Tag: Traffic Violation

  • ಕೆಲ ಪೊಲೀಸರು ರಿಯಲ್‌ ಎಸ್ಟೇಟ್‌ ಕೆಲಸ ಮಾಡ್ತಿದ್ದಾರೆ – ಸಿದ್ದರಾಮಯ್ಯ ಗರಂ

    ಕೆಲ ಪೊಲೀಸರು ರಿಯಲ್‌ ಎಸ್ಟೇಟ್‌ ಕೆಲಸ ಮಾಡ್ತಿದ್ದಾರೆ – ಸಿದ್ದರಾಮಯ್ಯ ಗರಂ

    – ಹುಬ್ಬಳ್ಳಿಯಲ್ಲಿ ನಡೆದ 2 ಕೊಲೆಗೆ ಪೊಲೀಸರ ವೈಫಲ್ಯವೇ ಕಾರಣ
    – ಪ್ರಧಾನಿಗಳಂತೆ ನಾನು ರೋಡ್‌ ಬ್ಲಾಕ್‌ ಮಾಡಿಸಲ್ಲ ಎಂದ ಸಿಎಂ

    ಬೆಂಗಳೂರು: ಕೆಲ ಪೊಲೀಸರು (Karnataka Police) ರಿಯಲ್‌ ಎಸ್ಟೇಟ್‌ ಕೆಲಸ ಮಾಡ್ತಿದ್ದಾರೆ. ಡ್ರಗ್ಸ್, ರೌಡಿಸಂ, ಮಟ್ಕಾ ದಂಧೆಗಳು ಸ್ಥಳೀಯ ಪೊಲೀಸರಿಗೆ ಗೊತ್ತಿಲ್ಲದೇ ನಡೆಯೋದಿಲ್ಲ. ಹೀಗಾಗಿ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.

    ನಗರದ ನೃಪತುಂಗ ರಸ್ತೆಯಲ್ಲಿರುವ ಡಿಜಿ-ಐಜಿಪಿ ಕಚೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಜೊತೆ ವಾರ್ಷಿಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ (G Parameshwara), ವಲಯ ಐಜಿಪಿ, ಎಸ್ಪಿ, ಬೆಂಗಳೂರು ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಕಗ್ಗಂಟು- ಟಿಕೆಟ್ ಸಿಗದಿದ್ದರೆ ಪಕ್ಷೇತರ ಸ್ಪರ್ಧೆ ಸುಳಿವು ನೀಡಿದ ಸಿಪಿವೈ

    ವಿವಿಧ ಕೈಪಿಡಿ, ಆಪ್‌, ಪ್ರಾತ್ಯಕ್ಷಿಕೆ ಬಿಡುಗಡೆ:
    ವಾರ್ಷಿಕ ಸಭೆ ಆರಂಭಿಸುವುದಕ್ಕೂ ಮುನ್ನ ಸಿಎಂ ವಿಧಿ ವಿಜ್ಞಾನ ಇಲಾಖೆಯಿಂದ ʻಸೀನ್ ಆಫ್ ಕ್ರೈಂʼ ಕೈಪಿಡಿ ಬಿಡುಗಡೆಗೊಳಿಸಿದರು. ಬಳಿಕ ಹೊಸ ಕ್ರಿಮಿನಲ್‌ ಕಾನೂನಿಗೆ (New Criminal Law) ಸಂಬಂಧಿಸಿದ ʻಸಂಚಯʼ ಮೊಬೈಲ್ ಆಪ್ ಅನಾವರಣಗೊಳಿಸಿದರು. ಜೊತೆಗೆ ಹೊಯ್ಸಳ ವಾಹನಗಳ ರಿಯಲ್ ಟೈಂ ಟ್ರ್ಯಾಕಿಂಗ್‌ ಪ್ರಾತ್ಯಕ್ಷಿಕೆ, ಆಡಿಯೋ ವಿಡಿಯೋ ಸಂಪರ್ಕ ಮಾಡುವ ಟೆಕ್ನಾಲಜಿಯುಳ್ಳ ʻಸೇಫ್ ಕನೆಕ್ಟ್ ತಂತ್ರಾಂಶʼ, ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ ತನಿಖಾ ಕೈಪಿಡಿ, ಆನ್‌ಲೈನ್‌ ವಂಚನೆ ಪ್ರಕರಣಗಳ ಕುರಿತು ತನಿಖೆ ನಡೆಸುವ ಕೈಪಿಡಿಗಳನ್ನು ಸಿಎಂ ಬಿಡುಗಡೆ ಮಾಡಿದರು. ಇದನ್ನೂ ಓದಿ: ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಬೇಜವಾಬ್ದಾರಿ ಕೆಲಸ ಮಾಡಿದ್ರೆ ಸಹಿಸೋದಿಲ್ಲ:
    ವಾರ್ಷಿಕ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಸಾರ್ವಜನಿಕ ಸಮಸ್ಯೆಗಳಿಗೆ ಹೆಚ್ಚಿನ ಒತ್ತು ನೀಡಲು ಹೇಳಿದ್ದೇನೆ. ಸಾರ್ವಜನಿಕರು ನಿರ್ಭಯವಾಗಿ ಬದುಕಬೇಕಾದ ವಾತಾವರಣ ನಿರ್ಮಾಣ ಮಾಡಬೇಕಿದೆ. ಒಳ್ಳೆಯ ಕೆಲಸ ಮಾಡಿದ್ರೆ ನಮ್ಮ ಸರ್ಕಾರ ಬೆನ್ನು ತಟ್ಟುತ್ತೆ. ಬೇಜವಾಬ್ದಾರಿ ಕೆಲಸ ಮಾಡಿದ್ರೆ ಸಹಿಸೋದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಎಸ್ಸಿ, ಎಸ್ಟಿಗೆ ಮೀಸಲಿಟ್ಟಿದ್ದ 14,000 ಕೋಟಿ ಹಣ ರಾಜ್ಯ ಸರ್ಕಾರದಿಂದ ದುರ್ಬಳಕೆ – ಬೊಮ್ಮಾಯಿ ಆರೋಪ

    ಹುಬ್ಬಳ್ಳಿಯಲ್ಲಿ 2 ಕೊಲೆಗೆ ಪೊಲೀಸರ ವೈಫಲ್ಯ ಕಾರಣ:
    ಮುಂದುವರಿದು ಮಾತನಾಡಿದ ಸಿಎಂ, ಕೆಲ ಪೊಲೀಸರೇ ರಿಯಲ್ ಎಸ್ಟೇಟ್ ಕೆಲಸ ಮಾಡ್ತಿದ್ದಾರೆ. ಹೀಗಾಗಿ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ತೇವೆ. ಎಸ್ಪಿ, ಡಿಸಿಪಿ, ಐಜಿಪಿ, ಪೊಲೀಸ್ ಆಯುಕ್ತರು ಪ್ರತಿದಿನ ಪೊಲೀಸ್ ಠಾಣೆಗೆ ಭೇಟಿ ಕೊಡಬೇಕು. ಡ್ರಗ್ಸ್, ರೌಡಿಸಂ, ಮಟ್ಕಾ ದಂದೆಗಳು ಸ್ಥಳೀಯ ಪೊಲೀಸರಿಗೆ ಗೊತ್ತಿಲ್ಲದೇ ನಡೆಯೋದಿಲ್ಲ. ಕೆಲವು ಕಡೆ ಪೊಲೀಸರು ಇಂತಹವರ ಜೊತೆಯಲ್ಲಿ ಶಾಮೀಲು ಆಗಿಬಿಟ್ಟಿರುತ್ತಾರೆ. ಗುಪ್ತಚರ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಜೊತೆ ಸರಿಯಾದ ಸಂಬಂಧ ಇಲ್ಲ. ಗುಪ್ತಚರ ಇಲಾಖೆ ಮೊದಲೇ ಎಚ್ಚರಿಕೆ ಕೊಡಬೇಕು. ಹುಬ್ಬಳ್ಳಿಯಲ್ಲಿ ಎರಡು ಕೊಲೆ ಆಗೋದಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಗರಂ ಆಗಿದ್ದಾರೆ.

    ಅಲ್ಲದೇ ಕೆಲ ಪೊಲೀಸರು ಪಕ್ಷಕ್ಕೆ ಸಂಬಂಧಿಸಿದ ಫ್ಲಾಗ್‌ ಹಾಕಿಕೊಳ್ತಾರೆ. ಪೊಲೀಸರು ಯಾವುದೇ ಕೋಮುವಾದದ ಕೆಲಸ ಮಾಡಬಾರದು, ಕಾನೂನು ಸುವ್ಯವಸ್ಥೆ ಚೆನ್ನಾಗಿರೆ ಹೂಡಿಕೆ ಜಾಸ್ತಿ ಆಗುತ್ತೆ. ಉದ್ಯೋಗ ಸೃಷ್ಟಿ ಆಗುತ್ತೆ ಎಂದು ಎಚ್ಚರಿಸಿದ್ದಾರೆ. ಇದರೊಂದಿಗೆ ತ್ತೀಚಿನ ದಿನಗಳಲ್ಲಿ ಸುಳ್ಳುಸುದ್ದಿ ಹಬ್ಬಿಸೋರ ಸಂಖ್ಯೆ ಜಾಸ್ತಿ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುಳ್ಳು ಸುದ್ದಿಗಳು ಹರಿದುಬರುತ್ತಿವೆ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

    ಪ್ರಧಾನಿಗಳ ರೀತಿ ರೋಡ್‌ ಬ್ಲಾಕ್‌ ಮಾಡಿಸಲ್ಲ:
    ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇದೆ. ನನಗೆ ಟ್ರಾಫಿಕ್ ಸಮಸ್ಯೆ ಕಾಣೋದಿಲ್ಲ. ನಾನು ಹೋಗೋವಾಗ ಪೊಲೀಸರೇ ಬಿಡಿಸಿಬಿಡ್ತಾರೆ. ನನಗೆ ಝೀರೋ ಟ್ರಾಫಿಕ್ ಬೇಡ ಅಂದಿದ್ದೇನೆ. ಪ್ರಧಾನ ಮಂತ್ರಿಗಳ ರೀತಿ ನಾನು ರೋಡ್ ಬ್ಲಾಕ್ ಮಾಡಿಸೋದಿಲ್ಲ. ಅವರು ಬಂದಾಗ ನೀವು ಯಾರಾದರೂ ಹತ್ತಿರ ಹೋಗೋಕೆ ಸಾಧ್ಯ ಇದ್ಯಾ? ಆದ್ರೆ ನಾನು ಅಷ್ಟೊಂದು ಸವಲತ್ತು ತೆಗೆದುಕೊಳ್ಳೋದಿಲ್ಲ ಎಂದು ಕುಟುಕಿದ್ದಾರೆ.

  • ಒಂದೇ ಬೈಕ್ ಮೇಲೆ 300 ಕೇಸ್ – ಬರೋಬ್ಬರಿ 3 ಲಕ್ಷ ದಂಡ

    ಒಂದೇ ಬೈಕ್ ಮೇಲೆ 300 ಕೇಸ್ – ಬರೋಬ್ಬರಿ 3 ಲಕ್ಷ ದಂಡ

    – ಸಿಲಿಕಾನ್ ಸಿಟಿಯಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲ‌ಂಘನೆ ಮಾಡಿರೋ ಬೈಕ್ ಇದು

    ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಸಿಲಿಕಾನ್‌ ಸಿಟಿಯ ಬೈಕ್‌ವೊಂದರ ಮೇಲೆ ಬರೋಬ್ಬರಿ 300 ಪ್ರಕರಣ ದಾಖಲಾಗಿದ್ದು, ಒಟ್ಟು 3 ಲಕ್ಷ ರೂ. ದಂಡ ಬಿದ್ದಿದೆ. ಬೆಂಗಳೂರಲ್ಲಿ ಅತಿ ಹೆಚ್ಚು ಸಂಚಾರಿ ನಿಯಮ ಉಲ್ಲಂಘಿಸಿದ ಬೈಕ್‌ ಇದು ಎಂಬ ಕುಖ್ಯಾತಿಯನ್ನೂ ಪಡೆದಿದೆ.

    ಬೈಕ್ ಬೆಲೆ 30,000 ರೂ., ಆದರೆ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿರೋದರಲ್ಲಿ ಬೆಂಗಳೂರಿಗೆ ಮೊದಲನೇಯವರು ಸುಧಾಮ ನಗರದ ವೆಂಕಟರಮನ್. ಇವರ, KA05KF7969 ನಂಬರಿನ ಆಕ್ಟಿವಾ ಹೊಂಡಾ ಬೈಕ್‌ನ ಮೇಲೆ ಬರೋಬ್ಬರಿ 300 ಕೇಸ್‌ಗಳು ದಾಖಲಾಗಿದೆ. ಇದನ್ನೂ ಓದಿ: ಹೊಸಕೋಟೆ ಸಮೀಪ ಸರಣಿ ಅಪಘಾತ – ಸ್ಥಳದಲ್ಲೇ ಯುವತಿ ದಾರುಣ ಸಾವು!

    ಸಂಚಾರಿ ನಿಯಮ ಉಲ್ಲಂಘನೆ ಮಾಡಿ 300 ಕೇಸ್ ಹಾಕಿಸಿಕೊಂಡಿರುವ ವೆಂಕಟರಮನ್‌ ನಗರದಲ್ಲಿ ನಂಬರ್ ಒನ್ ಸಂಚಾರಿ ನಿಯಮ ಉಲ್ಲಂಘನೆ ಮಾಡಿರೋ ಅಪಖ್ಯಾತಿಗೆ ಒಳಾಗಿದ್ದಾರೆ. ಒನ್ ವೇ ಸಂಚಾರ, ಸಿಗ್ನಲ್ ಜಂಪ್, ‌ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಲಾವಣೆ, ಫುಟ್‌ಪಾಥ್ ರೈಡಿಂಗ್.. ಪೊಲೀಸ್ ಮ್ಯಾನ್ಯೂವಲ್‌ನಲ್ಲಿ ಯಾವ್ಯಾವ ಕಾನೂನುಗಳು ಉಲ್ಲಂಘನೆ ಎಂದು ಎನಿಸಿಕೊಳ್ಳುತ್ತೋ ಅದೆಲ್ಲಾ ಈ ವೆಂಕಟರಾಮನ್ ಮಾಡಿಬಿಟ್ಟಿದ್ದಾರೆ.

    ಎಸ್.ಆರ್ ನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವೆಡೆ ಸಂಚಾರ ನಿಯಮ ಉಲ್ಲಂಘನೆ ಮಾಡಿರೋದು ಸಿಗ್ನಲ್‌ನಲ್ಲಿರೋ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ವೆಂಕಟರಮನ್‌ ಬೈಕ್ ಮೇಲೆ 300 ಕೇಸ್‌ಗಳಿಂದ ಒಟ್ಟು ದಂಡದ ಮೊತ್ತ 3,20,000 ರೂ. ಇದೆ. ಇದನ್ನೂ ಓದಿ: ಹೆಣ್ಣು ಭ್ರೂಣ ಹತ್ಯೆ ಪ್ರಕರಣ – ಸಿಐಡಿಯಿಂದ ಆರೋಗ್ಯ ಇಲಾಖೆಗೆ ವರದಿ ಕೊಡಲು ಸಿದ್ಧತೆ

    ಬೈಕ್ ಮೇಲಿರುವ ಕೇಸ್ ಪರಿಶೀಲನೆ ಮಾಡಿ, ವಿಲ್ಸನ್ ಗಾರ್ಡನ್‌ನ ಸುಧಾಮ ನಗರದಲ್ಲಿರುವ ವೆಂಕಟರಮನ್ ಮನೆಗೆ ಸಂಚಾರಿ ಪೊಲೀಸರು ನೋಟಿಸ್ ನೀಡಿದ್ದಾರೆ.

  • 643 ಬಾರಿ ನಿಯಮ ಉಲ್ಲಂಘಿಸಿ ದಾಖಲೆ ಫೈನ್ – ಟ್ರಾಫಿಕ್ ನಿಯಮ ಪಾಲಿಸದ ಸ್ಕೂಟಿ ಮೇಲೆ ಕ್ಯಾಮೆರಾ ಕಣ್ಣು

    643 ಬಾರಿ ನಿಯಮ ಉಲ್ಲಂಘಿಸಿ ದಾಖಲೆ ಫೈನ್ – ಟ್ರಾಫಿಕ್ ನಿಯಮ ಪಾಲಿಸದ ಸ್ಕೂಟಿ ಮೇಲೆ ಕ್ಯಾಮೆರಾ ಕಣ್ಣು

    ಬೆಂಗಳೂರು: ವ್ಯಕ್ತಿಯೊಬ್ಬರು ಟ್ರಾಫಿಕ್ ನಿಯಮ (Traffic Rule) ಪಾಲಿಸದೆ ಬರೋಬ್ಬರಿ 643 ಬಾರಿ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆ ದಾಖಲೆಯ ಫೈನ್ (Fine) ಬಿದ್ದಿದೆ. ಬರೋಬ್ಬರಿ 3.22 ಲಕ್ಷ ರೂ. ಫೈನ್ ಬಿದ್ದಿರೋ ಸ್ಕೂಟಿ (Scooty) ಮೇಲೆ ಇದೀಗ ಟ್ರಾಫಿಕ್ ಪೊಲೀಸರು ಕ್ಯಾಮೆರಾ ಕಣ್ಣಿಟ್ಟಿದ್ದಾರೆ.

    ಮಾಲಾ ಎಂಬುವವರಿಗೆ ಸೇರಿದ ಸ್ಕೂಟಿ ಗಂಗಾನಗರ, ಆರ್‌ಟಿ ನಗರ ಭಾಗದಲ್ಲಿ ಓಡಾಡಿದೆ. ಈ ಸ್ಕೂಟಿಯಲ್ಲಿ ಪ್ರಯಾಣಿಸಿದವರು ಹೆಲ್ಮೆಟ್ ಧರಿಸದೆ, ಸಿಗ್ನಲ್ ಜಂಪ್ ಸೇರಿದಂತೆ ಬರೋಬ್ಬರಿ 643 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದನ್ನೂ ಓದಿ: ಹೆಚ್ಚಾಗ್ತಿದೆ ಕೋವಿಡ್ ಉಪತಳಿ JN.1 ಭೀತಿ – ಕ್ರಿಸ್‌ಮಸ್, ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?

    ಈ ಸ್ಕೂಟಿ ಬೆಲೆ 20-30 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಬಿದ್ದಿರುವ ದಂಡ ಬರೋಬ್ಬರಿ 3.22 ಲಕ್ಷ ರೂ. ಇದೀಗ ಪೊಲೀಸರ ಕಣ್ತಪ್ಪಿಸಿ ಓಡಾಡಬಹುದು ಎನ್ನುವವರಿಗೆ ಕ್ಯಾಮೆರಾ ಶಾಕ್ ನೀಡಿದೆ. ಇದೀಗ ದಾಖಲೆಯ ನಿಯಮ ಉಲ್ಲಂಘಿಸಿದ ವೆಹಿಕಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ – ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್

  • ದ್ವಿಚಕ್ರ ವಾಹನ ಸವಾರನಿಗೆ ಸೀಟ್ ಬೆಲ್ಟ್ ಹಾಕಿಲ್ಲ ಅಂತ ದಂಡ!

    ದ್ವಿಚಕ್ರ ವಾಹನ ಸವಾರನಿಗೆ ಸೀಟ್ ಬೆಲ್ಟ್ ಹಾಕಿಲ್ಲ ಅಂತ ದಂಡ!

    ಪಾಟ್ನಾ: ದ್ವಿಚಕ್ರ ವಾಹನ (2-Wheeler) ಸವಾರನೊಬ್ಬ ಸೀಟ್ ಬೆಲ್ಟ್ ಧರಿಸದ ಕಾರಣಕ್ಕೆ ಟ್ರಾಫಿಕ್ ನಿಯಮವನ್ನು (Traffic Violation) ಪಾಲಿಸದ್ದಕ್ಕೆ ಪೊಲೀಸರು ಚಲನ್‍ನನ್ನು ಕಳುಹಿಸಿದ ವಿಚಿತ್ರ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

    ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದಿದ್ದರೇ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ ಚಲನ್ (Challan) ಬರುವುದು ಸಾಮಾನ್ಯ. ಆದರೆ ಬಿಹಾರದ ಸಮತಿಪುರದಲ್ಲಿ ಬೈಕ್ ಸವಾರ ಕೃಷ್ಣಕುಮಾರ್ ಝಾ ಎಂಬಾತನಿಗೆ ಚಲನ್ ಬಂದಿದೆ. ಕೃಷ್ಣಕುಮಾರ್ ಝಾ ಎಂಬಾತ ಸ್ಕೂಟಿಯಲ್ಲಿ ಬನಾರಸ್‌ಗೆ ಹೋಗುತ್ತಿದ್ದರು. ಈ ವೇಳೆ ಅವರ ಮೊಬೈಲ್‍ಗೆ 1,000 ದಂಡ ವಿಧಿಸಲಾಗಿದೆ. ಅಷ್ಟೇ ಅಲ್ಲದೇ ಈ ಹಣವನ್ನು ಈಗಾಗಲೇ ಪಾವತಿಸಲಾಗಿದೆ ಎನ್ನುವುದರ ಕುರಿತು ಚಲನ್ ಬಂದಿದೆ. ಆ ಚಲನ್‍ನಲ್ಲಿ 2020ರ ಅಕ್ಟೋಬರ್‌ನಲ್ಲಿ ಸೀಟ್ ಬೆಲ್ಟ್ ಧರಿಸದಿದ್ದಕ್ಕಾಗಿ ಎಂದು ಉಲ್ಲೇಖಿಸಲಾಗಿದೆ.

    ಇದನ್ನು ನೋಡಿದ ಕೃಷ್ಣಕುಮಾರ್ ಒಮ್ಮೆಲೇ ಶಾಕ್ ಆಗಿದ್ದಾರೆ. ಬೈಕ್‍ನಲ್ಲಿ ಹೋಗಿರುವುದಕ್ಕೆ ಸೀಟ್ ಬೇಲ್ಟ್ ಯಾಕೆ ಧರಿಸಬೇಕು ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಪೊಲೀಸರು ತಾಂತ್ರಿಕ ದೋಷದಿಂದಾಗಿ ಕೆಲವೊಮ್ಮೆ ಈ ರೀತಿಯಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾನು ಹಿಂದೂ, ನಾನು ಆಂಜನೇಯನ ಭಕ್ತ, ರಾಮನ ಭಕ್ತ, ಶಿವಭಕ್ತ – ಡಿಕೆಶಿ

    ಕೃಷ್ಣಕುಮಾರ್ ಝಾ ಸ್ವೀಕರಿಸಿದ ಚಲನ್ ಅನ್ನು ಮ್ಯಾನುವಲ್‌ನಿಂದ ನೀಡಲಾಗಿದೆ. ಈಗ, ನಾವು ಇವೆಲ್ಲವನ್ನೂ ಇ-ಚಲನ್‍ಗಳಾಗಿ ಮುಚ್ಚಿಡುವ ಪ್ರಕ್ರಿಯೆಯಲ್ಲಿದ್ದೇವೆ. ದೋಷ ಎಲ್ಲಿ ಸಂಭವಿಸಿದೆ ಎಂದು ನಾನು ಪರಿಶೀಲಿಸುತ್ತೇನೆ ಎಂದು ಬಿಹಾರ ಟ್ರಾಫಿಕ್ ಪೊಲೀಸ್ ಅಧಿಕಾರಿ ಬಲ್ಬೀರ್ ದಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಸಾಕಿದ್ದ ಮುದ್ದಿನ ಗಿಳಿ ಸಾವು – ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ

  • ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

    ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

    ಬೆಂಗಳೂರು: ಸಂಚಾರಿ ನಿಯಮಗಳನ್ನು ಪಾಲಿಸದೇ ಉಲ್ಲಂಘನೆ ಮಾಡಿ ದಂಡವನ್ನು (Traffic Fine) ಬಾಕಿ ಉಳಿಸಿಕೊಂಡಿರುವ ಸವಾರರಿಗೆ ಸಿಹಿ ಸುದ್ದಿ. ಬಾಕಿ ಉಳಿಸಿಕೊಂಡ ದಂಡದಲ್ಲಿ ಶೇ.50 ರಿಯಾಯಿತಿ (50% Discount) ನೀಡಿ ಸರ್ಕಾರ ಆದೇಶ ಪ್ರಕಿಟಿದೆ.

    ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಸರ್ಕಾರಕ್ಕೆ ದಂಡ ಕಡಿತಗೊಳಿಸುವ ಕುರಿತು ಮನವಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್ (High Court) ನ್ಯಾಯಮೂರ್ತಿ, ಕಾನೂನು‌ ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ನ್ಯಾ ಬಿ.ವೀರಪ್ಪರವರ ನೇತೃತ್ವದಲ್ಲಿ ಜ.27 ರಂದು ಸಭೆ ನಡೆದು ನಿರ್ಣಯ ಕೈಗೊಳ್ಳಲಾಗಿತ್ತು.

     

     

    ಈಗ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರದ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ವಿನಾಯಿತಿ ನೀಡಿ ಆದೇಶ ಪ್ರಕಟಿಸಲಾಗಿದೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಹಗರಣ – 1 ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

    ಇತ್ತೀಚೆಗೆ ನೆರೆಯ ತೆಲಂಗಾಣ ರಾಜ್ಯದಲ್ಲಿ ಸಾಲ ಮೇಳದ ಮಾದರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ರಿಯಾಯಿತಿ ಮೇಳ ಆಯೋಜಿಸಲಾಗಿತ್ತು. ಈ ರಿಯಾಯಿತಿ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಸಾರಿಗೆ ಇಲಾಖೆ ಆಯುಕ್ತರು ಈ ಮಾದರಿ ಅನುಸರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

    ಬೆಂಗಳೂರು ನಗರದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆಯ 2.35 ಕೋಟಿ ಬಾಕಿ ಪ್ರಕರಣಗಳಿವೆ. ಇದರಿಂದ 1,144 ಕೋಟಿ ರೂ. ದಂಡ ಮೊತ್ತ ಬಾಕಿಯಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗ್ಳೂರು ವಾಹನ ಸವಾರರೇ ಎಚ್ಚರ – ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್

    ಬೆಂಗ್ಳೂರು ವಾಹನ ಸವಾರರೇ ಎಚ್ಚರ – ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್

    – ರೂಲ್ಸ್ ಬ್ರೇಕ್ ಮಾಡಿದ್ರೆ ಮನೆಗೆ ಬರುತ್ತೆ ನೋಟಿಸ್
    – 11 ತಿಂಗಳಲ್ಲಿ 164 ಕೋಟಿ ದಂಡ ವಸೂಲಿ

    ಬೆಂಗಳೂರು: ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ಜಂಕ್ಷನ್‌ಗಳಲ್ಲಿ ಸಂಚಾರ ನಿರ್ವಹಣೆ ಕೂಡ ಪೊಲೀಸರಿಗೆ ಸವಾಲಾಗಿದೆ. ನಿಯಮ ಉಲ್ಲಂಘನೆ (Traffic Violation) ಮಾಡ್ತಿದ್ದರೂ ಹಲವೆಡೆ ಅವರ ಮೇಲೆ ನಿಗಾವಹಿಸುವುದು ಪೊಲೀಸರಿಗೆ ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಸಮಸ್ಯೆಗೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಐಟಿಎಂ (ITM) ಸಿಸ್ಟಮ್ ಬಳಕೆಗೆ ಮುಂದಾಗಿದೆ.

    ಹೌದು. ಇನ್ಮುಂದೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸ್ (Traffic Police) ಇಲಾಖೆ ಟೆಕ್ನಾಲಜಿ ಸ್ಟ್ರೈಕ್‌ ಮೂಲಕ ರೂಲ್ಸ್ ಬ್ರೇಕ್ ಮಾಡುವವರ ಕಡಿವಾಣಕ್ಕೆ ಮುಂದಾಗಿದೆ. ನಗರದ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ರೆ ಆ ವಾಹನಗಳಿಗೆ ಸ್ವಯಂ ಚಾಲಿತ ದಂಡ ವಿಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ (Police Department) ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಆರಂಭಿಸಿದೆ. ಇದನ್ನೂ ಓದಿ: ತೋಟದ ಮನೆಯಲ್ಲಿದ್ದ ಸಾಕು ನಾಯಿ ಕೊಂದ ಚಿರತೆ- ಮನೆಯಿಂದ ಹೊರಬರಲು ಅನ್ನದಾತರು ಹಿಂದೇಟು

    ಈ ಮೂಲಕ ನಿಯಮ ಉಲ್ಲಂಘನೆ ಮಾಡಿದ್ರೆ ಅಂತಹ ವಾಹನ ಮಾಲೀಕರ ಮೊಬೈಲ್‌ಗೆ (Mobile) ಎಸ್‌ಎಂಎಸ್ ಮೂಲಕ ಇ-ಚಲನ್ ರವಾನೆಯಾಗಲಿದೆ. ಜೊತೆಗೆ ಆ ವಾಹನದ ಸವಾರ ಮಾಡಿದ ಉಲ್ಲಂಘನೆ ವೀಡಿಯೋ ಕೂಡ ನೋಟಿಸ್ ಜೊತೆ ಮಾಲೀಕನ ಕೈ ಸೇರಲಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡ 259 ಆಟೋಮ್ಯಾಟಿಕ್ ನಂಬರ್ ಪ್ಲೇಟ್ ಅನ್ನು ಸೆರೆಹಿಡಿಯುವ ಕ್ಯಾಮೆರಾಗಳು ಮತ್ತು 80 ರೆಡ್‌ಲೈಟ್ ವಯಲೇಷನ್ ಡಿಟೆಕ್ಷನ್ ಕ್ಯಾಮೆರಾಗಳನ್ನು ನಗರದ ಪ್ರಮುಖ 50 ಜಂಕ್ಷನ್‌ಗಳಲ್ಲಿ ಈಗಾಗಲೇ ಅಳವಡಿಸಲಾಗಿದೆ. ಈ ಮೂಲಕ ಸಂಚಾರ ಉಲ್ಲಂಘನೆ ಮಾಡುವವರ ಪತ್ತೆ ಸುಗಮವಾಗಲಿದೆ. ಇದನ್ನೂ ಓದಿ: ವರುಣಾ ಪಿಚ್ ಸ್ಟಡಿಗೆ ಖುದ್ದು ಇಳಿದ ಸಿದ್ದರಾಮಯ್ಯ- ವರುಣಾದಲ್ಲಿ ಮಗನ ಜೊತೆ ಪ್ರವಾಸ

    ಹೇಗೆ ಕೆಲಸ ಮಾಡುತ್ತೆ ಎಟಿಎಂ ಸಿಸ್ಟಮ್?
    ಹೈಯೆಂಡ್ ಕ್ಯಾಮೆರಾ ಮೂಲಕ ರೂಲ್ಸ್ ಬ್ರೇಕ್ ಮಾಡೋರ ಮೇಲೆ ಕಣ್ಣಿಡುವ ಜೊತೆಗೆ, ಪ್ರತಿ ಮೂಮೆಂಟ್ ರೆಕಾರ್ಡ್ ಮಾಡುತ್ತೆ. 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ನಿಯಮ ಉಲ್ಲಂಘನೆಯಾಗುವುದನ್ನು ರೆಕಾರ್ಡ್ ಮಾಡುತ್ತದೆ. ತ್ರಿಬಲ್ ರೈಡಿಂಗ್ ಇದ್ರೆ, ಸೀಟ್ ಬೆಲ್ಟ್ ಹಾಕದಿದ್ರೆ, ಜೀಬ್ರಾ ಕ್ರಾಸ್ ದಾಟಿದ್ರೆ ಫೋಟೋ ಕ್ಲಿಕ್ ಮಾಡಿ ದಂಡದ ಬಿಸಿ ಮುಟ್ಟಿಸಲು ಸಹಕಾರಿಯಾಗುತ್ತೆ. ರಾತ್ರಿ ಹೊತ್ತಿನಲ್ಲೂ ಕಾರ್ಯನಿರ್ವಹಿಸಲಿರೋ ಕ್ಯಾಮೆರಾಗಳು, ರೂಲ್ಸ್ ಬ್ರೇಕ್ ಮಾಡಿದ 5 ಸೆಕೆಂಡ್‌ಗಳಲ್ಲೇ ವಿಡಿಯೋ ಜೊತೆ ದಂಡದ ನೋಟೀಸ್ ಬರುತ್ತೆ. ಮೊಬೈಲ್‌ನಲ್ಲೆ ಕ್ಯೂಆರ್ ಕೋಡ್ ಮೂಲಕ ಫೈನ್ ಕಟ್ಬೇಕು. ಫೈನ್ ಕಟ್ಟಿಲ್ಲವಾದರೆ, 24 ಗಂಟೆಗಳಲ್ಲಿ ಮನೆ ಬಾಗಿಲಿಗೆ ನೋಟಿಸ್ ಬರುತ್ತೆ. ನೋಟಿಸ್ ಬಂದ ನಂತರ ಠಾಣೆಯಲ್ಲಿ ಫೈನ್ ಕಟ್ಟುವಂತಿಲ್ಲ. ಕೋರ್ಟ್‌ಗೆ (Court) ಹೋಗಿ ಕಟ್ಟಬೇಕಾಗುತ್ತದೆ.

    ಲಕ್ಷ ಲಕ್ಷ ಕೇಸ್ – ನೂರಾರು ಕೋಟಿ ದಂಡ ವಸೂಲಿ:
    ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್‌ಗಳು ದಾಖಲಾಗುತ್ತಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. 11 ತಿಂಗಳಲ್ಲಿ ಬರೋಬ್ಬರಿ 164 ಕೋಟಿ ರೂ. ದಂಡದ ಮೊತ್ತ ವಸೂಲಿ ಮಾಡಲಾಗಿದೆ. ವರ್ಷಾಂತ್ಯಕ್ಕೆ ಒಂದು ಕೋಟಿ ಕೇಸ್ ಆಗುತ್ತದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ದೇಶದ ಯಾವ ನಗರದಲ್ಲೂ 1 ಕೋಟಿ ಕೇಸ್ ಹಾಕಿದ ಉದಾಹರಣೆ ಇಲ್ವಂತೆ. ಬೆಂಗಳೂರು ನಗರ ಒಂದರಲ್ಲೇ ಇಷ್ಟು ಕೇಸ್ ದಾಖಲಾಗುತ್ತಿದೆ. ಸಂಚಾರ ದಟ್ಟಣೆಯಲ್ಲಿ ಹೆಸರುವಾಸಿಯಾಗಿದ್ದ ಸಿಲಿಕಾನ್ ಸಿಟಿ ಈಗ ಸಂಚಾರ ನಿಯಮ ಉಲ್ಲಂಘನೆ ಹಾಗೂ ದಂಡ ಕಟ್ಟುವಲ್ಲೂ ರೆಕಾರ್ಡ್ ಮಾಡುತ್ತಿದೆ.

    ಪೊಲೀಸರ ಪ್ಲ್ಯಾನ್‌ ಏನು?
    ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಪ್ರತಿವರ್ಷ ವಿಮೆ ಮಾಡಿಸಲು ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್‌ಓಸಿ ಕೊಡಬೇಕಾಗುತ್ತದೆ. ಎನ್‌ಓಸಿ ಕೊಡದಿದ್ರೆ ಇನ್ಶೂರೆನ್ಸ್ ನವೀಕರಣ ಆಗದೇ ಇರುವಂತೆ ಮಾಡಲು ಪ್ಲ್ಯಾನ್‌ ಮಾಡಲಾಗಿದೆ. ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಹಾಗೆಯೇ ಯೆಲ್ಲೋ ಬೋರ್ಡ್ ಗಾಡಿಗಳ ಎಫ್‌ಸಿ ಹಾಗೂ ವೈಟ್ ಬೋರ್ಡ್ ಗಾಡಿಗಳ ವಿಮೆ ಮಾಡಿಸಲು ಹೋದಾಗ ಅಲ್ಲಿಯೇ ಫೈನ್ ಕಲೆಕ್ಟ್ ಮಾಡಲು ಚಿಂತನೆ ನಡೆಸಲಾಗಿದೆ. ಪೊಲೀಸ್ ಇಲಾಖೆ ಕೆಲವೆ ದಿನಗಳಲ್ಲಿ ಈ ಪ್ಲ್ಯಾನ್‌ ರೂಪಿಸಿ, ಮೆಚ್ಚುಗೆಗೆ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹೆಲ್ಮೆಟ್‌ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸರು – ಹಿಗ್ಗಾಮುಗ್ಗ ಕ್ಲಾಸ್‌ ತೆಗೆದುಕೊಂಡ ಮಹಿಳೆ

    ಹೆಲ್ಮೆಟ್‌ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸರು – ಹಿಗ್ಗಾಮುಗ್ಗ ಕ್ಲಾಸ್‌ ತೆಗೆದುಕೊಂಡ ಮಹಿಳೆ

    ಬೆಂಗಳೂರು: ಸಾರ್ವಜನಿಕರು ಸಂಚಾರ ನಿಯಮ (Traffic Rules) ಉಲ್ಲಂಘಿಸಿದರೆ ಬುದ್ದಿಮಾತು ಹೇಳಿ ಜಾಗೃತಿ ಮೂಡಿಸಬೇಕಾದ ಪೊಲೀಸ್‌ ಇಲಾಖೆಯವರೇ ತಪ್ಪು ಮಾಡಿ ಟೀಕೆಗೆ ಗುರಿಯಾಗಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೆಲ್ಮೆಟ್‌ ಕೂಡ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸ್‌ ಪೇದೆಗಳಿಗೆ ಮಹಿಳೆಯೊಬ್ಬರು ಕ್ಲಾಸ್‌ ತೆಗೆದುಕೊಂಡಿದ್ದಾರೆ.

    ಮೂವರು ಮಹಿಳಾ ಪೊಲೀಸ್‌ ಪೇದೆಗಳು ಹೆಲ್ಮೆಟ್‌ ಇಲ್ಲದೇ ಸ್ಕೂಟಿಯಲ್ಲಿ ತ್ರಿಬಲ್‌ ರೈಡಿಂಗ್‌ ಬಂದಿದ್ದಾರೆ. ಮತ್ತೊಂದು ಸ್ಕೂಟಿಯಲ್ಲಿ ಇನ್ನಿಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ. ಇದನ್ನು ಗಮನಿಸಿದ ಮಹಿಳೆಯೊಬ್ಬರು, “ರೂಲ್ಸ್ ಮಾಡೊರೂ ನೀವೇ.. ಬ್ರೇಕ್ ಮಾಡೊರೂ ನೀವೇ..ʼ ಅಂತಾ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ದೃಶ್ಯವನ್ನು ವೀಡಿಯೋ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

    ಮಹಿಳೆ ರೇಗುತ್ತಿದ್ದಂತೆಯೇ ಹಿಂಬದಿ ಸವಾರರು ಸ್ಕೂಟಿಯಿಂದ ಇಳಿದಿದ್ದಾರೆ. “ತುರ್ತು ಕೆಲಸ ಇತ್ತು. ಅದಕ್ಕಾಗಿ ಹೆಲ್ಮೆಟ್‌ ಇಲ್ಲದೇ ಬಂದಿದ್ದೇವೆ” ಎಂದು ಉಡಾಫೆ ಉತ್ತರ ಕೂಡ ಮಹಿಳಾ ಪೊಲೀಸರು ನೀಡಿದ್ದಾರೆ.

    “ನೀವು ಏನ್ ಏನ್ ರೂಲ್ಸ್ ಬ್ರೇಕ್ ಮಾಡಿದೀರಾ ನೋಡಿಕೊಳ್ಳಿ. ದಯವಿಟ್ಟು ಗಾಡಿಯಿಂದ ಇಳಿಯಿರಿ, ಹೆಲ್ಮೆಟ್ ಹಾಕಿಕೊಳ್ಳಿ. ಇವರೇ ರೂಲ್ಸ್ ಮಾಡ್ತಾರೇ ಅಂತ ಹೇಳಲ್ವಾ ಎಂದು ಮಹಿಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಮಹಿಳೆ ಈ ವೀಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವೀಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ: ನಾವು ಯಾವುದೇ ರೌಡಿಗಳನ್ನು ಸೇರಿಸಿಕೊಂಡಿಲ್ಲ, ಪ್ರೋತ್ಸಾಹ ನೀಡಿಲ್ಲ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಮೋದಿ ತವರೂರಿನಲ್ಲಿ ಮುಂದಿನ 7 ದಿನ ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ಹಾಕಲ್ಲ

    ಮೋದಿ ತವರೂರಿನಲ್ಲಿ ಮುಂದಿನ 7 ದಿನ ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ಹಾಕಲ್ಲ

    ಗಾಂಧಿನಗರ: ದೀಪಾವಳಿ (Deepavali) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ತವರೂರು ಗುಜರಾತ್‍ನಲ್ಲಿ (Gujarat) ಅ.21 ರಿಂದ 27ರ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದರೂ (Traffic Violation) ಸಾರ್ವಜನಿಕರಿಗೆ ದಂಡ ಪ್ರಯೋಗಿಸದಂತೆ ಗುಜರಾತ್ ಸಿಎಂ ಭೊಪೇಂದ್ರ ಪಟೇಲ್ (Bhupendra Patel) ಸೂಚಿಸಿದ್ದಾರೆ.

    ಅ.21 ರಿಂದ 27 ರವರೆಗೆ 7 ದಿನಗಳ ಕಾಲ ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘಿಸಿದರೂ ಪೊಲೀಸರು (Police) ದಂಡ (Fine) ಹಾಕಬೇಡಿ ಎಂದು ಸರ್ಕಾರ ಸೂಚಿಸಿದೆ. ಈ ಮೂಲಕ ಜನಪರ ಕಾಳಜಿ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹಿಂದೂ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಇಸ್ಲಾಂಗೆ ಮತಾಂತರ – ಆರೋಪಿ ಪರವಾಗಿಯೇ ತೀರ್ಪು ಕೊಟ್ಟ ಕೋರ್ಟ್

    ಈ ಬಗ್ಗೆ ಮಾತನಾಡಿರುವ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ (Harsh Sanghavi), ಪೊಲೀಸರು 7 ದಿನ ದಂಡ ವಿಧಿಸಲ್ಲ ಎಂದು ಸಾರ್ವಜನಿಕರು ಸಂಚಾರ ನಿಯಮವನ್ನು ಉಲ್ಲಂಘಿಸಬೇಡಿ. ಪೊಲೀಸರು ದಂಡ ವಿಧಿಸಲ್ಲ ಎಂದರೇ ಸಾರ್ವಜನಿಕರು ಟ್ರಾಫಿಕ್ ನಿಯಮಗಳನ್ನು ಅನುಸರಿಸಬಾರದೆಂದಲ್ಲ. ನೀವು ತಪ್ಪು ಮಾಡಿದರೂ 7 ದಿನ ದಂಡ ಪಾವತಿಸದೆ ತೆರಳಲು ಪೊಲೀಸರು ಅವಕಾಶ ಕೊಡುತ್ತಾರೆ ಅಷ್ಟೇ ಎಂದಿದ್ದಾರೆ. ಇದನ್ನೂ ಓದಿ: ಆಮೆ ಕರಿ ಸರಿಯಾಗಿ ಮಾಡಿಲ್ಲವೆಂದು ಪತ್ನಿಯನ್ನೇ ಕೊಂದು ಹಿತ್ತಲಲ್ಲಿ ಹೂತು ಹಾಕಿದ

    ಇದೀಗ ಗುಜರಾತ್ ಸರ್ಕಾರದ ಈ ನಿರ್ಧಾರಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದ್ದು, ಇದೆಲ್ಲ ಈ ವರ್ಷಾಂತ್ಯಕ್ಕೆ ನಡೆಯಲಿರುವ ಚುನಾವಣೆಯ ಗಿಮಿಕ್ ಎಂಬ ಮಾತು ಕೇಳಿ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ

    ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ

    ಬೆಂಗಳೂರು: ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸ ಬಾರದು. ಕೇವಲ ಟ್ರಾಫಿಕ್ ರೂಲ್ಸ್‌ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ಹೊರಡಿಸಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ನಗರದಲ್ಲಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ವಾಹನಗಳ ಪರಿಶೀಲನೆ ನಡೆಸುವಂತಿಲ್ಲ. ಡ್ರಿಂಕ್ ಆಂಡ್ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಿ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?

    ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ದಂಡ ಕಲೆಕ್ಷನ್ ಎಫೆಕ್ಟ್‌ನಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಎಲ್ಲೆಂದರಲ್ಲಿ ರೂಲ್ಸ್ ಉಲ್ಲಂಘನೆ ಮಾಡದೇ ಇದ್ರೂ ಟ್ರಾಫಿಕ್ ಪೊಲೀಸರು ವಾಹನ ಅಡ್ಡ ಹಾಕ್ತಾರೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದಿತ್ತು. ನಿಯಮಗಳು ತಮಗೆ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿರುವ ಬಹುತೇಕ ಸಂಚಾರ ಪೊಲೀಸರು, ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಿಕ್ಕ ಸಿಕ್ಕ ವಾಹನಗಳನ್ನು ಅಡ್ಡಗಟ್ಟುತ್ತಿರುವುದು ಜನರ ಸಿಟ್ಟಿಗೆ ಕಾರಣವಾಗಿತ್ತು. ಸಾರ್ವಜನಿಕರು ಟ್ವೀಟ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ದೂರು ದಾಖಲಿಸಿದ್ದರು. ಹಾಗಾಗಿ ಟ್ವೀಟ್ ಮೂಲಕ ಎಲ್ಲೆಂದರಲ್ಲಿ ದಾಖಲೆಯ ಪರಿಶೀಲನೆ ನೆಪದಲ್ಲಿ ಗಾಡಿಯನ್ನು ನಿಲ್ಲಿಸುವಂತಿಲ್ಲ. ಈ ಬಗ್ಗೆ ಬೆಂಗಳೂರು ನಗರ ಕಮೀಷನರ್‌ಗೆ ಹಾಗೂ ಟ್ರಾಫಿಕ್ ಪೊಲೀಸರಿಗೆ ತಕ್ಷಣ ಜಾರಿಗೊಳಿಸುವಂತೆ ಸೂಚನೆ ಕೊಡುತ್ತೇನೆ ಎಂದು ಬೆಂಗಳೂರಿಗರಿಗೆ ಪ್ರವೀಣ್ ಸೂದ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

    ಮೋಟಾರು ವಾಹನಗಳ ಕಾಯ್ದೆ ಏನು ಹೇಳುತ್ತೆ?
    ಮೋಟಾರು ವಾಹನಗಳ ಕಾಯ್ದೆಯಡಿ ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ಕೈ ಹಿಡಿದು ವಾಹನ ಅಡ್ಡ ಹಾಕುವಂತಿಲ್ಲ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡಿದರೆ ಮಾತ್ರ ವಾಹನ ಸವಾರರನ್ನು ಹಿಡಿಯಬೇಕು. ಹಿಡಿದು ಪರಿಶೀಲನೆ ನಡೆಸಿ ದಂಡ ವಿಧಿಸಬಹುದು.

    Live Tv