Tag: Trisha

  • ನಟಿ ತ್ರಿಷಾಗೆ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

    ನಟಿ ತ್ರಿಷಾಗೆ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

    ಖ್ಯಾತ ನಟಿ ತ್ರಿಷಾಗೆ ಮಾನಹಾನಿ ಆಗುವಂತಹ ಹೇಳಿಕೆ ನೀಡಿದ್ದ ಹಿರಿಯ ನಟ ಮನ್ಸೂರ್ ಅಲಿ ಖಾನ್ ಕೊನೆಗೂ ಕ್ಷಮೆ ಕೇಳಿದ್ದಾರೆ. ಪೊಲೀಸ್ ಠಾಣೆ, ಕೋರ್ಟ್ ಮೆಟ್ಟಿಲು ಏರುತ್ತಿದ್ದಂತಯೆ ಎಚ್ಚೆತ್ತುಕೊಂಡ ಮನ್ಸೂರ್, ತನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದಾರೆ. ನಿಮ್ಮ ವಿವಾಹದ ದಿನದಂದು ಮಾಂಗಲ್ಯವನ್ನು ಮುಟ್ಟಿ ಆಶೀರ್ವದಿಸುವಂತಹ ಅವಕಾಶ ನನಗೆ ಬರಲಿ ಎಂದು ಅವರು ಹೇಳಿದ್ದಾರೆ.

    ಮೊನ್ನೆಯಷ್ಟೇ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

    ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಆಗಿದೆ ಎಂದು ವರದಿ ಆಗಿತ್ತು.

    ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.

    ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು.

     

    ಇದೀಗ ಖಷ್ಬೂ (Khushboo) ಈ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಮಾತನಾಡಿದ್ದಾರೆ. ಮತ್ತು ತಾವು ಕಾನೂನು ಮೂಲಕವೇ ಉತ್ತರಿಸುವುದಾಗಿ ತಿಳಿಸಿದ್ದರು. ಇದೀಗ ಮನ್ಸೂರ್ ಕಾನೂನು ಕುಣಿಕೆಯಲ್ಲಿ ತೂಗಾಡುತ್ತಿದ್ದಾರೆ. ಈ ಮಧ್ಯೆ ಅವರು ಕ್ಷಮೆ ಕೇಳುವ ಮೂಲಕ ಘಟನೆಯನ್ನು ತಿಳಿಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

  • ನಟಿ ತ್ರಿಷಾಗೆ ಅವಹೇಳನ ಪ್ರಕರಣ : ನಟನ ವಿರುದ್ಧ ಕೇಸ್ ದಾಖಲು

    ನಟಿ ತ್ರಿಷಾಗೆ ಅವಹೇಳನ ಪ್ರಕರಣ : ನಟನ ವಿರುದ್ಧ ಕೇಸ್ ದಾಖಲು

    ಮಿಳು (Tamil) ಚಿತ್ರೋದ್ಯಮ ಖ್ಯಾತ ವಿಲನ್ ಮನ್ಸೂರ್ ಅಲಿ ಖಾನ್ (Mansoor Ali Khan), ನಿಜ ಜೀವನದಲ್ಲೂ ವಿಲನ್ ಆಗಿದ್ದಾರೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ ಅವರನ್ನು ರೇಪ್ ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.

    ತ್ರಿಷಾ (Trisha) ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು.

    ಆಕ್ರೋಶ ಭುಗಿಲುಗೊಂಡ ಬೆನ್ನಲ್ಲೇ ಖುಷ್ಬೂ (Khushboo) ಕೂಡ ಘಟನೆಯ ಬಗ್ಗೆ ಮಾತನಾಡಿದ್ದರು. ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಮಾತನಾಡಿದ್ದರು. ಮತ್ತು ತಾವು ಕಾನೂನು ಮೂಲಕವೇ ಉತ್ತರಿಸುವುದಾಗಿ ತಿಳಿಸಿದ್ದರು.

     

    ಇಷ್ಟೆಲ್ಲ ನಡೆದರೂ ಮನ್ಸೂರ್ ಅಲಿ ಖಾನ್ ಮಾತ್ರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ನನ್ನ ಮಾತು ತಿರುಚಲಾಗಿದೆ ಎಂದು ಮಾತನಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಮಧ್ಯ ಪ್ರವೇಶಿಸಿತ್ತು. ದೂರು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿತ್ತು. ಅದರಂತೆ ತಮಿಳು ನಾಡು ಪೊಲೀಸರು ನಟನ ವಿರುದ್ಧ ದೂರು  ((Complaint) ದಾಖಲಿಸಿಕೊಂಡಿದ್ದಾರೆ.

  • ಮನ್ಸೂರ್ ಅಲಿ ಖಾನ್ ರೇಪ್ ಸೀನ್ ವಿವಾದ: ಖುಷ್ಭೂ ಕಿಡಿಕಿಡಿ

    ಮನ್ಸೂರ್ ಅಲಿ ಖಾನ್ ರೇಪ್ ಸೀನ್ ವಿವಾದ: ಖುಷ್ಭೂ ಕಿಡಿಕಿಡಿ

    ಮಿಳಿನ ಖ್ಯಾತ ಖಳನಟ ಮನ್ಸೂರ್ ಅಲಿ ಖಾನ್ (Mansoor Ali Khan) ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳು ಚಿತ್ರೋದ್ಯಮದಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ. ಲಿಯೋ ಸಿನಿಮಾದಲ್ಲಿ ನಾಯಕಿ ತ್ರಿಷಾ (Trisha) ಅವರನ್ನು ರೇಪ್ (Rape) ಮಾಡುವಂತಹ ಸನ್ನಿವೇಶ ಇದೆ ಅಂದುಕೊಂಡಿದೆ. ಆದರೆ, ಇರಲಿಲ್ಲ. ಇದ್ದರೆ ಅನಾಮತ್ತಾಗಿ ಎತ್ತಿಕೊಂಡು ಹೋಗಿ ಬೆಡ್ ಮೇಲೆ ಬೀಸಾಕುತ್ತಿದ್ದೆ. ಈ ಹಿಂದೆ ಖುಷ್ಬೂ ಸೇರಿದಂತೆ ಹಲವರನ್ನು ಹಾಗೆಯೇ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದರು.

    ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು.

     

    ಇದೀಗ ಖಷ್ಬೂ (Khushboo) ಈ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಮನ್ಸೂರ್ ಅಲಿ ಖಾನ್ ನಂತಹ ಕೊಳಕು ಮನಸ್ಥಿತಿಯವರಿಗೆ ಕಾನೂನು ಮೂಲಕ ಪಾಠ ಕಲಿಸಬೇಕು. ಇಲ್ಲದಿದ್ದರೆ ಇಂತಹ ಗಂಡಸರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಮಾತನಾಡಿದ್ದಾರೆ. ಮತ್ತು ತಾವು ಕಾನೂನು ಮೂಲಕವೇ ಉತ್ತರಿಸುವುದಾಗಿ ತಿಳಿಸಿದ್ದಾರೆ.

  • ಮತ್ತೆ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡ ಸುಮನ್: ತ್ರಿಷ ಚಿತ್ರದಲ್ಲಿ ನಟ

    ಮತ್ತೆ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡ ಸುಮನ್: ತ್ರಿಷ ಚಿತ್ರದಲ್ಲಿ ನಟ

    ಸ್ನೇಹಾಲಯಂ ಕ್ರಿಯೇಷನ್ಸ್ ಬ್ಯಾನರ್  ಅಡಿಯಲ್ಲಿ ಈಶ್ವರ್ ನಾಗನಾಥ್, ಹನುಮಂತರಾಯ ಮತ್ತು ಎಂ.ಎಸ್. ದಂಡಿನ್ ಸೇರಿ ನಿರ್ಮಿಸುತ್ತಿರುವ ಭಕ್ತಿಪ್ರಧಾನ ಚಲನಚಿತ್ರ ‘ತ್ರಿಷ’ (Trisha). ತೆಲುಗಿನ ಪ್ರೇಮಭಿಕ್ಷ, ಆಗಸ್ಟ್ 6 ರಾತ್ರಿ, ರುದ್ರಾಕ್ಷಪುರಂ ಚಿತ್ರಗಳನ್ನು ನಿರ್ದೇಶಿಸಿರುವ ಆರ್. ಕೆ. ಗಾಂಧಿ (R.K. Gandhi) ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ.

    ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ತಯಾರಾಗುತ್ತಿರುವ  ತ್ರಿಷ ಚಿತ್ರದ ಮುಹೂರ್ತ ಇತ್ತೀಚೆಗೆ ಹೈದರಾಬಾದ್ ನ ಮೀಯಾಪುರ್ ನಲ್ಲಿ ನೆರವೇರಿತು. ಭಕ್ತಿಪ್ರಧಾನ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂಭವಾಮಿ  ಯುಗೇ ಯುಗೇ ಎಂಬ ಟ್ಯಾಗ್ ಲೈನ್ ಇದ್ದು, ಮುಳಬಾಗಿಲು ತಾಲ್ಲೂಕಿನ ವಿರೂಪಾಕ್ಷ ದೇವಾಲಯದಲ್ಲಿ ನಡೆದ ಸತ್ಯ ಘಟನೆಗಳನ್ನು ಆಧರಿಸಿ ಚಿತ್ರಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ಶಿವನ ಪರಮಭಕ್ತ ವಿರೂಪಾಕ್ಷನ ಪಾತ್ರವನ್ನು ಪಂಚಭಾಷಾ ತಾರೆ ಸುಮನ್ (Suman) ನಿರ್ವಹಿಸುತ್ತಿದ್ದಾರೆ.

    ಶಿವನೇ ಸರ್ವಸ್ವ ಎಂದು ನಂಬಿರುವ ಶಿವಭಕ್ತನಿಗೆ ಎದುರಾಗುವ ಸಮಸ್ಯೆಗಳು, ಮತ್ತು ಅವುಗಳಿಂದ ನೊಂದ  ಆ ಶಿವಭಕ್ತ ದುಷ್ಕರ್ಮಿಗಳಿಗೆ ಕೊಡುವ ಶಾಪ  ಹೇಗೆಲ್ಲಾ ಪ್ರತಿಫಲಿಸುತ್ತದೆ ಎಂಬ ಕಥಾನಕ  ತ್ರಿಷ ಸಿನಿಮಾದಲ್ಲಿದೆ.

    ಹೈದರಾಬಾದ್ ಸ್ಟುಡಿಯೋದಲ್ಲಿ ನಾಲ್ಕು ದಿನ ಚಿತ್ರೀಕರಿಸಿಕೊಂಡು ಬಂದಿರುವ ತಂಡ ಇದೇ 26ರಿಂದ ಹೊಸಕೋಟೆ ತಾಲೂಕಿನ ಭಕ್ತರಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ, ಮತ್ತು ಮುಳಬಾಗಿಲು ತಾಲೂಕಿನ ವಿರೂಪಾಕ್ಷ ದೇವಾಲಯದಲ್ಲಿ ಶೂಟಿಂಗ್ ಮುಂದುವರೆಸಲಿದೆ.

     

    ತ್ರಿಷ ಚಿತ್ರಕ್ಕೆ ಎಂ.ಎಲ್.ರಾಜ ಅವರ ಸಾಹಿತ್ಯ, ಸಂಗೀತ, ಮರಳಿಕೃಷ್ಣ ಅವರ ಛಾಯಾಗ್ರಹಣ, ನಾರ್ಸಿಂಗ್ ರಾಥೋಡ್ ಸಂಕಲನ, ಪ್ರಸಾದ್ ಕಲೆ, ಸೂರ್ಯಕಿರಣ್ ನೃತ್ಯ ಸಂಯೋಜನೆಯಿದ್ದು, ಸುರೇಶ್ ಸೂರ್ಯ, ಖುಷಿಗೌಡ, ಯುವೀನ, ಸುಪ್ರಿತಾ ರಾಜ್, ಮಹಾಂತೇಶ, ವಿರೂಪಾಕ್ಷಿ, ಭಕ್ತರಹಳ್ಳಿ ರವಿ, ಸುನಂದಾ ಕಲಬುರ್ಗಿ, ಗಣೇಶ್ ರಾವ್ ಕೇಸರಕರ್  ಉಳಿದ ತಾರಾಗಣದಲ್ಲಿದ್ದಾರೆ.

  • ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

    ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

    ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು, ಇದೀಗ ನಯನತಾರಾ ಹೆಸರು ಸೇರ್ಪಡೆ ಆಗಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

     

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಲಿಯೋ’ ಚಿತ್ರದ ಮೂರನೇ ಹಾಡು ರಿಲೀಸ್ : ಪ್ರೀತಿಯ ಆಯುಧ ಹಿಡಿದ ವಿಜಯ್

    ‘ಲಿಯೋ’ ಚಿತ್ರದ ಮೂರನೇ ಹಾಡು ರಿಲೀಸ್ : ಪ್ರೀತಿಯ ಆಯುಧ ಹಿಡಿದ ವಿಜಯ್

    ಕಾಲಿವುಡ್ ನ ಜನಪ್ರಿಯ ನಟ ವಿಜಯ್ ಅಭಿನಯದ ‘ಲಿಯೋ’ (Leo) ಚಿತ್ರವು ಅಕ್ಟೋಬರ್‍ 19ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ’ಪ್ರೀತಿಯ ಆಯುಧ’ ಎಂಬ ಚಿತ್ರದ ಮೂರನೇ ಹಾಡನ್ನು (Song) ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

    ಕಾಶ್ಮೀರದ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿರುವ ಈ ಹಾಡಿನಲ್ಲಿ ವಿಜಯ್‍, ತ್ರಿಷಾ ಮುಂತಾದವರು ಕಾಣಿಸಿಕೊಂಡಿದ್ದು, ಜೆ.ವಿ. ಸುಧಾನ್ಶು ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವರದರಾಜ್‍ ಚಿಕ್ಕಬಳ್ಳಾಪುರ ಸಾಹಿತ್ಯ ರಚಿಸಿದ್ದಾರೆ. ಇದನ್ನೂ ಓದಿ:ಮಗಳ ಮದುವೆ ಖಚಿತ ಪಡಿಸಿದ ಆಮೀರ್ ಖಾನ್: ಇರಾ ಮ್ಯಾರೇಜ್ ಡೇಟ್ ಫಿಕ್ಸ್

    ‘ಲಿಯೋ’ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಲಲಿತ್ ಕುಮಾರ್ ನಿರ್ಮಿಸಿದ್ದು, ಲೋಕೇಶ್‍ ಕನಕರಾಜ್‍ (Lokesh Kanakaraj) ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ಮಾಸ್ಟರ್’ ನಂತರ ಲೋಕೇಶ್‍ ಕನಕರಾಜ್‍ ಮತ್ತು ವಿಜಯ್‍ ಜೊತೆಯಾಗಿ ಕೆಲಸ ಮಾಡಿರುವ ಎರಡನೇ ಚಿತ್ರ  ಇದು.

     

    ಬಾಲಿವುಡ್ ನಟ ಸಂಜಯ್ ದತ್  ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದು, ವಿಜಯ್ ಮತ್ತು ಸಂಜಯ್ ದತ್ ಜೊತೆಗೆ ತ್ರಿಷಾ, ಅರ್ಜುನ್‌ ಸರ್ಜಾ, ಪ್ರಿಯಾ ಆನಂದ್‍, ಮನ್ಸೂರ್ ಅಲಿ ಖಾನ್‍, ಗೌತಮ್ ಮೆನನ್, ಮಿಸ್ಕಿನ್ ಮುಂತದವರು ಈ ಚಿತ್ರದಲ್ಲಿ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿರತ್ನಂ-ಕಮಲ್ ಹಾಸನ್ ಸಿನಿಮಾ: ಬಿಗ್ ಅಪ್ ಡೇಟ್

    ಮಣಿರತ್ನಂ-ಕಮಲ್ ಹಾಸನ್ ಸಿನಿಮಾ: ಬಿಗ್ ಅಪ್ ಡೇಟ್

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದುವೆ ವಿಚಾರದಲ್ಲಿ ನಟಿ ತ್ರಿಷಾಗೆ ನಟರೇ ಮೋಸ ಮಾಡಿದರು: ಏನಿದು ವಿವಾದ?

    ಮದುವೆ ವಿಚಾರದಲ್ಲಿ ನಟಿ ತ್ರಿಷಾಗೆ ನಟರೇ ಮೋಸ ಮಾಡಿದರು: ಏನಿದು ವಿವಾದ?

    ಮಿಳಿನ ಹೆಸರಾಂತ ನಟಿ ತ್ರಿಷಾ (Trisha) ಮದುವೆ ವಿಚಾರವಾಗಿ ದಿನಕ್ಕೊಂದು ಸುದ್ದಿ ಬರುತ್ತಿವೆ. ಮೊನ್ನೆಯಷ್ಟೇ ‘ಪೊನ್ನಿಯನ್ ಸೆಲ್ವನ್ 2’ ಪತ್ರಿಕಾಗೋಷ್ಠಿಯಲ್ಲಿ ತ್ರಿಷಾ ಮದುವೆ ವಿಚಾರ ಮಾತನಾಡಿದ್ದರು. ‘ಮದುವೆ ಎನ್ನುವುದು ಕನಸಿನ ಮಾತು, ನನ್ನ ಜೀವನ ಅಭಿಮಾನಿಗಳಿಗೆ ಮೀಸಲು’ ಎಂದಿದ್ದರು. ಅಲ್ಲಿಗೆ ನಲವತ್ತರ ಸನಿಹದ ತ್ರಿಷಾ ಮದುವೆ ಆಗಲ್ಲವಾ ಎನ್ನುವ ಅನುಮಾನ ಮೂಡಿತ್ತು.

    ಈ ಹಿಂದೆ ತ್ರಿಷಾ ಉದ್ಯಮಿಯೊಬ್ಬರನ್ನು ಮದುವೆ (Marriage) ಆಗಲಿದ್ದಾರೆ ಎಂದು ಸುದ್ದಿ ಆಗಿತ್ತು. ಎಲ್ಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್ ಆಯಿತು ಎನ್ನುವ ಮಾಹಿತಿ ಹೊರಬಿತ್ತು. ಈ ಹಿಂದೆಯೂ ತ್ರಿಷಾ ಅವರ ಜೀವನದಲ್ಲಿ ಲವ್ ಫೆಲ್ಯೂವರ್ ಆಗಿದ್ದರಿಂದ ಮದುವೆ ವಿಚಾರವನ್ನೇ ಅವರು ಮರೆತಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ:ವರುಣ್ ಧವನ್ ಜೊತೆ ಇಂಗ್ಲೆಂಡ್‌ಗೆ ಹಾರಿದ ಸಮಂತಾ

    ಈ ಮದುವೆ ವಿಚಾರವಾಗಿ ನಟ, ವಿವಾದಿತ ಯೂಟ್ಯೂಬರ್ ಬೈಲ್ವಾನ್ ರಂಗನಾಥನ್ (Bailwan Ranganathan) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇವರ ಹೇಳಿಕೆ ತಮಿಳು ಚಿತ್ರೋದ್ಯಮದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇಬ್ಬರು ಸ್ಟಾರ್ ನಟರ ಅಭಿಮಾನಿಗಳು ಬೈಲ್ವಾನ್ ರಂಗನಾಥನ್ ವಿರುದ್ಧ ಹರಿಹಾಯ್ದಿದ್ದಾರೆ.

    ತ್ರಿಷಾ ಈವರೆಗೂ ಮದುವೆ ಆಗದೇ ಇರುವುದಕ್ಕೆ ಕಾರಣ ಸ್ಟಾರ್ ನಟರಾದ ಸಿಂಬು (Simbu) ಮತ್ತು ರಾಣಾ (Rana) ಎಂದು ಬೈಲ್ವಾನ್ ಹೇಳಿದ್ದಾರೆ. ಇಬ್ಬರ ಜೊತೆಯೂ ತ್ರಿಷಾ ಲವ್ ಇತ್ತು. ಒಬ್ಬರ ನಂತರ ಒಬ್ಬರು ತ್ರಿಷಾಗೆ ಮೋಸ ಮಾಡಿ ದೂರವಾದರು. ಇದರಿಂದಾಗಿ ತ್ರಿಷಾ ಮದುವೆ ಆಗದೇ ಹಾಗೆಯೇ ಉಳಿದುಕೊಂಡಿದ್ದಾರೆ ಎಂದು ಬೈಲ್ವಾನ್ ಮಾತನಾಡಿದ್ದಾರೆ.

    ಬೈಲ್ವಾನ್ ರಂಗನಾಥನ್ ಈ ರೀತಿಯ ಹೇಳಿಕೆಗಳನ್ನು ಕೊಡುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ ಅನೇಕ ಕಲಾವಿದರ ಮತ್ತು ನಿರ್ದೇಶಕರ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ. ಅವೆಲ್ಲವೂ ವಿವಾದವಾಗಿಯೇ ಕೊನೆಗೊಂಡಿವೆ. ಈ ಬಾರಿ ತ್ರಿಷಾ ಗೂಡಿಗೆ ಅವರು ಕಲ್ಲು ಹೊಡೆದಿದ್ದಾರೆ. ಈ ಕುರಿತು ತ್ರಿಷಾ ಏನು ಹೇಳುತ್ತಾರೋ ಕಾದು ನೋಡಬೇಕು.

  • ಭಯ ಪಡಬೇಡಿ: ಈ ವಾರ ಬರೋಬ್ಬರಿ 20 ಸಿನಿಮಾಗಳು ರಿಲೀಸ್

    ಭಯ ಪಡಬೇಡಿ: ಈ ವಾರ ಬರೋಬ್ಬರಿ 20 ಸಿನಿಮಾಗಳು ರಿಲೀಸ್

    ವರ್ಷ ಚಿತ್ರೋದ್ಯಮದ ಮತ್ತೊಂದು ದಾಖಲೆಯ ವಾರಕ್ಕೆ ಸಿದ್ಧವಾಗುತ್ತಿದೆ. ಕರ್ನಾಟಕದಲ್ಲಿ ಈ ವಾರ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿ ಬರೋಬ್ಬರಿ 20ಕ್ಕೂ ಹೆಚ್ಚು ಚಿತ್ರಗಳು (Movie) ಬಿಡುಗಡೆ ಆಗುತ್ತಿವೆ. ಕನ್ನಡದಲ್ಲೇ ಆರು ಚಿತ್ರಗಳು ಈ ಶುಕ್ರವಾರ ತೆರೆ ಕಾಣುತ್ತಿವೆ. ಲೂಸ್ ಮಾದ ಯೋಗಿ, ಡಾಲಿ ಧನಂಜಯ್ ಸಿನಿಮಾಗಳು ಇದರಲ್ಲಿ ಸೇರಿವೆ. ವರ್ಷಾಂತ್ಯಕ್ಕೆ ಈ ಪ್ರಮಾಣದಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿರುವುದು ನಿಜಕ್ಕೂ ಅಭಿಮಾನಿಗಳ ಪಾಲಿಗೆ ಸಂಭ್ರಮವೋ ಸಂಕಟವೋ ಗೊಂದಲವಾಗಿದೆ.

    ಡಾಲಿ ಧನಂಜಯ್ (Dhananjay) ನಟನೆಯ ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’, ಲೂಸ್ ಮಾದ ಯೋಗೀಶ್ (Yogi) ನಟನೆಯ ‘ನಾನು ಮತ್ತು ಸರೋಜ’, ಯೋಗರಾಜ್ ಭಟ್ ಅವರ ಬ್ಯಾನರ್ ನಿಂದ ತಯಾರಾದ ‘ಪದವಿ ಪೂರ್ವ’, ಹೊಸ ತಂಡದ ‘ಮೇಡ್ ಇನ್ ಇಂಡಿಯಾ’, ‘ಜೋರ್ಡನ್’, ‘ದ್ವಿಪಾತ್ರ’ ಚಿತ್ರಗಳು ಈ ವಾರ ತೆರೆಗೆ ಬರಲು ಸಿದ್ಧವಾಗಿವೆ. ಈ ಕನ್ನಡ ಚಿತ್ರಗಳು ಈ ವಾರ ಬಿಡುಗಡೆ ಆಗುತ್ತಿರುವ ಇತರ ಭಾಷೆಯ ಚಿತ್ರಗಳ ಜೊತೆ ಪೈಪೋಟಿಗೆ ಇಳಿಯಲಿವೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಅರವಿಂದ್‌ಗಾಗಿ ಬೇಡಿಕೆಯಿಟ್ಟ ದಿವ್ಯಾ ಉರುಡುಗ

    ಸ್ಟಾರ್ ನಟ ನಟಿಯರ ಚಿತ್ರಗಳಾದ ತಮಿಳಿನ ಖ್ಯಾತ ನಟಿ ತ್ರಿಶಾ (Trisha) ನಟನೆಯ ‘ರಾಂಗಿ’, ಐಶ್ವರ್ಯ ರಾಜೇಶ್ ನಟನೆಯ ‘ದ ಗ್ರೇಟ್ ಇಂಡಿಯನ್ ಕಿಚನ್, ಬಾಲಿವುಡ್ ನ ವೇದ್, ಟಾಲಿವುಡ್ ನ ಆದಿ ಸಾಯಿಕುಮಾರ್ ನಟನೆಯ ‘ಟಾಪ್ ಗೇರ್’, ಧನಂಜಯ್ ನಟನೆಯ ತೆಲುಗು ಅವತರಣಿಕೆ ‘ಒನ್ಸ್ ಅಪಾನ್ ಎ ಟೈಮ್ ಇನ್ ದೇವರಕೊಂಡ’ ಹೀಗೆ ಇಪ್ಪತ್ತಕ್ಕೂ ಹೆಚ್ಚು ಚಿತ್ರಗಳು ಈ ವಾರ ಕರ್ನಾಟಕದಲ್ಲಿ ಬಿಡುಗಡೆ (Release) ಆಗುತ್ತಿವೆ.

    ಈಗಾಗಲೇ ರಿಲೀಸ್ ಆಗಿರುವ ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿವೆ. ಕಳೆದ ಕೆಲ ವಾರಗಳಿಂದ ರಿಲೀಸ್ ಆಗಿರುವ ಹಲವು ಚಿತ್ರಗಳು ಥಿಯೇಟರ್ ನಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿವೆ. ಹಾಗಾಗಿ ಈ ಪ್ರಮಾಣದ ಸಂಖ್ಯೆಯ ಚಿತ್ರಗಳು ಥಿಯೇಟರ್ ಎಲ್ಲಿಂದ ತರೋದು ಎನ್ನುವುದು ವಿತರಕರ ತಲೆನೋವು ಆಗಿದೆ. ಸಿಕ್ಕಷ್ಟು ಚಿತ್ರಮಂದಿರಗಳಲ್ಲಿ ನಿರ್ಮಾಪಕ ತಮ್ಮ ಚಿತ್ರಗಳನ್ನು ಬಿಡುಗಡೆ ಮಾಡಿ, ಹೊಸ ವರ್ಷವನ್ನು ಸ್ವಾಗತಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 14 ವರ್ಷಗಳ ಬಳಿಕ ಮತ್ತೆ ಒಂದಾದ  ಜನಪ್ರಿಯ ಜೋಡಿ ವಿಜಯ್-ತ್ರಿಷಾ

    14 ವರ್ಷಗಳ ಬಳಿಕ ಮತ್ತೆ ಒಂದಾದ ಜನಪ್ರಿಯ ಜೋಡಿ ವಿಜಯ್-ತ್ರಿಷಾ

    ಮಿಳಿನ ಜನಪ್ರಿಯ ಜೋಡಿ ವಿಜಯ್ ಮತ್ತು ತ್ರಿಷಾ ಒಟ್ಟಾಗಿ ನಟಿಸುವುದಕ್ಕಾಗಿ ಬರೋಬ್ಬರಿ 14 ವರ್ಷಗಳನ್ನು ತಗೆದುಕೊಂಡಿದ್ದಾರೆ. ಹದಿನಾಲ್ಕು ವರ್ಷಗಳ ನಂತರ ಈ ಜೋಡಿ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಇಬ್ಬರು ಅಭಿಮಾನಿಗಳಿಗೆ ಸಹಜವಾಗಿಯೇ ಖುಷಿಯಾಗಿದೆ. ಕಾಲಿವುಡ್ ನಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿದ್ದ ಇವರು, ಕಾರಣಾಂತರಗಳಿಂದ ಮತ್ತೆ ನಟಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

    ಇದೀಗ ಲೋಕೇಶ್ ಕನಕರಾಜ್ ಅವರು ಹೊಸ ಸಿನಿಮಾವೊಂದನ್ನು ಮಾಡುತ್ತಿದ್ದು, ಈ ಚಿತ್ರದಲ್ಲಿ ತ್ರಿಷಾ ನಾಯಕಿಯಾಗಿ ನಟಿಸುತ್ತಿದ್ದರೆ, ವಿಜಯ್ ನಾಯಕ. ಈಗಾಗಲೇ ಸದ್ದಿಲ್ಲದೇ ಚೆನ್ನೈನಲ್ಲಿ ಸಿನಿಮಾ ಕೂಡ ಸೆಟ್ಟೇರಿದೆ. ಸದ್ಯಕ್ಕೆ ಈ ಸಿನಿಮಾಗೆ ದಳಪತಿ 67 ಎಂಬ ಹೆಸರಿನಲ್ಲಿ ಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಟೈಟಲ್‍ ಅನ್ನು ಬಹಿರಂಗ ಪಡಿಸಲಿದ್ದಾರಂತೆ ಚಿತ್ರತಂಡ. ಇದನ್ನೂ ಓದಿ: ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

    ವಿಜಯ್ ಮತ್ತು ತ್ರಿಷಾ ನಟನೆಯ ಕೊನೆಯ ಸಿನಿಮಾ 2008ರಲ್ಲಿ ರಿಲೀಸ್ ಆಗಿತ್ತು. ಕುರುವಿ ಹೆಸರಿನ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ. ಆದರೆ, ಜೋಡಿ ಮಾತ್ರ ಸಖತ್ತಾಗಿತ್ತು. ಯಾಕೆಂದರೆ, ಈ ಹಿಂದೆ ಇದೇ ಜೋಡಿ ಗಿಲ್ಲಿ, ಆದಿ, ತಿರುಪಾಚ್ಚಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಕುರುವಿ ನಂತರ ಇವರು ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹಾಗಾಗಿ ಹೊಸ ಸಿನಿಮಾದ ಬಗ್ಗೆ ಕುತೂಹಲವಂತೂ ಮೂಡಿದೆ.

    Live Tv
    [brid partner=56869869 player=32851 video=960834 autoplay=true]