ಚಾಮರಾಜನಗರ: ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಅರಣ್ಯ ಇಲಾಖೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಪ್ ಲೈನ್ ಸಾಹಸ ಕ್ರೀಡೆ ವ್ಯವಸ್ಥೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮರಡಿಗುಡ್ಡದ ವೃಕ್ಷವನದಲ್ಲಿ ಜಿಪ್ ಲೈನ್ ಅಳವಡಿಸಲಾಗಿದೆ. ಸುಮಾರು 200 ಮೀ ದೂರದ ಜಿಪ್ ಲೈನ್ ಸವಾರಿ ಪ್ರವಾಸಿಗರಿಗೆ ಖುಷಿ ಕೊಡುತ್ತದೆ. ಜಿಪ್ ಲೈನ್ ಸೆರೆಹಿಡಿಯಲು ಗೋ ಪ್ರೋ ಕ್ಯಾಮರಾ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ ಉಗ್ರರು- ಬಲಿಯಾಗಿದ್ದು 3 ವರ್ಷದ ಕಂದಮ್ಮ

ವಯಸ್ಕರಿಗೆ 60 ರೂ ಹಾಗೂ ಮಕ್ಕಳಿಗೆ 30ರೂ ದರ ನಿಗದಿ ಮಾಡಿದೆ. ಸುರಕ್ಷತಾ ಕ್ರಮಗಳ ಮೂಲಕ ಜಿಪ್ ಲೈನ್ ಕ್ರೀಡೆ ಆರಂಭವಾಗಿದ್ದು, ಮೊದಲ ದಿನವೇ ಉತ್ತಮ ರೆಸ್ಪಾನ್ಸ್ ಕೂಡ ವ್ಯಕ್ತವಾಗಿದೆ. ಈ ಬಗ್ಗೆ ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಏಡುಕುಂಡಲ ಸಂತಸ ವ್ಯಕ್ತಪಡಿಸಿದ್ದಾರೆ.

ಏನಿದು ಜಿಪ್ ಲೈನ್..?
ತಂತಿಯ ಮೂಲಕ ಒಂದು ತುದಿಯಿಂದ ಇನ್ನೊಂದು ತುದಿಗೆ ಗುರುತ್ವಾಕರ್ಷಣೆಯ ಬಲದಿಂದ ತಲುಪುವುದಕ್ಕೆ ಜಿಪ್ ಲೈನ್ ಎನ್ನುತ್ತಾರೆ. ಇದನ್ನು ಈಶಾನ್ಯ ಭಾರತದ ಗುಡ್ಡಗಾಡು ಪ್ರದೇಶಗಳು, ಗಣಿಗಾರಿಕೆಗಳಲ್ಲಿ ಸರಕು ಸಾಗಿಸಲು ಬಳಸುತ್ತಿದ್ದರು. ಈಗ ಇದು ಯುವ ಜನರನ್ನು ಸೆಳೆಯುವ ಮನರಂಜನಾ ಕ್ರೀಡೆಯಾಗಿ ಮಾರ್ಪಟ್ಟಿದೆ.














ಅನ್ ಲಾಕ್ ಆಗಿದ್ದ ಕಳೆದ ವೀಕೆಂಡ್ ನಲ್ಲಿ ಸಾವಿರಾರು ಮಂದಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಆಗಮಿಸಿದ್ದರು. ಸಾವಿರಾರು ವಾಹನಗಳ ಆಗಮನದ ಹಿನ್ನೆಲೆ ಸಂಚಾರ ದಟ್ಟಣೆ ಹಾಗೂ ಪ್ರಮುಖವಾಗಿ ಕೊರೊನಾ ನಿಯಮಗಳ ಪಾಲನೆ ಮಾಡದೇ ಬಹುತೇಕ ಪ್ರವಾಸಿಗರು ನಿರ್ಲಕ್ಷ್ಯ ವಹಿಸಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಜಿಲ್ಲಾಡಳಿತಕ್ಕೆ ನಂದಿಬೆಟ್ಟದಲ್ಲಿ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಸಿಬ್ಬಂದಿ ನಿಯೋಜನೆ ಮಾಡಿದ್ದರೂ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಕೋವಿಡ್ ನಿಯಮಗಳ ಪಾಲನೆ ಮಾಡಲಾಗುತ್ತಿಲ್ಲ. ಹೀಗಾಗಿ ಪ್ರವಾಸಿಗರಿಗೆ ನಿಬಂಧನೆಗಳನ್ನು ವಿಧಿಸಿದರೆ ಸೋಂಕು ನಿಯಂತ್ರಣಕ್ಕೆ ಅನೂಕುಲಕರವಾಗಿರುತ್ತದೆ ಎಂಬುದಾಗಿ ಕೋರಿಕೊಂಡಿದ್ದರು.


















