Tag: traffic jam

  • ಸಿಲಿಕಾನ್ ಸಿಟಿಯಲ್ಲಿ ಸುಸಜ್ಜಿತ ಪೊಲೀಸ್ ಚೌಕಿಗಳು- ಚೌಕಿಯಲ್ಲಿ ಏನೇನ್ ಸೌಲಭ್ಯವಿದೆ?

    ಸಿಲಿಕಾನ್ ಸಿಟಿಯಲ್ಲಿ ಸುಸಜ್ಜಿತ ಪೊಲೀಸ್ ಚೌಕಿಗಳು- ಚೌಕಿಯಲ್ಲಿ ಏನೇನ್ ಸೌಲಭ್ಯವಿದೆ?

    ಬೆಂಗಳೂರು: ಇಡೀ ವಿಶ್ವದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಹೊಂದಿರುವ ನಗರ ಎಂಬ ಖ್ಯಾತಿಗೆ ಸಿಲಿಕಾನ್ ಟಿವಿ ಬೆಂಗಳೂರು ಪಾತ್ರವಾಗಿದೆ. ಇದರ ಬೆನ್ನಲ್ಲೆ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ವಿಶೇಷ ಸೌಲಭ್ಯವಿರುವ ಪೊಲೀಸ್ ಚೌಕಿಗಳು ರೆಡಿಯಾಗಿವೆ.

    ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಸದಾ ಧೂಳು, ಹೊಗೆ, ಬಿಸಿಲು ಟೆನ್ಶನ್ ನಡುವೆಯೇ ಕೆಲಸ ಮಾಡುವ ಟ್ರಾಫಿಕ್ ಪೊಲೀಸರಿಗೆ ಬಿಬಿಎಂಪಿ, ಖಾಸಗಿ ಸಹಭಾಗಿತ್ವದಲ್ಲಿ ಸುಸಜ್ಜಿತ ಪೊಲೀಸ್ ಚೌಕಿಗಳು ನಿರ್ಮಾಣವಾಗಿವೆ. ನಗರದ್ಯಾಂತ 506 ಸುಸಜ್ಜಿತ ಪೊಲೀಸ್ ಚೌಕಿಗಳು ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ 19 ಚೌಕಿಗಳು ಈಗಾಗಲೇ ಉದ್ಘಾಟನೆಗೆ ರೆಡಿಯಾಗಿವೆ.

    ಈ ಹೈಫೈ ಚೌಕಿಗಳಲ್ಲಿ ಏನೆಲ್ಲಾ ಇದಾವೆ ಎನ್ನುವುದನ್ನು ನೋಡುವುದಾದರೆ, ಗಾಳಿ ಶುದ್ಧಿಕರಣ ಯಂತ್ರ, ಮೊಬೈಲ್ ಚಾರ್ಚಿಂಗ್ ಪಾಯಿಂಟ್, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಫ್ಯಾನ್‍ಗಳು, ಸಿಸಿಟಿವಿ ಕ್ಯಾಮೆರಾ, ಸ್ಪೀಕರ್ ಗಳು, ಕೂರಲು ಮೂರು ಆಸನಗಳು ಇರಲಿವೆ.

    ಬಿಸಿಲು ಹೊಗೆಯಲ್ಲಿ ಇಡೀ ದಿನ ಕಳೆಯುತ್ತಿದ್ದ ಟ್ರಾಫಿಕ್ ಪೊಲೀಸರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಸದ್ಯದ ಈ ಹೊಸ ಸೌಲಭ್ಯದಿಂದ ನಮ್ಮ ಪೊಲೀಸರು ಕೊಂಚ ನಿರಾಳಗೊಂಡಿದ್ದು, ಅದಷ್ಟು ಬೇಗ ಉಳಿದ ಎಲ್ಲಾ ಹೊಸ ಚೌಕಿಗಳು ರೆಡಿಯಾಗಬೇಕಿದೆ.

  • 99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ!

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ!

    ಬರ್ಲಿನ್: ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ.

    ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ.

    ಮಾಡಿದ್ದೇನು?
    ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್ ನಲ್ಲಿರುವ ಗೂಗಲ್ ಕಚೇರಿಯ ಮುಂದೆ 99 ಮೊಬೈಲ್ ಗಳನ್ನು ಸಣ್ಣ ಗಾಡಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. 99 ಮೊಬೈಲ್ ಗಳಲ್ಲಿ ಜಿಪಿಎಸ್ ಆನ್ ಆಗಿದ್ದ ಕಾರಣ ಸಹಜವಾಗಿ ಗೂಗಲ್ ಕಚೇರಿಯ ಮುಂದೆ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ತೋರಿಸಿದೆ.

    ಸೈಮನ್ ವೆಕರ್ಟ್ ತಂತ್ರಜ್ಞಾನವನ್ನು ನಾವು ಹೇಗೆ ಮೂರ್ಖರನ್ನಾಗಿ ಮಾಡಬಹುದು ಎಂದು ತೋರಿಸಲು ನಾನು ಈ ರೀತಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ತಾನು ಸಣ್ಣ ಗಾಡಿಯಲ್ಲಿ ಮೊಬೈಲ್‍ಗಳನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಯೂ ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾನೆ.

    ಈ ವಿಡಿಯೋಗೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಸೈಮನ್ ವೆಕರ್ಟ್ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನು ಕೆಲವರು, ಬೇರೆ ಏನು ಕೆಲಸ ಇಲ್ಲದ ಈ ವ್ಯಕ್ತಿ ತುಂಬಾ ಫ್ರೀ ಇರಬೇಕು. ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದಾನೆ. ತಂತ್ರಜ್ಞಾನ ಇಂತವರಿಂದಲೇ ದುರುಪಯೋಗ ಆಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

  • ಅಕ್ರಮ ಮಾಡಿದರೆ ಎಚ್ಚರ: ಬಿಬಿಎಂಪಿ ಮೇಯರ್ ಗೌತಮ್

    ಅಕ್ರಮ ಮಾಡಿದರೆ ಎಚ್ಚರ: ಬಿಬಿಎಂಪಿ ಮೇಯರ್ ಗೌತಮ್

    ಬೆಂಗಳೂರು: ವಿವಿಧ ಕಾಮಗಾರಿಗಳನ್ನು ಬಿಬಿಎಂಪಿ ಮೇಯರ್ ಇಂದು ತಪಾಸಣೆ ನಡೆಸಿದರು.

    ನಗರದ ರಿಚ್ಮಂಡ್ ಸರ್ಕಲ್‍ನ ಜಂಕ್ಷನ್‍ನಲ್ಲಿ ಮೇಯರ್ ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದರು. ಫುಟ್‍ಪಾತ್, ರೋಡ್ ಕಟಿಂಗ್, ರಸ್ತೆ ಗುಂಡಿ ಸಮಸ್ಯೆ, ಡಾಂಬರೀಕರಣ ಅವ್ಯವಸ್ಥೆ, ರಸ್ತೆ ಹಾಳಾಗಿರುವುದರಿಂದ ಟ್ರಾಫಿಕ್ ಸಮಸ್ಯೆ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡಲಾಯಿತು.

    ಮೇಯರ್ ತಪಾಸಣೆ ವೇಳೆ ಚರಂಡಿ ನೀರು ರಸ್ತೆಗೆ ಹರಿದು ಹೋಗುತ್ತಿತ್ತು. ಇದೇ ವೇಳೆ ಇಡೀ ರಿಚ್ಮಂಡ್ ಫ್ಲೈಓವರ್ ಓಎಫ್‍ಸಿ(ಆಪ್ಟಿಕಲ್ ಫೈಬರ್ ಕೇಬಲ್) ಎಲ್ಲೆಂದರಲ್ಲಿ ನೇತಾಡುತ್ತಿತ್ತು. ಈ ದೃಶ್ಯ ನೋಡಿದ ಮೇಯರ್ ಅಧಿಕಾರಿಗಳ ವಿರುದ್ಧ ಗರಂ ಆದರು.

    ಬಳಿಕ ಸ್ವತಃ ಮೇಯರ್ ಗೌತಮ್ ಅವರು ರಸ್ತೆ ಮಧ್ಯೆ ಭಾಗಕ್ಕೆ ತೂಗಾಡುತ್ತಿದ್ದ ಓಎಫ್‍ಸಿ ಕೇಬಲ್ ಕಟ್ ಮಾಡಿದರು. ಈ ವೇಳೆ ಸ್ಥಳೀಯ ಜಂಟಿ ಆಯುಕ್ತ ಪಲ್ಲವಿ ಹಾಗೂ ಬಹುತೇಕ ನಾಯಕರು ಹಾಜರಿದ್ದರು.

    ಇದೇ ವೇಳೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಇದು ಎಲ್ಲ ಅಕ್ರಮ ಓಎಫ್‍ಸಿ ಕೇಬಲ್‍ಗೆ ಎಚ್ಚರಿಕೆ. ಕೂಡಲೇ ರೋಡ್ ಚೆಂದವನ್ನು ಕೆಡಿಸುವ ಕೆಲಸ ನಿಲ್ಲಿಸಬೇಕಿದೆ. ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ ಭಾಗಕ್ಕೂ ನಾನು ಪರಿಶೀಲನೆ ಮಾಡುವೆ. ಆಗ ಈ ತಪ್ಪು ಕಂಡು ಬಂದರೆ ನೇರ ಕೇಬಲ್ ಕಟ್ ಮಾಡಲಾಗುತ್ತದೆ ಎಂದರು.

  • ಔಟರ್ ರಿಂಗ್ ರೋಡ್‍ನಲ್ಲೇ ಹರಿಯುತ್ತಿದೆ ಚರಂಡಿ ನೀರು

    ಔಟರ್ ರಿಂಗ್ ರೋಡ್‍ನಲ್ಲೇ ಹರಿಯುತ್ತಿದೆ ಚರಂಡಿ ನೀರು

    ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ಎಸ್‍ಇಝಡ್(ವಿಶೇಷ ಆರ್ಥಿಕ ವಲಯ)ಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಇದ್ದೆ ಇರುತ್ತೆ. ಈ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರವಾಗಿ ಮುಖ್ಯ ರಸ್ತೆಯಿಂದ ಎಸ್‍ಇಝಡ್ ಹೋಗಲು ಫ್ಲೈಓವರ್ ಕಾಮಗಾರಿಯನ್ನ ಮಾಡುತ್ತಿದ್ದಾರೆ. ಅದರೆ ಈಗಿರುವ ರಸ್ತೆ ಸ್ಥಿತಿ ಮಾತ್ರ ತೀರ ಅಧ್ವಾನವಾಗಿದ್ದು, ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದೆ.

    ಹೌದು. ಬೆಂಗಳೂರು ಮಾನ್ಯತಾ ಟೆಕ್ ಪಾರ್ಕ್ ಗೆ ಸಂಪರ್ಕ ಕಲ್ಪಸೋ ಔಟರ್ ರಿಂಗ್ ರೋಡ್ ಮತ್ತು ಸರ್ವಿಸ್ ರೋಡ್‍ನಲ್ಲಿ ಮ್ಯಾನ್ ಹೊಲ್‍ಗಳು ತುಂಬಿ ಕೊಳಚೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ಒಂದು ಕಡೆ ಫ್ಲೈಓವರ್ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದರೆ, ಇನ್ನೊಂದೆಡೆ ಒಳ ಚರಂಡಿಯ ನೀರು ರಸ್ತೆಯ ಮೇಲೆ ಬರುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

    ಕಳೆದ ಒಂದು ವಾರದಿಂದ ಇದೇ ರೀತಿಯ ಪರಿಸ್ಥಿತಿ ಇದ್ದರೂ ಜಲಮಂಡಳಿ ಅಧಿಕಾರಿಗಳಾಗಲಿ, ಸ್ಥಳೀಯ ಬಿಬಿಎಂಪಿ ಸದಸ್ಯರಾಗಲಿ ದುರಸ್ಥಿ ಕೆಲಸಕ್ಕೆ ಮುಂದಾಗಿಲ್ಲ. ದೇಶ ವಿದೇಶಗಳ ಅತಿಥಿಗಳು ಬಂದು ಹೋಗೋ ಮಾನ್ಯತಾ ಟೆಕ್ ಪಾರ್ಕ್ ರಸ್ತೆಯೇ ಹೀಗಾದರೆ ಹೇಗೆ? ರಸ್ತೆ ತುಂಬಾ ಚರಂಡಿ ನೀರು, ಜೊತೆಗೆ ಕೆಟ್ಟ ವಾಸನೆಯಿಂದ ಇಲ್ಲಿ ಸಂಚರಿಸೋದು ಹೇಗೆ ಎಂದು ವಾಹನ ಸವಾರರು ಪ್ರಶ್ನಿಸಿ ಕಿಡಿಕಾರುತ್ತಿದ್ದಾರೆ. ಹೀಗಿದ್ದರೂ ಕೂಡ ಸಮಸ್ಯೆ ಸರಿಪಡಿಸಲು ಯಾರು ಮುಂದಾಗಿಲ್ಲ.

  • ಹೊಸ ವರ್ಷ ಸಂಭ್ರಮಾಚರಣೆ – ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್

    ಹೊಸ ವರ್ಷ ಸಂಭ್ರಮಾಚರಣೆ – ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್

    ಚಿಕ್ಕಮಗಳೂರು: ಹೊಸ ವರ್ಷ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ತುಂಬಿ ತುಳುಕಿದ್ದು, ಭಾರೀ ವಾಹನಗಳಿಂದ ರಾಜ್ಯದ ಎತ್ತರದ ಶಿಖರ ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿ, ಪ್ರವಾಸಿಗರು ಪರದಾಡುವಂತಾಗಿದೆ.

    ಕಳೆದ ರಾತ್ರಿ ಹೋಂ ಸ್ಟೇ, ರೆಸಾರ್ಟ್‍ಗಲ್ಲಿ ವಾಸ್ತವ್ಯ ಮಾಡಿದ್ದ ಸಾವಿರಾರು ಪ್ರವಾಸಿಗರು ಇಂದು ಪ್ರಕೃತಿ ಸೌಂದರ್ಯ ಸವಿಯಲು ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠಕ್ಕೆ ಆಗಮಿಸಿದ್ದರು. ಪರಿಣಾಮ ಮಾರ್ಗ ಮಧ್ಯೆ ಅಲ್ಲಲ್ಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರವಾಸಿಗರೇ ವಾಹನಗಳಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸ್ ಕೆಲಸ ಮಾಡಿ ವಾಹನಗಳನ್ನು ನಿಯಂತ್ರಿಸಿದ್ದು ಸಾಮಾನ್ಯವಾಗಿತ್ತು.

    ರಾಜ್ಯ-ಹೊರರಾಜ್ಯಗಳಿಂದ ಬಂದಿದ್ದ ಸಾವಿರಾರು ಪ್ರವಾಸಿಗರು ಮುಗಿಲೆತ್ತರದ ಬೆಟ್ಟಗುಡ್ಡಗಳ ಮಧ್ಯೆ ನಿಂತು 2019ಕ್ಕೆ ಗುಡ್ ಬೈ ಹೇಳಿ, 2020ಕ್ಕೆ ಸ್ವಾಗತ ಕೋರಿದರು. ಗಿರಿಭಾಗದಲ್ಲಿ ಎಲ್ಲಿ ನೋಡಿದರು ಬೈಕು-ಕಾರುಗಳದ್ದೇ ಕಾರುಬಾರಾಗಿತ್ತು. ಇವತ್ತು ಒಂದೇ ದಿನ ಕಾರು, ಬೈಕ್, ಟೆಂಪೋ ಎಲ್ಲಾ ಸೇರಿ ಮೂರರಿಂದ ನಾಲ್ಕು ಸಾವಿರ ಬರೀ ವಾಹನಗಳೇ ಮುಳ್ಳಯ್ಯನಗಿರಿ ಜಮಾಯಿಸಿವೆ. ಸುಮಾರು 30 ರಿಂದ 40 ಸಾವಿರ ಪ್ರವಾಸಿಗರು ಕಾಫಿನಾಡ ಪ್ರಕೃತಿಗೆ ಸೌಂದರ್ಯಕ್ಕೆ ಶರಣಾಗತರಾಗಿದ್ದಾರೆ.

    ಟ್ರಾಫಿಕ್ ನಡುವೆ ಹರಸಾಹಸ ಪಟ್ಕೊಂಡು ಗಿರಿಯ ತುದಿಗೆ ಹೋದಾಗ ಪ್ರವಾಸಿಗರ ಸಂತೋಷಕ್ಕೆ ಪಾರವೇ ಇರಲಿಲ್ಲ. ಸುತ್ತಲು ಹಸಿರ ರಾಶಿ. ಕಣ್ಣಿನ ದೃಷ್ಠಿ ಮುಗಿದ್ರು ಮುಗಿಯದ ಪ್ರಕೃತಿ ಸಂಪತ್ತು. ಮುಗಿಲೆತ್ತರದ ಬೆಟ್ಟಗುಡ್ಡಗಳ ಸಾಲು. ನಿಮಿಷಕ್ಕೊಮ್ಮೆ ಕಣ್ಣೆದುರಿಗೆ ಬಂದು ಮಾಯವಾಗೋ ಮಾಯಾವಿ ಮಂಜು. ಮೈಮರೆತು ನಿಂತ್ರೆ ನಾವು ಕಿಡ್ನ್ಯಾಪ್ ಆಗ್ತೀವೇನೀ ಎಂದು ಭಯವಾಗುವಂತೆ ಬೀಸೋ ಗಾಳಿ. ಸೆಲ್ಫಿಗೆ ಫೋಸೋ ಕೊಟ್ಟು ನಿಲ್ಲುವಷ್ಟರಲ್ಲಿ ತಬ್ಬಿಕೊಂಡು ಹಾಗೋ ಗಾಳಿಯ ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಗಿರಿಯ ತುದಿಗೆ ಬಂದು ಪ್ರಕೃತಿ ಸೌಂದರ್ಯದಲ್ಲಿ ಸವಿಯುಷ್ಟರಲ್ಲಿ ಮುಳ್ಳಯ್ಯನ ಸ್ವಾಮಿಯ ದರ್ಶನ ಮಾಡಬೇಕು. ಆಗ ಮತ್ತೊಂದು ಗುಡ್ಡ ಹತ್ತಬೇಕು. ಆದರೆ ಎಷ್ಟೇ ಆಯಸವಾಗಿದ್ರು ಇಲ್ಲಿನ ಗಾಳಿ ಮೈ-ಮನವನ್ನು ತಿಳಿಗೊಳಿಸೋದ್ರಿಂದ ಪ್ರವಾಸಿಗರು ಸಂತೋಷದಿಂದಲೇ ಬೆಟ್ಟ ಹತ್ತಿ ದೇವರ ದರ್ಶನ ಪಡೆದರು.

    ಮುಳ್ಳಯ್ಯನಗಿರಿ ಇನ್ನು ಹತ್ತಾರು ಕಿ.ಮೀ. ಇರೋವಾಗ್ಲೇ ಟ್ರಾಫಿಕ್ ಜಾಮ್‍ನಿಂದ ನಿಂತಿದ್ದ ಗಾಡಿಗಳು ನೋಡುಗರಿಗೆ ಇರುವೆಯಂತೆ ಭಾಸವಾಗುತ್ತಿತ್ತು. ದೂರದ ಊರುಗಳಿಂದ ಬಂದಿದ್ದ ಪ್ರವಾಸಿಗರು ಕೂಡ ಇಲ್ಲಿನ ಸೌಲಭ್ಯ ನೋಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಾರ್ಕಿಂಗ್ ಇಲ್ಲ, ಪ್ಲಾಸ್ಟಿಕ್ ಕಡಿಮೆಯಾಗಿದ್ರು ಇನ್ನೂ ಇದೆ. ಎರಡೆರಡು ಕಡೆ ಹಣ ಕಟ್ಟಿಸಿಕೊಳ್ಳುತ್ತಾರೆ. ಆದರೆ ಪ್ರವಾಸಿಗರಿಗೆ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಇಂತಹಾ ಸೌಂದರ್ಯವನ್ನು ಎಲ್ಲರೂ ಸೇರಿ ಉಳಿಸಬೇಕು. ಇದನ್ನು ಮತ್ತೆ ಸೃಷ್ಠಿಸಲು ಅಸಾಧ್ಯ. ಹಾಗಾಗಿ ಸ್ಥಳೀಯರು, ಪ್ರವಾಸಿಗರು ಹಾಗೂ ಸರ್ಕಾರ ಮೂವರು ಸೇರಿ ಈ ಸೌಂದರ್ಯವನ್ನು ರಕ್ಷಣೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಕಾಂಗ್ರೆಸ್‍ನ 134ನೇ ಸಂಸ್ಥಾಪನಾ ದಿನಾಚರಣೆ – ನಗರದ ಹಲವೆಡೆ ಆಗಲಿದೆ ಟ್ರಾಫಿಕ್ ಜಾಮ್

    ಕಾಂಗ್ರೆಸ್‍ನ 134ನೇ ಸಂಸ್ಥಾಪನಾ ದಿನಾಚರಣೆ – ನಗರದ ಹಲವೆಡೆ ಆಗಲಿದೆ ಟ್ರಾಫಿಕ್ ಜಾಮ್

    ಬೆಂಗಳೂರು: ಇಂದು ಕಾಂಗ್ರಸ್‍ನ 134ನೇ ಸಂಸ್ಥಾಪನಾ ದಿನ. ಈ ಐತಿಹಾಸಕ ದಿನದ ಆಚರಣೆ ಮಾಡಲು ರಾಜ್ಯ ಕಾಂಗ್ರಸ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನಾಯಕರು ಸದ್ಭಾವನ ನಡಿಗೆ ಹಮ್ಮುಕೊಂಡಿದ್ದಾರೆ.

    ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಆ ನಂತರ ಕಾಂಗ್ರೆಸ್ ನಾಯಕರುಗಳು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಫ್ರೀಡಂ ಪಾರ್ಕ್‍ವರೆಗೆ ಸದ್ಭಾವನ ನಡಿಗೆ ಪಾದಯಾತ್ರೆ ನಡೆಸಲಿದ್ದಾರೆ.

    ಫ್ರೀಡಂ ಪಾರ್ಕಿನಲ್ಲಿ 12 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರುಗಳು ಸಧ್ಬಾವನ ಯಾತ್ರೆ ಹಾಗೂ ಸಂಸ್ಥಾಪನಾ ದಿನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

    ಕೆಪಿಸಿಸಿ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ನಡೆಯುವ ಪಾದಯಾತ್ರೆಯಲ್ಲಿ ಸಾವಿರಾರು ಜನ ಸೇರಲಿದ್ದಾರೆ. ಕ್ವೀನ್ಸ್ ರೋಡ್, ಇಂಡಿಯನ್ ಎಕ್ಸ್ ಪ್ರೆಸ್ ರೋಡ್, ವಿಧಾನಸೌಧದ ರೋಡ್ ಮತ್ತು ನೃಪತುಂಗ ರೋಡ್ ಮೂಲಕ ಫ್ರೀಡಂ ಪಾರ್ಕ್ ಗೆ ರ‍್ಯಾಲಿ  ಸಾಗಿಬರಲಿದೆ.

    ಬೆಳಗ್ಗೆ 9:30 ರಿಂದ 12 ಗಂಟೆಯವರೆಗೆ ಮೆರವಣಿಗೆ ಸಾಗಲಿದ್ದು, ಇಲ್ಲಿನ ರಸ್ತೆಗಳು ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜ್ಯಾಮ್ ಆಗಲಿದೆ.

  • ಫ್ಲೈಓವರ್ ಮೇಲೆ ಗುಂಡಿ – ಸುಮನಹಳ್ಳಿ ಮೇಲ್ಸೇತುವೆ ಬಂದ್

    ಫ್ಲೈಓವರ್ ಮೇಲೆ ಗುಂಡಿ – ಸುಮನಹಳ್ಳಿ ಮೇಲ್ಸೇತುವೆ ಬಂದ್

    ಬೆಂಗಳೂರು: ನಾಗರಬಾವಿಯಿಂದ ಸುಮನಹಳ್ಳಿಗೆ ಹೋಗುವ ಫ್ಲೈಓವರ್ ಮೇಲೆ ಗುಂಡಿಯಾಗಿದ್ದು, ಸುಮ್ಮನಹಳ್ಳಿಯ ಮೇಲ್ಸೇತುವೆಯನ್ನು ಬಂದ್ ಮಾಡಲಾಗಿದೆ.

    ಸಿಲಿಕಾನ್ ಸಿಟಿಯಲ್ಲಿ ಮಳೆ ಬಂದರೆ ರಸ್ತೆಗಳು ಕೆರೆಯಂತಾಗಿ ಗುಂಡಿಗಳಾಗುತ್ತೆ. ಆದರೆ ಈಗ ಮೇಲ್ಸೇತುವೆಯಲ್ಲಿ ಗುಂಡಿ ಬಿದ್ದಿದೆ. ಬರೀ ಗುಂಡಿ ಆದರೆ ತೇಪೆಹಾಕಿ ಮುಚ್ಚುತ್ತಾರೆ. ಆದರೆ ಇಡೀ ಬ್ರಿಡ್ಜ್ ಮೇಲೆ ವಾಹನ ಸಂಚಾರವನ್ನೇ ನಿಷೇಧ ಮಾಡಿದ್ದು ಯಾವಾಗ ಏನ್ ಅನಾಹುತ ಆಗೋತ್ತೋ ಅನ್ನೋ ಭಯ ಸಾರ್ವಜನಿಕರಲ್ಲಿ ಕಾಡುತ್ತಿದೆ.

    ಮೇಲ್ಸೇತುವೆಯ ರಸ್ತೆಯಲ್ಲಿ ಸುಮಾರು 6 ಅಡಿ ಅಗಲದಷ್ಟು ಗುಂಡಿ ಬಿದ್ದಿದ್ದು ಬರೀ ಕಬ್ಬಿಣ ಮಾತ್ರ ಕಾಣುತ್ತಿದೆ. ಈ ರಸ್ತೆ ನಿರ್ಮಾಣವಾಗಿ ಇನ್ನೂ 10 ವರ್ಷಗಳು ಸಹ ಆಗಿಲ್ಲ ಆಗಲೇ ಈ ರೀತಿಯಾಗಿರೋದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಈಗ ಗುಂಡಿ ಬಿದ್ದ ಜಾಗದಲ್ಲಿ ಬ್ಯಾರಿಕೇಟ್ ವ್ಯವಸ್ಥೆ ಮಾಡಲಾಗಿದ್ದು, ಇದು ನಮ್ಮ ಬಿಬಿಎಂಪಿಯ ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ.

    ಈ ಭಾಗದ ರಸ್ತೆ ಸಂಚಾರವನ್ನು ಪೊಲೀಸರು ಬಂದ್ ಮಾಡಿದ್ದು, ಪಬ್ಲಿಕ್ ಟಿವಿಯ ವರದಿಯ ಬೆನ್ನಲ್ಲೇ ಸ್ಥಳೀಯ ಬಿಬಿಎಂಪಿ ಸದಸ್ಯ ಮೋಹನ್ ಕುಮಾರ್ ಹಾಗೂ ಇಂಜಿನಿಯರ್ ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಔಟರ್ ರಿಂಗ್ ರೋಡ್ ಬಂದ್ ಆಗಿದ್ದು, ಸರ್ವಿಸ್ ರೋಡ್ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಬಿಬಿಎಂಪಿಯವರ ಈ ಕಳಪೆ ಕಾಮಗಾರಿಯಿಂದ ಬೆಳ್ಳಂ ಬೆಳಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ.

  • ಬೆಂಗ್ಳೂರಿನಲ್ಲಿ ಗುರುವಾರ ಟ್ರಾಫಿಕ್ ಸಮಸ್ಯೆ ಸಾಧ್ಯತೆ

    ಬೆಂಗ್ಳೂರಿನಲ್ಲಿ ಗುರುವಾರ ಟ್ರಾಫಿಕ್ ಸಮಸ್ಯೆ ಸಾಧ್ಯತೆ

    ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರವಾಹ ಪರಿಹಾರ ನೀಡಿಲ್ಲ ಎನ್ನುವುದನ್ನು ಖಂಡಿಸಿ ಗುರುವಾರ ಸಿಲಿಕಾನ್ ಸಿಟಿಯ ಬಹುತೇಕ ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆ ಹೆಚ್ಚಿದೆ.

    ನಗರದ ವಿವಿಧ ಭಾಗಗಳಲ್ಲಿ ಉತ್ತರ ಕರ್ನಾಟಕದ ಜನತೆ ಪ್ರತಿಭಟನೆ ನಡೆಸುತ್ತಿದ್ದು, ರಾಜಾಜಿನಗರ, ಭಾಷ್ಯಂ ವೃತ್ತ, ರಾಮ ಮಂದಿರ, ಸ್ವಾತಂತ್ರ್ಯ ಉದ್ಯಾನವನದ ಬಳಿ ಭಾರೀ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳುವುದು ಉತ್ತಮ.

    ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.

    ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಬೆಳಗ್ಗೆ 9.30ಕ್ಕೆ ರಾಜಾಜಿನಗರದ ಭಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಸ್ವಾತಂತ್ರ್ಯ ಉದ್ಯಾನವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ.

    ಪ್ರತಿಭಟನೆಯಲ್ಲಿ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ ಎಂದು ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಶಿವಕುಮಾರ್ ತಿಳಿಸಿದ್ದಾರೆ.

    ಬೃಹತ್ ಪ್ರತಿಭಟನೆ ನಡೆಯುತ್ತಿರುವುದರಿಂದ ನಗರದ ಕೇಂದ್ರ ಭಾಗ ಮೆಜೆಸ್ಟಿಕ್, ಸ್ವಾತಂತ್ರ್ಯ ಉದ್ಯಾನವನ, ಮೈಸೂರು ಬ್ಯಾಂಕ್ ವೃತ್ತದ ಕಡೆ ಸಂಚರಿಸುವವರು ಸಹ ಪರ್ಯಾಯ ಮಾರ್ಗಗಳನ್ನು ಬಳಸುವುದು ಉತ್ತಮ.

  • ಬೆಂಗ್ಳೂರಲ್ಲಿ ಮಂಗೋಲಿಯಾ ಅಧ್ಯಕ್ಷರಿಗಾಗಿ 3 ಕಿ.ಮೀ ಟ್ರಾಫಿಕ್ ಜಾಮ್

    ಬೆಂಗ್ಳೂರಲ್ಲಿ ಮಂಗೋಲಿಯಾ ಅಧ್ಯಕ್ಷರಿಗಾಗಿ 3 ಕಿ.ಮೀ ಟ್ರಾಫಿಕ್ ಜಾಮ್

    ಬೆಂಗಳೂರು: ಮಂಗೋಲಿಯಾ ಅಧ್ಯಕ್ಷರಿಗಾಗಿ ಬೆಂಗಳೂರಿನಲ್ಲಿ 3 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದೆ.

    ಮಂಗೋಲಿಯಾ ಅಧ್ಯಕ್ಷ ಖಲ್ತ್ ಮಗಿನ್ ಬಟುಲ್ಗಾ ರಾಜ್ಯಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಐಪಿ ಮೂಮೆಂಟ್‍ ಗೆ ಝೀರೋ ಟ್ರಾಫಿಕ್ ಗಾಗಿ ಪೊಲೀಸರು ರಸ್ತೆ ತಡೆದಿದ್ದಾರೆ. ಮೇಖ್ರಿ ಸರ್ಕಲ್ ನಲ್ಲಿ ಪೊಲೀಸರು ವಾಹನಗಳನ್ನು ತಡೆದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ.

    ಅಧ್ಯಕ್ಷರು ಇಸ್ರೋದಿಂದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆಯುವ ಒಂದು ಖಾಸಗಿ ಕಾರ್ಯಕ್ರಮಕ್ಕೆ ಮಂಗೋಲಿಯಾ ಅಧ್ಯಕ್ಷರು ಹೋಗಬೇಕಾಯಿತು. ಹೀಗಾಗಿ ಮಂಗೋಲಿಯಾ ಅಧ್ಯಕ್ಷರಿಗಾಗಿ ಮೇಖ್ರಿ ಸರ್ಕಲ್ ಬಳಿ ಝೀರೋ ಟ್ರಾಫಿಕ್ ಒದಗಿಸಬೇಕಾಯಿತು. ಆದರೆ ಇಂದು ಸೋಮವಾರವಾದ್ದರಿಂದ ಟ್ರಾಫಿಕ್ ಜಾಮ್ ಹೆಚ್ಚಾಗಿ ಉಂಟಾಗಿದೆ.

    ಮೇಖ್ರಿ ಸರ್ಕಲ್ ನಿಂದ ಸರಿಸುಮಾರು ಕೊಡಿಗೆಹಳ್ಳಿ ಜಂಕ್ಷನ್ ವರೆಗೂ ಜಾಮ್ ಉಂಟಾಗಿದೆ. ಅಧ್ಯಕ್ಷರು ಪಾಸಾದರೂ ವಾಹನ ದಟ್ಟಣೆಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟ ಪ್ರಸಂಗವೂ ನಡೆಯಿತು.

  • ಬೆಂಗ್ಳೂರು ಸುತ್ತಮುತ್ತ ಭಾರೀ ಮಳೆ – ಹೈವೇಯಲ್ಲೇ ನಿಂತ ನೀರು

    ಬೆಂಗ್ಳೂರು ಸುತ್ತಮುತ್ತ ಭಾರೀ ಮಳೆ – ಹೈವೇಯಲ್ಲೇ ನಿಂತ ನೀರು

    ಬೆಂಗಳೂರು: ಗುರುವಾರ ನಗರದ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿ ರಸ್ತೆ ಜಲಾವೃತಗೊಂಡು ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

    ಮಲ್ಲೇಶ್ವರಂ, ಸದಾಶಿವನಗರ, ಶೇಷಾದ್ರಿಪುರಂ, ಸ್ಯಾಂಕಿ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಇತ್ತ ಮೆಜೆಸ್ಟಿಕ್, ವಿಧಾನಸೌಧ, ಶಿವಾಜಿನಗರ, ಹಲಸೂರು, ಕೆ.ಆರ್.ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.

    ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ 7ರ ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ಮಳೆಯಿಂದ ನಾಲ್ಕೈದು ಅಡಿಯಷ್ಟು ಮಳೆನೀರು ರಸ್ತೆಯಲ್ಲಿ ನಿಂತು ಸಂಪೂರ್ಣ ಕೆರೆಯಂತಾಗಿತ್ತು. ವಾಹನ ಸವಾರರು ಹಾಗೂ ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡುವಂತಾಗಿದ್ದು, ಮಳೆನೀರು ರಸ್ತೆಯಲ್ಲಿ ನಿಂತಿರುವುದರಿಂದ ಕೆಲ ವಾಹನಗಳು ಕೆಟ್ಟು ಹೋಗಿದ್ದವು. ಇದರಿಂದ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಸಹ ಉಂಟಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿತ್ತು.

    ಪ್ರತಿ ಬಾರಿ ಮಳೆ ಬಂದಾಗಲೂ ಸಹ ವೀರಸಂದ್ರ ಸಿಗ್ನಲ್ ಬಳಿ ರಸ್ತೆ ಜಲಾವೃತಗೊಂಡು ಕೆಲ ವಾಹನ ಸವಾರರು ಹಾಗೂ ಪಾದಚಾರಿಗಳು ಗುಂಡಿಗಳು ಕಾಣದೆ ಬಿದ್ದು ಕೈ ಕಾಲು ಮುರಿದುಕೊಂಡಿರುವಂತಹ ಘಟನೆಗಳು ಸಹ ಸಾಕಷ್ಟು ಬಾರಿ ನಡೆದಿವೆ. ಮಳೆ ಬಿದ್ದು ಗಂಟೆಗಳು ಕಳೆದರೂ ಮಳೆ ನೀರು ಹೊರ ಹೋಗದೆ ರಸ್ತೆಯಲ್ಲಿ ನಿಲ್ಲುತ್ತದೆ. ಹೀಗಾಗಿ ಕೂಡಲೇ ಮಳೆ ನೀರು ರಸ್ತೆಯಲ್ಲಿ ನಿಲ್ಲದೆ ಹೊರ ಹೋಗುವ ಹಾಗೆ ಮಾಡಬೇಕೆಂಬುದು ವಾಹನ ಸವಾರರು ಆಗ್ರಹಿಸಿದ್ದರು.