Tag: Trivandrum

  • ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ

    ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ದೇಶಾದ್ಯಂತ ಹಲವರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಇತ್ತ ಅಯ್ಯಪ್ಪ ಸನ್ನಿಧಿಯ 18 ಮೆಟ್ಟಿಲುಗಳ ಎದುರಿನ ಅಶ್ವತ್ಥ ವೃಕ್ಷದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

    ಅಯ್ಯಪ್ಪ ಸನ್ನಿಧಿಗೆ ಭಕ್ತರು ತೆರಳುವ ಮುನ್ನ ಇರುವ 18 ಮೆಟ್ಟಲ ಬಳಿಯ ಬೃಹತ್ ಅಶ್ವತ್ಥ ಮರಕ್ಕೂ ಭಕ್ತರು ನಮಿಸಿ ಮುಂದೇ ಸಾಗುತ್ತಾರೆ. ಆದರೆ ಇಂದು ಬೆಳಗ್ಗೆ 11.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

    ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಪಡೆದ ಆಗ್ನಿ ಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದ ಭಕ್ತರನ್ನು ವಾಲಿಯ ನಡಪಂಥಲ್ ಬಳಿ ಕೆಲ ಸಮಯ ತಡೆಯಲಾಯಿತು. ಬೆಂಕಿ ನಂದಿಸಿದ ಬಳಿಕ ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

    ಮರದ ಪಕ್ಕದಲ್ಲೇ ಅಗ್ನಿ ಕುಂಡವಿದ್ದು, ಹಲವು ಶತಮಾನಗಳಿಂದ ಅಗ್ನಿ ಕುಂಡದಲ್ಲಿ ಭಕ್ತರು ಸಮರ್ಪಿಸಿದ ತುಪ್ಪ ಕಾಯಿ ಅರ್ಪಿಸುತ್ತಿದ್ದರು ಯಾವುದೇ ಅವಘಡ ನಡೆದ ಬಗ್ಗೆ ಮಾಹಿತಿ ಇಲ್ಲ. ಅಗ್ನಿ ಕುಂಡದ ಮೇಲೆ ಕೊಂಬೆಗಳು ಚಾಚಿಕೊಂಡಿದ್ದರು ಇದುವರೆಗೂ ಬೆಂಕಿಯ ತಾಪದಿಂದ ಮರಕ್ಕೆ ಯಾವುದೇ ಹಾನಿ ಆಗಿರಲಿಲ್ಲ. ಇಂತಹ ಘಟನೆ ಇದೇ ಮೊದಲ ಬಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ.

    ಶತಮಾನಗಳಿಂದ ಮಹಿಳೆಯರ ಪ್ರವೇಶಕ್ಕೆ ನಿಷೇಧವಿದ್ದ ಅಯ್ಯಪ್ಪ ಸನ್ನಿಧಿಗೆ ಜನವರಿ 1 ರಂದು ಮಹಿಳೆಯರ ಪ್ರವೇಶ ನಡೆದಿತ್ತು. ಇದಕ್ಕೆ ಕೇರಳ ಸರ್ಕಾರ ಸಂಪೂರ್ಣ ಬೆಂಬಲ ನೀಡಿತ್ತು. ಸದ್ಯ ಮರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಪಾಯದ ಮುನ್ಸೂಚನೆಯೇ ಎಂಬ ಆತಂಕ ಭಕ್ತರಲ್ಲಿ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟೀಂ ಇಂಡಿಯಾ ಬೌಲರ್‌ಗಳ ಆರ್ಭಟ: 104 ರನ್‍ಗಳಿಗೆ ವಿಂಡೀಸ್ ಆಲೌಟ್

    ಟೀಂ ಇಂಡಿಯಾ ಬೌಲರ್‌ಗಳ ಆರ್ಭಟ: 104 ರನ್‍ಗಳಿಗೆ ವಿಂಡೀಸ್ ಆಲೌಟ್

    ತಿರುವನಂತಪುರಂ: 5ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ಆರ್ಭಟಕ್ಕೆ ವಿಂಡೀಸ್ 104 ರನ್ ಗಳಿಸಿ ಆಲೌಟ್ ಆಗಿದೆ.

    ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ ಪತನ ಮೊದಲ ಓವರ್ ನಿಂದಲೇ ಆರಂಭಗೊಂಡಿತ್ತು. ಭುವನೇಶ್ವರ್ ಕುಮಾರ್ ಎಸೆದ ಮೊದಲ ಓವರ್ ನಲ್ಲೇ ವಿಕೆಟ್ ಕಳೆದುಕೊಳ್ಳಲು ಆರಂಭಿಸಿದ ವಿಂಡೀಸ್ ಅಂತಿಮವಾಗಿ 31.5 ಓವರ್ ಗಳಲ್ಲಿ 104 ರನ್ ಗಳಿಗೆ ಆಲೌಟ್ ಆಯ್ತು.

    ರವೀಂದ್ರ ಜಡೇಜಾ 9.5 ಓವರ್ ಎಸೆದು 34 ರನ್ ನೀಡಿ 4 ವಿಕೆಟ್ ಕಿತ್ತರು. ಜಸ್ ಪ್ರೀತ್ ಬುಮ್ರಾ ಮತ್ತು ಖಲೀಲ್ ಅಹ್ಮದ್ ತಲಾ ಎರಡು ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು. ವಿಂಡೀಸ್ ಪರವಾಗಿ ಮರ್ಲಾನ್ ಸಮ್ಯೂಯೆಲ್ಸ್ 24 ರನ್, ಹೋಲ್ಡರ್ 25 ರನ್ ಗಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!

    ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!

    ತಿರುವನಂತಪುರ: ಬೆಳಗ್ಗೆಯಿಂದಲೂ ಬೂದಿ ಮುಚ್ಚಿದ ಕೆಂಡದಂತ್ತಿದ್ದ ನಿಳಕ್ಕಲ್ ಬಳಿಯ ಅಯ್ಯಪ್ಪ ಭಕ್ತರ ಪ್ರತಿಭಟನೆ ಸಂಜೆ ವೇಳೆಗೆ ಹಿಂಸಾಚಾರಕ್ಕೆ ತಿರುಗಿದ್ದು, ಭಕ್ತರು ಹಾಗೂ ಪೊಲೀಸರ ನಡುವೇ ಕಲ್ಲು ತೂರಾಟಕ್ಕೆ ನಡೆದಿದೆ.

    ನಿಳಕ್ಕಲ್ ಬಳಿ ಬೆಳಗ್ಗೆಯಿಂದ ಶಬರಿಮಲೆಗೆ ತೆರಳುತ್ತಿದ್ದ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮಹಿಳಾ ಭಕ್ತರನ್ನು ತಡೆಯುತ್ತಿದ್ದರು. ಈ ವೇಳೆ ವರದಿ ಮಾಡಲು ತೆರಳಿದ್ದ ಮಹಿಳಾ ಪತ್ರಕರ್ತರ ಮೇಲೂ ದೌರ್ಜನ್ಯ ನಡೆಸಿದ ಭಕ್ತರು ಹಲ್ಲೆ ನಡೆಸಿದ್ದರು. ಇದರ ನಡುವೆಯೇ ಪ್ರತಿಭಟನಕಾರರು ಪೊಲೀಸ್ ಬೈಕನ್ನು ನಾಶ ಪಡಿಸಿದ್ದರು. ಅಲ್ಲದೇ ