Tag: Transport Employees

  • ಆ.5ರಂದು ಸಾರಿಗೆ ಬಂದ್‌ಗೆ ನಿರ್ಧಾರ – ಇಂದು 4 ನಿಗಮಗಳ ಜೊತೆ ಹೈವೋಲ್ಟೇಜ್‌ ಸಭೆ

    ಆ.5ರಂದು ಸಾರಿಗೆ ಬಂದ್‌ಗೆ ನಿರ್ಧಾರ – ಇಂದು 4 ನಿಗಮಗಳ ಜೊತೆ ಹೈವೋಲ್ಟೇಜ್‌ ಸಭೆ

    ಬೆಂಗಳೂರು: ಸರ್ಕಾರದ ವಿರುದ್ಧ ಸಮರ ಸಾರಿರುವ ಸಾರಿಗೆ ನೌಕರರು (Transport Employees) ಪಟ್ಟು ಸಡಿಲಿಸುವಂತೆ ಕಾಣ್ತಿಲ್ಲ. ಅತ್ತ 5ನೇ ತಾರೀಖು ಬಂದ್ ಮಾಡೇ ಮಾಡುತ್ತೇವೆ ಅಂತ ಪಟ್ಟು ಹಿಡಿದಿದ್ರೆ, ಇತ್ತ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಬಗ್ಗೆ ನಿರ್ಧಾರ ಮಾಡಬೇಕಿದ್ದ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರತಿಭಟನೆ (Rahul Gandhi Protest) ಸಮಾವೇಶದಲ್ಲಿ ಬ್ಯುಸಿಯಾಗಿದ್ದಾರೆ.

    ಈ ಮಧ್ಯೆ ಇಂದು ಕೊನೆಯ ಮುಷ್ಕರದಿಂದ ಮನವೊಲಿಸುವ ನಿಟ್ಟಿನಲ್ಲಿ ಸಾರಿಗೆ ಮುಖಂಡರ ಜೊತೆ ಕೊನೆ ಹಂತದ ಹೈವೋಲ್ಟೇಜ್ ಸಭೆ ನಡೆಯಲಿದೆ. ಇದನ್ನೂ ಓದಿ: ಎಣ್ಣೆಯಲ್ಲಿ ಫ್ಯಾಟ್ ಚೆಕಿಂಗ್‌ಗೆ ಮುಂದಾದ ಹೋಟೆಲ್‌ ಮಾಲೀಕರು – ಡಿವೈಸ್ ಬೆಲೆ ಕೇಳಿ ಸುಸ್ತು!

    ಹಿಂಬಾಕಿ, ಸಂಬಳ ಹೆಚ್ಚಳ ವಿಚಾರವಾಗಿ ಸರ್ಕಾರದ ವಿರುದ್ಧ ಸಮರ ಸಾರಿ ಮುಷ್ಕರಕ್ಕೆ ಕರೆ ಕೊಟ್ಟಿರುವ ಸಾರಿಗೆ ನೌಕರರು ಮುಷ್ಕರ ಮಾಡೇ ಮಾಡ್ತೀವಿ ಅಂತ ಪಟ್ಟು ಹಿಡಿದಿದ್ದಾರೆ. ಆಗಸ್ಟ್ 4ರ ತನಕ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದು, ಡೆಡ್‌ಲೈನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಮಾತ್ರ ಬಾಕಿ ಇದ್ದು ಸಮಸ್ಯೆ ಸಂಬಂಧ ಸಭೆ ಕರೆದು ಸಾರಿಗೆ ಮುಖಂಡರ ಜೊತೆ ಮಾತನಾಡಬೇಕಿದ್ದ ಸಿಎಂ, 5ನೇ ತಾರೀಖು ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಪ್ರತಿಭಟನೆಯಲ್ಲಿ ಬ್ಯುಸಿಯಾಗಿದ್ದು, ಮುಷ್ಕರ ಆರಂಭವಾಗೇ ಬಿಡುತ್ತಾ ಅನ್ನೋ ಟೆನ್ಷನ್ ಹೆಚ್ಚಾಗಿದೆ. ಇದನ್ನೂ ಓದಿ: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

    ಹೌದು. ಸಮಸ್ಯೆ ಸಂಬಂಧ ಈ ಹಿಂದೆ ಮುಷ್ಕರಕ್ಕೆ ಕರೆಕೊಟ್ಟಿರೋ ಸಾರಿಗೆ ಮುಖಂಡರ ಜೊತೆ ಸಿಎಂ ಸಭೆ ಮಾಡಿದ್ರು. ಆದ್ರೆ ಸಭೆ ಯಶಸ್ಸು ಕಂಡಿರಲಿಲ್ಲ. ಆದಾದ ಮೇಲೆ ಆಗಸ್ಟ್ 4ರ ವರೆಗೆ ಡೆಡ್‌ಲೈನ್ ನೀಡಿ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಕೊಡಲಾಗಿದ್ದು. ಸಾರಿಗೆ ಮುಖಂಡರು ಕೊಟ್ಟಿದ್ದ ಡೆಡ್‌ಲೈನ್ ಮುಕ್ತಾಯಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಡೆಡ್‌ಲೈನ್ ಹತ್ತಿರ ಬರ್ತಿದ್ರೂ ಸಿಎಂ ಮಾತ್ರ ಈ ಬಗ್ಗೆ ಹೆಚ್ಚು ಗಮನಕೊಟ್ಟಂತೆ ಕಾಣ್ತಿಲ್ಲ. ಸಾರಿಗೆ ಮುಷ್ಕರ ಆರಂಭವಾಗುವ ದಿನದಂತೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.

    ಈ ಸಮಾವೇಶದ ಆಯೋಜನೆಯಲ್ಲಿ ಬ್ಯುಸಿಯಾಗಿರುವ ಸಿಎಂ ಸಾರಿಗೆ ಮುಷ್ಕರದ ಬಗ್ಗೆ ಗಮನ ಕೊಟ್ಟಂತೆ ಇಲ್ಲ. ಹಣಕಾಸು ಇಲಾಖೆ ಸಿಎಂ ಕೈಯಲ್ಲೇ ಇರುವ ಕಾರಣ, ಬೇಡಿಕೆ ಈಡೇರಿಕೆ ಸಂಬಂಧ ಸಿಎಂ ಮಾತ್ರ ನಿರ್ಧಾರ ಮಾಡೋಕೆ ಸಾಧ್ಯ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರತಿಭಟನೆ ತಯಾರಿ ನಡುವೆ ಮುಖಂಡರ ಸಭೆ ಕರೆದು ಮನವೊಲಿಸುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ‌ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ

    ಇನ್ನೂ ಈ ಮಧ್ಯೆ ಸಿಎಂ ಕೊಟ್ಟಿರುವ ಡೆಡ್‌ಲೈನ್ ಮುಕ್ತಾಯಕ್ಕೂ ಮುನ್ನ ಕಾರ್ಮಿಕ ಇಲಾಖೆ ಸಮ್ಮುಖದಲ್ಲಿ ಕೊನೆಯ ಹಂತದ ಮನವೊಲಿಕೆ ಪ್ರಯತ್ನ ನಡೆಯಲಿದೆ. ಇಂದು ಕಾರ್ಮಿಕ ಇಲಾಖೆ ಸಮ್ಮುಖದಲ್ಲಿ ಸಾರಿಗೆ ಇಲಾಖೆ 4 ನಿಗಮಗಳ ಅಧಿಕಾರಿಗಳು, ಸಾರಿಗೆ ಸಂಘಟನೆ ಮುಖಂಡರ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕಾರಿಗಳು ಕೆಲವು ಭರವಸೆ ನೀಡುವ ಸಾಧ್ಯತೆ ಇದೆ. ಆದರೆ ಇತ್ತ ಯಾವುದೇ ಕಾರಣ ಬೇಡಿಕೆ ಈಡೇರುವ ಬಗ್ಗೆ ಘೋಷಣೆಯಾಗದ ಹೊರತು ನಾವಂತೂ ಮುಷ್ಕರ ಹಿಂಪಡೆಯಲ್ಲ ಅಂತ ಮುಖಂಡರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದಿನ ಸಭೆ ಕೂಡ ಸಾಕಷ್ಟು ಕುತೂಹಲ ಕೆರಳಿಸಿದೆ.

  • ಸರ್ಕಾರ Vs ಸಾರಿಗೆ ನೌಕರರು – ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ!

    ಸರ್ಕಾರ Vs ಸಾರಿಗೆ ನೌಕರರು – ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ!

    ಬೆಂಗಳೂರು: ಸರ್ಕಾರ ಮತ್ತು ಸಾರಿಗೆ ನೌಕರರ (Transport Employees) ತಿಕ್ಕಾಟ ಮತ್ತೆ ಮುಂದುವರಿದಿದೆ. ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಸಾರಿಗೆ ಸಂಘಟನೆಗಳು, ಮತ್ತೆ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿವೆ.

    ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಸಾರಿಗೆ ನೌಕರರು, ಕೊನೆಗೂ ಸರ್ಕಾರದ ವಿರುದ್ಧ ಸಿಡಿದೆದ್ದು ಮುಷ್ಕರಕ್ಕೆ (Strike) ಕರೆಕೊಟ್ಟಿದ್ದಾರೆ. ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್ 4 ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ಕೊಡಲಾಗಿದೆ.

    ಈ ಸಂಬಂಧ ಜಂಟಿ ಕ್ರಿಯಾ ಸಮಿತಿ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. 36 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ಸಸ್ಪೆಂಡ್ ಆದ ನೌಕರರ ಮರು ನೇಮಕಾತಿಗೆ ಒತ್ತಾಯಿಸಿ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಕಳೆದ ಜೂನ್ 4 ರಂದು ಸಿಎಂ ಜೊತೆ ನೌಕರ ಮುಖಂಡರ ಸಭೆ ಮಾಡಲಾಗಿತ್ತು. ಆದರೆ ಸಭೆಯಲ್ಲಿ ನೌಕರರ ಬೇಡಿಕೆಗೆ ಸಿಎಂ ಒಪ್ಪಿರಲಿಲ್ಲ. ಅಲ್ಲದೇ 36 ತಿಂಗಳ ಹಿಂಬಾಕಿ ಕೊಡೋಕೆ ಸಿಎಂ ಕೂಡ ಒಪ್ಪಲಿಲ್ಲ. ಈ ಬಗ್ಗೆ ಸಭೆಯಲ್ಲಿ ಮುಖಂಡರು ವಿರೋಧ ವ್ಯಕ್ತಪಡಿಸಿದಾಗ ಮತ್ತೆ 6 ದಿನ ಬಿಟ್ಟು ಸಭೆ ಕರೆಯೋದಾಗಿ ಸಿಎಂ ಹೇಳಿದ್ದರು. ಆದರೆ ಮಾತು ಕೊಟ್ಟು ಅನೇಕ ದಿನಗಳಾದ್ರು, ಮತ್ತೆ ಸಭೆಗೆ ಆಹ್ವಾನ ಮಾಡಿಲ್ಲ. ಇದರಿಂದ ಆಕ್ರೋಶಗೊಂಡಿರೋ ನೌಕರರ ಮುಖಂಡರು, ಆಗಸ್ಟ್ 4 ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ್ದು, ಆ.4ರ ಒಳಗೆ ಬೇಡಿಕೆ ಈಡೇರಿಕೆ ಆದೇಶ ಹೊರಡಿಸದಿದ್ದರೆ, ಯಾವುದೇ ಹೊಂದಾಣಿಕೆ ಇಲ್ಲದೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ನೌಕರರ ಬೇಡಿಕೆಗಳೇನು…?
    * 1-1-24ರಿಂದ ಇಲ್ಲಿವರೆಗಿನ 38 ತಿಂಗಳ ಹಿಂಬಾಕಿ (ಅರಿಯರ್ಸ್)
    * ಹೊಸ ವೇತನ ಪರಿಷ್ಕರಣೆ
    * 2021ರ ಮುಷ್ಕರದಲ್ಲಿ ಅಮಾನತುಗೊಂಡ ನೌಕರರ ಮರು ನೇಮಕ

  • ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್‌ – ಇಂದು ಮಹತ್ವದ ಸಭೆ

    ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್‌ – ಇಂದು ಮಹತ್ವದ ಸಭೆ

    -1.10ಲಕ್ಷ ಸಿಬ್ಬಂದಿಗೆ 25%ರಷ್ಟು ವೇತನ ಹೆಚ್ಚಿಸುವಂತೆ ಪಟ್ಟು

    ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ. ಮತ್ತೆ ಮುಷ್ಕರಕ್ಕೆ ಪ್ಲ್ಯಾನ್ ಮಾಡಿದ್ದು, ಪ್ರತಿಭಟನೆ ಸಂಬಂಧ ಇಂದು (ಜು.3) ಮಹತ್ವದ ಸಭೆ ನಡೆಸಲು ನಾಲ್ಕು ನಿಗಮದ ನೌಕರ ಸಂಘಟನೆಗಳು ಮುಂದಾಗಿವೆ.

    ಸಾರಿಗೆ ನೌಕರರು ಮತ್ತೆ ಸರ್ಕಾರದ ಮುಂದೆ ಅನೇಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಕಳೆದ ವರ್ಷ ಕೂಡ ಬಸ್ ನಿಲ್ಲಿಸಿ ಹೋರಾಟಕ್ಕೆ ಮುಂದಾಗುವ ಎಚ್ಚರಿಕೆ ನೀಡಿದ್ದರು. ಆದರೆ ಸರ್ಕಾರ ಕಳೆದ ಡಿಸೆಂಬರ್‌ನಲ್ಲಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮೂಲಕ ಮುಖ್ಯಮಂತ್ರಿಗಳ (Siddaramaiah) ಭೇಟಿಯ ಭರವಸೆ ನೀಡಿ ಮುಷ್ಕರಕ್ಕೆ ಮುಂದಾಗದಂತೆ ಮನವಿ ಮಾಡಿ ಮನವೊಲಿಸಿದ್ದರು. ಅದಾದ ಬಳಿಕ ಮತ್ತೆ ಸಿಎಂ ಭೇಟಿಯಾಗಿದ್ದ ಸಂಘಟನೆಯ ಮುಖಂಡರಿಗೆ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿತ್ತು. ಆದರೆ ಭರವಸೆ ನೀಡಿ ತಿಂಗಳುಗಳೇ ಉರುಳಿದ್ದರೂ ಕೂಡ ಸರ್ಕಾರ ಮಾತ್ರ ಈ ಬಗ್ಗೆ ಯಾವುದೇ ವಿಚಾರಕ್ಕೂ ಮುಂದಾಗಿಲ್ಲ. ಇದು ನೌಕರರನ್ನ ಮತ್ತೆ ಕೆರಳುವಂತೆ ಮಾಡಿದೆ. ಇದೇ ಕಾರಣಕ್ಕೆ ಸಭೆ ಮಾಡಿ ಇಂದು ಮುಷ್ಕರದ ಬಗ್ಗೆ ನಿರ್ಧಾರ ಮಾಡಲು ಮುಂದಾಗಿದ್ದಾರೆ.ಇದನ್ನೂ ಓದಿ: ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿಯಿಂದ ದಾಂಧಲೆ – ನಂದಿನಿ ಪಾರ್ಲರ್‌ಗೆ ನುಗ್ಗಿ ವಸ್ತುಗಳು ಪೀಸ್ ಪೀಸ್

    ಇನ್ನೂ ಸರ್ಕಾರ 25%ರಷ್ಟು ವೇತನ ಹೆಚ್ಚಳ ಮಾಡಬೇಕು ಎನ್ನುವುದು ನೌಕರರ ಪ್ರಮುಖ ಪಟ್ಟು. ಒಟ್ಟು ನಾಲ್ಕು ನಿಗಮಗಳು ಸೇರಿ, 1.10 ಲಕ್ಷ ಸಿಬ್ಬಂದಿಯಿದ್ದು, ಎಲ್ಲರಿಗೂ ವೇತನ ಹೆಚ್ಚಳ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೇ ಸಂಬಂಧ ನಾಲ್ಕು ನಿಗಮದ ನೌಕರ ಸಂಘಟನೆಗಳ ಪ್ರಮುಖರು ಇಂದು ಒಟ್ಟಾಗಿ ಸಭೆ ಮಾಡಲಿದ್ದಾರೆ. ಸಭೆಯಲ್ಲಿ ಮುಂದಿನ ಹೋರಾಟ ಮತ್ತು ಬಂದ್‌ನ ದಿನಾಂಕ ಕೂಡ ಘೋಷಣೆ ಸಾಧ್ಯತೆ ಇದೆ. ಇಂದು ಸಂಜೆ 4:00 ಗಂಟೆಗೆ ಸಭೆಯಲ್ಲಿ ಎಲ್ಲಾ ನೌಕರರ ಸಂಘಟನೆಗಳು ಭಾಗಿಯಾಗಿ ಅಂತಿಮ ನಿರ್ಧಾರ ಮಾಡಲಿವೆ.

    ಒಟ್ಟಾರೆ, ಇಂದಿನ ಸಭೆಯಲ್ಲಿ ನೌಕರ ಸಂಘಟನೆಗಳ ಹೋರಾಟದ ರೂಪುರೇಷೆ ಗೊತ್ತಾಗಲಿದೆ. ಆದರೆ ಸರ್ಕಾರ ನೌಕರರ ಹೋರಾಟದ ಎಚ್ಚರಿಕೆಗೆ ಬಗ್ಗುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.ಇದನ್ನೂ ಓದಿ: ಉತ್ತರ ಕನ್ನಡ – ಎರಡು ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ

  • ಬಜೆಟ್‌ನಲ್ಲಿ ಈಡೇರದ ಬೇಡಿಕೆ – ಸರ್ಕಾರದ ವಿರುದ್ಧ ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

    ಬಜೆಟ್‌ನಲ್ಲಿ ಈಡೇರದ ಬೇಡಿಕೆ – ಸರ್ಕಾರದ ವಿರುದ್ಧ ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶ

    – ಮಾರ್ಚ್ 22ರವರೆಗೆ ಸರ್ಕಾರಕ್ಕೆ ಗಡುವು

    ಬೆಂಗಳೂರು: ಶುಕ್ರವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ ರಾಜ್ಯ ಬಜೆಟ್ (Karnataka Budget) ಕೆಲವರಿಗೆ ಸಿಹಿ, ಕೆಲವರಿಗೆ ಕಹಿಯನ್ನುಂಟು ಮಾಡಿದೆ. ಮುಖ್ಯಮಂತ್ರಿಗಳ ಬಜೆಟ್ ಮೇಲೆ ಸಾರಿಗೆ ನೌಕರರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವು ಈಡೇರಿಲ್ಲ. ಹೀಗಾಗಿ ಸಾರಿಗೆ ನೌಕರರು ಮತ್ತೆ ಬಸ್ ಬಂದ್ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ.

    ಸರ್ಕಾರ ಹಾಗೂ ಸಾರಿಗೆ ನೌಕರರ ಪರಿಸ್ಥಿತಿ ನಾ ಕೊಡೆ, ನೀ ಬಿಡೇ ಎನ್ನುವಂತಾಗಿದೆ. ಸಾರಿಗೆ ನೌಕರರ ಭರವಸೆಗಳು ಸುಮಾರು ಮೂರು ವರ್ಷಗಳಾದರೂ ಈಡೇರುತ್ತಿಲ್ಲ. ಶಕ್ತಿ ಯೋಜನೆಯ ಎಫೆಕ್ಟ್‌ನಿಂದಾಗಿ ಸಾರಿಗೆ ನೌಕರರ ಕೆಲಸ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗಳು ಮಾತ್ರ ಈಡೇರಿಲ್ಲ. ಹೀಗಾಗಿ ಮಾರ್ಚ್ 22ರೊಳಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನವನ್ನು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ ನೀಡಬೇಕು. ಇಲ್ಲವಾದರೆ ಮಾರ್ಚ್ 25ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟ ಸಭೆ ಮಾಡಿ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಯೂರೋಪ್‌, ಅಮೆರಿಕ, ದುಬೈಗೆ ನಿರಂತರ ಸುತ್ತಾಟ – ನಟಿ ರನ್ಯಾ ಟ್ರಾವೆಲ್‌ ಹಿಸ್ಟರಿ ಬಯಲು

    ಅಲ್ಲದೇ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ ನೀಡಬೇಕು. 7ನೇ ವೇತನ ಆಯೋಗ ಜಾರಿ ಆಗಬೇಕು. 38 ತಿಂಗಳ ವೇತನ ಹಿಂಬಾಕಿ ನೀಡಬೇಕು. ಕಾರ್ಮಿಕ ಸಂಘಟನೆಗಳ ಚುನಾವಣೆ ಮಾಡಬೇಕು. 2021ರ ವೇಳೆ ಮುಷ್ಕರದಲ್ಲಿ ವಜಾಗೊಂಡ ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರಮುಖ ಬೇಡಿಕೆಗಳನ್ನು ನೌಕರರು ಇಟ್ಟಿದ್ದಾರೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ ಒಳಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಇತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ, ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಿಸಲಾಗಿದೆ. ಆದೆರೆ ಇದು ನಮಗೆ ತೃಪ್ತಿ ತಂದಿಲ್ಲ. ಎರಡರಿಂದ ಮೂರು ಸಾವಿರ ಗೌರವಧನ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ 1 ಸಾವಿರ, 750 ರೂಪಾಯಿ ಗೌರವಧನ ಅಷ್ಟೇ ಹೆಚ್ಚಳ ಮಾಡಿರೋದು ಭಾರೀ ನಿರಾಸೆ ಮೂಡಿಸಿದೆ. ಈ ವೇತನದಲ್ಲಿ ಜೀವನ ನಿರ್ವಹಣೆ ಕಷ್ಟ ಆಗುತ್ತದೆ. ನಮ್ಮದೇ ದುಡ್ಡಲ್ಲಿ ಮೊಬೈಲ್ ಖರೀದಿಸಿ, ಇಲಾಖೆಯ ಕೆಲಸ ಮಾಡಬೇಕಾಗುತ್ತದೆ. ಸರ್ಕಾರದ ಅಲ್ಪ ಪ್ರಮಾಣದ ಗೌರವಧನ ಹೆಚ್ಚಳ ನಮಗೆ ತೃಪ್ತಿ ತಂದಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಇದನ್ನೂ ಓದಿ: ಹಾಸನ| ಪ್ರಿಯಕರನ ಜೊತೆ ಪತ್ನಿ ಪರಾರಿ – ನದಿಗೆ ಹಾರಿ ಪತಿ ಆತ್ಮಹತ್ಯೆ

    ಸದ್ಯ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಗೌರವಧನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದು, ಹೋರಾಟ ತೀವ್ರಗೊಳಿಸಲು ಚಿಂತನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹರ್ಲೀನ್ ಡಿಯೋಲ್‍ ಅಬ್ಬರದ ಬ್ಯಾಟಿಂಗ್‌ಗೆ ಡೆಲ್ಲಿ ಬರ್ನ್‌ – ಗುಜರಾತ್‌ಗೆ 5 ವಿಕೆಟ್‌ಗಳ ರೋಚಕ ಜಯ

  • ಕೊನೆಗೂ `ಸಾರಿಗೆ’ ಸೊಪ್ಪು ಹಾಕಿದ ಸರ್ಕಾರ – ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

    ಕೊನೆಗೂ `ಸಾರಿಗೆ’ ಸೊಪ್ಪು ಹಾಕಿದ ಸರ್ಕಾರ – ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿಕೆ

    – ಸಂಕ್ರಾಂತಿ ಬಳಿಕ ಮಾತುಕತೆ ಈಡೇರಿಸುವುದಾಗಿ ಸರ್ಕಾರ ಭರವಸೆ

    ಬೆಂಗಳೂರು: ಡಿ.31ರಂದು ನಡೆಯಬೇಕಿದ್ದ ಅನಿರ್ದಿಷ್ಟಾವಧಿ `ಸಾರಿಗೆ’ ಮುಷ್ಕರಕ್ಕೆ ಕೊನೆಗೂ ಸರ್ಕಾರ `ಸೊಪ್ಪು’ ಹಾಕಿದೆ. ಸಕ್ರಾಂತಿ ಬಳಿಕ ಚರ್ಚಿಸಿ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರಿಂದ ಮುಷ್ಕರ ಮುಂದೂಡಿಕೆಯಾಗಿದೆ.

    ಮಂಗಳವಾರ ನಡೆಯಬೇಕಿದ್ದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರವನ್ನು ಮುಂದೂಡಿರುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಜಂಟಿ ಕ್ರಿಯಾ ಸಮಿತಿಯಿಂದ ಆದೇಶ ಪ್ರಕಟಿಸಿದೆ. ಮುಷ್ಕರಕ್ಕೆ ಬೆಂಬಲ ನೀಡಿದ್ದ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಆದೇಶ ಪ್ರಕಟಿಸಲಾಗಿದೆ. ಸಭೆಗೂ ಮುನ್ನ ವೇತನ ಪರಿಷ್ಕರಣೆಗೆ ಸಿಎಂ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ಹೇಳಿದ್ದರು.

    ಇತ್ತೀಚೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಾರಿಗೆ ಇಲಾಖೆಗಳ ಸ್ಥಿತಿಗತಿ ಕುರಿತು ಸಭೆ ನಡೆದಿತ್ತು. ಈ ಸಭೆಯಲ್ಲಿ ಸಾರಿಗೆ ಇಲಾಖೆಗೆ 3,650 ಕೋಟಿ ರೂ. ಹೊರೆಯಾಗುತ್ತಿದೆ ಎಂದು ಸಾರಿಗೆ ಅಧಿಕಾರಿಗಳು ಅಳಲು ತೋಡಿಕೊಂಡಿದ್ದರು. ನಷ್ಟ ಪರಿಹಾರಕ್ಕೆ ಶೇ.15ರಷ್ಟು ಪ್ರಯಾಣದರ ಹೆಚ್ಚಳಕ್ಕೆ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಅದರಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ ಮಾಡಲಾಗಿತ್ತು. ಆದರೆ 15% ಪ್ರಮಾಣದಲ್ಲಿ ದರ ಪರಿಷ್ಕರಣೆಯಾದರೂ ನಿಗಮಗಳು ಇನ್ನೂ 1,800 ಕೋಟಿ ನಷ್ಟ ಅನುಭವಿಸುತ್ತವೆ ಎಂಬ ಮಾಹಿತಿ ಅಧಿಕಾರಿಗಳು ನೀಡಿದ್ದರು.

    ರಾಜ್ಯದಲ್ಲಿರುವ ಬಸ್‌ಗಳೆಷ್ಟು?
    * ರಾಜ್ಯದ ಸಾರಿಗೆ ಇಲಾಖೆಯಲ್ಲಿರೋ ಒಟ್ಟು ಬಸ್‌ಗಳ ಸಂಖ್ಯೆ -24,000
    * ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಖ್ಯೆ- 8,116
    * ಬಿಎಂಟಿಸಿ ಬಸ್ ಗಳ ಸಂಖ್ಯೆ-6,688
    * ವಾಯುವ್ಯ ಕರ್ನಾಟಕ ಬಸ್ ಗಳ ಸಂಖ್ಯೆ- 4,858
    * ಕಲ್ಯಾಣ ಕರ್ನಾಟಕ ಬಸ್ ಗಳ ಸಂಖ್ಯೆ-4,327

    ಬಂದ್‌ಗೆ ಬೆಂಬಲಿಸದ್ದ ಸಂಘಟನೆಗಳು
    * ಕೆಎಸ್‌ಆರ್‌ಟಿಸಿ ಸ್ಟಾಫ್ ಆಂಡ್ ವರ್ಕಸ್ ಫೆಡರೇಶನ್
    * ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ
    * ರಾಜ್ಯ ಸಿಐಟಿಯು
    * ಬಿಎಂಎಸ್
    * ಪರಿಶಿಷ್ಟ ನೌಕರರ ಸಂಘ
    * ಸಾರಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘ
    * ರಾಜ್ಯ ಸಾರಿಗೆ ಸಂಸ್ಥೆ ನೌಕರರ ಸಂಘ
    * ಅಖಂಡ ಕರ್ನಾಟಕ ರಾಜ್ಯ ಸಾರಿಗೆ ಕಾರ್ಮಿಕ ಮಹಾಮಂಡಳಿ
    * ರಾಜ್ಯ ರಸ್ತೆ ಸಾರಿಗೆ ನೌಕಕರ ಕೂಟ
    * ಕೆಬಿಎನ್‌ಎನ್ ವರ್ಕರ್ಸ್ ಫೆಡರೇಷನ್
    * ಕೆಎಸ್‌ಆರ್‌ಟಿಸಿ ನಿಗಮಗಳ ಎಸ್‌ಸಿ-ಎಸ್‌ಟಿ ನೌಕಕರ ಕ್ಷೇಮಾಭಿವೃದ್ಧಿ ಸಂಘ
    * ಕರಾರಸಾಸಂಸ್ಥೆ ಎಸ್ಸಿ,ಎಸ್‌ಟಿ ಅಧಿಕಾರಿಗಳ ಮತ್ತು ನೌಕರರ ಸಮನ್ವಯ ಸಮಿತಿ
    * ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿಕಲಚೇತನ ನೌಕರರ ಸಂಘ

    ಸಾರಿಗೆ ನೌಕರರ ಬೇಡಿಕೆಗಳೇನು?
    * 01-01-2020ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸಬೇಕು
    * ಸದ್ಯ ನೌಕರರು ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡಬೇಕು
    * ಎಲ್ಲಾ ನೌಕರರಿಗೂ ಪ್ರತೀ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ರೂಪಾಯಿ ಜೊತೆಗೆ ಉಚಿತ ಔಷಧಿ ನೀಡಬೇಕು
    * ಇಎಸ್‌ಐ ಮಾದರಿಯಲ್ಲಿ ನೌಕರರ ಮೂಲ ವೇತನದ ಶೇ.4.5 ಹಾಗೂ ನೌಕರರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕೊಡುವ ಯೋಜನೆ ರೂಪಿಸಬೇಕು
    * ನಿವೃತ್ತ ನೌಕರರು ಮತ್ತು ಅವರ ಪತಿ/ಪತ್ನಿ ಹಾಗೂ ಮಕ್ಕಳಿಗೂ ಆರೋಗ್ಯ ಯೋಜನೆ ನೀಡಬೇಕು
    * ನಗದು ರಹಿತ ಆರೋಗ್ಯ ಚಿಕಿತ್ಸೆ ಯೋಜನೆಯನ್ನು ಏಕಕಾಲದಲ್ಲಿ 4 ನಿಗಮಗಳಲ್ಲಿ ಜಾರಿಗೆ ತರಬೇಕು
    * ವಿದ್ಯುತ್ ಚಾಲಿತ ಬಸ್ಸುಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿಯನ್ನು ಕೈಬಿಡಬೇಕು
    * ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಯೇ ವಿದ್ಯುಚ್ಚಾಲಿತ ಬಸ್ಸುಗಳ ನಿರ್ವಹಣೆ ಮಾಡಬೇಕು
    * ಹೊರ ಗುತ್ತಿಗೆ ಆಧಾರದ ಮೇಲೆ ಚಾಲಕ, ತಾಂತ್ರಿಕ ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿಯನ್ನು ಕೈಬಿಡಬೇಕು

    ಸರ್ಕಾರ ಏನು ಮಾಡಿದೆ, ಭರವಸೆ ಏನು?
    * 2020ರ ಜನವರಿ 1ರಿಂದ 2023ರ ಫೆಬ್ರುವರಿ 28ರ ವರೆಗೆ ಸಂಸ್ಥೆಗಳಿಂದ ನಿವೃತ್ತರಾದ 11,694 ಜನರಿಗೆ ವಿತರಿಸಲು ಸರ್ಕಾರ 224.05 ಕೋಟಿ ಬಿಡುಗಡೆ ಮಾಡಿದೆ.
    * ಆರ್‌ಟಿಜಿಎಸ್ ಹಾಗೂ ಚೆಕ್ ಮೂಲಕ ಹಿಂಬಾಕಿ ವಿತರಿಸುವ ಕಾರ್ಯ ನಡೆಯುತ್ತಿದೆ.
    * ನಾಲ್ಕೂ ಸಾರಿಗೆ ನಿಗಮಗಳ 1,308 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಯ ಅಂತರ ನಿಗಮ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ
    * ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು
    * ಸದ್ಯ ಶಕ್ತಿ ಯೋಜನೆಯಿಂದ ನಿಗಮಗಳ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ, ಸರ್ಕಾರದ ಅನುದಾನ ಬರಬೇಕಿದೆ

  • ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ

    ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ

    ಬೆಂಗಳೂರು: ಸಾರಿಗೆ ಮುಷ್ಕರ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಸೇರಿದಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಯವ್ಯ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ಎಂಡಿಗಳ ಜೊತೆ ಸಭೆ ನಡೆಸಿದ್ರು.

    ಸಾರಿಗೆ ಸಂಘಟನೆಗಳ ಬೇಡಿಕೆಗಳನ್ನು ಸಿಎಂಗೆ ಸಾರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು. ಸಭೆ ಬಳಿಕ ಮಾತಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ, ಬಿಜೆಪಿ ಸರ್ಕಾರ 5,900 ಕೋಟಿ ಸಾಲ ಬಿಟ್ಟು ಹೋಗಿದ್ದಾರೆ. ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಸಂಕ್ರಾಂತಿ ನಂತರ ಸಿಎಂ ಜೊತೆ ಸಭೆ ಮಾಡ್ತೇವೆ ಎಂದರು. ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮುಖಂಡನಿಂದ ಅನ್ನಸಂತರ್ಪಣೆ: ಭಾವೈಕ್ಯತೆ ಮೆರೆದ ಕರೀಂಸಾಬ್

    ಸಿಎಂ 2,000 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಬಜೆಟ್‌ನಲ್ಲಿ ಉಳಿದ ಮೊತ್ತ ಕೊಡ್ತಾರೆ. ಪ್ರಣಾಳಿಕೆಯಲ್ಲೂ ಸಮಾನ ವೇತನ ಅಂತ ಹೇಳಿದ್ದೇವೆ. ಬಸ್ ನಿಲ್ಲಿಸಬಾರದು. ಸಾರ್ವಜನಿಕರ ಹಿತದೃಷ್ಟಿಯಿಂದ ಕೈಬಿಡಿ ಅಂತ ಮನವಿ ಮಾಡಿದರು. ಅಲ್ಲದೇ, ಟಿಕೆಟ್ ದರ ಏರಿಕೆ ಬಗ್ಗೆ ಸಲಹೆ ಕೊಡಬಹುದು. ಎಷ್ಟು ಏರಿಕೆ ಮಾಡ್ಬೋದು ಅಂತ 4 ಬೋರ್ಡ್‌ಗಳು ಪ್ರಸ್ತಾವನೆ ಸಲ್ಲಿಸಬಹುದು. ನಾಳೆ (ಸೋಮವಾರ) ಜಂಟಿ ಕ್ರಿಯಾ ಸಮಿತಿ ಜೊತೆ ಸಿಎಂ ಮಾತುಕತೆ ನಡೆಸ್ತಾರೆ ಅಂತ ರಾಮಲಿಂಗಾರೆಡ್ಡಿ ಹೇಳಿದ್ರು. ಈ ಮಧ್ಯೆ, ಸಾರಿಗೆ ಬಂದ್‌ಗೆ ಬಿಜೆಪಿ ಕೂಡ ಬೆಂಬಲ ನೀಡಿದೆ.

    ಇನ್ನೂ ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ಟೀಕೆ ಮಾಡ್ತಿದ್ದಾರೆ. ಅವರು ಸಾವಿರಾರು ಜನರನ್ನ ಸಸ್ಪೆಂಡ್ ಮಾಡಿದ್ದರು. ನಾವು ಅವರನ್ನೆಲ್ಲಾ ಮತ್ತೆ ಕೆಲಸಕ್ಕೆ ಸೇರಿಸಿಕೊಂಡಿದ್ದೇವೆ ಎಂದು ಸಚಿವರು ತಿರುಗೇಟು ನೀಡಿದರು. ಇದನ್ನೂ ಓದಿ: ಹೋಟೆಲ್, ರೆಸಾರ್ಟ್‌ನವರು ನಿಯಮಗಳಿಗೆ ಅನುಸಾರ ಹೊಸ ವರ್ಷಾಚರಣೆ ಮಾಡಿ: ಡಿಕೆಶಿ‌ ವಾರ್ನಿಂಗ್‌

  • ನಿವೃತ್ತ‌ ಸಾರಿಗೆ ನೌಕರರಿಗೆ ಸಿಹಿಸುದ್ದಿ – ಗ್ರಾಚ್ಯುಟಿ ಹಣ ಬಿಡುಗಡೆ

    ನಿವೃತ್ತ‌ ಸಾರಿಗೆ ನೌಕರರಿಗೆ ಸಿಹಿಸುದ್ದಿ – ಗ್ರಾಚ್ಯುಟಿ ಹಣ ಬಿಡುಗಡೆ

    ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ನೀಡಬೇಕಾಗಿದ್ದ ಗ್ರಾಚ್ಯುಟಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ ರಜೆ ನಗದೀಕರಣಕ್ಕಾಗಿ ಸರ್ಕಾರದಿಂದ 224.05 ಕೋಟಿ ರೂ. ಹಣ ಪಾವತಿಯಾಗಿದೆ.

    2020ರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಾಕಿ ಹಣದ ಚೆಕ್‌ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಒಟ್ಟು 11,694 ನಿವೃತ್ತ ನೌಕರರ ಹಣ ಬಿಡುಗಡೆಯಾಗಿದೆ. ಇಂದಿನಿಂದ RTGS ಹಾಗೂ ಚೆಕ್ ಮುಖಾಂತರ ನಿವೃತ್ತ ಸಿಬ್ಬಂದಿಗೆ ಹಣ ವಿತರಣೆ ಮಾಡಲಾಗುತ್ತಿದೆ.

    ಕರಾರಸಾ ನಿಗಮ
    4711 ಸಿಬ್ಬಂದಿ, 86.55 ಕೋಟಿ ರೂ.

    ಬಿಎಂಟಿಸಿ
    1833 – ಸಿಬ್ಬಂದಿ, 50.25 ಕೋಟಿ ರೂ.

    ವಾಕರಸಾ ಸಂಸ್ಥೆ
    3116 ಸಿಬ್ಬಂದಿ, 51.50 ಕೋಟಿ ರೂ.

    ಕಕರಸಾ ಸಂಸ್ಥೆ
    2034 ಸಿಬ್ಬಂದಿ, 35.75 ಕೋಟಿ ರೂ.

  • ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಬೆಂಗಳೂರು: ಸಾರಿಗೆ ನಿಗಮಗಳ ನೌಕರರ (Transport Employees) ವೇತನವನ್ನು ಶೇ.15 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಹೊರಡಿಸಿದೆ.

    ಸಾರಿಗೆ ನೌಕರರ ಮುಷ್ಕರದ ಮೊದಲೇ ವೇತನ ಹೆಚ್ಚಿಸಿದೆ. ಮಾರ್ಚ್ 1 ರಿಂದ ಅನ್ವಯ ಆಗುವಂತೆ ವೇತನ ಹೆಚ್ಚಳ ಮಾಡಿದ ಸರ್ಕಾರ‌ ಆದೇಶಿಸಿದೆ. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

    ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ವೇತನ ಹೆಚ್ಚಳ ಮಾಡಿದೆ. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ. ಇದನ್ನೂ ಓದಿ: ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

  • ಸಾರಿಗೆ ಇಲಾಖೆ ನೌಕರರಿಗೆ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ಧ – ಶ್ರೀರಾಮುಲು

    ಸಾರಿಗೆ ಇಲಾಖೆ ನೌಕರರಿಗೆ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ಧ – ಶ್ರೀರಾಮುಲು

    ಬೆಂಗಳೂರು: ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ (Transport Employees) ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು (B.Sriramulu) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಬಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರಿಗೆ ನಿಗಮದ ಸಿಬ್ಬಂದಿಯ ವೇತನ ಪರಿಷ್ಕರಣೆ ಕಳೆದ ನಾಲ್ಕು ವರ್ಷದಿಂದ ಆಗಿಲ್ಲ. ಆದರೆ ವೇತನ ಪರಿಷ್ಕರಣೆಗೆ ಸರ್ಕಾರ ಬದ್ದವಾಗಿದೆ. ಪರಿಷ್ಕರಣೆ ಸಂಬಂಧ ನಾಲ್ಕು ನಿಗಮಗಳ ಎಂಡಿಗಳ ಜೊತೆ ಸಭೆ ನಡೆಸಿ ಸಮಿತಿ ರಚಿಸಿ ಅವರಿಂದ ವರದಿ ಪಡೆದು ಸರ್ಕಾರಕ್ಕೆ ಕಳಿಸಲಾಗಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ಬೇಕು ಎಂದು ಪ್ರತಿಪಾದಿಸುವವರು ಅತ್ಯಾಚಾರಿಗಳ ಸಮರ್ಥಕರಿದ್ದಂತೆ: ದಿನೇಶ್ ಗುಂಡೂರಾವ್

    ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗಬೇಕು. ಆದರೆ 2016 ರ ನಂತರ ಪರಿಷ್ಕರಣೆ ಆಗಿಲ್ಲ. 2020-21 ರಲ್ಲಿ ಬಹಳ ಜನ ನೌಕರರು ಮುಷ್ಕರಕ್ಕೆ ಹೋದಾಗ ವೇತನ ಪರಿಷ್ಕರಣೆ ಬೇಡಿಕೆ ಇರಿಸಿ ಬೀದಿಗಿಳಿದು ಹೋರಾಡಿದ್ದರು. ಮಾತುಕತೆ ಮೂಲಕ ಅಂದು ಸಮಸ್ಯೆ ಪರಿಹರಿಸಲಾಗಿತ್ತು ಎಂದು ಹೇಳಿದರು.

    ಕಳೆದ ಎರಡು ವರ್ಷದಲ್ಲಿ ನಮಗೆ ಸಾಕಷ್ಟು ತೊಂದರೆಯಾಗಿದೆ. ಕೋವಿಡ್ ನಂತರ ಪ್ರಯಾಣ ದರ ಹೆಚ್ಚಿಸಲಾಗಲಿಲ್ಲ. ಡೀಸೆಲ್ ದರ ಹೆಚ್ಚಾಗಿದೆ. ಪ್ರತಿದಿನ 15 ಕೋಟಿ ಹಣ ಡೀಸೆಲ್‌ಗೆ ವ್ಯಯವಾಗುತ್ತಿದೆ. ಹಾಗಾಗಿ ಕಷ್ಟದ ಸ್ಥಿತಿ ಇದೆ. ಆದರೂ ಸಿಎಂ ಕೂಡ ವೇತನ ಪರಿಷ್ಕರಣೆ ಚಿಂತನೆ ಮಾಡಿದ್ದಾರೆ. ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಸಮಸ್ಯೆ ಇತ್ಯರ್ಥ ಮಾಡಲಿದ್ದೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಪಾಕಿಸ್ತಾನ, ಹಿಂದೂಸ್ತಾನ ಒಂದಾಗಬೇಕು: ಕೆ.ಎಸ್‌.ಈಶ್ವರಪ್ಪ

    ನಾಲ್ಕು ನಿಗಮ ಲಾಭಕ್ಕೆ ಬರಲು ಪೂರಕವಾಗಿ ವರದಿ ನೀಡಲು ರಚಿಸಿದ್ದ ಶ್ರೀನಿವಾಸಮೂರ್ತಿ ಸಮಿತಿ ವರದಿ ಈಗಾಗಲೇ ಬಂದಿದೆ. ಎಲ್ಲವನ್ನೂ ನೋಡಿ ಕ್ರಮ ಕೈಗೊಳ್ಳಲಾಗುತ್ತದೆ. ಮುಂದಿನ ದಿನದಲ್ಲಿ ಸಿಎಂ ಜೊತೆ ಚರ್ಚಿಸಿ ವೇತನ ಪರಿಷ್ಕರಣೆ ಕುರಿತು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸಾರಿಗೆ ಮುಷ್ಕರ- ಮಡಿಕೇರಿಯಲ್ಲಿ ನಿರ್ವಾಹಕರಾದ ಟಿಸಿ

    ಸಾರಿಗೆ ಮುಷ್ಕರ- ಮಡಿಕೇರಿಯಲ್ಲಿ ನಿರ್ವಾಹಕರಾದ ಟಿಸಿ

    ಮಡಿಕೇರಿ: ಆರನೆ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಕೊಡಗಿನಲ್ಲೂ ಮುಷ್ಕರ ಮುಂದುವರಿದಿದೆ. ಇದರ ನಡುವೆ ತರಬೇತಿ ಪಡೆಯುತ್ತಿರುವ ಚಾಲಕರನ್ನು ಉಪಯೋಗಿಸಿಕೊಂಡು ಮಡಿಕೇರಿ ಘಟಕದ ಮೂರು ಬಸ್‍ಗಳನ್ನು ಭಾನುವಾರ ಚಾಲನೆ ಮಾಡಿದ್ದು, ಸಂಚಾರಿ ನಿಯಂತ್ರಣಾಧಿಕಾರಿಗಳೇ ಬಸ್‍ಗಳಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸಿದ್ದಾರೆ.

    ಮಡಿಕೇರಿಯಿಂದ ಕುಶಾಲನಗರ ಮತ್ತು ಪುತ್ತೂರು ಮಾರ್ಗಗಳಲ್ಲಿ ಮೂರು ಬಸ್ಸುಗಳು ಕೇವಲ ಒಂದು ಟ್ರಿಪ್ ಮಾತ್ರವೇ ಸಂಚರಿಸಿದ್ದು, ಈ ವೇಳೆ ನಿಯಂತ್ರಣಾಧಿಕಾರಿಗಳೇ ನಿರ್ವಾಹಕರ ಕೆಲಸ ಮಾಡಿದ್ದಾರೆ. ಚಾಲಕರು ಮತ್ತು ನಿರ್ವಾಹಕರು ಕರ್ತವ್ಯಕ್ಕೆ ಆಗಮಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದರು, ಸಫಲವಾಗಿಲ್ಲ. ಹೀಗಾಗಿ ಬೇರೆ ದಾರಿಯಿಲ್ಲದೆ ಟ್ರೈನಿ ಚಾಲಕರಿಂದ ಬಸ್‍ಗಳನ್ನು ಓಡಿಸಲಾಗಿದ್ದು, ನಿಯಂತ್ರಣಾಧಿಕಾರಿಗಳೇ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

    ಮೂರು ಬಸ್‍ಗಳು ಮಡಿಕೇರಿ ನಿಲ್ದಾಣದಿಂದ ಸಂಚರಿಸಿದ್ದರೆ, ಮೈಸೂರು ಮತ್ತು ಬೆಂಗಳೂರಿನಿಂದ ವಿರಾಜಪೇಟೆಗೆ ಹತ್ತು ಬಸ್‍ಗಳು ಸಂಚರಿಸಿವೆ. ಆದರೆ ಎಲ್ಲ ಬಸ್‍ಗಳಿಗೂ ಪ್ರಯಾಣಿಕರ ಕೊರತೆ ಕಾಡಿದೆ.