Tag: Transport Workers Strike

  • ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

    ಬೆಂಗಳೂರು: ಸಮಾನ ವೇತನ, ಕಾರ್ಮಿಕ ಸಂಘಟನೆಗಳ ಚುನಾವಣೆ, ವಜಾಗೊಂಡ ನೌಕರರ ಮರು ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ಸಂಘಟನೆ ಅನಿರ್ಧಿಷ್ಟಾವಧಿ ಉಪವಾಸ ಧರಣಿ ನಡೆಸಲು ಮುಂದಾಗಿದೆ.ಇದನ್ನೂ ಓದಿ: ಸತತ 7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

    ಇಂದು (ಜು.29) ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನಿಗಮಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟಗಳು ಸತ್ಯಾಗ್ರಹಕ್ಕೆ ಮುಂದಾಗಿವೆ. ಹಿಂಬಾಕಿ, ಸಮಾನ ವೇತನ, ಕಾರ್ಮಿಕ ಸಂಘಟನೆಗಳ ಚುನಾವಣೆ, ವಜಾಗೊಂಡ ನೌಕರರ ಮರು ನೇಮಕ ಆಗ್ರಹಿಸಿ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಸಾರಿಗೆ ಸಂಘಟನೆಯ ಒಂದು ಬಣ ಆ.5ರಿಂದ ಬಸ್ ನಿಲ್ಲಿಸಿ ಹೋರಾಟ ಮಾಡುವುದಾಗಿ ಕರೆ ಕೊಟ್ಟಿದೆ.

    ಸೋಮವಾರ (ಜು.28) ನಡೆದ ಕಾರ್ಮಿಕ ಇಲಾಖೆ ಆಯುಕ್ತರ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರು, ಆ.5ರಂದು ಕರೆ ನೀಡಿರುವ ಸಾರಿಗೆ ಮುಷ್ಕರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಪಟ್ಟು ಹಿಡಿದಿದ್ದಾರೆ. ಸಭೆ ಬಳಿಕ ಸಾರಿಗೆ ಇಲಾಖೆ ಹಾಗೂ ಸಾರಿಗೆ ಸಚಿವರಿಗೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ನೀಡಿದ್ದು, ಮತ್ತೆ ಆ.2ಕ್ಕೆ ಮತ್ತೊಂದು ಹಂತದ ಸಭೆ ನಡೆಸಲಿದೆ ಎಂದು ತಿಳಿಸಿದೆ. ಒಂದು ವೇಳೆ ಆ.2ಕ್ಕೆ ಅಂತಿಮ ನಿರ್ಧಾರವಾಗದಿದ್ದರೆ ಹೋರಾಟ ಶತಸಿದ್ಧ ಎಂದು ಸಾರಿಗೆ ಮುಖಂಡರು ತಿಳಿಸಿದ್ದಾರೆ.ಇದನ್ನೂ ಓದಿ:ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

  • ಕೆಲಸದಿಂದ ವಜಾ –  ಮನನೊಂದು ಬಿಎಂಟಿಸಿ ನೌಕರ ಆತ್ಮಹತ್ಯೆ

    ಕೆಲಸದಿಂದ ವಜಾ – ಮನನೊಂದು ಬಿಎಂಟಿಸಿ ನೌಕರ ಆತ್ಮಹತ್ಯೆ

    ರಾಯಚೂರು: ಕೆಲಸ ಕಳೆದುಕೊಂಡಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ.

    ಬಿಎಂಟಿಸಿ ನೌಕರನಾಗಿದ್ದ ವಿನೋದ್ ಕುಮಾರ್ ಪತ್ರಿ (42) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯಲ್ಲಿ ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ದೂರು ನೀಡಿದ್ದಕ್ಕೆ ಅಪ್ರಾಪ್ತೆಯ ಮೇಲೆ ಗ್ಯಾಂಗ್‍ರೇಪ್- ಮೂವರು ಅರೆಸ್ಟ್

    ಬಿಎಂಟಿಸಿಯಲ್ಲಿ ಚಾಲಕ ಹಾಗೂ ನಿರ್ವಾಹಕನಾಗಿದ್ದ ವಿನೋದ್ ಕಳೆದ ವರ್ಷ ನೌಕರಿಯಿಂದ ವಜಾಗೊಂಡ ಹಿನ್ನೆಲೆ ಖಿನ್ನತೆಗೆ ಒಳಗಾಗಿದ್ದರು. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    ಅವರನ್ನು ಈ ಹಿಂದೆ ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕೆ ಕಳೆದ ಮಾರ್ಚ್‍ವಜಾಗೊಳಿಸಲಾಗಿತ್ತು. ಮರಳಿ ಕೆಲಸ ಸಿಗದ ಹಿನ್ನೆಲೆ ಮನನೊಂದಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • 11ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ – ಇಂದು ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ

    11ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ – ಇಂದು ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ

    ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದ್ದು. ಇಂದು ರಾಜ್ಯಾದ್ಯಂತ ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ ಹಾಕಲು ನೌಕರರು ನಿರ್ಧರಿಸಿದ್ದಾರೆ.

    ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಧರಣಿ ನಡೆಯಲಿದೆ. ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ನೌಕರರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ಮುಷ್ಕರ ಆರಂಭವಾಗಿ 11 ದಿನವಾದ್ರೂ ಸರ್ಕಾರ ಸ್ಪಂದಿಸದ ಹಿನ್ನೆಲೆ ಧರಣಿಯನ್ನು ತೀವ್ರಗೊಳಿಸಲು ನೌಕರರು ಮುಂದಾಗಿದ್ದಾರೆ.

    ಎಷ್ಟೇ ಅಡ್ಡಿಗಳಿದ್ರೂ ನಾವು ವಿಚಲಿತರಾಗುವುದಿಲ್ಲ. ಮುಖ್ಯಮಂತ್ರಿಗಳು ನಮ್ಮ ಜೊತೆ ಮಾತನಾಡೋಕೆ ಯಾಕೆ ಹಿಂಜರೀತಿದ್ದೀರಿ. ಈಗ ಪಾಸಿಟಿವ್ ಆಗಿದೆ. ಸಾರಿಗೆ ಸಚಿವರಿಗೆ ಮೊಂಡುತನ ಬೇಡ. ಒಂದು ನಿರ್ದಿಷ್ಟ ನಿರ್ಧಾರಕ್ಕೆ ಬನ್ನಿ. ಆಯುಕ್ತರೊಂದಿಗೆ ಮಾತನಾಡುತ್ತೇವೆ ಅಂದಿದ್ದಾರೆ. ಇನ್ನು, ಅವನ್ಯಾರೋ ಕೋಡಿಹಳ್ಳಿ.. ಅವನೊಬ್ಬ 420 ಅಂತ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಅವನನ್ನು ಬಿಟ್ಟು ಮಾತುಕತೆಗೆ ಬನ್ನಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

    ಜಮಖಂಡಿಯಲ್ಲಿ ಮುಷ್ಕರದ ನಡುವೆ ಸಂಚರಿಸಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ, ಬಸ್ ಚಾಲಕ ಅವಟಿ ಕುತ್ತಿಗೆ ಭಾಗಕ್ಕೆ ಬಲವಾಗಿ ಪೆಟ್ಟುಬಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಮೃತಪಟ್ಟಿದ್ದಾರೆ. ಕುಟುಂಬಕ್ಕೆ ಸಾಂತ್ವನ ಹೇಳಿರುವ ಸಾರಿಗೆ ಸಚಿವ ಸವದಿ, ತಕ್ಷಣವೇ 30 ಲಕ್ಷ ಪರಿಹಾರ ಮತ್ತು ಒಬ್ಬರಿಗೆ ಕೆಲಸ ಕೊಡೋದಾಗಿ ಸೂಚಿಸಿದ್ದಾರೆ.

    ಹಾಸನದಲ್ಲಿ ಸರ್ಕಾರಿ ಬಸ್ ಬರುತ್ತಿದ್ದಂತೆಯೇ ಖಾಸಗಿ ಬಸ್‍ನಲ್ಲಿದ್ದ ಜನ ಇಳಿದು ಕೆಎಸ್‍ಆರ್‍ಟಿಸಿ ಹತ್ತುತ್ತಿದ್ದರು. ಇದರಿಂದ ಸಿಟ್ಟಿಗೆದ್ದ ಖಾಸಗಿ ಬಸ್‍ನವರು ವಾಗ್ವಾದ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದ ಕೈ ಸ್ವಾಧೀನ ಕಳೆದುಕೊಂಡ ಬಿಎಂಟಿಸಿ ಡ್ರೈವರ್ ಗೆ ಒತ್ತಡ ಹಾಕಿ ಕೆಲಸಕ್ಕೆ ಕರೆಸಿಕೊಂಡಿದ್ದಾರೆ. ಆ ಡ್ರೈವರ್ ಒಂದೇ ಕೈಯಿಂದ ಬಸ್ ಓಡಿಸಿದ್ದಾರೆ.

  • ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ, ಮುಷ್ಕರ ಕೈಬಿಡಿ: ಸಚಿವ ಸುಧಾಕರ್

    ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ, ಮುಷ್ಕರ ಕೈಬಿಡಿ: ಸಚಿವ ಸುಧಾಕರ್

    – ರಾಜ್ಯ ಸರ್ಕಾರ ಬೇಡಿಕೆಗೆ ಸ್ಪಂದಿಸಿರುವ ರೀತಿಯನ್ನು ಗಮನಿಸಿ

    ಬೆಂಗಳೂರು: ಸಾರಿಗೆ ನೌಕರರು ಯಾರದ್ದೋ ಮಾತಿಗೆ ಕಿವಿಗೊಡದೆ ರಾಜ್ಯ ಸರ್ಕಾರವು ಕೈಗೊಂಡಿರುವ ಕ್ರಮಗಳನ್ನು ಗಮನಿಸಬೇಕು. ಮುಷ್ಕರವನ್ನು ಕೈಬಿಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೌಕರರಿಗೆ ಮನವಿ ಮಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ನೌಕರರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಾರ್ವಜನಿಕರು ಕೂಡ ಗಮನಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದೆ. ಒಂದು ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಸರ್ಕಾರ ಈ ರೀತಿ ನೌಕರರಿಗೆ ಸ್ಪಂದಿಸಿರುವುದನ್ನು ಗಮನಿಸಿ ಮುಷ್ಕರ ಕೈ ಬಿಡಬೇಕು ಎಂದು ಹೇಳಿದ್ದಾರೆ.

    ಸಾರಿಗೆ ಸಂಸ್ಥೆಯ ನೌಕರರು ಶ್ರಮಜೀವಿಗಳಾಗಿದ್ದು, ಸಾರ್ವಜನಿಕ ಸೇವೆಗಾಗಿ ಬಹಳ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ಹಾಗೂ ನೌಕರರ ಪರಸ್ಪರ ಕೊಡುಕೊಳ್ಳುವಿಕೆಗಳಿಂದಾಗಿ ರಾಜ್ಯದ ಜನತೆಗೆ ಉತ್ತಮ ರಸ್ತೆ ಸಾರಿಗೆ ಸೇವೆ ಒದಗಿಸಲಾಗುತ್ತಿದೆ. ಕಾಲಕಾಲಕ್ಕೆ ಯಡಿಯೂರಪ್ಪನವರು ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟವಾದಾಗಲೂ ನೌಕರರು ಬದುಕು, ಅವರ ಕುಟುಂಬದ ಹಿತಕ್ಕಾಗಿ ಒಟ್ಟು 1,953.45 ಕೋಟಿ ರೂಪಾಯಿಗಳಷ್ಟು ವೇತನವನ್ನು ಪಾವತಿಸಲಾಗಿದೆ. ವೇತನ ಬಾಕಿ ಇಟ್ಟುಕೊಂಡು ನೌಕರರು ಸಂಕಷ್ಟಕ್ಕೆ ಸಿಲುಕಿಸುವಂತಹ ಯಾವುದೇ ಕೆಲಸವನ್ನು ಸರ್ಕಾರ ಮಾಡಿಲ್ಲ. ಸರ್ಕಾರದನೌಕರರ ಹಿತ ಕ್ರಮವನ್ನು ಪರಿಗಣಿಸಿ ನೌಕರರು ಮುಷ್ಕರ ಬಿಟ್ಟು, ನಾಗರಿಕ ಸ್ನೇಹಿ ಆಡಳಿತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

    2020ರ ಡಿಸೆಂಬರ್‍ನಲ್ಲಿ ನೌಕರರು 4 ದಿನಗಳ ಕಾಲ ಮುಷ್ಕರ ಮಾಡಿದ್ದರು. ಆ ಸಮಯದಲ್ಲಿ 10 ಬೇಡಿಕೆಗಳಲ್ಲಿ, 9 ಬೇಡಿಕೆ ಈಡೇರಿಸುವುದಾಗಿ ಸರ್ಕಾರವು ಸಾರಿಗೆ ನೌಕರರಿಗೆ ಭರವಸೆ ನೀಡಿತ್ತು. ನಂತರ ಕೊಟ್ಟ ಮಾತಿನಂತೆಯೇ ನಡೆದುಕೊಂಡು ನಮ್ಮ ಸರ್ಕಾರ, 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದೆ. ಆದರೆ 6 ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸುವಂತೆ ಕೋರಿದ ಬೇಡಿಕೆಯನ್ನು ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸರ್ಕಾರವು ಆರ್ಥಿಕ ಅಂಶಗಳನ್ನು ಪರಿಗಣಿಸಿ ತೀರ್ಮಾನಿಸಬೇಕಿದೆ. ಇದಕ್ಕಾಗಿ ಸಮಿತಿ ಕೂಡ ರಚನೆ ಮಾಡಿದ್ದು, ಈ ಸಮಿತಿಯು 6 ಸಭೆಗಳನ್ನು ನಡೆಸಿ ಚರ್ಚೆ ಮಾಡಿದೆ. ಇಷ್ಟೆಲ್ಲ ಕ್ರಮ ವಹಿಸಿದ ಬಳಿಕವೂ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಆದ್ದರಿಂದ ನೌಕರರು ಮುಷ್ಕರ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದು ಸಚಿವರು ಕೋರಿದ್ದಾರೆ.