Tag: Trivandrum

  • 12 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಪೇಂಟರ್!

    12 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಪೇಂಟರ್!

    ತಿರುವನಂತಪುರಂ: ಕೇರಳದ ಕೊಟ್ಟಾಯಂನಲ್ಲಿ ಪೇಂಟಿಂಗ್ ಕೆಲಸಗಾರರೊಬ್ಬರು ಸರ್ಕಾರದ ಕ್ರಿಸ್‍ಮಸ್-ಹೊಸ ವರ್ಷದ ಲಾಟರಿಯ ಮೊದಲ ಬಹುಮಾನವಾದ 12 ಕೋಟಿ ರೂ. ಗೆದ್ದಿದ್ದಾರೆ.

    ಕುಡಯಂಪಾಡಿ ಮೂಲದ ಸದಾನಂದನ್ ಅಲಿಯಾಸ್ ಸದನ್ ಅವರು ಭಾನುವಾರ ಬೆಳಗ್ಗೆ ತಿರುವನಂತಪುರದಲ್ಲಿ ಲಕ್ಕಿ ಡ್ರಾಗೆ ಕೆಲವೇ ಗಂಟೆಗಳ ಮೊದಲು 218582 ಸಂಖ್ಯೆಯ ಲಾಟರಿ ಟಿಕೆಟ್ ಖರೀದಿಸಿದ್ದಾರೆ. ಟಿಕೆಟ್ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಬಹುಮಾನ ಅನೌನ್ಸ್ ಆಗಿದ್ದು, ಸದಾನಂದನ್ ಅವರು ಕ್ರಿಸ್‍ಮಸ್ ನ್ಯೂ ಇಯರ್ ಬಂಪರ್ 12 ಕೋಟಿ ರೂ. ಲಾಟರಿ ಗೆದ್ದಿದ್ದಾರೆ. ಇದನ್ನೂ ಓದಿ: ಕೋವಿಡ್-19 ಪ್ರಕರಣ ಏರಿಕೆ – ಮದುವೆ ನೋಂದಣಿ ಸೇವೆ ಸ್ಥಗಿತ!

    Kerala: ₹12 crore lottery brings splash of color in painting worker's life

    ಈ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇಂದು ಬೆಳಿಗ್ಗೆ ಮಾಂಸವನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗಿದ್ದೆ. ಆಗ ಲಾಟರಿ ಮಾರಾಟಗಾರ ಸೆಲ್ವನ್ ನಿಂದ ಈ ಟಿಕೆಟ್ ಖರೀದಿಸಿದೆ. ಆದರೆ ಈಗ ಟಿಕೆಟ್ ಗೆ ಬಹುಮಾನ ಬಂದಿರುವುದು ಖುಷಿಯಾಗುತ್ತಿದೆ ಎಂದು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

    ಲಾಟರಿಯಿಂದ ಬಂದ ಹಣವನ್ನು ತನ್ನ ಮಕ್ಕಳಾದ ಸನೀಷ್ ಮತ್ತು ಸಂಜಯ್ ಅವರಿಗಾಗಿ ಬಳಸುತ್ತೇನೆ ಎಂದು ಹೇಳಿದ್ದಾರೆ. ಸದಾನಂದನ್ ಅವರು 50 ವರ್ಷಗಳಿಂದ ಪೇಂಟಿಂಗ್ ಅನ್ನು ವೃತ್ತಿ ಜೀವನವಾಗಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಗಳಿಂದ ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ ಪೋಷಕರು

  • ಹಾಡಹಗಲೇ ಕೇರಳದಲ್ಲಿ RSS ಕಾರ್ಯಕರ್ತನ ಬರ್ಬರ ಹತ್ಯೆ

    ಹಾಡಹಗಲೇ ಕೇರಳದಲ್ಲಿ RSS ಕಾರ್ಯಕರ್ತನ ಬರ್ಬರ ಹತ್ಯೆ

    ತಿರುವನಂತಪುರಂ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನನ್ನು ಹಾಡಹಗಲೇ ಹತ್ಯೆ ಮಾಡಿದ ಘಟನೆ ಕೇರಳದ ಮಂಬರಂ ಪಟ್ಟಣದಲ್ಲಿ ನಡೆದಿದೆ.

    ಮೃತ ಸಂಜೀತ್ (27) ತನ್ನ ಹೆಂಡತಿಯನ್ನು ಕೆಲಸದ ಸ್ಥಳಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ತನ್ನ ಪತ್ನಿಯ ಎದುರೇ ದುಷ್ಕರ್ಮಿಗಳು ಹತ್ಯೆಯನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಡೀ ದೇಶದಲ್ಲೇ ಕಾಂಗ್ರೆಸ್ ಅಧೋಗತಿಗೆ ತಲುಪಿದೆ – ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ

    ಈ ಕೃತ್ಯದ ಹಿಂದೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ಕಾರ್ಯಕರ್ತರ ಪಾತ್ರ ಇದೆ ಎಂದು ಬಿಜೆಪಿ ಶಂಕಿಸಿದೆ. ಸಂಜೀತ್ ತನ್ನ ಹೆಂಡತಿಯನ್ನು ಕೆಲಸದ ಸ್ಥಳಕ್ಕೆ ಕರೆದುಕೊಂಡು ಹೋಗುತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅವರನ್ನು ಹಿಂಬಲಿಸಿದ್ದು, ತಮ್ಮ ವಾಹನದಿಂದ ಸಂಜೀತ್ ಬೈಕಿಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ನಿಂದ ಕೆಳಗೆ ಬಿದ್ದಾಗ ಪತ್ನಿಯ ಎದುರೇ ಸಂಜೀತ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

    ಆರ್‍ಎಸ್‍ಎಸ್ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಧ್ಯಕ್ಷ ಕೆ ಸುರೇಂದ್ರನ್ ಇದೊಂದು ಯೋಜಿತ ಕೊಲೆ ಎಂದು ಆರೋಪಿಸಿದ್ದು, ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಲು ಪೊಲೀಸರು ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಆಹಾರ ನಿಗಮದ ವಿಭಾಗೀಯ ಕೇಂದ್ರ ಕಚೇರಿಗೆ ಪಿಯೂಷ್ ಗೋಯಲ್ ಚಾಲನೆ

    ಕಳೆದ ಹತ್ತು ದಿನಗಳಲ್ಲಿ ಇದು ಎರಡನೇ ಕೊಲೆಯಾಗಿದೆ. ಎಸ್‍ಡಿಪಿಐ ಮತ್ತು ಸಿಪಿಐ ನಡುವೆ ಮೈತ್ರಿಯಿಲ್ಲ. ಹೀಗಾಗಿ ನಾನು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಯಲ್ಲಿ ಭಾಗಿಯಾದವರನ್ನು ಬಂಧಿಸುವಂತೆ ಸಿಎಂ ಪಿಣರಾಯಿ ವಿಜಯನ್‍ಗೆ ವಿನಂತಿಸುತ್ತೇನೆ. ಪೊಲೀಸರು ಮತ್ತು ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಸುರೇಂದ್ರನ್ ಕಿಡಿಕಾರಿದ್ದಾರೆ.

  • ಚುನಾವಣೆಯಲ್ಲಿ ಸೋಲು- ಕೊಟ್ಟ ಮಾತು ಉಳಿಸಿಕೊಂಡ  ಮೆಟ್ರೋ ಮ್ಯಾನ್ ಶ್ರೀಧರನ್

    ಚುನಾವಣೆಯಲ್ಲಿ ಸೋಲು- ಕೊಟ್ಟ ಮಾತು ಉಳಿಸಿಕೊಂಡ  ಮೆಟ್ರೋ ಮ್ಯಾನ್ ಶ್ರೀಧರನ್

    ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೆಟ್ರೋಮ್ಯಾನ್ ಇ. ಶ್ರೀಧರನ್ ಅವರು ಚುನಾವಣೆಯಲ್ಲಿ ಸೋಲು ಕಂಡಿದ್ದರೂ, ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಮಾತನ್ನು ಈಡೇರಿಸುವ ಮೂಲಕವಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಪಾಲಿಕೆಯ ವಾರ್ಡ್ 3ರಲ್ಲಿನ ಪರಿಶಿಷ್ಟ ವರ್ಗದ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಕೆಲವರಿಗೆ ಬಾಕಿ ಇರುವ ಬಿಲ್ ಮೊತ್ತ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳ ಗುಂಪೊಂದು ಶ್ರೀಧರನ್ ಅವರ ಬಳಿ ಹೇಳಿಕೊಂಡಿತ್ತು. ಆಗ ವಿದ್ಯುತ್ ಸಂಪರ್ಕ ಮರುಕಲ್ಪಿಸುವ ಭರವಸೆ ನೀಡಿದ್ದರು.

    ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಾಲಕ್ಕಾಡ್ ಪಾಲಿಕೆ ವ್ಯಾಪ್ತಿಯ ಮದುರವೀರನ್ ಕಾಲೋನಿಯ ಜನತೆಗೆ, ನಾನು ಗೆಲ್ಲಲಿ, ಅಥವಾ ಸೋಲಲಿ ಇಲ್ಲಿನ ಎಲ್ಲ ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಸಿಗಲಿದೆ ಎಂಬ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಮಡೆದುಕೊಂಡಿದ್ದಾರೆ.

