಾಯ್ ಮಾಡಿ ಬರೋಣ, ಕೊಡಗಿನ ಪರಿಸರದಲ್ಲಿ ಸುತ್ತಾಡೋಣ ಅಂತೆಲ್ಲಾ ಜಿಲ್ಲೆಗೆ ಪ್ರವಾಸಿಗರು ದಿನನಿತ್ಯ ಸಾಗರೋಪಾದಿಯಲ್ಲಿ ಬರುತ್ತಾರೆ. ಪರಿಣಾಮ ಜಿಲ್ಲೆಯ ಪ್ರವಾಸೋದ್ಯಮವೂ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಆದ್ರೆ ಇಲ್ಲಿನ ಆಡಳಿತದ ವೈಫಲ್ಯ, ಪ್ರವಾಸಿಗರ ಅತಿರೇಕದ ವರ್ತನೆ ಮತ್ತು ಸ್ಥಳೀಯರ ದಬ್ಬಾಳಿಕೆಯಿಂದ ಕೊಡಗು ಜಿಲ್ಲೆಯ ಹೆಸರಿಗೆ ಕಳಂಕ ತರುವಂತವಾಗಿದೆ.

    ಇತ್ತೀಚೆಗೆ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ದುಬಾರೆಗೆ ಹೈದ್ರಾಬಾದಿನ ಕಂಪನಿಯ ಯುವಕರ ತಂಡವೊಂದು ಪ್ರವಾಸಕ್ಕೆಂದು ಬಂದಿದ್ದು, ರ‍್ಯಾಫ್ಟಿಂಗ್ ಗೆ ತೆರಳಿದ್ದಾಗ ರ‍್ಯಾಫ್ಟರ್ ನಡುವೆ ಅತಿರೇಕದಿಂದ ವರ್ತಿಸಿ ಜಗಳ ಮಾಡಿದ್ದಾರೆ. ಇದಾದ ಬಳಿಕ ರ‍್ಯಾಫ್ಟಿಂಗ್ ಸ್ಥಳದಲ್ಲಿ ಮತ್ತೆ ಪ್ರವಾಸಿ ಯುವಕರು ಹಾಗೂ ರ‍್ಯಾಫ್ಟರ್ ಗಳ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿದೆ. ಈ ಸಂದರ್ಭ ರ‍್ಯಾಫ್ಟಿಂಗ್ ಗೆ ಬಳಸುವ ಪೆಡಲ್ ನಿಂದ ರ‍್ಯಾಫ್ಟರ್ ಹಲ್ಲೆ ಮಾಡಿದ್ದಾನೆ. ಪರಿಣಾಮ ಐದಾರು ಮಂದಿಗೆ ಗಾಯಗಳಾಗಿದ್ದು, ಪ್ರವಾಸಿ ಯುವಕ ರಜಿ ಅಹಮ್ಮದ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಿತಾದರೂ ಆತ ಮೃತಪಟ್ಟಿದ್ದಾನೆ.

    ಯುವಕನ ಸಾವಿಗೆ ಕಾರಣರಾದ ರ‍್ಯಾಫ್ಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದ ದುಬಾರೆ ಹಾಗೂ ನಂಜರಾಯಪಟ್ಟಣ ಸುತ್ತಮುತ್ತಲಿನ ಸುಮಾರು 7 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ದುಬಾರೆ ರ‍್ಯಾಫ್ಟಿಂಗ್ ಹಿಂದಿನಿಂದಲೂ ವಿವಾದಿತ ವಿಚಾರವಾಗಿದ್ದು, ಖಾಸಗಿ ವ್ಯಕ್ತಿಗಳು ರ‍್ಯಾಫ್ಟಿಂಗ್ ನಡೆಸುತ್ತಿದ್ದಾರೆ. ಅದನ್ನು ವಶಕ್ಕೆ ಪಡೆದು ರ‍್ಯಾಫ್ಟಿಂಗ್ ನಿರ್ವಹಣೆ ಮಾಡುವುದರಲ್ಲಿ ಹಾಗೂ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ನೀಡಿ, ಪ್ರವಾಸಿಗರ ಅತಿರೇಕದ ವರ್ತನೆಗೆ ಕಡಿವಾಣ ಹಾಕುವುದರಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಂಪೂರ್ಣವಾಗಿ ವಿಫಲವಾಗಿರುವುದೇ ಇಂತಹ ದುರ್ಘಟನೆಗಳಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ. ಅಲ್ಲದೆ ಜಿಲ್ಲೆಯ ಇತರೆ ಜಲಪಾತಗಳಂತಹ ಪ್ರವಾಸಿ ತಾಣಗಳಲ್ಲೂ ಪ್ರವಾಸಿರಿಗೆ ಸೂಕ್ತ ರಕ್ಷಣೆ ಇಲ್ಲದಿರೋದು ಹಲವು ಅನಾಹುತಗಳಿಗೆ ಕಾರಣವಾಗಿದೆ.

     

  • ಮಡಿಕೇರಿಯಲ್ಲಿ ಹೆಚ್ಚಿದ ಪ್ರವಾಸಿಗರ ದಂಡು- ಇರ್ಪು ಫಾಲ್ಸ್ ನೋಡಲು ಜನವೋ ಜನ

    ಮಡಿಕೇರಿಯಲ್ಲಿ ಹೆಚ್ಚಿದ ಪ್ರವಾಸಿಗರ ದಂಡು- ಇರ್ಪು ಫಾಲ್ಸ್ ನೋಡಲು ಜನವೋ ಜನ

    ಮಡಿಕೇರಿ: ಹೊಸ ವರ್ಷ ಪ್ರಾರಂಭವಾಗೋಕೆ ದಿನಗಣನೆ ಶುರುವಾಗಿದೆ. ಇನ್ನು ಪ್ರವಾಸಿಗರ ಹಾಟ್ ಫೇವರಿಟ್ ತಾಣ ಮಡಿಕೇರಿಯಲ್ಲೂ ನ್ಯೂ ಇಯರ್ ಆಚರಣೆಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಈಗಾಗಲೇ ಸಾವಿರಾರು ಪ್ರವಾಸಿಗರು ಮಡಿಕೇರಿಗೆ ಲಗ್ಗೆಯಿಟ್ಟಿದ್ದಾರೆ.

    ಅದರಲ್ಲೂ ಇರ್ಪು ಫಾಲ್ಸ್ ನಲ್ಲಂತೂ ಪ್ರವಾಸಿಗರು ಸಖತಾಗಿ ಎಂಜಾಯ್ ಮಾಡುತ್ತಿದ್ದಾರೆ. ಮಡಿಕೇರಿಯಿಂದ 50 ಕಿಲೋಮೀಟರ್ ದೂರದಲ್ಲಿರೋ ಬ್ರಹ್ಮಗಿರಿತಪ್ಪಲಿನ ನಡುವಿನಿಂದ ಧುಮುಕುವ ಇರ್ಪು ಫಾಲ್ಸ್‍ನ ಅಂದ ಎಷ್ಟು ಹೇಳಿದರೂ ಮುಗಿಯಲ್ಲ.

    ಇನ್ನು ಹೋಂ ಸ್ಟೇ ಹಾಗೂ ರೆಸಾರ್ಟ್‍ಗಳು ಕಂಪ್ಲೀಟ್ ಆಗಿ ಬುಕ್ ಆಗಿವೆ. ಹೊಸ ವರ್ಷದ ಸಂಭ್ರಮದ ಹೆಸರಲ್ಲಿ ಯಾವುದೇ ಹುಚ್ಚಾಟ ನಡೀಬಾರ್ದು ಅನ್ನೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡಿದೆ. ರಾತ್ರಿ 12.30ರ ನಂತ್ರ ಮಡಿಕೇರಿಯಲ್ಲಿ ಎಲ್ಲಿಯೂ ನ್ಯೂಇಯರ್ ಸೆಲಬ್ರೇಷನ್ ಮಾಡುವಂತಿಲ್ಲ. ಅಲ್ಲದೇ ರಸ್ತೆಗಳಲ್ಲಿ ವಿಶ್ ಮಾಡೋ ಹೆಸರಲ್ಲಿ ಯಾರಿಗೂ ತೊಂದರೆ ನೀಡುವಂತಿಲ್ಲ. ಇದನ್ನೂ ಓದಿ: ಹೊಸವರ್ಷ ಸ್ವಾಗತಕ್ಕೆ ಭರ್ಜರಿ ಸಿದ್ಧತೆ- ಮೊದಲ ಬಾರಿಗೆ ನಗರದೆಲ್ಲೆಡೆ ಖಾಕಿ ಪರೇಡ್

    ಸಾರ್ವಜನಿಕ ಸ್ಥಳಗಳಲ್ಲಿ ಸೆಲಬ್ರೇಷನ್ ಮಾಡುವಂತಿಲ್ಲ. ಮುಖ್ಯವಾಗಿ ಹೋಂಸ್ಟೇಗಳಲ್ಲಿ ಲಿಕ್ಕರ್ ಸಪ್ಲೇ ಮಾಡುವಂತಿಲ್ಲವೆಂದು ಖಡಕ್ ಸೂಚನೆ ನೀಡಿದೆ. ರೆಸಾರ್ಟ್ ಹಾಗೂ ಹೋಂಸ್ಟೇಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲು ಖಾಕಿ ಪಡೆ ನಿಯೋಜಿಸಿದೆ.

  • ಸಮುದ್ರಕ್ಕೆ ಇಳಿದವರನ್ನು ಹೊತ್ತೊಯ್ದ ಅಲೆ- ಮುರುಡೇಶ್ವರ ಕಿನಾರೆಯಲ್ಲಿ ತಪ್ಪಿದ ದುರಂತ

    ಸಮುದ್ರಕ್ಕೆ ಇಳಿದವರನ್ನು ಹೊತ್ತೊಯ್ದ ಅಲೆ- ಮುರುಡೇಶ್ವರ ಕಿನಾರೆಯಲ್ಲಿ ತಪ್ಪಿದ ದುರಂತ

    ಕಾರವಾರ: ಪ್ರವಾಸಕ್ಕೆಂದು ತೆರಳಿ ಸಮುದ್ರದಲ್ಲಿ ಈಜಲು ಹೋಗಿ ನೀರುಪಾಲಾಗಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಿಗರು ನಿರುಪಾಲಾಗುತ್ತಿದ್ದಂತೆಯೇ ಅಲ್ಲೇ ಇದ್ದ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಹುಬ್ಬಳ್ಳಿ ಮೂಲದ ಮಂಜು ಹಿರೇಮಠ್(23) ರಾಜು (21) ರಕ್ಷೆಣೆಗೊಳಗಾದವರು. ಭಾನುವಾರ ರಜೆ ಇದ್ದುದರಿಂದ ಹುಬ್ಬಳ್ಳಿಯಿಂದ ಸ್ನೇಹಿತರೊಂದಿಗೆ ಮುರಡೇಶ್ವರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ಸಂದರ್ಭ ಈಜಲೆಂದು ಸಮುದ್ರಕ್ಕೆ ಇಳಿದಾಗ ದೊಡ್ಡ ಅಲೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದು ಲೈಫ್ ಗಾರ್ಡ್ ಸುಬ್ರಹ್ಮಣ್ಯ ಹರಿಕಾಂತ್ ರಕ್ಷಣೆ ಮಾಡಿದ್ದಾರೆ.