Tag: traffic

  • ಆಗಸ್ಟ್ 21 ರಿಂದ 90 ದಿನ ಗೂಡ್‍ಶೆಡ್ ರಸ್ತೆ ಬಂದ್

    ಆಗಸ್ಟ್ 21 ರಿಂದ 90 ದಿನ ಗೂಡ್‍ಶೆಡ್ ರಸ್ತೆ ಬಂದ್

    – ಪರ್ಯಾಯ ಮಾರ್ಗ ಹೀಗಿದೆ

    ಬೆಂಗಳೂರು: ವೈಟ್ ಟ್ಯಾಪಿಂಗ್ ಕಾಮಗಾರಿ ಹಿನ್ನೆಲೆ ಮುಂದಿನ 90 ದಿನ ಬೆಂಗಳೂರಿನ ಪ್ರಮುಖ ರಸ್ತೆ ಗೂಡ್ ಶೆಡ್ ರೋಡ್ ಬಂದ್ ಆಗುತ್ತಿದೆ. ಗೂಡ್ ಶೆಡ್ ರೋಡ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

    ಬಿಜಿಎಸ್ ಮೇಲ್ಸೇತುವೆಯ ಅಂಬೇಡ್ಕರ್ ಡೌನ್ ರ‍್ಯಾಂಪ್ ನಿಂದ ಡಾ.ಟಿಸಿಎಂ ರಾಯನ್ ಸರ್ಕಲ್ ವರೆಗೂ 1.5 ಕಿಮೀ ವರೆಗೂ ವೈಟ್ ಟ್ಯಾಪಿಂಗ್ ಕೆಲಸ ನಡೆಯಲಿದ್ದು, 90 ದಿನಗಳ ಕಾಲ ರಸ್ತೆ ಬಂದ್ ಆಗಲಿದೆ. ಮೈಸೂರು ರಸ್ತೆಯಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಲಕ್ಷಾಂತರ ವಾಹನಗಳು ಸಂಚಾರ ಮಾಡುತ್ತವೆ. ಈಗ ರಸ್ತೆ ಬಂದ್ ಆಗುತ್ತಿರೋದರಿಂದ ಪರ್ಯಾಯ ಮಾರ್ಗ ಅನುಸರಿಸಬೇಕಾಗುತ್ತದೆ.

    ಒಟ್ಟು ಎರಡು ಹಂತದಲ್ಲಿ ವೈಟ್ ಟ್ಯಾಪಿಂಗ್ ನಡೆಯಲಿದೆ. ಮೊದಲ ಹಂತದಲ್ಲಿ ಅಂಬೇಡ್ಕರ್ ಡೌನ್ ರ‍್ಯಾಂಪ್ ನಿಂದ ಬೇಲಿ ಮಠದ ರಸ್ತೆವರೆಗೆ ಮತ್ತು ಎರಡನೇ ಹಂತದ ಕಾಮಗಾರಿ ಕಾಟನ್‍ಪೇಟೆಯ ಅಡ್ಡ ರಸ್ತೆವರೆಗೆ ನಡೆಯಲಿದೆ. ಇದನ್ನೂ ಓದಿ: 1,250 ಕೋಟಿ ರೂ. ಜೊತೆ ಘನಿ ಪರಾರಿ – ಈಗ ಯುಎಇಯಲ್ಲಿ ಆಶ್ರಯ

    ಪರ್ಯಾಯ ಮಾರ್ಗ ಹೇಗೆ?
    ಮೈಸೂರು ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಸಾಗುವ ವಾಹನಗಳು ಮೈಸೂರು ರಸ್ತೆಯ ಬಾಡಿ ಬಿಲ್ಡರ್ ಜಂಕ್ಷನ್ ನಿಂದ ಸರ್ವಿಸ್ ರಸ್ತೆಯ ಮೂಲಕ ಸಿರ್ಸಿ ಜಂಕ್ಷನ್ ಬಂದು ಬಳಿಕ ಎಡ ತಿರುವು ಪಡೆದು ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆಯ ಬಾಳೆಕಾಯಿ ಮಂಡಿ ಜಂಕ್ಷನ್ ಗೆ ಬಂದು ಬಿನ್ನಿ ಮಿಲ್ ಜಂಕ್ಷನ್ ನಿಂದ ಬಲ ತಿರುವು ಪಡೆದು ಟಿಸಿಎಂ ರಾಯನ್ ಸರ್ಕಲ್ ಗೆ ಬಂದು ಶಾಂತಲ ಸಿಲ್ಕ್ ರೋಡ್ ಮೂಲಕ ಮೆಜೆಸ್ಟಿಕ್ ತಲುಪಬಹುದು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಪಿಂಗ್ – ಕೊರೊನಾ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ ಜನ

  • ನಂದಿಗಿರಿಧಾಮಕ್ಕೆ ಪೊಲೀಸ್ ಸರ್ಪಗಾವಲು – ಪ್ರವಾಸಿಗರಿಗೆ ನಿರ್ಬಂಧ

    ನಂದಿಗಿರಿಧಾಮಕ್ಕೆ ಪೊಲೀಸ್ ಸರ್ಪಗಾವಲು – ಪ್ರವಾಸಿಗರಿಗೆ ನಿರ್ಬಂಧ

    ಚಿಕ್ಕಬಳ್ಳಾಪುರ: ಕೊರೊನಾ ಆತಂಕದಿಂದ ವಿಶ್ವವಿಖ್ಯಾತ ನಂದಿಗಿರಿಧಾಮವನ್ನು ವೀಕೆಂಡ್ ಲಾಕ್‍ಡೌನ್ ಮಾಡಲಾಗಿದ್ದು, ಪ್ರವಾಸಿಗರನ್ನು ನಿರ್ಬಂಧಿಸಲು ನಂದಿಬೆಟ್ಟಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

    ವೀಕೆಂಡ್‍ನಲ್ಲಿ ನಂದಿಬೆಟ್ಟ ಬಂದ್ ಇದ್ದರೂ ಕಳೆದ ವಾರ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸಿ, ನಂದಿಬೆಟ್ಟದ ತಪ್ಪಲಿನ ಚೆಕ್ ಪೋಸ್ಟ್ ಬಳಿ ಜಮಾಯಿಸಿದ್ದರು. ಇದರಿಂದ ಟ್ರಾಫಿಕ್ ಜಾಮ್, ಸಾವಿರಾರು ಜನ ಸೇರಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು. ಇನ್ನೂ ರಾಜಾರೋಷವಾಗಿ ಹುಕ್ಕಾ ಸೇದಿ ಕೆಲ ಯುವಕರು ಮೋಜು ಮಸ್ತಿ ಮಾಡಿದ್ದಾರೆ.

    ಹಲವರು ಅಕ್ಕ ಪಕ್ಕದ ಬೆಟ್ಟಗಳನ್ನು ಏರಿ ಫೋಟೋ, ಸೆಲ್ಫಿಗೆ ಮುಗಿಬಿದ್ದಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಬಿತ್ತರ ಮಾಡಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಗಮನ ಸೆಳೆದಿತ್ತು. ಇದರಿಂದ ಎಚ್ಚೆತ್ತ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಈ ವೀಕೆಂಡ್ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರ ತಡೆಗೆ ಮೂರು ಕಡೆ ಚೆಕ್ ಪೋಸ್ಟ್ ಆರಂಭಿಸಿದೆ. ದೇವನಹಳ್ಳಿ ಬಳಿಯ ರಾಣಿ ಕ್ರಾಸ್ ಸರ್ಕಲ್ ಹಾಗೂ ಕಾರಹಳ್ಳಿ ಕ್ರಾಸ್ ಸೇರಿದಂತೆ ನಂದಿಬೆಟ್ಟದ ಕ್ರಾಸ್ ನಲ್ಲಿ ಬ್ಯಾರಿಕೇಡ್ ಹಾಕಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ:ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್

  • ನಡು ರಸ್ತೆಯಲ್ಲಿ ಕ್ಯಾಬ್ ಡ್ರೈವರ್​​​ಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

    ನಡು ರಸ್ತೆಯಲ್ಲಿ ಕ್ಯಾಬ್ ಡ್ರೈವರ್​​​ಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

    ಲಕ್ನೋ: ಲಕ್ನೋ ನಗರದ ಅವಧ್ ಸಿಗ್ನಲ್‍ನಲ್ಲಿ ರಸ್ತೆ ಮಧ್ಯೆ ಯುವತಿಯೊಬ್ಬಳು ಕ್ಯಾಬ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಈ ವೀಡಿಯೋವನ್ನು ಮೇಘ್ ಅಪ್‍ಡೇಟ್ಸ್ ಎಂಬ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೀಡಿಯೋದಲ್ಲಿ ಯುವತಿ ಕ್ಯಾಬ್ ಡ್ರೈವರ್​​​ಗೆ ನಿರಂತರವಾಗಿ ಹೊಡೆದಿದ್ದಾರೆ. ಈ ವೇಳೆ ಗಲಾಟೆ ಮಧ್ಯೆ ಕ್ಯಾಬ್ ಡ್ರೈವರ್‌ನನ್ನು ರಕ್ಷಿಸಲು ಬಂದ ವ್ಯಕ್ತಿ ಕೂಡ ಯುವತಿಯಿಂದ ಹಲ್ಲೆಗೊಳಗಾಗಿದ್ದಾರೆ. ಜೊತೆಗೆ ಯುವತಿಗೆ ಕಾರು ಗುದ್ದಿರುವುದಾಗಿ ಹೇಳುತ್ತಿರುವುದನ್ನು ಕೇಳಬಹುದಾಗಿದೆ.

    ವೀಡಿಯೋದಲ್ಲಿ ಮಹಿಳೆ ಜೀಬ್ರಾ ಕ್ರಾಸಿಂಗ್ ಮಧ್ಯೆ ನಿಂತು ಕ್ಯಾಬ್ ಚಾಲಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿ ಟ್ರಾಫಿಕ್ ಜಾಮ್ ಆಗಿದೆ. ಈ ವಿಚಾರವಾಗಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಧ್ಯೆ ಪ್ರವೇಶಿಸಿ ಜಗಳವನ್ನು ತಪ್ಪಿಸಲು ಪ್ರಯತ್ನಿಸುತ್ತಿರುತ್ತಾರೆ. ಆದರೂ ಮಹಿಳೆ ಬಿಡದೇ ಚಾಲಕನನ್ನು ಎಳೆದಾಡಿಕೊಂಡು ಕಪಾಳಕ್ಕೆ ಹೊಡೆಯುತ್ತಲೇ ಇರುತ್ತಾರೆ. ಈ ವೇಳೆ ಚಾಲಕ ಮಹಿಳಾ ಪೊಲೀಸ್ ಠಾಣೆಗೆ ಕರೆ ಮಾಡುವಂತೆ ಸ್ಥಳೀಯರಿಗೆ ಹೇಳುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ:ಇಲ್ಲಿ ಕಿಸ್ ಮಾಡುವಂತಿಲ್ಲ – ಜೋಡಿಗಳ ಚುಂಬನದಿಂದ ಬೇಸತ್ತ ಸೊಸೈಟಿ

  • ಸಂಪಾಜೆ ಘಾಟಿಯಲ್ಲಿ ಉಕ್ಕುತ್ತಿರುವ ಅಂತರ್ಜಲ – ರಸ್ತೆ ಕುಸಿಯುವ ಅತಂಕ

    ಸಂಪಾಜೆ ಘಾಟಿಯಲ್ಲಿ ಉಕ್ಕುತ್ತಿರುವ ಅಂತರ್ಜಲ – ರಸ್ತೆ ಕುಸಿಯುವ ಅತಂಕ

    – ರಸ್ತೆಯ ಮೇಲ್ಭಾಗದಲ್ಲಿಯೇ ಹರಿಯಲಾರಂಭಿಸಿದ ನೀರು
    – ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು
    – ಮನೆ ಮೇಲೆ ಉರುಳಿದ ಬಂಡೆಗಳು

    ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಮಹಾಮಳೆಗೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳು ಕುಸಿದು ಬಂದ್ ಆಗುವ ಆತಂಕ ಎದುರಾಗಿದೆ. ಅಷ್ಟೇ ಅಲ್ಲದೇ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಹೆದ್ದಾರಿಗಳ ಮೇಲೆಯೇ ಇದೀಘ ಜಲಾದ ಮೂಲಗಳು ಹೆಚ್ಚಾಗಿದ್ದು, ರಸ್ತೆಯ ಮೇಲ್ಭಾಗದಲ್ಲಿ ನೀರು ಹರಿಯಲು ಅರಂಭಿಸಿದೆ.

    ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು:
    ಕಳೆದ ಒಂದು ವಾರದವರೆಗೆ ಜಿಲ್ಲೆಯಲ್ಲಿ 1,600 ಮಿಲಿ ಮೀಟರ್ ಗೂ ಅಧಿಕ ಮಳೆ ಸುರಿದಿದೆ. ಪರಿಣಾಮವಾಗಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೂರು ಕಡೆಗಳಲ್ಲಿ ಅತ್ಯಂತ ಅಪಾಯಕಾರಿ ಮತ್ತು ತೀವ್ರ ಕುಸಿಯುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈಗಾಗಲೇ ಮೂರು ಕಡೆಗಳಲ್ಲಿ ಬಿರುಕು ಮೂಡಿದೆ. ಎರಡನೇ ಮೊಣ್ಣಂಗೇರಿಯಲ್ಲಿ ಎರಡು ಕಡೆ ಬಿರುಕು ಬಿಟ್ಟಿದ್ದರೆ, ಮದೆನಾಡು ಬಳಿ ರಸ್ತೆ ಉಬ್ಬುತ್ತಿದೆ. ಕರ್ತೋಜಿ ಬೆಟ್ಟ ಕುಸಿಯುತ್ತಿರುವುದರಿಂದ ಅದರ ಒತ್ತಡಕ್ಕೆ ಹೆದ್ದಾರಿ ಉಬ್ಬುತ್ತಿದೆ. ಹೀಗೆ ಉಬ್ಬಿದಂತೆಲ್ಲಾ ಮಣ್ಣು ತೆಗೆಯಲಾಗುತ್ತಿದ್ದು, ಕಳೆದ ಮೂರು ದಿನಗಳಿಂದ 100 ಲೋಡಿಗೂ ಹೆಚ್ಚು ಮಣ್ಣನ್ನು ಉಬ್ಬಿದ ಸ್ಥಳದಿಂದ ತೆಗೆಯಲಾಗಿದೆ.

    ಉಕ್ಕುತ್ತಿರುವ ಅಂತರ್ಜಲ:
    ಜೊತೆಗೆ ಎರಡನೇ ಮೊಣ್ಣಂಗೇರಿಯಿಂದ ಮದೆನಾಡುವರೆಗೆ ಹೆದ್ದಾರಿಯಲ್ಲೇ ಅಂತರ್ಜಲ ಉಕ್ಕುತ್ತಿದೆ. ಇದರ ಜೊತೆಗೆ ಬೆಟ್ಟದ ಕೆಳ ಭಾಗದಲ್ಲಿಯೂ ಜಲ ಹೊರ ಬರುತ್ತಿದೆ. ಇದರಿಂದಾಗಿ ಈ ಬಾಗದ ಜನರಲ್ಲಿ ಅತಂಕ ಶುರುವಾಗಿದೆ. ಕಾರಣ ಕಳೆದ ವರ್ಷ ತಲಕಾವೇರಿಯಲ್ಲಿ ನಡೆದ ಭೀಕರ ದುರಂತಕ್ಕೂ ಮೊದಲು ಗಜಗಿರಿ ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ಅಂತರ್ಜಲ ಹರಿಯಲಾರಂಭಿಸಿತ್ತು. ಹೀಗೆ ಅಂತರ್ಜಲ ಹರಿದ ಕೆಲವೇ ತಿಂಗಳಲ್ಲಿ ಇಡೀ ಗಜಗಿರಿ ಬೆಟ್ಟ ಕುಸಿದು ಹೋಗಿತ್ತು. ಇದೀಗ ಮದೆನಾಡು, ಮೊಣ್ಣಂಗೇರಿಗಳಲ್ಲಿ ಒಂದೆಡೆ ಹೆದ್ದಾರಿ ಕುಸಿದ್ದಿದ್ರೆ, ಮತ್ತೊಂದೆಡೆ ಭಾರೀ ಪ್ರಮಾಣದಲ್ಲಿ ಅಂತರ್ಜಲ ಉಕ್ಕಿ ಹರಿಯುತ್ತಿರುವುದು ಆತಂಕ ಮೂಡಿಸಿದೆ.

    ಇನ್ನೂ ಮಡಿಕೇರಿ ಸೋಮವಾರಪೇಟೆ ನಡುವೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಹಟ್ಟಿಹೊಳೆ ಸಮೀಪ ಬರೋಬ್ಬರಿ ಅರ್ಧ ಕಿಲೋಮೀಟರ್ ದೂರದವರೆಗೆ ಭಾರೀ ಬಿರುಕುಬಿಟ್ಟಿದೆ. ಮತ್ತೊಂದೆಡೆ ಮಡಿಕೇರಿಯಿಂದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಚೆಟ್ಟಳ್ಳಿ ಬಳಿ ಕುಸಿದಿದ್ದು, ಮಣ್ಣನ್ನು ತೆರವು ಮಾಡಿ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

    ಆಗಸ್ಟ್ ತಿಂಗಳಲ್ಲಿ ಕೊಡಗು ಜಿಲ್ಲೆಯಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ. ಒಂದು ವೇಳೆ ಭಾರೀ ಮಳೆಯಾದಲ್ಲಿ ಈ ಎಲ್ಲಾ ರಸ್ತೆಗಳು ಕುಸಿದು ಹೋಗುವ ಸಾಧ್ಯತೆ ಇದ್ದು ಮಡಿಕೇರಿ ಕುಶಾಲನಗರ ಸಂಪರ್ಕವನ್ನು ಬಿಟ್ಟು ಉಳಿದೆಲ್ಲಾ ಸಂಪರ್ಕವನ್ನು ಕಡಿದುಕೊಳ್ಳುವ ಸಾಧ್ಯತೆಯೇ ಹೆಚ್ಚಿದೆ. ಹೆದ್ದಾರಿ ಸಂಪರ್ಕದ ಬಗ್ಗೆ ನಿತ್ಯ ಪರಿಶೀಲನೆಗೆ ಸೂಚಿಸಲಾಗಿದ್ದು, ಭಾರೀ ವಾಹನಗಳ ನಿಯಂತ್ರಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

    ಉರುಳಿದ ಬಂಡೆಗಳು:
    ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮಪಂಚಾಯತಿ ವ್ಯಾಪ್ತಿಯ ನವಗ್ರಾಮದಲ್ಲಿ ಬಸಪ್ಪ ಮತ್ತು ಮಂಜುಳ ದಂಪತಿ ಮನೆ ಪಕ್ಕದಲ್ಲೇ ಬೆಟ್ಟ ಕುಸಿದಿದೆ. ಈ ವೇಳೆ ಭಾರೀ ಗಾತ್ರದ ಎರಡು ಬಂಡೆಗಳು ಬಸಪ್ಪ ಅವರ ಮನೆ ಮೇಲೆ ಉರುಳಿವೆ. ಭಾರೀ ಗಾತ್ರದ ಬಂಡೆಗಳು ಮನೆಗೆ ಅಪ್ಪಳಿಸಿದ್ದರಿಂದ ಮನೆಯ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದೆ. ಆ ವೇಳೆಗೆ ಮನೆಯಲ್ಲೇ ಎಲ್ಲರೂ ಇದ್ದರಾದರೂ ಬಂಡೆಗಳು ಉರುಳಿದ ಭಾಗದಲ್ಲಿ ಯಾರು ಇರಲಿಲ್ಲ. ಹೀಗಾಗಿ ಅದೃವಷಾತ್ ಎಲ್ಲರೂ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

    ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯ ಶಂಷುದ್ದಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ನಿಯಮ ಪ್ರಕಾರ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಸ್ಥಳೀಯರು ತಮಗೆ ಸುರಕ್ಷಿತ ಸ್ಥಳದಲ್ಲಿ ಬದಲಿ ನಿವೇಶನ ಅಥವಾ ಮನೆ ನೀಡುವಂತೆ ಒತ್ತಾಯಿಸಿದ್ದಾರೆ.

  • ಚಾರ್ಮಾಡಿ ಘಾಟಿಯಲ್ಲಿ ಮೂರು ಗಂಟೆ ಟ್ರಾಫಿಕ್ ಜಾಮ್- ಸಂಜೆ 7ರ ಬಳಿಕ ಯಾರೂ ಬರಬೇಡಿ

    ಚಾರ್ಮಾಡಿ ಘಾಟಿಯಲ್ಲಿ ಮೂರು ಗಂಟೆ ಟ್ರಾಫಿಕ್ ಜಾಮ್- ಸಂಜೆ 7ರ ಬಳಿಕ ಯಾರೂ ಬರಬೇಡಿ

    ಚಿಕ್ಕಮಗಳೂರು: ಸಂಜೆ ಏಳು ಗಂಟೆಯ ನಂತರ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು-ಧರ್ಮಸ್ಥಳಕ್ಕೆ ತೆರಳಲು ಯಾರೂ ಬರಬೇಡಿ. ಬಂದರೆ ಇಡೀ ರಾತ್ರಿ ಚಾರ್ಮಾಡಿ ಘಾಟಿಯ ಚಳಿಯಲ್ಲಿ ನಡುಗಬೇಕು. ಜೊತೆಗೆ, ಬೆಳಗ್ಗೆ ಗಾಡಿಗಳು ಹೊರಟಾಗಲೂ ಮೂರ್ನಾಲ್ಕು ಗಂಟೆ ಚಾರ್ಮಾಡಿ ಘಾಟಿಯಲ್ಲಿ ನಿಲ್ಲಬೇಕಾಗುತ್ತದೆ. ಅಷ್ಟೊಂದು ಟ್ರಾಫಿಕ್ ಜಾಮ್ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ.

    ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಜೋರಿದೆ. ಇಂದು-ನಿನ್ನೆ ಮಳೆ ಪ್ರಮಾಣ ತಗ್ಗಿದ್ದರೂ ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣನ ಅಬ್ಬರ ನಿಂತಿಲ್ಲ. ಹೀಗಾಗಿ ಕಳೆದ ಎರಡ್ಮೂರು ವರ್ಷದಿಂದ ಪ್ರತಿ ವರ್ಷ ಚಾರ್ಮಾಡಿಯಲ್ಲಿ ಭೂ ಕುಸಿತ ಸಾಮಾನ್ಯವಾಗಿತ್ತು. ದುರಸ್ಥಿಗೆ ತಿಂಗಳುಗಳೇ ಬೇಕಾಗಿತ್ತು. ಹಾಗಾಗಿ ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ ಹಾಕಿತ್ತು. ಆದರೂ ಗೊತ್ತಿದ್ದೋ, ಗೊತ್ತಿಲ್ಲದೆಯೋ ಬರುವ ಪ್ರವಾಸಿಗರು-ಪ್ರಯಾಣಿಕರಿಗೆ ಬಣಕಲ್ ಪೊಲೀಸರು ಯಾರನ್ನೂ ಬಿಡದೆ ಚಳಿಯಲ್ಲಿ ನಡುಗಿಸಿದ್ದರು. ನಿನ್ನೆ ರಾತ್ರಿ ಸಹ ಸುಮಾರು 200 ವಾಹನಗಳು ಚಾರ್ಮಾಡಿ ಘಾಟಿ ಆರಂಭದ ಕೊಟ್ಟಿಗೆಹಾರದಲ್ಲಿ ಪರೇಡ್ ನಡೆಸಿದ್ದವು. ದಮ್ಮಯ್ಯ ಅಂದರೂ ಪೊಲೀಸರು ಬಿಟ್ಟಿರಲಿಲ್ಲ.

    ಇಂದು ಬೆಳಗ್ಗೆ 6 ಗಂಟೆಗೆ ವಾಹನಗಳನ್ನ ಬಿಡುತ್ತಿದ್ದಂತೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವ ಹಾಗೂ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುವ ನೂರಾರು ವಾಹನಗಳಿಂದ ಚಾರ್ಮಾಡಿಯಲ್ಲಿ ಸುಮಾರು ಮೂರು ಗಂಟೆ ಟ್ರಾಫಿಕ್ ಜಾಮ್ ಆಗಿತ್ತು. ಪ್ರವಾಸಿಗರು-ಪ್ರಯಾಣಿಕರು ಇಡೀ ರಾತ್ರಿ ಚಾರ್ಮಾಡಿಯ ರಣಚಳಿಯಲ್ಲಿ ನಡುಗಿದ್ದಲ್ಲದೆ. ಬೆಳಗ್ಗೆ ಕೂಡ ಚಳಿಯಲ್ಲಿ ನಡುಗುತ್ತಾ ಮೂರ್ನಾಲ್ಕು ಗಂಟೆ ನಿಂತಲ್ಲೇ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

    ಪ್ರಯಾಣಿಕರು-ಪ್ರವಾಸಿಗರು ಬರೋದಾದರೆ ಸಂಜೆ ಏಳು ಗಂಟೆ ಒಳಗೆ ಬಂದು ಮಂಗಳೂರು ಸೇರಿಬೇಡಿ. ಏಳು ಗಂಟೆಯ ನಂತರ ಬಂದು ಕೊಟ್ಟಿಗೆಹಾರದಲ್ಲಿ ಪರಿತಪ್ಪಿಸಬೇಡಿ. ಕೊಟ್ಟಿಗೆಹಾರದಲ್ಲಿ ತಂಗಲು ಸಮರ್ಪಕ ಲಾಡ್ಜ್ ಸೌಲಭ್ಯವೂ ಇಲ್ಲ. ಅತ್ತ ಪೊಲೀಸರು ಬಿಡೋದು ಇಲ್ಲ. ಹೀಗಾಗಿ ಸಂಜೆ ಏಳು ಗಂಟೆಯ ನಂತರ ಬರಬೇಡಿ. ಬಂದು ಉಳಿಯಲು ಜಾಗವಿಲ್ಲದೆ ಮಲೆನಾಡ ಚಳಿಯಲ್ಲಿ ನಡುಗಬೇಡಿ ಎಂದು ಮಳೆಯಲ್ಲಿ ನೆನೆದು, ಚಳಿಯಲ್ಲಿ ನಡುಗುತ್ತಾ ರಸ್ತೆಯಲ್ಲಿ ಕಾಲ ಕಳೆದಿರುವ ಪ್ರಯಾಣಿಕರು-ಪ್ರವಾಸಿಗರು ಹೇಳಿದ್ದಾರೆ.

  • ಮಂಗಳೂರಿನಲ್ಲಿ ಲಾಕ್‍ಡೌನ್ ಮುಗಿದೇ ಹೋಯ್ತು ಅನ್ನೋ ಮಟ್ಟಿಗೆ ವಾಹನ ದಟ್ಟಣೆ

    ಮಂಗಳೂರಿನಲ್ಲಿ ಲಾಕ್‍ಡೌನ್ ಮುಗಿದೇ ಹೋಯ್ತು ಅನ್ನೋ ಮಟ್ಟಿಗೆ ವಾಹನ ದಟ್ಟಣೆ

    ಮಂಗಳೂರು: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್‍ಡೌನ್ ಇದ್ದರೂ ನಗರದ ಜನ ಮಾತ್ರ ಲಾಕ್ ಡೌನ್ ಮುಗಿದೇ ಹೋಯ್ತು ಅಂದುಕೊಂಡಂತಿದೆ. ಇಂದು ಬೆಳಗ್ಗೆ 10 ಗಂಟೆಯವರೆಗಿನ ದೃಶ್ಯ ನೋಡಿದರೆ ಲಾಕ್‍ಡೌನ್ ಇದೆಯೇ ಎಂಬ ಸಂದೇಹ ಮೂಡುತ್ತದೆ. ಅಷ್ಟರ ಮಟ್ಟಿಗೆ ವಾಹನ ದಟ್ಟಣೆ ಸಂಭವಿಸಿದೆ.

    ಬೆಳಗ್ಗೆ 6 ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಟ್ಟಿದ್ದನ್ನೇ ಲಾಭವನ್ನಾಗಿಸಿದ ಜನ ಬೇಕಾಬಿಟ್ಟಿ ರಸ್ತೆಯಲ್ಲಿ ಓಡಾಟ ನಡೆಸಿದರು. ಎಲ್ಲ ಪ್ರಮುಖ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಮಾಮೂಲಿ ದಿನಕ್ಕಿಂತಲೂ ಹೆಚ್ಚು ವಾಹನಗಳು ರಸ್ತೆಯಲಿದ್ದವು.

    ಟ್ರಾಫಿಕ್ ಪೊಲೀಸರಿಗೆ ವಾಹನಗಳನ್ನು ಕಂಟ್ರೋಲ್ ಮಾಡೋದೇ ಸವಾಲಾಗಿತ್ತು. ಬೆಳಗ್ಗೆ 10 ಗಂಟೆಯವರೆಗೂ ಪೊಲೀಸರು ರಸ್ತೆಗಿಳಿದು ತಪಾಸಣೆ ಮಾಡುವುದಿಲ್ಲ ಎಂದು ಗೊತ್ತಿದ್ದೇ ಜನ ಈ ರೀತಿ ತಮ್ಮ ಇತರೆ ಕೆಲಸಗಳಿಗೂ ಬೇಕಾ ಬಿಟ್ಟಿ ಓಡಾಟ ನಡೆಸಿದರು. ಇದನ್ನೆಲ್ಲ ಗಮನಿಸುತ್ತಿರುವ ಪೊಲೀಸ್ ಇಲಾಖೆ ಮಾತ್ರ ಬೆಳಗ್ಗೆ 10 ಗಂಟೆಯವರೆಗೆ ಕಣ್ಣು ಮುಚ್ಚಿ ಕುಳಿತಂತಿತ್ತು.

  • ಚಲಿಸುತ್ತಿದ್ದ ವಾಹನದ ಮೇಲೆ ಸ್ಟಂಟ್ ಮಾಡಿ ಪೊಲೀಸರ ಬಲೆಗೆ ಬಿದ್ದ

    ಚಲಿಸುತ್ತಿದ್ದ ವಾಹನದ ಮೇಲೆ ಸ್ಟಂಟ್ ಮಾಡಿ ಪೊಲೀಸರ ಬಲೆಗೆ ಬಿದ್ದ

    ಲಕ್ನೋ: ಚಲಿಸುತ್ತಿದ್ದ ವಾಹನದ ಮೇಲೆ ಸ್ಟಂಟ್ ಮಾಡಿದ ಯುವಕನಿಗೆ ತಕ್ಕ ಪಾಠವನ್ನು ಕಲಿಸಿದ ಪೊಲೀಸರು ಒಂದು ವೀಡಿಯೋವನ್ನು ಹಂಚಿಕೊಂಡಿದ್ದು ಸಖತ್ ಸುದ್ದಿಯಾಗಿದೆ.

    ಉತ್ತರಪ್ರದೇಶದ ಯುವಕನೊಬ್ಬ ಚಲಿಸುತ್ತಿರುವ ವಾಹನದ ಮೇಲೆ ಪುಶ್-ಅಪ್ ಮಾಡಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಫಾಲೋವರ್ಸ್ ಪಡೆಯಲು ಯುವಕ ಈ ವಿಚಿತ್ರ ಮಾರ್ಗವನ್ನು ಅನುಸರಿಸಿದ್ದಾನೆ.

    ಈ ವೀಡಿಯೋ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಪೊಲೀಸರು, ಯುವಕನ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಂಡಿದ್ದಾರೆ.

    ಕೆಲವು ಪುಶ್ ಅಪ್‍ಗಳು ನಿಮ್ಮನ್ನು ಕಾನೂನಿನ ಕಣ್ಣಿಗೆ ಕಾಣುವಂತೆ ಮಾಡುತ್ತದೆ ಎಂದು ಬರೆದುಕೊಂಡು ಯುವಕ ಪುಶ್ ಅಪ್ ಮಾಡುತ್ತಿರುವ ವೀಡಿಯೋ ಜೊತೆಗೆ ದಂಡವನ್ನು ಕಟ್ಟಿರುವ ರಸೀದಿ ಹಾಗೂ ಯುವಕ ಪೊಲೀಸರಲ್ಲಿ ಕ್ಷಮೆ ಕೇಳಿದ ವೀಡಿಯೋವನ್ನು ಒಟ್ಟಿಗೆ ಉತ್ತರಪ್ರದೇಶ ಪೊಲೀಸರು ಟ್ವಿಟ್ಟರ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಪೊಲೀಸರು ಹಂಚಿಕೊಂಡ ವೀಡಿಯೋ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಪೊಲೀಸರ ಕೆಲಸವನ್ನು ಶ್ಲಾಘಿಸಿದ್ದಾರೆ.

  • ಕೈಯಲ್ಲಿ ಮಗು ಹಿಡಿದು ಕರ್ತವ್ಯಕ್ಕೆ ಹಾಜರಾದ ಪೊಲೀಸ್

    ಕೈಯಲ್ಲಿ ಮಗು ಹಿಡಿದು ಕರ್ತವ್ಯಕ್ಕೆ ಹಾಜರಾದ ಪೊಲೀಸ್

    – ಉರಿ ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸಿದ ಮಹಿಳೆ

    ಚಂಡೀಗಢ: ಪುಟ್ಟ ಕಂದಮ್ಮನನ್ನು ಭುಜದ ಮೇಲೆ ಮಲಗಿಸಿಕೊಂಡು ರಸ್ತೆಯಲ್ಲಿ ನಿಂತು ಟ್ರಾಫಿಕ್ ನಿಯಂತ್ರಣ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವುದರ ಜೊತೆಗೆ ಚರ್ಚೆ ಆಗುತ್ತಿದೆ.

    ವೀಡಿಯೋದಲ್ಲಿ ಏನಿದೆ
    ಟ್ರಾಫಿಕ್ ಪೊಲೀಸ್ ಪ್ರಿಯಾಂಕ ಅವರು ಚಂಡೀಗಢ ಸೆಕ್ಟರ್ 15/23ರ ಸ್ತೆಯಲ್ಲಿ ತಮ್ಮ ಕಂದಮ್ಮನನ್ನು ಹೆಗಲೆ ಮೇಲೆ ಮಲಗಿಸಿಕೊಂಡು ಸಂಚಾರ ನಿಂಯತ್ರಣವನ್ನು ಮಾಡುತ್ತಿದ್ದರು. ಉರಿ ಬಿಸಿಲಿನಲ್ಲಿ ಒಂದು ಕೈಯಲ್ಲಿ ಮಗು ಹಿಡಿದುಕೊಂಡು ಕೆಲಸ ಮಾಡಲು ಪರದಾಡಿದ್ದಾರೆ. ಅಲ್ಲೇ ಸುತ್ತ ಮುತ್ತ ಇದ್ದ ಸ್ಥಳೀಯರು ಈ ವೀಡಿಯೋವನ್ನು ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಈ ವೀಡಿಯೋಗೆ ಭಾರೀ ಲೈಕ್, ರಿಟ್ವೀಟ್ ಮತ್ತು ಕಾಮೆಂಟ್ ಪಡೆದುಕೊಂಡಿದೆ.

    ಈ ವೀಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟ್ರಾಫಿಕ್ ಪೊಲೀಸ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವು ಮಹಿಳೆಯರಿಗೆ ಇದು ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ. ಇನ್ನು ಹಲವರು ಮಗುವನ್ನು ಬಿಸಿಲಿನಲ್ಲಿ ಹಿಡಿದು ಮಹಿಳೆ ಕೆಲಸ ಮಾಡುತ್ತಿದ್ದಾರೆ ಎಂದು ಮೇಲಾಧಿಕಾರಿಯ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

  • ವ್ಯಾಲೆಂಟೈನ್ಸ್ ಡೇ – ನಂದಿಬೆಟ್ಟಕ್ಕೆ ಹರಿದು ಬರುತ್ತಿದೆ ಪ್ರೇಮಿಗಳ ದಂಡು

    ವ್ಯಾಲೆಂಟೈನ್ಸ್ ಡೇ – ನಂದಿಬೆಟ್ಟಕ್ಕೆ ಹರಿದು ಬರುತ್ತಿದೆ ಪ್ರೇಮಿಗಳ ದಂಡು

    ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನಾಚರಣೆ ಹಿನ್ನೆಲೆ ಇಂದು ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರೇಮಿಗಳ ದಂಡು ಹರಿದು ಬರುತ್ತಿದೆ.

    ಫೆಬ್ರವರಿ 14 ಪ್ರೇಮಿಗಳ ಪಾಲಿಗೆ ವಿಶೇಷ ದಿನ. ಈ ದಿನದಂದು ಪ್ರೇಮಿಗಳು ತಮ್ಮ ಜೋಡಿಗಳೊಂದಿಗೆ ಜೋಡಿ ಹಕ್ಕಿಗಳಂತೆ ವಿಶೇಷ ಸ್ಥಳಗಳಿಗೆ ಭೇಟಿ ನೀಡಿ ದಿನವೆಲ್ಲಾ ಸುತ್ತಾಡುವ ಮೂಲಕ ಕಾಲ ಕಳೆಯುತ್ತಾರೆ.

    ಸದ್ಯ ಇಂದು ಪ್ರೇಮಿಗಳ ಪಾಲಿನ ಸ್ವರ್ಗಧಾಮ, ಪ್ರೇಮಧಾಮ ಎಂದೇ ಪ್ರಸಿದ್ಧಿ ಪಡೆದಿರುವ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾವಿರಾರು ಮಂದಿ ಪ್ರೇಮಿಗಳು. ಬೆಳ್ಳಂಬೆಳಿಗ್ಗೆ ಕಾರು ಬೈಕ್ ಗಳಲ್ಲಿ ಆಗಮಿಸಿದ್ದಾರೆ. ಇದೀಗ ನಂದಿಬೆಟ್ಟ ಪ್ರೇಮ ಪಕ್ಷಿಗಳಿಂದ ತುಂಬಿ ತುಳುಕುತ್ತಿದೆ.

    ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು ನಂದಿಗಿರಿ ಗ್ರಾಮಕ್ಕೆ ಆಗಮಿಸಿದ್ದರಿಂದ ನಂದಿಗಿಧಾಮದ ತಿರುವುಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಹಾಗಾಗಿ ಮುಂಜಾಗ್ರತ ಕ್ರಮವಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

  • ನಾಗರಾಜನಿಂದ ಕಲ್ಸಂಕ ಜಂಕ್ಷನ್ ಬ್ಲಾಕ್- ರಸ್ತೆ ದಾಟಿಸಲು ಟ್ರಾಫಿಕ್ ಪೊಲೀಸರ ಸಹಕಾರ

    ನಾಗರಾಜನಿಂದ ಕಲ್ಸಂಕ ಜಂಕ್ಷನ್ ಬ್ಲಾಕ್- ರಸ್ತೆ ದಾಟಿಸಲು ಟ್ರಾಫಿಕ್ ಪೊಲೀಸರ ಸಹಕಾರ

    ಉಡುಪಿ: ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಇಂದು ಏಕಾಏಕಿ ಟ್ರಾಫಿಕ್ ಜಾಮ್ ಆಯ್ತು. ಜಂಕ್ಷನ್ ನಲ್ಲಿ ಮೂರು ಜನ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಇದ್ದರೂ ಜಾಮ್ ಕ್ಲಿಯರ್ ಮಾಡಲು ಸಾಧ್ಯವಾಗಿಲ್ಲ. ಯಾಕಂದರೆ ನಾಗರಾಜ ರೋಡ್ ಕ್ರಾಸಿಂಗ್ ಮಾಡುತ್ತಿದ್ದ.

    ಉಡುಪಿಯ ಕಲ್ಸಂಕ ಜಂಕ್ಷನ್ ಗೆ ನಾಗರಹಾವು ಬಂದಿತ್ತು. ಅಂಬಾಗಿಲು ರಸ್ತೆ ಕಡೆಯಿಂದ ಕೃಷ್ಣಮಠದ ಪಾರ್ಕಿಂಗ್ ಏರಿಯಾಗೆ ಹೋಗುವ ಕಡೆ ನಾಗರಹಾವು ನಿಧಾನಕ್ಕೆ ಚಲಿಸುತ್ತಿತ್ತು. ಸಿಮೆಂಟ್ ರಸ್ತೆಯಾದ್ದರಿಂದ ವೇಗವಾಗಿ ರಸ್ತೆದಾಟಲು ನಾಗರಹಾವಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯರು, ವಾಹನ ಸವಾರರು, ಪೊಲೀಸರು ರಸ್ತೆದಾಟಲು ಅವಕಾಶ ಮಾಡಿಕೊಟ್ಟರು.

    ಯಾವುದೇ ವಾಹನಗಳು ಅಡ್ಡ ಚಲಿಸದಂತೆ ನಾಗರಹಾವಿಗೆ ತಬ್ಬಿಬ್ಬಾಗದಂತೆ ನೋಡಿಕೊಂಡರು. ಕೆಲವು ಎಡಬಿಡಂಗಿ ದ್ವಿಚಕ್ರವಾಹನ ಸವಾರರು ಹಾವು ದಾಟುವ ಮೊದಲೇ ರಸ್ತೆದಾಟಲು ಪ್ರಯತ್ನಿಸಿದರೂ ಪೊಲೀಸರು ಅಡ್ಡಗಟ್ಟಿ ನಾಗರಹಾವನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದರು.

    ನಾನು ಸಂಜೆ ಮನೆಗೆ ಹೋಗುತ್ತಿದ್ದ ವೇಳೆ ಕಲ್ಸಂಕ ಜಂಕ್ಷನ್ ಬಳಿ ವಿಪರೀತ ಟ್ರಾಫಿಕ್ ಜಾಮ್ ಇತ್ತು. ಟ್ರಾಫಿಕ್ ಪೊಲೀಸರು ಇದ್ದರೂ ಯಾವ ರಸ್ತೆಗಳನ್ನು ಕ್ಲಿಯರ್ ಮಾಡಿಕೊಡುತ್ತಿರಲಿಲ್ಲ. ಆಶ್ಚರ್ಯಗೊಂಡು ಮುಂದೆ ಬಂದು ನೋಡಿದಾಗ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಪೊಲೀಸರ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಯಾವುದೇ ಗಡಿಬಿಡಿಯಿಲ್ಲದೆ ನಾಗರಹಾವು ರಸ್ತೆ ದಾಟಿತು ಎಂದು ಪ್ರತ್ಯಕ್ಷದರ್ಶಿ ಮಂಜುನಾಥ್ ಶೇಟ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.