    ಚುನಾವಣೆಯಲ್ಲಿ ಸೋತ ಬಳಿಕವೂ ತಮ್ಮ ಆಶ್ವಾಸನೆ ಮರೆಯದ ಶ್ರೀಧರನ್, ಕಲ್ಪತ್ತಿಯ ಕೆಎಸ್‍ಇಬಿ ಸಹಾಯಕ ಎಂಜಿನಿಯರ್ ಹೆಸರಿಗೆ ಮಂಗಳವಾರ 81,525 ರೂಪಾಯಿಯ ಚೆಕ್ ರವಾನಿಸಿದ್ದಾರೆ. ಜತೆಗೆ, 11 ಎಸ್‍ಸಿ ಕುಟುಂಬಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಸಹ ವ್ಯವಸ್ಥೆ ಮಾಡಲಾಗಿದೆ.

  • ಕೇಶ ಮಂಡನ ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕಿ ಈಗ ಪಕ್ಷೇತರ ಅಭ್ಯರ್ಥಿ

    ಕೇಶ ಮಂಡನ ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕಿ ಈಗ ಪಕ್ಷೇತರ ಅಭ್ಯರ್ಥಿ

    ತಿರುವನಂತಪುರಂ: ಟಿಕೆಟ್ ಸಿಗದ್ದಕ್ಕೆ ಮನನೊಂದು ಕೇಶಮಂಡನ ಮಾಡಿಕೊಂಡದ್ದ ಕೇರಳ ಕಾಂಗ್ರೆಸ್ ನಾಯಕಿ ಈಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ.

    ಕೇರಳಾ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಲತಿಕಾ ಸುಭಾಷ್ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇತ್ತಮನ್ನೂರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

    ಏಪ್ರಿಲ್ 6ಂದು ನಡೆಯಲಿರುವ ಕೇರಳ ಚುನಾವಣೆಗೆ ಕಾಂಗ್ರೆಸ್‍ನಿಂದ ಲತಿಕಾ ಸೂಭಾಷ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಕಾರಣ ಆಕ್ರೋಶಗೊಂಡು ಕೇರಳ ಮಹಿಳಾ ಕಾಂಗ್ರಸ್ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ತಿರುವನಂತಪುರಂನ ಪಕ್ಷದ ಕಚೇರಿಯ ಮುಂದೆ ಕುಳಿತು ಕೇಶಮಂಡನ ಮಾಡಿಸಿಕೊಂಡು ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿದ್ದರು.

    ಲತಿಕಾ ಎಟ್ಟುಮಣ್ಣೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನು. ಆದರೆ ಪಕ್ಷದ ಮುಖ್ಯಸ್ಥರು ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರು ಇರಲಿಲ್ಲ. ಹೀಗಾಗಿ ಮಹಿಳಾ ಅಭ್ಯರ್ಥಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು.

    “ಕೇರಳದಲ್ಲಿ ಮಹಿಳಾ ಘಟಕದ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ವಹಿಸಿದೆ. ಮಹಿಳಾ ಘಟಕದ ಮುಖಂಡರು ಮತ್ತು ಕಾರ್ಯಕರ್ತರ ಭಾವನೆಗಳಿಗೆ ಬೆಲೆ ಕೊಡಲಾಗುತ್ತಿಲ್ಲ. ಮಹಿಳಾ ಘಟಕದ ಒಬ್ಬರೇ ಒಬ್ಬ ಕಾರ್ಯಕರ್ತರಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಟಿಕೆಟ್ ಘೋಷಿಸಿಲ್ಲ” ಎಂದು ಆರೋಪಿಸಿ ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಲತಿಕಾ ಸುಭಾಷ್ ಪತ್ರ ಬರೆದಿದ್ದರು.

    ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿರುವ 92 ಕ್ಷೇತ್ರಗಳ ಪೈಕಿ 86 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ 6 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೆಲ ದಿನಗಳಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ತಿಳಿಸಿದ್ದಾರೆ. ಕಾಂಗ್ರೆಸ್ ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಗೋಚರಿಸುತ್ತದೆ. 92 ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ 46 ಕಾಂಗ್ರೆಸ್ ಅಭ್ಯರ್ಥಿಗಳು 25-50 ವರ್ಷದೊಳಗಿನವರೇ ಆಗಿದ್ದಾರೆ. ಬಾಕಿ ಉಳಿದ ಶೇ.50ರಷ್ಟು ಕ್ಷೇತ್ರಗಳಲ್ಲಿ ಹಿರಿಯರಿಗೆ ಅವಕಾಶ ನೀಡಲಾಗಿದೆ.

  • ಕೇರಳ ಪೊಲೀಸರಿಂದ ಸನ್ನಿ ಲಿಯೋನ್ ವಿಚಾರಣೆ

    ಕೇರಳ ಪೊಲೀಸರಿಂದ ಸನ್ನಿ ಲಿಯೋನ್ ವಿಚಾರಣೆ

    ತಿರುವನಂತಪುರಂ: ಬಾಲಿವುಡ್ ಮಾದಕ ಚೆಲುವೆ ಸನ್ನಿ ಲಿಯೋನ್ ಕಾರ್ಯಕ್ರಮಗಳಿಗೆ ಭಾಗವಹಿಸುವುದಾಗಿ 29 ಲಕ್ಷ ಪಡೆದು ವಂಚನೆ ಮಾಡಿರುವ ಆರೋಪದಡಿ ಕೇರಳ ಪೊಲೀಸರಿಂದ ತೀವ್ರ ವಿಚಾರಣೆ ನಡೆಸಿದ್ದಾರೆ.

    ದೂರುಗಳನ್ವಯ ಕೇರಳ ಪೊಲೀಸರು ಸನ್ನಿ ಲಿಯೋನ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಕೊರೊನಾ ಕಾರಣದಿಂದ ಭಾಗವಹಿಸಲು ಸಾಧ್ಯವಾಗಿಲ್ಲ. ನಾನು ಕಾರ್ಯಕ್ರಮಕ್ಕೆ ಭಾಗವಹಿಸಲು 12 ಲಕ್ಷ ರೂಪಾಯಿ ಮಾತ್ರ ಪಡೆದಿದ್ದೇನೆ, ಆ ಹಣವನ್ನು ಹಿಂದಿರುಗಿಸುತ್ತೇನೆ. ಅಲ್ಲದೇ 5 ಬಾರಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಹೀಗಾಗಿ ಎಲ್ಲದಕ್ಕೂ ಕಾರಣ ಆ ಕಾರ್ಯಕ್ರಮದ ಸಂಘಟಕರು ಎಂದು ಸನ್ನಿ ಲಿಯೋನಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

    ಕೊಚ್ಚಿಯಲ್ಲಿ ಏರ್ಪಡಿಸಲಾಗಿದ್ದ 2 ಕಾರ್ಯಕ್ರಮಗಳಿಗೆ ಭಾಗವಹಿಸುವುದಾಗಿ ಹೇಳಿ ಸನ್ನಿ 29 ಲಕ್ಷ ಪಡೆದಿದ್ದಾರೆ. ಬಳಿಕ ಕಾರ್ಯಕ್ರಮಕ್ಕೆ ಬರದೆ ವಂಚಿಸಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ದೂರು ನೀಡಿರುವ ಹಿನ್ನೆಲೆಯಲ್ಲಿ ಸನ್ನಿ ಲಿಯೋನ್ ಅವರನ್ನು ವಿಚಾರಣೆ ಮಾಡಲಾಗಿತ್ತು.

  • ಕೊರೊನಾ ಸೂಪರ್ ಸ್ಪ್ರೆಡರ್ಸ್ ನಿಯಂತ್ರಿಸಲು ಕೇರಳದಲ್ಲಿ ಕಮಾಂಡೋಗಳ ಬಳಕೆ

    ಕೊರೊನಾ ಸೂಪರ್ ಸ್ಪ್ರೆಡರ್ಸ್ ನಿಯಂತ್ರಿಸಲು ಕೇರಳದಲ್ಲಿ ಕಮಾಂಡೋಗಳ ಬಳಕೆ

    ತಿರುವನಂತಪುರಂ: ಕೊರೊನಾ ನಿಯಂತ್ರಣಕ್ಕೆ ಕೇರಳ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಗ್ರಾಮವೊಂದರಲ್ಲಿ 25 ಮಂದಿ ಕಮಾಂಡೋಗಳನ್ನು ನೇಮಕ ಮಾಡಿದೆ.

    ತಿರುವನಂತಪುರಂ ಸಮೀಪದ ಸಮುದ್ರ ತೀರ ಪ್ರದೇಶದ ಪೂಂತುರ ಗ್ರಾಮದಲ್ಲಿ ಕೊರೊನಾ ಸೂಪರ್ ಸ್ಪ್ರೆಡರ್ಸ್ ನಿಂದ ಕೇರಳದ ಮೊದಲ ಕ್ಲಸ್ಟರ್ ಆಗಿ ಪರಿವರ್ತನೆ ಆಗಿದೆ ಎಂದು ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಪರ್ ಸ್ಪ್ರೆಡರ್ಸ್ ಗಳನ್ನು ನಿಯಂತ್ರಿಸಲು ಕಮಾಂಡೋಗಳನ್ನು ಬಳಸಿಕೊಳ್ಳಲಾಗುತ್ತಿದೆ.

    ಗ್ರಾಮಕ್ಕೆ ಕಮಾಂಡೋ, ಅಂಬುಲೆನ್ಸ್, ಪೊಲೀಸ್, ವಾಹನಗಳನ್ನು ಭಾರೀ ಸಂಖ್ಯೆಯಲ್ಲಿ ಕಳುಹಿಸಿದೆ. ಅಲ್ಲದೇ ಗ್ರಾಮದಲ್ಲಿ ಸ್ಪೀಕರ್ ಗಳ ಮೂಲಕ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಅನಗತ್ಯವಾಗಿ ಮನೆಯಿಂದ ಹೊರ ಬರುವ ಗ್ರಾಮಸ್ಥರನ್ನು ಅಂಬುಲೆನ್ಸ್ ಮೂಲಕ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸುತ್ತಿದ್ದಾರೆ.

    ಒಬ್ಬರಿಂದ ಆರು ಜನರಿಗೆ ಸೋಂಕು ಹಬ್ಬಿದರೆ ಅವರನ್ನು ಸೂಪರ್ ಸ್ಪ್ರೆಡರ್ ಎಂದು ಭಾವಿಸಲಾಗುತ್ತದೆ. ಕೇರಳದಲ್ಲಿ ಮೊದಲ ಕ್ಲಸ್ಟರ್ ಆಗಿ ಪೂಂತುರ ಗ್ರಾಮ ಪರಿವರ್ತನೆ ಆಗುತ್ತಿದೆ. ಈ ಗ್ರಾಮದಲ್ಲಿ ಹಲವರು ಸೂಪರ್ ಸ್ಪ್ರೆಡರ್ ಗಳನ್ನು ಗುರುತಿಸಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ.

    ಸೂಪರ್ ಸ್ಪ್ರೆಡರ್ ಗಳಲ್ಲಿ ಮೊದಲು ಆ ಪ್ರದೇಶದ ಮೀನು ವ್ಯಾಪಾರಿ ತಮಿಳುನಾಡಿಗೆ ಭೇಟಿ ನೀಡಿ ಅಲ್ಲಿನ ಸ್ಥಳೀಯ ಕುಮಾರಿಚಂದ ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ. ಕೋವಿಡ್ ಸೋಂಕಿನ ಪತ್ತೆ ಕಾರ್ಯದಲ್ಲಿ ಪಾಸಿಟಿವ್ ವರದಿ ಬಂದಿರುವವರು ಸ್ಥಳೀಯ ಮಾರುಕಟ್ಟೆಗೆ ಭೇಟಿ ನೀಡಿದ್ದರು. ಅಲ್ಲದೇ ಪೂಂತುರ ಗ್ರಾಮದ ನಿವಾಸಿಗಳಾಗಿದ್ದರು. ಈ ಪ್ರದೇಶ ಕೆಲ ವಾರ್ಡ್ ಗಳಲ್ಲಿ ಸೋಂಕಿನ ಹರಡುವಿಕೆ ಹೆಚ್ಚಾಗಿತ್ತು. ಐದು ದಿನಗಳಲ್ಲಿ 600 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, 119ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ.

    ಒಬ್ಬ ಮೀನುಗಾರನಿಗೆ ಪಾಟಿಸಿವ್ ಪ್ರಕರಣ ಬಂದಿದ್ದು, ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 120 ಮಂದಿ ಹಾಗೂ ಆತನನ್ನು ಭೇಟಿ ಮಾಡಿದ್ದ 150 ಮಂದಿಯನ್ನು ಗುರುತಿಸಲಾಗಿದೆ. ಪರಿಣಾಮ ಆ ಪ್ರದೇಶದಲ್ಲಿ ಹೆಚ್ಚಿನ ಕೋವಿಡ್ ಪರೀಕ್ಷೆಗಳನ್ನು ನಿರ್ವಹಿಸಲಾಗುತ್ತಿದೆ. ಗ್ರಾಮದ ಹಲವು ವಾರ್ಡ್ ಗಳಲ್ಲಿ ಕೊರೊನಾ ಭಾರೀ ಸಂಖ್ಯೆಯಲ್ಲಿ ವ್ಯಾಪಿಸಿರುವ ಅನುಮಾನವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

  • ಮಗಳ ಮದುವೆಯಲ್ಲಿ ಹಾಡುತ್ತಲೇ ಕುಸಿದು ಬಿದ್ದು ಜೀವಬಿಟ್ಟ ತಂದೆ – ವಿಡಿಯೋ

    ಮಗಳ ಮದುವೆಯಲ್ಲಿ ಹಾಡುತ್ತಲೇ ಕುಸಿದು ಬಿದ್ದು ಜೀವಬಿಟ್ಟ ತಂದೆ – ವಿಡಿಯೋ

    ತಿರುವನಂತಪುರ: ಸಂಭ್ರಮದಿಂದ ಕೂಡಿದ್ದ ಮದುವೆ ಮನೆಯಲ್ಲಿ ಮಧುವಿನ ತಂದೆ ಹಾಡುತ್ತಲೇ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.

    ಪಿ ವಿಷ್ಣು ಪ್ರಸಾದ್ (55) ಸಾವನ್ನಪ್ಪಿದ್ದು, ಅವರು ತಿರುವನಂತಪುರಂನಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

    ವಿಷ್ಣು ಪ್ರಸಾದ್ ಅವರ ಕಿರಿಯ ಮಗಳ ವಿವಾಹ ಕಾರ್ಯಕ್ರಮ ಶನಿವಾರ ನಡೆಯುತಿತ್ತು. ಈ ವೇಳೆ ಸಂಭ್ರಮದಿಂದಲೇ ವೇದಿಕೆ ಮೇಲೆ ತೆರಳಿದ್ದ ಪ್ರಸಾದ್ ಅವರು ಹಾಡು ಹಾಡುತ್ತಿದ್ದರು. ಆದರೆ ಕ್ಷಣಮಾತ್ರದಲ್ಲಿ ಇದಕ್ಕಿದ್ದಂತೆ ವೇದಿಕೆ ಮೇಲೆ ಕುಸಿದು ಬಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ವಿಫಲವಾಗಿತ್ತು.

    ಕೊಲ್ಲಂನಲ್ಲಿ ಶನಿವಾರ ಮದುವೆ ಕಾರ್ಯಕ್ರಮದ ವೇಳೆ ಘಟನೆ ನಡೆದಿದ್ದು, ಮದುವೆಯಲ್ಲಿ ಮಗಳಿಗಾಗಿಯೇ ಮಲೆಯಾಳಂ ಹಾಡೊಂದನ್ನು ಆರ್ಪಿಸಿ ಹಾಡುತ್ತಿದ್ದರು. ಪೊಲೀಸರು ನೀಡಿರುವ ಮಾಹಿತಿ ಅನ್ವಯ ಪ್ರಸಾದ್ ಅವರು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿದ್ದರು.

    ತಂದೆಯ ಸಾವಿನ ಸುದ್ದಿಯನ್ನ ಮಗಳಿಗೆ ತಿಳಿಸಿದರೆ ಮದುವೆ ಕಾರ್ಯಕ್ರಮ ಎಲ್ಲಿ ನಿಂತು ಹೋಗುತ್ತದೆ ಎಂದು ಭಯಪಟ್ಟ ಕುಟುಂಬಸ್ಥರು ಮಗಳಿಗೆ ತಿಳಿಸದೆಯೇ ಮದುವೆ ಕಾರ್ಯಕ್ರಮ ನಡೆಸಿದ್ದಾರೆ. ಮಗಳು ತಂದೆಯ ಆರೋಗ್ಯ ಬಗ್ಗೆ ವಿಚಾರಿಸಿದ್ದು, ಈ ವೇಳೆ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರವೇ ಮದುವೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿ ಹೇಳಿದ್ದಾರೆ. ಆ ಮೂಲಕ ವಿಷ್ಣುಪ್ರಸಾದ್ ಅವರ ಆಸೆಯನ್ನ ಪೂರ್ತಿಗೊಳಿಸಿದ್ದಾರೆ.

    ತಂದೆಯ ಹೆಸರು ಹೊಂದಿರುವ ವರನನ್ನೇ ವಿಷ್ಣು ಪ್ರಸಾದ್ ಅವರ ಪುತ್ರಿ ವಿವಾಹವಾಗಿದ್ದು, ಭಾನುವಾರ ಮದುವೆ ಕಾರ್ಯಕ್ರಮ ನಡೆದ ಬಳಿಕ ಸೋಮವಾರ ವಿಷ್ಣುಪ್ರಸಾದ್ ಅವರ ಅಂತಿಮ ಸಂಸ್ಕಾರ ನಡೆಸಲಾಗಿದೆ. ವಿಷ್ಣು ಪ್ರಸಾದ್ ಅವರು ತಿರುವನಂತಪುರಂನ ಕರಮನ ಪೊಲೀಸ್ ಠಾಣೆಯಲ್ಲಿ ಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ನಿವೃತ್ತಿಗೆ ಒಂದು ವರ್ಷ ಮಾತ್ರ ಬಾಕಿ ಇತ್ತು ಎಂಬ ಮಾಹಿತಿ ಲಭಿಸಿದೆ. ಪೊಲೀಸ್ ಅಧಿಕಾರಿಯ ಸಾವಿಗೆ ಕೇರಳ ಸಿಎಂ ಪಿಣಾರಾಯಿ ವಿಜಯನ್ ಅವರು ಕೂಡ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

  • ಲೈಂಗಿಕತೆಗಾಗಿ ಪತ್ನಿಯರ ಅದಲು, ಬದಲು – ನಾಲ್ವರು ಅರೆಸ್ಟ್

    ಲೈಂಗಿಕತೆಗಾಗಿ ಪತ್ನಿಯರ ಅದಲು, ಬದಲು – ನಾಲ್ವರು ಅರೆಸ್ಟ್

    ತಿರುವನಂತಪುರಂ: ಲೈಂಗಿಕ ಸುಖಕ್ಕಾಗಿ ಪತ್ನಿಯನ್ನು ವಿನಿಮಯ ಮಾಡಿಕೊಳ್ಳಲು ಯತ್ನಿಸಿದ್ದ ನಾಲ್ವರು ಪುರುಷರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾಯಂಕುಳಂ ಟೌನ್ ವ್ಯಾಪ್ತಿಯನ್ನು ನಾಲ್ವರನ್ನು ಬಂಧಿಸಿದ್ದಾರೆ.

    ಹೊಸಬರೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಉದ್ದೇಶದಿಂದ ಪತಿ ತನ್ನ ಪತ್ನಿಯನ್ನು ಇದಕ್ಕೆ ಒಪ್ಪಿಕೊಳ್ಳುವಂತೆ ಬಲವಂತ ಮಾಡಿದ ಹಿನ್ನೆಲೆಯಲ್ಲಿ ಆಕೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸಿದ ಪೊಲೀಸರು ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಈ ದಂಧೆ ನಡೆಯುತ್ತಿರುವ ಮಾಹಿತಿ ತನಿಖೆ ಬೆಳಕಿಗೆ ಬಂದಿದೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ‘ವೈಫ್ ಸ್ವಾಪಿಂಗ್’ ಕೇರಳದಲ್ಲಿ ಆರಂಭವಾಗಿದ್ದು, ಆ್ಯಪ್ ನೆರವಿನಿಂದ ಸಂದೇಶ ರವಾನಿಸಿ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

    ಬ್ಲೆಸರಿನ್, ಕಿರಣ್, ಸೀಡಿ, ಉಮೇಶ್ ಎಂಬವರು ಬಂಧಿತ ಆರೋಪಿಗಳಾಗಿದ್ದು, ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 366 ಅಡಿ ಪ್ರಕರಣ ದಾಖಲಾಗಿದೆ.

  • ತುಲಾಭಾರ ಸೇವೆ ವೇಳೆ ಗಾಯಗೊಂಡ ಶಶಿ ತರೂರ್- ನೆಟ್ಟಿಗರಿಂದ ಟ್ರೋಲ್

    ತುಲಾಭಾರ ಸೇವೆ ವೇಳೆ ಗಾಯಗೊಂಡ ಶಶಿ ತರೂರ್- ನೆಟ್ಟಿಗರಿಂದ ಟ್ರೋಲ್

    ತಿರುವನಂತಪುರಂ: ದೇವಾಲಯದಲ್ಲಿ ತುಲಾಭಾರ ಸೇವೆ ನೀಡಲು ಮುಂದಾಗಿ ತಲೆಗೆ ಪೆಟ್ಟು ಮಾಡಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿತರೂರ್ ರನ್ನು ಟ್ವಿಟ್ಟಿಗರು ಕಾಲೆಳೆದಿದ್ದು, ಹೆಲ್ಮೆಟ್ ಧರಿಸಿ ದೇವರ ಸೇವೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದರ ನಡುವೆ ಮುಂದಿನ ಸಮಯದಲ್ಲಿ ಹೆಲ್ಮೆಟ್ ಧರಿಸಿ ತುಲಾಭಾರ ಮಾಡಿಸಿಕೊಳ್ಳುವಂತೆ ಕುಟುಂಬಸ್ಥರು ಕೋರುತ್ತಿದ್ದಾರೆ ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

    ತುಲಾಭಾರ ಸೇವೆ ವೇಳೆ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಶಶಿ ತರೂರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿ ಕೆಲ ಮಂದಿ ಕಾಲೆಳೆದಿದ್ದರು. ತುಲಾಭಾರ ಮಾಡುವ ವೇಳೆ ಹೆಲ್ಮೆಟ್ ಧರಿಸುವಂತೆ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸ್ಕ್ರೀನ್ ಶಾಟ್ ಶೇರ್ ಮಾಡಿರುವ ಶಶಿ ತರೂರ್ ನನ್ನ ಕುಟುಂಬ ಕೂಡ ಮುಂದಿನ ಬಾರಿ ಇದನ್ನೇ ಬಯಸುತ್ತಿದೆ ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಇತ್ತ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ರಾಜಕೀಯ ಪ್ರಚಾರ ವೇಳೆಯೇ ಶಶಿ ತರೂರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ತಿರುವನಂತಪುರಂನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು, ಶಶಿ ತರೂರ್ ಅವರ ಆರೋಗ್ಯ ವಿಚಾರಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿ ಫೋಟೋ ಪೋಸ್ಟ್ ಮಾಡಿರುವ ಶಶಿ ತರೂರ್, ನಿರ್ಮಲಾ ಅವರ ಸೌಜನ್ಯಕ್ಕೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

  • ಗಿನ್ನಿಸ್ ದಾಖಲೆ ಬರೆದಿದ್ದ ಏಷ್ಯಾದ ಹಿರಿಯ ಆನೆ ಸಾವು

    ಗಿನ್ನಿಸ್ ದಾಖಲೆ ಬರೆದಿದ್ದ ಏಷ್ಯಾದ ಹಿರಿಯ ಆನೆ ಸಾವು

    ತಿರುವನಂತಪುರಂ: ಏಷ್ಯಾದ ಅತ್ಯಂತ ಹಿರಿಯ ಸಾಕಾನೆ ಎಂಬ ದಾಖಲೆ ಬರೆದಿದ್ದ ದಾಕ್ಷಾಯಿಣಿ ಆನೆ ತನ್ನ 88 ವರ್ಷದಲ್ಲಿ ಕೊನೆಯುಸಿರೆಳೆದಿದ್ದೆ.

    ಕೇರಳ ಪಪ್ಪನಮ್ ಕೋಡೆ ಕೇಂದ್ರದಲ್ಲಿದ್ದ ದಾಕ್ಷಾಯಿಣಿ ತನ್ನ 2016ರಲ್ಲಿ ಗಿನ್ನಿಸ್ ದಾಖಲೆಯನ್ನು ಬರೆದಿತ್ತು. ಆದರೆ ವಯೋಸಹಜ ಅನಾರೋಗ್ಯದಿಂದ ಮಂಗಳವಾರ ಸಾವನ್ನಪ್ಪಿದೆ.

    2016ರಲ್ಲಿ ದಾಕ್ಷಾಯಿಣಿ ಆನೆಗೆ `ಅಜ್ಜಿ’ ಎಂಬ ಬಿರುದು ನೀಡಲಾಗಿತ್ತು. ಈ ಮೂಲಕ ಗಿನ್ನಿಸ್ ಬುಕ್‍ನಲ್ಲಿ ಸ್ಥಾನ ಪಡೆದಿತ್ತು. ಅಲ್ಲದೆ ಅಂಚೆ ಇಲಾಖೆ ದಾಕ್ಷಾಯಣಿ ಹೆಸರಿನಲ್ಲಿ ಪೋಸ್ಟಲ್ ಸ್ಟಾಂಪ್ ಕೂಡ ನೀಡಿ ಗೌರವಿಸಿತ್ತು.

    ಕೇರಳ ಪದ್ಮನಾಭ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ‘ಅರಟ್ಟು’ ಮೆರವಣಿಗೆಯಲ್ಲಿ ದಾಕ್ಷಾಯಿಣಿ ಭಾಗವಹಿಸುತ್ತಿತ್ತು. ದಾಕ್ಷಾಯಿಣಿ ತನ್ನ ಸಾಧು ಸ್ವಭಾವದಿಂದ ಎಲ್ಲರ ಮನಗೆದ್ದಿತ್ತು ಎಂದು ಆನೆಯ ನೋಡಿಕೊಳ್ಳುತ್ತಿದ್ದ ಚೆಂಗಲೂರ್ ಮಹಾದೇವ್ ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

    ದಾಕ್ಷಾಯಿಣಿಯನ್ನು ಹೊರತು ಪಡಿಸಿದರೆ ಥೈಲ್ಯಾಂಡ್ ನಲ್ಲಿ 83 ವರ್ಷದ ಆನೆ 2ನೇ ಸ್ಥಾನವನ್ನು ಪಡೆದಿದ್ದು, ಸಾಮಾನ್ಯವಾಗಿ ಆನೆಗಳು ಮನುಷ್ಯನಷ್ಟೇ ಆಯುಷ್ಯವನ್ನು ಹೊಂದಿರುತ್ತವೆ. ಕೆಲ ಗಂಡಾನೆಗಳು 120 ವರ್ಷಗಳು ಬದುಕಬಹುದಾಗಿದ್ದು, ಆದರೆ ಸಾಕಾನೆಗಳಲ್ಲಿ ದಾಕ್ಷಾಯಿಣಿ ಅತಿ ಹೆಚ್ಚು ವರ್ಷ ಬದುಕಿದ ಹೆಗ್ಗಳಿಕೆಯನ್ನು ಪಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv