Tag: Trial

  • ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ದೇಶಾದ್ಯಂತ ಇದೀಗ ಕೆಜಿಎಫ್ 2 ಹವಾ ಕ್ರಿಯೇಟ್ ಆಗಿದೆ. ನೆನ್ನೆಯಷ್ಟೇ ರಿಲೀಸ್ ಆಗಿರುವ ಚಿತ್ರದ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಭಾರತೀಯ ಸಿನಿಮಾ ರಂಗದ ಬಹುತೇಕ ಸ್ಟಾರ್ ನಟರು ಟ್ರೈಲರ್ ಮೆಚ್ಚಿಕೊಂಡು, ಅದನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಂತೂ ಹಬ್ಬದ ರೀತಿಯಲ್ಲೇ ಸಂಭ್ರಮಿಸುತ್ತಿದ್ದಾರೆ. ಈಗ ಕನ್ನಡದ ಚಿತ್ರವೊಂದು ಬಾಲಿವುಡ್ ದಾಟಿಕೊಂಡು ಹಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಹಲವು ದಾಖಲೆಗಳನ್ನು ಬರೆದಿರುವ ಮತ್ತು ತಾನೇ ಬರೆದ ದಾಖಲೆಯನ್ನು ಮುರಿದಿರುವ ‘ಕೆಜಿಎಫ್’ ಸಿನಿಮಾ ಶುರುವಾಗಿದ್ದು 2015ರಂದು. ನಟ ಯಶ್ ‘ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ ಸಿನಿಮಾದ ಗೆಲುವಿನಲ್ಲಿದ್ದರು. ನಿರ್ದೇಶಕ ಪ್ರಶಾಂತ್ ನೀಲ್ ‘ಉ್ರಗಂ’ ಚಿತ್ರದ ಮೂಲಕ ಭರವಸೆಯ ನಿರ್ದೇಶಕರಾಗಿದ್ದರು. ಪುನೀತ್ ರಾಜ್ ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರದ ಮೂಲಕ ಹೊಂಬಾಳೆ ಫಿಲ್ಮ್ ಬ್ಯಾನರ್ ಸಿನಿಮಾ ರಂಗ ಪ್ರವೇಶ ಮಾಡಿತ್ತು. ಈ ಮೂವರು ಸೇರಿ ಮೊದಲು ‘ಕೆಜಿಎಫ್’ ಕನಸು ಕಂಡವರು. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ

    21 ಡಿಸೆಂಬರ್ 2018ರಲ್ಲಿ ತೆರೆಕಂಡ ‘ಕೆಜಿಎಫ್’ ಸಿನಿಮಾ ಐತಿಹಾಸಿಕ ದಾಖಲೆ ಮಾಡಿತು. ಪ್ಯಾನ್ ಇಂಡಿಯಾ ಪರಿಕಲ್ಪನೆಯ ಪಕ್ಕಾ ಸಿನಿಮಾ ಎನಿಸಿತು. ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬಾಚಿತು. ಯಶ್ ಎಂಬ ಕನ್ನಡದ ಹುಡುಗ ಪ್ಯಾನ್ ಇಂಡಿಯಾ ನಾಯಕನಾಗಿ ಹೊರಹೊಮ್ಮಿದರು. ಭಾರತೀಯ ಸಿನಿಮಾ ರಂಗವೇ ಈ ಸಿನಿಮಾವನ್ನು ಬೆರಗಿನಿಂದ ನೋಡಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಈ ಸಿನಿಮಾದಿಂದ ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಲಿಲ್ಲ. ತೆಲುಗಿಗೂ ಹಾರಿದರು. ಇಷ್ಟೆಲ್ಲ ಗೆಲುವಿಗೆ ಇಂಬು ಕೊಟ್ಟಿದ್ದು ‘ಕೆಜಿಎಫ್ 2’ ಚಿತ್ರ.  ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    2018ರಲ್ಲೇ ‘ಕೆಜಿಎಫ್ 2’ ಸಿನಿಮಾದ ಕೆಲಸ ಶುರುವಾದವು. ಇದೀಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾ ಕೂಡ ಭಾರತದ ಸಹಿತ 70 ದೇಶಗಳಲ್ಲಿ ಬಿಡುಗಡೆ ಆಗುತ್ತಿರುವುದು ಮತ್ತೊಂದು ಹೆಮ್ಮೆಯ ಸಂಗತಿ. ಬರೋಬ್ಬರಿ ಎಂಟು ವರ್ಷಗಳ ಕಾಲ ಯಶ್, ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

    ಎಂಟು ವರ್ಷಗಳ ಕಾಲ ಯಶ್ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ‘ಕೆಜಿಎಫ್’ನಲ್ಲೇ ಮುಳುಗಿದ್ದಾರೆ. ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕೆಜಿಎಫ್ 2 ಸಿನಿಮಾದ ಕೆಲಸ ಮುಗಿದ ನಂತರವೇ ಮತ್ತೊಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಹೊಂಬಾಳೆ ಫಿಲ್ಮ್ ಬೇರೆ ಬೇರೆ ಚಿತ್ರಗಳನ್ನೂ ಮಾಡಿದರೂ, ಕೆಜಿಎಫ್ ಟೆನ್ಷನ್ ಮಾತ್ರ ಹಾಗೆಯೇ ಇತ್ತು. ಇವರೆಲ್ಲ ಇಷ್ಟೊಂದು ನಿರಾಳತೆಯಿಂದ ಕೆಲಸ ಮಾಡಲು ಕಾರಣ ಅವರ ಪತ್ನಿಯರು ಎನ್ನುವುದು ವಿಶೇಷ. ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರ ಅವರೇ ಈ ಮಾತನ್ನು ಹೇಳಿದ್ದಾರೆ.

    “ಪ್ರಶಾಂತ್ ನೀಲ್ ಪತ್ನಿ ಲಿಖಿತ, ಯಶ್ ಪತ್ನಿ ರಾಧಿಕಾ ಪಂಡಿತ್ ಮತ್ತು ನನ್ನ (ವಿಜಯ ಕಿರಗಂದೂರ) ಪತ್ನಿ ಸಹಕಾರದಿಂದಾಗಿ ಎಂಟು ವರ್ಷಗಳ ಕಾಲ ಒಂದೇ ಸಿನಿಮಾದ ಬಗ್ಗೆ ಅಷ್ಟೂ ಶಕ್ತಿಯನ್ನು ವ್ಯಹಿಸಿದ್ದೇವೆ. ನಾವು ಕೂಲ್ ಆಗಿ ಕೆಲಸ ಮಾಡಿದ್ದೇವೆ ಎಂದರೆ, ಅದರ ಅಷ್ಟೂ ಕ್ರೆಡಿಟ್ಸ್ ಅವರಿಗೆ ಸಲ್ಲಬೇಕು’ ಎಂದಿದ್ದಾರೆ ವಿಜಯ್ ಕಿರಗಂದೂರ.

  • ಸ್ವದೇಶಿ ಕೊವ್ಯಾಕ್ಸಿನ್‌ ಶೇ.81ರಷ್ಟು ಪರಿಣಾಮಕಾರಿ

    ಸ್ವದೇಶಿ ಕೊವ್ಯಾಕ್ಸಿನ್‌ ಶೇ.81ರಷ್ಟು ಪರಿಣಾಮಕಾರಿ

    ಹೈದರಾಬಾದ್: ಸ್ವದೇಶಿ ಲಸಿಕೆ ಕೋವ್ಯಾಕ್ಸಿನ್ ಶೇ.81ರಷ್ಟು ಪರಿಣಾಮಕಾರಿ ಎಂದು ಹೈದರಾಬಾದಿನ ಭಾರತ್ ಬಯೋಟೆಕ್ ಕಂಪನಿ ತಿಳಿಸಿದೆ.

    ಇಂದು 3ನೇ ಹಂತದ ಕ್ಲಿನಿಕಲ್ ಪ್ರಯೋಗದ ಬಳಿಕ ಈ ವರದಿಯ ಬಗ್ಗೆ ಮಾಹಿತಿ ನೀಡಿದೆ. ಒಟ್ಟು 25,800 ಸ್ವಯಂ ಸೇವಕರ ಮೇಲೆ ಪ್ರಯೋಗ ಮಾಡಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಜೊತೆ ನಡೆಸಿದ ಅತ್ಯಂತ ದೊಡ್ಡ ಪ್ರಯೋಗ ಎಂದು ಹೇಳಿದೆ.

    ಈ ಬಗ್ಗೆ ಭಾರತ್ ಬಯೋಟೆಕ್‍ನ ಅಧ್ಯಕ್ಷ ಹಾಗೂ ಎಂಡಿ ಡಾ.ಕೃಷ್ಣ ಎಲ್ಲಾ ಅವರು ಮಾಹಿತಿ ನೀಡಿದ್ದು, ಇಂದು ವೈಜ್ಞಾನಿಕ ಕ್ಷೇತ್ರದಲ್ಲಿ ಹಾಗೂ ಕೊರೊನಾ ವ್ಯಾಕ್ಸಿನ್ ಸಂಶೋಧನಾ ಇತಿಹಾಸದಲ್ಲೇ ಇದೊಂದು ಮೈಲಿಗಲ್ಲಾಗಿದೆ. ಇಂದು ನಮ್ಮ 3ನೇ ಹಂತದ ಟ್ರಯಲ್ಸ್ ನ ವರದಿ ಬಂದಿದೆ. ಒಟ್ಟು 27 ಸಾವಿರ ಸ್ವಯಂಸೇವಕರಿಂದ ಕೊರೊನಾ ವ್ಯಾಕ್ಸಿನ್‍ನ 1, 2 ಹಾಗೂ 3ನೇ ಹಂತದ ಟ್ರಯಲ್ಸ್ ನ ವರದಿ ಬಂದಿದೆ ಎಂದಿದ್ದಾರೆ.

    ಕೊರೊನಾ ವಿರುದ್ಧ ಹೋರಾಡಲು ಕೋವ್ಯಾಕ್ಸಿನ್ ಉತ್ತಮ ಪರಿಣಾಮಕಾರಿ ಲಸಿಕೆಯಾಗಿದೆ. ಇದು ವೇಗವಾಗಿ ಹರಡುತ್ತಿರುವ ಇಂಗ್ಲೆಂಡಿನ ರೂಪಾಂತರ ವೈರಸ್ ವಿರುದ್ಧ ಸಹ ಹೋರಾಡುವ ಶಕ್ತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

    3ನೇ ಹಂತದ ಅಧ್ಯಯನದಲ್ಲಿ 18ರಿಂದ 98 ವರ್ಷದೊಳಗಿನ 25,800 ಸ್ವಯಂ ಸೇವಕರು ಭಾಗಿಯಾಗಿದ್ದರು. ಇದರಲ್ಲಿ 2,433 ಜನ 60 ವರ್ಷ ಮೇಲ್ಪಟ್ಟವರಿದ್ದಾರೆ. 4,500 ಜನ ವಿವಿಧ ಕಾಯಿಲೆ ಉಳ್ಳವರು ಸಹ ಇದ್ದಾರೆ. 3ನೇ ಹಂತದ ಕ್ಲಿನಿಕಲ್ ಟ್ರಯಲ್‍ನಲ್ಲಿ ಪಿಸಿಆರ್ ಖಚಿತಪಡಿಸಿದ ರೋಗ ಲಕ್ಷಣ ಹೊಂದಿದವರಿಗೆ ಪರೀಕ್ಷೆ ನಡೆಸಲಾಗಿದೆ.

  • ಡೈವೋರ್ಸ್ ನೀಡಲು ಮುಂದಾಗಿದ್ದ ಪತ್ನಿಯನ್ನು ಹೆದರಿಸಲು ವಿಷ ಸೇವಿಸಿದ ಪತಿ

    ಡೈವೋರ್ಸ್ ನೀಡಲು ಮುಂದಾಗಿದ್ದ ಪತ್ನಿಯನ್ನು ಹೆದರಿಸಲು ವಿಷ ಸೇವಿಸಿದ ಪತಿ

    ಚಿಕ್ಕಬಳ್ಳಾಪುರ: ಡೈವೋರ್ಸ್ ನೀಡಲು ನಿರ್ಧರಿಸಿರುವ ಪತ್ನಿಯನ್ನು ಹೆದರಿಸಲು ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ನಡೆದಿದೆ.

    ಮೂಲತಃ ಬೆಂಗಳೂರಿನ ಲೊಟ್ಟಗೊಲ್ಲಹಳ್ಳಿ ನಿವಾಸಿ ರಾಜು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಟಿ.ದಾಸರಹಳ್ಳಿ ನಿವಾಸಿಯಾಗಿರುವ ಮೋನಿಷಾರನ್ನು ಪ್ರೀತಿಸಿದ್ದ ರಾಜು 2014 ರಲ್ಲಿ ಗೋರವನಹಳ್ಳಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ನಂತರ ತಮ್ಮ ವಿವಾಹವನ್ನು ರಿಜಿಸ್ಟರ್ ಮಾಡಿಸಿದ್ದರು.

    ಕೆಲ ದಿನಗಳಿಂದ ಪತಿ ರಾಜು ಹಾಗೂ ಪತ್ನಿ ಮೋನಿಷಾ ನಡುವೆ ಹೊಂದಾಣಿಕೆ ಇಲ್ಲದೇ ಮೋನಿಷಾ ಗಂಡನನ್ನು ತೊರೆದು ತವರು ಮನೆ ಸೇರಿದ್ದರು. ಅಲ್ಲದೇ ಪತಿ ರಾಜು ಜೊತೆ ಮತ್ತೆ ಜೀವನ ನಡೆಸಲು ಇಷ್ಟವಿಲ್ಲದ ಎಂದು ಹೇಳಿ ಮೋನಿಷಾ ವಿಚ್ಛೇದನ ನೀಡಲು ನಿರ್ಧರಿಸಿದ್ದರು.

    ಬುಧವಾರ ಕೆಲಸದ ನಿಮಿತ್ತ ಸ್ನೇಹಿತನ ಜೊತೆ ರಾಜು ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ಈ ವೇಳೆ ತನ್ನ ಪತ್ನಿ ಡೈವೋರ್ಸ್ ನೀಡಲು ಮುಂದಾಗುತ್ತಿರುವ ವಿಚಾರವನ್ನು ಸ್ನೇಹಿತನಿಗೆ ತಿಳಿಸಿದ್ದಾರೆ. ಈ ಹಿಂದೆಯೂ ಒಮ್ಮೆ ಮೋನಿಷಾ ಮನೆ ಬಿಟ್ಟು ಹೋಗಿದ್ದಾಗ ಆಕೆಯನ್ನು ಬೆದರಿಸಲು ಆತ್ಮಹತ್ಯೆಗೆ ಯತ್ನಿಸಿದ್ದ ಕುರಿತು ತಿಳಿಸಿದ್ದಾರೆ. ಮತ್ತೆ ಇದೇ ಉಪಾಯವನ್ನು ಅನುಸರಿಸಿರುವ ರಾಜು ಚಿಕ್ಕಬಳ್ಳಾಪುರದ ಬಿಬಿ ರಸ್ತೆಯಲ್ಲಿ ಸ್ನೇಹಿತ ಕಾರು ನಿಲ್ಲಿಸಿ ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಕಾರಿನಲ್ಲೇ ಇಲಿ ಪಾಷಾಣ ಹಾಗೂ ಡೆಟಾಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಊಟ ಮುಗಿಸಿ ಬಂದ ರಾಜು ಸ್ನೇಹಿತ ಕಾರಿನಲ್ಲಿ ಡೆಟಾಲ್ ವಾಸನೆ ಬರುವುದನ್ನು ಕಂಡು ಆತ್ಮಹತ್ಯೆ ಯತ್ನಿಸಿದ ರಾಜುರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.