Tag: Trisha

  • ಇಬ್ಬರೂ ಸ್ಟಾರ್ ನಟಿಯರ ಜೊತೆ ಅಲ್ಲು ಅರ್ಜುನ್ ರೊಮ್ಯಾನ್ಸ್

    ಇಬ್ಬರೂ ಸ್ಟಾರ್ ನಟಿಯರ ಜೊತೆ ಅಲ್ಲು ಅರ್ಜುನ್ ರೊಮ್ಯಾನ್ಸ್

    ‘ಪುಷ್ಪ’ ಹೀರೋ ಅಲ್ಲು ಅರ್ಜುನ್ (Allu Arjun) ಜೊತೆ ಜವಾನ್ (Jawan) ಡೈರೆಕ್ಟರ್ ಹೊಸ ಸಿನಿಮಾ ಮಾಡುವ ಬಗ್ಗೆ ಈಗಾಗಲೇ ಸಿಕ್ಕಾಪಟ್ಟೆ ಸುದ್ದಿಯಾಗಿದೆ. ಐಕಾನ್ ಸ್ಟಾರ್ ಜೊತೆ ಸಮಂತಾ (Samantha) ರೊಮ್ಯಾನ್ಸ್ ಮಾಡುತ್ತಾರೆ ಎಂಬ ವಿಚಾರ ಹೊರಬಿದ್ದಿತ್ತು. ಇದೀಗ ಸ್ಯಾಮ್ ಒಬ್ಬರೇ ಅಲ್ಲ, ತ್ರಿಶಾ ಕೂಡ ಈ ಚಿತ್ರಕ್ಕೆ ಸಾಥ್ ನೀಡುತ್ತಿದ್ದಾರೆ.

    ಕಳೆದ ಎರಡ್ಮೂರು ದಿನಗಳಿಂದ ಅಲ್ಲು ಅರ್ಜುನ್ ಮುಂದಿನ ಸಿನಿಮಾಗೆ ಸಮಂತಾ ನಾಯಕಿಯಾಗ್ತಾರೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಸಮಂತಾ ಅಟ್ಲಿ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಾರಾ? ಎಂಬುದು ಇನ್ನೂ ಖಾತ್ರಿಯಾಗಿಲ್ಲ. ಈ ಬೆನ್ನಲ್ಲೇ ಸ್ಟಾರ್ ನಟಿ ತ್ರಿಶಾ ಹೆಸರು ಕೂಡ ಚಾಲ್ತಿಯಲ್ಲಿದೆ.

    ಅಲ್ಲು ಅರ್ಜುನ್ ಮುಂಬರುವ ಸಿನಿಮಾದಲ್ಲಿ ಸಮಂತಾ ಮತ್ತು ತ್ರಿಶಾ ಕೃಷನ್ (Trisha) ಇಬ್ಬರೂ ತೆರೆಹಂಚಿಕೊಳ್ತಾರೆ ಎನ್ನಲಾಗುತ್ತಿದೆ. ಇಬ್ಬರ ಜೊತೆ ಅಲ್ಲು ಅರ್ಜುನ್ ಡ್ಯುಯೇಟ್ ಹಾಡೋಕೆ ರೆಡಿಯಾಗುತ್ತಿದ್ದಾರಂತೆ. ತ್ರಿಶಾ ಕೃಷ್ಣನ್ ಅವರಿಗೂ ಕೂಡ ಸಿನಿಮಾದಲ್ಲಿ ಉತ್ತಮ ಪಾತ್ರವಿದೆಯಂತೆ. ಇದನ್ನೂ ಓದಿ:ಟರ್ಕಿಯಲ್ಲಿ ಚಿಟ್ಟೆಯಾದ ದೀಪಿಕಾ ದಾಸ್

    ಅಲ್ಲು ಅರ್ಜುನ್ ಜೊತೆ ಸಮಂತಾ, ತ್ರಿಶಾ ನಟಿಸುವ ಸುದ್ದಿ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಒಂದು ವೇಳೆ, ಈ ಸುದ್ದಿ ನಿಜವೇ ಆಗಿದ್ದಲ್ಲಿ ಟ್ರಯೋ ಜೋಡಿಯನ್ನು ಫ್ಯಾನ್ಸ್ ನೋಡೋದೇ ಹಬ್ಬ ಎನ್ನಬಹುದು.

    ಸದ್ಯ ಅಲ್ಲು ಅರ್ಜುನ್ ಸದ್ಯ ಪುಷ್ಪ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ನಂತರ ಅಟ್ಲಿ ಸಿನಿಮಾವನ್ನು ಅವರು ಕೈಗೆತ್ತಿಕೊಳ್ಳಲಿದ್ದಾರೆ. ಇನ್ನೂ ಚಿತ್ರತಂಡದಿಂದ ಏನೆಲ್ಲಾ ತಾಜಾ ಸಮಾಚಾರ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

  • ‘ಖಟ್ಟಾ ಮಿಟ್ಟಾ’ ಸಿನಿಮಾ ಕೆಟ್ಟ ಕನಸು: ನಟಿ ತ್ರಿಷಾ

    ‘ಖಟ್ಟಾ ಮಿಟ್ಟಾ’ ಸಿನಿಮಾ ಕೆಟ್ಟ ಕನಸು: ನಟಿ ತ್ರಿಷಾ

    ಕ್ಷಿಣದ ಸ್ಟಾರ್ ನಟಿ, ಹೆಸರಾಂತ ತಾರೆ ತ್ರಿಷಾ (Trisha) 2010ರಲ್ಲಿ ಖಟ್ಟಾ ಮಿಟ್ಟಾ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿದರು. ಅಕ್ಷಯ್ ಕುಮಾರ್ ನಟನೆಯ ಈ ಸಿನಿಮಾ ತ್ರಿಷಾಗೆ ಬಾಲಿವುಡ್ ನಲ್ಲಿ ದೊಡ್ಡದೊಂದು ಬ್ರೇಕ್ ನೀಡಲಿದೆ ಎಂದೇ ಹೇಳಲಾಗಿತ್ತು. ಆದರೆ, ತ್ರಿಷಾಗೆ ಆ ಸಿನಿಮಾ ಕೆಟ್ಟ ಕನಸಾಗಿದೆ.

    ಹೌದು, ಈ ಮಾತನ್ನು ಅವರೇ ಹೇಳಿಕೊಂಡಿದ್ದಾರೆ. 2010ರ ನಂತರ ನೀವು ಯಾವುದೇ ಬಾಲಿವುಡ್ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ ಯಾಕೆ? ಎನ್ನುವ ಪ್ರಶ್ನೆಗೆ ಸ್ಪಷ್ಟ ಉತ್ತರವನ್ನೇ ಅವರು ನೀಡಿದ್ದಾರೆ. ಖಟ್ಟಾ ಮಿಟ್ಟಾ (Khatta Meetha) ಸಿನಿಮಾ ನನಗೆ ದೊಡ್ಡ ಹೆಸರು ತಂದು ಕೊಡುತ್ತದೆ ಎಂದು ನಂಬಿದ್ದೆ. ಅದು ಸುಳ್ಳಾಯಿತು. ಆ ಸಿನಿಮಾ ಸೋತಿತು. ಬಾಲಿವುಡ್ ಪ್ರೇಕ್ಷಕರು ನನ್ನ ಒಪ್ಪಲಿಲ್ಲ. ಹಾಗಾಗಿ ಮತ್ತೆ ಬಾಲಿವುಡ್ ಗೆ ಹೋಗಲಿಲ್ಲ ಎಂದಿದ್ದಾರೆ.

    ಖಟ್ಟಾ ಮಿಟ್ಟಾ ಸಿನಿಮಾ ತ್ರಿಷಾ ಪಾಲಿಗೆ ಮುಳುವಾಯಿತು ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ದಕ್ಷಿಣದಲ್ಲಿ ಹಿಟ್ ಸಿನಿಮಾಗಳನ್ನು ಕೊಟ್ಟರೂ, ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡರು. ಇವರ ಸಿನಿಮಾಗಳು ಹಿಂದೆಗೆ ಡಬ್ ಆದರೂ, ಅವರು ಮಾತ್ರ ಬಾಲಿವುಡ್ ಕಡೆ ಮುಖ ಕೂಡ ಹಾಕಿಲ್ಲವಂತೆ.

     

    ತ್ರಿಷಾ ಬಹುಭಾಷಾ ನಟಿಯಾಗಿದ್ದರೂ, ಕನ್ನಡವೂ ಸೇರಿದಂತೆ ಹಲವಾರು ಭಾಷಾ ಚಿತ್ರಗಳನ್ನು ಒಪ್ಪಿಕೊಂಡರೂ, ಈವರೆಗೂ ಒಂದೇ ಒಂದು ಬಾಲಿವುಡ್ ಸ್ಕ್ರಿಪ್ಟ್ ಕೇಳಿಲ್ಲವಂತೆ ಅದೃಷ್ಟವಂತ ನಟಿ. ಅಷ್ಟರ ಮಟ್ಟಿಗೆ ಖಟ್ಟಾ ಮಿಟ್ಟಾ ಅವರ ಮನಸ್ಸನ್ನು ಘಾಷಿಗೊಳಿಸಿದೆ.

  • ರಾಜಕಾರಣಿ ರಾಜುನನ್ನು ಕ್ಷಮಿಸಲ್ಲ: ಕಾನೂನು ಕ್ರಮಕ್ಕೆ ಮುಂದಾದ ತ್ರಿಶಾ

    ರಾಜಕಾರಣಿ ರಾಜುನನ್ನು ಕ್ಷಮಿಸಲ್ಲ: ಕಾನೂನು ಕ್ರಮಕ್ಕೆ ಮುಂದಾದ ತ್ರಿಶಾ

    ಮ್ಮ ಬಗ್ಗೆ ಹಗುರವಾಗಿ ಮಾತನಾಡಿರುವ ಮತ್ತು ನಟಿಯರನ್ನು ಅನುಮಾನದ ರೀತಿಯಲ್ಲಿ ನೋಡುವಂತೆ ಮಾಡಿರುವ ತಮಿಳಿನ ಖ್ಯಾತ ರಾಜಕಾರಣಿ ಎ.ವಿ.ರಾಜು ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ತ್ರಿಶಾ. ಇಂಥ ಕೊಳಕು ಮನಸ್ಥಿತಿಯವರಿಗೆ ಬುದ್ಧಿ ಕಲಿಸಲು ಕಾನೂನು ಹೋರಾಟವೇ ಸರಿಯಾದ ಮಾರ್ಗ ಎಂದಿದ್ದಾರೆ ನಟಿ.

    ಹಿರಿಯ ರಾಜಕಾರಣಿಗಾಗಿ ನಟಿ ತ್ರಿಶಾರನ್ನು 25 ಲಕ್ಷ ರೂಪಾಯಿ ಕೊಟ್ಟು ರೆಸಾರ್ಟ್ ಗೆ ಕರೆಯಿಸಿಕೊಂಡಿದ್ದೆವು ಎಂದು ಎಐಎಡಿಎಂಕೆ ಉಚ್ಚಾಟಿತ ಮುಖಂಡ ಎ.ವಿ.ರಾಜು ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತಮಿಳು ಸಿನಿಮಾ ರಂಗದ ಅನೇಕರು ರಾಜು ವಿರುದ್ಧ ಹರಿಹಾಯ್ದಿದ್ದರು. ತ್ರಿಶಾ ಕೂಡ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುವ ಕುರಿತು ಪ್ರತಿಕ್ರಿಯೆ ನೀಡಿದ್ದರು.

    ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ರಾಜು ಕ್ಷಮೆ ಕೇಳಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ. ನಾನು ತ್ರಿಶಾ ರೀತಿಯ ನಟಿಯನ್ನು ಎಂದು ಹೇಳಿದ್ದು, ತ್ರಿಶಾ ಅವರನ್ನೇ ಅಂತ ಹೇಳಿಲ್ಲ. ಆದರೂ, ನಾನು ಕ್ಷಮೆ (Kshame) ಕೇಳುತ್ತೇನೆ. ಯಾರನ್ನೂ ನೋಯಿಸುವ ಉದ್ದೇಶ ತಮಗೆ ಇರಲಿಲ್ಲವೆಂದು ಹೇಳಿದ್ದಾರೆ.

    ಪದೇ ಪದೇ ನಟಿ ತ್ರಿಶಾ (Trisha) ಅವರ ಮೇಲೆ ಮಾನಹಾನಿ ಮಾಡುವಂತಹ ಘಟನೆಗಳು ತಮಿಳು ನಾಡಿನಲ್ಲಿ ನಡೆಯುತ್ತಿವೆ. ಈ ಹಿಂದೆ ಮನ್ಸೂರ್ ಅಲಿ ಖಾನ್ ಕೂಡ ತ್ರಿಶಾರ ಬಗ್ಗೆ ಅವಹೇಳನ ಮಾಡುವಂತ ಮಾತುಗಳನ್ನು ಆಡಿದ್ದರು. ಇದೀಗ ತಮಿಳು ನಾಡಿನ ರಾಜಕೀಯ ಮುಖಂಡ  ಎ.ವಿ.ರಾಜು (A.V. Raju)ನಾಲಿಗೆ ಹರಿಬಿಟ್ಟಿದ್ದರು.  ಲೈಂಗಿಕ ಕೆಲಸಕ್ಕಾಗಿ ಎ.ವೆಂಕಟಾಚಲಂ (A. Venkatachalam) ಅವರು ತ್ರಿಶಾರಿಗೆ 25 ಲಕ್ಷ ರೂಪಾಯಿ ಆಫರ್ ನೀಡಿದ್ದರು. ಶಾಸಕರೊಬ್ಬರು ಅದಕ್ಕೆ ಒಪ್ಪಿಸಿದ್ದರು ಎಂದು ರಾಜು ಹೇಳಿದ್ದರು. ಇಂತಹ ಅನೇಕ ನಟಿಯರು ನಮ್ಮಲ್ಲಿ ಇದ್ದಾರೆ ಎಂದು ರಾಜು ಹೇಳಿಕೆ ನೀಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವಿಡಿಯೋ ಭಾರೀ ಸದ್ದು ಮಾಡುತ್ತಿದ್ದಂತೆಯೇ ಇದ್ದಕ್ಕೆ ನಟಿ ತ್ರಿಶಾ ಕೂಡ ಪ್ರತಿಕ್ರಿಯೆ ನೀಡಿದ್ದರು. ಪ್ರಚಾರಕ್ಕಾಗಿ ಹೀಗೆ ನಾಲಿಗೆ ಹರಿಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಲೀಗಲ್ ಟೀಮ್ ತಕ್ಕ ಪಾಠ ಕಲಿಸೋಕೆ ಸಜ್ಜಾಗಿದೆ ಎಂದು ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

     

    ಪ್ರಚಾರಕ್ಕಾಗಿ ಇಂತ ಕೀಳು ಮಟ್ಟದ ವ್ಯಕ್ತಿಗಳನ್ನು ಎದುರುಗೊಳ್ಳೋಕೆ ಅಸಹ್ಯವಾಗುತ್ತಿದೆ. ಇದನ್ನು ಎಂದಿಗೂ ಸಹಿಸಲ್ಲ ಮತ್ತು ಸುಮ್ಮನೆ ಕೂರುವುದಿಲ್ಲ. ನನ್ನ ಲೀಗಲ್ ಟೀಮ್ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದರು.

  • ತ್ರಿಶಾನ ‘ರೆಸಾರ್ಟ್’ಗೆ ಕರೆಯಿಸಿಕೊಂಡಿದ್ದೆ: ಮಾತಿಗೆ ಕ್ಷಮೆ ಕೇಳಿದ ರಾಜು

    ತ್ರಿಶಾನ ‘ರೆಸಾರ್ಟ್’ಗೆ ಕರೆಯಿಸಿಕೊಂಡಿದ್ದೆ: ಮಾತಿಗೆ ಕ್ಷಮೆ ಕೇಳಿದ ರಾಜು

    ಹಿರಿಯ ರಾಜಕಾರಣಿಗಾಗಿ ನಟಿ ತ್ರಿಶಾರನ್ನು 25 ಲಕ್ಷ ರೂಪಾಯಿ ಕೊಟ್ಟು ರೆಸಾರ್ಟ್ ಗೆ ಕರೆಯಿಸಿಕೊಂಡಿದ್ದೆವು ಎಂದು ಎಐಎಡಿಎಂಕೆ ಉಚ್ಚಾಟಿತ ಮುಖಂಡ ಎ.ವಿ.ರಾಜು ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಮಾತು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತಮಿಳು ಸಿನಿಮಾ ರಂಗದ ಅನೇಕರು ರಾಜು ವಿರುದ್ಧ ಹರಿಹಾಯ್ದಿದ್ದರು. ತ್ರಿಶಾ ಕೂಡ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುವ ಕುರಿತು ಪ್ರತಿಕ್ರಿಯೆ ನೀಡಿದ್ದರು.

    ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ರಾಜು ಕ್ಷಮೆ ಕೇಳಿದ್ದಾರೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ. ನಾನು ತ್ರಿಶಾ ರೀತಿಯ ನಟಿಯನ್ನು ಎಂದು ಹೇಳಿದ್ದು, ತ್ರಿಶಾ ಅವರನ್ನೇ ಅಂತ ಹೇಳಿಲ್ಲ. ಆದರೂ, ನಾನು ಕ್ಷಮೆ (Kshame) ಕೇಳುತ್ತೇನೆ. ಯಾರನ್ನೂ ನೋಯಿಸುವ ಉದ್ದೇಶ ತಮಗೆ ಇರಲಿಲ್ಲವೆಂದು ಹೇಳಿದ್ದಾರೆ.

    ಪದೇ ಪದೇ ನಟಿ ತ್ರಿಶಾ (Trisha) ಅವರ ಮೇಲೆ ಮಾನಹಾನಿ ಮಾಡುವಂತಹ ಘಟನೆಗಳು ತಮಿಳು ನಾಡಿನಲ್ಲಿ ನಡೆಯುತ್ತಿವೆ. ಈ ಹಿಂದೆ ಮನ್ಸೂರ್ ಅಲಿ ಖಾನ್ ಕೂಡ ತ್ರಿಶಾರ ಬಗ್ಗೆ ಅವಹೇಳನ ಮಾಡುವಂತ ಮಾತುಗಳನ್ನು ಆಡಿದ್ದರು. ಇದೀಗ ತಮಿಳು ನಾಡಿನ ರಾಜಕೀಯ ಮುಖಂಡ  ಎ.ವಿ.ರಾಜು (A.V. Raju)ನಾಲಿಗೆ ಹರಿಬಿಟ್ಟಿದ್ದರು.

    ಲೈಂಗಿಕ ಕೆಲಸಕ್ಕಾಗಿ ಎ.ವೆಂಕಟಾಚಲಂ (A. Venkatachalam) ಅವರು ತ್ರಿಶಾರಿಗೆ 25 ಲಕ್ಷ ರೂಪಾಯಿ ಆಫರ್ ನೀಡಿದ್ದರು. ಶಾಸಕರೊಬ್ಬರು ಅದಕ್ಕೆ ಒಪ್ಪಿಸಿದ್ದರು ಎಂದು ರಾಜು ಹೇಳಿದ್ದರು. ಇಂತಹ ಅನೇಕ ನಟಿಯರು ನಮ್ಮಲ್ಲಿ ಇದ್ದಾರೆ ಎಂದು ರಾಜು ಹೇಳಿಕೆ ನೀಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವಿಡಿಯೋ ಭಾರೀ ಸದ್ದು ಮಾಡುತ್ತಿದ್ದಂತೆಯೇ ಇದ್ದಕ್ಕೆ ನಟಿ ತ್ರಿಶಾ ಕೂಡ ಪ್ರತಿಕ್ರಿಯೆ ನೀಡಿದ್ದರು. ಪ್ರಚಾರಕ್ಕಾಗಿ ಹೀಗೆ ನಾಲಿಗೆ ಹರಿಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಲೀಗಲ್ ಟೀಮ್ ತಕ್ಕ ಪಾಠ ಕಲಿಸೋಕೆ ಸಜ್ಜಾಗಿದೆ ಎಂದು ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

    ಪ್ರಚಾರಕ್ಕಾಗಿ ಇಂತ ಕೀಳು ಮಟ್ಟದ ವ್ಯಕ್ತಿಗಳನ್ನು ಎದುರುಗೊಳ್ಳೋಕೆ ಅಸಹ್ಯವಾಗುತ್ತಿದೆ. ಇದನ್ನು ಎಂದಿಗೂ ಸಹಿಸಲ್ಲ ಮತ್ತು ಸುಮ್ಮನೆ ಕೂರುವುದಿಲ್ಲ. ನನ್ನ ಲೀಗಲ್ ಟೀಮ್ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದರು.

  • 25ಲಕ್ಷ ರೂ.ಗೆ ನಟಿ ತ್ರಿಶಾರನ್ನು ಒಪ್ಪಿಸಿದ್ದರು ಆ ಶಾಸಕರು: ನಾಲಿಗೆ ಹರಿಬಿಟ್ಟ ರಾಜು

    25ಲಕ್ಷ ರೂ.ಗೆ ನಟಿ ತ್ರಿಶಾರನ್ನು ಒಪ್ಪಿಸಿದ್ದರು ಆ ಶಾಸಕರು: ನಾಲಿಗೆ ಹರಿಬಿಟ್ಟ ರಾಜು

    ಪದೇ ಪದೇ ನಟಿ ತ್ರಿಶಾ (Trisha) ಅವರ ಮೇಲೆ ಮಾನಹಾನಿ ಮಾಡುವಂತಹ ಘಟನೆಗಳು ತಮಿಳು ನಾಡಿನಲ್ಲಿ ನಡೆಯುತ್ತಿದೆ. ಈ ಹಿಂದೆ ಮನ್ಸೂರ್ ಅಲಿ ಖಾನ್ ಕೂಡ ತ್ರಿಶಾರ ಬಗ್ಗೆ ಅವಹೇಳನ ಮಾಡುವಂತ ಮಾತುಗಳನ್ನು ಆಡಿದ್ದರು. ಇದೀಗ ತಮಿಳು ನಾಡಿನ ರಾಜಕೀಯ ಮುಖಂಡ  ಎ.ವಿ.ರಾಜು (A.V. Raju)ನಾಲಿಗೆ ಹರಿಬಿಟ್ಟಿದ್ದಾರೆ.

    ಲೈಂಗಿಕ ಕೆಲಸಕ್ಕಾಗಿ ಎ.ವೆಂಕಟಾಚಲಂ (A. Venkatachalam) ಅವರು ತ್ರಿಶಾರಿಗೆ 25 ಲಕ್ಷ ರೂಪಾಯಿ ಆಫರ್ ನೀಡಿದ್ದರು. ಶಾಸಕರೊಬ್ಬರು ಅದಕ್ಕೆ ಒಪ್ಪಿಸಿದ್ದರು ಎಂದು ರಾಜು ಹೇಳಿದ್ದಾರೆ. ಇಂತಹ ಅನೇಕ ನಟಿಯರು ನಮ್ಮಲ್ಲಿ ಇದ್ದಾರೆ ಎಂದು ರಾಜು ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

     

    ಈ ವಿಡಿಯೋ ಭಾರೀ ಸದ್ದು ಮಾಡುತ್ತಿದ್ದಂತೆಯೇ ಇದ್ದಕ್ಕೆ ನಟಿ ತ್ರಿಶಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರಕ್ಕಾಗಿ ಹೀಗೆ ನಾಲಿಗೆ ಹರಿಬಿಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಲೀಗಲ್ ಟೀಮ್ ತಕ್ಕ ಪಾಠ ಕಲಿಸೋಕೆ ಸಜ್ಜಾಗಿದೆ ಎಂದು ತ್ರಿಷಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

     

    ಪ್ರಚಾರಕ್ಕಾಗಿ ಇಂತ ಕೀಳು ಮಟ್ಟದ ವ್ಯಕ್ತಿಗಳನ್ನು ಎದುರುಗೊಳ್ಳೋಕೆ ಅಸಹ್ಯವಾಗುತ್ತಿದೆ. ಇದನ್ನು ಎಂದಿಗೂ ಸಹಿಸಲ್ಲ ಮತ್ತು ಸುಮ್ಮನೆ ಕೂರುವುದಿಲ್ಲ. ನನ್ನ ಲೀಗಲ್ ಟೀಮ್ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

  • ಚಿರಂಜೀವಿ ಚಿತ್ರಕ್ಕೆ ತ್ರಿಷಾ ನಾಯಕಿ: ‘ವಿಶ್ವಂಭರ’ ಟೀಮ್ ಸೇರಿಕೊಂಡ ನಟಿ

    ಚಿರಂಜೀವಿ ಚಿತ್ರಕ್ಕೆ ತ್ರಿಷಾ ನಾಯಕಿ: ‘ವಿಶ್ವಂಭರ’ ಟೀಮ್ ಸೇರಿಕೊಂಡ ನಟಿ

    ಕ್ಷಿಣದ ಬಹುಬೇಡಿಕೆಯ ನಟಿ ತ್ರಿಷಾ (Trisha) ಮತ್ತೆ ಚಿರಂಜೀವಿ (Chiranjeevi)ಸಿನಿಮಾಗೆ ಆಯ್ಕೆಯಾಗಿದ್ದಾರೆ. ಅಧಿಕೃತವಾಗಿ ಚಿತ್ರತಂಡವೇ ತಮ್ಮ ನಾಯಕಿಯನ್ನು ಘೋಷಿಸಿದೆ. ಮೊನ್ನೆಯಷ್ಟೇ ಸಂಕ್ರಾಂತಿ ಹಬ್ಬದ ದಿನದಂದು ವಿಶ್ವಂಭರ ಟೈಟಲ್ ಟೀಸರ್ (Title Teaser) ಮೂಲಕ ಸುಗ್ಗಿ ಸಂಭ್ರಮವನ್ನು ಚಿತ್ರತಂಡ ಹೆಚ್ಚಿಸಿತ್ತು.

    ಇದು ಚಿರು ನಟಿಸುತ್ತಿರುವ 156ನೇ ಸಿನಿಮಾವಾಗಿದ್ದು, ಜಗದೇಕ ವೀರುಡು ಅತಿಲೋಕ ಸುಂದರಿ ಸಿನಿಮಾದ ಬಳಿಕ ಚಿರಂಜೀವಿ ಫ್ಯಾಂಟಸಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಶ್ವಂಭರ ಎಂಬ ಟೈಟಲ್ ಇಡಲಾಗಿದೆ. ಈ ಟೈಟಲ್ ಟೀಸರ್ ನಲ್ಲಿ ಗ್ರಾಫಿಕ್ಸ್ ಕೆಲಸ ಪರಿಣಾಮಕಾರಿಯಾಗಿದೆ. ಈ ಮೆಗಾ ಫ್ಯಾಂಟಸಿ ಸಾಹಸವನ್ನು ಬಿಂಬಿಸಾರ ಖ್ಯಾತಿಯ ವಸಿಷ್ಠ ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ದೇಶಿಸಿದ್ದಾರೆ. ವಿಕ್ರಮ್, ವಂಶಿ ಮತ್ತು ಪ್ರಮೋದ್ ಹಣ ಹಾಕುತ್ತಿದ್ದು, ಚಿರಂಜೀವಿ ಸಿನಿಕರಿಯ್ ನಲ್ಲಿ ಅತ್ಯಂತ ದುಬಾರಿ ವೆಚ್ಚದ ಚಿತ್ರವಾಗಿದೆ.

    ವಿಶ್ವಂಭರ (Vishwambhara) ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ನೀಡಿದ್ದು, ಚೋಟಾ ಕೆ ನಾಯ್ಡು ಅವರ ಛಾಯಾಗ್ರಹಣವಿದೆ. ಎಎಸ್ ಪ್ರಕಾಶ್ ನಿರ್ಮಾಣ ವಿನ್ಯಾಸ, ಸುಶ್ಮಿತಾ ಕೊನಿಡೇಲ ವಸ್ತ್ರ ವಿನ್ಯಾಸ ಮಾಡಲಿದ್ದಾರೆ.

     

    ಕೋಟಗಿರಿ ವೆಂಕಟೇಶ್ವರರಾವ್ ಮತ್ತು ಸಂತೋಷ್ ಕಾಮಿರೆಡ್ಡಿ ಚಿತ್ರಕ್ಕೆ ಸಂಕಲನಕಾರರು. ಶ್ರೀ ಶಿವಶಕ್ತಿ ದತ್ತ ಮತ್ತು ಚಂದ್ರಬೋಸ್ ಗೀತರಚನೆಕಾರರಾಗಿದ್ದರೆ, ಶ್ರೀನಿವಾಸ್ ಗವಿರೆಡ್ಡಿ, ಗಂಟಾ ಶ್ರೀಧರ್, ನಿಮ್ಮಗಡ್ಡ ಶ್ರೀಕಾಂತ್ ಮತ್ತು ಮಯೂಖ್ ಆದಿತ್ಯ ಅವರು ಚಿತ್ರಕಥೆ ಸಹಾಯಕರಾಗಿದ್ದಾರೆ. 2025 ರ ಸಂಕ್ರಾಂತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದಾರೆ.

  • ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್

    ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್

    ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ. ಜೊತೆಗೆ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿಯನ್ನೂ ನಿರಾಕರಿಸಿದೆ.

    ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

    ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಕೂಡ ಆಗಿತ್ತು.

     

    ತ್ರಿಷಾ ಬಗೆಗಿನ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು. ಈಗ ಕೋರ್ಟ್ ಕೂಡ ದಂಡವಿಧಿಸಿದೆ.

  • ತ್ರಿಷಾ ಪ್ರಕರಣ: ನಟನಿಗೆ ಮತ್ತೆ ಎಚ್ಚರಿಸಿದ ಕೋರ್ಟ್

    ತ್ರಿಷಾ ಪ್ರಕರಣ: ನಟನಿಗೆ ಮತ್ತೆ ಎಚ್ಚರಿಸಿದ ಕೋರ್ಟ್

    ದಕ್ಷಿಣದ ಹೆಸರಾಂತ ನಟಿ ತ್ರಿಷಾ (Trisha) ಅವರಿಗೆ ಮಾನಹಾನಿ ರೀತಿಯಲ್ಲಿ ಮಾತನಾಡಿದ್ದ ತಮಿಳಿನ ಖ್ಯಾತ ನಟ ಮನ್ಸೂರ್ ಅಲಿಖಾನ್ (Mansoor Ali Khan) ಗೆ ಮದ್ರಾಸ್ ಹೈಕೋರ್ಟ್ ಮತ್ತೆ ಎಚ್ಚರಿಕೆಯ ಮಾತುಗಳನ್ನು ಆಡಿದೆ. ತ್ರಿಷಾ ಅವರಿಗೆ ನಾನು ಮಾನ ಹಾನಿ ಆಗುವಂತಹ ಮಾತುಗಳನ್ನು ಆಡಿಲ್ಲ. ನನ್ನ ಮಾತುಗಳನ್ನು ಎಡಿಟ್ ಮಾಡಲಾಗಿದೆ. ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲವೆಂದು ಮನ್ಸೂರ್ ನುಡಿದಿದ್ದರು. ತಮ್ಮ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ನಿರೀಕ್ಷನಾ ಜಾಮೀನು ನೀಡುವಂತೆ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯಕ್ಕೆ ಈ ಹಿಂದೆ ಮನ್ಸೂರ್ ಮೊರೆ ಹೋಗಿದ್ದರು. ಆಗಲೂ ಸೆಷನ್ಸ್ ನ್ಯಾಯಾಲಯ ಛೀಮಾರಿ ಹಾಕಿತ್ತು.

    ಈ ಪ್ರಕರಣ ಸುಖಾಂತ್ಯಗೊಳಲಿದೆ ಎನ್ನುವ ಹೊತ್ತಿನಲ್ಲಿ, ಮನ್ಸೂರ್ ಅಲಿಖಾನ್ ಮತ್ತೆ ತ್ರಿಷಾ ಹಾಗೂ ಇನ್ನೂ ಇಬ್ಬರ ಕಲಾವಿದರ ಬಗ್ಗೆ ಅಬ್ಬರಿಸಿದ್ದರು. ತ್ರಿಷಾ ವಿಚಾರದಲ್ಲಿ ಸುಖಾಸುಮ್ಮನೆ ತಮ್ಮ ಮಾನಹಾನಿ ಮಾಡಿದ್ದಾರೆ ಎಂದು ನಟಿ ಖುಷ್ಭೂ (Khushboo) ಹಾಗೂ ಚಿರಂಜೀವಿ (Chiranjeevi) ಅವರ ಮೇಲೆ ಹರಿಹಾಯ್ದಿದ್ದರು. ಅವರ ಮೇಲೆ ಮಾನನಷ್ಟ (Defamation) ಮೊಕದ್ದಮೆ ಹೂಡುವುದಾಗಿ ಹೇಳಿಕೊಂಡಿದ್ದರು.

    ಅದರಂತೆ ಮದ್ರಾಸ್ ಹೈಕೋರ್ಟಿಗೆ ಮನ್ಸೂರ್ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇಂದು ಈ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಸತೀಶ್ ಕುಮಾರ್ ಅವರು, ಮನ್ಸೂರ್ ಅಲಿಖಾನ್ ಅವರಿಗೆ ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕವಾಗಿ ಹೀಗೆ ಅಸಭ್ಯವಾಗಿ ವರ್ತಿಸಲು ಅನುಮತಿ ಇದೆಯೇ? ಎಂದು ಪ್ರಶ್ನೆ ಮಾಡಿದರು. ಸಾರ್ವಜನಿಕವಾಗಿ ಹೇಗೆ ವರ್ತಿಸಬೇಕು ಎನ್ನುವುದು ಅರಿವಿರಬೇಕು. ಇಂತಹ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗಬಾರದು ಎಂದು ಹೇಳಿದ ನ್ಯಾಯಮೂರ್ತಿಗಳು, ಪ್ರಕರಣವನ್ನು ಡಿ.22ಕ್ಕೆ ಮುಂದೂಡಿದಿದ್ದಾರೆ.

    ತ್ರಿಷಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಳಹಂತದ ನ್ಯಾಯಾಲಯದಲ್ಲಿ ಮನ್ಸೂರ್ ಅಲಿಖಾನ್ ಪಾಠ ಮಾಡಿಸಿಕೊಂಡಾಗಿದೆ. ಈಗ ಹೈಕೋರ್ಟ್ ನಲ್ಲೂ ಅಂಥದ್ದೇ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬಂದಿದೆ. ಡಿ.22ಕ್ಕೆ ನ್ಯಾಯಾಲಯವು ಈ ಪ್ರಕರಣವನ್ನು ಯಾವ ರೀತಿಯಲ್ಲಿ ನೋಡುತ್ತದೆ ಎನ್ನುವುದು ಸದ್ಯಕ್ಕಿರುವ ಕುತೂಹಲ.

  • ಮನ್ಸೂರ್ ಅಲಿಖಾನ್ ವಿವಾದ: ತ್ರಿಷಾಗೆ ವಿವರಣೆ ಕೇಳಿ ಪೊಲೀಸರಿಂದ ಪತ್ರ

    ಮನ್ಸೂರ್ ಅಲಿಖಾನ್ ವಿವಾದ: ತ್ರಿಷಾಗೆ ವಿವರಣೆ ಕೇಳಿ ಪೊಲೀಸರಿಂದ ಪತ್ರ

    ಖ್ಯಾತ ನಟ ಮನ್ಸೂರ್ ಅಲಿಖಾನ್ ನಟಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ದೊಡ್ಡ ಸುದ್ದಿ ಆಗಿತ್ತು. ನಟಿ ತ್ರಿಷಾ ಕುರಿತಂತೆ ಆಡಿದ ಮಾತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಕುರಿತಂತೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿತ್ತು. ಈ ಪ್ರಕರಣದ ಕುರಿತಂತೆ ವಿವರಣೆ ಕೇಳಿ ನಟಿ ತ್ರಿಷಾ ಪೊಲೀಸರು (Police) ಪತ್ರ ಬರೆದಿದ್ದಾರೆ. ಘಟನೆ ಕುರಿತಂತೆ ವಿವರಣೆ ಕೇಳಿದ್ದಾರೆ.

    ಕ್ಷಮೆ ಕೇಳಿದ್ದಾರೆ ಮನ್ಸೂರ್

    ತ್ರಿಷಾಗೆ ಮಾನಹಾನಿ ಆಗುವಂತಹ ಹೇಳಿಕೆ ನೀಡಿದ್ದ ಹಿರಿಯ ನಟ ಮನ್ಸೂರ್ ಅಲಿ ಖಾನ್ ಈಗಾಗಲೇ ಕ್ಷಮೆ ಕೇಳಿದ್ದಾರೆ. ಪೊಲೀಸ್ ಠಾಣೆ, ಕೋರ್ಟ್ ಮೆಟ್ಟಿಲು ಏರುತ್ತಿದ್ದಂತಯೆ ಎಚ್ಚೆತ್ತುಕೊಂಡ ಮನ್ಸೂರ್, ತನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದರು. ನಿಮ್ಮ ವಿವಾಹದ ದಿನದಂದು ಮಾಂಗಲ್ಯವನ್ನು ಮುಟ್ಟಿ ಆಶೀರ್ವದಿಸುವಂತಹ ಅವಕಾಶ ನನಗೆ ಬರಲಿ ಎಂದು ಅವರು ಹೇಳಿದ್ದರು.

    ಮನ್ಸೂರ್ ಅಲಿ ಖಾನ್ ಮೇಲೆ ಈ ಪ್ರಕರಣದ ಕುರಿತಂತೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

    ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿದೆ ಎಂದು ವರದಿ ಆಗಿತ್ತು.

     

    ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.

  • ಚಿರಂಜೀವಿ, ಖುಷ್ಬೂ, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಜ್ಜಾದ ನಟ

    ಚಿರಂಜೀವಿ, ಖುಷ್ಬೂ, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಸಜ್ಜಾದ ನಟ

    ಮಿಳಿನ ಖ್ಯಾತ ಖಳನಟ ಮನ್ಸೂರ್ ಅಲಿಖಾನ್ ಮತ್ತೆ ಕಲಾವಿದರ ವಿರುದ್ಧ ಸಿಡಿದೆದ್ದಿದ್ದಾರೆ. ದಕ್ಷಿಣದ ಹೆಸರಾಂತ ತಾರೆ ತ್ರಿಷಾ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ್ದ ಮನ್ಸೂರ್ ಮೇಲೆ ಕಲಾವಿದರು ಮತ್ತು ತಂತ್ರಜ್ಞರು ಮುಗಿ ಬಿದ್ದಿದ್ದರು. ಅದರಲ್ಲೂ ಖ್ಯಾತ ನಟ ಚಿರಂಜೀವಿ (Chiranjeevi), ತ್ರಿಷಾ ಮತ್ತು ಖುಷ್ಬೂ (Khushboo) ಪ್ರತಿಕ್ರಿಯೆ ನೀಡಿದ್ದರು. ಮನ್ಸೂರ್ ವಿರುದ್ಧ ದೂರು ಕೂಡ ನೀಡಲಾಗಿತ್ತು. ಆ ನಂತರ ಮನ್ಸೂರ್ ಕ್ಷಮೆ ಕೂಡ ಕೇಳಿದ್ದರು.

    ಅಲ್ಲಿಗೆ ಪ್ರಕರಣ ಸುಖಾಂತ್ಯವಾಗಿದೆ ಎಂದು ನಂಬಲಾಗಿತ್ತು. ಆದರೆ, ಮನ್ಸೂರ್ ಅಲಿಖಾನ್ ಮತ್ತೆ ಆ ಮೂವರು ಕಲಾವಿದರ ವಿರುದ್ಧ ಸಿಡಿದೆದ್ದಿದ್ದಾರೆ. ತಮ್ಮ ಮೇಲೆ ಸಲ್ಲದ ಆರೋಪ ಮಾಡಿರುವ ಚಿರಂಜೀವಿ, ತ್ರಿಷಾ ಮತ್ತು ಖುಷ್ಬೂ ವಿರುದ್ಧ ಮಾನನಷ್ಟ ಮೊಕದ್ದಮೆ (Defamation Suit) ಹೂಡುವುದಾಗಿ ಅವರು ತಿಳಿಸಿದ್ದಾರೆ.

    ಛೀಮಾರಿ ಹಾಕಿತ್ತು ಕೋರ್ಟ್

    ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

    ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿತ್ತು. ಹಾಗಾಗಿ ಮನ್ಸೂರ್ ಅಲಿ ಖಾನ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದರು.

    ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.

     

    ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು.