ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ (Karnataka) ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ (Transgenders) ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಚಾಲನೆ ನೀಡಿದೆ. pic.twitter.com/oOpbVUIVCF
ಸಮೀಕ್ಷೆಯ ಪೋಸ್ಟರ್ ಬಿಡುಗಡೆ ವೇಳೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಹಿರಿಯ ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂಬಂಧ ವಿಡಿಯೋ ಮಾಡಿ ನೋವು ತೋಡಿಕೊಂಡ ರಾಘವೇಂದ್ರ ಅವರು, ಶುಭ ಕಾರ್ಯ ಬಂದ್ರೆ ಸಾಕು ಮಂಗಳಮುಖಿಯರು ಬರುತ್ತಾರೆ. ಅವರು ಬಂದರು ಅಂತ ನಮಗೆ ತಿಳಿದಷ್ಟು ಹಣ ನೀಡಿದರೆ ಒಪ್ಪುವುದಿಲ್ಲ. ಇಷ್ಟೇ ಕೊಡಿ ಎಂದು ದಬ್ಬಾಳಿಕೆ ಮಾಡುತ್ತಾರೆ. ಅವಾಚ್ಯ ಪದಗಳಿಂದ ನಿಂದಿಸುತ್ತಾರೆ. ಹಲ್ಲೆಗೆ ಯತ್ನಿಸಿದವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಹುಟ್ಟುಹಬ್ಬದ ದಿನ ದೇಶದ ಮೊದಲ ಲಿಂಗತ್ವ ಅಲ್ಪಸಂಖ್ಯಾತರ (Transgenders) ಹೊರರೋಗಿ ವಿಭಾಗವನ್ನು ದೆಹಲಿಯ (Delhi) ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಉದ್ಘಾಟಿಸಲಾಗಿದೆ. ಈ ಮೂಲಕ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಆರೋಗ್ಯ ಕ್ಷೇತ್ರದಲ್ಲಿ ನೂತನ ಹೆಜ್ಜೆ ಇರಿಸಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಅಜಯ್ ಶುಕ್ಲಾ ಅವರು, ವೈದ್ಯಕೀಯ ಆರೈಕೆಯನ್ನು ಪಡೆಯುವಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಎದುರಿಸುವ ಸವಾಲುಗಳ ಬಗ್ಗೆ ಒತ್ತಿ ಹೇಳಿದರು. ಆಸ್ಪತ್ರೆಯ ಸೇವೆಗಳನ್ನು ಪಡೆಯಲು ಅವರು ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನೂತನ ವಿಭಾಗ ಆರಂಭದ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್ಗೆ ರೈತ ಸಂಘ ನಿರ್ಧಾರ
ಈ ವಿಭಾಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ರೋಗಿಗಳಿಗೆ ಮೀಸಲಾದ ವಿಶ್ರಾಂತಿ ಕೊಠಡಿಯನ್ನು ಒದಗಿಸಲಾಗುತ್ತದೆ. ಅವರು ಯಾವುದೇ ಅತಂಕವಿಲ್ಲದೇ ಚಿಕಿತ್ಸೆ ಪಡೆಯುವ ವಾತಾವರಣ ಕಲ್ಪಿಸಲಾಗುತ್ತದೆ. ಸೂಕ್ತ ಚಿಕಿತ್ಸೆಯನ್ನು ಸಹ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ವಿಚಾರವಾಗಿ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸಂಭ್ರಮಿಸಿದ್ದಾರೆ. ಮೋದಿಯವರ ಹುಟ್ಟುಹಬ್ಬಕ್ಕೆ ಉಡುಗೊರೆ ದೊರೆತಂತಾಗಿದೆ. ಇದುವರೆಗೂ ನಾವು ಆಸ್ಪತ್ರೆಗೆ ಬರಲು ಹಿಂಜರಿಯುತ್ತಿದ್ದೆವು. ಆದರೆ ಈ ಕ್ರಮದಿಂದಾಗಿ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಿದಂತಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು- ಕಾರಣ ನಿಗೂಢ
ಈ ಸಮಾಜದಲ್ಲಿ ರಕ್ತದಾನಕ್ಕೆ (Blood Donation) ಅದರದ್ದೇ ಆದ ಮಹತ್ವವಿದೆ. ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದದ್ದು. ಜೀವಕ್ಕೆ ಸಂಜೀವಿನಿಯಿದ್ದಂತೆ. ಮಾನವ ದೇಹದ ಜೀವಸೆಲೆಯಾಗಿರುವ ರಕ್ತವನ್ನು ದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಬಹುದು. ಕೇವಲ ರಕ್ತ ಪಡೆಯುವವರಿಗಷ್ಟೇ ಅಲ್ಲ, ರಕ್ತದಾನ ಮಾಡುವವರಿಗೂ ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ರಕ್ತದಾನ ಮಾಡಿದರೆ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳನ್ನೂ ನಿಯಂತ್ರಿಸಬಹುದು ಎಂಬುದು ನಿಮ್ಮ ಗಮನಕ್ಕಿರಲಿ.
ರಕ್ತದಾನ ಮಾಡುವುದಕ್ಕೂ ವೈದ್ಯಕೀಯ ಮಾರ್ಗಸೂಚಿಯಿರುತ್ತೆ. ಇಂತಹವರು ರಕ್ತದಾನ ಮಾಡಬೇಕು, ಮಾಡಬಾರದು ಎಂಬ ನಿಯಮವಿದೆ. ಯಾವುದೇ ದಾನ ಇನ್ನೊಬ್ಬರ ಜೀವಕ್ಕೆ ಆಸರೆಯಾಗಬೇಕೇ ಹೊರತು ಕೆಡುಕುಂಟು ಮಾಡಬಾರದು. ಹೀಗಾಗಿ ರಕ್ತದಾನ ಮಾಡುವಾಗ ವೈದ್ಯಕೀಯ ನಿಯಮ ಪಾಲಿಸುವುದು ತುಂಬಾ ಮುಖ್ಯ. ಆ ಮಾರ್ಗಸೂಚಿಯೇನು? ಅದನ್ನು ಯಾಕೆ ಪಾಲಿಸಬೇಕು? ಯಾರ್ಯಾರು ರಕ್ತದಾನ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದನ್ನೂ ಓದಿ: PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?
ಮಾರಕ ಕಾಯಿಲೆಗಳ ವಿಚಾರವಾಗಿ ವೈದ್ಯಕೀಯ ಕ್ಷೇತ್ರ ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ರಕ್ತದಾನದ ವಿಚಾರದಲ್ಲೂ ಇಂತಹ ಕ್ರಮಕೈಗೊಂಡಿರುವ ವಿಚಾರವನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ಮುಂದಿಟ್ಟಿದೆ. ಸೋಂಕು ಹರಡುವಿಕೆ ನಿಯಂತ್ರಣ, ಇತರರ ಆರೋಗ್ಯದ ದೃಷ್ಟಿಯಿಂದ ಮಹಿಳಾ ಲೈಂಗಿಕ ಕಾರ್ಯಕರ್ತೆಯರು (Women Sex Workers) ರಕ್ತದಾನ ಮಾಡಬಾರದು ಎಂಬ ಮಾರ್ಗಸೂಚಿಯಿದೆ. ಈ ಸಾಲಿಗೆ ತೃತೀಯಲಿಂಗಿಗಳು (Transgenders) ಹಾಗೂ ಸಲಿಂಗಕಾಮಿಗಳನ್ನೂ (Gay) ಸೇರಿಸಲಾಗಿದೆ. ಯಾಕೆ ಇವರು ರಕ್ತದಾನ ಮಾಡುವಂತಿಲ್ಲ ಎಂಬುದಕ್ಕೆ ವೈದ್ಯಕೀಯ ಪುರಾವೆಗಳನ್ನೂ ಕೇಂದ್ರ, ಸುಪ್ರೀಂ ಮುಂದಿಟ್ಟಿದೆ. ಇದೇನು ಹೊಸ ಮಾರ್ಗಸೂಚಿಯಲ್ಲ. 2017ರಲ್ಲೇ ಈ ಮಾರ್ಗಸೂಚಿ ಹೊರಡಿಸಲಾಗಿತ್ತು. ಹಾಗಾದರೆ, ಈಗ ಏಕೆ ಈ ಬಗ್ಗೆ ಚರ್ಚೆಯಾಗುತ್ತಿದೆ ಎಂಬುದನ್ನು ತಿಳಿಯೋಣ.
ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡುವಂತಿಲ್ಲ
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ. ಅದರಲ್ಲಿ “ಲಿಂಗಪರಿವರ್ತಕರು, ಸಲಿಂಗಕಾಮಿಗಳು ಮತ್ತು ಮಹಿಳಾ ಲೈಂಗಿಕ ಕಾರ್ಯಕರ್ತರನ್ನು ಎಚ್ಐವಿ ʼಅಪಾಯಕಾರಿʼ ವರ್ಗಕ್ಕೆ ಸೇರಿಸಲಾಗಿದೆ. ಹೀಗಾಗಿ ಅವರನ್ನು ರಕ್ತದಾನಿಗಳ ವರ್ಗದಿಂದ ದೂರ ಇಡಲಾಗಿದೆ” ಎಂದು ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: PublicTV Explainer: ಕೋವಿಡ್ ಬೆನ್ನಲ್ಲೇ ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ – ಏನು ಈ ರೋಗ?
ರಾಷ್ಟ್ರೀಯ ರಕ್ತ ವರ್ಗಾವಣೆ ಕೌನ್ಸಿಲ್ (NBTC) ಮತ್ತು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯು 2017ರ ಅಕ್ಟೋಬರ್ 11 ರಂದು “ರಕ್ತದಾನಿ ಆಯ್ಕೆ ಮತ್ತು ರಕ್ತದಾನಿಗಳ ಮಾರ್ಗಸೂಚಿ” 12 ಮತ್ತು 51ನೇ ವಿಧಿ ಅಡಿಯಲ್ಲಿ ಸಲಿಂಗಕಾಮಿ ಮತ್ತು ತೃತೀಯಲಿಂಗಿಗಳು ರಕ್ತದಾನ ಮಾಡುವಂತಿಲ್ಲ ಎಂದಿದೆ. ಇದನ್ನು ವಿರೋಧಿಸಿ ತೃತೀಯಲಿಂಗಿ ಸಮುದಾಯದ ಥಂಗ್ಜಮ್ ಸಂತಾ ಸಿಂಗ್ ಎಂಬವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಮಾರ್ಗಸೂಚಿಗೆ ತಡೆ ನೀಡಬೇಕು ಎಂದು ಕೋರಿದ್ದರು. ಅದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಯಾಕೆ ರಕ್ತದಾನ ಮಾಡುವಂತಿಲ್ಲ?
ಮಾರ್ಗಸೂಚಿಗಳ 12 ನೇ ವಿಧಿಯು “ರಕ್ತ ದಾನಿಗಳ ಆಯ್ಕೆ ಮಾನದಂಡ”ದ ಅಡಿಯಲ್ಲಿ ಬರುತ್ತದೆ. ರಕ್ತ ಕೊಡುವ ದಾನಿ ಕಾಯಿಲೆಗಳಿಂದ ಮುಕ್ತವಾಗಿರಬೇಕು. ಮುಖ್ಯವಾಗಿ HIV, ಹೆಪಟೈಟಿಸ್ ಬಿ ಸೋಂಕಿತರು ರಕ್ತದಾನ ಮಾಡುವಂತಿಲ್ಲ ಎಂದಿದೆ. ಇದರಿಂದ ರಕ್ತ ಪಡೆಯುವವರೂ ಸೋಂಕಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೇ 15 ನೇ ವಿಧಿಯು ಸಲಿಂಗಕಾಮಿ ಮತ್ತು ತೃತೀಯಲಿಂಗಿಗಳು ಹಾಗೂ HIV ಸೋಂಕಿನ ಅಪಾಯದಲ್ಲಿರುವವರನ್ನು ರಕ್ತದಾನದಿಂದ ಶಾಶ್ವತವಾಗಿ ದೂರವಿಟ್ಟಿದೆ. ಪರ್ಮನೆಂಟ್ ಡೆಫರಲ್ ಎಂದರೆ ರಕ್ತದಾನ ಮಾಡಲು ಎಂದಿಗೂ ಅವರನ್ನು ಅನುಮತಿಸುವುದಿಲ್ಲ.
ಸುಪ್ರೀಂನಲ್ಲಿರುವ ಮನವಿ ಏನು?
ರಕ್ತದಾನ ವಿಚಾರ ಕುರಿತಂತೆ, ಮಣಿಪುರದ ಥಂಗ್ಜಮ್ ಸಂತಾ ಸಿಂಗ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, 2021ರ ಮಾ.5ರಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು. 2017ರ ಮಾರ್ಗಸೂಚಿಯ ಸಿಂಧುತ್ವವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಗಸೂಚಿಯಲ್ಲಿ ಗುರುತಿಸಲಾಗಿರುವ ಈ ವರ್ಗದ ಜನರನ್ನು ಎಚ್ಐವಿ ಮತ್ತು ಏಡ್ಸ್ನ ಸೋಂಕಿಗೆ ಒಳಗಾಗುವ ಅಪಾಯ ಹೆಚ್ಚಿರುವ ವರ್ಗಕ್ಕೆ ಸೇರಿಸಿರುವುದು ಸಂವಿಧಾನದ 14, 15 ಹಾಗೂ 21ನೇ ವಿಧಿಯ ಪ್ರಕಾರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಲಿಂಗ ಹಾಗೂ ಲೈಂಗಿಕತೆ ಆಧಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ‘ನವತೇಜ್ ಜೋಹರ್’ ಮತ್ತು ‘ನಲ್ಸಾ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಈ ಮಾರ್ಗಸೂಚಿಗಳು ಉಲ್ಲಂಘಿಸುತ್ತವೆ ಎಂದು ಹೇಳಲಾಗಿತ್ತು.
ನಮ್ಮ ದೃಷ್ಟಿಯಲ್ಲಿ ಲಿಂಗ ಗುರುತಿಸುವಿಕೆ ಲೈಂಗಿಕತೆಯ ಅವಿಭಾಜ್ಯ ಅಂಗವಾಗಿದೆ. ತೃತೀಯಲಿಂಗಿಗಳನ್ನೂ ಒಳಗೊಂಡಂತೆ ಲಿಂಗ ಗುರುತಿನ ಆಧಾರದ ಮೇಲೆ ಯಾವುದೇ ನಾಗರಿಕರನ್ನು ತಾರತಮ್ಯ ಮಾಡುವುದು ಸರಿಯಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ರಕ್ತದಾನದಿಂದ ಇವರನ್ನು ಹೊರಗಿಡುವುದಕ್ಕೆ ಸರ್ಕಾರದ ವಾದವೇನು?
ತೃತೀಯಲಿಂಗಿಗಳು, ಪುರುಷರ ಜತೆ ಲೈಂಗಿಕ ಕ್ರಿಯೆ ನಡೆಸುವ ಪುರುಷರು (ಎಂಎಸ್ಎಂ) ಮತ್ತು ಲೈಂಗಿಕ ಕಾರ್ಯಕರ್ತೆಯರು ರಕ್ತದಾನ ಮಾಡುವುದನ್ನು ನಿರ್ಬಂಧಿಸಿರುವ 2017ರ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ. ಈ ಮಾರ್ಗಸೂಚಿಗಳು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿದ್ದು, ತಜ್ಞರಿಂದ ಜಾಗತಿಕವಾಗಿ ಮಾನ್ಯತೆ ಪಡೆದಿವೆ ಎಂದು ತಿಳಿಸಿದೆ.
ಯುರೋಪಿಯನ್ ರಾಷ್ಟ್ರಗಳು ಲೈಂಗಿಕವಾಗಿ ಸಕ್ರಿಯವಾಗಿರುವ ಸಲಿಂಗಕಾಮಿಗಳು ರಕ್ತದಾನ ಮಾಡುವುದನ್ನು ನಿಷೇಧಿಸಿವೆ. ಯುರೋಪಿಯನ್ ಪುರುಷರು-ಪುರುಷರೊಂದಿಗೆ ಲೈಂಗಿಕತೆ ಹೊಂದಿರುವ ಬಗ್ಗೆ ಇಂಟರ್ನೆಟ್ ಸಮೀಕ್ಷೆ ಆಧರಿಸಿ ಈ ಕ್ರಮಕೈಗೊಂಡಿವೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್ನಲ್ಲಿ ತಿಳಿಸಿದೆ. ಭಾರತದ ರಕ್ತ ವರ್ಗಾವಣೆ ವ್ಯವಸ್ಥೆಯನ್ನು ಬಲಪಡಿಸಲು ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಕ್ತದಾನ ವ್ಯವಸ್ಥೆಯ ಮೇಲೆ ನಂಬಿಕೆ ಇರಿಸಿ, ಅದನ್ನು ಬಳಕೆ ಮಾಡುವ ಜನರಲ್ಲಿ ವಿಶ್ವಾಸ ಮೂಡಿಸುವುದು ಬಹಳ ಮುಖ್ಯ. ಜೀವವೊಂದು ಸಂಕಷ್ಟದಲ್ಲಿರುವ ಸಮಯದಲ್ಲಿ ರಕ್ತದಾನ ವ್ಯವಸ್ಥೆಯ ಹೊರತು ಜನರಿಗೆ ಬೇರೆ ಆಯ್ಕೆಗಳಿರುವುದು ಕಡಿಮೆ. ಸಂಗ್ರಹಿಸಲಾದ ರಕ್ತದ ಮಾದರಿಯು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬ ಬಗ್ಗೆ ರಕ್ತದಾನ ಮಾಡುವವರು ಹಾಗೂ ರಕ್ತವನ್ನು ಪಡೆಯುವವರು ಸಂಪೂರ್ಣ ವಿಶ್ವಾಸ ಇರಿಸುವುದು ಅಗತ್ಯ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?
ರಕ್ತ ವರ್ಗಾವಣೆ ವಿಚಾರದಲ್ಲಿ ಪಾಶ್ಚಾತ್ಯ ದೇಶಗಳು ನ್ಯೂಕ್ಲಿಯಿಕ್ ಆ್ಯಸಿಡ್ ಟೆಸ್ಟಿಂಗ್ (ಎನ್ಎಟಿ) ವಿಧಾನವನ್ನು ಅನುಸರಿಸುತ್ತವೆ. ಈ ವಿಧಾನದಿಂದ, ವರ್ಗಾವಣೆಯಿಂದ ಹರಡುವ ಸೋಂಕುಗಳನ್ನು (ಟಿಟಿಐ) ಗಣನೀಯವಾಗಿ ಕಡಿಮೆ ಮಾಡಬಹುದು. ಭಾರತದಲ್ಲಿ 3,866 ರಕ್ತನಿಧಿ ಕೇಂದ್ರಗಳಲ್ಲಿ ಮಾತ್ರ ಎನ್ಎಟಿ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಈ ತಂತ್ರಜ್ಞಾನವೂ ದುಬಾರಿ. ಇದನ್ನು ನಿರ್ವಹಿಸಲು ತರಬೇತಿ ಪಡೆದ ಸಿಬ್ಬಂದಿ ಹಾಗೂ ವಿಶೇಷ ಉಪಕರಣಗಳು, ಸರಿಯಾದ ನಿರ್ವಹಣೆ ಅತ್ಯಗತ್ಯ ಎಂದು ಕೇಂದ್ರ ತಿಳಿಸಿದೆ.
ಹೈದರಾಬಾದ್: ತೆಲಂಗಾಣ (Telangana) ಮೂಲದ ಇಬ್ಬರು ತೃತೀಯಲಿಂಗಿಗಳು (Transgenders) ತಮ್ಮ ಜೀವನದಲ್ಲಿ ಹಲವಾರು ಸವಾಲುಗಳನ್ನು ಎದುರಿಸಿ, ವಿದ್ಯಾಭ್ಯಾಸ ಪೂರ್ಣಗೊಳಿಸಿ ಸರ್ಕಾರಿ ವೈದ್ಯರಾಗುವ (Doctors) ಮೂಲಕ ಹೊಸ ಇತಿಹಾಸವನ್ನೇ ಬರೆದಿದ್ದಾರೆ.
ಪ್ರಾಚಿ ರಾಥೋಡ್ ಮತ್ತು ರುತ್ ಜಾನ್ ಪಾಲ್ ಇತ್ತೀಚೆಗೆ ಸರ್ಕಾರಿ ಉಸ್ಮಾನಿಯಾ ಜನರಲ್ ಹಾಸ್ಪಿಟಲ್ (ಒಜಿಹೆಚ್)ನಲ್ಲಿ ವೈದ್ಯಕೀಯ ಅಧಿಕಾರಿಗಳಾಗಿ ಸೇರ್ಪಡೆಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ರಾಥೋಡ್ ಮಾತನಾಡಿ, ತಮ್ಮ ಬಾಲ್ಯದಿಂದಲೂ ಸಹಿಸಿಕೊಂಡು ಬಂದ ಸಾಮಾಜಿಕ ಕಳಂಕ ಹಾಗೂ ತಾರತಮ್ಯವನ್ನು ಮೆಲುಕು ಹಾಕಿದ್ದಾರೆ.
