Tag: traffic jams

  • ಹವಾಮಾನ ವೈಪರೀತ್ಯ – ದೆಹಲಿಯಲ್ಲಿ ಆಲಿಕಲ್ಲು ಮಳೆ

    ಹವಾಮಾನ ವೈಪರೀತ್ಯ – ದೆಹಲಿಯಲ್ಲಿ ಆಲಿಕಲ್ಲು ಮಳೆ

    ನವದೆಹಲಿ: ಹವಾಮಾನ ವೈಪರೀತ್ಯ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕಾಲಿಕ ಮಳೆಯಾಗಿದೆ. ಇಂದು ಬೆಳಗ್ಗೆಯಿಂದ ದೆಹಲಿ-ಎನ್‍ಸಿಆರ್ ಭಾಗದ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ.

    ದೆಹಲಿಯ ಹೊರ ಭಾಗದ ನೊಯ್ಡಾ, ಗ್ರೇಟರ್ ನೊಯ್ಡಾ ಗಾಜೀಯಬಾದ್ ಸೇರಿ ಹಲವೆಡೆ ಇಂದು ಬೆಳಗ್ಗೆಯಿಂದಲೇ ವರ್ಷಾಧಾರೆಯಾಗಿತ್ತು. ಮಧ್ಯಾಹ್ನ ಬಳಿಕ ದೆಹಲಿಯ ಗ್ರೀನ್ ಗ್ರೀನ್ ಪಾರ್ಕ್, ಸಬ್ದರ್ ಜಂಗ್, ಚಾಣಕ್ಯಪುರಿ, ಸಂಸತ್ ಮಾರ್ಗ್ ಸೇರಿ ಬಹುತೇಕ ಪ್ರದೇಶದಲ್ಲಿ ಮಳೆಯಾಗಿದೆ.

    https://twitter.com/gautamkapoor54/status/1238769330357063680

    ಚಂಡಮಾರುತ ವ್ಯವಸ್ಥೆಯು ಉತ್ತರ ಪಾಕಿಸ್ತಾನ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶದ ಮೇಲಿದೆ, ಜಮ್ಮು, ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡನಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುತ್ತಿದ್ದು ಹವಾಮಾನ ವೈಪರೀತ್ಯಗಳಿಂದ ದೆಹಲಿಯಲ್ಲಿ ಅಕಾಲಿಕ ಮಳೆಯಾಗುತ್ತಿದೆ.

    ದೆಹಲಿಯಲ್ಲಿ ಸುರಿದ ಏಕಾಏಕಿ ಮಳೆಯಿಂದ ರಸ್ತೆಯ ಮೇಲೆ ಮತ್ತು ಪ್ಲೈಓವರ್ ಕೆಳಗೆ ನೀರು ನಿಂತುಕೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

    ಆಲಿಕಲ್ಲು ಮಳೆ:
    ಮಳೆಯಿಂದಾಗಿ ಅನೇಕ ಸ್ಥಳಗಳಲ್ಲಿ ರಸ್ತೆಯ ಮೇಲೆ ನೀರು ನುಗ್ಗಿ ಸಂಚಾರ ಅಸ್ವಸ್ಥಗೊಂಡಿತು. ದಕ್ಷಿಣ ದೆಹಲಿ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದ್ದರಿಂದ ಜನರು ಸಂಕಷ್ಟ ಎದುರಿಸಿದರು. ಇದಕ್ಕೂ ಮುನ್ನ ಶುಕ್ರವಾರ ಸಂಜೆ ಹಾಗೂ ರಾತ್ರಿಯಲ್ಲಿ ಮಳೆಯಿಂದಾಗಿ ರಸ್ತೆಗಳ ಮೇಲೆ ನೀರುತ್ತಿತ್ತು. ಈ ಬೆನ್ನಲ್ಲೇ ಇಂದು ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಚಾಲಕರು ಹಾಗೂ ಸವಾರರು ಪರದಾಡುವಂತಾಯಿತು.

    ಭಾರೀ ಮಳೆಯ ಹಿನ್ನೆಲೆ ದೆಹಲಿ ಟ್ರಾಫಿಕ್ ಪೊಲೀಸರು ಟ್ವೀಟ್ ಮೂಲಕ ಸಂಚಾರ ಅಸ್ಥವ್ಯಸ್ಥವಿರುವ ಪ್ರದೇಶಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹವಾಮಾನ ವೈಪರಿತ್ಯದಿಂದಾಗಿ ದೆಹಲಿಯಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ಸದ್ಯದ ದೆಹಲಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಶುಕ್ರವಾರ ಗರಿಷ್ಠ ತಾಪಮಾನ 28.3 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

