Tag: Trees

  • ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು

    ಪಬ್ಲಿಕ್ ಇಂಪ್ಯಾಕ್ಟ್- 890 ಮರಗಳ ಮಾರಣ ಹೋಮಕ್ಕೆ ಕಾರಣವಾದ ಡಿಸಿಎಫ್ ಅಮಾನತು

    ಮಡಿಕೇರಿ: 890 ಮರಗಳ ಮಾರಣ ಹೋಮಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಉಪಾವಲಯ ಸಂರಕ್ಷಣಧಿಕಾರಿ ಮಂಜುನಾಥ್ ಅವರು ಕರ್ತವ್ಯ ಲೋಪವೆಸೆಗಿದ್ದಾರೆಂದು ಎಂದು ಪರಿಗಣಿಸಿ ಅಮಾನತು ಮಾಡಲಾಗಿದೆ.

    ಮಡಿಕೇರಿ ನಗರದ ಹೊರಭಾಗದಲ್ಲಿರೋ ಕೆ.ನಿಡುಗಡೆ ಗ್ರಾಮದ 68 ಏಕರೆ ಜಾಗದ ಪೈಕಿ 30 ಏಕರೆಯಲ್ಲಿದ್ದ 890 ಮರಗಳ ಮಾರಣ ಹೋಮ ನಡೆದಿದೆ. ಇದಕ್ಕೆ ಖುದ್ದು ಅರಣ್ಯ ಇಲಾಖೆಯೇ ಅನುಮತಿ ಕೊಟ್ಟಿದೆ. ಈ ಸಂಬಂಧ ಪಬ್ಲಿಕ್ ಟಿವಿ ಜೂನ್ 6ರಿಂದು ನಿರಂತರವಾಗಿ ಸುದ್ದಿ ಪ್ರಸಾರ ಮಾಡಲಾಗಿತ್ತು. ವರದಿಯಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೊಡಗು ಡಿಸಿಎಫ್ ಮಂಜುನಾಥ್ ಅವರನ್ನು ಅಮಾನತು ಮಾಡಿದ್ದಾರೆ. ಅಲ್ಲದೆ ಮಂಜುನಾಥ್ ಅವರು ಜಾಗಕ್ಕೆ ಮಾರಿಯ ಕ್ರಿಸ್ಟು ರಾಜ ಅವರನ್ನು ಕೊಡಗಿನ ನೂತನ ಡಿಸಿಎಫ್ ಆಗಿ ಅರಣ್ಯ ಇಲಾಖೆ ನೇಮಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಕೊಡಗು ಜಿಲ್ಲೆಯಲ್ಲಿ 800 ಮರಗಳನ್ನು ಕಡಿಯುವ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ವರದಿಯನ್ನು ನೀಡುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದರು. ಇದೇ ಬೆನ್ನಲ್ಲಿ ಈಗ ಅರಣ್ಯ ಇಲಾಖೆ ಮಡಿಕೇರಿ ಉಪಾವಲಯ ಸಂರಕ್ಷಣಾಧಿಕಾರಿಯನ್ನು ಅಮಾನತು ಮಾಡಿದೆ.

    ಏನಿದು ಪ್ರಕರಣ?
    ಆಂಧ್ರ ಮೂಲದ ಉದ್ಯಮಿಯೊಬ್ಬರಿಗೆ ರೆಸಾರ್ಟ್ ನಿರ್ಮಾಣ ಮಾಡಲು ಬರೋಬ್ಬರಿ 800 ಮರಗಳನ್ನು ಕಡಿಯುವುದಕ್ಕೆ ಸ್ವತಃ ಅರಣ್ಯ ಇಲಾಖೆ ಒಪ್ಪಿಗೆ ನೀಡಿತ್ತು. ಮಡಿಕೇರಿ ತಾಲೂಕಿನ ಕೆ ನಿಡುಗಣೆಯಲ್ಲಿ ಆಂಧ್ರ ಮೂಲದ ರೆಡ್ಡಿ ಎಂಬವರು 68 ಏಕರೆ ಜಾಗ ಖರೀದಿಸಿದ್ದರು.

    ಬೃಹತ್ ಮರ, ಬೆಟ್ಟ ಗುಡ್ಡಗಳಿಂದ ಈ ಜಾಗದಲ್ಲಿ 30 ಎಕರೆಯನ್ನು ಅಭಿವೃದ್ಧಿಪಡಿಸಿ ಹೌಸಿಂಗ್ ಬೊರ್ಡ್ ಗೆ ಕೊಡುತ್ತೇವೆ. ಆ 30 ಎಕರೆಯಲ್ಲಿರುವ ಮರಗಳನ್ನು ಕಡಿಯಲು ಅನುಮತಿ ಕೊಡಿ ಎಂದು ಜಾಗದ ಮಾಲೀಕ ಅನುಮತಿ ಕೇಳಿದ್ದರು. ಈ ಪ್ರಸ್ತಾಪಕ್ಕೆ ಅನುಮತಿ ನೀಡಿದ ಕೊಡಗು ಜಿಲ್ಲಾಡಳಿತ ಕನ್ವರ್ಷನ್‍ಗೆ ಅವಕಾಶ ಕೊಟ್ಟಿತ್ತು.

  • ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಉಪನಯನದಲ್ಲಿ ಸಿಹಿ ಬದಲಾಗಿ ಬೀಜದುಂಡೆ ನೀಡಿ ಪರಿಸರ ಕಾಳಜಿ ಮೆರೆದ ಕುಟುಂಬ

    ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ .

    ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು ಮೆಚ್ಚಿಸುವಂತೆ ಮಾಡಿತ್ತು. ಅಲ್ಲಿ ವಿತರಿಸಿದ್ದು ಯಾವುದೇ ಸಿಹಿಯಾದ ಉಂಡೆಯಾಗಿರದೇ ಪ್ಯಾಕ್ ಮಾಡಿದ ಬೀಜದುಂಡೆಯಾಗಿತ್ತು. ವೀಣಾ ಹಾಗೂ ರಾಮಚಂದ್ರ ವೈದ್ಯ ದಂಪತಿಗಳ ಪುತ್ರನಾದ ಆದಿತ್ಯ (ಜಯಶೀಲ)ನ ಉಪನಯನವನ್ನು ತಾಲೂಕಿನ ಚಂದಗುಳಿ ಗಂಟೆ ಗಣಪತಿ ದೇವಾಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ನಮ್ಮ ಮಗನ ಉಪನಯನ ವಿಭಿನ್ನವಾಗಿರಬೇಕು ಮತ್ತು ಈ ಶುಭಕಾರ್ಯದ ಸವಿನೆನಪು ಚಿರಸ್ಥಾಯಿಯಾಗಿರಬೇಕು ಎನ್ನುವ ಉದ್ದೇಶದಿಂದ ಈ ದಂಪತಿ ಆಯ್ಕೆ ಮಾಡಿಕೊಂಡಿದ್ದು ಪರಿಸರ ಜಾಗೃತಿ. ಮಗನ ಉಪನಯನದ ಹೆಸರಿನಲ್ಲಿ ನೂರಾರು ಗಿಡಗಳು ಅಲ್ಲಲ್ಲಿ ಬೆಳೆದು ನಿಲ್ಲಲಿ, ಈ ಮೂಲಕ ಹಸಿರು ಪರಿಸರ ಹೆಚ್ಚಾಗಲಿ ಎಂಬ ಉದ್ದೇಶದಿಂದ ಬೀಜದುಂಡೆಗಳನ್ನು ತಯಾರಿಸಿ, ಬಂದಂತಹ ಅತಿಥಿಗಳಿಗೆ ಆದಿತ್ಯನ ಆಧ್ಯಾತ್ಮಿಕ ಪಯಣಕ್ಕೆ ಸಾಕ್ಷಿಯಾಗಿ ಹರಸಿ. ಪ್ರೀತಿಯಿಂದ ನಾವು ನೀಡುವ ಜೀವಗಾಳು ಪಸರಿಸಿ ಎಂಬ ಸಂದೇಶದೊಂದಿಗೆ ವಿತರಿಸಿದ್ದಲ್ಲದೇ, ಇದನ್ನು ನಿಮ್ಮ ಮನೆಯ ಸುತ್ತಮುತ್ತಲಿನ ಖಾಲಿ ಪ್ರದೇಶದಲ್ಲಿ ಹಾಕುವುದರ ಮೂಲಕ ಹಸಿರು ಪರಿಸರ ಹೆಚ್ಚಾಗಲು ಕೈಜೋಡಿಸಿ ಎಂಬ ಮನವಿಯನ್ನೂ ಮಾಡಿಕೊಳ್ಳಲಾಯಿತು.

    ಈ ವಿಚಾರದ ಬಗ್ಗೆ ಮಾತನಾಡಿರುವ ಈ ಬೀಜದುಂಡೆ ವಿತರಣೆಯ ರೂವಾರಿ ಆದಿತ್ಯನ ಕುಟುಂಬದವರಾದ ವಾನಳ್ಳಿಯ ನಾಗವೇಣಿ ಹೆಗಡೆ, ಅತಿಥಿಗಳಿಗೆ ವಿತರಿಸಲು ಎರಡು ಜಾತಿಯ ಮರಗಳಾದ ನೇರಳೆ, ಹಲಸು ಮುಂತಾದ ಬೀಜಗಳುಳ್ಳ ಸುಮಾರು 1200 ಹೆಚ್ಚು ಬೀಜದುಂಡೆಗಳನ್ನು ತಯಾರಿಸಿ ವಿತರಿಸಿದ್ದೇವೆ. ಅವುಗಳಲ್ಲಿ ನೂರು ಗಿಡಗಳು ಹುಟ್ಟಿ, ಮರವಾಗಿ ಬೆಳೆದು ನಿಂತರೆ ಪರಿಸರಕ್ಕೊಂದು ಕೊಡುಗೆ ನೀಡಬೇಕೆಂದ ನಮ್ಮ ಅಭಿಲಾಶೆ ಎಂದು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಈ ರೀತಿ ಶುಭ ಕಾರ್ಯಗಳಲ್ಲಿ ಸಾಮಾಜಿಕ ಸಂದೇಶವನ್ನು, ಪರಿಸರ ಜಾಗೃತಿಯನ್ನು ಮೂಡಿಸುವಂತಾದರೆ ಶುಭ ಕಾರ್ಯ ಸಾಮಾಜಿಕ ಕಾರ್ಯವಾಗುವುದರಲ್ಲಿ ಸಂಶಯವಿಲ್ಲ.

  • ವಿಶ್ವಪರಿಸರ ದಿನದಂದೇ ಬೆಸ್ಕಾಂ ಸಿಬ್ಬಂದಿಯಿಂದ ಮರಗಳ ಮಾರಣಹೋಮ

    ವಿಶ್ವಪರಿಸರ ದಿನದಂದೇ ಬೆಸ್ಕಾಂ ಸಿಬ್ಬಂದಿಯಿಂದ ಮರಗಳ ಮಾರಣಹೋಮ

    ಕೋಲಾರ: ಇಂದು ವಿಶ್ವ ಪರಿಸರ ದಿನ. ಎಲ್ಲೆಡೆ ಗಿಡ-ಮರಗಳನ್ನ ನೆಟ್ಟು ಪರಿಸರ ದಿನಾಚರಣೆ ಆಚರಣೆ ಮಾಡುತ್ತಿದ್ದರೆ, ಕೋಲಾರದಲ್ಲಿ ಈ ದಿನದಂತೆ ಬೆಸ್ಕಾಂ ಅಧಿಕಾರಿಗಳು ಮರಗಳ ಮಾರಣ ಹೋಮ ಮಾಡಿರುವ ಘಟನೆ ನಡೆದಿದೆ.

    ಮುಳಬಾಗಿಲು ತಾಲೂಕಿನ ಮೇಲ್‍ತಾಯಲೂರಿನಿಂದ ತಾಯಲೂರಿಗೆ ಇರುವ ರಸ್ತೆ ಬದಿಯಲ್ಲಿರುವ ಮರಗಳನ್ನು ಬೆಸ್ಕಾಂ ಸಿಬ್ಬಂದಿ ನಿರ್ದಾಕ್ಷಣ್ಯವಾಗಿ ಕಡಿದು ಹಾಕಿದ್ದಾರೆ. ಸುಮಾರು ವರ್ಷಗಳಿಂದ ಅರಣ್ಯ ಇಲಾಖೆಯವರು ಬೆಳಸಿದ್ದ ಮರಗಳನ್ನು ವಿದ್ಯುತ್ ತಂತಿಗೆ ತಗುಲುತ್ತವೆ ಎನ್ನುವ ಒಂದೇ ಕಾರಣಕ್ಕೆ ಮರಗಳನ್ನು ಕಡಿದು ಹಾಕಿದ್ದಾರೆ. ರಸ್ತೆಯ ಎರಡೂ ಬದಿಯಲ್ಲಿ ಬೆಳೆಸಲಾಗಿದ್ದ ಸುಮಾರು 150ಕ್ಕೂ ಹೆಚ್ಚು ಮರಗಳನ್ನು ಈ ರೀತಿ ಕಡಿದು ಹಾಕಲಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಸ್ಕಾಂನವರು ಸಾಮಾನ್ಯವಾಗಿ ವಿದ್ಯುತ್ ತಂತಿಗಳಿಗೆ ತಾಗುವ ಮರದ ರೆಂಬೆಗಳನ್ನು ಮಾತ್ರ ಕತ್ತರಿಸುತ್ತಾರೆ. ಆದರೆ ಇಲ್ಲಿ ಮರಗಳನ್ನು ಬುಡ ಸಮೇತ ಕಡಿದು ಹಾಕಿರುವುದು ಪರಿಸರ ಪ್ರೇಮಿಗಳ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೆ ಈ ಬಗ್ಗೆ ಅರಣ್ಯ ಇಲಾಖೆಯವರು ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಪರಿಸರವಾದಿಗಳು ಮತ್ತು ಸ್ಥಳೀಯರು ಆಗ್ರಹಿಸಿದ್ದಾರೆ.

    ಪರಿಸರ ದಿನದ ಆಚರಣೆ:
    ಇತ್ತ ವಿಶ್ವ ಪರಿಸರ ದಿನದ ಅಂಗವಾಗಿ ಕೋಲಾರ ನಗರದ ವಿವಿಧೆಡೆ ಹಲವು ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನ ಆಚರಣೆ ಮಾಡಲಾಗಿದೆ. ಮೊದಲಿಗೆ ಎರಡನೇ ಅಪರ ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ರೇಖಾ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನಗರದ ಕೋರ್ಟ್ ಆವರಣದಲ್ಲಿ ಗಿಡಕ್ಕೆ ಪೂಜೆ ಮಾಡಿ, ಹತ್ತಾರು ಗಿಡಗಳನ್ನ ನೆಡುವ ಮೂಲಕ ಪರಿಸರ ಜಾಗೃತಿ ಹಾಗೂ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು.

    ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಗರದ ರೈಲ್ವೇ ನಿಲ್ದಾಣದ ಸಮೀಪ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಸಿಇಓ ಜಗದೀಶ್, ಎಸ್‍ಪಿ ರೋಹಿಣಿ ಕಟೋಜ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ನೂರಾರು ಗಿಡಗಳನ್ನ ನೆಡುವ ಮೂಲಕ ಪರಿಸರ ದಿನವನ್ನ ಆಚರಣೆ ಮಾಡಲಾಗಿದೆ. ಇದೆ ವೇಳೆ ನಗರದ ಹಲವೆಡೆ ವಿವಿಧ ಸಂಘಟನೆಗಳ ಮುಖಂಡರು ಗಿಡಗಳನ್ನ ನೆಟ್ಟು ನಗರ ವಾಸಿಗಳಲ್ಲಿ ಪರಿಸರ ಜಾಗೃತಿ ಮೂಡಿಸಿದರು.

  • 15 ಸಾವಿರ ಗಿಡಗಳನ್ನು ನೆಡುವಂತೆ 2ಜಿ ಹಗರಣ ಆರೋಪಿಗಳಿಗೆ ಶಿಕ್ಷೆ

    15 ಸಾವಿರ ಗಿಡಗಳನ್ನು ನೆಡುವಂತೆ 2ಜಿ ಹಗರಣ ಆರೋಪಿಗಳಿಗೆ ಶಿಕ್ಷೆ

    ನವದೆಹಲಿ: ಬಹುಕೋಟಿ 2ಜಿ ಹಗರಣದ ಆರೋಪಿಗಳಿಗೆ 15 ಸಾವಿರ ಗಿಡಗಳನ್ನು ನೆಡುವ ಹಸಿರು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಇಂದು ವಿಧಿಸಿದೆ.

    2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪವನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಲು ವಿಳಂಬ ನೀತಿ ಅನುಸರಿಸಿದ ಇಬ್ಬರು ಆರೋಪಿಗಳು ಮತ್ತು ಮೂರು ಕಂಪನಿಗಳಿಗೆ ತಲಾ 3 ಸಾವಿರ ಗಿಡಗಳನ್ನು ದಕ್ಷಿಣ ದೆಹಲಿಯ ಬೆಟ್ಟಗಳಲ್ಲಿ ನೆಡುವಂತೆ ಕೋರ್ಟ್ ಆದೇಶಿಸಿದೆ.

    ನ್ಯಾಯಮೂರ್ತಿ ನಜಿಮಿ ವಜಿರಿ ಅವರು ಇಂದು ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ. ಸ್ವಾನ್ ಟೆಲಿಕಾಂ ಪ್ರೈವೆಟ್ ಲಿಮಿಟೆಡ್‍ನ ಶಾಹಿದ್ ಬಲ್ವಾ, ಕುಸೆಗಾಂವ್ ಫ್ರೂಟ್ಸ್ ಮತ್ತು ವೆಜಿಟೆಬಲ್ಸ್ ಪ್ರೈವೆಟ್ ಲಿಮಿಟೆಡ್‍ನ ನಿರ್ದೇಶಕ ಅಗರ್ವಾಲ್, ಡೈನಾಮಿಕ್ ರಿಯಾಲ್ಟಿ, ಡಿಬಿ ರಿಯಾಲ್ಟಿ ಲಿಮಿಟೆಡ್ ಮತ್ತು ನಿಹಾರ್ ಕನ್ಸ್ ಸ್ಟ್ರಕ್ಷನ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಪ್ರತಿಕ್ರಿಯೆ ನೀಡಲು ಅಂತಿಮ ಅವಕಾಶ ನೀಡಿದ್ದಾರೆ.

    ಸಿಬಿಐ ವಿಶೇಷ ನ್ಯಾಯಾಲಯ 2017ರ ಡಿಸೆಂಬರ್ ನಲ್ಲಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿಗಳಾಗಿದ್ದ ದೂರಸಂಪರ್ಕ ಇಲಾಖೆಯ ಮಾಜಿ ಸಚಿವ ಎ.ರಾಜಾ, ಕನಿಮೋಲಿ ಸೇರಿ 16 ಮಂದಿಯನ್ನು ಖುಲಾಸೆಗೊಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಿನ ಪರಿಸರ ಪ್ರೇಮಿಗಳಿಗೆ ಶಾಕಿಂಗ್ ಸುದ್ದಿ – ಎಲಿವೇಟೆಡ್ ಕಾರಿಡಾರ್‌ಗೆ  ಸಾವಿರಾರು ಮರಗಳು ಬಲಿ?

    ಬೆಂಗ್ಳೂರಿನ ಪರಿಸರ ಪ್ರೇಮಿಗಳಿಗೆ ಶಾಕಿಂಗ್ ಸುದ್ದಿ – ಎಲಿವೇಟೆಡ್ ಕಾರಿಡಾರ್‌ಗೆ ಸಾವಿರಾರು ಮರಗಳು ಬಲಿ?

    ಬೆಂಗಳೂರು: ನಗರದ ಟ್ರಾಫಿಕ್ ಕಿರಿಕಿರಿ ತಪ್ಪಿಸಿಕೊಳ್ಳಲು ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿಕೊಳ್ಳುತ್ತಿದ್ದು ಇದಕ್ಕಾಗಿ ಮರಗಳ ಮಾರಣಹೋಮವಾಗುವ ಚಿಂತೆ ತಲೆದೂರಿದೆ.

    ಬೆಂಗಳೂರು ನಿತ್ಯ ಬೆಳೆಯುತ್ತಿದ್ದು, ಇದರ ಜೊತರೆ ಜೊತೆಗೆ ಟ್ರಾಫಿಕ್ ಕಿರಿಕಿರಿಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕಾಗಿ ನಗರದಲ್ಲಿ ಎಲಿವೆಟೆಡ್ ಕಾರಿಡಾರ್ ನಿರ್ಮಿಸಲು ಸರ್ಕಾರ ಚಿಂತಿಸಿದೆ. ಕರ್ನಾಟಕ ರೋಡ್ ಡೆವಲಪ್ಮೆಂಟ್ ಕಾರ್ಪೋರೆಷನ್ ಲಿಮಿಡೆಟ್ ವತಿಯಿಂದ 11 ಕಡೆ ಎಲಿವೆಟೆಡ್ ಕಾರಿಡಾರ್ ಮಾಡಲು ಚಿಂತಿಸಿದೆ. ಈ ಸಂಬಂಧ ಮರಗಳ ಕಡಿಯುವ, ಬೇರೆಡೆಗೆ ಸ್ಥಳಾಂತರಿಸುವ ಸಂಬಂಧ ವರದಿ ನೀಡುವಂತೆ ಅರಣ್ಯ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಈ ಪ್ರಕಾರ 3,700 ಮರಗಳ ಬಗ್ಗೆ ಪಾಲಿಕೆ ಅಧ್ಯಯನ ಶುರು ಮಾಡಿದೆ ಎಂದು ಬಿಬಿಎಂಪಿ ಉಪ ಅರಣ್ಯಾಧಿಕಾರಿ ಚೋಳರಾಜನ್ ತಿಳಿಸಿದ್ದಾರೆ.

    ಹೆಬ್ಬಾಳ, ಕಂಟೋಮ್ಮೆಟ್ ಸ್ಟೇಷನ್, ಆಡುಗೋಡಿ, ಸೆಂಟ್ ಜಾನ್ ಸರ್ಕಲ್, ಬೆಟ್ಟರಾಹಳ್ಳಿ, ಮೇಖ್ರಿ ಸರ್ಕಲ್, ವಿಠಲ್ ಮಲ್ಯ ರೋಡ್, ಮಿನರ್ವ ಸರ್ಕಲ್, ಹೆಚ್‍ಎಎಲ್ ರಸ್ತೆ ಮತ್ತು ಮಾರತಹಳ್ಳಿ ಜಂಕ್ಷನ್ ಬಳಿ ಸರ್ವೆ ನಡೆಯುತ್ತಿದೆ. ಈ ಬೆಳವಣಿಗೆ ಪರಿಸರ ಪ್ರೇಮಿಗಳಿಗೂ ಬೇಸರ ತಂದಿದೆ ಎಂದು ಪರಿಸರ ಪ್ರೇಮಿ ಅಮರೇಶ್ ಹೇಳಿದ್ದಾರೆ.

    ಒಂದು ಕಾಲದಲ್ಲಿ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿತ್ತು. ಆದರೆ ಈಗ ನಗರದಲ್ಲಿ ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಎಸಿಯಿಲ್ಲದೇ ಕಚೇರಿ ನಡೆಯೋದೇ ಇಲ್ಲ ಅನ್ನುವಂತಾಗಿದೆ. ಹಾಗಾಗಿ ಅಭಿವೃದ್ಧಿಯ ಜೊತೆಗೆ ಮರಗಳನ್ನು ಉಳಿಸುವ ಪ್ರಯತ್ನವಾಗಲಿ ಎಂಬುದು ಪರಿಸರ ಪ್ರೇಮಿಗಳು ಆಶಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾರ್ಖಾನೆ ಬೋರ್ಡ್ ಕಾಣದ್ದಕ್ಕೆ 300 ಮರಗಳಿಗೆ ಕೊಡಲಿ ಪೆಟ್ಟು!

    ಕಾರ್ಖಾನೆ ಬೋರ್ಡ್ ಕಾಣದ್ದಕ್ಕೆ 300 ಮರಗಳಿಗೆ ಕೊಡಲಿ ಪೆಟ್ಟು!

    ಬೆಂಗಳೂರು: ಮಾನವ ಸಂಪನ್ಮೂಲ ಅಧಿಕಾರಿಯೊಬ್ಬ ಕಾರ್ಖಾನೆಯೊಂದರ ಬೋರ್ಡ್ ಕಾಣುವುದಿಲ್ಲ ಎಂದು ರಸ್ತೆ ಬದಿಯಲ್ಲಿದ್ದ ನೂರಾರು ಮರಗಳನ್ನು ಕಡಿದು ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ಡಿ.ಶೆಟ್ಟಿಹಳ್ಳಿ ಗೇಟ್ ಬಳಿ ನಡೆದಿದೆ.

    ಮೆಡ್ರಿಕ್ ಕಂಪನಿ ಬೆಂಗಳೂರು-ಕಡಪ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತಿದ್ದು, ಪ್ರತಿ ದಿನ ಈ ದಾರಿಯಲ್ಲಿ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ಆದ್ರೆ ಈ ಕಾರ್ಖಾನೆಯ ಮಾನವ ಸಂಪನ್ಮೂಲ ಅಧಿಕಾರಿ ಮರಗಳು ಅಡ್ಡಿಯಾಗಿರುವುದರಿಂದ ಕಾರ್ಖಾನೆಯ ಬೋರ್ಡ್ ಕಾಣುವುದಿಲಲ್ಲ ಎನ್ನುವ ಒಂದೇ ಕಾರಣಕ್ಕೆ ಅರಣ್ಯ ಮತ್ತು ಲೋಕೋಪಯೋಗಿ ಇಲಾಖೆಯವರು ನೆಟ್ಟು ಪೋಷಣೆ ಮಾಡಲಾಗಿದ್ದ 300 ಮರಗಳನ್ನು ಕಡಿದು ನಾಶ ಮಾಡಿದ್ದಾನೆ ಎಂದು ಸ್ಥಳೀಯ ನಿವಾಸಿ ನಾರಾಯಣ ಗೌಡ ಆರೋಪಿಸಿದ್ದಾರೆ.

    ಸ್ಥಳೀಯ ಪರಿಸರ ಪ್ರೇಮಿಗಳು ಕಾರ್ಖಾನೆಯವರು ಪರಿಸರ ನಾಶ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಪರಿಸರ ಪ್ರೇಮ ಮೆರೆಯಬೇಕಾದ ಕಂಪನಿ ಈ ರೀತಿಯ ಅವಿವೇಕದ ಕೆಲಸ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ರಸ್ತೆ ಬದಿಯಲ್ಲಿ ನೆಟ್ಟಿದ್ದ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರದೆ 300 ಮೀಟರ್ ವ್ಯಾಪ್ತಿಯಲ್ಲಿ ಬೆಳೆದಿದ್ದ ಮರಗಳನ್ನು ನಾಶ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಮರಗಳನ್ನು ಕಡಿದ ಕಾರ್ಖಾನೆಯವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಿ ಮತ್ತೆ ಸಸಿಗಳನ್ನು ನೆಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಾರಿ ಸಮೇತ ಮರ ಜಪ್ತಿ- ಮಾರಾಟಗಾರರ ಆಕ್ರೋಶಕ್ಕೆ ಬೆದರಿ ಬಾಗಿಲು ಹಾಕಿ ಒಳಗೆ ಕುಳಿತ ಅಧಿಕಾರಿಗಳು!

    ಲಾರಿ ಸಮೇತ ಮರ ಜಪ್ತಿ- ಮಾರಾಟಗಾರರ ಆಕ್ರೋಶಕ್ಕೆ ಬೆದರಿ ಬಾಗಿಲು ಹಾಕಿ ಒಳಗೆ ಕುಳಿತ ಅಧಿಕಾರಿಗಳು!

    ಮೈಸೂರು: ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದವರೇ, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರಾಜಾರೋಷವಾಗಿ ತಿರುಗಿ ಬಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

    ಮರ ಸಾಗಿಸುತ್ತಿದ್ದ ಲಾರಿಯನ್ನು ಹಿಡಿದ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದ ಮಾರಾಟಗಾರರು, ಅರಣ್ಯ ಇಲಾಖೆಯ ಕಚೇರಿ ಬಾಗಿಲು ಬಡಿದು ದಾದಾಗಿರಿ ನಡೆಸಿದ್ದಾರೆ. ಅಲ್ಲದೆ ಮರ ಹಿಡಿದ ಅಧಿಕಾರಿಗಳ ಜೊತೆ ಮಾತಿನ ಚಕಮಕಿಗೆ ಇಳಿದಿದ್ದಾರೆ. ಜಮೀನುಗಳಲ್ಲಿ ಬೆಳೆದಿರುವ ಮರಗಳನ್ನು ಕಡಿಯಬೇಕಿದ್ದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಅನುಮತಿ ಪಡೆಯದೇ ಮರಗಳನ್ನ ಕಡಿದು ಅರಣ್ಯ ಇಲಾಖೆ ಕಚೇರಿ ಮುಂಭಾಗವೇ ರಾಜಾರೋಷವಾಗಿ ಸಾಗಿಸುತ್ತಿದ್ದಾಗ, ಅಧಿಕಾರಿಗಳು ಲಾರಿ ಸಮೇತ ಹಿಡಿದು ಜಪ್ತಿ ಮಾಡಿದ್ದಾರೆ.

    ಇದರಿಂದ ಆಕ್ರೋಶಗೊಂಡ ಮಾರಾಟಗಾರರು ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮಾರಾಟಗಾರರ ಆಕ್ರೋಶಕ್ಕೆ ಹೆದರಿದ ಅಧಿಕಾರಿಗಳು, ಕಚೇರಿಯ ಒಳಗೆ ಸೇರಿ ಬಾಗಿಲು ಭದ್ರಪಡಿಸಿಕೊಂಡು ಕುಳಿತಿದ್ದಾರೆ. ಮಾರಾಟಗಾರರು ಕಚೇರಿ ಬಾಗಿಲು ಬಡಿದು ರಾದ್ದಾಂತ ನಡೆಸಿದ್ದು, ಮಾಹಿತಿ ಅರಿತು ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

  • ರಾಣೇಬೆನ್ನೂರಿನ ಆಟೋ ಚಾಲಕರ ಪರಿಸರ ಪ್ರೇಮ-ಹುಟ್ಟುಹಬ್ಬಕ್ಕೆ ಸಸಿ ನೆಟ್ಟು ಹಸಿರು ಕಾಂತ್ರಿ!

    ರಾಣೇಬೆನ್ನೂರಿನ ಆಟೋ ಚಾಲಕರ ಪರಿಸರ ಪ್ರೇಮ-ಹುಟ್ಟುಹಬ್ಬಕ್ಕೆ ಸಸಿ ನೆಟ್ಟು ಹಸಿರು ಕಾಂತ್ರಿ!

    ಹಾವೇರಿ: ಹುಟ್ಟುಹಬ್ಬದ ಆಚರಣೆ ಅಂದರೆ ಕೇಕ್ ಕತ್ತರಿಸುವುದು, ಭರ್ಜರಿ ಪಾರ್ಟಿ ಮಾಡುವುದು ಸಾಮಾನ್ಯ. ಆದರೆ ಹಾವೇರಿಯ ರಾಣೇಬೆನ್ನೂರಿನ ಆಟೋ ಚಾಲಕರು ತಮ್ಮ ಹುಟ್ಟು ಹಬ್ಬದ ಆಚರಣೆ ವೇಳೆ ಸಸಿ ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ.

    ಜಿಲ್ಲೆಯ ರಾಣೇಬೆನ್ನೂರು ನಗರದ ರೈಲು ನಿಲ್ದಾಣದ ಎದುರಿನ ಈ ಗಿಡಗಳನ್ನ ನೆಟ್ಟಿದ್ದು ಇದೇ ಆಟೋ ಚಾಲಕರು. ಆಟೋ ಚಾಲಕರ ಸಂಘ ಕಟ್ಟಿಕೊಂಡಿರೋ 40 ಚಾಲಕರು, ಪ್ರತಿಯೊಬ್ಬರ ಜನ್ಮದಿನದಂದು ಒಂದೊಂದು ಸಸಿ ನೆಡುತ್ತಿದ್ದಾರೆ. ಅಲ್ಲದೇ ಅವುಗಳನ್ನು ನಿರಂತರವಾಗಿ ಪೋಷಣೆ ಮಾಡುತ್ತಿದ್ದಾರೆ.

    ಪ್ರಮುಖವಾಗಿ ಶೋಭಾಬಲ, ಹುಲಗಿಲ, ರೇನ್ ಟ್ರೀ, ನೇರಳೆ, ಬೇವು ಸೇರಿದಂತೆ ಹಲವು ಸಸಿಗಳನ್ನ ನೆಟ್ಟು ಅವುಗಳನ್ನ ಮರಗಳಾಗಿ ಬೆಳೆಸುವ ಕಾರ್ಯದಲ್ಲಿ ತೊಡಗಿದ್ದಾರೆ. ವಿಶೇಷವಾಗಿ ಪ್ರತಿಯೊಂದು ಸಸಿಗೂ ಮಹಾತ್ಮರ ಹೆಸರು ಇಟ್ಟಿದ್ದಾರೆ. ಜೊತೆಗೆ ಇಡೀ ನಗರದ ತುಂಬ ಸಸಿಗಳನ್ನ ನೆಡುವ ಸಂಕಲ್ಪ ಮಾಡಿದ್ದಾರೆ.

    ಕಾಡು ಬೆಳೆಸಿ ನಾಡು ಉಳಿಸಿ ಎನ್ನುವ ಸಂದೇಶ ಸಾರುತ್ತಿರುವ ಆಟೋ ಚಾಲಕರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಿದೆ.

  • ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    ಅರಣ್ಯ ಸಚಿವರಿಂದ ಮರ ಕಡಿಯಲು ಅಸ್ತ್ರ- ಯಾರ ಅನುಮತಿಯೂ ಇಲ್ಲದೇ ಕಡಿಯಬಹುದಂತೆ ವೃಕ್ಷ!

    – ರೈ ವಿರುದ್ಧ ರಾಹುಲ್‍ಗೆ ದೂರು

    ಬೆಂಗಳೂರು: ಕಾಡಿನ ರಕ್ಷಣೆ ಮಾಡಬೇಕಾದ ಅರಣ್ಯ ಸಚಿವ ರಮಾನಾಥ್ ರೈ ಟಿಂಬರ್ ಮಾಫಿಯಾಗೆ ತೆರೆಮರೆಯಲ್ಲಿ ಬೆಂಬಲ ನೀಡ್ತಿದ್ದಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಈ ಹಿಂದೆ ನಗರದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕೈ ಹಾಕಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ರು. ಮರ ಕಡಿಯಲಾಗುತ್ತೆ ಮತ್ತು ಪರಿಸರ ನಾಶವಾಗುತ್ತೆ ಅನ್ನೋ ಕೂಗು ಗಟ್ಟಿಯಾದಾಗ ಸರ್ಕಾರ ಈ ಯೋಜನೆಯನ್ನ ಕೈಬಿಟ್ಟಿತ್ತು.

    ಈಗ ಸದ್ದಿಲ್ಲದೇ 50ಕ್ಕೂ ಹೆಚ್ಚು ಜಾತಿಯ ಮರಗಳನ್ನು ಯಾರ ಅನುಮತಿಗೂ ಕಾಯದೆ ಕಡಿಯಬಹುದು ಅಂತಾ ಮರಗಳ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಆದೇಶ ಹೊರಡಿಸಲು ಸಜ್ಜಾಗಿದೆ. ಅಲ್ಲದೇ ಇದಕ್ಕಾಗಿ ಮಸೂದೆಯನ್ನು ಮಂಡಿಸಲಾಗಿದೆ. ಹಳ್ಳಿಯ ರೈತರ ಹಿತದೃಷ್ಟಿಯಿಂದ ಈ ಕಾಯ್ದೆ ಅಂತಾ ಅರಣ್ಯ ಸಚಿವ ರಮಾನಾಥ್ ರೈ ಮರ ಕಡಿಯಲು ಅಸ್ತ್ರ ಹಿಡಿದಿದ್ದಾರೆ. ಸರ್ಕಾರ ಗುಲ್‍ಮೋಹರ್, ಆಫ್ರಿಕನ್ ಟ್ಯೂಲಿಪ್, ಲಕ್ಷ್ಮಿತರು ಮರ, ನುಗ್ಗೇಕಾಯಿ ಮರ, ಬಾಗೇಮರ ಸೇರಿದಂತೆ ಐವತ್ತಕ್ಕೂ ಹೆಚ್ಚು ಜಾತಿಯ ಮರಗಳ ಹೆಸರನ್ನು ಲಿಸ್ಟ್ ಮಾಡಿಕೊಂಡಿದೆ.

    ಈ ಸಂಬಂಧ ರಮಾನಾಥ್ ರೈ ವಿರುದ್ಧ ಪರಿಸರ ಪ್ರೇಮಿಗಳು ಸಿಡಿದೆದ್ದಿದ್ದಾರೆ. ಈ ಕಾಯ್ದೆ ಜಾರಿಯಾದ್ರೆ ದೊಡ್ಡ ಹೋರಾಟವಾಗಲಿದೆ. ನಿಮ್ಮ ಸಚಿವರಿಗೆ ಬುದ್ಧಿ ಹೇಳಿ ಅಂತಾ ಪರಿಸರ ಪ್ರೇಮಿ ನಿಶಾಂತ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

    ಸರ್ಕಾರ ಟಿಂಬರ್ ಮಾಫಿಯಾಗೆ ಕುಮ್ಮಕ್ಕು ಕೊಡೋಕೆ ಈ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ ಅನ್ನೋ ಅನುಮಾನ ಮೂಡಿದೆ.

  • ಮರ ಕಡಿಯುವುದನ್ನು ತಪ್ಪಿಸಲು ನೈರುತ್ಯ ರೈಲ್ವೇ ಇಲಾಖೆಯಿಂದ ಹೊಸ ಪ್ಲಾನ್

    ಮರ ಕಡಿಯುವುದನ್ನು ತಪ್ಪಿಸಲು ನೈರುತ್ಯ ರೈಲ್ವೇ ಇಲಾಖೆಯಿಂದ ಹೊಸ ಪ್ಲಾನ್

    ಹಾವೇರಿ: ಒಂದು ಹೊಸ ರಸ್ತೆಯನ್ನು ನಿರ್ಮಿಸಬೇಕೆಂದರೆ ರಸ್ತೆ ಬರುವ ದಾರಿಯಲ್ಲಿ ಮರಗಳನ್ನು ಕಡಿಯುವುದು ಅನಿವಾರ್ಯ. ಆದರೆ ನೈರುತ್ಯ ರೈಲ್ವೆ ಇಲಾಖೆಯವರು ಮರಗಳನ್ನು ಕಡಿಯುವುದನ್ನು ತಪ್ಪಿಸಿ ಬೇರೆಡೆಗೆ ಶಿಫ್ಟ್ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ.

    ರಸ್ತೆ ನಿರ್ಮಾಣಕ್ಕಾಗಿ ಹಾಗೂ ಕೆಲವು ಅಭಿವೃದ್ಧಿ ಕಾರ್ಯಗಳಿಗಾಗಿ ಮರಗಳನ್ನ ಕಡಿಯಲಾಗುತ್ತದೆ. ಆದ್ರೆ ನೈರುತ್ಯ ರೈಲ್ವೆ ಇಲಾಖೆ ಇದಕ್ಕೆ ಹೊರತಾಗಿದೆ. ಕಳೆದ ಕೆಲವು ತಿಂಗಳಿನಿಂದ ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿಯಿಂದ ಚಿಕ್ಕಜಾಜೂರು ದ್ವಿಪಥ ಮಾರ್ಗ ನಿರ್ಮಿಸುತ್ತಿದೆ. ಇದಕ್ಕಾಗಿ ಮರಗಳನ್ನ ಕಡಿಯೋದು ಅನಿವಾರ್ಯವಾಗಿದೆ. ಆದರೆ ಮಾರ್ಗದ ಮಧ್ಯೆ ಬರುವಂತಹ ಮರಗಳನ್ನು ಬೇರೆಡೆಗೆ ನಾಟಿ ಮಾಡಲಾಗುತ್ತಿದೆ.

    ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ರೈಲ್ವೆ ನಿಲ್ದಾಣದಲ್ಲಿದ್ದ ಸುಮಾರು 46 ಬೇವಿನಮರ, ಹೊಂಗೆ ಮರಗಳನ್ನು ಸ್ಥಳಾಂತರ ಮಾಡುತ್ತಿದ್ದಾರೆ. ಈಗಿದ್ದ ಜಾಗದಿಂದ ಕನಿಷ್ಟ 15 ರಿಂದ 20 ಮೀಟರ್ ದೂರದಲ್ಲಿ ಮರಗಳನ್ನ ನಾಟಿ ಮಾಡಲಾಗುತ್ತಿದೆ. ಈಗಾಗಲೇ 25ಕ್ಕೂ ಹೆಚ್ಚು ಮರಗಳನ್ನ ಶಿಫ್ಟ್ ಮಾಡಿದ್ದಾರೆ. ಪರಿಸರ ಉಳಿಸುವ ಉದ್ದೇಶದಿಂದ ಈ ರೀತಿಯ ಕಾರ್ಯ ಮಾಡಲಾಗುತ್ತಿದೆ.

    ಹೈದರಾಬಾದ್‍ನ ವಿಶೇಷ ತಂಡ, ತೋಟಗಾರಿಕಾ ಇಲಾಖೆ, ರೈಲ್ವೆ ಎಂಜಿನಿಯರ್ ತಿವಾರಿ ಸೇರಿದಂತೆ 15ಕ್ಕೂ ಹೆಚ್ಚು ಜನ ಈ ಕಾರ್ಯದಲ್ಲಿ ನಿರತರಾಗಿದ್ದಾರೆ. ರೈಲ್ವೆ ಇಲಾಖೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿರೋದು ನಿಜಕ್ಕೂ ಮೆಚ್ಚುವಂತ ಕಾರ್ಯವಾಗಿದೆ. ಇದನ್ನ ಎಲ್ಲೆಡೆ ಅಳವಡಿಸಿಕೊಂಡರೆ ಮರಗಳನ್ನು ಸಂರಕ್ಷಿಸಬಹುದು ಎಂದು ರೈಲ್ವೆ ಇಲಾಖೆಯ ಈ ಕಾರ್ಯಕ್ಕೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.