Tag: Trail

  • ಮುಂಬೈ ತಂಡಕ್ಕೆ ಖರೀದಿಸುತ್ತೇನೆ – ಪೈನೆ ಸ್ಲೆಡ್ಜಿಂಗ್‍ಗೆ ಟಾಂಗ್ ಕೊಟ್ಟ ರೋಹಿತ್!

    ಮುಂಬೈ ತಂಡಕ್ಕೆ ಖರೀದಿಸುತ್ತೇನೆ – ಪೈನೆ ಸ್ಲೆಡ್ಜಿಂಗ್‍ಗೆ ಟಾಂಗ್ ಕೊಟ್ಟ ರೋಹಿತ್!

    ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ 2ನೇ ದಿನದಾಟದ ವೇಳೆ ರೋಹಿತ್ ವಿರುದ್ಧ ಸ್ಲೆಡ್ಜಿಂಗ್ ನಡೆಸಿದ್ದ ಆಸೀಸ್ ನಾಯಕ ಪೈನೆ ಮಾತಿಗೆ ಶರ್ಮಾ ತಿರುಗೇಟು ನೀಡಿದ್ದು, ಮುಂಬೈ ತಂಡಕ್ಕೆ ಪೈನೆರನ್ನು ಖರೀದಿ ಮಾಡುವುದಾಗಿ ಹೇಳಿದ್ದಾರೆ.

    3ನೇ ದಿನದಾಟದ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್, ಬ್ಯಾಟಿಂಗ್ ವೇಳೆ ಪೈನೆ ಹಾಗೂ ಫಿಂಚ್ ನಡುವಿನ ಸಂಭಾಷಣೆಯನ್ನು ಕೇಳಿಸಿಕೊಂಡಿದ್ದೆ. ಆದರೆ ಆ ಸಂದರ್ಭದಲ್ಲಿ ನನ್ನ ಆಟದ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಆದರೆ ಈ ಪಂದ್ಯದಲ್ಲಿ ಪೈನೆ ಶತಕ ಸಿಡಿಸಿದರೆ ಮುಂಬೈ ತಂಡಕ್ಕೆ ಪೈನೆರನ್ನು ಖರೀದಿ ಮಾಡಲು ತಂಡದ ಮೆಂಟರ್ ಅವರೊಂದಿಗೆ ಮಾತನಾಡುತ್ತೇನೆ. ಪೈನೆ ಮುಂಬೈ ತಂಡದ ಅಭಿಮಾನಿಯಂತೆ ಕಾಣುತ್ತಾರೆ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.

    2ನೇ ದಿನದಾಟ ವೇಳೆ ಪೈನೆ ವಿಕೆಟ್ ಹಿಂದೆ ನಿಂತು ರೋಹಿತ್ ಶರ್ಮಾರನ್ನು ಕೆಣಕುವಂತೆ ಮಾತನಾಡಿದ್ದರು. ನೀನು ಸಿಕ್ಸರ್ ಸಿಡಿಸಿದರೆ ನಾನು ಮುಂಬೈ ತಂಡಕ್ಕೆ ಬೆಂಬಲ ನೀಡುತ್ತೇನೆ. ನಾನು ಐಪಿಎಲ್ ನಲ್ಲಿ ರಾಜಸ್ಥಾನ ರಾಯಲ್ಸ್ ಅಥವಾ ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುವ ಬಗ್ಗೆ ಗೊಂದಲದಲ್ಲಿದ್ದು, ಈಗ ನೀನು ಸಿಕ್ಸರ್ ಬಾರಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸ್ಟ್ರೈಕ್ ನಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡದ ರಹಾನೆ ಮತ್ತೊಂದು ಬದಿಯಲ್ಲಿ ಇದ್ದರು.

    ಆಸೀಸ್ ನಾಯಕ ಪೈನೆ ಅವರು ಸ್ಲೆಡ್ಜಿಂಗ್ ಬಗ್ಗೆ ಟೀಂ ಇಂಡಿಯಾ ಅಭಿಮಾನಿಗಳು ಟ್ರೋಲ್ ಮಾಡಿ ಕಾಲೆಳೆದಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಡುವ ವೇಳೆ ಮೌನವಾಗಿರುವ ಪೈನೆ, ಕೊಹ್ಲಿ ಔಟಾಗುತ್ತಿದಂತೆ ಮಾತನಾಡಲು ಆರಂಭಿಸುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ಫೋಟೋದೊಂದಿಗೆ ಬರೆದುಕೊಂಡಿದ್ದಾರೆ. ಪೈನೆ ಅವರ ವರ್ತನೆ ಇಂದು ಕೂಡ ಅಭಿಮಾನಿಗಳ ಟ್ರೋಲ್ ನಂತೆಯೇ ಇದ್ದು, ಕೊಹ್ಲಿ ಶೂನ್ಯಕ್ಕೆ ಔಟಾಗುವ ವರೆಗೂ ಸುಮ್ಮನಿದ್ದ ಪೈನೆ ಬಳಿಕ ರಿಷಬ್ ಪಂತ್ ರನ್ನು ಕಾಲೆಳೆಯಲು ಯತ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೇಲ್ ಪ್ರಕರಣದ ಬಳಿಕವೂ ಬುದ್ಧಿ ಬಂದಿಲ್ಲ- ಆಸೀಸ್ ಮಾಧ್ಯಮಗಳಿಂದ ಟೀಂ ಇಂಡಿಯಾ ಟ್ರೋಲ್!

    ಗೇಲ್ ಪ್ರಕರಣದ ಬಳಿಕವೂ ಬುದ್ಧಿ ಬಂದಿಲ್ಲ- ಆಸೀಸ್ ಮಾಧ್ಯಮಗಳಿಂದ ಟೀಂ ಇಂಡಿಯಾ ಟ್ರೋಲ್!

    ಸಿಡ್ನಿ: ವೆಸ್ಟ್ ಇಂಡೀಸ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ವಿರುದ್ಧ ಸುಳ್ಳು ವರದಿ ಮಾಡಿ ಭಾರೀ ಪ್ರಮಾಣದ ದಂಡ ತೆತ್ತ ಆಸೀಸ್ ಮಾಧ್ಯಮಗಳು ಟೀ ಇಂಡಿಯಾ ಆಟಗಾರರನ್ನು `ಬೆದರಿದ ಬಾವಲಿಗಳು’ ಎಂದು ಕರೆಯುವ ಮೂಲಕ ಟ್ರೋಲ್ ಮಾಡಿದೆ. ಈ ಟ್ರೋಲ್ ಗೆ ಸಿಟ್ಟಿಗೆದ್ದ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಸೀಸ್ ಮಾಧ್ಯಮಗಳ ವಿರುದ್ಧ ಕಿಡಿಕಾರುತ್ತಿದ್ದಾರೆ.

    ಆಡಿಲೇಡ್‍ನಲ್ಲಿ ಆರಂಭವಾಗಲಿರುವ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಂ ಇಂಡಿಯಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಈ ಫೋಟೋವನ್ನು ಬಳಸಿಕೊಂಡು ವರದಿ ಮಾಡಿದ್ದ ಆಸೀಸ್ ಮಾಧ್ಯಮವೊಂದು `ಬೆದರಿದ ಬಾವಲಿಗಳು’ ಎಂದು ತಲೆಬರಹ ನೀಡಿ ಭಾರತೀಯ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ವರದಿಯಲ್ಲಿ ಟೀಂ ಇಂಡಿಯಾ ಸ್ಟಾರ್ ಆಟಗಾರರು ಆಸೀಸ್ ಬೌಲಿಂಗ್ ಬೌನ್ಸರ್ ಗಳಿಗೆ ಬೆದರಿದ್ದಾರೆ. ಅಲ್ಲದೇ ಹಗಲು ಮತ್ತು ರಾತ್ರಿ ಟೆಸ್ಟ್ ಬಗ್ಗೆ ಬಿಸಿಸಿಐ ನಿರಾಕರಿಸಿದ ವಿಚಾರವನ್ನು ಉಲ್ಲೇಖಿಸಿ ಟ್ರೋಲ್ ಮಾಡಿದೆ.

    https://twitter.com/rdhinds/status/1069348197615624192?

    ಸದ್ಯ ಆಸೀಸ್ ಮಾಧ್ಯಮಗಳ ವರದಿಗೆ ಟೀಂ ಇಂಡಿಯಾ ಅಭಿಮಾನಿಗಳು ಮಾತ್ರವಲ್ಲದೇ ಸ್ವತಃ ಆಸ್ಟ್ರೇಲಿಯಾಯನ್ನರೇ ಟೀಕೆ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಾಧ್ಯಮಗಳ ಈ ವರ್ತನೆ ದೇಶದ ಮೇಲೂ ಪ್ರಭಾವ ಬೀರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಕೆಲ ಅಭಿಮಾನಿಗಳು ಕಳೆದ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಮಾಡಿದ ಸಾಧನೆ ಹಾಗೂ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಆಸೀಸ್, ಟೀ ಇಂಡಿಯಾಗಿಂತ ಕೆಳಹಂತದಲ್ಲಿದೆ ಎಂದು ತಿಳಿಸಿ ತಿರುಗೇಟು ನೀಡಿದ್ದಾರೆ.

    ಇತ್ತ 1947 ರಲ್ಲಿ ಮೊದಲ ಬಾರಿಗೆ ಆಸೀಸ್ ಟೂರ್ನಿ ಕೈಗೊಂಡಿದ್ದ ಟೀಂ ಇಂಡಿಯಾ ಇದೂವರೆಗೂ 12 ಟೂರ್ನಿಗಳಲ್ಲಿ ಭಾಗವಹಿಸಿದ್ದು, ಆದರೆ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. 12 ಟೂರ್ನಿಗಳಲ್ಲಿ ಆಸೀಸ್ 9 ಬಾರಿ ಜಯಗಳಿಸಿದ್ದು, 3 ಬಾರಿ ಸರಣಿ ಡ್ರಾ ಆಗಿದೆ. ಆದರೆ ಈ ಬಾರಿ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಸರಣಿ ಜಯಿಸುವ ವಿಶ್ವಾಸವನ್ನು ಮೂಡಿಸಿದೆ. ವೆಸ್ಟ್ ಇಂಡೀಸ್ ಸರಣಿ ಜಯದ ಆತ್ಮವಿಶ್ವಾಸದಲ್ಲಿ ಟೀಂ ಇಂಡಿಯಾ ಆಸೀಸ್ ಪ್ರವಾಸ ಕೈಗೊಂಡಿದ್ದು ಟೆಸ್ಟ್ ಸರಣಿಗೂ ಮುನ್ನ ನಡೆದ ಸಿಮೀತ ಓವರ್ ಗಳ ಟಿ20 ಸರಣಿಯಯಲ್ಲಿ ಎರಡು ತಂಡಗಳು ಒಂದೊಂದು ಪಂದ್ಯವನ್ನು ಗೆದ್ದುಕೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫ್ರಾನ್ಸ್ ಫಿಫಾ ಫುಟ್ಬಾಲ್ ಕಪ್ ವಿಕ್ಟರಿ ಟ್ವೀಟ್ ಮಾಡಿ ಟ್ರೋಲ್ ಆದ್ರು ಕಿರಣ್ ಬೇಡಿ

    ಫ್ರಾನ್ಸ್ ಫಿಫಾ ಫುಟ್ಬಾಲ್ ಕಪ್ ವಿಕ್ಟರಿ ಟ್ವೀಟ್ ಮಾಡಿ ಟ್ರೋಲ್ ಆದ್ರು ಕಿರಣ್ ಬೇಡಿ

    ನವದೆಹಲಿ: ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್ ಕಪ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ಜಯಗಳಿಸಿದ ಬಳಿಕ ಮಾಜಿ ಐಪಿಎಸ್ ಅಧಿಕಾರಿ, ಪಾಂಡಿಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ ಬೇಡಿ ಅವರು ಮಾಡಿದ್ದ ಟ್ವೀಟ್ ಸದ್ಯ ಟ್ರೋಲ್‍ಗೆ ಒಳಗಾಗಿದೆ.

    ಭಾನುವಾರ ನಡೆದ ಪಂದ್ಯದಲ್ಲಿ ಫ್ರಾನ್ಸ್, ಕ್ರೊವೇಷಿಯಾ ವಿರುದ್ಧ 4-2 ಗೋಲುಗಳಿಂದ ಜಯಗಳಿಸಿತ್ತು. ಈ ವೇಳೆ ಫ್ರಾನ್ಸ್ ಜಯವನ್ನು ಸಂಭ್ರಮಿಸಲು ಟ್ವೀಟ್ ಮಾಡಿದ್ದ ಕಿರಣ್ ಬೇಡಿ ಅವರು, ಪಾಂಡಿಚೇರಿ ಸ್ವಾತಂತ್ರ್ಯ ಪೂರ್ವ ಫ್ರೆಂಚ್ ವಸಾಹತು ಆಗಿದ್ದ ಕಾರಣ ಫ್ರಾನ್ಸ್ ಗೆಲುವುವನ್ನು ನಾವು ಸಂಭ್ರಮಿಸಬಹುದು. ಕ್ರೀಡೆ ಎಲ್ಲರನ್ನು ಒಂದಾಗಿಸುತ್ತದೆ ಎಂದು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.

    ಕಿರಣ್ ಬೇಡಿ ಅವರ ಆ ಟ್ವೀಟ್ ಬಳಿಕ ಹಲವರು ಈ ಕುರಿತು ಅಸಮಾಧಾನ ವ್ಯಕ್ತಿ ಪಡಿಸಿ ಮರುಟ್ವೀಟ್ ಮಾಡಿದ್ದಾರೆ. ಅದರಲ್ಲೂ ಕೆಲ ಅಭಿಮಾನಿಗಳು ಕಿರಣ್ ಬೇಡಿ ಅವರು ವಸಾಹತು ಸಂಸ್ಕೃತಿಗೆ ಬೆಂಬಲ ನೀಡಿರುವುದು ತೀವ್ರ ನಿರಾಸೆ ಉಂಟು ಮಾಡಿದೆ ಎಂದು ಹೇಳಿದ್ದಾರೆ. ಇನ್ನು ಇಂಗ್ಲೆಂಡ್ ವಿಶ್ವಕಪ್ ಗೆದ್ದರೆ ನೀವು ಸಂಭ್ರಮಾಚರಣೆ ಮಾಡುತ್ತೀರಾ? ಏಕೆಂದರೆ ಭಾರತ ಬ್ರಿಟಿಷರ ವಸಾಹತು ಕಾಲೋನಿ ಆಗಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

    ತೀವ್ರ ಹಣಾಹಣಿಯಿಂದ ಕೂಡಿದ್ದ ಫಿಫಾ ಫುಟ್ಬಾಲ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಚಾಂಪಿಯನ್ ಆದ ಫ್ರಾನ್ಸ್ ತಂಡ ಬರೋಬ್ಬರಿ 260 ಕೋಟಿ ರೂ. ಹಾಗೂ ರನ್ನರ್-ಅಪ್ ತಂಡ ಕ್ರೊವೇಷಿಯಾ 191 ಕೋಟಿ ರೂ. ನಗದು ಬಹುಮಾನ ಪಡೆಯಿತು.

    https://twitter.com/TrueFactsIndia1/status/1018619534394052608

    https://twitter.com/PatakaBomb/status/1018622487490203648