  • ಸಿಲಿಕಾನ್ ಸಿಟಿಯಲ್ಲಿ ಇಂದು ಪ್ರತಿಭಟನಾ ದಿನ

    ಸಿಲಿಕಾನ್ ಸಿಟಿಯಲ್ಲಿ ಇಂದು ಪ್ರತಿಭಟನಾ ದಿನ

    ಬೆಂಗಳೂರು: ಇಂದು ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರು ಪಟ್ಟ ಪಾಡು ಯಾರಿಗೂ ಬೇಡ. 1 ಕಿಲೋಮೀಟರ್ ಸಾಗುವುದಕ್ಕೆ ಅರ್ಧ ಗಂಟೆಗೂ ಹೆಚ್ಚುಕಾಲ ಬೇಕಾಗಿತ್ತು. ಯಾಕೆಂದರೆ ಇಂದು ಸಿಲಿಕಾನ್ ಸಿಟಿಯ ರೋಡುಗಳಲ್ಲಿ ಪ್ರತಿಭಟನೆಯ ಜನರೇ ಕಾಣುತ್ತಿದ್ದರು.

    ಹೌದು, ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಯ ಅಬ್ಬರ ಜೋರಾಗಿತ್ತು. ಸಿಲಿಕಾನ್ ಸಿಟಿಯ ಹೃದಯ ಭಾಗವಾದ ಫ್ರೀಡಂ ಪಾರ್ಕಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದ್ರು. ಜೊತೆಗೆ ಸಿಟಿ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕಿನವರೆಗೆ ಪ್ರತಿಭಟನಾ ರ‍್ಯಾಲಿ ಮಾಡಿದರು.

    ಇದರಿಂದ ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ಮೈಸೂರು ಬ್ಯಾಂಕ್ ವೃತ್ತ, ಕೆಆರ್ ಸರ್ಕಲ್ ಸೇರಿದಂತೆ ಸುತ್ತಮುತ್ತಲಿನ ರೋಡ್ ಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಯಾವಾಗಪ್ಪ ಕೆಲಸಕ್ಕೆ ಹೋಗೊದು? ಟ್ರಾಫಿಕ್ ಕ್ಲೀಯರ್ ಆಗೋದು ಯಾವಾಗ ಎಂದು ಕಾಯುವಂತಾಗಿತ್ತು. ಇನ್ನೊಂದು ಕಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಗಾಗಿ ಹೆಬ್ಬಾಳ ರೋಡ್ ಬಂದ್ ಮಾಡಿದ್ದರು. ಪ್ರಧಾನಿ ಮೋದಿ ಸಂಚಾರ ಮಾಡೋದಕ್ಕಾಗಿ 30 ನಿಮಿಷಗಳ ಕಾಲ ರೋಡ್ ಬಂದ್ ಮಾಡಿದ್ದ ಪೊಲೀಸರ ವಿರುದ್ಧ ವಾಹನ ಸವಾರರು ಅಕ್ರೋಶಗೊಂಡು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

    ಮಧ್ಯಾಹ್ನ ಮೈಸೂರ್ ರೋಡ್ ನಲ್ಲಿರೋ ಗೋರಿಪಾಳ್ಯ ರಸ್ತೆಯ ಪಕ್ಕದ ಈದ್ಗಾ ಮೈದಾನದಲ್ಲಿ ಸಿಎಎ ಮತ್ತು ಎನ್.ಸಿ.ಆರ್ ವಿರುದ್ಧ ಪ್ರತಿಭಟನಾ ಸಮಾವೇಶಕ್ಕೆ 10 ಸಾವಿರ ಜನಸೇರಿದ್ರು. ಇದರಿಂದ ಮೈಸೂರು ರೋಡ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರಧಾನಿ ಮೋದಿಯ ಕಾರ್ಯಕ್ರಮ ಒಂದು ಕಡೆ, ಆಶಾ ಕಾರ್ಯಕರ್ತೆಯರ ಪ್ರತಿಭಟನಾ ರ‍್ಯಾಲಿ, ಹಾಗೂ ಸಿಎಎ ವಿರುದ್ಧದ ಸಮಾವೇಶದಿಂದ ನಗರ ಪೊಲೀಸರು ಹೈರಾಣಾಗಿ ಹೋದರು.

    ಒಟ್ಟಿನಲ್ಲಿ ನಗರದ ಮೂರು ಭಾಗಗಳಲ್ಲಿ ಆದ ಬೆಳವಣಿಗೆಯಿಂದ ವಾಹನ ಸವಾರರು ಮಾತ್ರ ಸಾಕಪ್ಪ ಸಿಲಿಕಾನ್ ಸಿಟಿಯ ಟ್ರಾಫಿಕ್ ಸಹವಾಸ ಎಂದು ರಸ್ತೆಯಲ್ಲೇ ಗಂಟೆಗಟ್ಟಲೇ ಸಮಯ ಕಳೆಯಬೇಕಾಯಿತು. ಇದರಿಂದ ಕೆಲಸಕ್ಕೆ ಹೊರಟ್ಟಿದ ಸಿಲಿಕಾನ್ ಸಿಟಿ ಮಂದಿ ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತುಹೋದರು.