Tag: Traffic Law

  • ಫುಟ್‍ಪಾತ್ ಮೇಲೆ ಬರ್ತಿದ್ದ ಸವಾರರಿಗೆ ಮಹಿಳೆಯಿಂದ ಕ್ಲಾಸ್ – ವಿಡಿಯೋ

    ಫುಟ್‍ಪಾತ್ ಮೇಲೆ ಬರ್ತಿದ್ದ ಸವಾರರಿಗೆ ಮಹಿಳೆಯಿಂದ ಕ್ಲಾಸ್ – ವಿಡಿಯೋ

    – ‘ನನ್ನ ಮೇಲೆ ಬೈಕ್ ಹತ್ತಿಸಿ’
    – ಮಹಿಳೆಯ ಕಾರ್ಯಕ್ಕೆ ನೆಟ್ಟಿಗರು ಫಿದಾ
    – ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ತರಾಟೆ

    ಪುಣೆ: ಫುಟ್‍ಪಾತ್ ಮೇಲೆ ಬೈಕ್ ಓಡಿಸುತ್ತಿದ್ದ ಸವಾರರನ್ನು ಕೆಳಗಿಳಿಸಿ ಹಿರಿಯ ನಾಗರಿಕ ಮಹಿಳೆಯೊಬ್ಬರು ಸಂಚಾರಿ ನಿಯಮ ಪಾಲಿಸಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಮಹಿಳೆಯ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಟ್ರಾಫಿಕ್‍ನಿಂದ ತಪ್ಪಿಸಿಕೊಳ್ಳಲು ಅಥವಾ ವಾಹನ ಪಾಕಿಂಗ್ ಮಾಡಲು ಬಹುತೇಕ ವಾಹನ ಸವಾರರು ಫುಟ್‍ಪಾತ್‍ನನ್ನು ಬಳಸಿಕೊಳ್ಳುತ್ತಾರೆ. ಇದರಿಂದ ವಾಹನ ಸವಾರರಿಗೇನೋ ಲಾಭವಾಗುತ್ತೆ. ಆದ್ರೆ ತೊಂದರೆ ಆಗೋದು ಮಾತ್ರ ಪಾದಚಾರಿಗಳಿಗೆ. ಹೀಗೆ ಬೈಕ್ ಸವಾರರ ಉಪಟಳಕ್ಕೆ ಬೇಸತ್ತ ಹಿರಿಯ ನಾಗರಿಕ ಮಹಿಳೆಯೊಬ್ಬರು ಸವಾರರಿಗೆ ಸಂಚಾರಿ ನಿಯಮ ತಿಳಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪುಣೆಯ ಎಸ್‍ಎನ್‍ದಿಟಿ ಕಾಲೇಜಿನ ಬಳಿ ಇರುವ ಕೆನಲ್ ರಸ್ತೆಯಲ್ಲಿ ಸಾಮಾನ್ಯವಾಗಿ ಟ್ರಾಫಿಕ್ ಜಾಮ್ ಆಗುತ್ತಿರುತ್ತೆ. ಆದರೆ ಇದರಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರರು ಫುಟ್‍ಪಾತ್ ಮೇಲೆ ವಾಹನ ತಂದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ. ಇದನ್ನು ನೋಡಿ ನೋಡಿ ಬೇಸತ್ತ ನಿರ್ಮಲಾ ಗೋಖಲೆ ಎಂಬವರು ಫುಟ್‍ಪಾತ್ ಮಧ್ಯೆ ನಿಂತು ವಾಹನ ಸವಾರರಿಗೆ ಸಂಚಾರಿ ನಿಯಮವನ್ನು ತಿಳಿಸಿ ತರಾಟೆಗೆ ತಗೆದುಕೊಂಡಿದ್ದಾರೆ. ಇಲ್ಲಿ ಪಾದಚಾರಿಗಳು ಓಡಾಡುತ್ತಾರೆ ನಿಮ್ಮ ವಾಹನಕ್ಕೆ ಸಂಚಾರಕ್ಕೆ ರಸ್ತೆ ಇದೆ ತಾನೆ. ಅದನ್ನ ಬಿಟ್ಟು ಇಲ್ಲಿ ಯಾಕೆ ಬಂದು ತೊಂದರೆ ಕೊಡುತ್ತೀರಾ? ಸಂಚಾರಿ ನಿಯಮ ಪಾಲನೆ ಮಾಡಲು ಆಗಲ್ವಾ? ಬೈಕ್, ಸ್ಕೂಟಿಗಳನ್ನು ರಸ್ತೆ ಮೇಲೆ ಓಡಿಸಿ ಎಂದು ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    https://twitter.com/IAnticommunist/status/1230785136607866880

    ಅಲ್ಲದೇ ಅವರ ಮಾತು ಕೇಳದೆ ಮುನ್ನುಗ್ಗುತ್ತಿದ್ದವರನ್ನು ಅಡ್ಡಗಟ್ಟಿ ಸಂಚಾರಿ ನಿಯಮ ಪಾಲಿಸಿ, ಇಲ್ಲ ನನ್ನ ಮೇಲೆ ಬೈಕ್ ಹತ್ತಿಸಿಕೊಂಡಿ ಹೋಗಿ ಎಂದು ಮಾತಿನ ಚಾಟಿ ಬೀಸಿದ್ದಾರೆ. ಈ ಮೂಲಕ ನಿರ್ಮಲಾ ಅವರು ಓರ್ವ ಜವಾಬ್ದಾರಿ ಪ್ರಜೆಯ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೇ ನಿರ್ಮಲಾ ಅವರ ಕಾರ್ಯ ಮೆಚ್ಚಿದ ಇತರೆ ಪಾದಾಚಾರಿಗಳು ಕೂಡ ಅವರಿಗೆ ಸಾಥ್ ಕೊಟ್ಟು ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.

    https://twitter.com/h_thake/status/1230884223613095936

    ಧರ್ಯವಾಗಿ ನಿಂತು ತಪ್ಪು ಮಾಡುತ್ತಿದ್ದ ವಾಹನ ಸವಾರರಿಗೆ ಬುದ್ಧಿ ಹೇಳಿ ತಿದ್ದಿದ ನಿರ್ಮಲಾ ಅವರ ಕಾರ್ಯ ಎಲ್ಲರ ಮನ ಗೆದ್ದಿದೆ. ಬೈಕ್ ಸವಾರರಿಗೆ ನಿರ್ಮಲಾ ಅವರು ತರಾಟೆಗೆ ತೆಗೆದುಕೊಂಡ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ನಿರ್ಮಲಾ ಅವರ ಧೈರ್ಯಕ್ಕೆ, ಕಾರ್ಯಕ್ಕೆ ಭೇಷ್ ಎಂದು ಹೊಗಳಿದ್ದಾರೆ.

  • ಸಂಚಾರಿ ನಿಯಮಗಳ ಕುರಿತು ಜಾಗೃತಿ – ಪೊಲೀಸರಿಂದ ಬೈಕ್ ರ‍್ಯಾಲಿ

    ಸಂಚಾರಿ ನಿಯಮಗಳ ಕುರಿತು ಜಾಗೃತಿ – ಪೊಲೀಸರಿಂದ ಬೈಕ್ ರ‍್ಯಾಲಿ

    ಬೆಂಗಳೂರು: ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಟೌನ್ ಪೊಲೀಸರು ಬೈಕ್ ರ‍್ಯಾಲಿ ಮೂಲಕ ಸಾರ್ವಜನಿಕ ಜಾಗೃತಿಗೆ ಮೂಡಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಅಪರ ಪೊಲೀಸ್ ಅಧೀಕ್ಷಕ ಸಜೀತ್ ಅವರು ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಉಪವಿಭಾಗದ ಪೊಲೀಸ್ ಸಿಬ್ಬಂದಿ ಜೊತೆ ಕೈಜೋಡಿಸಿದ ಸಾರ್ವಜನಿಕರು, ನೆಲಮಂಗಲ ಪಟ್ಟಣದ ವಿವಿಧ ಬಡಾವಣೆ, ಹೊರವಲಯದಲ್ಲಿ ಸಂಚಾರಿ ನಿಯಮಗಳ ಕುರಿತು ಮಾಹಿತಿ ಇರುವ ಭಿತ್ತಿ ಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿದರು. ಪೊಲೀಸ್ ಇಲಾಖೆ ಜನರೊಂದಿಗೆ ಬೆರೆತು ಕೆಲಸ ಮಾಡಲು ಹಾಗೂ ಅಪರಾಧ ಪ್ರಕರಣಗಳನ್ನು ತಡೆಯಲು ಪೊಲೀಸರ ಜೊತೆ ಕೈಜೋಡಿಸಿ. ಜೊತೆಗೆ ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದರು.

    ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳು ಕಂಡರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಬೈಕ್ ರ‍್ಯಾಲಿ ಮೂಲಕ ಜನರಿಗೆ ಅರಿವು ಮೂಡಿಸಿದರು. ಈ ವೇಳೆ ಡಿವೈಎಸ್ಪಿ ಮೋಹನ್ ಕುಮಾರ್, ಸಿಪಿಐ ಶಿವಣ್ಣ, ಟ್ರಾಫಿಕ್ ಸಿಪಿಐ ವೀರೇಂದ್ರ ಪ್ರಸಾದ್, ನೆಲಮಂಗಲ ಟೌನ್ ಪಿಎಸ್‍ಐ ಮಂಜುನಾಥ್, ಮೋಹನ್ ಕುಮಾರ್, ಪೊಲೀಸ್ ಸಿಬ್ಬಂದಿ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

  • 18 ಸಾವಿರ ದಂಡ ಕಟ್ಟುವ ಚಿಂತೆಯಲ್ಲಿ ಪ್ರಾಣಬಿಟ್ಟ ಆಟೋ ಚಾಲಕ

    18 ಸಾವಿರ ದಂಡ ಕಟ್ಟುವ ಚಿಂತೆಯಲ್ಲಿ ಪ್ರಾಣಬಿಟ್ಟ ಆಟೋ ಚಾಲಕ

    ಲಕ್ನೋ: ಸಂಚಾರಿ ನಿಯಮ ಉಲ್ಲಂಘನೆಗೆ ಪೊಲೀಸರು ಹಾಕಿದ್ದ 18 ಸಾವಿರ ದಂಡವನ್ನು ಕಟ್ಟುವ ಚಿಂತೆಯಿಂದ ಅನಾರೋಗ್ಯಕ್ಕೀಡಾಗಿ ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ.

    ಕಲಿಚಾಬಾದಿನ ನಿವಾಸಿ ಗಣೇಶ್ ಅಗರ್ವಾಲ್ ಮೃತ ದುರ್ದೈವಿ. ಗಣೇಶ್ ಆಟೋ ಓಡಿಸಿಕೊಂದು ಜೀವನ ನಡೆಸುತ್ತಿದ್ದರು. ಕಳೆದ ಆಗಸ್ಟ್ 31ರಂದು ಜೌನ್ಪುರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದಕ್ಕೆ ಪೊಲೀಸರು ಗಣೇಶ್ ಅವರಿಗೆ 18 ಸಾವಿರ ರೂಪಾಯಿ ದಂಡ ಹಾಕಿದ್ದರು. ಈ ಭಾರೀ ಮೊತ್ತದ ದಂಡವನ್ನು ಹೇಗೆ ಕಟ್ಟುವುದು ಎಂಬ ಚಿಂತೆಯಲ್ಲಿಯೇ ಗಣೇಶ್ ಅವರು ಅನಾರೋಗ್ಯಕ್ಕಿಡಾಗಿದ್ದರು.

    ಕೆಲದಿನಗಳಿಂದ ಗಣೇಶ್ ಅವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಅವರ ಸ್ಥಿತಿ ಗಂಭೀರವಾದ ಬಳಿಕ ವಾರಣಾಸಿಯ ಖಾಸಗಿ ಆಸ್ಪತ್ರೆಗೆ ಅವರನ್ನು ಸೇರಿಸಲಾಯಿತು. ಆದರೆ ಚಿಕಿತ್ಸೆಗೆ ಗಣೇಶ್ ಅವರು ಸ್ಪಂದಿಸದ ಕಾರಣಕ್ಕೆ ಸೆಪ್ಟೆಂಬರ್ 23ರಂದು ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಗಣೇಶ್ ಅವರ ಸಾವಿಗೆ ಸಂಚಾರಿ ಪೊಲೀಸರು ವಿಧಿಸಿದ ಭಾರೀ ದಂಡವೇ ಕಾರಣ. ಹೇಗೆ ಇಷ್ಟು ಮೆತ್ತದ ದಂಡ ಕಟ್ಟಬೇಕು ಎಂದು ತಿಳಿಯದೆ ಗಣೇಶ್ ಯಾವಾಗಲೂ ಚಿಂತೆಯಲ್ಲಿಯೇ ಇರುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಈ ವಿಚಾರ ಜಿಲ್ಲಾಧಿಕಾರಿವರೆಗೂ ತಲುಪಿದಾಗ, ಡಿಸಿ ಅರವಿಂದ್ ಮಲ್ಲಪ್ಪ ಅವರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ(ಎಆರ್‌ಟಿಒ) ಉದಯ್‍ವೀರ್ ಸಿಂಗ್ ಬಳಿ ಈ ಬಗ್ಗೆ ಮಾಹಿತಿ ಕೇಳಿದರು. ಅವರು ಜೌನ್ಪುರದ ಸಂಚಾರಿ ಪೊಲೀಸರನ್ನು ವಿಚಾರಿಸಿದರು. ಆಗ ಪೊಲೀಸರು, ಆಗಸ್ಟ್ 31ರಂದು ಗಣೇಶ್ ಅವರನ್ನು ತಡೆದು ಪರಿಶೀಲನೆ ನಡೆಸಿದ್ದೆವು. ಆಗ ಅವರು ಆಟೋ ಪರ್ಮಿಟ್ ಹೊಂದಿರಲಿಲ್ಲ. ಹಾಗೆ ಮಾಲಿನ್ಯ ಪ್ರಮಾಣ ಪತ್ರ ಹಾಗೂ ಚಾಲನಾ ಪ್ರಮಾಣಪತ್ರ ಕೂಡ ಅವರ ಬಳಿಯಿರಲಿಲ್ಲ. ಇದಲ್ಲದೆ ಇನ್ನೂ ಮೂರು ತಪ್ಪುಗಳನ್ನು ಮಾಡಿ ಸಂಚಾರಿ ನಿಯಮ ಉಲ್ಲಂಘಿಸಿದಕ್ಕೆ ಎಲ್ಲಾ ಸೇರಿ ಅವರಿಗೆ 18 ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು ಎಂದು ತಿಳಿಸಿದ್ದಾರೆ.

    ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾತನಾಡಿ, ಇದರಲ್ಲಿ ಪೊಲೀಸರ ತಪ್ಪಿಲ್ಲ. ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದಮೇಲೆ ದಂಡದ ಪ್ರಮಾಣ ಹೆಚ್ಚಾಗಿದೆ. ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಒಂದೇ ದಿನಕ್ಕೆ 21.52 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ ಬೆಂಗ್ಳೂರು ಟ್ರಾಫಿಕ್ ಪೊಲೀಸರು

    ಒಂದೇ ದಿನಕ್ಕೆ 21.52 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹಿಸಿದ ಬೆಂಗ್ಳೂರು ಟ್ರಾಫಿಕ್ ಪೊಲೀಸರು

    ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘನೆಯ ದಂಡದ ಮೊತ್ತ ಇಳಿಸಿದ್ದರೂ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಒಂದೇ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರು ಬರೋಬ್ಬರಿ 21.52 ಲಕ್ಷಕ್ಕೂ ಅಧಿಕ ದಂಡ ಸಂಗ್ರಹಿಸಿದ್ದಾರೆ.

    ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಾಡಿ, ಕೇಂದ್ರ ಸರ್ಕಾರ ದುಬಾರಿ ದಂಡ ವಿಧಿಸಿತ್ತು. ಆದರೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದುಬಾರಿ ದಂಡಕ್ಕೆ ಬ್ರೇಕ್ ಹಾಕಿ, ದಂಡದ ಮೊತ್ತವನ್ನ ಇಳಿಸಿತ್ತು. ಈ ಬೆನ್ನಲ್ಲೇ ವಾಹನ ಸವಾರರು ತಮ್ಮ ಹಳೇ ಚಾಳಿಯನ್ನ ಮುಂದುವರಿಸಿದ್ದಾರೆ. 24 ಗಂಟೆಯಲ್ಲಿ ಅಂದರೆ ಮಂಗಳವಾರ ಒಂದೇ ದಿನಕ್ಕೆ 6,782 ಟ್ರಾಫಿಕ್ ನಿಯಮ ಉಲ್ಲಂಘನೆಯ ಪ್ರಕರಣಗಳು ಸಿಲಿಕಾನ್ ಸಿಟಿ ವಾಹನ ಸವಾರರಿಂದ ದಾಖಲಾಗಿವೆ.

    ಈ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಾಲನೆಯ ಕೇಸ್‍ಗಳೇ ಹೆಚ್ಚು ದಾಖಲಾಗಿವೆ. ಬರೋಬ್ಬರಿ 1,546 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಇದರಿಂದ ಸುಮಾರು 2,87,500 ರೂ. ದಂಡ ಸಂಗ್ರಹವಾಗಿದೆ. ಹಿಂಬದಿ ಸವಾರ ಹೆಲ್ಮೆಟ್ ಧರಿಸದ ಪ್ರಕರಣಗಳು 1,046 ದಾಖಲಾಗಿದ್ದು, ಇದರಿಂದ 2,22,000 ರೂ. ದಂಡ ವಸೂಲಾಗಿದೆ.

    806 ವಾಹನಗಳನ್ನು ತಪ್ಪಾಗಿ ಪಾರ್ಕಿಂಗ್ ಮಾಡಿದ ಪ್ರಕರಣಗಳು ದಾಖಲಾಗಿದ್ದು 1,66,100 ರೂ. ದಂಡವನ್ನು ವಾಹನ ಸವಾರರಿಂದ ಪೊಲೀಸರು ವಸೂಲಿ ಮಾಡಿದ್ದಾರೆ. ಸಿಗ್ನಲ್ ಜಂಪ್ 818 ಪ್ರಕರಣದಿಂದ 1,41,800 ರೂ., ನೋ ಎಂಟ್ರಿ ಪ್ರಕರಣಗಳು 355, ಅದರಿಂದ 1,03,800 ರೂ., ಅಲ್ಲದೆ ವಾಹನದಲ್ಲಿ ಉದ್ದದ ಸಾಮಾಗ್ರಿಗಳನ್ನು ಸಾಗಿಸಿದ 318 ಪ್ರಕರಣಗಳಿಂದ 3,18,100 ರೂ. ದಂಡ ಸಂಗ್ರಹಿಸಲಾಗಿದೆ.

    ಸುಮಾರು 65 ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 6,782 ಪ್ರಕರಣಗಳಿಂದ ಸಂಚಾರಿ ಪೊಲೀಸರು ಒಂದೇ ದಿನಕ್ಕೆ ಬರೋಬ್ಬರಿ 21,52,100 ರೂಪಾಯಿಯನ್ನು ದಂಡ ವಸೂಲಿ ಮಾಡಿದ್ದಾರೆ.

  • ಬಸ್ ಡ್ರೈವರ್ ಹೆಲ್ಮೆಟ್ ಧರಿಸಿಲ್ಲವೆಂದು 500 ರೂ. ದಂಡ

    ಬಸ್ ಡ್ರೈವರ್ ಹೆಲ್ಮೆಟ್ ಧರಿಸಿಲ್ಲವೆಂದು 500 ರೂ. ದಂಡ

    ಲಕ್ನೋ: ಉತ್ತರ ಪ್ರದೇಶದ ನೊಯ್ದಾದ ಖಾಸಗಿ ಬಸ್ ಮಾಲೀಕರೊಬ್ಬರು ತಮ್ಮ ಬಸ್ ಚಾಲಕ ಹೆಲ್ಮೆಟ್ ಧರಿಸಿಲ್ಲ ಎಂದು ಸಾರಿಗೆ ಇಲಾಖೆ 500 ರೂ. ದಂಡದ ಚಲನ್ ಕಳುಹಿಸಿದೆ ಎಂದು ಆರೋಪಿಸಿದ್ದಾರೆ.

    ಸೆಪ್ಟೆಂಬರ್ 11ರಂದು ಆನ್‍ಲೈನ್ ಮೂಲಕ ಚಲನ್ ಕಳುಹಿಸಲಾಗಿದ್ದು, ನಮ್ಮ ಸಹೋದ್ಯೋಗಿಯೊಬ್ಬರು ಶುಕ್ರವಾರ ಇದನ್ನು ಪರಿಶೀಲಿಸಿದ್ದಾರೆ ಎಂದು ಬಸ್ ಮಾಲೀಕ ನಿರಂಕರ್ ಸಿಂಗ್ ಹೇಳಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದಲ್ಲಿ ದಂಡ ಪಾವತಿಸುವುದಾಗಿಯೂ ಸಿಂಗ್ ತಿಳಿಸಿದ್ದಾರೆ.

    ನಮ್ಮ ಬಸ್‍ಗಳು ನಗರ ಸಾರಿಗೆಯಾಗಿದ್ದು, ಬಸ್ ವ್ಯವಹಾರವನ್ನು ನಮ್ಮ ಮಗ ನೋಡಿಕೊಳ್ಳುತ್ತಾನೆ. ನಮ್ಮ ಬಳಿ 40-50 ಬಸ್‍ಗಳಿವೆ, ಶಾಲೆಗಳಿಗೆ ಹಾಗೂ ವಿವಿಧ ಕಂಪನಿಗಳಿಗೆ ಬಸ್‍ಗಳನ್ನು ಬಾಡಿಗೆಗೆ ನೀಡಲಾಗಿದೆ. ಇವು ನೊಯ್ಡಾ ಹಾಗೂ ಗ್ರೇಟರ್ ನೊಯ್ಡಾದಲ್ಲಿ ಸಂಚರಿಸುತ್ತವೆ ಎಂದು ತಿಳಿಸಿದ್ದಾರೆ.

    ಸಾರಿಗೆ ಇಲಾಖೆಯಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ಜವಾಬ್ದಾರಿಯುತ ಇಲಾಖೆ ಇಂತಹ ಸಣ್ಣ ತಪ್ಪುಗಳನ್ನು ಮಾಡಿದರೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಅಲ್ಲದೆ ನಿತ್ಯ ಸಾರಿಗೆ ಇಲಾಖೆ ಇಂತಹ ಅನಗತ್ಯ ಚಲನ್‍ಗಳನ್ನು ನೀಡುವ ಮೂಲಕ ಸಾರ್ವಜನಿಕರಲ್ಲಿ ಆಶ್ಚರ್ಯ ಹಾಗೂ ಆತಂಕವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ನಾನು ಸಂಬಂಧಪಟ್ಟ ಅಧಿಕಾರಿಗಳ ಬಳಿ ಚರ್ಚಿಸುತ್ತೇನೆ. ಅಗತ್ಯವಿದ್ದರೆ ಕೋರ್ಟ್ ಮೊರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಸಾರಿಗೆ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿ, ಈ ಕುರಿತು ಪರಿಶೀಲಿಸಲಾಗುತ್ತಿದೆ, ದೋಷವಾಗಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಹೊಸ ಮೋಟಾರ್ ವಾಹನ ಕಾಯ್ದೆಯ ನಿಯಮದಂತೆ ಚಲನ್ ನೀಡಲಾಗಿದೆ.

