Tag: trafficking

  • 200 ಜನರ ಕಳ್ಳಸಾಗಣೆ – ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ ಅರೆಸ್ಟ್‌

    200 ಜನರ ಕಳ್ಳಸಾಗಣೆ – ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ ಅರೆಸ್ಟ್‌

    ಮುಂಬೈ: ನಕಲಿ ದಾಖಲೆ (Fake Documents) ಬಳಸಿಕೊಂಡು ಕಳೆದ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಮೂಲದ ತೃತೀಯಲಿಂಗಿಯನ್ನ ಮುಂಬೈನಲ್ಲಿ ಪೊಲೀಸರು ಬಂಧಿಸಲಾಗಿದೆ.

    ಬಂಧಿತ ಆರೋಪಿಯನ್ನ ಆರೋಪಿ ಬಾಬು ಅಯಾನ್ ಖಾನ್ ಅಲಿಯಾಸ್ ಜ್ಯೋತಿ, ಅಲಿಯಾಸ್ ‘ಗುರು ಮಾ’ (Guru Maa) ಎಂದು ಗುರುತಿಸಲಾಗಿದೆ. ಗುರು ಮಾ ಸುಮಾರು 200 ಬಾಂಗ್ಲಾ ಪ್ರಜೆಗಳನ್ನ ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದಾಗಿ ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಮುಂಬೈ ಪೊಲೀಸರು (Mumbai Police) ತನಿಖೆ ಚುರುಕುಗೊಳಿಸಿದ್ದಾರೆ. ಕಳ್ಳಸಾಗಣೆ ಮಾಡಿರುವ ಸಂಖ್ಯೆ ಇನ್ನೂ ಹೆಚ್ಚಿರಬಹುದೆಂದು ಶಂಕಿಸಿದ್ದಾರೆ.

    300 ಅನುಯಾಯಿ ಹೊಂದಿದ್ದ ಆಧ್ಯಾತ್ಮಿಕ ನಾಯಕಿ:
    ಜ್ಯೋತಿ ಮುಂಬೈನಲ್ಲಿರುವ ಟ್ರಾನ್ಸ್ (Trans) ಜನರಿಗೆ ʻಗುರು ಮಾʼ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದಳು. ತಾನೊಬ್ಬಳು ಆಧ್ಯಾತ್ಮಿಕ ನಾಯಕಿ ಎಂದು ಹೇಳಿಕೊಂಡಿದ್ದಳು. ಹೀಗಾಗಿ ವಿವಿಧ ನಗರಗಳಲ್ಲಿ ಆಕೆಗೆ 300 ಜನ ಅನುಯಾಯಿಗಳಿದ್ದರು. ಅಲ್ಲದೇ ತಾನು ಭಾರತೀಯ ಪ್ರಜೆ ಎಂದು ಹೇಳಿಕೊಂಡಿದ್ದಳು. ಅದಕ್ಕಾಗಿ ನಕಲಿ ಪ್ರಮಾಣ ಪತ್ರ, ಪ್ಯಾನ್‌ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನ ನಕಲು ಮಾಡಿದ್ದಳು. ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸಿದಾಗ ಆಕೆ ಬಳಿಕ ಇದ್ದ ದಾಖಲೆಗಳು ನಕಲಿ ಅನ್ನೋದು ಗೊತ್ತಾಗಿದೆ.

    ಕಳ್ಳಸಾಗಣೆ ಮಾಡ್ತಿದ್ದು ಹೇಗೆ?
    ತನಿಖಾಧಿಕಾರಿ ಮೂಲಗಳ ಪ್ರಕಾರ, ಗುರು ಮಾ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಕರೆತರುತ್ತಿದ್ದಳು. ಬಾಂಗ್ಲಾದಿಂದ ಕರೆತಂದು ಮುಂಬೈನ ಶಿವಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿರಿಸಿದ್ದಳು. ಅವರಿಂದ ಪ್ರತಿ ತಿಂಗಳು 5 ರಿಂದ 10 ಸಾವಿರ ರೂ. ವರೆಗೂ ಬಾಡಿಗೆ ಪಡೆಯುತ್ತಿದ್ದಳು ಎಂದು ತಿಳಿದುಬಂದಿದೆ.

    ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (MHADA) ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದ ಫ್ಲ್ಯಾಟ್‌ ಹಾಗೂ ಮನೆಗಳನ್ನ ಅತಿಕ್ರಮಣ ಮಾಡಿಕೊಂಡು, ಅಲ್ಲಿಯೇ ಕಳ್ಳಸಾಗಣೆ ಮೂಲಕ ಕರೆತಂದವರನ್ನ ಬಾಡಿಗೆಗೆ ಇರಿದ್ದಳೆಂದು ಹೇಳಲಾಗಿದೆ. ಸದ್ಯ ಈ ಕುರಿತು ಮುಂಬೈ ಪೊಲೀಸರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.

  • 43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ – ಮಹಿಳೆ ಅರೆಸ್ಟ್

    43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ – ಮಹಿಳೆ ಅರೆಸ್ಟ್

    ನವದೆಹಲಿ: ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸೂಟ್‍ಕೇಸ್ ಟ್ರಾಲಿಯಲ್ಲಿ 43.2 ಕೋಟಿ ಮೌಲ್ಯದ ಕೊಕೇನ್(ಡ್ರಗ್ಸ್) ಬೇರೆ ಕಡೆ ಸಾಗಿಸಲು ಪ್ರಯತ್ನಿಸುತ್ತಿದ್ದಳು. ಆದರೆ ಅಧಿಕಾರಿಗಳಿಗೆ ಅನುಮಾನ ಬಂದು ಆಕೆಯ ಸೂಟ್‍ಕೇಸ್ ಪರಿಶೀಲಿಸಿದಾಗ ಬಿಳಿ ಬಣ್ಣದ ಪುಡಿ ಪತ್ತೆಯಾಗಿದೆ. ನಂತರ ಅದನ್ನು ಪರೀಕ್ಷಿಸಿದಾಗ ಅದು ಡ್ರಗ್ಸ್ ಎಂದು ತಿಳಿದುಬಂದಿದೆ. ನಂತರ ಆಕೆಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    ಘಟನೆ ವಿವರ: ಮಹಿಳೆಯೂ ಮೊದಲು ಲಾವೋಸ್‍ನಿಂದ ದೋಹಾಗೆ ಮತ್ತು ದೋಹಾದಿಂದ ನವದೆಹಲಿಗೆ ವಿಮಾನದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದಳು. ಅನುಮಾನದ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಆಕೆಯನ್ನು ತಡೆದಿದ್ದಾರೆ. ಆಕೆಯ ಲಗೇಜ್ ಅನುಮಾನಾಸ್ಪದವಾಗಿ ಕಂಡುಬಂದಿದ್ದು, ಅದನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಹಿಳೆ ಸೂಟ್‍ಕೇಸ್ ನಲ್ಲಿ ನಮಗೆ ಬಿಳಿ ಪುಡಿ ಸಿಕ್ಕಿದೆ. ನಂತರ ಅದನ್ನು ಪರೀಕ್ಷಿಸಿದಾಗ ಅದು ಡ್ರಗ್ಸ್ ಎಂದು ಪತ್ತೆಯಾಗಿದೆ. ಇದು 2,880 ಗ್ರಾಂ. ತೂಕ ಇದ್ದು, 43.2 ಕೋಟಿ ರೂ. ಬೆಲೆಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

    ಎನ್‍ಡಿಪಿಎಸ್(ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್) ಕಾಯ್ದೆಯ ಸೆಕ್ಷನ್ 21, 23 ಮತ್ತು 29 ರ ಅಡಿಯಲ್ಲಿ ಇದು ಶಿಕ್ಷಾರ್ಹ ಅಪರಾಧವಾಗಿದೆ. ಮಹಿಳೆ ವಿರುದ್ಧ ಕಸ್ಟಮ್ಸ್ ಅಧಿಕಾರಿ ಪ್ರಕರಣ ದಾಖಲಿಸಿಕೊಂಡಿದ್ದು, ಎನ್‍ಡಿಪಿಎಸ್ ಕಾಯ್ದೆಯ ಸೆಕ್ಷನ್ 43(ಬಿ) ಅಡಿಯಲ್ಲಿ ಆಕೆಯನ್ನು ಬಂಧಿಸಲಾಗಿದೆ. ಆಕೆಯ ಸೂಟ್‍ಕೇಸ್ ಟ್ರೋಲಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

    ಮಹಿಳೆಯನ್ನು ಮೊದಲು ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಕೆಗೆ ಕೋವಿಡ್ ನೆಗೆಟಿವ್ ಬಂದಿದೆ. ನಂತರ ಮಹಿಳೆಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು, ಆಕೆಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಅಧಿಕಾರಿಗಳ ವಾದವನ್ನು ಆಲಿಸಿದ ನ್ಯಾಯಾಲಯ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಅನುಮತಿಸಿತು.  ಇದನ್ನೂ ಓದಿ: ‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಸಿಲಿಂಡರ್ ವಿತರಣೆ

    ಪ್ರಸ್ತುತ ಆಕೆಯನ್ನು ನ್ಯಾಯಾಲಯ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮಹಿಳೆ ಬಗ್ಗೆ ಅಧಿಕಾರಿಗಳು ಯಾವುದೇ ರೀತಿಯ ಹೆಸರನ್ನು ಬಿಟ್ಟುಕೊಟ್ಟಿಲ್ಲ. ಆದರೆ ಆಕೆ ವಿಚ್ಛೇದನ ಪಡೆದುಕೊಂಡಿದ್ದಾಳೆ ಎಂದು ಮಾತ್ರ ಹೇಳಿದ್ದಾರೆ.

  • ಒಂದು ಮಗುವಿಗೆ 45 ಲಕ್ಷ ರೂ.ನಂತೆ 300 ಮಕ್ಕಳನ್ನು ಮಾರಾಟ ಮಾಡಿದ್ದ ಕಿಂಗ್‍ಪಿನ್ ಅರೆಸ್ಟ್!

    ಒಂದು ಮಗುವಿಗೆ 45 ಲಕ್ಷ ರೂ.ನಂತೆ 300 ಮಕ್ಕಳನ್ನು ಮಾರಾಟ ಮಾಡಿದ್ದ ಕಿಂಗ್‍ಪಿನ್ ಅರೆಸ್ಟ್!

    ಮುಂಬೈ: ವಿದೇಶಕ್ಕೆ ಮಕ್ಕಳನ್ನು ಮಾರಾಟ ನಡೆಸುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯು ಗುಜರಾತ್‍ನ ರಾಜುಭಾಯ್ ಗಮ್ಳೆವಾಲಾ ಅಲಿಯಾಸ್ ರಾಜುಭಾಯ್ ಆಗಿದ್ದಾನೆ. ಆರೋಪಿಯು 2007 ರಿಂದಲೂ ಮಕ್ಕಳ ಮಾರಾಟ ದಂಧೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದಾನೆ. ಒಂದು ಮಗುವನ್ನು ಅಮೆರಿಕಕ್ಕೆ 45 ಲಕ್ಷ ರೂಪಾಯಿಯಂತೆ ಮಾರಾಟ ಮಾಡಿದ್ದಾನೆಂದು ಪೊಲೀಸರು ಹೇಳಿದ್ದಾರೆ.

    ಭಾರತದಿಂದ ಅಮೆರಿಕಕ್ಕೆ ಸುಮಾರು 300 ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಬಾಲಕಿಯರನ್ನು ತಲಾ 45 ಲಕ್ಷ ರೂ.ಗೆ ಮಾರಾಟ ಮಾಡಿದ್ದು, ಹೆಚ್ಚಿನವರು ಗುಜರಾತ್ ಮೂಲದ ಮಕ್ಕಳಾಗಿದ್ದಾರೆ. ಗುಜರಾತಿನ ಬಡ ಕುಟುಂಬಗಳು ತಮ್ಮ 11 ರಿಂದ 16 ವರ್ಷದ ಮಕ್ಕಳನ್ನು ಸಾಕಲಾಗದೇ ರಾಜುಭಾಯ್‍ನಿಗೆ ಮಾರಾಟ ಮಾಡಿದ್ದಾರೆ. ಆದರೆ ಮಾರಾಟವಾದ ನೂರಾರು ಮಕ್ಕಳ ಸ್ಥಿತಿಗತಿ ಏನಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲವೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಮಾರಾಟ ಹೇಗೆ ನಡೆಯುತ್ತಿತ್ತು? ಹೇಗೆ ಅಮೆರಿಕಕ್ಕೆ ಕಳುಹಿಸುತ್ತಿದ್ದರು?
    ಅಮೆರಿಕದಿಂದ ಮಕ್ಕಳನ್ನು ಕೊಂಡುಕೊಳ್ಳಲು ಗಿರಾಕಿಗಳು ಆರ್ಡರ್ ಮಾಡಿದ ಕೂಡಲೇ ರಾಜುಭಾಯ್ ಹಾಗೂ ಆತನ ಸಹಚರರು ಬಡ ಕುಟುಂಬದ ಮಕ್ಕಳನ್ನು ಹುಡುಕುತ್ತಿದ್ದರು. ಹೆಚ್ಚಾಗಿ ಇವರಿಗೆ ಗುಜರಾತಿನ ಮೂಲದವರು ತಮ್ಮ ಹೆತ್ತಮಕ್ಕಳನ್ನೇ ಮಾರಾಟ ಮಾಡುತ್ತಿದ್ದರು. ಮಗುವನ್ನು ಪಡೆದುಕೊಂಡ ಬಳಿಕ, ಮಗುವಿನ ಹೋಲಿಕೆಯನ್ನೇ ಹೋಲುವ ಪಾಸ್‍ಪೋರ್ಟ್ ಹೊಂದಿರುವ ಮಕ್ಕಳ ಪೋಷಕರನ್ನು ಸಂಪರ್ಕಿಸುತ್ತಿದ್ದರು. ಅವರಿಂದ ಅಸಲಿ ಪಾಸ್‍ಪೋರ್ಟ್ ಪಡೆದುಕೊಂಡು ಮಕ್ಕಳಿಗೆ ಪಾಸ್‍ಪೋರ್ಟ್‍ನಲ್ಲಿರುವಂತೆಯೇ ಮೇಕ್‍ಅಪ್ ಮಾಡಿಸುತ್ತಿದ್ದರು. ನಂತರ ಮಗುವನ್ನು ಅಮೆರಿಕಕ್ಕೆ ಕಳುಹಿಸಿ, ಅಸಲಿ ಪಾಸ್‍ಪೋರ್ಟ್‍ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸುತ್ತಿದ್ದರು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಬಾಲಿವುಡ್ ನಟಿ ಪ್ರೀತಿ ಸೂದ್‍ರವರು ಇದೇ ತಿಂಗಳ ಮಾರ್ಚ್ ನಲ್ಲಿ ನಗರದ ಸಲೂನ್‍ಗೆ ಹೋಗಿದ್ದಾರೆ. ಈ ವೇಳೆ ಸಲೂನ್‍ನಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮೇಕಪ್ ಮಾಡುತ್ತಿದ್ದನ್ನು ಕಂಡು ಪ್ರಶ್ನಿಸಿದ್ದಾರೆ. ಮಕ್ಕಳ ಜೊತೆ ಬಂದಿದ್ದ ಮೂವರು ವ್ಯಕ್ತಿಗಳು, ಇವರು ಅಮೆರಿಕ ದೇಶದವರಾಗಿದ್ದು, ಅವರ ಪೋಷಕರ ಬಳಿ ಕಳುಹಿಸಿ ಕೊಡಲು ಈ ರೀತಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ನಟಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಾಗ ಮೂವರು ವ್ಯಕ್ತಿಗಳ ಪೈಕಿ ಇಬ್ಬರು ಪರಾರಿಯಾಗಿದ್ದು, ಓರ್ವ ಸಿಕ್ಕಿಬಿದ್ದಿದ್ದಾನೆ. ಅವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಕ್ಕಳ ಕಳ್ಳ ಸಾಗಾಣಿಕೆ ಬೃಹತ್ ಜಾಲ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ನಿವೃತ್ತ ಪೊಲೀಸ್ ಇನ್ಸ್‍ಫೆಕ್ಟರ್ ಮಗ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

    ಆದರೆ ಪ್ರಕರಣದ ಕಿಂಗ್‍ಪಿನ್ ರಾಜುಭಾಯ್ ತಲೆಮರೆಸಿಕೊಂಡಿದ್ದ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ವಾಟ್ಸಪ್ ಮೂಲಕ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು ಈ ಮೊದಲು 2007ರಲ್ಲಿ ಪಾಸ್‍ಪೋರ್ಟ್ ನಕಲು ಮಾಡಿದ್ದ ಆರೋಪದ ಮೇರೆಗೆ ಶಿಕ್ಷೆ ಅನುಭವಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 34 ಹಾಗೂ 373ರಡಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 18ರವರೆಗೆ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಡಿಸಿಪಿ ಪರಮ್‍ಜಿತ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ

    ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಖದೀಮರು- 12 ಲಕ್ಷ ರೂ. ಹಳೇ ನೋಟು ಪತ್ತೆ

    ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಳೇ 500 ರೂ. ಹಾಗೂ 1 ಸಾವಿರ ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿ ಒಂದು ವರ್ಷವೇ ಕಳೆದರೂ ಹಳೆ ನೋಟ್‍ಗಳ ಬದಲಾವಣೆ ಮಾಡುವ ಮಾಫಿಯಾ ಇನ್ನೂ ಕಾರ್ಯಾಚರಣೆ ನಡೆಸುತ್ತಲೇ ಇದೆ. ಇದಕ್ಕೆ ತಾಜಾ ಉದಾರಣೆ ಎಂಬಂತೆ ಗದಗ ನಗರದಲ್ಲಿ ಹಳೇ ನೋಟ್ ಗಳನ್ನು ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

    ಬಂಧಿತರಲ್ಲಿ ಇಬ್ಬರು ಗದಗ ನಗರ ನಿವಾಸಿಗಳಾಗಿದ್ದು ಮತ್ತಿಬ್ಬರು ಗದಗ ತಾಲೂಕಿನ ನಾಗಾವಿ ಮತ್ತು ಮಲ್ಲಸಮುದ್ರ ಗ್ರಾಮದ ನಿವಾಸಿಗಳಾಗಿದ್ದಾರೆ. ಗದಗ ರಾಧಾಕೃಷ್ಣ ನಗರದ ಮಾಬುಸುಬಾನಿ ಸವಡಿ(40), ನಗರದ ಗಂಗಿಮಡಿ ಕಾಲೋನಿ ನಿವಾಸಿ ಮಹಮದ್ ಯುಷುಫ್ ಗುಳಗುಂದಿ (26) ಹಾಗೂ ತಾಲೂಕಿನ ಮಲ್ಲಸಮುದ್ರ ಗ್ರಾಮದ ಸುರೇಶ್ ಹಳ್ಳಿಕೇರಿ(45), ನಾಗಾವಿ ಗ್ರಾಮದ ಮುತ್ತಪ್ಪ ಮಲ್ಲಮ್ಮ ನವರ್ (36) ಬಂಧಿತ ಆರೋಪಿಗಳು.

    ಹಳೇ ನೋಟುಗಳನ್ನು ಸಾಗಣೆ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಗದಗ ಬೆಟಗೇರಿ ಬಡಾವಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ನಗರದ ರೈಲ್ವೇ ಕ್ವಾಟ್ರಸ್ ಬಳಿ ಬೈಕ್ ಮೇಲೆ ಹಣ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಸುಮಾರು 12 ಲಕ್ಷ ರೂ. ಮೌಲ್ಯದ ಹಳೇ ನೋಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಆರೋಪಿಗಳನ್ನು ಪೋಲಿಸರು ಬಂಧಿಸಿದ ನಂತರ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡಿದೆ. ಈ ಹಣ ಯಾರದ್ದು? ಹಳೇ ನೋಟುಗಳನ್ನ ಇನ್ನೂ ಎಕ್ಸ್‍ಚೆಂಜ್ ಮಾಡುವ ಕುಳಗಳು ಯಾರು? ಬ್ಲಾಕ್ ಮನಿ ವೈಟ್ ಮನಿ ಮಾಡೊಕೆ ಸಜ್ಜಾಗಿದ್ದಾರಾ ಕಪ್ಪು ಕುಳಗಳು? ಆ ಹಳೇನೋಟನ್ನು ಈಗಲೂ ಸ್ವೀಕರಿಸ್ತಾರೆ ಅಂದರೆ ಅದರ ಹಿಂದಿರುವ ಕೈವಾಡವಾದರು ಎಂತಹದ್ದು? ಈ ಎಲ್ಲಾ ಪ್ರಶ್ನೆಗಳಿಗೆ ಪೊಲೀಸ್ ವಿಚಾರಣೆ ನಂತರವಷ್ಟೇ ಉತ್ತರ ಸಿಗಲಿದೆ.