ಬೆಂಗಳೂರು: ಮಳೆಯ ಹಿನ್ನೆಲೆ ಶಾರ್ಟ್ ಸರ್ಕ್ಯೂಟ್ ಆಗಿ ಟ್ರಾನ್ಸ್ಫಾರ್ಮರ್ (Transformer) ಹೊತ್ತಿ ಉರಿದ ಘಟನೆ ಬೆಂಗಳೂರಿನ (Bengaluru) ಕಮ್ಮನಹಳ್ಳಿಯಲ್ಲಿ ನಡೆದಿದೆ.
ಭಾನುವಾರ ಮಧ್ಯರಾತ್ರಿ 12:20ರ ಸುಮಾರಿಗೆ ಘಟನೆ ನಡೆದಿದೆ. ಹೋಟೆಲ್ ಎಂಪೈರ್ ಬಳಿಯ ಟ್ರಾನ್ಸ್ಫಾರ್ಮರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಕ್ರಮ ಕೈಗೊಂಡು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಫೆಂಗಲ್ ಚಂಡಮಾರುತ ಎಫೆಕ್ಟ್ – ಬೆಂಗಳೂರಿಗೆ ಇನ್ನೆರಡು ದಿನ ಮಳೆ ಕಾಟ ಫಿಕ್ಸ್!
ಹಾಸನ: ಇನ್ನೂ ಎರಡು ತಿಂಗಳಲ್ಲಿ ನಿಮ್ಮ ಅಧಿಕಾರಿ ಸಿಗದೇ ಎಲ್ಲಿಗೂ ಹೋಗಲ್ಲ. ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ ಎಂದು ಕೆಟ್ಟಿದ್ದ ಟ್ರಾನ್ಸ್ಫಾರ್ಮರ್ (Transformer) ಬದಲಿಸಲು ಕ್ರಮಕೈಗೊಳ್ಳದ ಕೆಪಿಟಿಸಿಎಲ್ (KPTCL) ಸಹಾಯಕ ಅಧಿಕಾರಿಯ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಹರಿಹಾಯ್ದಿದ್ದಾರೆ.
ಹಾಸನದ (Hassan) ಮೆಳಗೋಡು (Melagodu) ಗ್ರಾಮದ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಕೆಟ್ಟಿದ್ದ ಟ್ರಾನ್ಸ್ಫಾರ್ಮರ್ ಬದಲಾಯಿಸಿಲ್ಲ ಎಂದು ಅಧಿಕಾರಿ ಅರ್ಜುನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಾನು ಹತ್ತು ರೂ. ಮುಟ್ಟದೆ ಕೆಲಸ ಕೊಟ್ಟೆ. ಈಗ ಜನರ ಸೇವೆ ಮಾಡಿ ಎಂದರೆ ನಾಟಕ ಮಾಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್
ಗ್ರಾಮದ ಜನರು ಕುಡಿಯುವ ನೀರು (Drinking water), ಚರಂಡಿ ವ್ಯವಸ್ಥೆ ಹಾಗೂ ವಿದ್ಯುತ್ ಬಿಟ್ಟು ಮತ್ತೇನು ಕೇಳುತ್ತಾರೆ? ಇನ್ನೂ ಎರಡು ತಿಂಗಳಲ್ಲಿ ನಮ್ಮ ಸರ್ಕಾರ ಬರಲಿದೆ. ನಿಮ್ಮ ಅಧಿಕಾರಿ ಎಲ್ಲೂ ಹೋಗಲ್ಲ. ಬಲಿ ಹಾಕ್ತೀನಿ ಎಂದು ಅರ್ಜುನ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್ಕೌಂಟರ್ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು
ಬೆಂಗಳೂರು: ದುರಸ್ಥಿ ಸ್ಥಿತಿಯಲ್ಲಿರುವ ಟ್ರಾನ್ಸ್ ಫಾರ್ಮರ್ ನಿರ್ವಹಣೆಯನ್ನು ಮುಂದುವರಿಸಿರುವ ಬೆಸ್ಕಾಂ ಕಳೆದ ಎರಡು ತಿಂಗಳಿಂದೀಚೆಗೆ 27,787 ಟ್ರಾನ್ಸ್ ಫಾರ್ಮರ್ಗಳನ್ನು ತನ್ನ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ವಹಣೆ ಮಾಡಿದೆ.
ಮೇ 5 ರಂದು ರಾಜ್ಯಾದ್ಯಂತ ಚಾಲನೆ ದೊರೆತ ಟ್ರಾನ್ಸ್ ಫಾರ್ಮರ್ಗಳ ಅಭಿಯಾನವನ್ನು ಬೆಸ್ಕಾಂ ಮುಂದುವರಿಸಿದ್ದು, ನ್ಯೂನ್ಯತೆ ಹೊಂದಿರುವ ಹಾಗೂ ಅಸಮರ್ಪಕ ಗ್ರೌಂಡಿಂಗ್ ಸಮಸ್ಯೆ ಹೊಂದಿರುವ ಟ್ರಾನ್ಸ್ ಫಾರ್ಮರ್ಗಳನ್ನು ನಿರ್ವಹಣೆ ಮಾಡಿದೆ.
ಮೇ 5 ರಂದು ಟ್ರಾನ್ಸ್ ಫಾರ್ಮರ್ ಅಭಿಯಾನಕ್ಕೆ, ಇಂಧನ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದ್ದರು. ಸಚಿವರ ಸೂಚನೆ ಮೇರೆಗೆ ಅಭಿಯಾನವನ್ನು ಮುಂದುವರಿಸಲಾಗಿದ್ದು, ರಾಜ್ಯಾದ್ಯಂತ 2 ಲಕ್ಷಕ್ಕೂ ಅಧಿಕ ಟ್ರಾನ್ಸ್ ಫಾರ್ಮರ್ಗಳ ನಿರ್ವಹಣೆಯ ಗುರಿಯನ್ನು ಎಲ್ಲ ಎಸ್ಕಾಂಗಳಿಗೆ ನೀಡಲಾಗಿತ್ತು. ಇದನ್ನೂ ಓದಿ: ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ – ಮಳೆ ದೇವನಿಗೆ ಸ್ಥಳೀಯರಿಂದ ವಿಶೇಷ ಪೂಜೆ
ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಹಾಗೂ ಜನನಿಬಿಢ ಪ್ರದೇಶಗಳಲ್ಲಿರುವ ಟ್ರಾನ್ಸ್ ಫಾರ್ಮರ್ಗಳ ಸಮಗ್ರ ನಿರ್ವಹಣೆಗೆ ಬೆಸ್ಕಾಂ ಕ್ರಮಕೈಗೊಂಡಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೇ 5 ರಿಂದ ಜುಲೈ 12 ವರೆಗೆ ನಿರ್ವಹಣೆ ಮಾಡಿರುವ 27,787 ಟ್ರಾನ್ಸ್ ಫಾರ್ಮರ್ಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯೊಂದರಲ್ಲಿಯೇ 9,524 ಟ್ರಾನ್ಸ್ ಫಾರ್ಮರ್ಗಳ ನಿರ್ವಹಣೆಯನ್ನು ಬೆಸ್ಕಾಂ ಮಾಡಿದೆ. ತುಮಕೂರು ಜಿಲ್ಲೆ- 5,232, ದಾವಣಗೆರೆ ಜಿಲ್ಲೆ- 2,906, ಚಿತ್ರದುರ್ಗ- 2,291, ಚಿಕ್ಕಬಳ್ಳಾಪುರ ಜಿಲ್ಲೆ- 2,646, ರಾಮನಗರ ಜಿಲ್ಲೆ- 2,372 ಮತ್ತು ಕೋಲಾರ ಜಿಲ್ಲೆಯಲ್ಲಿ 1,429 ಟ್ರಾನ್ಸ್ಫಾರ್ಮರ್ಗಳ ನಿರ್ವಹಣೆಯನ್ನು ಬೆಸ್ಕಾಂ ಪೂರ್ಣಗೊಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ವಹಣೆ ಮಾಡಿರುವ 9,524 ಟ್ರಾನ್ಸ್ ಫಾರ್ಮರ್ಗಳ ಪೈಕಿ ಬೆಸ್ಕಾಂನ ದಕ್ಷಿಣ ವೃತ್ತ- 2,713, ಪಶ್ಚಿಮ ವೃತ್ತ- 2,253, ಪೂರ್ವ ವೃತ್ತ- 1,961 ಮತ್ತು ಉತ್ತರ ವೃತ್ತದಲ್ಲಿ 1,946 ಟ್ರಾನ್ಸ್ ಫಾರ್ಮರ್ಗಳ ನಿರ್ವಹಣೆ ಮಾಡಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್ಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ಇಂಧನ ಇಲಾಖೆ ನಿರ್ಧರಿಸಿದೆ.
ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾನ್ಸ್ಫಾರ್ಮರ್ ಸಂಬಂಧಿತ ಅವಘಡ ತಪ್ಪಿಸುವುದಕ್ಕಾಗಿ ರಾಜ್ಯಾದ್ಯಂತ ಮೇ 5 ರಿಂದ 20 ರವರೆಗೆ ಟ್ರಾನ್ಸ್ಫಾರ್ಮರ್ ನಿರ್ವಹಣಾ ಅಭಿಯಾನ ನಡೆಸಲು ತೀರ್ಮಾನಿಸಿದೆ. ಕಳೆದ ಒಂದು ತಿಂಗಳಲ್ಲಿ ನಡೆದ ಟ್ರಾನ್ಸ್ಫಾರ್ಮರ್ ದುರಂತಗಳ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಹಂತದ ಅಧಿಕಾರಿಗಳಿಗೂ ಈ ಅಭಿಯಾನದಲ್ಲಿ ಭಾಗವಹಿಸುವಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಪಿಎಸ್ಐ ನೇಮಕಾತಿಯಲ್ಲಿ 300 ಕೋಟಿಗೂ ಅಕ್ರಮ: ಸಿದ್ದರಾಮಯ್ಯ ಬಾಂಬ್
ರಾಜ್ಯದಲ್ಲಿ ಹದಿನೈದು ವರ್ಷಕ್ಕಿಂತ ಹಳೆಯ ಪರಿವರ್ತಕಗಳು ಸಾಕಷ್ಟು ಪ್ರಮಾಣದಲ್ಲಿ ಇವೆ. ಮಳೆಗಾಲದಲ್ಲಿ ಅವುಗಳು ನಿರ್ವಹಣಾ ಸಮಸ್ಯೆ ಉಂಟಾಗುತ್ತಿವೆ. ಮಳೆಗಾಲದಲ್ಲಿ ಸಿಡಿಲು ಇತ್ಯಾದಿ ಕಾರಣಗಳಿಂದ ಪರಿವರ್ತಕಗಳ ಹಾನಿ ಸಾಧ್ಯತೆ ಇದೆ. ಜೊತೆಗೆ ಅಧಿಕ ಲೋಡ್ನಿಂದ ಟ್ರಾನ್ಸ್ಫಾರ್ಮರ್ ಹಾನಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲು ಅಭಿಯಾನ ನಡೆಸಲಾಗುತ್ತಿದೆ.
ಅಭಿಯಾನದಲ್ಲಿ ಎಲ್ಲ ಹಂತದ ಅಧಿಕಾರಿಗಳೂ ಭಾಗಿಯಾಗಬೇಕು. ಪ್ರತಿ ದಿನ ಪರಿಶೀಲನೆ ನಡೆಸಿದ ಟ್ರಾನ್ಸ್ಫಾರ್ಮರ್ಗಳ ವಿವರ, ಅವುಗಳಲ್ಲಿ ಕಂಡುಬಂದ ನ್ಯೂನ್ಯತೆ, ಯಾವ ಕಾರಣಕ್ಕಾಗಿ ತೊಂದರೆ ಕಾಣಿಸಿಕೊಂಡಿದೆ ಎಂಬ ವಿವರವನ್ನು ಕೇಂದ್ರ ಕಚೇರಿಗೆ ಪ್ರತಿ ದಿನ ಕಳುಹಿಸಿಕೊಡುವಂತೆ ಸೂಚನೆ ನೀಡಲಾಗಿದೆ. ಪ್ರತಿ ವರ್ಷವೂ ಈ ರೀತಿ ಅಭಿಯಾನ ನಡೆಸುವುದರಿಂದ ಟ್ರಾನ್ಸ್ಫಾರ್ಮರ್ಗಳ ಕ್ಷಮತೆ ಹೆಚ್ಚಲಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಗೆ ಆಗಸ್ಟ್ 15ರೊಳಗೆ ಶಂಕುಸ್ಥಾಪನೆ: ಬೊಮ್ಮಾಯಿ
ಟ್ರಾನ್ಸ್ಫಾರ್ಮರ್ಗಳ ರಿಪೇರಿಗೆ ಇಂಧನ ಇಲಾಖೆ ಪ್ರತಿವರ್ಷ 150 ಕೋಟಿ ರೂ. ವೆಚ್ಚ ಮಾಡುತ್ತದೆ. ನಿರ್ವಹಣಾ ಕೆಲಸವನ್ನು ಕಾಲ ಕಾಲಕ್ಕೆ ನಡೆಸಿದರೆ ರಿಪೇರಿ ವೆಚ್ಚ ತಗ್ಗಿಸುವುದಕ್ಕೆ ಸಾಧ್ಯವಿದೆ. ಜತೆಗೆ ಎಲ್ಲಿ ಹೊಸ ಟ್ರಾನ್ಸ್ ಫಾರ್ಮರ್ಗಳ ತುರ್ತು ಅಗತ್ಯವಿದೆ ಎಂಬುದನ್ನೂ ಈ ಅಭಿಯಾನದ ಮೂಲಕ ತಿಳಿದುಕೊಳ್ಳುವುದಕ್ಕೆ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹದಿನೈದು ದಿನಗಳ ಕಾಲ ಅಭಿಯಾನ ನಡೆಸಲು ಸೂಚನೆ ನೀಡಲಾಗಿದೆ.
ಟ್ರಾನ್ಸ್ಫಾರ್ಮರ್ ನಲ್ಲಿ ಲೀಡ್ ವಯರ್ ಸುಟ್ಟು ಆಯಿಲ್ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ. ಬೆಳಗ್ಗೆ 11:50ರ ವೇಳೆಗೆ ಟ್ರಾನ್ಸ್ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸ್ಥಳೀಯರು ಮಾಹಿತಿ ಕೊಟ್ಟಿದ್ದಾರೆ. ಆದರೆ ಸಿಬ್ಬಂದಿ ಅದರ ಕಡೆ ಗಮನಹರಿಸದೆ ನಿರ್ಲಕ್ಷ್ಯ ಮಾಡಿದ್ದಾರೆ. ಪರಿಣಾಮ ಈ ದುರಂತ ನಡೆದಿದೆ. ಟ್ರಾನ್ಸ್ಫಾರ್ಮರ್ ಮಧ್ಯಾಹ್ನ 3:10ಕ್ಕೆ ಸ್ಫೋಟಗೊಂಡಿತು. ದುರದೃಷ್ಟವಶಾತ್ ಅದೇ ದಾರಿಯಲ್ಲಿ ಶಿವರಾಜ್ ಮತ್ತು ಚೈತನ್ಯ ಬರುತ್ತಿದ್ದರು. ಈ ವೇಳೆ ಬೆಂಕಿಗೆ ತಗುಲಿ ತಂದೆ-ಮಗಳು ಮೃತಪಟ್ಟಿದ್ದಾರೆ. ಇದಕ್ಕಾಗಿ ನಾನು ವಿಷಾದಿಸುತ್ತೇನೆ. ಮುಂದೆ ಈ ರೀತಿಯ ತಪ್ಪುಗಳು ಆಗದಂತೆ ನಾವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ಕೊಟ್ಟರು.
ಬೆಂಗಳೂರು: ಎಲ್ಲ ಸರಿಯಾಗಿದ್ದಿದ್ದರೆ ಮುಂದಿನ ತಿಂಗಳು ನಮ್ಮಿಬ್ಬರ ನಿಶ್ಚಿತಾರ್ಥವಾಗುತ್ತಿತ್ತು. ಆದರೆ ನನ್ನ ಹಣೆಯ ಬರಹ ಏನೂ ಮಾಡಲು ಆಗುವುದಿಲ್ಲ ಎಂದು ಮಧುಮಗ ವೆಂಕಟೇಶ್ ಭಾವುಕರಾಗಿದ್ದಾರೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚೈತನ್ಯ ಇಂದು ಮೃತಪಟ್ಟಿದ್ದಾರೆ. ಚೈತನ್ಯ ಅವರಿಗೆ ಏಪ್ರಿಲ್ 10ರಂದು ವೆಂಕಟೇಶ್ ಜೊತೆ ನಿಶ್ಚಿತಾರ್ಥ ನೆರವೇರಬೇಕಾಗಿತ್ತು. ಆದರೆ ನಿಶಿತಾರ್ಥದ ಸಂಭ್ರಮದಲ್ಲಿದ್ದ ಮಧುಮಗ ವೆಂಕಟೇಶ್ಗೆ ಚೈತನ್ಯ ಸಾವು ಬರಸಿಡಿಲು ಬಡಿದಂತಾಗಿದೆ.
ಘಟನೆ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವೆಂಕಟೇಶ್, ಚೈತನ್ಯ ಅವರು ಅತ್ತೆ ಮಗಳ ಮದುವೆ ಇದ್ದಿದ್ದರಿಂದ ಬಟ್ಟೆ ಖರೀದಿಸಲು ಹೋಗಿದ್ದರು. ಈ ವೇಳೆ ಅವಘಢ ಸಂಭವಿಸಿದೆ. ಇನ್ನೇನು ಮುಂದಿನ ತಿಂಗಳು 10 ರಂದು ನನ್ನ ಹಾಗೂ ಚೈತನ್ಯ ನಿಶ್ಚಿತಾರ್ಥ ನಿಶ್ಚಯವಾಗಿತ್ತು. ಆದರೆ ಬುಧವಾರ ಟ್ರಾನ್ಸ್ ಫಾರ್ಮರ್ ಬಳಿ ಒಂದು ಸಣ್ಣ ಹಳ್ಳ ಇತ್ತು. ಈ ವೇಳೆ ಬೈಕ್ನನ್ನು ಸ್ಲೋ ಮಾಡಿದಾಗ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿ ಇಬ್ಬರು ಗಾಯಗೊಂಡಿದ್ದರು. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಯುವತಿಯೂ ಸಾವು
ಕೆಇಬಿ ಅವರು ಸರಿಯಾದ ಸಮಯಕ್ಕೆ ಟ್ರಾನ್ಸ್ ಫಾರ್ಮರ್ ರೆಡಿ ಮಾಡಿರಲಿಲ್ಲ. ಹೀಗಾಗಿ ಇವರು ಬರುವ ವೇಳೆಗೆ ಸರಿಯಾಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಎಲ್ಲ ಸರಿಯಾಗಿದ್ದಿದ್ದರೆ, ಮುಂದಿನ ತಿಂಗಳು ನಮ್ಮಿಬ್ಬರ ನಿಶ್ಚಿತಾರ್ಥವಾಗುತ್ತಿತ್ತು. ಆದರೆ ನನ್ನ ಹಣೆಯ ಬರಹ ಏನೂ ಮಾಡಲು ಆಗುವುದಿಲ್ಲ ಕಣ್ಣಿರು ಹಾಕಿದ್ದಾರೆ. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ತಂದೆ ಸಾವು – ಮಗಳ ಸ್ಥಿತಿ ಗಂಭೀರ
ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ಆದರೆ ಶಿವರಾಜು ನಿನ್ನೆಯೇ ಆಸ್ಪತ್ರೆಯಲ್ಲಿ ಮೃತಪಟ್ಟರೆ, ತಡರಾತ್ರಿ 2:15ರ ಸುಮಾರಿಗೆ ಚೈತನ್ಯ(19) ಕೂಡ ಸಾವನ್ನಪ್ಪಿದ್ದಾರೆ.
ಬೆಂಗಳೂರು: ನಗರದಲ್ಲಿರುವ ಟ್ರಾನ್ಸ್ ಫಾರ್ಮರ್ ಗಳ ಸಂಪೂರ್ಣ ಆಡಿಟ್ ಮಾಡಲು ಆದೇಶ ಮಾಡಿದ್ದೇನೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಕಲಾಪದ ಶೂನ್ಯವೇಳೆ ಬೆಂಗಳೂರಿನ ಮಂಗನಹಳ್ಳಿಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿ ತಂದೆ-ಮಗಳು ಮೃತರಾದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಟ್ರಾನ್ಸ್ ಫಾರ್ಮರ್ ಗಳ ಆಡಿಟ್ ಗೆ ಆದೇಶ ಮಾಡಲಾಗಿದೆ ಅಂತ ತಿಳಿಸಿದರು.
ಬೆಂಗಳೂರಿನ ಮಂಗನಹಳ್ಳಿಯಲ್ಲಿ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆದ ಪ್ರಕರಣವನ್ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ನ ಮಂಜುನಾಥ್ ಬಂಡಾರಿ ಪ್ರಸ್ತಾಪ ಮಾಡಿದರು. ಮಂಗನಹಳ್ಳಿ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿದೆ ತಂದೆ-ಮಗಳ ಮೃತರಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸೂಕ್ತ ಪರಿಹಾರ ನೀಡಬೇಕು ಅಂತ ಮನವಿ ಮಾಡಿದರು.ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಯುವತಿಯೂ ಸಾವು
ಇದಕ್ಕೆ ಉತ್ತರ ನೀಡಿದ ಸಚಿವ ಸುನೀಲ್ ಕುಮಾರ್, ನಿನ್ನೆ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳು ಮೃತರಾಗಿದ್ದಾರೆ. 250KW ಟ್ರಾನ್ಸ್ ಫಾರ್ಮರ್ ಇದಾಗಿದೆ. ಸ್ಥಳೀಯರು 12.50ಕ್ಕೆ ಕರೆ ಮಾಡಿ ಅಧಿಕಾರಿಗಳಿಗೆ ಟ್ರಾನ್ಸ್ ಫಾರ್ಮರ್ ದೋಷದ ಬಗ್ಗೆ ಮಾಹಿತಿ ಕೊಟ್ಟಿದ್ದರು. ಆದರೆ ಸೂಕ್ತ ಸಮಯಕ್ಕೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ಮಧ್ಯಾಹ್ನ 3.10 ಕ್ಕೆ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿದೆ. ಅಧಿಕಾರಿಗಳ ಬೇಜವಾಬ್ದಾರಿ ಕೂಡಾ ಇದರಲ್ಲಿ ಇದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಎಂಡಿ ಜೊತೆ ಮಾತಾಡಿ ಕ್ರಮ ತಗೋತೀವಿ ಅಂತ ಭರವಸೆ ನೀಡಿದರು. ಇದನ್ನೂ ಓದಿ: ಗಂಡನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಊರೆಲ್ಲಾ ಅರಚಾಡಿ ಹೈ-ಡ್ರಾಮಾ ಮಾಡಿದ ಪತ್ನಿ
ನಮ್ಮ ಇಲಾಖೆಯಲ್ಲಿ ಹೀಗೆ ಮೃತರಾದರೆ 5 ಲಕ್ಷ ಕೊಡಲಾಗುತ್ತದೆ. ವಿಶೇಷ ಪ್ರಕರಣ ಅಂತ ಪರಿಗಣನೆ ಮಾಡಿ ಮೃತರಿಗೆ ತಲಾ 10 ಲಕ್ಷ ಪರಿಹಾರ ಇಲಾಖೆಯಿಂದ ನೀಡಲಾಗುತ್ತದೆ ಅಂತ ತಿಳಿಸಿದರು. ಇನ್ನು ಬೆಂಗಳೂರಿನಲ್ಲಿ ಅಪಾಯದ ಅಂಚಿನಲ್ಲಿರುವ ಟ್ರಾನ್ಸ್ ಫಾರ್ಮರ್ ಗಳ ಆಡಿಟ್ ಮಾಡಿಸಲು ಸೂಚನೆ ನೀಡಲಾಗಿದೆ.15 ವರ್ಷ ಮೇಲ್ಪಟ್ಟ ಟ್ರಾನ್ಸ್ ಫಾರ್ಮರ್ ಗಳನ್ನ ಬದಲಾವಣೆ ಮಾಡುವ ಬಗ್ಗೆ ಕ್ರಮವಹಿಸುತ್ತೇವೆ. ಆಡಿಟ್ ರಿಪೋರ್ಟ್ ಬಂದ ಕೂಡಲೇ ಟ್ರಾನ್ಸ್ ಫಾರ್ಮರ್ ಗಳ ಬಗ್ಗೆ ಕ್ರಮವಹಿಸುತ್ತೇವೆ ಅಂತ ತಿಳಿಸಿದರು.
ಬೆಂಗಳೂರು: ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಮೃತಪಟ್ಟಿದ್ದಾರೆ.
ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ಆದರೆ ತಡರಾತ್ರಿ 2:15ರ ಸುಮಾರಿಗೆ ಚೈತನ್ಯ(19) ಕೂಡ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ತಂದೆ ಸಾವು – ಮಗಳ ಸ್ಥಿತಿ ಗಂಭೀರ
ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಅಮಾಯಕ ಬಡಜೀವ ಬಲಿಯಾಗಿರುವ ದುರ್ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
58 ವರ್ಷದ ಶಿವರಾಜು ಮೃತ ದುರ್ದೈವಿ. ಶಿವರಾಜು ವೃತ್ತಿಯಲ್ಲಿ ಸೆಕ್ಯೂರಿಟಿಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಇದನ್ನೂ ಓದಿ: ಆಂಡ್ರಾಯ್ಡ್ ಬಳಕೆದಾರಿಗೆ ಮೋಸ ಮಾಡಿ ಸಿಕ್ಕಿಬಿದ್ದ ಗೂಗಲ್
ಈ ವೇಳೆ ಅವರಿಬ್ಬರು ಹೋಗುತ್ತಿದ್ದ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣ ಭಸ್ಮವಾಗಿದ್ದು, ತಂದೆ ಶಿವರಾಜು, ಮಗಳು ಚೈತನ್ಯ ಗಂಭೀರವಾಗಿ ಸುಟ್ಟು ಹೋಗಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದಿಂದ ತಂದೆ ಮಗಳನ್ನ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ತಂದೆ ಶಿವರಾಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮಗಳು ಚೈತನ್ಯ ಸ್ಥಿತಿ ಗಂಭೀರವಾಗಿದೆ. ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಸ್ಕಾಂ ನಿರ್ಲಕ್ಷ್ಯದ ಆರೋಪದ ಮೇಲೆ ದೂರು ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!
ಘಟನ ಸ್ಥಳಕ್ಕೆ ಆಗಮಿಸಿದ ಸಚಿವ ಎಸ್.ಟಿ.ಸೋಮಶೇಖರ್ ಘಟನೆಯಲ್ಲಿ ಗಾಯಗೊಂಡಿರುವವರ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ್ದಾರೆ.
ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟಾವಿಗೆ ಬಂದಿದ್ದ ಸುಮಾರು 10 ಕ್ಕೂ ಹೆಚ್ಚು ಎಕರೆ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರಟೇಕ ಗ್ರಾಮದಲ್ಲಿ ನಡೆದಿದೆ.
ಇಂದು ಮಧ್ಯಾಹ್ನದ ವೇಳೆ ಚಂದೂರಟೇಕ ಗ್ರಾಮದ ಕಬ್ಬಿನ ಗದ್ದೆಯಲ್ಲಿದ್ದ ಟ್ರಾನ್ಸ್ಫಾರ್ಮರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಬಳಿಕ ಸುತ್ತಲಿದ್ದ ಗ್ರಾಮದ ಸುಕುಮಾರ ಚೌಗಲೆ, ಮಹಾವೀರ ಚೌಗಲೆ, ಧನಂಜಯ ಚೌಗಲೆ,ಬಾಳಾಸಾಬ ಚೌಗಲೆ, ರಾಜು ಚೌಗಲೆ, ಸಾಗರ ಚೌಗಲೆ ಸೇರಿದಂತೆ 7 ಕ್ಕಿಂತ ಹೆಚ್ಚು ರೈತರ 10 ಎಕರೆಗೂ ಅಧಿಕ ಕಬ್ಬು ಸುಟ್ಟು ಕರಕಲಾಗಿದೆ.
ಬೆಂಕಿಯನ್ನು ಕಂಡು ರೈತರು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ. ನೋಡು ನೋಡುತ್ತಲೇ ಬೆಳೆದು ನಿಂತಿದ್ದ ಕಬ್ಬು ಧಗಧಗನೆ ಉರಿದು ಸುಟ್ಟು ಕರಕಲಾಗಿವೆ. ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಇತ್ತೀಚೆಗೆ ಇದೇ ಗ್ರಾಮದಲ್ಲಿ 60 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿತ್ತು. ಘಟನೆ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.