    ಈ ಚಲನ್‍ನ್ನು ನೋಯ್ಡಾ ಟ್ರಾಫಿಕ್ ಪೊಲೀಸರು ನೀಡಿಲ್ಲ. ಬದಲಿಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಹೊರಡಿಸಿದ್ದಾರೆ. ಸೀಟ್ ಬೆಲ್ಟ್ ಧರಿಸಿಲ್ಲ ಎಂದು ಈ ಹಿಂದೇ ಅದೇ ಬಸ್‍ಗೆ ನಾಲ್ಕು ಬಾರಿ ದಂಡ ವಿಧಿಸಲಾಗಿತ್ತು. ಈ ಬಾರಿಯೂ ಸೀಟ್ ಬೆಲ್ಟ್ ಅಪರಾಧವಾಗಿದ್ದರೆ ಚಲನ್‍ನಲ್ಲಿ ಸೀಟ್ ಬೆಲ್ಟ್ ನಿಯಮ ಉಲ್ಲಂಘಿಸಿದ್ದಕ್ಕೆ ಎಂದು ಉಲ್ಲೇಖಿಸಬೇಕು, ಹೆಲ್ಮೆಟ್ ಧರಿಸದ್ದಕ್ಕೆ ಎಂದಲ್ಲ ಎಂದು ನಿರಂಕರ್ ಸಿಂಗ್ ವಾದಿಸಿದ್ದಾರೆ. ನಮ್ಮ ಕಡೆಯಿಂದ ಏನಾದರೂ ದೋಷವಿದ್ದರೆ, ನಾವು ದಂಡವನ್ನು ಪಾವತಿಸುತ್ತೇವೆ. ಆದರೆ ಅದು ನಿಜವಾಗಿರಬೇಕು ಎಂದು ಸಿಂಗ್ ಸ್ಪಷ್ಟಪಡಿಸಿದ್ದಾರೆ.

  • ತಲೆ ಕೆಟ್ಟ ಬಿಎಸ್‍ವೈಗೆ ಅರಳು ಮರಳಾಗಿದೆ, ಸಂಚಾರಿ ನಿಯಮ ಬದಲಾಗಬಾರದು – ಎಸ್.ಆರ್ ಶ್ರೀನಿವಾಸ್

    ತಲೆ ಕೆಟ್ಟ ಬಿಎಸ್‍ವೈಗೆ ಅರಳು ಮರಳಾಗಿದೆ, ಸಂಚಾರಿ ನಿಯಮ ಬದಲಾಗಬಾರದು – ಎಸ್.ಆರ್ ಶ್ರೀನಿವಾಸ್

    ತುಮಕೂರು: ತಲೆ ಕೆಟ್ಟ ಯಡಿಯೂರಪ್ಪಗೆ ಅರಳು ಮರಳಾಗಿದೆ. ಅಲ್ಲೆಲ್ಲೋ ಗುಜರಾತ್‍ನಲ್ಲಿ ಟ್ರಾಫಿಕ್ ಹಳೆ ರೂಲ್ಸ್ ಫಾಲೋ ಮಾಡಿದ್ದಾರೆ ಎಂದು ಇಲ್ಲೂ ಮಾಡೋಕೆ ಹೊರಟಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಕಿಡಿಕಾರಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ ಹೊಸ ನಿಯಮ ಜಾರಿಯಾಗಬೇಕು. ಹೊಸ ನಿಯಮಕ್ಕೆ ವಿನಾಯತಿ ಕೊಡಬಾರದು. ಹೊರದೇಶದಲ್ಲಿ ಅಪಘಾತ ಆದರೆ ಅತಿ ಹೆಚ್ಚು ದಂಡ ಹಾಕುತ್ತಾರೆ. ಎರಡು ಬಾರಿ ಅಪಘಾತ ಮಾಡಿದರೆ 6 ತಿಂಗಳು ಜೈಲಿಗೆ ಹಾಕುತ್ತಾರೆ. ಮೂರು ಬಾರಿ ಅಪಘಾತ ಮಾಡಿದೆ ಮೂರು ವರ್ಷ ಜೈಲು, ಲೈಸನ್ಸ್ ರದ್ದು ಮಾಡುತ್ತಾರೆ. ಹಾಗಾಗಿ ಅಲ್ಲಿನ ವಾಹನ ಸವಾರರಿಗೆ ಭಯ ಇರುತ್ತದೆ ಎಂದರು.

    ನಮ್ಮ ದೇಶದಲ್ಲೂ ಹೊಸ ದಂಡ ಜಾರಿಯಾದರೆ ಭಯ ಹುಟ್ಟಿ ನಿಯಮ ಉಲ್ಲಂಘನೆ ಕಡಿಮೆಯಾಗುತಿತ್ತು. ಹೊಸ ರೂಲ್ಸ್ ಹಾಗೇ ಇದ್ದರೆ ಜನರು ದೇಶದ ಕಾನೂನಿಗೆ ಬೆಲೆ ನೀಡುತ್ತಾರೆ. ಕಾನೂನು ಪಾಲನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳೋರು. ಹೊಸ ನಿಯಮ ಹಾಗೆಯೇ ಜಾರಿಯಾಗಬೇಕು, ಪರಿಷ್ಕರಣೆ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಹೊಸ ನಿಯಮಕ್ಕೂ ಮುಂಚೆಯೇ 6.53 ಲಕ್ಷ ದಂಡ ಕಟ್ಟಿದ್ದ ಟ್ರಕ್ ಮಾಲೀಕ

    ಹೊಸ ನಿಯಮಕ್ಕೂ ಮುಂಚೆಯೇ 6.53 ಲಕ್ಷ ದಂಡ ಕಟ್ಟಿದ್ದ ಟ್ರಕ್ ಮಾಲೀಕ

    ಭುವನೇಶ್ವರ: ಟ್ರಕ್ ಮಾಲೀಕನೊಬ್ಬ ಹೊಸ ಮೋಟಾರು ವಾಹನಗಳ ಕಾಯ್ದೆ ಬರುವ ಮೊದಲೇ 6.53 ಲಕ್ಷ ದಂಡ ಕಟ್ಟಿರುವ ಘಟನೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ.

    ನಾಗಾಲ್ಯಾಂಡ್ ನೋಂದಾಯಿತ ಟ್ರಕ್ಕೊಂದು ಏಳು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 6.53 ಲಕ್ಷ ದಂಡವನ್ನು ಮಾಲೀಕ ಕಟ್ಟಿದ್ದಾರೆ. ಈ ಮಾಹಿತಿ ತಡವಾಗಿ ಬೆಳಕಿಗೆ ಬಂದಿದ್ದು, ಹೊಸ ಸಂಚಾರಿ ನಿಯಮ ಸೆಪ್ಟಂಬರ್ 1 ರಿಂದ ಜಾರಿಗೆ ಬಂದಿದ್ದರೆ ಈ ಟ್ರಕ್ ಮಾಲೀಕನಿಗೆ ಆಗಸ್ಟ್ 10 ರಂದೇ ಹಳೆಯ ಕಾಯ್ದೆಯ ಅಡಿ ಬರೋಬ್ಬರಿ 6.53 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಸಂಬಲ್ಪುರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್.ಟಿ.ಒ) ಟ್ರಕ್ ಚಾಲಕ ದಿಲೀಪ್ ಕಾರ್ತಾ ಮತ್ತು ಲಾರಿ ಮಾಲೀಕ ಶೈಲೇಶ್ ಶಂಕರ್ ಲಾಲ್ ಗುಪ್ತ ಅವರ ಲಾರಿಗೆ ಒಡಿಶಾ ಮೋಟಾರು ವಾಹನಗಳ ತೆರಿಗೆ (ಒಎಂವಿಟಿ) ಕಾಯ್ದೆಯಡಿ ರಸ್ತೆ ತೆರೆಗೆ ಪಾವತಿಸದ್ದಕ್ಕೆ 6,40,500 ರೂ ದಂಡ ಹಾಕಲಾಗಿದೆ.

    ಶೈಲೇಶ್ ಶಂಕರ್ ಲಾಲ್ ಗುಪ್ತ ಲಾರಿಯನ್ನು 2014ರ ಜುಲೈ 21 ರಂದು ಖರೀದಿಸಿದ ನಂತರ ರಸ್ತೆ ತೆರಿಗೆಯನ್ನು ಪಾವತಿಸಿರಲಿಲ್ಲ. ಸೆ.30 ರಂದು ದಂಡವನ್ನು ಪಾವತಿ ಮಾಡಲು ತೆರಳಿದ್ದಾರೆ. ಹೀಗಾಗಿ 5 ವರ್ಷ ತೆರಿಗೆ ಪಾವತಿ ಮಾಡದೇ ಲಾರಿ ಚಾಲನೆ ಮಾಡಿದಕ್ಕೆ ಅವರಿಗೆ 6,40,500 ದಂಡ ಹಾಕಿದ್ದರೆ ಇತರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಉಳಿದ 12,500 ರೂ. ದಂಡವನ್ನು ವಿಧಿಸಲಾಗಿದೆ.

    ಮಾಲೀಕನಿಗೆ ನೀಡಿರುವ ಚಲನ್ ಪ್ರತಿ ಪ್ರಕಾರ, ರಸ್ತೆ ತೆರಿಗೆ ದಂಡದ ಜೊತೆಗೆ, ಸಾಮಾನ್ಯ ಅಪರಾಧಕ್ಕೆ 100 ರೂ. ಹಾಗೂ ಆದೇಶಗಳ ಅವಿಧೇಯತೆ ಮತ್ತು ಅಡಚಣೆಗೆ 500 ರೂ, ವಾಯು ಮತ್ತು ಶಬ್ದ ಮಾಲಿನ್ಯ ಮಾಡಿದ್ದಕ್ಕೆ 1,000 ರೂ. ಮತ್ತು ಸರಕು ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಿದ್ದಕ್ಕೆ 5,000 ರೂ., ಇದಲ್ಲದೆ ಪರವಾನಗಿ ಇಲ್ಲದೆ ವಾಹನವನ್ನು ಬಳಸಿದ್ದಕ್ಕಾಗಿ ಅಥವಾ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ 5,000 ರೂ. ವಿಮೆಯಿಲ್ಲದೆ ಲಾರಿ ಚಲಿಸಿದಕ್ಕೆ 1,000 ರೂ. ಸೇರಿ ಒಟ್ಟು 6.53 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ.

  • ಸಂಚಾರಿ ನಿಯಮ ಉಲ್ಲಂಘನೆ- 1.41 ಲಕ್ಷ ದಂಡ ಕಟ್ಟಿದ ಲಾರಿ ಚಾಲಕ

    ಸಂಚಾರಿ ನಿಯಮ ಉಲ್ಲಂಘನೆ- 1.41 ಲಕ್ಷ ದಂಡ ಕಟ್ಟಿದ ಲಾರಿ ಚಾಲಕ

    ಜೈಪುರ್: ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ಬಳಿಕ ವಾಹನ ಸವಾರರು ದುಬಾರಿ ದಂಡ ಕಟ್ಟಲು ಪರದಾಡುತ್ತಿದ್ದು, ರಾಜಸ್ಥಾನದ ಲಾರಿ ಚಾಲಕನೊಬ್ಬ ಸಂಚಾರಿ ನಿಯಮ ಉಲ್ಲಂಘಿಸಿ ಬರೋಬ್ಬರಿ 1.41 ಲಕ್ಷ ರೂ. ದಂಡ ಕಟ್ಟಿದ್ದಾನೆ.

    ಹೌದು. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಭಾರೀ ಮೊತ್ತದ ದಂಡವನ್ನು ಹಾಕಲಾಗುತ್ತದೆ. ಈ ಹಿಂದೆ ಒಡಿಶಾದಲ್ಲಿ ಲಾರಿ ಚಾಲಕರೊಬ್ಬರಿಗೆ 86,000 ರೂ. ದಂಡ ಹಾಕಿದ್ದು ದೇಶದಲ್ಲಿಯೇ ದುಬಾರಿ ದಂಡ ಎನ್ನಲಾಗಿತ್ತು. ಆದರೆ ಈಗ ರಾಜಸ್ಥಾನದಲ್ಲಿ ಲಾರಿ ಚಾಲಕನೊಬ್ಬ ಸಂಚಾರ ನಿಯಮ ಉಲ್ಲಂಘನೆ ಮಾಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದು, ಬರೋಬ್ಬರಿ 1,41,700 ರೂ. ದಂಡ ಕಟ್ಟಿದ್ದಾನೆ. ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಬಂದ ಬಳಿಕ ಇದು ದೇಶದಲ್ಲಿಯೇ ದುಬಾರಿ ಮೊತ್ತದ ದಂಡ ಎಂದು ಹೇಳಲಾಗಿದೆ. ಇದನ್ನೂ ಓದಿ:ಸ್ಲಿಪ್ಪರ್ ಹಾಕಿ ಬೈಕ್ ಓಡಿಸಿದ್ರೆ ಬೀಳುತ್ತೆ ಭಾರೀ ದಂಡ!

    ಈ ಲಾರಿ ಚಾಲಕ ಓವರ್ ಲೋಡ್ ಸೇರಿದಂತೆ ಹಲವು ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದು, ಸಂಚಾರಿ ಪೊಲೀಸರು 1,41,700 ರೂ. ದಂಡ ಹಾಕಿದ್ದಾರೆ. ಆತ ಕೋರ್ಟಿಗೆ ಹಾಜರಾಗಿ ಈ ದಂಡವನ್ನು ಕಟ್ಟಿದ್ದಾನೆ ಎಂದು ಮೂಲಗಳು ತಿಳಿಸಿದೆ.

    ಇತ್ತೀಚೆಗೆ ಉತ್ತರ ಪ್ರದೇಶದ ಆಲಿಘರ್‍ನಲ್ಲಿ ಟ್ರಾಫಿಕ್ ಪೊಲೀಸರು ಕಾರು ಚಾಲಕ ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ವಿಧಿಸಿದ್ದು, ಆ ಚಾಲಕ ಹೆಲ್ಮೆಟ್ ಹಾಕಿಕೊಂಡೇ ಕಾರು ಚಲಾಯಿಸುತ್ತಿರುವ ಪ್ರಕರಣ ಕೂಡ ಸಖತ್ ಸುದ್ದಿಯಾಗಿತ್ತು. ಆಲಿಘರ್‍ನ ಪಿಯುಷ್ ವಶ್ರ್ನಿ ಅವರು ಕಾರಿನಲ್ಲಿ ಹೆಲ್ಮೆಟ್ ಹಾಕದಿದ್ದಕ್ಕೆ ದಂಡ ಕಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 27ರಂದು ಕಾರು ಚಲಾಯಿಸುವಾಗ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್ ಪೊಲೀಸರು ನನಗೆ 500 ರೂ. ದಂಡ ವಿಧಿಸಿ, ಇ-ಚಲನ್ ನೀಡಿದ್ದರು. ಇ-ಚಲನ್‍ನಲ್ಲಿ ನನ್ನ ಕಾರಿನ ಸಂಖ್ಯೆ ಇತ್ತು. ಆದ್ದರಿಂದ ಮತ್ತೆ ದಂಡ ಹಾಕಬಹುದೆಂಬ ಭಯದಿಂದ ನಾನು ಹೆಲ್ಮೆಟ್ ಹಾಕಿಕೊಂಡೇ ಕಾರು ಒಡಿಸುತ್ತಿದ್ದೇನೆ ಎಂದು ಹೇಳಿದ್ದರು.  ಇದನ್ನೂ ಓದಿ:ಸಂಚಾರ ನಿಯಮ ಉಲ್ಲಂಘಿಸಿ 86,500 ರೂ. ದಂಡ ತೆತ್ತ ಲಾರಿ ಚಾಲಕ

    ಕಾರು ಚಲಾಯಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂದು ಸಂಚಾರಿ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಇ-ಚಲನ್ ಮೇಲೆ ತನ್ನ ಕಾರಿನ ಸಂಖ್ಯೆ ಇದೆ ಎಂದು ಪಿಯೂಷ್ ಪೊಲೀಸರಿಗೆ ದೂರು ನೀಡಿದ್ದಾರೆ. ಸಂಚಾರಿ ಪೊಲೀಸರಿಂದ ಎಡವಟ್ಟಾಗಿದ್ದು, ಚಲನ್ ಪರಿಶೀಲನೆ ಮಾಡುತ್ತೇವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದರು.

  • 5 ದಿನದಲ್ಲಿ 72 ಲಕ್ಷ ದಂಡ ಸಂಗ್ರಹ – ಹೆಲ್ಮೆಟ್ ಹಾಕದ್ದಕ್ಕೆ ಬಿತ್ತು ಅತಿ ಹೆಚ್ಚು ಕೇಸ್

    5 ದಿನದಲ್ಲಿ 72 ಲಕ್ಷ ದಂಡ ಸಂಗ್ರಹ – ಹೆಲ್ಮೆಟ್ ಹಾಕದ್ದಕ್ಕೆ ಬಿತ್ತು ಅತಿ ಹೆಚ್ಚು ಕೇಸ್

    ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಹೊಸ ತಿದ್ದುಪಡಿ ಕಾಯ್ದೆ ಜಾರಿಯಾದ ಐದೇ ದಿನದಲ್ಲಿ ಬರೋಬ್ಬರಿ 72.49 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

    ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆಯ ನಿರ್ದೇಶನದಂತೆ ಸೆ.4 ರಿಂದ ಇಂದು(ಸೆ.9) ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಒಟ್ಟು 6,813 ಪ್ರಕರಣ ದಾಖಲಿಸಿ 72,49,900 ದಂಡವನ್ನು ವಸೂಲಿ ಮಾಡಿದ್ದಾರೆ.

     

    ಹಿಂಬದಿಯ ಸವಾರ ಹೆಲ್ಮಟ್ ಹಾಕದ್ದಕ್ಕೆ ಅತಿ ಹೆಚ್ಚು ದಂಡ ಬಿದ್ದಿದ್ದು, ಬರೋಬ್ಬರಿ 2,645 ಪ್ರಕರಣಗಳು ದಾಖಲಾಗಿದ್ದು, ಸುಮಾರು 26,45,000 ದಂಡವನ್ನು ವಸೂಲಿ ಮಾಡಲಾಗಿದೆ. ಇದನ್ನು ಬಿಟ್ಟರೆ ಚಾಲನೆ ಮಾಡುವಾಗ ಹೆಲ್ಮಟ್ ಹಾಕದ 1,968 ಪ್ರಕರಣಗಳು ದಾಖಲಾಗಿದ್ದು 19,68,000 ದಂಡ ವಸೂಲಿ ಮಾಡಲಾಗಿದೆ.

    ವಾಹನ ಚಾಲಿಸುವ ಮೊಬೈಲ್ ಬಳಕೆ ಮಾಡಿದ ಒಟ್ಟು 695 ಪ್ರಕರಣ ದಾಖಲಾಗಿದ್ದು, 13,90,000 ದಂಡ ವಸೂಲಿ ಮಾಡಲಾಗಿದೆ. ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದಕ್ಕೆ 708 ಪ್ರಕರಣಗಳು ದಾಖಲಾಗಿದ್ದು, 7,08,000 ವಸೂಲಿ ಮಾಡಲಾಗಿದೆ. ಇದನ್ನು ಬಿಟ್ಟರೆ ಒನ್ ವೇಯಲ್ಲಿ ವಾಹನ ಚಾಲನೆ ಮಾಡಿದ 425 ಪ್ರಕರಣ ದಾಖಲಾಗಿದ್ದು, ಒಟ್ಟು 2,12,500 ದಂಡ ವಸೂಲಿ ಮಾಡಲಾಗಿದೆ.

  • ವಾಹನ ತಿದ್ದುಪಡಿ ಮಸೂದೆ ಪಾಸ್- ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ದಂಡ

    ವಾಹನ ತಿದ್ದುಪಡಿ ಮಸೂದೆ ಪಾಸ್- ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ದಂಡ

    ನವದೆಹಲಿ: ರಸ್ತೆ ಅಪಘಾತವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘನೆಗಳಿಗೆ ಭಾರೀ ದಂಡ ವಿಧಿಸುವಂತಹ ಮೋಟಾರು ವಾಹನ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಸಮ್ಮತ್ತಿ ಸಿಕ್ಕಿದೆ.

    2017ರಲ್ಲೇ ಪರಿಚಯವಾಗಿದ್ದ ಈ ಮಸೂದೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಯಲ್ಲಿ ಮತ್ತೆ ಮಂಡಿಸಿದರು. ಈ ಮಸೂದೆ ಪರ 108 ಹಾಗೂ ವಿರುದ್ಧ 13 ಮತಗಳು ಬಂದಿತ್ತು.

    ಇದೀಗ ಮೋಟಾರು ವಾಹನ ಅಪಘಾತಕ್ಕೆ ಸಂಬಂಧಿತ ಕೇಸ್‍ಗಳಲ್ಲಿ ಮೃತರಾದವರಿಗೆ 5 ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂಪಾಯಿ ಪರಿಹಾರ ಸೇರಿದಂತೆ ಟ್ರಾಫಿಕ್ ಸಂಬಂಧಿತ ಅಪರಾಧಗಳಲ್ಲಿ ಹೆಚ್ಚಿನ ದಂಡ ಜೊತೆಗೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಇದರ ಜೊತೆಗೆ ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳಿಗೆ ಸೀಟ್ ಬೆಲ್ಟ್ ಕಡ್ಡಾಯ ಮಾಡಿದೆ.

    ನೂತನ ನಿಯಮದನ್ವಯ ಎಷ್ಟು ರೂಪಾಯಿ ದಂಡ ವಿಧಿಸಲಾಗುತ್ತದೆ?

    * ಸಂಚಾರ ನಿಯಮ ಉಲ್ಲಂಘನೆಗೆ- 500 ದಂಡ
    * ತುರ್ತು ವಾಹನಗಳಿಗೆ ದಾರಿ ಬಿಡದಿದ್ದರೆ – 10,000 ದಂಡ, 6 ತಿಂಗಳು ಜೈಲು
    * ಅತಿ ವೇಗದ ಚಾಲನೆ – 1,000 ದಿಂದ 2,000 ದಂಡ, 3 ತಿಂಗಳು ಜೈಲು
    * ಕುಡಿದು ವಾಹನ ಚಾಲನೆ – 10,000 ದಂಡ, 6 ತಿಂಗಳು ಜೈಲು
    * ಹೆಲ್ಮೆಟ್ ಧರಿಸದೆ ಡ್ರೈವಿಂಗ್ – 1,000 ದಂಡ
    * ವಿಮೆ ರಹಿತ ವಾಹನ ಚಾಲನೆ – 2,000 ದಂಡ
    * ಅಪ್ರಾಪ್ತರಿಂದ ವಾಹನ ಚಾಲನೆ – 25,000 ದಂಡ (ಪೋಷಕರ ವಿರುದ್ಧ ಕಾನೂನು ಕ್ರಮ)
    * ಲೈಸೆನ್ಸ್ ಇಲ್ಲದೆ ಅನಧಿಕೃತ ವಾಹನ ಚಾಲನೆ – 5,000 ದಂಡ
    * ಅತಿ ವೇಗದ ಚಾಲನೆಗೆ – 1,000 ವರೆಗೆ ದಂಡ
    * ವಾಹನಗಳ ಅಪಘಾತವಾದರೆ ಚಾಲಕರಿಗೆ – 10 ಲಕ್ಷದ ವರೆಗೆ ದಂಡ
    * ಓವರ್ ಲೋಡಿಂಗ್- 20,000 ರೂ.
    * ವಾಹನ ಪರವಾನಿಗೆ ಉಲ್ಲಂಘಿಸುವ ಟ್ಯಾಕ್ಸಿ ಕಂಪನಿಗಳಿಗೆ- 1 ಲಕ್ಷ ದಂಡ
    * ಸಿಗ್ನಲ್ ಜಂಪ್, ಚಾಲನೆ ವೇಳೆ ಮೊಬೈಲ್ ಬಳಕೆ – 5000 ದಂಡ, 6 ತಿಂಗಳು ಜೈಲು ಇತ್ಯಾದಿ