Tag: trench

  • ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ ರೀತಿ ಪಾರು

    ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ ರೀತಿ ಪಾರು

    – ಸ್ನೇಹಿತರಿಗೆ ಲೊಕೇಶನ್ ಶೇರ್ ಮಾಡಿದ್ದ ಯುವಕ

    ಬೆಳಗಾವಿ: ಗೋಕಾಕ್ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದಿದ್ದ ಯುವಕ ಪವಾಡ ಸದೃಶ ರೀತಿ ಪಾರಾಗಿದ್ದು, ಸ್ನೇಹಿತರಿಗೆ ಲೊಕೇಶನ್ ಕಳುಹಿಸಿದ್ದರ ಆಧಾರದ ಮೇಲೆ ರಕ್ಷಿಸಲಾಗಿದೆ.

    ಜಿಲ್ಲೆಯ ಗೋಕಾಕ್ ಫಾಲ್ಸ್ ನಲ್ಲಿ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಯುವಕ ಪ್ರದೀಪ್ ಸಾಗರ್ 140 ಅಡಿ ಕಂದಕಕ್ಕೆ ಬಿದ್ದಿದ್ದ. ಯುವಕನನ್ನು ಗೋಕಾಕ್‍ನ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ರಕ್ಷಿಸಿದ್ದಾರೆ. ಆಯೂಬ್ ಖಾನ್‍ಗೆ ಪ್ರದೀಪ್ ಸಾಗರ್ ಪೋಷಕರು ಅಳುತ್ತಲೇ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಕಾರು ಬಿಟ್ಟು ಜೆಸಿಬಿಯಲ್ಲಿ ನವ ವಿವಾಹಿತ ದಂಪತಿ ಸವಾರಿ- ವೀಡಿಯೋ ವೈರಲ್

    ಕಲಬುರಗಿ ಜಿಲ್ಲೆಯ ಜೇವರ್ಗಿ ಮೂಲದ ಪ್ರದೀಪ್ ಸಾಗರ್ ಬೆಳಗಾವಿಯ ಖಾಸಗಿ ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ರಜೆ ಹಿನ್ನೆಲೆ ಸ್ನೇಹಿತರ ಜೊತೆ ಟ್ರಿಪ್‍ಗೆ ಹೋಗಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದ ಗೋಕಾಕ್ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಪ್ರದೀಪ್ ಸಾಗರ್ ಸಿಗದ್ದಕ್ಕೆ ಬರಿಗೈಲಿ ಮರಳಿದ್ದರು. ಕತ್ತಲಾದ ಹಿನ್ನೆಲೆ ಕಾರ್ಯಾಚರಣೆ ಮೊಟಕುಗೊಳಿಸಿ ತೆರಳಿದ್ದರು. ಇದನ್ನೂ ಓದಿ:  ಮೂವರು ಪ್ರಭಾವಿಗಳು ಸೇರಿ 40 ಬಿಜೆಪಿ ಶಾಸಕರು ಶೀಘ್ರವೇ ಕಾಂಗ್ರೆಸ್‍ಗೆ ಬರುತ್ತಾರೆ: ರಾಜು ಕಾಗೆ

    ಸ್ನೇಹಿತರು ಹಾಗೂ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಪ್ರದೀಪ್ ಸಾಗರ್ ಮೃತಪಟ್ಟಿದ್ದಾನೆ ಎಂದೇ ಭಾವಿಸಿದ್ದರು. ಆದರೆ ಬೆಳಗಿನ ಜಾವ 4 ಗಂಟೆಗೆ ಪ್ರದೀಪ್ ಸಾಗರ್ ಸ್ನೇಹಿತರಿಗೆ ಕರೆ ಮಾಡಿದ್ದ. ಅಲ್ಲದೆ ತನ್ನ ಲೊಕೇಶನ್ ಶೇರ್ ಮಾಡಿದ್ದ. ಬಳಿಕ ಸ್ನೇಹಿತರು ಗೋಕಾಕ್ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್‍ಗೆ ಕರೆ ಮಾಡಿದ್ದರು. ಈ ವೇಳೆ ಆಯೂಬ್ ಖಾನ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ 140 ಅಡಿ ಆಳದ ಕಂದಕಕ್ಕೆ ತೆರಳಿ ಪ್ರದೀಪ್ ಸಾಗರ್ ರಕ್ಷಿಸಿದ್ದಾರೆ. ಆಯೂಬ್ ಖಾನ್ ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರದೀಪ್ ಸಾಗರ್ ಸದ್ಯ ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

  • ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

    ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

    ನೆಲಮಂಗಲ: ಅನಾದಿ ಕಾಲದಿಂದಲೂ ಓಡಾಡುತ್ತಿದ್ದ ರಸ್ತೆಗೆ ಅಡ್ಡಲಾಗಿ ಗ್ರಾಮ ಪಂಚಾಯತಿ ಸದಸ್ಯೆ ಪತಿ ಜೆಸಿಬಿಯಿಂದ ಕಂದಕ ತೋಡಿ ರಸ್ತೆ ಮುಚ್ಚಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕುಲುವನ ಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆಗೆ ಚುನಾವಣೆ ಹಿನ್ನೆಲೆ ಯಾರೊಬ್ಬರು ಮತ ನೀಡಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಪತಿರಾಯ ಶಿವಕುಮಾರ್ ಗ್ರಾಮದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಅವರ ಮೇಲೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡದೇ ಅಂಧ ದರ್ಬಾರ್ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ಜಮೀನಿನ ಮುಖಾಂತರ ಊರಿನ ಜನಗಳು ಕೆರೆಗೆ ಓಡಾಡುತ್ತಾರೆ ಎನ್ನುವ ಉದ್ದೇಶದಿಂದ ಮೊನ್ನೆಯಷ್ಟೇ ಗ್ರಾಮದ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಮಣ್ಣು ಸುರಿಸಿರುವ ಆರೋಪ ಈಗ ಕೇಳಿ ಬಂದಿದೆ. ಇದನ್ನೂ ಓದಿ: 7 ಕೋಟಿ ಮೊತ್ತದ ಅಡಿಕೆಯ ಜೊತೆ 7 ಲಾರಿ ಜಪ್ತಿ – 7 ಮಂದಿ ಅರೆಸ್ಟ್

    ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಸಿಇಒ ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಆದೇಶಿಸಿದ್ದರು. ಈ ಹಿನ್ನೆಲೆ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ. ಈಗ ಆತನ ಜಮೀನಿನ ದಾರಿಯಲ್ಲಿ ಸಾರ್ವಜನಿಕರು ಕೆರೆಗೆ ಓಡಾಡುತ್ತಾರೆ ಎಂದು ರಸ್ತೆಗೆ ಅಡ್ಡಲಾಗಿ ಕಂದಕ ತೆಗೆದು ಬೇಲಿ ಹಾಕಿದ್ದಾರೆ. ಇದನ್ನೂ ಓದಿ: ಯೋಗ ಇರೋರು ಮಾತ್ರ ಯೋಗ ಮಾಡುತ್ತಾರೆ: ಡಿಸಿ ಆರ್ ಲತಾ

    ಗ್ರಾಮದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50ಕ್ಕಿಂತಲೂ ಹೆಚ್ಚು ಕಂದಕ ತೋಡಿದ್ದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ನಮಗೆ ರಸ್ತೆ ಬೇಕು ಇಲ್ಲಿನ ಜನ ರೈತಾಪಿ ವರ್ಗದವಾರಗಿದ್ದು, ನಮಗೆ ಪ್ರತಿಯೊಂದಕ್ಕೂ ಕೆರೆಗೆ ಹೋಗಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ನಮ್ಮ ಗ್ರಾಮಕ್ಕೆ ಬಂದು ಕೆರೆಗೆ ರಸ್ತೆ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ.