Tag: Travelers

  • ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಮಡಿಕೇರಿಯಲ್ಲಿ ಸೈಕಲ್ ಜಾಥಾ

    ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಮಡಿಕೇರಿಯಲ್ಲಿ ಸೈಕಲ್ ಜಾಥಾ

    ಮಡಿಕೇರಿ: ಸ್ವಚ್ಛ ಭಾರತ್ ಅಭಿಯಾನದ ಜಾಗೃತಿಗಾಗಿ ಮಡಿಕೇರಿಯಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.

    ಮಡಿಕೇರಿ ನಗರಸಭೆ, ಗ್ರೀನ್ ಸಿಟಿ ಫೋರಂ ಮತ್ತು ಕೃಷಿ ತಂತ್ರ ಸಂಯುಕ್ತ ಆಶ್ರಯದಲ್ಲಿ ಇಂದು ಮುಂಜಾನೆ ಮಡಿಕೇರಿಯ ಸುದರ್ಶನ ವೃತ್ತದಲ್ಲಿ ಸೈಕಲ್ ಜಾಥಾಗೆ ಚಾಲನೆ ನೀಡಲಾಯಿತು. ಪುಟ್ಟ ಮಕ್ಕಳಿಂದ ಹಿಡಿದು ಹಿರಿಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಸೈಕಲ್ ರೈಡ್ ನಲ್ಲಿ ಭಾಗವಹಿಸಿದ್ದರು.

    ಸುದರ್ಶನ್ ಸರ್ಕಲ್‍ನಿಂದ ಹೊರಟ ಸೈಕಲ್ ಜಾಥಾ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ ಮಾರ್ಗದಲ್ಲಿ ಸಾಗಿ ಇಂದಿರಾ ಕ್ಯಾಂಟೀನ್ ಮೂಲಕ ನಗರದ ರಾಜಾಸೀಟಿನಲ್ಲಿ ಕೊನೆಗೊಂಡಿತು. ಸ್ವಚ್ಛ ಸರ್ವೇಕ್ಷಣೆ 2021ರ ಅಂಗವಾಗಿ ನಗರವನ್ನ ಸ್ವಚ್ಛವಾಗಿಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

    ಕೊಡಗಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಸ್ವಚ್ಛತೆಯ ಬಗ್ಗೆ ಅರಿವು ನೀಡುವುದು ಮತ್ತು ಪ್ಲಾಸ್ಟಿಕ್‍ನಿಂದ ಪ್ರಕೃತಿಯ ಮೇಲೆ ಆಗುವ ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿದೆ.

  • 30 ನಿಮಿಷಲ್ಲಿ 30 ಕೆಜಿ ಕಿತ್ತಳೆ ಹಣ್ಣು ತಿಂದ ನಾಲ್ವರು- ಪರಿಣಾಮ ಏನಾಯ್ತು ಗೊತ್ತಾ?

    30 ನಿಮಿಷಲ್ಲಿ 30 ಕೆಜಿ ಕಿತ್ತಳೆ ಹಣ್ಣು ತಿಂದ ನಾಲ್ವರು- ಪರಿಣಾಮ ಏನಾಯ್ತು ಗೊತ್ತಾ?

    ಬೀಜಿಂಗ್: ಎಲ್ಲರಿಗೂ ತಿಳಿದಿರುವಂತೆ ವಿಮಾನಯಾನವು ದುಬಾರಿ ಸಾರಿಗೆ ವ್ಯವಸ್ಥೆಯಾಗಿದೆ. ವಿಮಾನ ಸಂಸ್ಥೆಯು ತನ್ನದೇ ಆದ ನಿಯಮ ಮತ್ತು ನಿಬಂಧನೆಗಳನ್ನು ಹೊಂದಿರುತ್ತದೆ. ಉದಾಹರಣೆ ಪ್ರಯಾಣಿಕರು ತೆಗೆದುಕೊಂಡು ಹೋಗುವ ಲಗೇಜ್‍ಗಳ ಮಿತಿ ಇಷ್ಟೇ ಇರಬೇಕು ಎಂಬ ನಿಯಮವಿರುತ್ತದೆ. ಲಗೇಜ್ ಮಿತಿಮೀರಿದರೆ ಯಾವುದೇ ಪ್ರಯಾಣಿಕರಾದರು ಸಹ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ ಹೆಚ್ಚಿನ ಶುಲ್ಕ ಪಾವತಿಸುವುದರಿಂದ ತಪ್ಪಿಸಿಕೊಳ್ಳಲು ಹೋಗಿ ನಾಲ್ವರು ಪ್ರಯಾಣಿಕರು ಸಮಸ್ಯೆ ಸೃಷ್ಟಿಸಿಕೊಂಡಿದ್ದಾರೆ.

    ಇತ್ತೀಚೆಗೆ 4 ಮಂದಿ ಪ್ರಯಾಣಿಕರು 30 ಕೆಜಿ ಕಿತ್ತಳೆ ಹಣ್ಣಿನ ಡಬ್ಬಗಳ ಲಗೇಜ್‍ಗೆ ಹೆಚ್ಚು ಹಣ ಪಾವತಿಸಬೇಕೆಂದು 30 ಕೆಜಿ ಹಣ್ಣನ್ನು 30 ನಿಮಿಷದಲ್ಲಿ ತಿಂದಿರುವ ಘಟನೆ ನೈರುತ್ಯ ಚೀನಾದ ಯುನ್ನಾನ್ ಪ್ರಾಂತ್ಯದ ಕುನ್ಮಿಂಗ್‍ನಲ್ಲಿರುವ ವಿಮಾನ ನಿಲ್ದಾಣದಲ್ಲಿ ನಡೆದಿದೆ.

    ವಿಮಾನ ನಿಲ್ದಾಣಕ್ಕೆ 30 ಕೆಜಿ ಕಿತ್ತಳೆ ಹಣ್ಣನ್ನು ತೆಗೆದುಕೊಂಡು ಹೋಗಿದ್ದ ವಾಂಗ್ ಮತ್ತು ಆತನ ಸಹೋದ್ಯೋಗಿಗಳು ಕಿತ್ತಳೆ ಹಣ್ಣಿನ ಹೆಚ್ಚುವರಿ ಲಗೇಜ್‍ಗೆ 300 ಯುವಾನ್(3,384 ರೂ) ಶುಲ್ಕ ಪಾವತಿಸಬೇಕೆಂದು ಕಿತ್ತಳೆ ಹಣ್ಣುಗಳನ್ನು ತಿನ್ನಲು ನಿರ್ಧರಿಸಿ, ಕೇವಲ 30 ನಿಮಿಷಗಳಲ್ಲಿ ವಿಮಾನ ನಿಲ್ದಾಣದಲ್ಲಿಯೇ ಎಲ್ಲಾ ಕಿತ್ತಳೆ ಹಣ್ಣುಗಳನ್ನು ತಿಂದು ಖಾಲಿ ಮಾಡಿದ್ದಾರೆ.

    ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವಿರುವುದರಿಂದ ಒಂದೇ ಬಾರಿಗೆ ಅಧಿಕ ಹಣ್ಣುಗಳನ್ನು ತಿಂದ ಪರಿಣಾಮ ಇದೀಗ 4 ಮಂದಿ ಕೂಡ ಬಾಯಿ ಹುಣ್ಣು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ನೆಟ್ಟಿಗರು ಆ ನಾಲ್ವರ ಮೂರ್ಖತನವನ್ನು ನೋಡಿ ವ್ಯಂಗ್ಯ ಮಾಡುತ್ತಿದ್ದಾರೆ.

  • ಭಾರತೀಯ ಪ್ರಯಾಣಿಕರಿಗೆ ನಿಷೇಧ ಹೇರಿದ ಚೀನಾ

    ಭಾರತೀಯ ಪ್ರಯಾಣಿಕರಿಗೆ ನಿಷೇಧ ಹೇರಿದ ಚೀನಾ

    – ತಾತ್ಕಾಲಿಕ ನಿಷೇಧ ಹೇರಿ ಪ್ರಕಟಣೆ

    ನವದೆಹಲಿ: ಕೊರೊನಾ ವೈರಸ್ ಹುಟ್ಟಿಗೆ ಕಾರಣವಾಗಿರುವ ಚೀನಾ, ಇದೀಗ ಭಾರತೀಯ ಪ್ರಯಾಣಿಕರಿಗೆ ನಿಷೇಧ ಹೇರುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈ ಮೂಲಕ ಕೊರೊನಾ ನೆಪವೊಡ್ಡಿ ಭಾರತೀಯರ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

    ಚೀನೀ ರಾಯಭಾರ ಕಚೇರಿ ಈ ಕುರಿತು ಸ್ಪಷ್ಟಪಡಿಸಿದ್ದು, ಭಾರತದಿಂದ ಆಗಮಿಸುವ ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ಚೀನಾದ ಅಧೀಕೃತ ವಿಸಾ ಅಥವಾ ನಿವಾಸ ಪರವಾನಗಿ ಹೊಂದಿದ್ದರು ಸಹ ಕೊರೊನಾ ಕಾರಣದಿಂದಾಗಿ ಭಾರತೀಯರ ಆಗಮನಕ್ಕೆ ನಿಷೇಧ ಹೇರಲಾಗಿದೆ ಎಂದು ಸ್ಪಷ್ಟಪಡಿಸಿದೆ.

    ಕೊರೊನಾ ವೈರಸ್ ದೃಷ್ಟಿಯಿಂದ ಭಾರತದಿಂದ ಆಗಮಿಸುವ ವಿದೇಶಿಗರಿಗೆ ಚೀನಾ ತಾತ್ಕಾಲಿಕ ನಿಷೇಧ ಹೇರಲು ನಿರ್ಧರಿಸಿದೆ. ಭಾರತದಲ್ಲಿನ ಚೀನೀ ರಾಯಭಾರಿ ಕಚೇರಿ ಅಥವಾ ದೂತಾವಾಸಗಳು ವೀಸಾ ಅಥವಾ ನಿವಾಸ ಪರವಾನಗಿ ಹೊಂದಿದ್ದರು ಸಹ ಭಾರತೀಯರ ಆರೋಗ್ಯ ದಾಖಲಾತಿಗಳಿಗೆ ಸ್ಟ್ಯಾಂಪ್ ಹಾಕಬೇಡಿ ಎಂದು ಸೂಚಿಸಲಾಗಿದೆ.

    ಚೀನಾ ರಾಯಭಾರಿ ಕಚೇರಿಯ ವೆಬ್‍ಸೈಟ್‍ನಲ್ಲಿ ಈ ಕುರಿತು ಪೋಸ್ಟ್ ಮಾಡಲಾಗಿದ್ದು, ಚೀನಾದ ರಾಜತಾಂತ್ರಿಕ, ಸೇವೆ, ಸೌಜನ್ಯ ಹಾಗೂ ಸಿ ದರ್ಜೆಯ ವೀಸಾಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಈ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. ತುರ್ತು ಅಥವಾ ಮಾನವೀಯ ಅಗತ್ಯವಿರುವವರು ಭಾರತದಲ್ಲಿನ ಚೀನೀ ರಾಯಭಾರಿ ಕಚೇರಿ ಅಥವಾ ದೂತಾವಾಸಗಳಲ್ಲಿ ವೀಸಾ ಅರ್ಜಿ ಸಲ್ಲಿಸಬಹುದು. ನವೆಂಬರ್ 3ರ ನಂತರ ನೀಡುವ ವೀಸಾಗಳಿಗೆ ನಿಷೇಧ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

    ಈ ನಿಷೇಧ ತಾತ್ಕಾಲಿಕವಾಗಿದ್ದು, ಕೊರೊನಾ ವೈರಸ್ ಎದುರಿಸಲು ಚೀನಾ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮವಾಗಿದೆ. ಸಾಂಕ್ರಾಮಿಕ ರೋಗವನ್ನು ತಡೆಯಲು ಚೀನಾ ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಂದಾಣಿಕೆ ಹಾಗೂ ಪ್ರಕಟಣೆಗಳನ್ನು ಹೊರಡಿಸಲಿದೆ ಎಂದು ರಾಯಭಾರಿ ಕಚೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

  • ಕೊಡಗಿನಲ್ಲಿ ರೆಸಾರ್ಟ್, ಹೋಟೆಲ್ ಒಪನ್ ಮಾಡಿದ್ರು ಗ್ರಾಹಕರೇ ಇಲ್ಲ

    ಕೊಡಗಿನಲ್ಲಿ ರೆಸಾರ್ಟ್, ಹೋಟೆಲ್ ಒಪನ್ ಮಾಡಿದ್ರು ಗ್ರಾಹಕರೇ ಇಲ್ಲ

    ಮಡಿಕೇರಿ: ಕೊರೊನಾ ಹರಡುವ ಆತಂಕದಿಂದ ದೇಶವನ್ನು ಲಾಕ್‍ಡೌನ್ ಮಾಡಿದ ಎರಡೂವರೆ ತಿಂಗಳ ಬಳಿಕ ಹೋಟೆಲ್ ರೆಸಾರ್ಟ್ ಮತ್ತು ಹೋಮ್ ಸ್ಟೇಗಳಲ್ಲಿ ಕುಳಿತು ಆಹಾರ ಸೇವಿಸಲು ಮತ್ತು ಉಳಿದುಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಕೊಡಗಿನ ಹೋಟೆಲ್, ರೆಸಾರ್ಟ್ ಮತ್ತು ಹೋಮ್ ಸ್ಟೇಗಳಲ್ಲಿ ಮಾತ್ರ ಗ್ರಾಹಕರೇ ಇಲ್ಲದೆ ಸಂಪೂರ್ಣ ಖಾಲಿ ಖಾಲಿಯಾಗಿವೆ.

    ಬಹುತೇಕ ಎಲ್ಲವೂ ಲಾಕ್‍ಡೌನ್ ನಿಂದ ಮುಕ್ತವಾಗಿರುವುದರಿಂದ ರೆಸ್ಟೋರೆಂಟ್ ಗಳತ್ತ ಪ್ರವಾಸಿಗರು, ಜನರು ಬರುವ ನಿರೀಕ್ಷೆ ಇತ್ತು. ಅದಕ್ಕಾಗಿಯೇ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದವು. ಹೋಟೆಲ್ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್ ಜೊತೆಗೆ ಸ್ಯಾನಿಟೈರ್ ವ್ಯವಸ್ಥೆಯನ್ನು ಮಾಡಿವೆ. ಅಲ್ಲದೆ ರಿಸೆಪ್ಷನ್ ಸ್ಥಳದಲ್ಲಿ ಕೂಡ ಸಾಮಾಜಿಕ ಅಂತ ಕಾಪಾಡುವುದಕ್ಕಾಗಿ ಮಾರ್ಕ್ ಗಳನ್ನು ಮಾಡಲಾಗಿದೆ. ಅಲ್ಲದೆ ಯಾವ ರಾಜ್ಯದಿಂದ ಬಂದಿದ್ದಾರೆ, ಅವರ ಆರೋಗ್ಯದ ಸ್ಥಿತಿ ಹೇಗಿದೆ ಎಂಬುದನ್ನೆಲ್ಲಾ ತಿಳಿದುಕೊಳ್ಳುವುದಕ್ಕಾಗಿ ಪ್ರತ್ಯೇಕವಾಗಿ ಎಲ್ಲಾ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.

    ಪ್ರವಾಸಿಗರು ಮತ್ತು ಜನರೇ ಇಲ್ಲದೆ ನಿರೀಕ್ಷೆ ಸಂಪೂರ್ಣ ಸುಳ್ಳಾಗಿದೆ. ಪ್ರವಾಸಿಗರು ಅಥವಾ ಜನರು ರೆಸ್ಟೋರೆಂಟ್‍ಗಳಿಗೆ ಬರುತ್ತಾರೆಂದೇ ಆಹಾರ ಪದಾರ್ಥಗಳನ್ನು ಕೂಡ ರೆಡಿಮಾಡಿಕೊಂಡಿದ್ದವು. ಆದರೆ ಒಬ್ಬೇ ಒಬ್ಬ ಪ್ರವಾಸಿಗರು ಇತ್ತ ತಿರುಗಿ ನೋಡಿಲ್ಲ. ಅದರಲ್ಲೂ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಕೊಡಗು ಜಿಲ್ಲೆಯ ಹೋಟೆಲ್, ರೆಸಾರ್ಟ್ ಗಳು ಸಂಪೂರ್ಣ ಸ್ಥಬ್ಧವಾಗಿವೆ.

    ಒಟ್ಟಿನಲ್ಲಿ ಆರ್ಥಿಕ ಚಟುವಟಿಕೆಗೆ ಚುರುಕು ನೀಡಲು ಸರ್ಕಾರ ಬಹುತೇಕ ಲಾಕ್‍ಡೌನ್ ಫ್ರೀ ಮಾಡಿದ್ದರೂ ಜನರು ಮಾತ್ರ ಕೊರೊನಾ ಆತಂಕದಿಂದ ಹೊರಬಂದಿಲ್ಲ. ಹೀಗಾಗಿ ಕೊಡಗಿನ ಆರ್ಥಿಕ ಚಟುವಟಿಕೆ ಇನ್ನೂ ನಿದ್ರಾವಸ್ಥೆಯಲ್ಲಿದೆ ಎನ್ನುವಂತಾಗಿದೆ.

  • ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪರಾರಿಯಾಗಿರೋ ಪ್ರಯಾಣಿಕರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ

    ಕ್ವಾರಂಟೈನ್ ತಪ್ಪಿಸಿಕೊಳ್ಳಲು ಪರಾರಿಯಾಗಿರೋ ಪ್ರಯಾಣಿಕರಿಗೆ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ

    ಬೆಂಗಳೂರು: ಕ್ವಾರಂಟೈನ್ ಆಗುವುದನ್ನು ತಪ್ಪಿಸಿಕೊಂಡು ಹೋದ ಪ್ರಯಾಣಿಕರನ್ನು ಹುಡುಕಿ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮುಂಬೈನಿಂದ ಬಂವದರಿಗೆ ಖಡಕ್ ಎಚ್ಚರಿಕೆ ನೀಡಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಭಾಸ್ಕರ್ ರಾವ್, ಬೆಳಗ್ಗೆ ಮುಂಬೈಯಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರಿಗೆ 667 ಪ್ರಯಾಣಿಕರು ಬಂದಿದ್ದಾರೆ. ಮುಂಬೈಯಿಂದ ಬಂದವರನ್ನ ಕ್ವಾರಂಟೈನ್ ಮಾಡಲು ರಾಜ್ಯ ಸರ್ಕಾರ ಸೂಚಿಸಿದೆ. ಆದರೆ ಕ್ವಾರಂಟೈನ್ ತಪ್ಪಿಸಿಕೊಳ್ಳಲು ಬಹಳ ಜನರು ಓಡಿಹೋಗಿದ್ದಾರೆ. ಆದರೆ ಅವರ ಬೆನ್ನತ್ತಿ ಹೋಗುವುದು ಸರಿಯಲ್ಲ ಎಂದು ನಾವು ಹೋಗಿಲ್ಲ ಎಂದು ತಿಳಿಸಿದರು.

    ರೈಲ್ವೆ ಇಲಾಖೆಯಿಂದ ಅವರ ವಿಳಾಸ ತೆಗೆದುಕೊಂಡು ಅವರನ್ನು ಪತ್ತೆ ಮಾಡುತ್ತೇವೆ. ನಂತರ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸುತ್ತೇವೆ. ಪ್ರಯಾಣಿಕರು ಅವರಾಗಿ ಬಂದು ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಬೇಕು. ಒಂದು ವೇಳೆ ಅವರು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕ ಮಾಡದೆ ಹೋದರೆ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಸೂಚಿಸಿದರು.

    ಪಾಲಿಕೆ ಆರೋಗ್ಯ ಅಧಿಕಾರಿಗಳು ಹಾಗೂ ಪೊಲೀಸರು ಮುಂಬೈಯಿಂದ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ. ಆಗ ಪ್ರಯಾಣಿಕರು ಕ್ವಾರಂಟೈನ್ ಆಗಲು ವಿರೋಧಿಸಿ ಗಲಾಟೆ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ತಪ್ಪಿಸಿಕೊಂಡು ಹೋಗಿರುವವರು ಪ್ಯಾಸೆಂಜರ್ಸ್ ತಕ್ಷಣ ಪಾಲಿಕೆ ಆರೋಗ್ಯ ಅಧಿಕಾರಿಗಳನ್ನ ಸಂಪರ್ಕ ಮಾಡಿದರೆ ಕ್ರಿಮಿನಲ್ ಕೇಸ್‍ನಿಂದ ಮುಕ್ತಿ ಸಿಗುತ್ತದೆ. ಇಲ್ಲದೇ ಹೋದರೆ ರೈಲ್ವೇ ಇಲಾಖೆಯಿಂದ ಮಾಹಿತಿ ಪಡೆದು ತಪ್ಪಿಸಿಕೊಂಡು ಹೋದ ಪ್ರಯಾಣಿಕರನ್ನು ಹುಡುಕಿ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತೆ ಎಂದು ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದರು.

  • ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿ – ನಾಲ್ವರು ಸ್ಥಳದಲ್ಲಿಯೇ ಸಾವು, 7 ಮಂದಿ ಗಂಭೀರ

    ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿ – ನಾಲ್ವರು ಸ್ಥಳದಲ್ಲಿಯೇ ಸಾವು, 7 ಮಂದಿ ಗಂಭೀರ

    ಬಳ್ಳಾರಿ: ಜಿಲ್ಲೆಯ ಹಿರೇಹಡಗಲಿ ಪೊಲೀಸ್ ಠಾಣೆವ್ಯಾಪ್ತಿಯ ಕತ್ತೆಬೆನ್ನೂರು ಗ್ರಾಮದ ಬಳಿ ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇತ್ತ ಏಳು ಮಂದಿಗೆ ತೀವ್ರ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.

    ಮೃತಪಟ್ಟವರನ್ನು ದಾಸಹನಹಳ್ಳಿ ಮೂಲದ ಅಂಗಡಿ ಗೀತಾ(40), ಸೊಪ್ಪನ ಸುನಿತಾ(30), ವೀರಣ್ಣ ಜಕ್ಕಣ್ಣನವರ(35), ಹೆಗ್ಗಜ್ಜರ ಕಾಳಮ್ಮ(50) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡ 7 ಮಂದಿಯನ್ನು ಹೂವಿನಹಡಗಲಿ ಮತ್ತು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹೂವಿನ ಹಡಗಲಿಯ ಭೀರಬ್ಬಿ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮದುವೆ ಮುಗಿಸಿಕೊಂಡು ಕುಟುಂಬ ವಾಪಸ್ ದಾಸಹನಹಳ್ಳಿಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಕತ್ತೇಬೆನ್ನೂರು ಬಳಿ ಟ್ರ್ಯಾಕ್ಟರ್ ಆಯತಪ್ಪಿ ಪಲ್ಟಿಯಾಗಿ ಅಪಘಾತ ಜರುಗಿದೆ. ಸ್ಥಳಕ್ಕೆ ಸಿಪಿಐ ಮಾಲತೇಶ್ ಕೂನಬೇವು ಭೇಟಿ ನೀಡಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ. ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಈ ಸಂಭಂದ ಪ್ರಕರಣ ದಾಖಲಾಗಿದೆ.

  • ಏಪ್ರಿಲ್ 15ರವರೆಗೆ ಕಾಫಿನಾಡಿಗೆ ಬರಬೇಡಿ – ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಮನವಿ

    ಏಪ್ರಿಲ್ 15ರವರೆಗೆ ಕಾಫಿನಾಡಿಗೆ ಬರಬೇಡಿ – ಪ್ರವಾಸಿಗರಿಗೆ ಜಿಲ್ಲಾಧಿಕಾರಿ ಮನವಿ

    ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಮುಂದಿನ ಒಂದು ತಿಂಗಳು ತುಂಬಾ ಕ್ರಿಟಿಕಲ್ ಪರಿಸ್ಥಿತಿಯಾಗಿದೆ. ಹಾಗಾಗಿ ಕಾಫಿನಾಡಿಗೆ ಏಪ್ರಿಲ್ 15ರವರೆಗೂ ಯಾವ ಪ್ರವಾಸಿಗರು ಬರಬೇಡಿ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಈವರೆಗೆ ಜಿಲ್ಲಾದ್ಯಂತ ಒಂದೇ ಒಂದು ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿಲ್ಲ. ದಾಖಲಾಗಿದ್ದ ಇಬ್ಬರು ರೋಗಿಗಳಲ್ಲೂ ನೆಗೆಟಿವ್ ಬಂದಿದೆ. ಪರಿಸ್ಥಿತಿಯನ್ನ ನಿಯಂತ್ರಿಸೋದಕ್ಕೆ ಜಿಲ್ಲಾಡಳಿತ ಕೂಡ ಸನ್ನದ್ಧವಾಗಿದೆ. ಆದರೆ ಜನಸಾಮಾನ್ಯರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

    ಮುಂದಿನ ಒಂದು ತಿಂಗಳುಗಳ ಕಾಲ ತುಂಬಾ ಮುಖ್ಯವಾದ ಕಾಲಘಟ್ಟವಾಗಿದೆ. ಆದ್ದರಿಂದ ಪ್ರಕೃತಿ ಪ್ರವಾಸಿಗರು, ಧಾರ್ಮಿಕ ಪ್ರವಾಸಿಗರು, ಅಡ್ವೆಂಚರ್ ಪ್ರವಾಸಿಗರು ಸೇರಿದಂತೆ ಮತ್ಯಾವುದೇ ರೀತಿಯ ಪ್ರವಾಸಿಗರು ಕಾಫಿನಾಡಿಗೆ ಬರಬಾರದು ಎಂದು ಜಿಲ್ಲಾಧಿಕಾರಿ ಗೌತಮ್ ತಿಳಿಸಿದರು.

    ಪ್ರವಾಸಿಗರು ತಮ್ಮ ಟೂರ್ ಶೆಡ್ಯೂಲನ್ನ ಒಂದು ತಿಂಗಳ ನಂತರಕ್ಕೆ ಬದಲಾಯಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಈಗಾಗಲೇ ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಯಲ್ಲಿ 38 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 74 ಐಸೋಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

  • ಬಿಎಂಟಿಸಿಯಿಂದ ಆ್ಯಪ್ ಬಿಡುಗಡೆ

    ಬಿಎಂಟಿಸಿಯಿಂದ ಆ್ಯಪ್ ಬಿಡುಗಡೆ

    ಬೆಂಗಳೂರು : ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ My BMTC Mobile App ಬಿಡುಗಡೆ ಮಾಡಲಾಗಿದೆ. ಈ ಹೊಸ ಆ್ಯಪ್ ಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಬಿಎಂಟಿಸಿ ಎಂಡಿ ಸಿ.ಶಿಖಾ,ನಿರ್ದೇಶಕ ಅನುಪಮ್ ಅಗ್ರವಾಲ್ ಚಾಲನೆ ನೀಡಿದರು.

    ಬಿಎಂಟಿಸಿ ಆ್ಯಪ್ ವಿಶೇಷತೆ
    * ಬಿಎಂಟಿಸಿ ಬಸ್ ಗಳ ವೇಳಾಪಟ್ಟಿ, ಬಸ್ ಗಳು ಆಗಮಿಸುವ ಅಂದಾಜು ಸಮಯ, ಹತ್ತಿರದ ಬಸ್ ಸ್ಟಾಪ್ ಗಳ ಬಗ್ಗೆ ಮಾಹಿತಿ ಪಡೆಯಬಹುದು.
    * ಮಾರ್ಗಗಳ ಸಂಖ್ಯೆಯ ಮಾಹಿತಿ ನೀಡುತ್ತದೆ.

    ಬಿಎಂಟಿಸಿ ಸಂಸ್ಥೆಯು ಅಭಿವೃದ್ಧಿಪಡಿಸಿದ ಈ ಆ್ಯಪ್ ನ್ನು ಪ್ರಯಾಣಿಕರು, ಆಂಡ್ರಾಯ್ಡ್ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಗೆ ಹೋಗಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್ ನ ಲಿಂಕ್ ಈ ಕೆಳಗಿನಂತಿದೆ.
    https://play.google.com/store/apps/details?id=com.mybmtc

     

  • ಬಂಡೀಪುರದಲ್ಲಿ ಪ್ರಕೃತಿ ಸೊಬಗು ಇಮ್ಮಡಿ – ಮೂಲೆ, ಮೂಲೆಯಿಂದ ಪ್ರವಾಸಿಗರ ದಂಡು

    ಬಂಡೀಪುರದಲ್ಲಿ ಪ್ರಕೃತಿ ಸೊಬಗು ಇಮ್ಮಡಿ – ಮೂಲೆ, ಮೂಲೆಯಿಂದ ಪ್ರವಾಸಿಗರ ದಂಡು

    ಚಾಮರಾಜನಗರ: ಬೆಂಕಿ ಬಿದ್ದು ಬಂಡೀಪುರ ಹುಲಿರಕ್ಷಿತಾರಣ್ಯ ಸುಟ್ಟು ಭಸ್ಮವಾಗಿತ್ತು. ಆದರೆ ಇತ್ತೀಚೆಗೆ ಬೀಳುತ್ತಿರುವ ಮಳೆಯಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಿಡ ಮರಗಳು ಚಿಗುರೊಡೆಯಲಾರಂಭಿಸಿವೆ. ಹಸಿರು ಕಾನನದ ನಡುವೆ ಹುಲಿ, ಚಿರತೆ, ಆನೆ, ಜಿಂಕೆ, ಕಡವೆ ಮೊದಲಾದ ವನ್ಯಜೀವಿಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ. ಈ ವನ್ಯ ಸಂಪತ್ತನ್ನು ಕಣ್ತುಂಬಿಕೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಬಂಡೀಪುರಕ್ಕೆ ಬರುತ್ತಿದ್ದಾರೆ.

    ಬೆಂಕಿ ಬಿದ್ದಿದ್ದ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ನಿಧಾನವಾಗಿ ತನ್ನ ಮೊದಲ ರೂಪ ಪಡೆದು ಕೊಳ್ಳಲಾರಂಭಿಸಿದೆ. ಕಳೆದ 20 ದಿನಗಳಿಂದ ಬೀಳುತ್ತಿರುವ ಮಳೆಯಿಂದ ಬಂಡೀಪುರ ಹುಲಿರಕ್ಷಿತಾರಣ್ಯ ಹಸಿರ ವನರಾಶಿಯಿಂದ ಕಂಗೊಳಿಸುತ್ತಿದೆ. ನಿಧಾನಗತಿಯಲ್ಲಿ ಕೆರೆಕಟ್ಟೆಗಳು ತುಂಬಲಾರಂಭಿಸಿವೆ. ಅಷ್ಟೇ ಅಲ್ಲದೆ ಎಲ್ಲೆಡೆ ಹಸಿರಿನಿಂದ ಪ್ರಕೃತಿಯ ಸೊಬಗು ಇಮ್ಮಡಿಗೊಂಡಿದೆ.

    ಸುಮಾರು 1024 ಸಾವಿರ ಚದರ ಕಿ.ಮೀ ವ್ಯಾಪ್ತಿಯಲ್ಲಿ ವಿಸ್ತರಿಸಿರುವ ಈ ಹುಲಿ ಸಂರಕ್ಷಿತ ಅರಣ್ಯ ದಕ್ಷಿಣ ಭಾರತದ ಅತಿ ದೊಡ್ಡ ಸಂರಕ್ಷಿರತ ಪ್ರದೇಶವೂ ಆಗಿದೆ. 160ಕ್ಕೂ ಹೆಚ್ಚು ಹುಲಿಗಳು, ಎರಡು ಸಾವಿರಕ್ಕೂ ಹೆಚ್ಚು ಆನೆಗಳು ಸೇರಿದಂತೆ ಚಿರತೆ ಕರಡಿ, ಜಿಂಕೆ, ಕಾಡೆಮ್ಮೆ, ಮೊದಲಾದ ವನ್ಯಜೀವಿಗಳ ಆವಾಸ ಸ್ಥಾನವಾಗಿದೆ. ವಾರ್ಷಿಕ 450 ಮಿ.ಮೀ ವಾಡಿಕೆ ಮಳೆಯಾಗುವ ಬಂಡೀಪುರದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಾಂಭಿಸಿದೆ. ಹಸಿರಾಗಿರುವ ಹುಲಿ ಸಂರಕ್ಷಿತ ಪ್ರದೇಶದ ಮಧ್ಯೆ ಸಫಾರಿ ಮಾಡೋದಂತೂ ಮನಸಿಗೆ ಆಹ್ಲಾದ ಉಂಟು ಮಾಡುತ್ತಿದೆ. ಹೇಳಿ ಕೇಳಿ ಈಗ ಬೇಸಿಗೆ ರಜೆ ಬೇರೆ ಇರುವುದರಿಂದ ಪ್ರವಾಸಿಗರ ದಂಡೇ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದತ್ತ ಹರಿದು ಬರುತ್ತಿದೆ ಎಂದು ಪ್ರವಾಸಿಗರಾದ ರಾಜೇಶ್ವರಿ ಹೇಳಿದ್ದಾರೆ.

    ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಬೀಳುತ್ತಿರುವುದರಿಂದ ಮೇ ತಿಂಗಳಿನಿಂದಲೇ ಬಂಡೀಪುರ ಕಳೆಗಟ್ಟಿದೆ. ನೀರು ಹಾಗೂ ಮೇವಿನ ಚಿಂತೆ ಇಲ್ಲದೆ ವನ್ಯಜೀವಿಗಳು ಸ್ವಚ್ಛಂದವಾಗಿ ವಿಹರಿಸುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ. ಕೆರೆಕಟ್ಟೆಗಳಿಗೆ ನೀರು ಕುಡಿಯಲು, ಇಲ್ಲವೇ ಹಸಿರು ಹುಲ್ಲು ಮೇಯಲು ಬರುವ ಕಾಡಮ್ಮೆ, ಜಿಂಕೆ, ಕಡವೆಯಂತಹ ಪ್ರಾಣಿಗಳನ್ನ ನೋಡಿದರೆ ಮನಸ್ಸು ಮುದಗೊಳ್ಳುತ್ತದೆ ಎಂದು ಸತೀಶ್ ತಿಳಿಸಿದ್ದಾರೆ.

    ನಿರೀಕ್ಷಿತ ಪ್ರಮಾಣದ ಮಳೆಯಿಂದ ಬಂಡೀಪುರದಲ್ಲಿ ಪ್ರಕೃತಿ ಸೊಬಗು ಇಮ್ಮಡಿಗೊಂಡಿದೆ. ನಿತ್ಯ ನೂರಾರು ಪ್ರವಾಸಿಗರು ಹಚ್ಚ ಹಸಿರಿನಿಂದ ಕಂಗೊಳಿಸುವ ಬಂಡೀಪುರ ಹಾಗೂ ಇಲ್ಲಿನ ವನ್ಯಜೀವಿಗಳ ವೀಕ್ಷಣೆಗೆಂದು ಬರತೊಡಗಿದ್ದಾರೆ.

  • ಮೆಟ್ರೋ ಹೊಸ ನಿಯಮಕ್ಕೆ ಪ್ರಯಾಣಿಕರು ಗರಂ!

    ಮೆಟ್ರೋ ಹೊಸ ನಿಯಮಕ್ಕೆ ಪ್ರಯಾಣಿಕರು ಗರಂ!

    ಬೆಂಗಳೂರು: ನಮ್ಮ ಮೆಟ್ರೋ ಅಧಿಕಾರಿಗಳ ಹೊಸ ನಿಯಮಕ್ಕೆ ಪ್ರಯಾಣಿಕರು ಫುಲ್ ಗರಂ ಆಗಿದ್ದು, ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

    ಮೆಟ್ರೋ ಕಾರ್ಡಲ್ಲಿ ಕನಿಷ್ಠ 50 ರೂ. ಚಾರ್ಜ್ ಇರಲೇ ಬೇಕೆಂಬ ನಿಯಮವನ್ನು ಮೆಟ್ರೋ ಅಧಿಕಾರಿಗಳು ಜಾರಿ ಮಾಡಿದ್ದು, ಈ ಹಿಂದೆ ಇದ್ದ 8 ರೂ.ಗಳನ್ನು ಏಕಾಏಕಿ 50 ರೂ.ಗೆ ಹೆಚ್ಚಳ ಮಾಡಿದ್ದಾರೆ. ಕನಿಷ್ಠ ಬ್ಯಾಲೆನ್ಸ್ ಇಲ್ಲವಾದರೆ ಮೆಟ್ರೋ ಪ್ರವೇಶ ದ್ವಾರ ಓಪನ್ ಆಗಲ್ಲ. ಯಾವುದೇ ಪೂರ್ವ ಮಾಹಿತಿ ಇಲ್ಲದೆ, ದಿಢೀರ್ ನಿಯಮ ಜಾರಿ ಮಾಡಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆ ಮಾತ್ರವಲ್ಲೇ ಮಹಾಕವಿ ಕುವೆಂಪು ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಕೂಡ ಜಮಾಯಿಸಿದ ನೂರಾರು ಪ್ರಯಾಣಿಕರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸಾರ್ವಜನಿಕರ ಹಣವನ್ನು ಲೂಟಿಗಿಳಿದಿದ್ದಾರೆ ಎಂದು ಆರೋಪ ಮಾಡಿದರು. ಈ ನಡುವೆ ಪ್ರತಿಭಟನೆಗೆ ಪೊಲೀಸರು ಮನವೊಲಿಸುವ ಪ್ರಯತ್ನ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಜನರ ನಡುವೆ ವಾಗ್ವಾದ ನಡೆಯಿತು.