Tag: tripura police

  • 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    ಅಗರ್ತಲಾ: ತ್ರಿಪುರಾದ (Tripura) ಉನಕೋಟಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವ ಮಹಿಳೆ (Women) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

    ಘಟನೆಯಲ್ಲಿ ಸಿಪಿಐ(ಎಂ) (CPI) ಸಚಿವರ ಪುತ್ರನ ಕೈವಾಡವಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ (Congress) ಆರೋಪಿಸಿದೆ. ಆದರೆ ಬಿಜೆಪಿ (BJP) ಆರೋಪವನ್ನು ತಳ್ಳಿಹಾಕಿದೆ. ಇದನ್ನೂ ಓದಿ: 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    ಇದೇ ತಿಂಗಳ ಅಕ್ಟೋಬರ್ 19ರಂದು ಕುಮಾರಘಾಟ್‌ನ 3 ಅಂತಸ್ತಿನ ಕಟ್ಟಡದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ನೆರೆಯ ಮಹಿಳೆಯೊಬ್ಬಳೇ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗುವಂತೆ ಮಾಡಿದ್ದಾಳೆ. ಈ ಸಂಬಂಧ ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿ, ಮೂವರನ್ನು ಬಂಧಿಸಲಾಗಿದೆ. ಇನ್ನೂ ಹಲವರಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು (Tripura Police) ತಿಳಿಸಿದ್ದಾರೆ.

    ಪ್ರಕರಣದಲ್ಲಿ (FIR) ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿದೆ. ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಬಂಧಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುತ್ತದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಆಶಿಶ್ ಸಹಾ ತಿಳಿಸಿದ್ದಾರೆ. ಇದನ್ನೂ ಓದಿ: ನರ್ಸ್‍ನ್ನು ಕಟ್ಟಿ ಹಾಕಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

    ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಮಾತನಾಡಿ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿರುವುದು ಬೇಸರ ತಂದಿದೆ. ನಾವು ಅವರ ವಿರುದ್ಧ ತನಿಖೆಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಕೈಗೊಳ್ಳಲಿ ಎಂದು ಹೇಳಿದ್ದಾರೆ.

    CRIME COURT

    ಆರೋಪ ತಳ್ಳಿಹಾಕಿರುವ ಬಿಜೆಪಿ, ಅಕ್ಟೋಬರ್ 19ರಂದು ಸಚಿವರ ಪುತ್ರ ಅಗರ್ತಲಾದಲ್ಲಿದ್ದ ಕಾರಣ ಆರೋಪಗಳು ಸಂಪೂರ್ಣವಾಗಿ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗತ್ವ ಸಾಬೀತುಪಡಿಸಿ ಎಂದು ತೃತೀಯಲಿಂಗಿಗಳ ಬಟ್ಟೆ ಬಿಚ್ಚಿಸಿದ ಪೊಲೀಸರು – ದೂರು ದಾಖಲು

    ಅಗರ್ತಲಾ: ಪೊಲೀಸರು ನಮ್ಮನ್ನು ಬಂಧಿಸಿ, ಲಿಂಗತ್ವ ಸಾಬೀತುಪಡಿಸಿಕೊಳ್ಳಲು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ತೃತೀಯ ಲಿಂಗಿಯೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ತ್ರಿಪುರದಲ್ಲಿ ನಡೆದಿದೆ.

    ನಮ್ಮ ಸಮುದಾಯದ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ನಮ್ಮ ಲಿಂಗತ್ವವನ್ನು ಸಾಬೀತುಪಡಿಸಲು ವಿವಸ್ತ್ರಗೊಳಿಸಿ ವಿಕೃತಿ ಮೆರೆದಿದ್ದಾರೆ. ನಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತರೊಬ್ಬರು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

    ಶನಿವಾರ ರಾತ್ರಿ ಹೋಟೆಲ್‌ವೊಂದರಲ್ಲಿ ಪಾರ್ಟಿ ಮುಗಿಸಿಕೊಂಡು ನಾಲ್ವರು ತೃತೀಯಲಿಂಗಿಗಳು ಹೊರಬಂದಾಗ ಈ ಘಟನೆ ನಡೆದಿದೆ. ಘಟನೆ ಸಂಬಂಧ ಸೋಮವಾರ ಸಂತ್ರಸ್ತರು ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.

    ದೂರಿನಲ್ಲೇನಿದೆ..?
    ನಮ್ಮ ಮೇಲೆ (ನಾಲ್ವರು) ಸುಲಿಗೆ ಆರೋಪ ಹೊರಿಸಿ ಪಶ್ಚಿಮ ಅಗರ್ತಲಾ ಮಹಿಳಾ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಇದ್ದ ಪುರುಷ ಮತ್ತು ಮಹಿಳಾ ಪೊಲೀಸ್‌ ಅಧಿಕಾರಿಗಳು ನಮ್ಮನ್ನು ವಿವಸ್ತ್ರಗೊಳಿಸಿದರು. ನಿಮ್ಮ ಲಿಂಗತ್ವವನ್ನು ಸಾಬೀತುಪಡಿಸಿ ಎಂದು ಪೊಲೀಸರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿದ್ದಾರೆ. ನಮ್ಮ ವಿಗ್‌ ಮತ್ತು ಒಳ ಉಡುಪುಗಳನ್ನು ಪೊಲೀಸ್‌ ಠಾಣೆಯಲ್ಲೇ ಇರಿಸಿಕೊಂಡಿದ್ದಾರೆ. ನಮಗೆ ನ್ಯಾಯ ಬೇಕು. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್

    ಯಾವುದೇ ಪುರಾವೆಗಳಿಲ್ಲದೇ ನಮ್ಮ ವಿರುದ್ಧ ಸುಲಿಗೆ ಆರೋಪ ಹೊರಿಸಲಾಗಿದೆ. ಪೊಲೀಸರು ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಸಂತ್ರಸ್ತ ತೃತೀಯ ಲಿಂಗಿ ದೂರಿನಲ್ಲಿ ತಿಳಿಸಿದ್ದಾರೆ.

    ತೃತೀಯಲಿಂಗಿ ಸಮುದಾಯದ ಗೌಪ್ಯತೆ ಹಕ್ಕನ್ನು ಉಲ್ಲಂಘಿಸಲಾಗಿದೆ. ಸುಪ್ರೀಂ ಕೋರ್ಟ್‌ನ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ತೀರ್ಪಿನಲ್ಲಿ, ಸೆಕ್ಷನ್‌ 377 ನಿಂದ ಈ ಹಕ್ಕನ್ನು ಒದಗಿಸಲಾಗಿದೆ ಎಂದು ತೃತೀಯಲಿಂಗಿಗಳು ಪ್ರತಿಪಾದಿಸಿದ್ದಾರೆ.

    ಘಟನೆ ಸಂಬಂಧ ವರದಿ ಕೇಳಲಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ತ್ರಿಪುರ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ವಿಮಾನ ಕ್ರ್ಯಾಶ್ ಆಗಿ ರೈಲು ಹಳಿಗಳ ಮೇಲೆ ಬಿದ್ದಿದ್ದ ಪೈಲಟ್ ಬದುಕುಳಿದಿದ್ದೇ ರೋಚಕ

    ಐಪಿಸಿ ಸೆಕ್ಷನ್‌ 151ರಡಿ (ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿಗೆ ಭಂಗವುಂಟುಮಾಡುವುದು) ಈ ನಾಲ್ವರನ್ನು ಬಂಧಿಸಲಾಗುತ್ತು ಎಂದು ನಮ್ಮ ಕಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಯಾವ ಕಾರಣದಿಂದಾಗಿ ಅವರನ್ನು ಬಂಧಿಸಿದ್ದಾರೆ ಎಂಬುದು ನನಗೆ ಸ್ಪಷ್ಟವಾಗಿಲ್ಲ. ಪ್ರಕರಣ ಕುರಿತು ಗಮನ ಹರಿಸಲಾಗಿದೆ ಎಂದು ಹೇಳಿದ್ದಾರೆ.