Tag: transport department

  • ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್!

    ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್!

    ಬೆಂಗಳೂರು: ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಮೇಲೆ 2.50 ರೂಪಾಯಿ ಇಳಿಸಿದ ಪರಿಣಾಮ ಸದ್ಯಕ್ಕೆ ಕೆಎಸ್‍ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಅನುಮಾನವಾಗಿದೆ.

    ಈಗಾಗಲೇ ಕುಮಾರಸ್ವಾಮಿ ಸರ್ಕಾರ ತೈಲ ಬೆಲೆ ಇಳಿಸದೆ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಈಗ ಪ್ರಯಾಣ ದರ ಹೆಚ್ಚಿಸಿದರೆ ಮತ್ತೆ ಜನರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡದೇ ಇರಲು ಸರ್ಕಾರದ ನಿರ್ಧಾರ ಮಾಡಿದೆ ಎಂದು ತಿಳಿದು ಬಂದಿದೆ.

    ಸಾರಿಗೆ ಇಲಾಖೆಗೆ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಶೇ.14ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ ನಡೆಸಿತ್ತು. ಈ ಹಿಂದೆ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದಾಗ ತೈಲ ಬೆಲೆ ಹೆಚ್ಚಳದಿಂದ ಬಸ್ ಪ್ರಯಾಣ ಟಿಕೆಟ್ ದರ ಹೆಚ್ಚಿಸುವುದು ಅನಿವಾರ್ಯ ಎಂದಿದ್ದರು. ಈಗ ಕೇಂದ್ರ ಸರ್ಕಾರ 2.5 ರೂ. ತೈಲ ಬೆಲೆಯನ್ನು ಇಳಿಕೆ ಮಾಡಿದೆ. ಇದರಿಂದ ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಬೇಕೇ? ಬೇಡವೇ ಎನ್ನುವ ಗೊಂದಲದಲ್ಲಿ ಸಾರಿಗೆ ಇಲಾಖೆ ಇದೆ.

    ದೆಹಲಿಯಿಂದ ಸಿಎಂ ಕುಮಾರಸ್ವಾಮಿ ವಾಪಸ್ ಬಂದ ಮೇಲೆ ಅವರ ಜೊತೆ ಸಾರಿಗೆ ಸಚಿವರ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಟಿಕೆಟ್ ಹೆಚ್ಚಳದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಆದ್ದರಿಂದ ಸದ್ಯಕ್ಕೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ ಕಡಿಮೆ ಇದೆ ಎಂದು ಸಾರಿಗೆ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಅಬಕಾರಿ ಸುಂಕವನ್ನು 1.50 ರೂಪಾಯಿ ಕಡಿಮೆ ಮಾಡಿದ್ದು, ತೈಲ ಕಂಪನಿಗಳು 1 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದೆ. ಹೀಗಾಗಿ ಒಟ್ಟು 2.50 ರೂ ಕಡಿತವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ತೈಲ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಹಣಕಾಸು ಇಲಾಖೆಯ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಸಲಹೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?

    ಗುಂಡಿ ಮುಚ್ಚಲು ವಿಫಲವಾಗಿರೋ ಸರ್ಕಾರದಿಂದ ಬೆಂಗ್ಳೂರಿಗರ ಮೇಲೆ ಭೂಸಾರಿಗೆ ಕರ: ಹೇಗೆ ವಿಧಿಸಲಾಗುತ್ತೆ?

    ಬೆಂಗಳೂರು: ಗುಂಡಿ ಮುಕ್ತ ರಸ್ತೆ ಮಾಡಲು ವಿಫಲವಾಗಿರುವ ಸಮ್ಮಿಶ್ರ ಸರ್ಕಾರ, ಈಗ ಬೆಂಗಳೂರು ನಾಗರಿಕರಿಗೆ ಆಘಾತವಾಗುವ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಹದಗೆಟ್ಟ ರಸ್ತೆಗಳಿಂದ ಭಾರೀ ನಷ್ಟವಾಗಿದ್ದು, ಕರ ಸಂಗ್ರಹಕ್ಕೆ ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೀಡಿದ್ದ ಸಲಹೆಗೆ ಸಮ್ಮತಿ ಸೂಚಿಸಿದೆ.

    ನಗರದಲ್ಲಿನ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿವೆ. ಇದರಿಂದ ರಸ್ತೆಗಳಲ್ಲಿ ಓಡಾಡುವ ಬಿಎಂಟಿಸಿ ಬಸ್‍ಗಳು ಆಗಾಗ ಹದಗೆಡುತ್ತಿವೆ. ಇದರಿಂದಾಗಿ ಬಿಎಂಟಿಸಿಗೆ ಹೆಚ್ಚಿನ ನಿರ್ವಹಣೆ ಹೊರೆ ಬೀಳುತ್ತಿದೆ. ಬಿಬಿಎಂಪಿಯೇ ಬಿಎಂಟಿಸಿ ಇಲಾಖೆಗೆ ಹಣ ನೀಡಬೇಕೆಂದು ಕೆಲದಿನಗಳ ಹಿಂದೆ ಸಾರಿಗೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.

    ಸಾರಿಗೆ ಸಚಿವ ಡಿಸಿ ತಮ್ಮಣ್ಣ ಪ್ರಸ್ತಾವನೆ ಪುರಸ್ಕರಿಸಿರುವ ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದು, ಸಾರ್ವಜನಿಕರಿಗೆ 2% ರಷ್ಟು ಭೂ ಸಾರಿಗೆ ಉಪಕರ ವಿಧಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ಉಸ್ತುವಾರಿ ಸಚಿವ ಡಾ. ಪರಮೇಶ್ವರ್, ಬಿಬಿಎಂಪಿಗೆ ತನ್ನ ಸಂಪನ್ಮೂಲ ಕ್ರೋಡಿಕರಿಸುವ ಹಕ್ಕಿದೆ. ಕಾನೂನು ಬಾಹಿರವಾಗಿದ್ದರೆ ಮಾತ್ರ ಸರ್ಕಾರ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

    ಕರ ವಿಧಿಸುವ ಬಗ್ಗೆ ಸಾರ್ವಜನಿಕರು ಹಾಗೂ ಬಿಬಿಎಂಪಿ ವಿರೋಧ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಆಸ್ತಿ ಮಾಲೀಕರು ಹೆಚ್ಚಿನ ತೆರಿಗೆ ಪಾವತಿಸುತ್ತಿದ್ದು, ಮತ್ತೆ ಹೆಚ್ಚುವರಿ ತೆರಿಗೆ ಹೊರೆ ಹಾಕುವುದು ಸರಿಯಲ್ಲ. ಅಲ್ಲದೆ ಎರಡು ವರ್ಷಗಳ ಹಿಂದೆ ಆಸ್ತಿ ತೆರಿಗೆ 20% ರಿಂದ 25% ಹೆಚ್ಚಿಸಿ ಆಸ್ತಿ ಮಾಲೀಕರಿಗೆ ಹೆಚ್ಚಿನ ಹೊರೆ ಹೊರಿಸಿತ್ತು. ಹಾಗಾಗಿ ಮತ್ತೆ ತೆರಿಗೆದಾರರಿಗೆ ಕರದ ಹೊರೆ ಹೊರಿಸಲು ಬಿಡುವುದಿಲ್ಲ ಎಂದು ಬಿಬಿಎಂಪಿ ವಿರೋಧ ಪಕ್ಷ ನಾಯಕ ಪದ್ಮನಾಭ ರೆಡ್ಡಿ ಆಡಳಿತ ಪಕ್ಷದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೆಚ್ಚುವರಿ ತೆರಿಗೆ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಉಪಕರ ವಿಧಿಸುವ ಜವಾಬ್ದಾರಿ ಬಿಬಿಎಂಪಿ ಹೊತ್ತಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಬೇಕಿದೆ. ನರ್ಮ್ ಯೋಜನೆಯಡಿಯಲ್ಲಿ ತೆರಿಗೆ ಸೆಸ್ ವಿಧಿಸಬೇಕಂಬ ನಿಯಮವಿದೆ. ಅದರ ಪ್ರಕಾರ ಸೆಸ್ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.

    ಒಟ್ಟಾರೆ ಉಪಕರ ವಿಧಿಸಿ ಮತ್ತೆ ತೆರಿಗೆದಾರರಿಗೆ ಹೊರೆ ಹೆಚ್ಚಿಸಲು ಪಾಲಿಕೆ ಮುಂದಾಗಿದ್ದು, ಈ ವಿಷಯವನ್ನು ಮಂಗಳವಾರ ನಡೆಯಲಿರುವ ಕೌನ್ಸಿಲ್ ಸಭೆಯಲ್ಲಿ ಮುಂದಿಡಲಾಗುತ್ತದೆ. ಒಂದೊಮ್ಮೆ ಸಭೆಯಲ್ಲಿ ವಿಷಯ ಅನುಮೋದನೆಗೊಂಡರೆ ತೆರಿಗೆದಾರರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.

    ಕಳಪೆ ರಸ್ತೆ ಮಾಡುವ ಗುತ್ತಿಗೆದಾರರ ಬೇಜವಾಬ್ದಾರಿ ಹಾಗೂ ಬಿಎಂಟಿಸಿ ವೆಚ್ಚಕ್ಕೂ ನೇರವಾಗಿ ಜನರೇ ತೆರಿಗೆ ವಾಪತಿಸುವುದು ಎಷ್ಟು ಸರಿ? ರಸ್ತೆಗಳಿಂದ ಬಿಎಂಟಿಸಿಗೆ ಆಗಿರುವ ನಷ್ಟ ತುಂಬಲು ಬಿಬಿಎಂಪಿಯೇನೋ ಜನರಿಗೆ ಹೊರೆ ಹೊರೆಸುತ್ತಿದೆ. ಆದೆ ಇದೇ ಗುಂಡಿಗಳಿಂದ ಸಾರ್ವಜನಿಕರ ವಾಹನಗಳಿಗೆ ಆಗಿರುವ ಹಾನಿಯನ್ನು ಭರಿಸುವವರ್ಯಾರು? ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸೆಸ್ ಹಾಕಿ ಭಾರೀ ಟೀಕೆಗೆ ಗುರಿಯಾಗಿರುವ ಸರ್ಕಾರ ಈಗ ವಿಶೇಷವಾಗಿ ಬೆಂಗಳೂರಿಗರ ಮೇಲೆ ವಿಶೇಷ ಸೆಸ್ ಹಾಕಲು ಮುಂದಾಗಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದ್ದಿದೆ.

    ಭೂಸಾರಿಗೆ ಕರ ಹೇಗೆ ಜಾರಿ?
    ನೇರವಾಗಿ ಭೂ ಸಾರಿಗೆ ಕರ ವಿಧಿಸಲು ಸಾಧ್ಯವಿಲ್ಲ. ಹೀಗಾಗಿ ಈಗಿರುವ ಆಸ್ತಿ ತೆರಿಗೆಯನ್ನು ಜಾಸ್ತಿ ಮಾಡಲಾಗುತ್ತದೆ. ಒಂದೊಂದು ಪ್ರದೇಶಕ್ಕೆ ಒಂದೊಂದು ಆಸ್ತಿ ತೆರಿಗೆ ಇದೆ. ಎಂಜಿ ರಸ್ತೆಯಲ್ಲಿನ ಆಸ್ತಿ ತೆರಿಗೆಯೇ ಬೇರೆ, ಬಗಲಗುಂಟೆಯಲ್ಲಿನ ತೆರಿಗೆಯೇ ಬೇರೆ ಇದೆ. ಸದ್ಯ ಆಸ್ತಿ ತೆರಿಗೆಯಿಂದ ಸುಮಾರು ವರ್ಷಕ್ಕೆ 2 ಸಾವಿರ ಕೋಟಿ ರೂ. ಸಂಗ್ರಹವಾಗುತ್ತಿದೆ. ಈಗ 2% ರಷ್ಟು ಕರ ವಿಧಿಸಿದರೆ ಅಂದಾಜು 40 ಕೋಟಿ ರೂ. ತೆರಿಗೆ ಸಂಗ್ರಹವಾಗಬಹುದು. ಈ ಹಣವನ್ನು ಸಾರಿಗೆ ಸಂಸ್ಥೆ ನೀಡಲಾಗುತ್ತದೆ.

    2011-2012 ರಿಂದ 2016-17ರವರೆಗಿನ ಅವಧಿಯಲ್ಲಿ ಬಿಎಂಟಿಸಿಗೆ 608 ಕೋಟಿ ರೂ. ನಷ್ಟವಾಗಿದೆ. ಒಟ್ಟು ಆದಾಯದಲ್ಲಿ 27.27% ಹಣ ಡೀಸೆಲ್ ಖರೀದಿಗೆ ಖರ್ಚಾದರೆ 53% ಹಣ ಸಿಬ್ಬಂದಿ ಸಂಬಳಕ್ಕೆ ಹೋಗುತ್ತದೆ. ಬಿಎಂಟಿಸಿಗೆ ವಿಶೇಷವಾಗಿ ಮೆಟ್ರೋ ಸಂಚರಿಸುವ ಮಾರ್ಗಗಳಲ್ಲಿ ಕಡಿಮೆ ಆದಾಯ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv  

  • ಡಿಜಿ ಲಾಕರ್ ಮೂಲಕವೇ ವಾಹನದ ದಾಖಲೆಗಳನ್ನು ತೋರಿಸಿ: ಫೈಲ್ ಸೇವ್ ಮಾಡೋದು ಹೇಗೆ? 59 ಸೆಕೆಂಡಿನ ವಿಡಿಯೋ ನೋಡಿ

    ಡಿಜಿ ಲಾಕರ್ ಮೂಲಕವೇ ವಾಹನದ ದಾಖಲೆಗಳನ್ನು ತೋರಿಸಿ: ಫೈಲ್ ಸೇವ್ ಮಾಡೋದು ಹೇಗೆ? 59 ಸೆಕೆಂಡಿನ ವಿಡಿಯೋ ನೋಡಿ

    ನವದೆಹಲಿ: ವಾಹನಗಳ ದಾಖಲೆಗಳನ್ನು ಸವಾರರು ತಮ್ಮ ಡಿಜಿ ಲಾಕರ್ ಆ್ಯಪ್ ಮೂಲಕವೇ ಪೊಲೀಸರಿಗೆ ತೋರಿಸಬಹುದೆಂದು ಕೇಂದ್ರ ಸರ್ಕಾರ ಡಿಜಿ ಲಾಕರ್ ಸೇವೆಗೆ ಅಧಿಕೃತ ಆದೇಶ ನೀಡಿದೆ.

    ಕೇಂದ್ರ ಸಾರಿಗೆ ಇಲಾಖೆಯು ದಾಖಲೆಗಳನ್ನು ಡಿಜಿ ಲಾಕರ್ ನಲ್ಲಿಯೇ ಪರಿಶೀಲಿಸಬಹುದೆಂದು ಮಾನ್ಯತೆ ನೀಡಿ, ಮಹತ್ವದ ಆದೇಶವನ್ನು ಹೊರಡಿಸಿದೆ. ಇದರಿಂದಾಗಿ ವಾಹನಸವಾರರು ಇನ್ನು ಮುಂದೆ ಪೊಲೀಸರು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳನ್ನು ಅಡ್ಡಹಾಕಿ ದಾಖಲೆ ಕೇಳಿದರೆ, ಸವಾರರು ತಮ್ಮ ಮೊಬೈಲ್ ನಲ್ಲಿರುವ ದಾಖಲೆ ತೋರಿಸಿ ದಂಡ ಹಾಗೂ ಕಾನೂನಿನ ಕ್ರಮದಿಂದ ಪಾರಾಗಬಹುದಾಗಿದೆ.

    ಈ ಸಂಬಂಧ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಸ್ಮಾರ್ಟ್​ಕಾರ್ಡ್ ಅಥವಾ ಕಾಗದ ರೂಪದ ದಾಖಲೆಗಳಿಗೆ ಡಿಜಿಟಲ್ ದಾಖಲೆಗಳನ್ನು ಸಲ್ಲಿಸಬಹುದೆಂದು ಉಲ್ಲೇಖಿಸಲಾಗಿದೆ. ಸದ್ಯ ಇಲಾಖೆ ಡಿಜಿಲಾಕರ್ ​ಆ್ಯಪ್​ನಲ್ಲಿ ಚಾಲನಾ ಪರವಾನಗಿ, ನೋಂದಣಿ ಪತ್ರ ಮತ್ತು ವಾಯುಮಾಲಿನ್ಯ ಪ್ರಮಾಣಪತ್ರದ ಡಿಜಿಟಲ್ ಪ್ರತಿಗಳನ್ನು ಸಂಗ್ರಹಿಸಬಹುದಾಗಿದೆ.

    ಇದಲ್ಲದೇ ಕುಡಿದು, ಅಜಾಗರೂಕ ಚಾಲನೆ ಹಾಗೂ ಇನ್ನು ಮುಂತಾದ ಸಂದರ್ಭಗಳಲ್ಲಿ ಸಂಚಾರಿ ಪೊಲೀಸರು ಸವಾರರ ಮೂಲ ಚಾಲನಾ ಪತ್ರವನ್ನು ಮುಟ್ಟುಗೊಳ್ಳುವ ಅಧಿಕಾರವನ್ನು ಹೊಂದಿರುತ್ತಾರೆ. ಅಧಿಕಾರಿಗಳು ಕಾನೂನು ರೀತಿ ಡಿಎಲ್ ಮತ್ತು ಆರ್ ಸಿ ಜಪ್ತಿಮಾಡಬೇಕಾದ ಪ್ರಕರಣಗಳಲ್ಲಿ ದಾಖಲೆಯ ಮೂಲ ಪ್ರತಿ ಅಗತ್ಯವಾಗಿರಲಿದೆ.

    ಏನಿದು ಡಿಜಿ ಲಾಕರ್?
    ಕೇಂದ್ರ ಸರ್ಕಾರವು ಆನ್‍ಲೈನ್‍ಗಳಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಶೇಖರಣಾ ಮಾಡಿ ನಮಗೆ ಯಾವಾಗ ಬೇಕಾದರೂ ಪಡೆಯಬಹುದಾದ ನೂತನ ಡಿಜಿ ಲಾಕರ್ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ಈ ಡಿಜಿ ಲಾಕರ್ ವೆಬ್‍ಸೈಟ್‍ನಲ್ಲಿ ಒಟ್ಟು 1 ಜಿಬಿವರೆಗಿನ ದಾಖಲೆಗಳನ್ನು ಶೇಖರಿಸಿಡಬಹುದಾಗಿದೆ. ಅಲ್ಲದೇ ಯಾವುದೇ ದಾಖಲೆಗಳ ಪರಿಶೀಲನೆಗೆ ಈ ಡಿಜಿ ಲಾಕರ್ ವ್ಯವಸ್ಥೆ ಬಲು ಸುಲಭವಾಗಿದೆ. ಇದರಲ್ಲಿ ಶೈಕ್ಷಣಿಕ ಪ್ರಮಾಣ ಪತ್ರ, ಅಂಕಪಟ್ಟಿ, ಗುರುತಿನ ಚೀಟಿ, ವಾಹನ ಚಾಲನಾ ಪರವಾನಿಗೆ, ವಿಮೆ ಹಾಗೂ ಮೊದಲಾದ ದಾಖಲೆಗಳನ್ನು ಇಮೇಜ್ ರೂಪದಲ್ಲಿ ಸಂಗ್ರಹಿಸಿಡಬಹುದಾಗಿದೆ.

    ಡಿಜಿ ಲಾಕರ್ ಪಡೆಯುವುದು ಹೇಗೆ?
    ಸಾರ್ವಜನಿಕರು ತಮ್ಮ ಸ್ಮಾರ್ಟ್ ಫೋನ್‍ಗಳಲ್ಲಿ ಪ್ಲೇ ಸ್ಟೋರ್ ಹಾಗೂ ಆಪಲ್ ಐಓಎಸ್ ಮುಖಾಂತರ ಡಿಜಿಲಾಕರ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿ, ಸೈನ್ ಅಪ್ ಆಯ್ಕೆ ಒತ್ತಬೇಕು, ನಂತರ ಹೊಸ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಹಾಕಿ, ಆಧಾರ್ ಸಂಖ್ಯೆ ನಮೂದಿಸಿ ನೋಂದಣಿ ಮಾಡಿಕೊಂಡು ಸುಲಭವಾಗಿ ಬಳಸಿಕೊಳ್ಳಬಹುದಾಗಿದೆ.

    ದಿನ ನಿತ್ಯ ಜೀವನದಲ್ಲಿ ಡಿಜಿ ಲಾಕರ್ ಉಪಯೋಗವೇನು?

    ಆಧಾರ್ ಮೂಲಕ ಡಿಜಿ ಲಾಕರ್ ಬಳಸುವುದು ಹೇಗೆ?

    https://youtu.be/27U4XUl-nyg

    ಡಿಜಿ ಲಾಕರ್ ನಲ್ಲಿ ದಾಖಲೆಗಳನ್ನು ಸಂಗ್ರಹಿಸುವುದು ಹೇಗೆ?

    https://youtu.be/7P17ZJdKmts

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಮಂಗಳವಾರ ಸಾರಿಗೆ ಬಂದ್: ಏನಿರುತ್ತೆ? ಏನಿರಲ್ಲ?

    ಮಂಗಳವಾರ ಸಾರಿಗೆ ಬಂದ್: ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ನೂತನ ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಹಿಂಪಡೆದುಕೊಳ್ಳುವಂತೆ ದೇಶಾದ್ಯಂತ ವಿವಿಧ ಸಾರಿಗೆ  ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟಿವೆ.

    ಸಂಘಟನೆಗಳು ಕರೆ ನೀಡಿದ್ದರೂ ಮಂಗಳವಾರ ಸಾರಿಗೆ ಬಂದ್ ಠುಸ್ ಪಠಾಕಿಯಾಗುವ ಸಾಧ್ಯತೆಯಿದೆ. ಬಿಎಂಟಿಸಿ ಸೇರಿದಂತೆ ಕೆಎಸ್​ಆರ್​ಟಿಸಿ, ವಾಯುವ್ಯ ಸಾರಿಗೆ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡಿಲ್ಲ. ನಮ್ಮ ಮೆಟ್ರೋ ಮತ್ತು ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿಲ್ಲ.

    ಬಂದ್ ಗೆ ನಮ್ಮ ಮೆಟ್ರೋ ನೌಕರರು ನೈತಿಕ ಬೆಂಬಲ ನೀಡಿದ್ದಾರೆ. ನೌಕರರು ತಮ್ಮ ಪಾಳಿ ಮುಗಿದ ಬಳಿಕ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೆಟ್ರೋ ನೌಕರರ ಸಂಘ ಹೇಳಿದೆ. ಲಾರಿಗಳು ಎಂದಿನಂತೆ ರಸ್ತೆಗಿಳಿಯಲಿವೆ. ಬಂದ್‍ಗೆ ನಮ್ಮ ನೈತಿಕ ಬೆಂಬಲ ಇದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿಕೆ ನೀಡಿದ್ದಾರೆ.

    ಆಟೋ ಚಾಲಕರ ಸಂಘ ಮತ್ತು ಟ್ಯಾಕ್ಸಿ ಮಾಲೀಕರ ಸಂಘ ಬಂದ್‍ಗೆ ಬೆಂಬಲ ನೀಡಿದೆ. ಹೀಗಾಗಿ ಮಂಗಳವಾರ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಾ ಓಲಾ-ಊಬರ್ ಹಾಗೂ ಇತರೆ ಟ್ಯಾಕ್ಸಿಗಳು ಸೇವೆಯಲ್ಲಿ ವ್ಯತ್ಯಯ ಉಂಟಾತ್ತದೆ. ಬಂದ್ ಗೆ ಬೆಂಬಲ ನೀಡಿರುವುದಾಗಿ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳರವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ನೌಕರರ ಒಕ್ಕೂಟವಾದ ಸಿಐಟಿಯು ದೇಶಾದ್ಯಂತ ನಡೆಯುತ್ತಿರುವ ಬಂದ್ ಗೆ ಎಲ್ಲಾ ವಾಹನ ಸವಾರರು ಸಹಕರಿಸುವಂತೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕರಪತ್ರ ಹಂಚುತ್ತಿದ್ದಾರೆ.

    ಮಂಗಳವಾರದ ಸಾರಿಗೆ ಬಂದ್ ಗೆ ಎಐಟಿಯುಸಿ ಬೆಂಬಲ ನೀಡಿಲ್ಲ. ಸಿಐಟಿಯು ಕರೆ ಕೊಟ್ಟ ಬಂದ್ ಗೆ ಸಾರಿಗೆ ನಿಗಮದ ನೌಕರರ ಸಂಘದಲ್ಲಿಯೇ ಅಪಸ್ವರ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಐಟಿಯುಸಿಯು ಮಸೂದೆಗೆ ವಿರೋಧವಿದ್ದರೂ ಮಂಗಳವಾರದ ಬಂದ್ ಗೆ ಪಾಲ್ಗೊಳ್ಳದಂತೆ ತನ್ನ ಸಾರಿಗೆ ನೌಕರರಿಗೆ ಸೂಚನೆ ನೀಡಿದೆ.

    ಈ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಸಾರಿಗೆ ಉದ್ದಿಮೆ ಕಾರ್ಪೋರೇಟ್ ಕಂಪನಿಗಳ ವಶವಾಗಲಿದೆ. ಅಲ್ಲದೇ ದಂಡ ವಸೂಲಿ ಅವೈಜ್ಞಾನಿಕವಾಗಿದೆ ಎಂದು ನೌಕರರು ಆರೋಪಿಸಿದ್ದಾರೆ. ಕೂಡಲೇ ಮಸೂದೆಯನ್ನು ಹಿಂಪಡೆಯುವಂತೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಟೌನ್ ಹಾಲ್ ನಿಂದ ರ‍್ಯಾಲಿ ಪ್ರಾರಂಭವಾಗಿ ಫ್ರೀಡಂ ಪಾರ್ಕ್ ನಲ್ಲಿ ಅಂತಿಮಗೊಳ್ಳುತ್ತದೆ. ನೌಕರರು ಫ್ರೀಡಂ ಪಾಕ್‍ನಲ್ಲಿ ಬೃಹತ್ ಸಭೆಯನ್ನು ನಡೆಸಲಿದ್ದಾರೆ ಸಿದ್ಧತೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಗಮನಿಸಿ, ಆಗಸ್ಟ್ 7 ರಂದು ಸಾರಿಗೆ ಮುಷ್ಕರ – ಬಿಎಂಟಿಸಿ, ಕೆಎಸ್ಆರ್‌ಟಿಸಿ ರಸ್ತೆಗೆ ಇಳಿಯಲ್ಲ

    ಗಮನಿಸಿ, ಆಗಸ್ಟ್ 7 ರಂದು ಸಾರಿಗೆ ಮುಷ್ಕರ – ಬಿಎಂಟಿಸಿ, ಕೆಎಸ್ಆರ್‌ಟಿಸಿ ರಸ್ತೆಗೆ ಇಳಿಯಲ್ಲ

    ಬೆಂಗಳೂರು: 2017ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿ ರಸ್ತೆ ಸಾರಿಗೆ ಕಾರ್ಮಿಕ ಮತ್ತು ಮಾಲೀಕರ ಸಂಘಟನೆ ದೇಶಾದ್ಯಂತ ಆಗಸ್ಟ್ 7 ರಂದು ಮುಷ್ಕರಕ್ಕೆ ಕರೆ ನೀಡಿದೆ.

    ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವೇದಿಕೆ ಮುಖಂಡರು, ಕೇಂದ್ರ ಸರ್ಕಾರದ ಜಾರಿಗೆ ತಂದಿರುವ 2017 ರ ಮೋಟಾರು ತಿದ್ದುಪಡಿ ಕಾಯ್ದೆಯ ವಿರುದ್ಧ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಈ ಹೋರಾಟದಲ್ಲಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಸೇರಿದಂತೆ ಬಿಎಂಟಿಸಿ ಸಾರಿಗೆ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 6 ರಿಂದ ಸಂಜೆ 6ವರೆಗೂ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಸದ್ಯ ಆಗಸ್ಟ್ 07 ರಂದು ನಡೆಯುವ ಮುಷ್ಕರಕ್ಕೆ ಆಟೋ ಚಾಲಕರ ಸಂಘ, ಏರ್ ಪೋರ್ಟ್ ಟ್ಯಾಕ್ಸಿ ಚಾಲಕರ ಸಂಘ ಹಾಗೂ ಬಿಎಂಟಿಸಿ ಯೂನಿಯನ್ ಸಾಥ್ ನೀಡಿದೆ. ಬಂದ್ ಕುರಿತು ಹೀಗಾಗಲೇ ನೌಕರರಿಗೆ ಮಾಹಿತಿ ನೀಡಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್ ಡಿ ರೇವಪ್ಪ ಪಬ್ಲಿಕ್ ಟಿವಿಗೆ ಹೇಳಿಕೆದ್ದಾರೆ.

    ಮಸೂದೆಗೆ ವಿರೋಧ ಯಾಕೆ?
    ಕೇಂದ್ರ ಜಾರಿಗೆ ತಂದಿರುವ ಹೊಸ ನೀತಿ ಇಂದ ರಾಜ್ಯ ವಾಹನಗಳಿಗೆ ಪರ್ಮೀಟ್ ನೀಡುದಕ್ಕೆ ಹಾಗೂ ಸಾರಿಗೆ ನೀತಿರೂಪಣೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕಾಗಲಿದೆ. ಕೇಂದ್ರ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಲಿದೆ. ರಾಷ್ಟ್ರೀಯ ಸಾರಿಗೆ ನೀತಿ ಅಡಿ ರಾಜ್ಯಗಳ ಒಪ್ಪಿಗೆ ಇಲ್ಲದೇ ಕೇವಲ ಅಭಿಪ್ರಾಯವಷ್ಟೇ ಪಡೆದು ಹೊಸ ನೀತಿಯನ್ನು ಕೇಂದ್ರ ಜಾರಿಗೆ ತರಬಹುದು. ಇದರಿಂದ ಸಾರಿಗೆ ಇಲಾಖೆ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಅಗ್ರಿಗೇಟರ್ ಲೈಸೆನ್ಸ್ ಅನ್ನು ರಾಜ್ಯಸರ್ಕಾರ ನೀಡಬಹುದಾದರೂ ನೀಡುವ ಮಾನದಂಡವನ್ನ ಕೇಂದ್ರ ತೀರ್ಮಾನಿಸಲಿದೆ.

    ಹೊಸ ಕಾಯ್ದೆಯಿಂದ ಊಬರ್, ಓಲಾ ದಂತಹ ಖಾಸಗಿ ದೊಡ್ಡ ಸಂಸ್ಥೆಗಳ ಆರ್ಭಟ ಹೆಚ್ಚಾಗಲಿದೆ. ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ, ಮುಂತಾದವುಗಳನ್ನು ಕಾರ್ಪೋರೇಟ್, ಆಟೋ ಮೊಬೈಲ್ ಕಂಪನಿಗಳ ಹಿಡಿತಕ್ಕೆ ಒಪ್ಪಿಸಲಾಗುತ್ತದೆ. ಎಲ್ಲವೂ ದುಬಾರಿ ಶುಲ್ಕ ಗಳ ಸುಲಿಗೆ ಕೇಂದ್ರಗಳಾಗುತ್ತೆ. ದಂಡಗಳ ಪ್ರಮಾಣ ಭಾರೀ ಹೆಚ್ಚಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

  • ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

    ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

    ಬೆಂಗಳೂರು: ಬಸ್ ಪ್ರಯಾಣದ ದರವನ್ನು ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೊರ ಹಾಕಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆ ಹೆಚ್ಚಳದಿಂದ ಸಾರಿಗೆ ಇಲಾಖೆಯ ನಷ್ಟದ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಇಲಾಖೆಗೆ ಕನಿಷ್ಟ 1 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಕೇಳಿದ್ದೇವೆ. ಇದರೊಂದಿಗೆ 20%ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಎಲ್ಲ ಸಾರಿಗೆ ನಿಗಮಗಳೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

    ಬಸ್ ಪ್ರಯಾಣ ದರವನ್ನು ಏರಿಕೆ ಮಾಡಬೇಕು ಎಂದು ಈ ಹಿಂದೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಈ ನಿರ್ಧಾರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈಗೆ ಒಪ್ಪಿಸಲಾಗಿದೆ ಎಂದರು.

    ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಚಾರವಾಗಿ ಮಾತನಾಡಿದ ಸಚಿವರು, ಉಚಿತ ಬಸ್ ಪಾಸ್ ಗೆ 2 ಸಾವಿರ ಕೋಟಿ ರೂ. ಖರ್ಚು ಬರಲಿದೆ. ಹೀಗಾಗಿ ಶಿಕ್ಷಣ ಸಚಿವ ಎಂ.ಮಹೇಶ್ ಶಿಕ್ಷಣ ಇಲಾಖೆಯಿಂದ 25% ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದಕ್ಕೆ ಸಾರಿಗೆ ಇಲಾಖೆಯಿಂದ 25% ರಷ್ಟು ಅನುದಾನ ಕೂಡಿಸುತ್ತೇವೆ. ಆದರೆ ಉಳಿದ 50%ರಷ್ಟು ಅನುದಾನವನ್ನು ಸರ್ಕಾರ ಕೊಡಲಿದೆ. ಹಿಂದಿನ ಸರ್ಕಾರವು ಇಷ್ಟೇ ನೆರವು ಕೊಡುತ್ತಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿದ್ದಾರೆ. ರಾಜ್ಯಕ್ಕೆ ಮರಳಿದ ಬಳಿಕ ಉಚಿತ ಬಸ್ ಪಾಸ್ ಕುರಿತು ಚರ್ಚೆ ನಡೆಸಲಾಗುತ್ತದೆ. ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಾರಿಗೆ ಸೆಸ್ ಸಂಗ್ರಹಿಸುವಂತೆ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮಹಾನಗರ ಪಾಲಿಕೆ ಈಗಾಗಲೇ ಭಿಕ್ಷುಕರ ಕರ ಸೇರಿದಂತೆ ವಿವಿಧ ಸೆಸ್‍ಗಳನ್ಮು ವಿಧಿಸಲಾಗುತ್ತಿದೆ. ಅದೇ ರೀತಿ ಸಾರಿಗೆ ಸೆಸ್ ಸಂಗ್ರಹಿಸಿ ಕೊಟ್ಟರೆ ನಗರ ಸಾರಿಗೆಗೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ:  ಬೆಂಗಳೂರಿಗರ ಮೇಲೆ ಟ್ರಾನ್ಸ್ ಪೋರ್ಟ್ ಸೆಸ್: ಸಾರಿಗೆ ಸಚಿವರಿಂದ ಶಾಕ್!

    ಮನಸ್ಸಿಗೆ ದುಃಖ ಆದಾಗ ಅತ್ತು ಬಿಡಬೇಕು. ಆಗಲೇ ಮನಸ್ಸಿಗೆ ಸಮಾಧಾನವಾಗುತ್ತದೆ. ಕುಮಾರಸ್ವಾಮಿ ಭಾವನಾತ್ಮಕ ವ್ಯಕ್ತಿ. ಹೀಗಾಗಿ ಅವರು ಅಳುವಿನ ಮೂಲಕ ತಮ್ಮ ದುಃಖ ಶಮನ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಯಾರ ಮೇಲೂ ಆರೋಪ ಮಾಡಿಕೊಂಡಿಲ್ಲ. ಅಲ್ಲದೆ ತಮಗೆ ನೋವು ಕೊಟ್ಟಿದ್ದಾರೆ ಎಂದು ಹೇಳಿಲ್ಲ ಎಂದು ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದರು.

    ನಿಗಮಗಳ ಬೇಡಿಕೆ ಏನು:
    ಸಾರಿಗೆ ಇಲಾಖೆ ಮೂರುವರೆ ವರ್ಷಗಳ ಹಿಂದೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿತ್ತು. ಈಗ ಸಾರಿಗೆ ಇಲಾಖೆ 65 ರೂ. ಗೆ ಹೋಲ್ ಸೇಲ್ ದರದಲ್ಲಿ ಪ್ರತಿ ಲೀಟರ್ ಡೀಸೆಲ್ ಪಡೆಯುತ್ತಿದೆ. ಆಗುತ್ತಿರುವ ನಷ್ಟವನ್ನು ಸರಿದೂಗಿಸಲು 8% ದಿಂದ 10% ದರ ಏರಿಸಲು ಸಾರಿಗೆ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

    ಕಳೆದ ಕೆಲ ತಿಂಗಳಿಂದ ಡೀಸೆಲ್ ದರ ಹೆಚ್ಚಾಗುತ್ತಿದೆ. ಏಪ್ರಿಲ್ ನಲ್ಲಿ ಲೀಟರ್ ಗೆ 61.02 ರೂ. ಇತ್ತು. ಆದರೆ ಮೇ ತಿಂಗಳಲ್ಲಿ 70.25 ರೂ. ಗೆ ಏರಿಕೆ ಆಗಿದೆ. ಇದರ ಜೊತೆ ಬಜೆಟ್‍ನಲ್ಲಿ ತೈಲ ದರದ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ದರವನ್ನು 30% ದಿಂದ 32%ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ಶನಿವಾರದಿಂದ ಪೆಟ್ರೋಲ್ ಪ್ರತಿ ಲೀಟರ್ ಗೆ 1.14 ರೂ. ಮತ್ತು ಡೀಸೆಲ್ ಲೀಟರ್ ಗೆ 1.12 ರೂ. ದುಬಾರಿಯಾಗಿದೆ.

    ಡೀಸೆಲ್ ಏರಿಕೆಯಿಂದ ದಿನಕ್ಕೆ ಲಕ್ಷಾಂತರ ಲೀಟರ್ ಡೀಸೆಲ್ ಉಪಯೋಗಿಸುವ ಸಾರಿಗೆ ನಿಗಮಗಳು ಈಗ ಡೀಸೆಲ್ ಗಾಗಿ ಅಧಿಕ ಹಣ ಪಾವತಿಸುತ್ತಿದೆ. ಮೊದಲೇ ಸಾರಿಗೆ ನಿಮಗ ನಷ್ಟದಲ್ಲಿರುವುದರಿಂದ ಈಗ ಟಿಕೆಟ್ ಬೆಲೆ ಏರಿಕೆ ಅನಿವಾರ್ಯವಾಗಿದೆ. ಅಷ್ಟೇ ಅಲ್ಲದೆ ತೈಲ ಕಂಪೆನಿಗಳು ಸಗಟು ಡೀಸೆಲ್ ಬೆರೆಯನ್ನು ಏರಿಕೆ ಮಾಡಿವೆ. ಆದ್ದರಿಂದ ಸಾರಿಗೆ ನಿಗಮಗಳಿಗೆ ಪ್ರತಿದಿನ 30.97 ಲಕ್ಷ ರೂ. ಅಧಿಕವಾಗಿ ಆರ್ಥಿಕ ಹೊರೆ ಬೀಳುತ್ತಿದ್ದು, ತಿಂಗಳಿಗೆ 9.29 ಕೋಟಿ ರೂ. ಅಧಿಕ ವೆಚ್ಚವಾಗುತ್ತಿದೆ ಎಂದು ವರದಿಯಾಗಿತ್ತು.

  • ಸಾರಿಗೆ ಇಲಾಖೆಯಿಂದ ಮಹಿಳಾ ಸಿಬ್ಬಂದಿಗೆ ಶಾಕಿಂಗ್ ನ್ಯೂಸ್!

    ಸಾರಿಗೆ ಇಲಾಖೆಯಿಂದ ಮಹಿಳಾ ಸಿಬ್ಬಂದಿಗೆ ಶಾಕಿಂಗ್ ನ್ಯೂಸ್!

    ಹಾಸನ: ಮೋದಿ ಸರ್ಕಾರದಲ್ಲಿ ಭೇಟಿ ಪಡಾವೋ, ಭೇಟಿ ಬಚಾವೋ ಎಂದು ಮಹಿಳೆಯ ಅಭಿವೃದ್ಧಿಗೆ ಪಣತೊಟ್ಟಿದೆ. ಆದರೆ ರಾಜ್ಯ ಸಾರಿಗೆ ಇಲಾಖೆಯಲ್ಲಿ ಮಾತ್ರ ಮಹಿಳೆಯರು ಕೆಲಸಕ್ಕೆ ಬೇಡ ಎಂದು ಹೇಳಲಾಗುತ್ತಿದೆ.

    ಹಾಸನ ಕೆಎಸ್‍ಆರ್ ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ, ಮಹಿಳೆಯರಿಗೆ ಕೆಲಸ ಕೊಡೋದು ಬೇಡ ಪ್ಲೀಸ್ ಎಂದು ಎಡವಟ್ಟು ಪತ್ರವನ್ನು ಬರೆದಿದ್ದಾರೆ. ಕೆಎಸ್‍ಆರ್ ಟಿಸಿ ತಾಂತ್ರಿಕ ವಿಭಾಗದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಈ ಕೆಲಸಕ್ಕೆ ಮಹಿಳೆಯರ ನೇಮಕ ಬೇಡ, ಪುರುಷರಿಗಷ್ಟೇ ಅವಕಾಶ ನೀಡೋಣ ಅಂತಾ ಬೆಂಗಳೂರು ಕೆಎಸ್‍ಆರ್ ಟಿಸಿ ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ.

    ಮಹಿಳೆಯರಿಗೆ ಕೆಲ್ಸ ಕೊಡೋದು ಬೇಡ!
    * ತಾಂತ್ರಿಕ ವಿಭಾಗದಲ್ಲಿ ಭದ್ರತೆಗಾಗಿ ಮಹಿಳೆಯರನ್ನು ನಿಯೋಜಿಸೋದಕ್ಕೆ ಕಷ್ಟವಾಗುತ್ತೆ.
    * ಮಹಿಳೆಯರು ಸಿಕ್ಕಾಪಟ್ಟೆ ಸೂಕ್ಷ್ಮ ಮನಸ್ಥಿತಿಯವರು ರಜೆ ಜಾಸ್ತಿ ಹಾಕುತ್ತಾರೆ.
    * ಪ್ರಸೂತಿ ರಜೆ, ಆರೋಗ್ಯ ಸರಿ ಇಲ್ಲ ಹೀಗೆ ನಾನಾ ಕಾರಣದಿಂದ ದೀರ್ಘ ರಜೆ ಹಾಕುತ್ತಾರೆ. ಪಾಪ ಆಗ ಪುರುಷ ಸಿಬ್ಬಂದಿಗಳ ಮೇಲೆ ಹೊರೆ ಬೀಳುತ್ತೆ.
    * ಮಕ್ಕಳ ಲಾಲಾನೆ ಪಾಲನೆ ಅಂತಾ ಹೆಚ್ಚಿನ ರಜೆ ಕೇಳುತ್ತಾರೆ.

    ಹೀಗೆ ನಾನಾ ಕಾರಣವನ್ನು ಅಧಿಕಾರಿ ಮುಂದಿಟ್ಟಿದ್ದಾರೆ. ಈಗಾಗಲೇ ತಾಂತ್ರಿಕ ವಿಭಾಗದಲ್ಲಿ ಇರುವ ಮಹಿಳೆಯರು ಕಾರ್ಯ ನಿರ್ವಹಿಸುತ್ತಿಲ್ಲ ಅಂತಾ ಅವಲತ್ತುಕೊಂಡಿದ್ದಾರೆ.

  • ಓಲಾ, ಊಬರ್ ಮಾದರಿಯಲ್ಲೇ ಇನ್ಮುಂದೆ ಸರ್ಕಾರಿ ಟ್ಯಾಕ್ಸಿ ಸೇವೆ!

    ಓಲಾ, ಊಬರ್ ಮಾದರಿಯಲ್ಲೇ ಇನ್ಮುಂದೆ ಸರ್ಕಾರಿ ಟ್ಯಾಕ್ಸಿ ಸೇವೆ!

    ಬೆಂಗಳೂರು: ಓಲಾ ಮತ್ತು ಊಬರ್ ಗೆ ಪೈಪೋಟಿ ನೀಡಲು ಕರ್ನಾಟಕ ಸಾರಿಗೆ ಇಲಾಖೆ ಮುಂದಾಗಿದೆ. ಓಲಾ ಮತ್ತು ಊಬರ್ ಮಾದರಿಯಲ್ಲೇ ಕ್ಯಾಬ್ ಸೇವೆ ಜಾರಿಗೆ ತರಲು ಸಾರಿಗೆ ಇಲಾಖೆ ಯೋಜಿಸಿದೆ.

    ಜುಲೈ 5ರಂದು ಮಂಡಿಸಲು ಉದ್ದೇಶಿಸಿರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದೆ. ಮೆಟ್ರೋ ರೈಲಿನಿಂದ ಇಳಿದವರು ಮುಂದಿನ ದಾರಿಗೆ ಸಂಪರ್ಕ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದಕ್ಕಾಗಿ ಓಲಾ ಹಾಗೂ ಊಬರ್ ಮಾದರಿಯಲ್ಲೇ ಆ್ಯಪ್ ರಚಿಸಿ, ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

    ಈಗಾಗಲೇ ಇದಕ್ಕಾಗಿ ಆ್ಯಪ್ ರೂಪಿಸಿ ಯೋಜನೆ ಜಾರಿಗೊಳಿಸಲು ಬಜೆಟ್ ಪ್ರಸ್ತಾವನೆಗೆ ಸಲ್ಲಿಕೆಯಾಗಿದ್ದು, ಪ್ರಸ್ತಾವನೆಗೆ ಸಿಕ್ಕಿದೆ ಪ್ರಾಥಮಿಕ ಅನುಮತಿಯೂ ಕೂಡ ಸಿಕ್ಕಿದೆ. ಅಧಿಕೃತವಾಗಿ ಘೋಷಣೆಯೊಂದೇ ಬಾಕಿ ಇದೆ. ಜೊತೆಗೆ ಮುಂದಿನ ಹಂತದಲ್ಲಿ ಬೈಕ್ ಟ್ಯಾಕ್ಸಿ ಯೋಜನೆಗೂ ಸರ್ಕಾರ ಚಿಂತಿಸಿದೆ.

    ಈ ಯೋಜನೆಯಲ್ಲಿ ಕಾರು, ಆಟೋ ಸೇವೆ ಮೊದಲ ಹಂತದಲ್ಲಿ ಸಿಗಲಿದೆ. ಮುಂದಿನ ಹಂತದಲ್ಲಿ ಬೈಕ್ ಟ್ಯಾಕ್ಸಿ ಒದಗಿಸುವ ಕುರಿತು ಚಿಂತನೆ ನಡೆಸಲಾಗಿದೆ. ಮೆಟ್ರೋ ನಿಲ್ದಾಣದಿಂದ ಮುಂದಿನ ಸ್ಥಳಗಳಿಗೆ ಬಸ್ ಕಲ್ಪಿಸುವ ಯೋಜನೆಯಲ್ಲಿ ಬಿಎಂಟಿಸಿಗೆ ನಷ್ಟ ಆದ್ದರಿಂದ ಈ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಆಕರ್ಷಕ, ಕ್ಯಾಚಿ ಹೆಸರು ಇಡುವ ಹೊಣೆಯನ್ನ ನಾಗರಿಕರಿಗೆ ವಹಿಸುವ ಕುರಿತು ಸಾರಿಗೆ ಇಲಾಖೆ ಆಲೋಚಿಸಿದೆ.

  • ಜೆಡಿಎಸ್‍ಗೆ ಸೇರ್ಪಡೆ ಆದ್ರಾ ಮಂಡ್ಯದ ಗಂಡು ಅಂಬರೀಶ್?

    ಜೆಡಿಎಸ್‍ಗೆ ಸೇರ್ಪಡೆ ಆದ್ರಾ ಮಂಡ್ಯದ ಗಂಡು ಅಂಬರೀಶ್?

    ಮಂಡ್ಯ: ಸಚಿವರಾದ ನಂತರ ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಮಂಡ್ಯದ ಮದ್ದೂರಿಗೆ ಆಗಮಿಸುತ್ತಿರುವ ಸಚಿವ ಡಿಸಿ ತಮ್ಮಣ್ಣ ಅವರನ್ನು ಸ್ವಾಗತಿಸಲು ಹಾಕಿರುವ ಫ್ಲೆಕ್ಸ್ ಗಳು ಮಂಡ್ಯದ ಗಂಡು ಅಂಬರೀಶ್ ಫೋಟೋ ರಾರಾಜಿಸುತ್ತಿದ್ದು, ಅಂಬಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಮದ್ದೂರಿಗೆ ಆಗಮಿಸಿದ ಡಿಸಿ ತಮ್ಮಣ್ಣ ಅವರಿಗೆ ಸ್ವಾಗತ ಕೋರಲು ಬೆಂಬಲಿಗರು ದಾರಿ ಉದ್ದಕ್ಕೂ ಫ್ಲೆಕ್ಸ್ ಹಾಕಿದ್ದಾರೆ. ಸ್ವಾಗತ ಕೋರಿ ಹಾಕಿರುವ ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಭಾವಚಿತ್ರದ ಜೊತೆಗೆ ಅಂಬರೀಶ್ ಭಾವಚಿತ್ರವೂ ರಾರಾಜಿಸುತ್ತಿದೆ. ಇದನ್ನು ಓದಿ: ಅಂಬರೀಶ್, ನಾನು ಅಣ್ಣ-ತಮ್ಮಂದಿರಿದ್ದಂತೆ: ಕುಮಾರಸ್ವಾಮಿ

    ಸಮ್ಮಿಶ್ರ ಸರ್ಕಾರದಲ್ಲಿ ಡಿಸಿ ತಮ್ಮಣ್ಣಗೆ ಪ್ರಮುಖ ಸಾರಿಗೆ ಸಚಿವ ಸ್ಥಾನ ಸಿಗಲು ಅಂಬರೀಶ್ ಪ್ರಮುಖ ಕಾರಣ ಎಂಬ ಮಾತು ಕೇಳಿ ಬಂದಿತ್ತು. ಚುನಾವಣೆಯ ಮತದಾನದ ವೇಳೆಯೂ ಅಂಬರೀಶ್ ಅವರು ಡಿಸಿ ತಮ್ಮಣ್ಣ ಅವರ ಕಾರಿನಲ್ಲಿ ಬಂದು ಮತ ಚಲಾಯಿಸಿದ್ದರು. ಇಷ್ಟೆಲ್ಲ ಚರ್ಚೆಗಳ ಜೊತೆಗೆ ಇದೀಗ ಡಿಸಿ ತಮ್ಮಣ್ಣ ಅವರಿಗೆ ಸ್ವಾಗತ ಕೋರಲು ಹಾಕಿರುವ ಫ್ಲೆಕ್ಸ್ ಗಳಲ್ಲಿ ಜೆಡಿಎಸ್ ಮುಖಂಡರ ಜೊತೆ ಅಂಬಿ ಭಾವಚಿತ್ರವೂ ಕಾಣಿಸಿಕೊಂಡಿದೆ. ಸದ್ಯ ಜೆಡಿಎಸ್ ಫ್ಲೆಕ್ಸ್ ನಲ್ಲಿ ಅಂಬರೀಶ್ ಭಾವಚಿತ್ರ ಹಾಕಿರುವುದರಿಂದ ಮಂಡ್ಯದಲ್ಲಿ ಅಂಬರೀಶ್ ಜೆಡಿಎಸ್ ಪಕ್ಷದ ಮೂಲಕ ಮತ್ತೆ ರಾಜಕೀಯದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡಲಿದ್ದಾರಾ ಎನ್ನುವ ಚರ್ಚೆ ಈಗ ಆರಂಭವಾಗಿದೆ. ಇದನ್ನು ಓದಿ:  ಅಂಬರೀಶ್ ಜೊತೆಗಿನ ಮಾತುಕತೆಯ ಗುಟ್ಟು ಜೆಡಿಎಸ್ ಅಭ್ಯರ್ಥಿಯಿಂದ ಬಯಲು!

  • ಇಷ್ಟವಾದ ವಾಹನ ನೋಂದಣಿ ಸಂಖ್ಯೆಗೆ ಇನ್ಮುಂದೆ ತಿಂಗಳುಗಟ್ಟಲೆ ಕಾಯಬೇಕಿಲ್ಲ- ಬರ್ತಿದೆ `ವಾಹನ್ 4′ ವೆಬ್‍ಸೈಟ್

    ಇಷ್ಟವಾದ ವಾಹನ ನೋಂದಣಿ ಸಂಖ್ಯೆಗೆ ಇನ್ಮುಂದೆ ತಿಂಗಳುಗಟ್ಟಲೆ ಕಾಯಬೇಕಿಲ್ಲ- ಬರ್ತಿದೆ `ವಾಹನ್ 4′ ವೆಬ್‍ಸೈಟ್

    ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಸಂತಸದ ಸಂಗತಿಯೊಂದನ್ನು ಹೊತ್ತು ತಂದಿದೆ. ಇಷ್ಟು ದಿನ ವಾಹನಗಳಿಗೆ ಇಷ್ಟವಾದ ನೋಂದಣಿ ಸಂಖ್ಯೆ ಅಥವಾ ತಮ್ಮ ಜನ್ಮದಿನಾಂಕದ ನಂಬರ್ ಪಡೆಯಲು ಜನರು ತಿಂಗಳಿನಿಂದ ಹಿಡಿದು ವರ್ಷಾನುಗಟ್ಟಲೆ ಕಾಯುತ್ತಿದ್ದರು. ಈಗ ತಕ್ಷಣ ಪಡೆಯವಂತಹ ಹೊಸ ಸಾಫ್ಟ್ ವೇರ್ ವೊಂದನ್ನ ಸಾರಿಗೆ ಇಲಾಖೆ ಲಾಂಚ್ ಮಾಡುತ್ತಿದೆ.

    ಇಷ್ಟು ದಿನ ತಮಗೆ ಇಷ್ಟವಾದ ನಂಬರ್ ಪಡೆಯಲು ಜನರು ವರ್ಷಾನುಗಟ್ಟಲೆ ಕಾದು, ಆ ನಂಬರಿನ ಸೀರೀಸ್ ಬರುವ ತನಕ ವಾಹನಗಳನ್ನೇ ಖರೀದಿ ಮಾಡುತ್ತಿರಲಿಲ್ಲ. ಕೆಲವೊಮ್ಮೆ ಇಂತಹ ನಂಬರ್ ಪಡೆಯಲು ಹಣವನ್ನು ಸಹ ನೀಡಬೇಕಿತ್ತು. ಆದರೆ ಇದಕ್ಕೆಲ್ಲ ಕಡಿವಾಣ ಹಾಕೋದಕ್ಕೆ ಅಂತಾನೆ ಸಾರಿಗೆ ಇಲಾಖೆ ಇನ್ನು ಕೆಲವೇ ದಿನಗಳಲ್ಲಿ ‘ವಾಹನ್ 4’ ಎಂಬ ವಿನೂತನ ವೆಬ್‍ಸೈಟ್ ಹೊರತರುತ್ತಿದೆ. ಇದರಲ್ಲಿ ಸಾರಿಗೆ ಇಲಾಖೆಯ ಜೊತೆ ವ್ಯವಹಾರ ಮಾಡುವವರು ಸಂಪೂರ್ಣವಾಗಿ ಆನ್‍ಲೈನ್ ಮುಖಾಂತರವೇ ವ್ಯವಹಾರ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೆ ತಮಗೆ ಇಷ್ಟವಾದ ನಂಬರನ್ನು ಸಹ ವೆಬ್‍ಸೈಟ್ ಮೂಲಕ ಲಾಕ್ ಮಾಡಿಸಿ 24 ಗಂಟೆಗಳ ಒಳಗೆ ಖರೀದಿ ಮಾಡಬಹುದು.

    ವೆಬ್‍ಸೈಟ್‍ನ ಪ್ರಯೋಜನ

    * ಎಲ್ಲಾ ವಾಹನಗಳ ನೋಂದಣಿ ಸೇವೆಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಕೆ.
    * ಆನ್‍ಲೈನ್‍ನಲ್ಲೇ ಶುಲ್ಕ ಪಾವತಿ.
    * ಅರ್ಜಿದಾರರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ.
    * ರ‍್ಯಾಂಡಮ್‌ ಪದ್ಧತಿಯಲ್ಲಿ ವಾಹನ ನೊಂದಣಿ ಸಂಖ್ಯೆ ಹಂಚಿಕೆ.
    * ವಾಹನದ ಎನ್‍ಓಸಿ ಶೀಘ್ರವಾಗಿ ನೀಡುವಿಕೆ.
    * ವಾಹನಗಳ ನೊಂದಣಿಗಳ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ಪಡಯಬುದು ಎಂದು ಸಾರಿಗೆ ಇಲಾಖೆಯ ಕಮಿಷನರ್ ದಯಾನಂದ್ ತಿಳಿಸಿದ್ದಾರೆ.