Tag: Trees

  • ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!

    ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!

    ಬೆಂಗಳೂರು: ಬೇಸಿಗೆ ಕಾಲ ಬಂದುಬಿಟ್ಟಿದೆ, ತಾಪಮಾನ ಹೆಚ್ಚುತ್ತಿದ್ದಂತೆ ಬಿಸಿ ಗಾಳಿ ಮೈಗೆ ಅಪ್ಪಳಿಸುತ್ತಿದೆ, ಮಳೆ ಮಾಯವಾಗುತ್ತಿದೆ. ಈ ನಡುವೆಯೂ ಮರಗಿಡಗಳು (Trees), ಪರಿಸರದ ಮೇಲಿನ ದೌರ್ಜನ್ಯ ವಿಪರೀತವಾಗಿ ವಿನಾಶ ಕಾಲ ಶುರುವಾದಂತೆ ಕಾಣ್ತಿದೆ.

    ಹೌದು. ಮರಗಿಡ ಬೆಳೆಸಿ, ಪರಿಸರ ಉಳಿಸಿ ಎಂದು ಸರ್ಕಾರ ಮತ್ತು ಸಂಘಟನೆಗಳು ಘೋಷಿಸುತ್ತವೆ. ಸಾರ್ವಜನಿಕರೂ ಮಾತನಾಡಿಕೊಳ್ಳುತ್ತಾರೆ. ಇದು ಕೇವಲ ಔಪಚಾರಿಕ ಸಮಾರಂಭಕ್ಕೆ, ಭಾಷಣಕ್ಕೆ ಸೀಮಿತವಾಗಿ ಮರೆತು ಹೋಗುತ್ತದೆ. ಆದರೆ, ವಾಸ್ತವದಲ್ಲಿ ಮರಗಳನ್ನು ಉಳಿಸುವ ಬದಲು ಉರುಳಿಸುವ ಕೆಲಸವೇ ಹೆಚ್ಚಾಗಿ ಕಂಡು ಬರುತ್ತದೆ. ಇದಕ್ಕೆ ಬೆಂಗಳೂರು ನಗರದಲ್ಲಿ 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು ಕೊಟ್ಟಿರುವುದೇ ಸಾಕ್ಷಿಯಾಗಿದೆ.

    ಸಾಂದರ್ಭಿಕ ಚಿತ್ರ

    ಅಭಿವೃದ್ಧಿ, ಸುರಕ್ಷತೆ, ರಸ್ತೆ ಸಂಚಾರಕ್ಕೆ ಅಡಚಣೆ ಹೆಸರಲ್ಲಿ ಮರ ಕತ್ತರಿಸುವ ಸಂಸ್ಕೃತಿ ದಿನೇ ದಿನೇ ಹೆಚ್ಚುತ್ತಿದೆ. ಆದರೂ ಯಾರೂ ಕೇಳುವರಿಲ್ಲದೇ ಪರಿಸರ ಜಾಗೃತಿ ಬದಲು ದುರ್ಗತಿ ಎದುರಾಗುತ್ತಿದೆ. ಇದೀಗ ಆಹಾರಸೌಧ ಕಟ್ಟಡ ನೆಪದಲ್ಲಿ ಸರ್ಕಾರದಿಂದಲೇ ಮರಗಳ ಮಾರಣಹೋಮ ಮಾಡುವ ಕೆಲಸ ನಡೆಯುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

    ಸರ್ಕಾರ ಅರಣ್ಯ ಇಲಾಖೆ ಜಾಗದಲ್ಲಿ ಆಹಾರ ಸೌಧ ಮಾಡಲು ತಯಾರಿ ನಡೆಸಿದೆ. ಹೀಗಾಗಿ ಬೆಂಗಳೂರಿನ ಅಲಿಅಸ್ಕರ್ ರಸ್ತೆಯಲ್ಲಿ 100 ವರ್ಷಗಳಷ್ಟು ಹಳೆಯದಾದ 23 ಮರಗಳಿಗೆ ಕೊಡಲಿ ಏಟು ನೀಡಿದೆ. ಇದಕ್ಕೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮೊದಲೇ ಕಾಂಕ್ರೀಟ್‌ ಕಾಡಿನಂತಾಗಿರುವ ಬೆಂಗಳೂರಿನಲ್ಲಿ ಮರಗಳನ್ನು ಕಡಿದು ಇನ್ನಷ್ಟು ಅಪಾಯ ತಂದೊಡ್ಡಬೇಡಿ ಎಂದು ಜನರು ಮನವಿ ಮಾಡಿದ್ದಾರೆ. ಇದಕ್ಕೆ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

  • ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ

    ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ

    ಬೆಂಗಳೂರು: ಕೆಲ ದಿನಗಳಿಂದ ಬೆಂಗಳೂರಲ್ಲಿ (Bengaluru Rains) ಮಳೆಯಾಗುತ್ತಿದ್ದು, ಐದು ದಿನಗಳ ಅವಧಿಯಲ್ಲಿ 271 ಮರಗಳು (Bengaluru Trees) ಧರೆಗೆ ಉರುಳಿವೆ.

    ಬೆಂಗಳೂರು ದಕ್ಷಿಣ ವಲಯ, ಆರ್.ಆರ್. ನಗರ ಮತ್ತು ಪೂರ್ವ ವಲಯದಲ್ಲಿ ಹೆಚ್ಚು ಮರಗಳು ನೆಲಕ್ಕುರುಳಿವೆ. ಮರದ ರೆಂಬೆ, ಕೊಂಬೆ ಮುರಿದಿವೆ ಎಂದು 400 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಇದನ್ನೂ ಓದಿ: ಪರಿಷತ್‌ ಚುನಾವಣೆಯಲ್ಲೂ ಮೈತ್ರಿ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌; ಕಮಲಕ್ಕೆ 5, ಜೆಡಿಎಸ್‌ಗೆ 1 ಸ್ಥಾನ

    ಬಿಬಿಎಂಪಿಗೆ ಮರ ಬಿದ್ದಿರುವ ಬಗ್ಗೆ ಸಾಲು ಸಾಲು ದೂರು ಕೇಳಿಬಂದಿದೆ. ಬಿಬಿಎಂಪಿ ಮರ ತೆರವು ಮಾಡಲು 26 ತಂಡಗಳನ್ನ ರಚನೆ ಮಾಡಲಾಗಿದೆ. 8 ವಲಯಗಳಲ್ಲೂ 26 ತಂಡ ರಚನೆ ಮಾಡಿ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

    6ನೇ ತಾರೀಖು 126 ಮರಗಳು ಬಿದ್ದಿವೆ. 8ನೇ ತಾರೀಖು 70 ಮರ, 9 ರಂದು 44, 10 ರಂದು 32 ಮರ ಧರೆಗೆ ಬಿದ್ದಿವೆ. ಇದನ್ನೂ ಓದಿ: ಮಾಜಿ ಸಿಎಂ ಎಸ್‌.ಎಂ ಕೃಷ್ಣರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

  • ರಸ್ತೆ ಅಗಲೀಕರಣಕ್ಕೆ ಮರಗಳ ಕಟಾವು – ಸಿಡಿದೆದ್ದ ಪರಿಸರ ಪ್ರೇಮಿಗಳು

    ರಸ್ತೆ ಅಗಲೀಕರಣಕ್ಕೆ ಮರಗಳ ಕಟಾವು – ಸಿಡಿದೆದ್ದ ಪರಿಸರ ಪ್ರೇಮಿಗಳು

    ಬೆಂಗಳೂರು: ರಾಜ್ಯದ 17 ಜಿಲ್ಲೆಗಳಿಗೆ ಹಾಗೂ ಹೊರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು ಸದಾ ವಾಹನಗಳಿಂದ ಗಿಜಿಗುಡುವ, 24*7 ವಾಹನಗಳು ಸಂಚರಿಸುವ ಹೆದ್ದಾರಿ (Highway). ಇದೀಗ ಈ ಹೆದ್ದಾರಿಯನ್ನು ಅಗಲೀಕರಣಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದ್ದು ರಸ್ತೆ ಬದಿಯಲ್ಲಿದ್ದ ಮರಗಳನ್ನು (Trees) ಕಟಾವು ಮಾಡಲಾಗಿದೆ ಇದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ (Green Activists) ಗುರಿಯಾಗಿದೆ.

    ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಮುಂದಾಗಿದೆ. ರಸ್ತೆ ಅಗಲೀಕರಣದ ಉದ್ದೇಶದಿಂದ ರಸ್ತೆ ಬದಿಯ ಬೃಹತ್ ಮರಗಳನ್ನು ಯಂತ್ರಗಳ ಮೂಲಕ ಕಟಾವು ಮಾಡಲಾಗುತ್ತಿದೆ. ಇದಕ್ಕೆ ಪರಿಸರ ಪ್ರೇಮಿಗಳ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು

    ರಸ್ತೆ ಬದಿಯಲ್ಲಿದ್ದ ನೂರಾರು ಮರಗಳನ್ನು ಈಗಾಗಲೇ ಕಟಾವು ಮಾಡಲಾಗಿದೆ. ಇದನ್ನು ಕಂಡು ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದು, ಮರಗಳ ಕಟಾವು ಬದಲು ಸ್ಥಳಾಂತರಕ್ಕೆ ಆಗ್ರಹಿಸುತ್ತಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ಬೆಳೆದು ನಿಂತಿರುವ ಮರಗಳ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    Live Tv
    [brid partner=56869869 player=32851 video=960834 autoplay=true]

  • ಮರ ಕಡಿದು ಪರಿಸರ ಶಾಲೆ ಮಾಡುತ್ತಿದೆ ಖಾಸಗಿ ಸಂಸ್ಥೆ- ಗ್ರಾಮಸ್ಥರ ಅಕ್ರೋಶ

    ಮರ ಕಡಿದು ಪರಿಸರ ಶಾಲೆ ಮಾಡುತ್ತಿದೆ ಖಾಸಗಿ ಸಂಸ್ಥೆ- ಗ್ರಾಮಸ್ಥರ ಅಕ್ರೋಶ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ಆರಂಭವಾದ ಭಾರೀ ಕುಸಿತದಂತಹ ಘಟನೆಗಳು ಮತ್ತೆ ಮರುಕಳುಹಿಸುತ್ತಲೇ ಇವೆ. ಇದರ ನಡುವೆಯೇ ಮೊಬೀಯಸ್ ಫೌಂಡೇಷನ್ ಹತ್ತಾರು ಎಕರೆ ಪ್ರದೇಶದಲ್ಲಿ ನೂರು ಮರಗಳನ್ನು ಕಡಿದು ಅಂತರಾಷ್ಟ್ರೀಯ ಮಟ್ಟದ ಪರಿಸರ ವಿಜ್ಞಾನ ಶಾಲೆಯನ್ನು ಆರಂಭಿಸಲು ಹೊರಟಿದೆ. ಇದಕ್ಕೆ ಕೊಡಗಿನ ಪರಿಸರವಾದಿಗಳು ಮತ್ತು ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    ಮೊಬೀಯಸ್ ಫೌಂಡೇಷನ್ ಮಡಿಕೇರಿ ತಾಲೂಕಿನ ಹೊಸಕೇರಿಯ ಬೆಟ್ಟದ ಮೇಲೆ ಬರೋಬ್ಬರಿ 30 ಎಕರೆ ಪ್ರದೇಶದಲ್ಲಿ ಅಂತರಾಷ್ಟ್ರೀಯ ಶಾಲೆ ನಿರ್ಮಿಸುವುದಕ್ಕೆ ಮುಂದಾಗಿದೆ. ವಸತಿ ಶಾಲೆಯಾಗಿರುವ ಕಾರಣ, ಶಾಲೆ ಮತ್ತು ವಸತಿ ಉದ್ದೇಶಕ್ಕಾಗಿ 7 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಕಟ್ಟಡಗಳು ತಲೆ ಎತ್ತಲಿವೆ. ಶಾಲೆಯಲ್ಲಿ ಒಟ್ಟು 550 ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶವಿದ್ದು, ಸಿಬ್ಬಂದಿ ಸೇರಿದಂತೆ 700 ಕ್ಕೂ ಹೆಚ್ಚು ಜನರು ಇಲ್ಲಿ ತಂಗಲಿದ್ದಾರೆ. ಜೊತೆಗೆ ಕಟ್ಟಡವಲ್ಲದೆ, ಶಾಲಾ ವಿದ್ಯಾರ್ಥಿಗಳಿಗಾಗಿ ಫುಟ್ ಬಾಲ್ ಮೈದಾನದಷ್ಟ್ರು ವಿಸ್ತೀರ್ಣದ ನಾಲ್ಕು ಮೈದಾನಗಳು ನಿರ್ಮಾಣಗೊಳ್ಳಲಿವೆ. ಎಷ್ಟೆಲ್ಲಾ ವಿದ್ಯಾರ್ಥಿ ಮತ್ತು ಸಿಬ್ಬಂದಿಗೆ ಅಗತ್ಯವಿರುವ ನೀರಿಗಾಗಿ ಮಳೆಕೊಯ್ಲು ಮಾಡುವ ಯೋಜನೆ ಇದೆ. ಅದಕ್ಕಾಗಿ ಬೆಟ್ಟಗಳ ಮೇಲೆ ಕೆರೆಗಳನ್ನು ನಿರ್ಮಿಸುವ ಯೋಜನೆ ಈಗಾಗಲೇ ಸಿದ್ಧವಾಗಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಕಟ್ಟಡಗಳ ನಿರ್ಮಾಣಕ್ಕಾಗಿ 530 ಮರಗಳನ್ನು ಕಡಿಯಲು ಈ ಫೌಂಡೇಷನ್ ಸಿದ್ಧತೆ ನಡೆಸಿದ್ದು, ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದೆ. ಇದೆಲ್ಲವನ್ನು ಗಮನಿಸಿರುವ ಸ್ಥಳೀಯರು ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಸದ್ಯ ಕಾಫಿ ಎಸ್ಟೇಟ್ ಆಗಿರುವ ಇದು ಬಹುತೇಕ ಬಂಡೆಗಳಿಂದ ಕೂಡಿದ್ದು, ಕಾಮಗಾರಿಗಳನ್ನು ನಡೆಸಲು ಬಂಡೆಗಳನ್ನು ಸೀಳುವ ಸಾಧ್ಯತೆ ಇದೆ. ಒಂದು ವೇಳೆ ಹಾಗೇ ಮಾಡಿದರೆ ಎತ್ತರವಾಗಿರುವ ಈ ಬೆಟ್ಟದಲ್ಲಿ ಭೂಕುಸಿತವಾಗೋದು ಖಚಿತ ಅನ್ನೋದು ಸ್ಥಳೀಯರ ಆರೋಪ. 50 ಡಿಗ್ರಿಯಷ್ಟ್ರು ಕಡಿದಾದ ಬೆಟ್ಟ ಇದಾಗಿದ್ದು, ಮರಗಳನ್ನು ಕಡಿದಲ್ಲಿ ಮತ್ತು ಕೆರೆಗಳನ್ನು ನಿರ್ಮಿಸಿದಲ್ಲಿ ಭೂಕುಸಿತವಾಗೋದು ಖಚಿತ ಎನ್ನೋ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.

    ತಲಕಾವೇರಿಯ ಗಜಗಿರಿ ಬೆಟ್ಟದಲಲೂ ಇಂಗು ಗುಂಡಿಗಳನ್ನು ತೆಗೆದು ದೊಡ್ಡ ಅನಾಹುತಕ್ಕೆ ಕಾರಣವಾಯಿತು. ಇಲ್ಲಿಯೂ ಮರಗಳನ್ನು ಕಡಿದು, ನಾಲ್ಕೈದು ಕೆರೆಗಳನ್ನು ನಿರ್ಮಿಸಿದರೆ ಅಂತಹದ್ದೇ ಅನಾಹುತ ಸಂಭವಿಸುತ್ತದೆ. ಈ ಬೆಟ್ಟದ ತಪ್ಪಲಿನ ಸುತ್ತಲೂ ನೂರಾರು ಕುಟುಂಬಗಳು ತಲತಲಾಂತರಗಳಿಂದ ಜೀವನ ನಡೆಸುತ್ತಿವೆ. ಇದೀಗ ಅಂತರಾಷ್ಟ್ರೀಯ ಮಟ್ಟದ ಪರಿಸರ ಶಾಲೆಯನ್ನು ಮಾಡುವುದಕ್ಕೆ ಇಲ್ಲಿನ ಪರಿಸರ ಹಾಳು ಮಾಡುವುದು ಸರಿಯೇ ಎನ್ನೋದು ಸ್ಥಳೀಯರ ಪ್ರಶ್ನೆ. ಈಗಾಗಲೇ ಜಿಲ್ಲಾಡಳಿತ 20 ಸೆಂಟ್ ಜಾಗವನ್ನು ಕಟ್ಟಡ ನಿರ್ಮಾಣದ ಉದ್ದೇಶಕ್ಕೆ ಭೂಪರಿವರ್ತನೆ ಮಾಡಿಕೊಟ್ಟಿದೆ. ಆದರೆ ಮೊಬೀಯಸ್ ಫೌಂಡೇಷನ್ 30 ಎಕರೆ ಭೂ ಪರಿವರ್ತನೆಗೆ ಅವಕಾಶ ಕೋರಿ ಮನವಿ ಸಲ್ಲಿಸಿದೆ. ಅಲ್ಲದೆ ನಾವು ಮಳೆ ನೀರು ಕೊಯ್ಲು, ಕಟ್ಟಡ ನಿರ್ಮಾಣ ಮತ್ತು ಆಟದ ಮೈದಾನಗಳನ್ನು ವೈಜ್ಞಾನಿಕವಾಗಿ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಕೆಲವರು ತಮ್ಮ ವೈಯಕ್ತಿಕ ಉದ್ದೇಶಕ್ಕಾಗಿ ಶಾಲೆ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎನ್ನೋದು ಉದ್ದೇಶಿತ ಶಾಲೆಯ ಸಲಹೆಗಾರ ಮಧು ಬೋಪಣ್ಣ ಅವರ ಆರೋಪ.

  • ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕಾಗಿ ಬೃಹತ್ ಮರಗಳಿಗೆ ಕೊಡಲಿ ಏಟು

    ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕಾಗಿ ಬೃಹತ್ ಮರಗಳಿಗೆ ಕೊಡಲಿ ಏಟು

    – ಸ್ಥಳಾವಕಾಶವಿದ್ದರೂ ಮರಗಳ ಕಡಿದರು

    ಬೆಳಗಾವಿ/ಚಿಕ್ಕೋಡಿ: ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಎರಡು ಬೃಹತ್ ಮರಗಳಿಗೆ ಅರಣ್ಯ ಇಲಾಖೆ ಕೊಡಲಿ ಏಟು ಹಾಕಿರುವ ಘಟನೆ ಜಿಲ್ಲೆಯ ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

    ಒಂದು ಕಡೆ ಉಸಿರಾಟಕ್ಕೆ ಜನರು ಆಕ್ಸಿಜನ್ ಸಿಲಿಂಡರ್ ಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದು ಕಡೆ ಇದ್ದ ಎರಡು ಬೃಹತ್ ಮರಗಳನ್ನು ಅರಣ್ಯ ಇಲಾಖೆ ಕತ್ತರಿಸಿದ್ದಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಅಥಣಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಾಕಷ್ಟು ಸ್ಥಳವಾಕಾಶ ಇದ್ದರೂ ಆಸ್ಪತ್ರೆ ವೈದ್ಯಾಧಿಕಾರಿಗಳ ಸಮನ್ವಯದ ಕೊರತೆಯಿಂದ ಎರಡು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ.

    ಒಟ್ಟು 390 ಲೀಟರ್ ನಷ್ಟು ಆಕ್ಸಿಜನ್ ಸಾಮರ್ಥ್ಯದ ಪ್ಲಾಂಟ್ ನಿರ್ಮಾಣಕ್ಕಾಗಿ ಮರಗಳ ಮಾರಣ ಹೋಮ ತಡೆದಿದೆ. ಅರಣ್ಯ ಇಲಾಖೆಯ ಸಿಬ್ಬಂದಿಯೇ ಮುಂದೆ ನಿಂತು ಮರಗಳನ್ನು ಕಡಿದು ಹಾಕಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

  • ಆಶ್ಲೇಷ ಮಳೆಗೆ ಹೈರಾಣಾದ ಮಲೆನಾಡು- 500ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

    ಆಶ್ಲೇಷ ಮಳೆಗೆ ಹೈರಾಣಾದ ಮಲೆನಾಡು- 500ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

    ಚಿಕ್ಕಮಗಳೂರು: ಮಲೆನಾಡು ಕಳೆದೊಂದು ವಾರದಿಂದ ಅಕ್ಷರಶಃ ಮಳೆ ನಾಡಾಗಿದೆ. ಇದರಿಂದ ಜಿಲ್ಲಾದ್ಯಂತ 120ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿದರೆ, ಎರಡು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಜೊತೆಗೆ ಮಲೆನಾಡು ಭಾಗದಲ್ಲಿ 500ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಇಂದಿಗೂ ಮಲೆನಾಡ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ.

    ಕಳೆದೊಂದು ವಾರದಿಂದ ಜಿಲ್ಲಾದ್ಯಂತ ಸುಮಾರು 500ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮಲೆನಾಡಿನ ನೂರಾರು ಗ್ರಾಮಗಳು ಕಗ್ಗತ್ತಲಲ್ಲಿ ಬದುಕುವಂತಾಗಿದೆ. ರಸ್ತೆಯಲ್ಲಿ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆ ತುಂಬಾ ಹರಡಿಕೊಂಡಿವೆ. ಕೆಇಬಿಯವರು ಇಂದಿಗೂ ದುರಸ್ಥಿ ಮಾಡಲು ಸಾಧ್ಯವಾಗಿಲ್ಲ.

    ಕೆಲ ಗ್ರಾಮಗಳು ಇಂದಿಗೂ ಕಗ್ಗತ್ತಲಲ್ಲಿ ಬದುಕುತ್ತಿವೆ. ಯುಪಿಎಸ್ ಇರುವಂತ ಮನೆಯವರು ಕೂಡ ಕರೆಂಟ್ ಕಾಣದೆ ನಾಲ್ಕು ದಿನ ಕಳೆದಿದೆ. ಈಗ ಆನ್‍ಲೈನ್ ಶಿಕ್ಷಣ ಆರಂಭವಾಗಿದೆ. ಮಲೆನಾಡಿನ ಮಕ್ಕಳು ವಿದ್ಯುತ್ ಇಲ್ಲದೆ, ಮೊಬೈಲ್ ಚಾರ್ಜ್ ಇಲ್ಲದೆ ಸೂಕ್ತ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಯುಪಿಎಸ್ ಇದ್ದವರು ಕೇವಲ ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಯುಪಿಎಸ್‍ಗಳನ್ನ ಬಳಸುತ್ತಿದ್ದಾರೆ. ಇದು ಮಲೆನಾಡ ಸದ್ಯದ ದುಸ್ಥಿತಿಯಾಗಿದೆ.

    ಸರ್ಕಾರ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಒಂದು ವಾರಗಳ ಕಾಲ ನಿರಂತರವಾಗಿ ಸುರಿದ ಮಳೆ ಮಲೆನಾಡಿಗರ ಜನಜೀವನವನ್ನ ಅಸ್ತವ್ಯಸ್ತ ಮಾಡಿದೆ.

  • ತುಮಕೂರಿನಲ್ಲಿ ಮರಗಳ ಹನನ- ಪಿಐಎಲ್ ಸಲ್ಲಿಸಲು ನಿರ್ಧಾರ

    ತುಮಕೂರಿನಲ್ಲಿ ಮರಗಳ ಹನನ- ಪಿಐಎಲ್ ಸಲ್ಲಿಸಲು ನಿರ್ಧಾರ

    ಚಿಕ್ಕಮಗಳೂರು: ತುಮಕೂರಿನಲ್ಲಿ ತೆಂಗು- ಅಡಿಕೆ ಮರಗಳ ಹನನ ಪ್ರಕರಣದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಲ್ಲಿ ಪಿಐಎಲ್ ಸಲ್ಲಿಸಲು ರಾಜ್ಯ ಕಿಸಾನ್ ಕಾಂಗ್ರೆಸ್ ತೀರ್ಮಾನಿಸಿದೆ.

    ಮಾ.18ರಂದು ವಕೀಲ ಗೋಪಾಲ್ ಸಿಂಗ್ ಮೂಲಕ ಸುಪ್ರೀಂ ಕೋರ್ಟ್ ಅನುಮತಿ ಪಡೆದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಲ್ಲಿ ಪಿಐಎಲ್ ಸಲ್ಲಿಸಲು ರಾಜ್ಯ ಕಿಸಾನ್ ಕಾಂಗ್ರೆಸ್ ತೀರ್ಮಾನಿಸಿದೆ.

    ಯಾವುದೇ ನ್ಯಾಯಾಲಯ ಮರಗಳನ್ನು ಕಡಿದು ಹಾಕುವಂತೆ ನಿರ್ದೇಶನ ಮಾಡಿಲ್ಲ. ಈ ಮಧ್ಯೆಯೂ ಮಕ್ಕಳಂತೆ ಸಾಕಿದ ಮರಗಳನ್ನು ಕಡಿದ ಹಾಗೂ ಕಡಿಯಲು ಪರೋಕ್ಷವಾಗಿ ಕಾರಣರಾದ ವ್ಯಕ್ತಿಗಳ ಮೇಲೆ ದೂರು ದಾಖಲಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ತುಮಕೂರು ಜಿಲ್ಲಾಧಿಕಾರಿ, ಗುಬ್ಬಿ ತಹಸಿಲ್ದಾರ್, ಗ್ರಾಮ ಲೆಕ್ಕಿಗನ ವಿರುದ್ಧ ದೂರು ದಾಖಲು ಮಾಡಲು ಕಾಂಗ್ರೆಸ್ ಕಿಸಾನ್ ಘಟಕ ನಿರ್ಧರಿಸಿದೆ. ನೊಂದ ರೈತರಿಗೆ ನ್ಯಾಯ ಒದಗಿಸಲು ಕಿಸಾನ್ ಕಾಂಗ್ರೆಸ್ ಬದ್ಧವಾಗಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಹೇಳಿದ್ದಾರೆ.

    ಸುಮಾರು 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟವನ್ನು ಏಕಾಏಕಿ ಉರುಳಿಸಿ ತಹಶೀಲ್ದಾರ್ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಹಶೀಲ್ದಾರ್ ಮಮತಾ ಅವರ ಮೇಲೆ ಆರೋಪ ಕೇಳಿ ಬಂದಿದ್ದು, ತಾಲೂಕಿನ ತಿಪ್ಪೂರು ಗ್ರಾಮದ ಸಣ್ಣಕೆಂಪಯ್ಯ ಮತ್ತು ಸಿದ್ದಮ್ಮ ಅವರ ತೋಟವನ್ನು ನಾಶ ಮಾಡಲಾಗಿದೆ. ಉಡುಸಲಮ್ಮ ದೇವಸ್ಥಾನದಿಂದ ಕೊಡುಗೆಯಾಗಿ 5.18 ಎಕರೆ ಜಮೀನನ್ನು ಈ ಕುಟುಂಬಕ್ಕೆ ನೀಡಲಾಗಿದೆ. ಕಳೆದ 30 ವರ್ಷಗಳಿಂದಲೂ ತೆಂಗು, ಅಡಿಕೆ, ಬಾಳೆ ಬೆಳೆದುಕೊಂಡು ಬಂದಿದ್ದಾರೆ. ಈ ನಡುವೆ ಉಡುಸಲಮ್ಮ ದೇವರ ಜಾತ್ರೆಗೆ ಜಾಗ ಸಾಕಾಗುವುದಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಶಿಲ್ದಾರ್ ಮಮತಾ ಅವರು ತೋಟವನ್ನು ಉರುಳಿಸಲು ಆದೇಶ ಕೊಟ್ಟಿದ್ದಾರೆ ಎನ್ನಲಾಗಿದೆ.

    ಅದರಂತೆ ಗ್ರಾಮ ಲೆಕ್ಕಿಗ ಮುರುಳಿ ಯಾವುದೇ ನೋಟಿಸ್ ನೀಡದೇ ಏಕಾಏಕಿ ತೋಟಕ್ಕೆ ನುಗ್ಗಿ ಫಸಲಿಗೆ ಬಂದಿದ್ದ 300 ಅಡಿಕೆ, 30 ತೆಂಗು ಮತ್ತು ಬಾಳೆ ಗಿಡಗಳನ್ನು ಉರುಳಿಸಿದ್ದಾರೆ. ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮ ಕುಟುಂಬ ಉಡುಸಲಮ್ಮ ದೇವಸ್ಥಾನದ ಅರ್ಚಕರಾಗಿದ್ದಾರೆ. ಹೀಗಾಗಿ ಈ ಕುಟುಂಬಕ್ಕೆ ದೇವಸ್ಥಾನದಿಂದಲೇ ಜಮೀನು ಕೊಡುಗೆಯಾಗಿ ಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಜಮೀನು ಪೂರ್ಣ ಸ್ವಾಧೀನ ಕೋರಿ ಜಿಲ್ಲಾ ನ್ಯಾಯಾಲಯದಲ್ಲಿ ಮುನಿ ಕೆಂಪಯ್ಯ ಕುಟುಂಬ ಅರ್ಜಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು ಏಕಾಏಕಿ ಗಿಡಗಳನ್ನು ನಾಶ ಮಾಡಿದ್ದಾರೆ.

    ಗುಬ್ಬಿ ಪೊಲೀಸರ ಸಮುಖದಲ್ಲೇ ಗ್ರಾಮ ಲೆಕ್ಕಿಗ ಮುರುಳಿ ಮರಗಳನ್ನು ಕಡಿದಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಕುಟುಂಬ ದುಃಖದ ಮಡುವಿನಲ್ಲಿದೆ. ಮುನಿ ಕೆಂಪಯ್ಯ ಕುಟುಂಬದ ಆಕ್ರಂದನದ ವಿಡಿಯೋ ವೈರಲ್ ಆಗಿದೆ.

  • ರೈತ ಮಹಿಳೆಯ ಮರ ಕಡಿಯಲು ನಾನು ಅನುಮತಿ ನೀಡಿಲ್ಲ: ತಹಶೀಲ್ದಾರ ಮಮತಾ

    ರೈತ ಮಹಿಳೆಯ ಮರ ಕಡಿಯಲು ನಾನು ಅನುಮತಿ ನೀಡಿಲ್ಲ: ತಹಶೀಲ್ದಾರ ಮಮತಾ

    – ನಮ್ಮ ಸಿಬ್ಬಂದಿ ಮರ ಕಡಿದಿದ್ದು ತಪ್ಪು

    ತುಮಕೂರು: ರೈತ ಮಹಿಳೆಯ ಮರ ಕಡಿಯಲು ನಾನು ಅನುಮತಿ ನೀಡಿಲ್ಲ. ಆದರೂ ನಮ್ಮ ಸಿಬ್ಬಂದಿ ಮರ ಕಡಿದು ತಪ್ಪು ಮಾಡಿದ್ದಾರೆ ಎಂದು ಗುಬ್ಬಿ ತಾಲೂಕಿನ ತಹಶೀಲ್ದಾರ್ ಮಮತಾ ಹೇಳಿದ್ದಾರೆ.

    ತಾಲೂಕಿನ ತಿಪ್ಪೂರು ಗ್ರಾಮದ ಸಣ್ಣಕೆಂಪಯ್ಯ ಮತ್ತು ಸಿದ್ದಮ್ಮ ಅವರಿಗೆ ಉಡುಸಲಮ್ಮ ದೇವಸ್ಥಾನದಿಂದ ಕೊಡುಗೆಯಾಗಿ 5.18 ಎಕರೆ ಜಮೀನು ನೀಡಲಾಗಿತ್ತು. ಆದರೆ ಜಾತ್ರೆಗೆ ಜಾಗ ಬೇಕು ಎಂದು ಈ ಜಮೀನಿನಲ್ಲಿ ಬೆಳದಿದ್ದ ಅಡಕೆ, ತೆಂಗು ಮತ್ತು ಬಾಳೆಯನ್ನು ಕಡಿದು ಹಾಕಲಾಗಿತ್ತು. ಇದನ್ನು ಮಮತಾ ಅವರ ಆದೇಶ ಮೇರೆಗೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

    ಈಗ ಈ ಆರೋಪವನ್ನು ತಳ್ಳಿ ಹಾಕಿರುವ ಮಮತಾ, ನಾನು ರೈತ ಮಹಿಳೆ ಸಿದ್ದಮ್ಮರ ಮರ ಕಡಿಯಲು ಅನುಮತಿ ನೀಡಿರಲಿಲ್ಲ. ಆದರೂ ನಮ್ಮ ಸಿಬ್ಬಂದಿ ಮರ ಕಡಿದು ತಪ್ಪು ಮಾಡಿದ್ದಾರೆ. ಗ್ರಾಮ ಲೆಕ್ಕಿಗ ಮುರುಳಿ ಸೇರಿದಂತೆ ಇತರ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಪ್ಪಿಗೆ ಕೊಟ್ಟ ಅರ್ಚಕರ ಮರವನ್ನು ಮಾತ್ರ ತೆರುಗೊಳಿಸಲು ಆದೇಶಿಸಲಾಗಿತ್ತು. ಆದರೆ ನಮ್ಮ ಸಿಬ್ಬಂದಿ ಅಲ್ಲಿಗೆ ಹೋದಾಗ ಅನುಮತಿ ಇಲ್ಲದಿದ್ದರು ಈ ಕೆಲಸ ಮಾಡಿದ್ದಾರೆ ಎಂದು ಮಮತಾ ಅವರು ತಿಳಿಸಿದ್ದಾರೆ.

    ಉಡುಸಲಮ್ಮ ದೇವರ ಜಾತ್ರೆಗೆ ಜಾಗ ಸಾಕಾಗುವುದಿಲ್ಲ ಎಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ತಹಶೀಲ್ದಾರ್ ಮಮತಾ ಅವರು ತೋಟವನ್ನು ಉರುಳಿಸಲು ಆದೇಶ ಕೊಟ್ಟಿದ್ದಾರೆ ಎನ್ನಲಾಗಿತ್ತು. ಅದರಂತೆ ಗ್ರಾಮ ಲೆಕ್ಕಿಗ ಮುರುಳಿ ಯಾವುದೇ ನೋಟಿಸ್ ನೀಡದೇ ಏಕಾಏಕಿ ತೋಟಕ್ಕೆ ನುಗ್ಗಿ ಫಸಲಿಗೆ ಬಂದಿದ್ದ 300 ಅಡಿಕೆ, 30 ತೆಂಗು ಮತ್ತು ಬಾಳೆ ಗಿಡಗಳನ್ನು ಉರುಳಿಸಿದ್ದರು. ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮ ಕುಟುಂಬ ಉಡುಸಲಮ್ಮ ದೇವಸ್ಥಾನದ ಅರ್ಚಕರಾಗಿದ್ದಾರೆ. ಹೀಗಾಗಿ ಈ ಕುಟುಂಬಕ್ಕೆ ದೇವಸ್ಥಾನದಿಂದಲೇ ಜಮೀನು ಕೊಡುಗೆಯಾಗಿ ಕೊಟ್ಟಿದ್ದರು. ಅಲ್ಲದೆ ಜಮೀನು ಪೂರ್ಣ ಸ್ವಾಧೀನ ಕೋರಿ ಜಿಲ್ಲಾ ನ್ಯಾಯಾಲಯದಲ್ಲಿ ಮುನಿ ಕೆಂಪಯ್ಯ ಕುಟುಂಬ ಅರ್ಜಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು ಏಕಾಏಕಿ ಗಿಡಗಳನ್ನು ನಾಶ ಮಾಡಿದ್ದಾರೆ.

    ಈ ನಡುವೆ ಸಣ್ಣ ಕೆಂಪಯ್ಯ ಮತ್ತು ಸಿದ್ದಮ್ಮರ ಮಧ್ಯೆಯೇ ಜಮೀನು ಹಂಚಿಕೆಯಲ್ಲಿ ವಿವಾದ ಉಂಟಾಗಿತ್ತು. ಇದರ ಲಾಭ ಪಡೆದುಕೊಂಡ ತಾಲೂಕು ಆಡಳಿತ ಏಕಾಏಕಿ ತೋಟವನ್ನು ಉರುಳಿಸಿದೆ. ಗುಬ್ಬಿ ಪೊಲೀಸರ ಸಮುಖದಲ್ಲೇ ಗ್ರಾಮ ಲೆಕ್ಕಿಗ ಮುರುಳಿ ಮರಗಳನ್ನು ಕಡಿದಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಕುಟುಂಬ ದುಃಖದ ಮಡುವಿನಲ್ಲಿದೆ.

  • ಅಮಿತ್ ಶಾ ಕಾರ್ಯಕ್ರಮಕ್ಕೆ ಮರಗಳ ಮಾರಣಹೋಮ!

    ಅಮಿತ್ ಶಾ ಕಾರ್ಯಕ್ರಮಕ್ಕೆ ಮರಗಳ ಮಾರಣಹೋಮ!

    ಹುಬ್ಬಳ್ಳಿ: ಜನವರಿ 18ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಸಮಾವೇಶಕ್ಕೆ ಹತ್ತಾರು ಮರಗಳನ್ನ ಕಡಿದು ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಹತ್ತಾರು ಮರಗಳ ಟೊಂಗೆ ಕಡಿಯಬೇಕಾದ ಪಾಲಿಕೆ ಸಿಬ್ಬಂದಿ ಮರಗಳನ್ನ ಕಡಿದು ಹಾಕಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಗೃಹ ಸಚಿವ ಅಮಿತ್ ಶಾ ಅವರಿಗೆ ಭದ್ರತೆ ನೀಡುವ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ರಕ್ಷಣೆಗೆ ತೊಡಕಾಗುತ್ತದೆ ಎಂದು ನೆಹರು ಮೈದಾನದಕ್ಕೆ ಹೊಂದಿಕೊಂಡಿರುವ ಕೊಪ್ಪಿಕರ ರಸ್ತೆಯ ಬಳಿಯ ಗಿಡಮರಗಳ ಟೊಂಗೆ ಕಡಿಯಲು ಪಾಲಿಕೆಗೆ ಸೂಚಿಸಿದ್ದರು. ಆದರೆ ಪಾಲಿಕೆ ಸಿಬ್ಬಂದಿ ಟೊಂಗೆಗಳನ್ನ ಕಡಿಯದೆ ಮರಗಳನ್ನೇ ನೆಲಕ್ಕೆ ಉರುಳಿಸಿದ್ದಾರೆ.

    ಮರ ಕಡಿದಿದ್ದಕ್ಕೆ ಸಚಿವರು ಗರಂ:
    ಅಮಿತ್ ಶಾ ಕಾರ್ಯಕ್ರಮದ ಭದ್ರತೆಗಾಗಿ ಮರಗಳನ್ನ ಕಡಿದು ಹಾಕಿರುವ ವಿಚಾರ ತಿಳಿಯುತ್ತಿದ್ದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿಟ್ಟಾಗಿ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡಿದ್ದಾರೆ. ಮರಗಳನ್ನ ಕಡಿದಿದ್ದು ಯಾರು? ಅವರಿಗೆ ಸೂಚನೆ ಕೊಟ್ಟವರು ಯಾರು? ಎಂದು ಪ್ರಲ್ಹಾದ ಜೋಶಿ ಪಾಲಿಕೆ ಆಯುಕ್ತರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮರಗಳನ್ನ ಕಡಿದಿರುವ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಲ್ಹಾದ್ ಜೋಶಿ ಸೂಚನೆ ನೀಡಿದ್ದಾರೆ.

  • ಕುರುಮರಡಿಕೆರೆ ಅರಣ್ಯಕ್ಕೆ ಬೆಂಕಿ – ಹೊತ್ತಿ ಉರಿದ ನೂರಾರು ಎಕರೆ ಅರಣ್ಯ

    ಕುರುಮರಡಿಕೆರೆ ಅರಣ್ಯಕ್ಕೆ ಬೆಂಕಿ – ಹೊತ್ತಿ ಉರಿದ ನೂರಾರು ಎಕರೆ ಅರಣ್ಯ

    ಚಿತ್ರದುರ್ಗ: ಜಿಲ್ಲೆಯ ಕುರುಮರಡಿಕೆರೆ ಗ್ರಾಮ ಬಳಿ ಬೆಂಕಿ ಬಿದ್ದಿದೆ. ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.

    ಶುಕ್ರವಾರ ರಾತ್ರಿ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಪ್ರದೇಶದ ನೂರಾರು ಮರಗಳು ಬೆಂಕಿಗಾಹುತಿ ಆಗಿವೆ.

    2 ದಿನದ ಹಿಂದಷ್ಡೇ ಹೊರಕೆರೆ ದೇವರಪುರ ಬಳಿ ಅರಣ್ಯಕ್ಕೆ ಬೆಂಕಿ ಬಿದ್ದಿತ್ತು. ಇದರಿಂದ ಅರಣ್ಯದಲ್ಲಿದ್ದ 300 ಕುರಿಗಳು ಸಜೀವ ದಹನ ಆಗಿದ್ದವು. ಈ ಕುರಿಗಳೆಲ್ಲ ಹೊಸದುರ್ಗ ತಾಲೂಕಿನ ಅಮೃತಾಪುರ ಗ್ರಾಮದ ತಿಮ್ಮಪ್ಪ ಎಂಬವರಿಗೆ ಸೇರಿದ್ದಾಗಿವೆ. ಒಂದು ಸಾವಿರ ಕುರಿಗಳನ್ನು ಮೇಯಿಸಲು ಹೊರಕೆರೆದೇವರಪುರ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಗಿಡಗಳಿಗೆ ಹತ್ತಿದ ಬೆಂಕಿಯಿಂದಾಗಿ 300 ಕುರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಉಳಿದ 700 ಕುರಿಗಳು ಪ್ರಾಣಾಪಾಯದಿಂದ ಪಾರಾಗಿದ್ದವು.

    ಇದೀಗ ಮತ್ತೆ ಬೆಂಕಿ ಬಿದ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.