Tag: transport department

  • ಕೊರೊನಾ ಭೀತಿ – ಸಾರಿಗೆ ಇಲಾಖೆಗೆ 28ಲಕ್ಷ ರೂ. ಅಧಿಕ ನಷ್ಟ

    ಕೊರೊನಾ ಭೀತಿ – ಸಾರಿಗೆ ಇಲಾಖೆಗೆ 28ಲಕ್ಷ ರೂ. ಅಧಿಕ ನಷ್ಟ

    – ಕಲಬುರಗಿ ಮಾರ್ಗದ ಬಸ್‍ಗಳು ಖಾಲಿ

    ರಾಯಚೂರು: ಕೊರೊನಾ ಎಲ್ಲೆಡೆ ಭೀತಿ ಹುಟ್ಟಿಸಿರುವ ಜೊತೆಗೆ ಆರ್ಥಿಕತೆಯ ಹೊಡೆತವನ್ನು ಕೊಟ್ಟಿದೆ. ಸಾರಿಗೆ ಇಲಾಖೆಯಂತೂ ಎಂದು ಕಂಡರಿಯದ ನಷ್ಟವನ್ನು ಈಗ ಅನುಭವಿಸುತ್ತಿದೆ.

    ರಾಯಚೂರಿನಲ್ಲಿ ಜನರಿಲ್ಲದೆ ಬಸ್‍ಗಳ ಸಂಚಾರವೇ ವಿರಳವಾಗಿದೆ. ಕಳೆದ ಆರು ದಿನಗಳಲ್ಲಿ ರಾಯಚೂರು ವಿಭಾಗಕ್ಕೆ 28 ಲಕ್ಷ ರೂ. ಅಧಿಕ ನಷ್ಟವಾಗಿದೆ ಎಂದು ರಾಯಚೂರು ವಿಭಾಗೀಯ ನಿಯಂತ್ರಕ ಅಧಿಕಾರಿ ಎಂ ವೆಂಕಟೇಶ ಹೇಳಿದ್ದಾರೆ.

    ಕಲಬುರಗಿಯಲ್ಲಿ ಒಂದು ಸಾವು ಹಾಗೂ ಇಬ್ಬರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜನ ಇನ್ನಷ್ಟು ಭಯಭೀತರಾಗಿದ್ದಾರೆ. ವಿಭಾಗದಿಂದ ದಿನವೊಂದಕ್ಕೆ ಸರಾಸರಿ 30 ಬಸ್‍ಗಳ ಸಂಚಾರ ರದ್ದಾಗಿದ್ದು, ದಿನಕ್ಕೆ 100 ಟ್ರಿಪ್ ಬಸ್ ಸಂಚಾರ ಕಡಿತವಾಗಿದೆ. ಶ್ರೀಶೈಲ ಜಾತ್ರೆ ಹಿನ್ನೆಲೆಯಲ್ಲಿ 55 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕೇವಲ 15 ಬಸ್‍ಗಳಲ್ಲಿ ಮಾತ್ರ ಜನ ಸಂಚಾರ ಮಾಡುತ್ತಿದ್ದಾರೆ.

    ರಾಯಚೂರು ಜಿಲ್ಲೆಯ 8 ಡಿಪೋಗಳಲ್ಲಿ ಒಟ್ಟು 660 ಬಸ್‍ಗಳು ಓಡಾಡುತ್ತಿವೆ. ಕಲಬುರಗಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ನಂತರ ಜನರು ಬಸ್ ಸಂಚಾರ ಮಾಡುತ್ತಿಲ್ಲ ಎಂದು ಸಾರಿಗೆ ಇಲಾಖೆ ವಿಭಾಗೀಯ ನಿಯಂತ್ರಕ ಎಂ. ವೆಂಕಟೇಶ್ ತಿಳಿಸಿದ್ದಾರೆ.

  • ‘ಸಿಎಂ ಅಂಕಲ್ ಪ್ಲೀಸ್, ನನ್ನ ಅಪ್ಪನನ್ನು ಸರ್ಕಾರಿ ನೌಕರನನ್ನಾಗಿ ಮಾಡಿ’

    ‘ಸಿಎಂ ಅಂಕಲ್ ಪ್ಲೀಸ್, ನನ್ನ ಅಪ್ಪನನ್ನು ಸರ್ಕಾರಿ ನೌಕರನನ್ನಾಗಿ ಮಾಡಿ’

    – ಸಾರಿಗೆ ನಿಗಮದ ನೌಕರರ ಮಕ್ಕಳಿಂದ ಮನವಿ

    ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರನ್ನು, ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಸಾರಿಗೆ ನೌಕರರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಡಿ.27 ರಂದು ಬೆಂಗಳೂರಲ್ಲಿ ಭಿತ್ತಿಪತ್ರವನ್ನು ಬೃಹತ್ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

    ಸರ್ಕಾರ ಈ ಬಗ್ಗೆ ವರದಿ ಸಲ್ಲಿಸಲು ಸಮಿತಿ ರಚಿಸಿದ್ದರೂ ಇದುವರೆಗೆ ಯಾವುದೇ ಉತ್ತರ ಸರ್ಕಾರದಿಂದ ಬಂದಿಲ್ಲ. ಹೀಗಾಗಿ ಸರ್ಕಾರದ ಕಲ್ಲೆದೆಯನ್ನು ಕರಗಿಸಲು ಸಾರಿಗೆ ನೌಕರರು ಮುಂದಾಗಿದ್ದು, ಮಕ್ಕಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದಾರೆ.

     

    ದಯವಿಟ್ಟು ನಮ್ಮಪ್ಪನನ್ನು ಸರ್ಕಾರಿ ನೌಕರನಾಗಿ ಮಾಡಿ ಪುಣ್ಯ ಕಟ್ಕೊಳ್ಳಿ ಮುಖ್ಯಮಂತ್ರಿ ಸಾಹೇಬ್ರೇ ಎಂದು ವಾಟ್ಸಪ್, ಫೇಸ್ ಬುಕ್ ಗಳಲ್ಲಿ ಸಾರಿಗೆ ನೌಕರರ ಮಕ್ಕಳು ತಮ್ಮ ಕಷ್ಟಗಳನ್ನು ಹೇಳಿಕೊಳ್ಳುವ ಕೆಲಸಕ್ಕೆ ಕೈ ಹಾಕಿದ್ದಾರೆ.

     ತಮ್ಮ ಮನೆ ನಡೆಸಲು ತಮ್ಮ ತಂದೆ ಎಷ್ಟು ಕಷ್ಟ ಪಡುತ್ತಾರೆ ಎಂಬುದನ್ನು ತಮ್ಮ ತೊದಲು ನುಡಿಗಳಲ್ಲಿ ಹೇಳಿದ್ದಾರೆ. ಈ ಮಕ್ಕಳ ಕಷ್ಟಕ್ಕೆ ಸಿಎಂ ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಯಾವ ರೀತಿ ಸ್ಪಂದಿಸತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

  • ಲೋಕಸಮರದ ಬಳಿಕ ಬಸ್ ಪ್ರಯಾಣಿಕರಿಗೆ ಶಾಕ್!

    ಲೋಕಸಮರದ ಬಳಿಕ ಬಸ್ ಪ್ರಯಾಣಿಕರಿಗೆ ಶಾಕ್!

    ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಲೋಕಸಭೆ ಚುನಾವಣೆ ಬಳಿಕ ಬಸ್ ಟಿಕೆಟ್ ದರ ಹೆಚ್ಚಳ ಕುರಿತು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗುತ್ತಿದೆ. ಹೀಗಾಗಿ ಟಿಕೆಟ್ ದರ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಆದರೆ ಚುನಾವಣೆ ಮುಗಿಯುವವರೆಗೂ ಪ್ರಯಾಣ ದರ ಏರಿಕೆ ಬೇಡ ಎಂದು ಸಿಎಂ ಹೇಳಿದ್ದಾರೆ ಎಂದರು. ಈ ಮೂಲಕ ಲೋಕಸಭೆ ಚುನಾವಣೆ ಬಳಿಕ ಬಸ್ ಪ್ರಯಾಣ ದರ ಹೆಚ್ಚಳ ಖಚಿತ ಎಂಬ ಸುಳಿವನ್ನು ನೀಡಿದರು.

    ಇದೇ ವೇಳೆ ಬಾಡಿಗೆಯಲ್ಲಿ ಎಲೆಕ್ಟ್ರಿಕ್ ಬಸ್ ಖರೀದಿ ಪ್ರಸ್ತಾಪ ಕೈ ಬಿಟ್ಟಿರುವುದಾಗಿ ಸ್ಪಷ್ಟನೆ ನೀಡಿದರು. ಎಲೆಕ್ಟ್ರಿಕ್ ಬಸ್ ಖರೀದಿಗೆ ಸರ್ಕಾರ ಅನುಮತಿಯೇ ಕೊಟ್ಟಿರಲಿಲ್ಲ. ಹಿಂದಿನ ಸರ್ಕಾರದ ಅಧಿಕಾರಿಗಳು ಎಲೆಕ್ಟ್ರಿಕ್ ಬಸ್ ಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಬಾಡಿಗೆಯಲ್ಲಿ ಎಲೆಕ್ಟ್ರಿಕ್ ಬಸ್ ಖರೀದಿಗೆ ನನ್ನ ವಿರೋಧ ಇತ್ತು. ನಾನು ಸ್ವತಃ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ನಾವೇ ಎಲೆಕ್ಟ್ರಿಕ್ ಬಸ್ ಖರೀದಿ ಮಾಡಿದರೆ ನಮಗೆ ಹೆಚ್ಚು ಅನುಕೂಲ ಆಗುತ್ತೆ ಈ ಪ್ರಸ್ತಾಪ ಕೈ ಬಿಟ್ಟಿದ್ದೇವೆ. ನಾವೇ 80 ಬಸ್ ಖರೀದಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಇಲಾಖೆಯಲ್ಲಿ ಇರುವ ಹಳೆ ಬಸ್ ಬದಲಾವಣೆ ಮಾಡಲು ಹೊಸ ಬಸ್ ಖರೀದಿಗೆ ನಿರ್ಧಾರ ಮಾಡಿದ್ದೇವೆ. 3 ಸಾವಿರ ಕೆಎಸ್‍ಆರ್ ಟಿಸಿ, ಬಿಎಂಟಿಸಿ ಬಸ್ ಖರೀದಿ ಮಾಡುತ್ತಿದ್ದೇವೆ. 7 ಲಕ್ಷ ಕಿಲೋಮೀಟರ್ ಓಡಿರುವ ಬಸ್ ಗಳನ್ನ ಬದಲಾವಣೆ ಮಾಡಲಾಗುತ್ತೆ. ಹಳೆ ಬಸ್ ಗಳ ಬದಲಾವಣೆ ಮಾಡಿ ಮತ್ತಷ್ಟು ಸುಸ್ಥಿತಿಯಲ್ಲಿ ಬಸ್ ಸೇವೆ ಸಾರ್ವಜನಿಕರಿಗೆ ಒದಗಿಸುತ್ತೇವೆ ಎಂದರು. ಅಲ್ಲದೇ ಆರ್ ಟಿಓ ಹುದ್ದೆಗಳು ಖಾಲಿ ಇದ್ದು, ಹೊಸ ನೇಮಕಾತಿಗೆ ಕೇಂದ್ರ ಸರ್ಕಾರದ ಕಾಯ್ದೆ ಅಡ್ಡಿ ಇದೆ. ಚುನಾವಣೆ ಆದ ಬಳಿಕ ಕಾಯ್ದೆಗೆ ಒಂದಿಷ್ಟು ಬದಲಾವಣೆ ತಂದು ನಮ್ಮ ಇಲಾಖೆಯೆ ಆರ್ ಟಿಓ ನೇಮಕಾತಿ ಮಾಡಿಕೊಳ್ಳುತ್ತೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಧನ ದರ ಏರಿಕೆ ಇಳಿಕೆ ಆಗುವಂತೆ 3 ತಿಂಗ್ಳಿಗೊಮ್ಮೆ ಬಸ್ ಪ್ರಯಾಣ ದರ ನಿಗದಿ: ಡಿಸಿ ತಮ್ಮಣ್ಣ

    ಇಂಧನ ದರ ಏರಿಕೆ ಇಳಿಕೆ ಆಗುವಂತೆ 3 ತಿಂಗ್ಳಿಗೊಮ್ಮೆ ಬಸ್ ಪ್ರಯಾಣ ದರ ನಿಗದಿ: ಡಿಸಿ ತಮ್ಮಣ್ಣ

    ಬೆಂಗಳೂರು: ದೇಶದಲ್ಲಿ ಇಂಧನ ದರ ಏರಿಕೆ ಇಳಿಕೆ ಆಗುವಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಬಸ್ ಪ್ರಯಾಣ ದರ ನಿಗದಿ ಮಾಡುವ ಹೊಸ ಯೋಚನೆಯನ್ನು ಸಾರಿಗೆ ಇಲಾಖೆ ಮಾಡಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ರಾಜ್ಯದಲ್ಲಿ ಸದ್ಯ 5 ವರ್ಷಗಳಿಗೊಮ್ಮೆ ಪ್ರಯಾಣ ದರ ಏರಿಕೆ ಮಾಡುವ ಪದ್ಧತಿ ಇದ್ದು, ಇದರ ಬದಲು ಇಂಧನ ದರಕ್ಕೆ ಅನುಗುಣವಾಗಿ ಬಸ್ ಪ್ರಯಾಣ ದರ ನಿಗದಿ ಮಾಡುವಂತೆ ಸಿಎಂ ಕುಮಾರಸ್ವಾಮಿ ಅವರೇ ಸಲಹೆ ಕೊಟ್ಟಿದ್ದಾರೆ. ಸಿಎಂ ಕೊಟ್ಟ ದರ ಪರಿಷ್ಕರಣೆ ಸಲಹೆಯನ್ನೇ ಈಗ ಅವರಿಗೆ ಮನವಿ ರೂಪದಲ್ಲಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ಹಳ್ಳಿಗಳಿಗೂ ಐಷಾರಾಮಿ ಬಸ್:
    ಹಳೆ ಬಸ್‍ಗಳನ್ನು ಕೊಟ್ಟು ಹೊಸ ಬಸ್‍ಗಳ ಖರೀದಿಗೆ ಸಾರಿಗೆ ಇಲಾಖೆ ಮುಂದಾಗಿದ್ದು, ಸ್ಲೀಪರ್ ಕೋಚ್, ಲಕ್ಷುರಿ ಬಸ್ ಸೇರಿ ಒಟ್ಟು 3 ಸಾವಿರ ಬಸ್ ಖರೀದಿಗೆ ನಿರ್ಧರಿಸಲಾಗಿದೆ. ಕೆಲ ಹಳ್ಳಿಗಳಲ್ಲಿನ ಜನ ನಮಗೆ ಹಳೆಯ ಬಸ್ ನೀಡುತ್ತೀರಾ ಎಂದು ಪ್ರಶ್ನೆ ಮಾಡಿದ್ದು, ಹಾಗಾಗಿ ಈಗ ಖರೀದಿ ಮಾಡುವ ಹೊಸ ಬಸ್‍ಗಳಲ್ಲಿ ಕೆಲವುಗಳನ್ನು ಹಳ್ಳಿಗಳಿಗೆ ಕಳುಹಿಸುವ ಯೋಚನೆ ಇದೆ ಎಂದು ಸಚಿವರು ತಿಳಿಸಿದರು.

    ರಾಜ್ಯ ಸಾರಿಗೆ ಇಲಾಖೆ ನಷ್ಟದಲ್ಲಿರೋವುದು ಅಧಿಕಾರಿಗಳ ಅವ್ಯವಹಾರದಿಂದ ಹೊರತು ಕಡಿಮೆ ಆದಾಯದಿಂದಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಅಧಿಕಾರಿಗಳನ್ನ ಸಸ್ಪೆಂಡ್ ಮಾಡಲಾಗಿದೆ. ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದೇವೆ. ನಾಲ್ಕೂ ನಿಗಮಗಳಲ್ಲೂ ಅಕ್ರಮ ನಡೆಯುತ್ತಿದೆ. ಸಾರಿಗೆ ಇಲಾಖೆ ನಷ್ಟ ಅನುಭವಿಸಲು ಅಕ್ರಮಗಳೇ ಕಾರಣವಾಗಿದೆ ಎಂದು ದೂರಿದ್ದಾರೆ. ಅಲ್ಲದೇ ಯಾರೇ ಅಕ್ರಮ ಮಾಡಿದರು ಸುಮ್ಮನೇ ಬಿಡಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

    ಜೆಡಿಎಸ್ ಪಕ್ಷದ ನಾಯಕರುಗಳಿಗೆ ಕಾಂಗ್ರೆಸ್ ಜೊತೆಗಿನ ಮೈತ್ರಿ ಸಮಾಧಾನ ತಂದಿಲ್ಲ. ಬದಲಾಗಿ ಅಡ್ಜಸ್ಟ್ ಮೆಂಟ್ ಮಾಡಿಕೊಂಡು ಹೋಗುತ್ತಿದ್ದೇವೆ ಎಂಬ ರೀತಿಯಲ್ಲಿ ಸಚಿವರು ಹೇಳಿದ್ದು. ಅಡ್ಜಸ್ಟ್ ಮೆಂಟ್ ರಾಜಕೀಯ ಇದ್ದರೆ ಮಾತ್ರಾ ಎಲ್ಲಾ ಸುಗಮವಾಗಿ ನಡೆಯುತ್ತೆ, ಸರ್ಕಾರ ನಡೆಯಬೇಕಾದರೆ ಹೊಂದಿಕೊಂಡು ಹೋಗುವುದು ಅನಿವಾರ್ಯ, ವಾಜಪೇಯಿ ಇಪ್ಪತ್ತಮೂರು ಪಕ್ಷಗಳ ಜೊತೆ ಹೊಂದಿಕೊಂಡು ಸರ್ಕಾರ ನಡೆಸಿರಲಿಲ್ವಾ. ಅಂತೆಯೇ ಸಿಎಂ ಎಚ್‍ಡಿಕೆ ಅವರು, ಹೊಂದಿಕೊಂಡು ಹೋಗಬೇಕಿದೆ ಅಷ್ಟೇ ಎಂದು ಹೇಳಿದರು. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಏನಾದರು ಸಮಸ್ಯೆ ಆಗುತ್ತಿದ್ದೇಯಾ ಎಂಬ ಪ್ರಶ್ನೆಗೆ, ಅದನ್ನೆಲ್ಲಾ ಹೇಳೋಕೆ ಆಗಲ್ಲ ಎಂದು ಪರೋಕ್ಷವಾಗಿ ಸಮಸ್ಯೆ ಆಗುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2019ರ ಜುಲೈ ತಿಂಗಳಿನಿಂದ ಕಾರುಗಳಲ್ಲಿ ಚೈಲ್ಡ್ ಲಾಕ್ ಇರಲ್ಲ!

    2019ರ ಜುಲೈ ತಿಂಗಳಿನಿಂದ ಕಾರುಗಳಲ್ಲಿ ಚೈಲ್ಡ್ ಲಾಕ್ ಇರಲ್ಲ!

    ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ 2019ರ ಜುಲೈ ತಿಂಗಳಿಂದ ಎಲ್ಲಾ ವಾಣಿಜ್ಯ ಬಳಕೆಯ ಪ್ರಯಾಣಿಕರ ವಾಹನಗಳಲ್ಲಿರುವ ಚೈಲ್ಡ್ ಲಾಕ್ ತೆಗೆಯುವಂತೆ ವಾಹನ ಉತ್ಪಾದಕಾ ಸಂಸ್ಥೆಗಳಿಗೆ ಸೂಚನೆ ನೀಡಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿಗಳು, 2019ರ ಜುಲೈ ತಿಂಗಳಿಂದ ಎಂ 1 ವಿಭಾಗದಲ್ಲಿ ಬರುವ ವಾಣಿಜ್ಯ ಬಳಕೆಯ ಎಂಟು ಆಸನಗಳನ್ನು ಒಳಗೊಂಡಿರುವ ಎಲ್ಲಾ ಪ್ರಯಾಣಿಕ ವಾಹನಗಳಲ್ಲಿರುವ ‘ಚೈಲ್ಡ್ ಲಾಕಿಂಗ್’ ವ್ಯವಸ್ಥೆಯನ್ನು ಕಡ್ಡಾಯವಾಗಿ ತೆಗೆದು ಹಾಕಬೇಕು. ಈ ವ್ಯವಸ್ಥೆ ಉತ್ತಮವಾಗಿದ್ದರೂ, ಕಾರಿನಲ್ಲಿ ಇವುಗಳನ್ನು ಲಾಕ್ ಮಾಡಿ, ಅಪರಾಧ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೇ ವಿಶೇಷವಾಗಿ ಮಹಿಳಾ ಪ್ರಯಾಣಿಕರು ಪ್ರಯಾಣಿಸುವಾಗ ಸಾಕಷ್ಟು ಅಪರಾಧ ಪ್ರಕರಣಗಳು ದಾಖಲಾಗಿದೆ ಎಂದು ಹೇಳಿದ್ದಾರೆ.

    ಮಾಹಿತಿಗಳ ಪ್ರಕಾರ ವಾಣಿಜ್ಯ ಬಳಕೆಯ ಕಾರುಗಳಲ್ಲಿ ಚೈಲ್ಡ್ ಲಾಕ್ ಸೇಫ್ಟಿ ವ್ಯವಸ್ಥೆಯನ್ನು ತೆಗೆದು ಹಾಕುವ ಬಗ್ಗೆ ರಸ್ತೆ ಸಾರಿಗೆ ಇಲಾಖೆ ಕಳೆದ ಒಂದು ವರ್ಷದಿಂದ ಚರ್ಚೆ ನಡೆಸುತ್ತಾ ಬಂದಿತ್ತು. ಅಲ್ಲದೇ ಈ ಲಾಕಿಂಗ್ ವ್ಯವಸ್ಥೆಯನ್ನು ಬಳಸಿಕೊಂಡು ಕಾರುಗಳಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದವು. ಈ ಲಾಕಿಂಗ್ ವ್ಯವಸ್ಥೆ ಉಪಯೋಗಕ್ಕಿಂತ ಇದರ ದುರುಪಯೋಗವೇ ಹೆಚ್ಚಾಗಿತ್ತು. ಅಲ್ಲದೇ 2017ರಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನೊಬ್ಬ ಚೈಲ್ಡ್ ಲಾಕ್ ಮಾಡಿ, ಮಹಿಳಾ ಪ್ರಯಾಣಿಕರನ್ನು ಕ್ಯಾಬ್ ನಲ್ಲೇ ಕೂಡಿ ಹಾಕಿ, ದೌರ್ಜನ್ಯ ಎಸಗಿದ್ದ. ದುರುಪಯೋಗ ಆಗುತ್ತಿದ್ದಂತೆ ಎಲ್ಲಾ ವಾಣಿಜ್ಯ ಬಳಕೆಯ ಕಾರುಗಳನ್ನು ಉತ್ಪಾದಿಸುವ ಸಂಸ್ಥೆಗಳಿಗೆ ತಮ್ಮ ತಮ್ಮ ಕಾರುಗಳಲ್ಲಿರುವ ಚೈಲ್ಡ್ ಲಾಕಿಂಗ್ ವ್ಯವಸ್ಥೆಯನ್ನು ತೆಗೆದುಹಾಕಲು ಆದೇಶಿಸಿದೆ.

    ಯಾವುದೇ ಕಾರುಗಳಲ್ಲಿ ಚಾಲಕನ ಆಸನವನ್ನು ಬಿಟ್ಟು ಒಂದರಿಂದ ಎಂಟು ಆಸನಗಳನ್ನು ಹೊಂದಿರುವ ಎಲ್ಲಾ ಮಾದರಿ ಪ್ರಯಾಣಿಕರ ವಾಣಿಜ್ಯ ಬಳಕೆಯ ವಾಹನಗಳು ಎಂ 1 ವಿಭಾಗದಲ್ಲಿ ಬರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಮಾರಣ್ಣನಿಂದ ಮಾತ್ರ ನನ್ನ ಸಮಸ್ಯೆ ಬಗೆಹರಿಸಲು ಸಾಧ್ಯ – ನಡುರಸ್ತೆಯಲ್ಲಿ ಹೈಡ್ರಾಮ ಸೃಷ್ಟಿಸಿದ ಮಹಿಳೆ

    ಕುಮಾರಣ್ಣನಿಂದ ಮಾತ್ರ ನನ್ನ ಸಮಸ್ಯೆ ಬಗೆಹರಿಸಲು ಸಾಧ್ಯ – ನಡುರಸ್ತೆಯಲ್ಲಿ ಹೈಡ್ರಾಮ ಸೃಷ್ಟಿಸಿದ ಮಹಿಳೆ

    ಹಾಸನ: ತನ್ನ ಸಮಸ್ಯೆಗೆ ಕುಮಾರಣ್ಣನಿಂದ ಮಾತ್ರ ಪರಿಹಾರ ನೀಡಲು ಸಾಧ್ಯ ಎಂದು ಪತ್ರ ಬರೆದಕೊಂಡಿರುವ ಮಹಿಳೆಯೊಬ್ಬರು ಮಾನಸಿಕ ಅಸ್ವಸ್ಥೆಯಂತೆ ವರ್ತಿಸಿ ನಡುರಸ್ತೆಯಲ್ಲಿ ಹೈಡ್ರಾಮ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ.

    ನೂರಾರು ಮಂದಿಯ ಮುಂದೆಯೇ ಬಟ್ಟೆ ಕಳಚುವತ್ತ ಮುಂದಾದ ಮಹಿಳೆ ಸಾರ್ವಜನಿಕರ ಮುಜುಗರಕ್ಕೂ ಕಾರಣವಾಗಿದ್ದು, ನಗರದ ಜಿಲ್ಲಾಧಿಕಾರಿ ಕಛೇರಿಯ ಮುಂದೆಯೇ ಘಟನೆ ನಡೆದಿದೆ. ರಸ್ತೆ ಮಧ್ಯೆ ಮನಬಂದಂತೆ ವರ್ತಿಸಿದ ಮಹಿಳೆಯ ವರ್ತನೆಗೆ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಹಿಳೆಯ ವಿಚಿತ್ರ ವರ್ತನೆ ನಿಯಂತ್ರಿಸಲು ಪೊಲೀಸರು ಕೂಡ ಹರಸಾಹಸ ಪಟ್ಟರು.

    ತನಗೆ ಅನ್ಯಾಯವಾಗಿದೆ, ತನ್ನನ್ನ ಹುಚ್ಚಿಯಂತೆ ನಡೆಸಿಕೊಂಡಿದ್ದಾರೆಂದು ಪತ್ರದಲ್ಲಿ ಅಳಲು ತೋಡಿಕೊಂಡಿರುವ ಮಹಿಳೆಯ ಆಟಕ್ಕೆ ಸಾರ್ವಜನಿಕರೂ ಕೂಡ ಏನೂ ಮಾಡದೆ ನಿಂತಿದ್ದರು. ಸುಮಾರು ಅರ್ಧ ಗಂಟೆ ಮಹಿಳೆಯ ಹುಚ್ಚಾಟ ಮುಂದುವರೆದು ಬಿಎಂ ರಸ್ತೆಯಲ್ಲಿ ಓಡಾಡುತಿದ್ದ ಬಸ್ಸುಗಳ ಗಾಜುಗಳೂ ಕೂಡ ಪುಡಿಪುಡಿಯಾದವು. ಬೇಕೆ ಬೇಕು ನ್ಯಾಯಾ ಬೇಕೆಂದು ಕೂಗುತ್ತಾ ಮಾನಸಿಕ ಅಸ್ವಸ್ಥೆಯಂತೆ ವರ್ತಿಸಿದ ಮಹಿಳೆ ಕನ್ನಡ ಪರ ಘೋಷಣೆಗಳನ್ನ ಕೂಗುತ್ತಿದದ್ದು ವಿಶೇಷವಾಗಿತ್ತು.

    ರಸ್ತೆಯಲ್ಲಿ ಮಲಗಿ ಸಂಚಾರಕ್ಕೆ ಅಡ್ಡಿಪಡಿಸಿದ ಮಹಿಳೆಯನ್ನು ನಿಯಂತ್ರಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. ಈ ವೇಳೆ ರಸ್ತೆಯಲ್ಲೇ ಬಟ್ಟೆ ಬಿಚ್ಚಲು ಮುಂದಾದ ಮಹಿಳೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಸಿಕ್ಕಸಿಕ್ಕವರ ಹಲ್ಲೆ ನಡೆಸಲು ಮುಂದಾದ ಮಹಿಳೆ ಸರ್ಕಾರಿ ಬಸ್ಸಿನ ವೈಪರ್ ಕಿತ್ತು ಮುಂಭಾಗದ ಗಾಜಿಗೆ ಕಲ್ಲು ತೂರಿದ್ದಳು. ಮಹಿಳೆ ಮಾನಸಿಕ ಅಸ್ಚಸ್ಥೆಯೋ, ಸಮಸ್ಯೆಗೆ ಸ್ಪಂದಿಸದ ವ್ಯವಸ್ಥೆ ವಿರುದ್ದ ಬೇಸತ್ತ ಮಹಿಳೆ ತಾಳ್ಮೆ ಕಳೆದುಕೊಂಡು ವರ್ತಿಸಿದ ರೀತಿಯೊ ಎಂಬ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ.

    ಮಹಿಳೆಯ ಬರೆದಿರುವ ದೂರು ಪತ್ರದಲ್ಲಿ ಎರಡು ಬಾರಿ ಕುಮಾರಣ್ಣನ ಭೇಟಿ ಮಾಡಿದ್ದೆ ಎಂದು ಉಲ್ಲೇಖ ಮಾಡಿದ್ದಾಳೆ. ನನ್ನ ಸಮಸ್ಯೆಯನ್ನು ಪೊಲೀಸರು ಬಗೆಹರಿಸುತ್ತಿಲ್ಲ ಎಂದು ಕೂಡ ತನ್ನ ಅಳಲು ತೋಡಿಕೊಂಡಿದ್ದಾಳೆ. ಸದ್ಯ ಈಕೆಯನ್ನು ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡನಹಳ್ಲಿಯ ಪ್ರಮೀಳಾ ಎಂದು ಗುರ್ತಿಸಲಾಗಿದೆ. ಮಹಿಳೆಯನ್ನ ವಶಕ್ಕೆ ಪಡೆದ ಮಹಿಳಾ ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಕೂಡ ಪೊಲೀಸರಿಗೆ ಮಹಿಳೆ ವಿರುದ್ಧ ದೂರು ನೀಡಿದ್ದಾರೆ. ಮತ್ತೊಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

  • ಹಬ್ಬಕ್ಕೆ ದುಪ್ಪಟ್ಟು ದರ ಪಡೆಯುತ್ತಿರೋ ಖಾಸಗಿ ಟ್ರಾವೆಲ್ಸ್‌ಗಳಿಗೆ ಬಿಗ್ ಶಾಕ್

    ಹಬ್ಬಕ್ಕೆ ದುಪ್ಪಟ್ಟು ದರ ಪಡೆಯುತ್ತಿರೋ ಖಾಸಗಿ ಟ್ರಾವೆಲ್ಸ್‌ಗಳಿಗೆ ಬಿಗ್ ಶಾಕ್

    ಬೆಂಗಳೂರು: ಹಬ್ಬಕ್ಕೆ ದುಪ್ಪಟ್ಟು ದರ ಪಡೆಯುತ್ತಿರುವ ಖಾಸಗಿ ಟ್ರಾವೆಲ್ಸ್‌ಗಳಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ಕೊಟ್ಟಿದೆ. ಹೌದು, ನಿಯಮ ಮೀರಿ ಪ್ರಯಾಣದ ದರ ಪಡೆಯುತ್ತಿರುವ ಖಾಸಗಿ ಬಸ್‍ಗಳ ಮೇಲೆ ಅಧಿಕಾರಿಗಳು ರೈಡ್ ಮಾಡುತ್ತಿದ್ದಾರೆ.

    ಹಬ್ಬದ ದಿನಗಳಲ್ಲಿ ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಊರಿಗೆ ಮರಳುತ್ತಾರೆ. ಹೀಗಾಗಿ ಖಾಸಗಿ ಟ್ರಾವೆಲ್ಸ್ ಗಳು ಲಾಭಕ್ಕಾಗಿ ಪ್ರಯಾಣಿಕರಿಂದ ಹೆಚ್ಚು ಹಣ ಪಡೆಯುತ್ತವೆ. ಇದರ ವಿರುದ್ಧ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

    ಜಂಟಿ ಸಾರಿಗೆ ಆಯುಕ್ತ ಜ್ಞಾನೇಂದ್ರ ಕುಮಾರ್ ಮತ್ತು ಅಪರ ಸಾರಿಗೆ ಆಯುಕ್ತ ನಾರಾಯಣ್ ಸ್ವಾಮಿ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಲಾಗುತ್ತಿದೆ. ಒಟ್ಟು 12 ತಂಡಗಳನ್ನು ರಚಿಸಲಾಗಿದ್ದು, ಅದರಲ್ಲಿ 35 ಜನ ಆರ್‌ಟಿಓ ಇನ್‍ಸ್ಪೆಕ್ಟರ್ ಗಳು ಹಾಗೂ 20 ಜನ ಅಧಿಕಾರಿಗಳಿದ್ದಾರೆ. ಈ ತಂಡಗಳು ಬೆಂಗಳೂರಿನಿಂದ ಹೊರ ಹೊಗುವ ಪ್ರತಿ ಬಸ್ ಅನ್ನು ತಪಾಸಣೆ ಮಾಡುತ್ತಿವೆ.

    ಬಸ್‍ನಲ್ಲಿ ಪ್ರಯಾಣಿಕರು ಮತ್ತು ಅವರ ಲಗೇಜ್ ಹೊರತು ಪಡಿಸಿ ಯಾವುದೇ ರೀತಿಯ ವಸ್ತುಗಳನ್ನು ಹಾಕುವಂತಿಲ್ಲ. ನಿಯಮ ಮೀರಿ ಹಣ ಪಡೆದಿರುವ ಬಗ್ಗೆ ಮಾಹಿತಿ ಪಡೆಯಲು ಪ್ರಯಾಣಿಕರಿಂದ ಟಿಕೆಟ್ ತಗೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಹೆಚ್ಚಿನ ಹಣ ಪಡೆದಿದ್ದರೆ ಅಂತಹ ಟ್ರಾವೆಸ್ಸ್ ವಿರುದ್ಧ ಪ್ರಕರಣ ದಾಖಲಿಸಲು ಆರ್‍ಟಿಓ ಅಧಿಕಾರಿಗಳು ಮುಂದಾಗಿದ್ದಾರೆ.

    ಎಲ್ಲೆಲ್ಲಿ ಪರಿಶೀಲನೆ?: ಮೆಜೆಸ್ಟಿಕ್, ಕಲಾಸಿಪಾಳ್ಯ, ಗೊರಗುಂಟೆಪಾಳ್ಯ, ನೆಲಮಂಗಲ, ದೇವನಹಳ್ಳಿ ಟೋಲ್ ಸೇರಿದಂತೆ ಬೆಂಗಳೂರಿನಿಂದ ಹೊರ ಭಾಗಗಳ ಪ್ರತಿ ಟೋಲ್‍ಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಈ ಮೂಲಕ ಖಾಸಗಿ ಟ್ರಾವೆಲ್ಸ್ ಗಳ ದರ್ಬಾರ್ ಗೆ ಬ್ರೇಕ್ ಹಾಕಲು ಹಾಗೂ ಪ್ರಯಾಣಿಕರ ಮೇಲೆ ಆಗುತ್ತಿರುವ ಹೊರೆಯನ್ನು ತಡೆಯಲು ಸಾರಿಗೆ ಇಲಾಖೆ ಮುಂದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

    Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

    ಬೆಂಗಳೂರು: ಕರ್ನಾಟಕ ಸಾರಿಗೆ ಸಂಸ್ಥೆಗೆ ಖರೀದಿ ಮಾಡಲು ಇಚ್ಛಿಸಿರುವ ಎಲೆಕ್ಟ್ರಿಟ್ ಬಸ್ ಸಂಸ್ಥೆಗೆ ಹೆಚ್ಚಿನ ನಷ್ಟ ಉಂಟಾಗುತ್ತದೆ ಎಂಬ ವರದಿಯ ಬಳಿಕವೂ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಬಸ್ಸುಗಳ ಖರೀದಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಹಾಗೂ ಎಂಡಿ ನಡುವೆ ಬಿಗ್ ಫೈಟ್‍ಗೆ ಕಾರಣವಾಗಿದೆ.

    ಸಾರಿಗೆ ಇಲಾಖೆ ಎಂಡಿ ಪೊನ್ನುರಾಜ್ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟದ ಕುರಿತು ಸಂಪೂರ್ಣ ವರದಿ ನೀಡಿದ್ದಾರೆ. ಇದರ ನಡುವೆಯೂ ಸದ್ಯ ಸಚಿವರು ಒಟ್ಟು 80 ಎಲೆಕ್ಟ್ರಿಕ್ ಬಸ್ ಖರೀದಿಗೆ ಮುಂದಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಸಂಪುಟ ಸಚಿವರ ಈ ನಡೆ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಬಸ್ ಖರೀದಿ ಹಿಂದೆ ಸಚಿವರ ಸ್ವ-ಹಿತಾಸಕ್ತಿ ಇದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಸರ್ಕಾರ ಸದ್ಯ 126 ಕೋಟಿ ರೂ. ವೆಚ್ಚದಲ್ಲಿ 80 ಬಸ್‍ಗಳನ್ನ ಖರೀದಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಲ್ಲಿ 60 ಎಸಿ ಎಲೆಕ್ಟ್ರಿಕ್ ಬಸ್ ಹಾಗೂ ಉಳಿದಂತೆ 20 ನಾನ್ ಎಸಿ ಎಲೆಕ್ಟ್ರಿಕ್ ಬಸ್ ಖರೀದಿ ಸಿದ್ಧತೆ ನಡೆದಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಸಾರಿಗೆ ಇಲಾಖೆ ನೇರ ಬಸ್ ಖರೀದಿ ಮಾಡುವುರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟ ಕಾರಣಗಳನ್ನು ಎಂಡಿ ಪೊನ್ನುರಾಜ್ ಅವರು ವರದಿ ನೀಡಿದ್ದಾರೆ. ಸಾರಿಗೆ ಸಂಸ್ಥೆಗೆ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಕ್ಕಿಂತ ಅವುಗಳನ್ನು ಲೀಸ್‍ಗೆ ಪಡೆದು ಮೊದಲು ಪ್ರಯೋಗ ನಡೆಸಲು ಎಂಡಿ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಫೇಮ್ ಇಂಡಿಯಾ ಸ್ಕೀಮ್ ಅಡಿ ಮೆ|| ಗೋಲ್ಡ್ ಸ್ಟೋನ್ ಇನ್‍ಫ್ರಾಟೆಂಕ್ ಕಂಪೆನಿಯಿಂದ ಬಸ್ ಖರೀದಿಗೆ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.

    ಎಲೆಕ್ಟ್ರಿಕ್ ಬಸ್ ಯಾಕೆ ಬೇಡ?
    ಒಂದು ಎಲೆಕ್ಟ್ರಿಕ್ ಬಸ್‍ನ ಒಟ್ಟಾರೆ ವೆಚ್ಚದ ಶೇ. 60 ರಷ್ಟು ಮೌಲ್ಯ ಬ್ಯಾಟರಿ ಒಂದೇ ಹೊಂದಿರುತ್ತದೆ. ಈ ಬಸ್ಸುಗಳಲ್ಲಿ ಆಳವಡಿಸಿರುವ ಬ್ಯಾಟರಿಗಳನ್ನು ಐದು ವರ್ಷಕ್ಕೆ ಒಮ್ಮೆ ಬದಲಾವಣೆ ಮಾಡಬೇಕು. ಇದರಿಂದ ಬಸ್ಸುಗಳ ನಿರ್ವಹಣೆ ಅಧಿಕ ಆಗಲಿದೆ. ಅಲ್ಲದೇ ಒಂದೊಮ್ಮೆ ಎಲೆಕ್ಟ್ರಿಕ್ ಬಸ್‍ನ ಬ್ಯಾಟರಿ ಹಾಳಾದರೆ ಇಡೀ ಬಸ್ ಹಾಳಾಗುತ್ತದೆ. ಇದರಿಂದ ಒಂದು ಬಸ್ ಮೇಲೆ ಹೂಡಿಕೆ ಮಾಡಿರುವ ಮೊತ್ತ ಸಂಪೂರ್ಣ ನಷ್ಟವಾಗಲಿದೆ. ಬಸ್ಸಿನಲ್ಲಿ ಬಳಸುವ ಬ್ಯಾಟರಿಯನ್ನು ಲೀಥಿಯಂ ಎಂಬ ಮೆಟಲ್ ನಿಂದ ತಯಾರು ಮಾಡುತ್ತಾರೆ. ಈ ಲೀಥಿಯಂ ನಿಕ್ಷೇಪ ಭಾರತದಲ್ಲಿ ಕಡಿಮೆ ಇರುವುದರಿಂದ ಅದರ ಬೆಲೆಯೂ ಅಧಿಕವಾಗಿದೆ. ಆದರೆ ಚೀನಾದಲ್ಲಿ ಈ ಎಲೆಕ್ಟ್ರಿಕ್ ಬಸ್ ಸೇವೆ ಯಶಸ್ವಿಯಾಗಿದ್ದು, ಆದರೆ ಅಲ್ಲಿ ಲೀಥಿಯಂ ನಿಕ್ಷೇಪ ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲ ಆಗಿದೆ ಎಂಬ ಅಂಶ ಮುಂದಿಟ್ಟಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಡೀಸೆಲ್ ಬೆಲೆ ಹೆಚ್ಚಾಗಿದೆ ಎಂಬ ಅಂಶದ ಮೇಲೆ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿತ್ತು. ಸದ್ಯ ಸುಮಾರು 126 ಕೋಟಿ ರೂಪಾಯಿ ಖರ್ಚು ಮಾಡಿ ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲಿ ಚಿಂತನೆ ನಡೆಸಿದೆ. ಆದರೆ ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲು ನಿರಾಕರಿಸಿದ್ದರು. ಅಲ್ಲದೇ ಬಸ್ಸುಗಳ ನಿರ್ವಹಣೆ ಅಧಿಕ ವೆಚ್ಚವಾಗುತ್ತದೆ ಎಂಬ ಕಾರಣ ಮುಂದಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=amPQtHkZIq0

  • ಸಾರಿಗೆ ಇಲಾಖೆ ನಿರ್ಲಕ್ಷ್ಯ – ಪ್ರತಿದಿನ ಲಕ್ಷಗಟ್ಟಲೇ ಆದಾಯ ನಷ್ಟ

    ಸಾರಿಗೆ ಇಲಾಖೆ ನಿರ್ಲಕ್ಷ್ಯ – ಪ್ರತಿದಿನ ಲಕ್ಷಗಟ್ಟಲೇ ಆದಾಯ ನಷ್ಟ

    ಕಾರವಾರ: ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಾಹನಗಳು ತೆರಳಬೇಕಿದ್ದರೆ ಆಯಾ ರಾಜ್ಯದ ರಸ್ತೆ ತೆರಿಗೆಯನ್ನು ಗಡಿ ಭಾಗದಲ್ಲಿ ಕಡ್ಡಾಯವಾಗಿ ಕಟ್ಟಲೇಬೇಕು. ಆದರೆ ಕಾರವಾರ ಗಡಿಭಾಗದಲ್ಲಿ ಇದು ಫಾಲೋ ಆಗುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಬರಬೇಕಾದ ಲಕ್ಷಗಟ್ಟಲೇ ರಸ್ತೆ ತೆರಿಗೆ ವಂಚನೆಯಾಗುತ್ತಿದೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಬಳಿ ಕರ್ನಾಟಕ ಸರ್ಕಾರವು ತೆರಿಗೆ ವಸೂಲಿ, ಅನಧಿಕೃತ ಸಾಗಾಟಗಳ ತಡೆಗಾಗಿ ಅರಣ್ಯ ಇಲಾಖೆ, ಭೂ ಮತ್ತು ಗಣಿವಿಜ್ಞಾನ ಇಲಾಖೆ, ಪೊಲೀಸ್ ಹೀಗೆ ಹಲವು ಚೆಕ್‍ಪೋಸ್ಟ್ ಗಳನ್ನು ನಿರ್ಮಿಸಿದೆ. ಆದರೆ ರಸ್ತೆ ತೆರಿಗೆ ವಸೂಲಿಗಾಗಿ ಆರ್.ಟಿ.ಓ ಕಚೇರಿ ಮಾತ್ರ ಯಾವುದೇ ಕೇಂದ್ರವನ್ನು ತೆರೆದಿಲ್ಲ. ಇದರಿಂದ ಗೋವಾ ರಾಜ್ಯದಿಂದ ಬರುವ ವಾಣಿಜ್ಯ ಪ್ರವಾಸಿ ವಾಹನಗಳು ಪರ್ಮಿಟ್ ತೆಗೆದುಕೊಳ್ಳದೇ ತೆರಿಗೆ ವಂಚಿಸಿ ಕರ್ನಾಟಕ್ಕೆ ಪ್ರವೇಶ ಪಡೆಯುತ್ತಿದೆ. ಇಲ್ಲಿನ ಇಲಾಖೆ ಅಧಿಕಾರಿಗಳ ವರ್ತನೆಯಿಂದ ಕರ್ನಾಟಕ ಸರ್ಕಾರಕ್ಕೆ ಬರಬೇಕಾದ ಆದಾಯ ಕೈತಪ್ಪಿ ಹೋಗುತ್ತಿದೆ.

    ಕರ್ನಾಟಕದಿಂದ ಗೋವಾ ಗಡಿಗೆ ಯಾವುದೇ ವಾಣಿಜ್ಯ ವಾಹನಗಳು ತೆರಳಿದರೆ ತಪ್ಪದೇ ಪರ್ಮಿಟ್ ತೆಗೆದುಕೊಂಡು ಹಣ ಕಟ್ಟಬೇಕು. ಇಲ್ಲದಿದ್ದರೆ ಅಲ್ಲಿನ ಸರ್ಕಾರ ಪರ್ಮಿಟ್ ಇಲ್ಲದ ವಾಹನಗಳಿಗೆ ಐದರಿಂದ ನಲವತ್ತು ಸಾವಿರದವರೆಗೆ ದಂಡ ವಿಧಿಸುತ್ತದೆ. ಕರ್ನಾಟಕದಲ್ಲಿಯೂ ಇದೇ ನಿಯಮಗಳು ಜಾರಿಯಲ್ಲಿದೆ. ಹೊರ ರಾಜ್ಯದಿಂದ ಆಗಮಿಸುವ ಬಸ್‍ಗಳಿಗೆ ಸೀಟಿನ ಲೆಕ್ಕದಲ್ಲಿ ಪರ್ಮಿಟ್ ಪಡೆದು ಹಣ ಕಟ್ಟಬೇಕು, ಗೋವಾದ ಗಡಿಯಲ್ಲಿಯೇ ಆರ್.ಟಿ.ಓ ಕಚೇರಿ ಇದ್ದು, ದಿನದ 24 ಗಂಟೆ ತೆರೆದಿರುತ್ತದೆ. ಹೀಗಾಗಿ ಯಾರೂ ಕೂಡ ವಂಚಿಸಿ ಹೋಗಲು ಸಾಧ್ಯವಿಲ್ಲ. ಕರ್ನಾಟಕದ ಗಡಿಯಲ್ಲಿ ಆರ್.ಟಿ.ಓ ಕಚೇರಿಯಾಗಲಿ, ಸಿಬ್ಬಂದಿಯಾಗಲಿ ಇರದೇ ಇರುವುದರಿಂದ ತೆರಿಗೆ ಹಣ ವಂಚಿಸಿ ಹಲವರು ರಾಜ್ಯವನ್ನು ಪ್ರವೇಶಿಸುತ್ತಿದ್ದಾರೆ.