ಚಿಕ್ಕ ವಯಸ್ಸಿನಿಂದಲೇ ವೈದ್ಯರಾಗಬೇಕೆಂದು ಕನಸು ಕಂಡಿದ್ದ ರಾಥೋಡ್ 11, 12ನೇ ತರಗತಿಯಲ್ಲಿ ತಮ್ಮ ಸಹಪಾಠಿಗಳಿಂದಲೇ ಕಿರುಕುಳ, ಬೆದರಿಕೆಗೆ ಒಳಗಾಗಿದ್ದರು. ನನ್ನ ಬಾಲ್ಯ ಅತ್ಯಂತ ಕೆಟ್ಟದಾಗಿದ್ದು, ವೈದ್ಯನಾಗುವ ಬಗ್ಗೆ ಯೋಚಿಸುವುದಕ್ಕಿಂತ ಹೆಚ್ಚಾಗಿ ಜೀವನದಲ್ಲಿ ಹೇಗೆ ಬದುಕಬೇಕು, ಹೇಗೆ ಜಯಿಸಬೇಕು ಎಂಬುದೇ ದೊಡ್ಡ ಸಮಸ್ಯೆಯಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ: ಮೋದಿ ಜನಪ್ರಿಯತೆಗೆ ಕಾರಣ ಏನು? – ಜನಮನ ಗೆದ್ದ ಗುಜರಾತ್ ಮಾಡೆಲ್ ಯೋಜನೆಗಳೇನು?
ರಾಥೋಡ್ ಅವರು ಸ್ನಾತಕೋತ್ತರ ಪದವಿ ಪಡೆಯಲು ದೆಹಲಿಗೆ ಹೋಗಿದ್ದರು ಆದರೆ ಪ್ರತಿಕೂಲ ವಾತಾವರಣದಿಂದಾಗಿ ಹೈದರಾಬಾದ್ಗೆ ಅವರು ಹಿಂತಿರುಗಬೇಕಾಯಿತು. ಬಳಿಕ ಅವರು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಲೇ ಎಮರ್ಜೆನ್ಸಿ ಮೆಡಿಸಿನ್ನಲ್ಲಿ (ತುರ್ತು ಔಷಧ) ಡಿಪ್ಲೊಮಾ ಮಾಡಿದ್ದಾರೆ. ಆದರೆ ತೃತೀಯ ಲಿಂಗಿಯಾಗಿದ್ದರಿಂದ 3 ವರ್ಷಗಳ ಕಾಲ ಕೆಲಸ ಮಾಡಿಕೊಂಡು ಬಂದಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಅವರನ್ನು ತೆಗೆದುಹಾಕಲಾಗಿತ್ತು. ನನ್ನಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳ ಓಡಾಟಕ್ಕೆ ಅಡ್ಡಿಯಾಗುತ್ತಿದೆ ಎಂದು ದೂಷಿಸಲಾಗಿತ್ತು ಎಂದು ಹಳೆಯ ಕಹಿ ಕ್ಷಣಗಳನ್ನು ನೆನಪಿಸಿದ್ದಾರೆ.
ಇದೆಲ್ಲದರ ಬಳಿಕ ಸರ್ಕಾರೇತರಸಂಸ್ಥೆ (NGO) ನನ್ನ ರಕ್ಷಣೆಗೆ ಬಂದಿತ್ತು. ಎನ್ಜಿಒ ನಡೆಸುತ್ತಿದ್ದ ಕ್ಲಿನಿಕ್ನಲ್ಲಿ ಮೊದಲಿಗೆ ಕೆಲಸ ಮಾಡಿ ಬಳಿಕ ಒಜಿಹೆಚ್ನಲ್ಲಿ ಇದೀಗ ಕೆಲಸ ಪಡೆದಿರುವುದಾಗಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ: ಶಶಿಕಲಾ ಜೊಲ್ಲೆ
ತೃತೀಯಲಿಂಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರತಿಬಿಂಬಿಸಿದ ರಾಥೋಡ್ ಉದ್ಯೋಗ ಹಾಗೂ ಶಿಕ್ಷಣದಲ್ಲಿ ತಮಗೂ ಸೂಕ್ತ ಮೀಸಲಾತಿಗಳನ್ನು ಒದಗಿಸಲು ಕೇಳಿಕೊಂಡಿದ್ದಾರೆ. ನಮ್ಮನ್ನು ತೃತೀಯಲಿಂಗಿಗಳು ಎಂದು ಪ್ರತ್ಯೇಕಿಸಿರುವ ವ್ಯಕ್ತಿಯನ್ನು ನಾನು ಪ್ರಶ್ನಿಸಲು ಬಯಸುತ್ತೇನೆ. ನಾವು ತೃತೀಯಲಿಂಗಿಗಳಾದರೆ ಮೊದಲ ಹಾಗೂ ದ್ವಿತೀಯ ಲಿಂಗಿಗಳು ಯಾರು ಎಂಬುದನ್ನು ಕೇಳಲು ಬಯಸುತ್ತೇನೆ ಎಂದು ಸವಾಲು ಹಾಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಮಂಗಳಮುಖಿಯರಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಹೊರವಲಯದ ಸುರತ್ಕಲ್ ಎನ್.ಐ.ಟಿ.ಕೆ ಟೋಲ್ ಗೇಟ್ ಬಳಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಟೋಲ್ ಗೇಟ್ ತೆರವಿಗೆ ಪ್ರತಿಭಟಿಸುತ್ತಿರುವ ಆಸಿಫ್ ಎಂಬವರ ಮೇಲೆ ಹಲ್ಲೆಗೆ ಯತ್ನ. ವ್ಯಕ್ತಿಗೆ ಮಂಗಳಮುಖಿಯರು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಹಾಗೂ ಪ್ರಾಣ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ:ಮಾರ್ಚ್ನಲ್ಲಿ ಬೆಲ್ ಬಾಟಮ್ 2 ಪಕ್ಕಾ
ದೂರು ದಾಖಲಿಸಿಕೊಂಡ ಪೊಲೀಸರು ವಾಸವಿ ಗೌಡ, ಲಿಪಿಕಾ, ಹಿಮಾ, ಆದ್ಯ, ಮಾಯಾ, ಮೈತ್ರಿ ಎಂಬ 6 ಮಂದಿ ಮಂಗಳಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504(ಬೆದರಿಕೆ), 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಶ್ವದಲ್ಲೇ ಅತ್ಯುತ್ತಮವಾಗಿಸುವುದು ನಮ್ಮ ಗುರಿ: ಎನ್ ಚಂದ್ರಶೇಖರನ್
ಬಳ್ಳಾರಿ: ಮಾಜಿ ಶಾಸಕ ಸೂರ್ಯ ನಾರಾಯಣ ಅವರ ಮಗ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಹಿನ್ನೆಲೆಯಲ್ಲಿ ಮಂಗಳಮುಖಿಯರ ಮೊರೆ ಹೋಗಿದ್ದಾರೆ.
ನಾರಾ ಭರತ್ ರೆಡ್ಡಿ ಮಂಗಳಮುಖಿಯರಿಗೆ ಉಡಿತುಂಬುವ ಮೂಲಕ ವಿಶೇಷ ಪೂಜೆ ಪುರಸ್ಕಾರ ಮಾಡಿದ್ದಾರೆ. ಭರತ್ ರೆಡ್ಡಿಯವರು ಕಾಂಗ್ರೆಸ್ ಪಕ್ಷದಿಂದ ಬಳ್ಳಾರಿ ಕ್ಷೇತ್ರಕ್ಕೆ ಸ್ಪರ್ಧೆ ಮಾಡಬೇಕೆಂದು ಯೋಜನೆ ನಡೆಸಿದ್ದಾರೆ. 101 ಮಂಗಳಮುಖಿಯರಿಗೆ ಸೀರೆ, ಬೆಳ್ಳಿ ದೀಪ, ಅರಿಶಿನ ಕುಂಕುಮ ಬಟ್ಟಲು ಸೇರಿದಂತೆ ಇತ್ಯಾದಿ ವಸ್ತುಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ
ಕೇರಳ ಮೂಲದ ಜ್ಯೋತಿಷಿಗಳ ಸಲಹೆ ಮೇರೆಗೆ ಮಂಗಳ ಮುಖಿಯರಿಗೆ ಪೂಜೆ ಸಲ್ಲಿಸಿದ್ದಾರೆ. ಮಂಗಳ ಮುಖಿಯರಿಗೆ ಪೂಜೆ ಮಾಡಿದರೇ ಟಿಕೆಟ್ ಸಿಗುತ್ತದೆ ಹಾಗೂ ನೀವು ಚುನಾವಣೆಯಲ್ಲಿ ಗೆಲ್ಲಬಹುದು ಎನ್ನುವ ನಂಬಿಕೆಯಿದೆ ಎಂದು ಸಲಹೆ ನೀಡಿದ್ದರು. ಇನ್ನೂ ಚುನಾವಣೆಗೆ ಒಂದುವರೆ ವರ್ಷ ಇರುವಾಗಲೇ ಚುನಾವಣೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ: ಅನುಮಾನಾಸ್ಪದ ರೀತಿಯಲ್ಲಿ ಮಂಗಳಮುಖಿ ಪೂಜಾರಿ ಹಾಗೂ ಪೂಜಾರಿ ಶಿಷ್ಯ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಬಳಿಯ ಗುಟ್ಟಹಳ್ಳಿಯಲ್ಲಿ ನಡೆದಿದೆ.
ಅಂದಹಾಗೆ ಬನಹಳ್ಳಿ ನಿವಾಸಿ ಶ್ರೀಧರ್ ಮಂಗಳಮುಖಿಯಾಗಿದ್ದು, 10-12 ವರ್ಷಗಳ ಹಿಂದೆ ಗುಟ್ಟಹಳ್ಳಿಗೆ ಬಂದು ಚಿಕ್ಕ ಗುಡಿಯನ್ನು ಕಟ್ಟಿಕೊಂಡಿದ್ದರು. ತಮಗೆ ಮೈ ಮೇಲೆ ದೇವರು ಬರುತ್ತೆ ಅಂತ ದೇವಾಲಯಕ್ಕೆ ಬರುವ ಭಕ್ತರ ಕಷ್ಟಗಳನ್ನು ಕೇಳಿ ಪರಿಹಾರಗಳನ್ನು ಕೊಡುತ್ತಿದ್ದರಂತೆ. ಹೀಗೆ ಗುಟ್ಟಹಳ್ಳಿ ಸೇರಿದಂತೆ ಸುತ್ತ ಮುತ್ತಲು ಅಪಾರ ಭಕ್ತರನ್ನು ಹೊಂದಿದ್ದ ಶ್ರೀಧರ್ ಅಮ್ಮ ಅಂತಲೇ ಕೆರೆಸಿಕೊಳ್ಳುತ್ತಿದ್ದರು. ಆದರೆ ಕಳೆದ ರಾತ್ರಿ ಅದೇನಾಯ್ತೋ ಏನೋ ಪೂಜಾರಿ ಶ್ರೀಧರ್ ಹಾಗೂ ಲಕ್ಷೀಪತಿ ಇಬ್ಬರು ಸಾವನ್ನಪ್ಪಿದ್ದಾರೆ.
ಶ್ರೀ ಕ್ಷೇತ್ರ ಕೈವಾರ ಪಕ್ಕದ ಗುಟ್ಟಹಳ್ಳಿ ಬಳಿ ಘಟನೆ ನಡೆದಿದ್ದು, ಅಮ್ಮನ ಅಪಾರ ಭಕ್ತರು ಕಣ್ಣಿರುಡುತ್ತಿದ್ದಾರೆ. ಇನ್ನೂ ಈ ಶ್ರೀಧರ್ ಆಲಿಯಾಸ್ ಅಮ್ಮ ಪ್ರತಿನಿತ್ಯ ದೇವಾಲಯದಲ್ಲಿ ಅನ್ನದಾನ ಸೇರಿದಂತೆ ಭಕ್ತರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದರಂತೆ. ಕೊರೊನಾ ಸಮಯದಲ್ಲಿ ಚಿಂತಾಮಣಿ ನಗರದಲ್ಲಿ ಹಲವರಿಗೆ ಅನ್ನದಾನ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ಮಾಡಿ ಗುರುತಿಸಿಕೊಂಡಿದ್ದರು. ಸದ್ಯ ಘಟನೆ ನಂತರ ಪೊಲೀಸರು ಆಗಮಿಸಿ ಇಬ್ಬರ ಮೃತದೇಹಗಳನ್ನ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಇಬ್ಬರು ಆತ್ಯಹತ್ಯೆ ಮಾಡಿಕೊಂಡರಾ ಇಲ್ಲಾ ಯಾರಾದರೂ ಕೊಲೆ ಮಾಡಿದ್ದರಾ ಈ ಬಗ್ಗೆ ಪೊಲೀಸರ ತನಿಖೆಯಿಂದ ಸತ್ಯಾಂಶ ತಿಳಿಯಬೇಕಿದೆ. ಇದನ್ನೂ ಓದಿ: ನಮ್ಮ ಕುಟುಂಬಕ್ಕೆ MLC ಟಿಕೆಟ್ ಕೊಡಬೇಕು ಅಂತ ಹೇಳಿಲ್ಲ, ಕೇಳಿಲ್ಲ: ಪ್ರಜ್ವಲ್ ರೇವಣ್ಣ
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಮಿಥುನ್ ಕುಮಾರ್, ಡೆತ್ ನೋಟ್ ಸಿಕ್ಕಿದ್ದು ಡೆತ್ ನೋಟ್ ಆಧರಿಸಿ ತನಿಖೆ ನಡೆಸುತ್ತಿದ್ದೇವೆ. ಇಬ್ಬರ ಕುತ್ತಿಗೆಗಳ ಮೇಲೆ ಮಾರ್ಕ್ ಇದ್ದು ಆತ್ಮಹತ್ಯೆ ಎಂಬ ಸಾಧ್ಯತೆ ಇದ್ದರೂ ಅನುಮಾನಸ್ಪದ ಪ್ರಕರಣ ಅಂತಲೇ ಪರಿಗಣಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಲಕ್ನೋ: ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಉತ್ತರ ಪ್ರದೇಶದ ಖುಷಿನಗರ್ ಜಿಲ್ಲೆಯ ಫಜೀಲ್ ನಗರದಲ್ಲಿ ವಿಶ್ವವಿದ್ಯಾಲಯ ಪ್ರಾರಂಭವಾಗಲಿದೆ.
ಒಂದನೇ ತರಗತಿಯಿಂದ ಉನ್ನತ ವ್ಯಾಸಂಗದವರೆಗೂ ಪ್ರಪ್ರಥಮವಾಗಿ ವಿವಿ ಪ್ರಾರಂಭವಾಗಲಿದ್ದು, ಅಲ್ ಇಂಡಿಯಾ ಟ್ರಾನ್ಸ್ ಜೆಂಡರ್ಸ್ ಎಜುಕೇಷನ್ ಸರ್ವಿಸ್ ಟ್ರಸ್ಟ್ ಈ ವಿವಿ ಪ್ರಾರಂಭ ಮಾಡುತ್ತಿದೆ.
2020 ಜನವರಿ 15ಕ್ಕೆ ಲೈಂಗಿಕ ಅಲ್ಪ ಸಂಖ್ಯಾತ ಸಮುದಾಯದಲ್ಲಿ ಬೆಳೆದ ಇಬ್ಬರ ದಾಖಲಾತಿ ನಡೆಯಲಿದೆ. ಫೆಬ್ರವರಿ, ಮಾರ್ಚ್ ವೇಳೆಗೆ ಎಲ್ಲ ತರಗತಿಗಳು ಪ್ರಾರಂಭವಾಗಲಿವೆ. ಉನ್ನತ ವ್ಯಾಸಂಗ ಮುಗಿಸಿ ಪಿಎಚ್ಡಿ ರಿಸರ್ಚ್ ಮಾಡಿ ಡಾಕ್ಟರೇಟ್ ಸಹ ಪಡೆಯಬಹುದಾಗಿದೆ. ಶಿಕ್ಷಣ ಮುಗಿಸಿ ತಮ್ಮ ಸಮುದಾಯಕ್ಕೆ ಹೊಸ ದಾರಿಯನ್ನು ಹಾಕಿಕೊಡಲಿದ್ದಾರೆ ಎಂದು ಟ್ರಸ್ಟ್ ಹೇಳಿದೆ.
ಈ ಬೃಹತ್ ಯೋಜನೆಗೆ ದೇಶದ ಲೈಂಗಿಕ ಅಲ್ಪಸಂಖ್ಯಾತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಶಿಕ್ಷಣ ಪಡೆದು ಸಮಾಜದಲ್ಲಿ ಗೌರವವನ್ನು ಹೆಚ್ಚು ಮಾಡಿಕೊಳ್ಳಲಿದ್ದೇವೆ ಎನ್ನುವ ಮನಸ್ಥಿತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿದ್ದಾರೆ. ಒಬ್ಬರು ಶಿಕ್ಷಿತರಾದರೆ ಹಲವರನ್ನು ಶಿಕ್ಷಣದ ಕಡೆ ಸೆಳೆಯಬಹುದು. ಇದರಿಂದ ಸಮುದಾಯದ ಅಭಿವೃದ್ಧಿ ಆಗುತ್ತದೆ ಎನ್ನುವ ಆಲೋಚನೆಯನ್ನಿಟ್ಟುಕೊಂಡು ಟ್ರಸ್ಟ್ ಈ ವಿವಿಯನ್ನು ಆರಂಭಿಸುತ್ತಿದೆ.
ಬೆಂಗಳೂರು: ಕೊಲೆ ಪ್ರಯತ್ನ ಮಾಡಿದ್ದ 12 ಜನ ಮಂಗಳಮುಖಿಯರನ್ನು ಸಿಲಿಕಾನ್ ಸಿಟಿಯ ಆರ್.ಎಂ.ಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
ಸುಮಿತ್ರ, ರೇಣುಕಾ ಮತ್ತು ಬಬ್ಲು ಸೇರಿ 12 ಜನ ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ 12 ಜನ ಮಂಗಳಮುಖಿಯರ ಗ್ಯಾಂಗ್ ವಾಣಿಶ್ರೀ ಮತ್ತು ಪ್ರೀತಿ ಎಂಬ ಮಂಗಳಮುಖಿಯರ ಗ್ಯಾಂಗ್ ಮೇಲೆ ಆಟ್ಯಾಕ್ ಮಾಡಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದರು.
ದೀಪಾವಳಿ ಹಬ್ಬದ ಕಲೆಕ್ಷನ್ ವಿಚಾರವಾಗಿ ಶ್ರೀರಾಂಪುರದಿಂದ ಆರ್.ಎಂ.ಸಿ ಯಾರ್ಡ್ ಗೆ ಬಂದಿದ್ದ ಸುಮಿತ್ರ ಗುಂಪು ಜನರ ಬಳಿ ದಬ್ಬಾಳಿಕೆಯಿಂದ ಹೆಚ್ಚಿನ ಹಣ ಕಲೆಕ್ಷನ್ ಮಾಡುತ್ತಿದ್ದರು. ಇದನ್ನು ತಿಳಿದ ವಾಣಿಶ್ರೀ ಮತ್ತು ಗುಂಪು ನಮ್ಮ ಏರಿಯಾಗೆ ಬಂದು ಹಣ ಕಲೆಕ್ಟ್ ಮಾಡಬೇಡಿ ಎಂದಿದ್ದರು. ಈ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.
ಈ ಘಟನೆಯ ನಂತರ ವಾಪಾಸ್ ಹೋದ ಸುಮಿತ್ರ ಟೀಂ ಮತ್ತೆ ಅವರ ಏರಿಯಾದಿಂದ ಗುಂಪಿನ ಸದಸ್ಯರನ್ನು ಕರೆದುಕೊಂಡು ಬಂದು ವಾಣಿಶ್ರೀ ಮತ್ತು ಪ್ರೀತಿ ಇದ್ದ ಜಾಗಕ್ಕೆ ಹೋಗಿ ಹಲ್ಲೆ ಮಾಡಿ ಚಾಕುವಿನಿಂದ ಕೊಲೆಗೆ ಯತ್ನಿಸಿದ್ದರು. ಬಳಿಕ ವಾಣಿಶ್ರೀ ಗುಂಪಿನ ಸದಸ್ಯರ ಕೂದಲು ಕಟ್ ಮಾಡಿ ವಿಕೃತಿ ಮೆರೆದು ಎಸ್ಕೇಪ್ ಆಗಿದ್ದರು.
ಈ ವಿಚಾರವಾಗಿ ವಾಣಿಶ್ರೀ ಮತ್ತು ಗುಂಪು ನಮ್ಮ ಮೇಲೆ ಕೊಲೆ ಪ್ರಯತ್ನ ನಡೆದಿದೆ ಎಂದು ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ವಿಚಾರವಾಗಿ 12 ಜನ ಮಂಗಳಮುಖಿಯರನ್ನು ಆರ್.ಎಂ.ಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.