ತುಮಕೂರು: ಮಿರರ್ (Mirror) ಇಲ್ಲದೆ ಬಂದ ಬೈಕ್ ಸವಾರ ಹಾಗೂ ಟ್ರಾಫಿಕ್ ಪೊಲೀಸರ (Traffic Police) ನಡುವೆ ದಂಡ (Penalty) ಕಟ್ಟುವ ವಿಚಾರವಾಗಿ ವಾಗ್ವಾದ ನಡೆದಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ತುಮಕೂರಿನ ರಿಂಗ್ ರಸ್ತೆಯಲ್ಲಿ ಹರ್ಷ ಎಂಬ ಯುವಕ ಬೆಂಗಳೂರಿಂದ ಅರಸಿಕೆರೆಗೆ ಬೈಕಲ್ಲಿ ಹೋಗುತಿದ್ದ. ಯುವಕನ ಬೈಕ್ಗೆ ಎರಡೂ ಮಿರರ್ ಇರಲಿಲ್ಲ. ಹೀಗಾಗಿ ರಿಂಗ್ ರಸ್ತೆಯಲ್ಲಿ ನಗರ ಪೂರ್ವ ಸಂಚಾರಿ ಮಹಿಳಾ ಪಿಎಸ್ಐ ಸ್ಪಾಟ್ ಫೈನ್ ಹಾಕಿದ್ದಾರೆ. ಆದರೆ ಯುವಕ ತನ್ನ ಬಳಿ ಹಣ ಇಲ್ಲ, ರಶೀದಿ ಕೊಡಿ ಕೋರ್ಟ್ನಲ್ಲಿ ಕಟ್ಟುತ್ತೇನೆ ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ. ಒಪ್ಪದ ಪೊಲೀಸರು ಸ್ಥಳದಲ್ಲೇ ದಂಡ ಕಟ್ಟಬೇಕು ಎಂದು ತಾಕೀತು ಮಾಡಿದ್ದಾರೆ. ಇದರಿಂದ ಪೊಲೀಸರು ಮತ್ತು ಸವಾರನ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ: ಕುರ್ಚಿ ಕದನ, ಅಭಿವೃದ್ಧಿ ಪತನ – 6 ತಿಂಗಳಲ್ಲಿ ಕೇವಲ ಶೇ.30ರಷ್ಟು ಮಾತ್ರ ಪ್ರಗತಿ
ಪೊಲೀಸರು ದೌರ್ಜನ್ಯ ಮಾಡಿದ್ದಾರೆ ಅಂತ ಯುವಕ ಸ್ಥಳದಲ್ಲೇ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾನೆ. ಇದರಿಂದಾಗಿ ಸುಮಾರು ಅರ್ಧ ಕಿ.ಮೀ ದೂರದಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾರ್ವಜನಿಕರಿಗೆ ತೊಂದರೆ ಆದ ಹಿನ್ನೆಲೆ ಜಯನಗರ ಪೊಲೀಸರು ಹರ್ಷನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ
ಬೆಂಗಳೂರು: ಔಟರ್ ರಿಂಗ್ ರೋಡ್ನ (Outer Ring Road) 9ನೇ ಮೇನ್ ಜಂಕ್ಷನ್ ನಿಂದ 5ನೇ ಮೇನ್ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ (Metro Station Work) ಮುಂದಿನ 45 ದಿನಗಳ ಕಾಲ ಬಂದ್ ಮಾಡಲಾಗುತ್ತಿದ್ದು, ಓಆರ್ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಔಟರ್ ರಿಂಗ್ ರೋಡ್ನಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರಿ ಪೊಲೀಸರು (Traffic Police) ಮನವಿ ಮಾಡಿದ್ದಾರೆ.
ಹೌದು, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ ರಸ್ತೆಯ 9ನೇ ಮುಖ್ಯರಸ್ತೆ ಜಂಕ್ಷನ್ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್ ವರೆಗೆ ಸರ್ವಿಸ್ ರಸ್ತೆಯಲ್ಲಿ ಮೇಟ್ರೋ ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು, ಅ.6ರಿಂದ 45 ದಿನಗಳ ಕಾಲ ಕಾಮಗಾರಿ ನಡೆಯಲಿದೆ. 9ನೇ ಮುಖ್ಯ ರಸ್ತೆ ಜಂಕ್ಷನ್ ನಿಂದ 5ನೇ ಮುಖ್ಯ ರಸ್ತೆ ಜಂಕ್ಷನ್ವರೆಗಿನ ಹೊರವರ್ತುಲ ರಸ್ತೆ ಸರ್ವಿಸ್ ರಸ್ತೆಯನ್ನು ಕಾಮಗಾರಿಗಾಗಿ ಉಪಯೋಗಿಸಿಕೊಳ್ಳಲಾಗುತ್ತದೆ. ಇದನ್ನೂ ಓದಿ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಘರ್ಷಣೆ; 11 ಪಾಕಿಸ್ತಾನಿ ಸೈನಿಕರು, ಟಿಟಿಪಿಯ 19 ಉಗ್ರರು ಸಾವು
ಕಾಮಗಾರಿ ಮುಗಿಯುವವರೆಗೆ ಇಬ್ಬಲೂರ್ ಕಡೆಯಿಂದ ಬಂದು ಸಿಲ್ಕ್ ಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನ ಸವಾರರು 14ನೇ ಮುಖ್ಯ ರಸ್ತೆ ಫೈಓವರ್ ಮೂಲಕ ಮುಖ್ಯರಸ್ತೆಯಲ್ಲಿಯೇ 5ನೇ ಮುಖ್ಯರಸ್ತೆ ಜಂಕ್ಷನ್ಗೆ ಸಾಗಿ ಅಥವಾ ಇತರ ಹೆಚ್.ಎಸ್.ಆರ್. ಲೇಔಟ್ ಒಳಭಾಗದ ರಸ್ತೆಗಳ ಮೂಲಕ ಸಾಗಿ ಸಿಲ್ಕ್ ಬೋರ್ಡ್ ಹಾಗು ಹೊಸೂರು ಮುಖ್ಯರಸ್ತೆಯಲ್ಲಿ ಸಂಚರಿಸಬೇಕು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬೀಗ; ಸರ್ಕಾರದಿಂದ ಸುದೀಪ್ ಟಾರ್ಗೆಟ್: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ (Traffic Rules Break) ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿತ್ತು. ಇದೀಗ ಒಂದೇ ವಾರದಲ್ಲಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹವಾಗಿದೆ.
ಬೆಂಗಳೂರು (Bengaluru) ವ್ಯಾಪ್ತಿಗೆ ಮಾತ್ರ ಈ ಡಿಸ್ಕೌಂಡ್ ನೀಡಿದ್ದು, ವಾಹನ ಸವಾರರ ರಿಯಾಕ್ಷನ್ ನೋಡಿಕೊಂಡು ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕೇ ಬೇಡವೇ ಅನ್ನೋದು ತೀರ್ಮಾನ ಮಾಡುವ ಸಾಧ್ಯತೆ ಇದೆ. ಇನ್ನೂ ಹತ್ತು ದಿನಗಳ ಕಾಲ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಅವಕಾಶವಿದ್ದು, ಸುಮಾರು 50 ಕೋಟಿಯಷ್ಟು ದಂಡ ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು: ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಗುಡ್ ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಿದ್ದಾರೆ.ಇದನ್ನೂ ಓದಿ: ಬೀದರ್ `ಕೈ’ ನಾಯಕರಿಂದ ಖಂಡ್ರೆ ವಿರುದ್ಧ ಸಿಎಂ, ಡಿಸಿಎಂಗೆ ದೂರು
ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿದ್ದು, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದಾರೆ.
ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.ಇದನ್ನೂ ಓದಿ: ಮಂಗಳೂರು | ಕುಡುಪುವಿನಲ್ಲಿ ಅಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ವಜಾ
ಬಳ್ಳಾರಿ: ಚಲಿಸುತ್ತಿರುವ ಬೈಕ್ (Bike) ಹಿಂಬದಿ ಕುಳಿತು ಯುವಕನೊಬ್ಬ ಬಿಯರ್ (Beer) ಕುಡಿದ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಳ್ಳಾರಿ ಸಂಚಾರಿ ಠಾಣೆ ಪೊಲೀಸರು ಬೈಕ್ ಸಮೇತ ಆರೋಪಿಯನ್ನ ಬಂಧಿಸಿದ್ದಾರೆ.
– ವಾಯು ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ ಹೊಸ ನಿಯಮ ಜಾರಿ – 350 ಪೆಟ್ರೋಲ್ ಪಂಪ್ನಲ್ಲಿ ಟ್ರಾಫಿಕ್ ಪೊಲೀಸ್ ನಿಯೋಜನೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಳೆಯ ವಾಹನಗಳ (Old Vehicle) ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ದೆಹಲಿ ಸರ್ಕಾರವು ಇಂದಿನಿಂದ 15 ವರ್ಷಗಳಿಗಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಗಳಿಗಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ರಸ್ತೆಯಲ್ಲಿ ಓಡಿಸುವುದನ್ನು ನಿಷೇಧಿಸಿದೆ.
ಇದರ ಭಾಗವಾಗಿ ದೆಹಲಿಯಲ್ಲಿ ಅವಧಿ ಮೀರಿದ ವಾಹನಗಳಿಗೆ ಪೆಟ್ರೋಲ್ ಅಥವಾ ಡೀಸೆಲ್ ಹಾಕದಿರಲು ನಿಯಮ ರೂಪಿಸಿದೆ. ಈ ನಿಯಮಗಳ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಸಾರಿಗೆ ಇಲಾಖೆ, ದೆಹಲಿ ಪೊಲೀಸ್ ಮತ್ತು ಸಂಚಾರ ಸಿಬ್ಬಂದಿಯೊಂದಿಗೆ (Traffic Police) ಸಮನ್ವಯದೊಂದಿಗೆ, ಜೀವಿತಾವಧಿಯ ವಾಹನಗಳಿಗೆ ಇಂಧನ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಮಗ್ರ ಕಾರ್ಯತಂತ್ರವನ್ನು ಜಾರಿಗೆ ತಂದಿದೆ. ಇದನ್ನೂ ಓದಿ: ಮೈಸೂರು| ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಮದ್ಯ ಮಾರಾಟ
ಈಗಾಗಲೇ ದೆಹಲಿಯ ಪೆಟ್ರೋಲ್ ಪಂಪ್ಗಳಲ್ಲಿ (Petrol Pump) ಜುಲೈ 1ರಿಂದ ಜೀವಿತಾವಧಿ ಮುಗಿದ ವಾಹನಗಳಿಗೆ ಇಂಧನವನ್ನು ವಿತರಿಸಲಾಗುವುದಿಲ್ಲ. 15 ವರ್ಷ ಹಳೆಯ ಪೆಟ್ರೋಲ್ ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳು ಎಂದು ಹೇಳುವ ಸೂಚನೆಯನ್ನು ಹಾಕಲಾಗಿದೆ. ಇದರ ಜೊತೆಗೆ, ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಜಾರಿಗೊಳಿಸಲು ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ
ನಿಗದಿತ ಜೀವಿತಾವಧಿ ಮೀರಿದ ವಾಹನಗಳ ಇಂಧನ ತುಂಬುವಿಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಗುರುತಿಸಲಾದ 350 ಪೆಟ್ರೋಲ್ ಪಂಪ್ಗಳಲ್ಲಿ ತಲಾ ಒಬ್ಬ ಸಂಚಾರ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗುವುದು. ಯೋಜನೆಯ ಪ್ರಕಾರ, ದೆಹಲಿ ಪೊಲೀಸರು 1 ರಿಂದ 100 ಸಂಖ್ಯೆಯ ಇಂಧನ ಕೇಂದ್ರಗಳಲ್ಲಿ ನಿಯೋಜಿಸಲ್ಪಡುತ್ತಾರೆ. ಸಾರಿಗೆ ಇಲಾಖೆಯು 101 ರಿಂದ 159 ಸಂಖ್ಯೆಯ ಇಂಧನ ಕೇಂದ್ರಗಳಲ್ಲಿ ಮತ್ತು 59 ಎಮ್ಸಿಡಿ ತಂಡಗಳು ವಿವಿಧ ಇಂಧನ ಮಳಿಗೆಗಳಲ್ಲಿಯೂ ಇರುತ್ತವೆ. ಇದನ್ನೂ ಓದಿ: ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ – ಇಂದಿನಿಂದ 1 ತಿಂಗಳು ಸಂಪೂರ್ಣ ಬಂದ್
ಸಂಚಾರ ಸಿಬ್ಬಂದಿಗೆ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಥವಾ ಅವಧಿ ಮುಗಿದ ವಾಹನದ ಮಾಲೀಕರಿಗೆ ಚಲನ್ ನೀಡುವ ಅಧಿಕಾರವಿರುತ್ತದೆ. ಇದಲ್ಲದೆ, ಜಾರಿ ಕಾರ್ಯಾಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪ್ರತಿ ಪೆಟ್ರೋಲ್ ಪಂಪ್ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ದೆಹಲಿಯಾದ್ಯಂತ ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ಕ್ಯಾಮೆರಾ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದ್ದು, ಇಂಧನ ಕೇಂದ್ರದ ಆವರಣಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳ ನೋಂದಣಿ ವಿವರಗಳನ್ನು ಸೆರೆಹಿಡಿಯಲಿದೆ. ಇದನ್ನೂ ಓದಿ: ಬಾಸ್ ಜೊತೆ ಅಕ್ರಮ ಸಂಬಂಧದ ಶಂಕೆ – ಲಿವ್ ಇನ್ ಗೆಳತಿಯ ಹತ್ಯೆಗೈದು ಶವದೊಂದಿಗೆ ಮಲಗಿದ್ದ 2 ಮಕ್ಕಳ ತಂದೆ
ಬೆಂಗಳೂರು: ‘ನಾನು ಹೆಲ್ಮೆಟ್ ಹಾಕಲ್ಲ, ನೀವ್ಯಾರು ಕೇಳೋಕೆ. ನಿಮಗೆ ಇಲ್ಲಿ ಫೈನ್ ಹಾಕೋಕೆ ಪರ್ಮಿಷನ್ ಕೊಟ್ಟವರಾರು..?’ ಎಂದು ಟ್ರಾಫಿಕ್ ಪೊಲೀಸರ ಜೊತೆ ಉದ್ಧಟತನ ತೋರಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೆಲ್ಮೆಟ್ ಧರಿಸದೇ ಬೈಕ್ನಲ್ಲಿ ಬಂದ ಸವಾರನನ್ನು ಪೊಲೀಸರು ತಡೆದಿದ್ದಾರೆ. ಆಗ, ‘ನಾನು ಯಶವಂತಪುರ ಜೆಡಿಎಸ್ ಘಟಕದ ಅಧ್ಯಕ್ಷ. ಬೇಕು ಅಂತಲೇ ನಾನು ಹೆಲ್ಮೆಟ್ ಹಾಕದೆ ಬಂದೆ ಏನಿವಾಗ. ನಿಮ್ ಇನ್ಸ್ ಪೆಕ್ಟರ್ಗೆ ಇಲ್ಲಿ ಗಾಡಿ ಹಿಡಿಯಬಾರದು ಅಂತಾ ಅವತ್ತೇ ಹೇಳಿದ್ದೀನಿ’.. ಹೀಗೆ ಟ್ರಾಫಿಕ್ ಪೊಲೀಸರ ಜೊತೆ ಉದ್ಧಟತನ ತೋರಿದ ನವೀನ್ ಗೌಡ ಎಂಬ ವ್ಯಕ್ತಿಯನ್ನು ಜ್ಞಾನಭಾರತಿ ಪೊಲೀಸರು ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರ ಮಾಜಿ ಸಿಎಂ ಜಗನ್ ರ್ಯಾಲಿ ವೇಳೆ ಅವಘಡ – ಕಾರಿನಡಿ ಸಿಲುಕಿ ವೃದ್ಧ ಸಾವು
ಘಟನೆ ಏನು?
21 ನೇ ತಾರೀಖು ಉಳ್ಳಾಲ ಮುಖ್ಯರಸ್ತೆಯಲ್ಲಿ ಜ್ಞಾನಭಾರತಿ ಸಂಚಾರ ಠಾಣೆಯ ಎಸ್ಐ ಹಾಗೂ ಟೀಂ ವೆಹಿಕಲ್ ಚೆಕಿಂಗ್ ಮಾಡ್ತಿತ್ತು. ಈ ವೇಳೆ ಹೆಲ್ಮೆಟ್ ಇಲ್ಲದೇ ಬಂದ ನವೀನ್ ಗೌಡ ಇಲ್ಲೇ ನಿಲ್ಲಿಸ್ಬೇಕಾ..? ಫೈನ್ ಕಟ್ಟಲ್ಲ. ನಾನು ಹೆಲ್ಮೆಟ್ ಹಾಕಲ್ಲ. ನಿಮಗೆ ಗಾಡಿ ಹಿಡಿಯೋಕೆ ಪರ್ಮಿಷನ್ ಕೊಟ್ಟವರ್ಯಾರು? ನಾನು ಯಶವಂತಪುರ ಜೆಡಿಎಸ್ ಘಟಕದ ಅಧ್ಯಕ್ಷ. ಯಾರನ್ನ ಕರೆಸ್ತೀರೊ ಕರೆಸು ಅಂತಾ ಪೊಲೀಸರಿಗೆ ಆವಾಜ್ ಬಿಟಿದ್ದ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕವಾಗಿ ನಿಂದಿಸಿದ ಆರೋಪದ ಮೇಲೆ ಎಸ್ಐ ಕುಮಾರ್ ನೀಡಿದ ದೂರಿನ ಮೇಲೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ಐಆರ್ ಆಗಿತ್ತು. ಸರ್ಕಾರಿ ಕೆಲಸಕ್ಕೆ ಅಡ್ಡಿ, ಸಾರ್ವಜನಿಕ ಅಧಿಕಾರಿಗೆ ನಿಂದನೆ ಆರೋಪದಲ್ಲಿ ಆರೋಪಿ ನವೀನ್ ಗೌಡನನ್ನ ಅರೆಸ್ಟ್ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸರು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ
ಮಂಡ್ಯದಲ್ಲಿ ಸತೀಶ್ ಬಾಬು ಎಂಬುವವರ ಸ್ಕೂಟರ್ ಕದ್ದು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ. ಮಂಡ್ಯ ಜಿಲ್ಲೆ ಗಡಿದಾಟುವ ಮುನ್ನವೆ ಗೆಜ್ಜಲಗೆರೆ ಬಳಿ ಸ್ಕೂಟರ್ ಅಪಘಾತಕ್ಕೀಡಾಗಿದೆ. ಅಪಘಾತವಾದ ಬಳಿಕ ಮಂಜುನಾಥನನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ವಿಚಾರಣೆ ವೇಳೆ ಬೈಕ್ ಕಳ್ಳತನ ಬೆಳಕಿಗೆ ಬಂದಿದೆ.
ಬೆಂಗಳೂರು: ಮಂಡ್ಯದಲ್ಲಿ (Mandya) ವಾಹನ ತಡೆಯುವಾಗ ಆದ ಎಡವಟ್ಟಿನಿಂದ ಮಗು ಸಾವನ್ನಪ್ಪಿದ್ದ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು (Bengaluru Police) ಇದೀಗ ಹೊಸ ಎಸ್ಒಪಿ (SOP) ಜಾರಿಗೊಳಿಸಿದ್ದಾರೆ.
ಅಪಘಾತಗಳಿಗೆ ಆಸ್ಪದ ನೀಡಬಾರದು ಎಂಬ ಉದ್ದೇಶದಿಂದ ವಿಸಿ ಮೂಲಕ ಡಿಡಿ ಪರಿಶೀಲನೆ ಮಾಡುವ ಪೊಲೀಸರು ರಾತ್ರಿ ಪಾಳಿಯಲ್ಲಿ ನಾಕಾಬಂದಿ ಹಾಕಿಕೊಂಡು ಪರಿಶೀಲನೆ ಮಾಡಬೇಕು. ಯಾವ ರೀತಿಯಾಗಿ ಪರಿಶೀಲನೆ ಮಾಡಬೇಕು ಎಂಬುವುದನ್ನು ತಿಳಿಸಿದ್ದಾರೆ.
ಡಿಡಿ ಪರಿಶೀಲನೆ ಮಾಡುವಾಗ, ನಾಕಾ ಬಂದಿಯಲ್ಲಿರುವವರು ಅನುಸರಿಸುವ ಕ್ರಮಗಳು:
* ಸಿಬ್ಬಂದಿ ರಿಪ್ಲೇಕ್ಸ್ ಜಾಕೆಟ್ ಕಡ್ಡಾಯವಾಗಿ ಧರಿಸಬೇಕು
* ನಾಕಾ ಬಂದಿ ಸ್ಥಳದಲ್ಲಿರುವ ಬ್ಯಾರಿಕೆಡ್ಗಳ ಮೇಲೆ ರಿಪ್ಲೇಕ್ಸ್ ಲೈಟ್ಸ್ ಬಳಸಬೇಕು
* ಜಿಗ್ ಜಾಗ್ ಬ್ಯಾರಿಕೇಡ್ ಹಾಕಿಕೊಳ್ಳಬೇಕು
* ಪಬ್ಲಿಕ್ಸ್ ಜೊತೆಗೆ ಸೌಮ್ಯವಾಗಿ ನಡೆದುಕೊಳ್ಳಬೇಕು
* ಮಕ್ಕಳೊಂದಿಗೆ ಬರುವವರ ಜೊತೆ ಪಕ್ಕದಲ್ಲಿ ನಿಲ್ಲಿಸಿ ಬಗೆಹರಿಸಿಕೊಡಲು ಖಡಕ್ ಸೂಚನೆ
* ಅವಘಡಗಳಾದ್ರೆ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳದಲ್ಲಿರುವ ಸಿಬ್ಬಂದಿಗಳೇ ಜವಾಬ್ದಾರರು.ಇದನ್ನೂ ಓದಿ: ಹೃತಿಕ್ ರೋಷನ್ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?