    ಉತ್ತರ ಕನ್ನಡ ಪ್ರವಾಸಿ ತಾಣವಾಗಿರುವುದರಿಂದ ಪ್ರತಿ ದಿನ ಗೋವಾ, ಮಹಾರಾಷ್ಟ ಸೇರಿ ಹಲವು ರಾಜ್ಯಗಳಿಂದ ನೂರಾರು ಬಾಡಿಗೆ ವಾಹನಗಳು ಆಗಮಿಸುತ್ತವೆ. ಬಹುತೇಕ ವಾಹನಗಳು ಪರ್ಮಿಟ್ ಪಡೆಯದೇ ರಾಜ್ಯ ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿವೆ. ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಎಚ್ಚೆತ್ತು ಹೊರರಾಜ್ಯದ ವಾಹನ ಸವಾರರಿಂದ ಆಗುತ್ತಿರುವ ತೆರಿಗೆ ವಂಚನೆಯನ್ನು ತಪ್ಪಿಸಿಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆದಾಯದಲ್ಲಿ ದಾಖಲೆ ಬರೆದ ಸಾರಿಗೆ ಇಲಾಖೆ: ಯಾವ ವರ್ಷ ಎಷ್ಟೆಷ್ಟು ಆದಾಯ ಸಂಗ್ರಹ?

    ಆದಾಯದಲ್ಲಿ ದಾಖಲೆ ಬರೆದ ಸಾರಿಗೆ ಇಲಾಖೆ: ಯಾವ ವರ್ಷ ಎಷ್ಟೆಷ್ಟು ಆದಾಯ ಸಂಗ್ರಹ?

    ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು 2017-18ರ ಸಾಲಿನಲ್ಲಿ ದಾಖಲೆ ಪ್ರಮಾಣದ ಆದಾಯ ಸಂಗ್ರಹಿಸಿ ಇತಿಹಾಸ ಸೃಷ್ಟಿಸಿದೆ.

    ಹೌದು, 2017-18 ರ ಸಾಲಿನಲ್ಲಿ ಸಾರಿಗೆ ಇಲಾಖೆಯು ಒಟ್ಟಾರೆ 5,954 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಮೂಲಕ ವಾರ್ಷಿಕ ಗುರಿಗಿಂತ ಶೇ.7ರಷ್ಟು ಹೆಚ್ಚಿನ ಆದಾಯವನ್ನು ಸಂಗ್ರಹಿಸಿ ದಾಖಲೆ ನಿರ್ಮಿಸಿದೆ.

    ಸಾರಿಗೆ ಇಲಾಖೆಯು ವರ್ಷದಿಂದ ವರ್ಷಕ್ಕೆ ನಿಗದಿತ ಆದಾಯದ ಗುರಿಯನ್ನು ಹಾಕಿಕೊಳ್ಳುತ್ತದೆ. 2017-18ನೇ ಸಾಲಿನಲ್ಲಿ ಒಟ್ಟಾರೆ 5,516.6 ಕೋಟಿ ರೂಪಾಯಿಯನ್ನು ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿತ್ತು. ಆದರೆ ಈ ಗುರಿಯನ್ನು ದಾಟಿ ಬರೋಬ್ಬರಿ 5,954 ಕೋಟಿ ರೂಪಾಯಿ ಸಂಗ್ರಹಿಸಿದೆ. ಈ ಮೊದಲು 2016-17 ನೇ ಸಾಲಿನಲ್ಲಿ 5,262.4 ಕೋಟಿ ರೂಪಾಯಿಯನ್ನು ಸಂಗ್ರಹಿಸಿತ್ತು, ಆ ವರ್ಷ 5,026 ಕೋಟಿ ರೂಪಾಯಿ ಗುರಿಯನ್ನು ಹಾಕಿಕೊಂಡಿತ್ತು.

    ಯಾವ ವರ್ಷ ಎಷ್ಟು ಆದಾಯ?
    2009-10 ನೇ ಸಾಲಿನಲ್ಲಿ 1,892 ಕೋಟಿ ರೂಪಾಯಿ, 2010-11 ರಲ್ಲಿ 2,511 ಕೋಟಿ ರೂಪಾಯಿ, 2011-12ರಲ್ಲಿ 2,985 ಕೋಟಿ, 2012-13ರಲ್ಲಿ 3,566 ಕೋಟಿ, 2013-14 ರಲ್ಲಿ 3,671 ಕೋಟಿ, 2014-15ರಲ್ಲಿ 4,145 ಕೋಟಿ, 2015-16ರಲ್ಲಿ 4,608 ಕೋಟಿ, 2016-17ರಲ್ಲಿ 5,262 ಕೋಟಿ, 2017-18ರಲ್ಲಿ 5,954 ಕೋಟಿ ರೂಪಾಯಿ ಆದಾಯ ಗಳಿಸಿದೆ.

    ಸಾರಿಗೆ ಇಲಾಖೆಯು ರಸ್ತೆ ತೆರಿಗೆ, ಹೊಸ ವಾಹನಗಳ ನೋಂದಣಿ ಶುಲ್ಕ, ಪರವಾನಿಗೆ ಶುಲ್ಕ, ಬಾಕಿ ಇರುವ ತೆರಿಗೆ ವಸೂಲಿ, ಚಾಲನಾ ಪರವಾನಿಗೆ ಶುಲ್ಕ, ವಾಹನಗಳ ಪರಿಶೀಲನೆ ಹಾಗೂ ರಾಜ್ಯಗಡಿಗಳಲ್ಲಿ ಚೆಕ್‍ಪೋಸ್ಟ್ ಮೂಲಕ ಒಟ್ಟಾರೆ ಆದಾಯವನ್ನು ಗಳಿಸುತ್ತಿದೆ. ಈ ಬಾರಿಯ ವಿಶೇಷವೇನೆಂದರೆ ರಾಜ್ಯದ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು ನಗರ ಈ ಬಾರಿ ಅತಿಹೆಚ್ಚು ಆದಾಯವನ್ನು ತಂದುಕೊಟ್ಟಿದೆ. ಮಾಹಿತಿಗಳ ಪ್ರಕಾರ ರಾಜಧಾನಿಯಲ್ಲಿ ಒಟ್ಟು 76 ಲಕ್ಷ ವಾಹನಗಳು ನೋಂದಣಿಯಾಗುವ ಮೂಲಕ ಆದಾಯ ಹೆಚ್ಚಿದೆ.

    ಕರ್ನಾಟಕ ಸರ್ಕಾರಕ್ಕೆ ಸಾರಿಗೆ ಇಲಾಖೆಯು ನಾಲ್ಕನೇ ಅತಿದೊಡ್ಡ ಆದಾಯ ನೀಡುವ ಸಂಸ್ಥೆಯಾಗಿದೆ. ಇದಲ್ಲದೇ ವಾಣಿಜ್ಯ ತೆರಿಗೆ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಅಬಕಾರಿ ಇಲಾಖೆಗಳು ಸರ್ಕಾರದ ಆದಾಯದ ಪ್ರಮುಖ ಮೂಲಗಳಾಗಿವೆ. ಕಳೆದ 9 ವರ್ಷಗಳಿಂದಲೂ ಸಾರಿಗೆ ಇಲಾಖೆ ವರ್ಷದಿಂದ ವರ್ಷಕ್ಕೆ ತನ್ನ ಆದಾಯವನ್ನು ಹೆಚ್ಚಿಸಿಕೊಂಡೇ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv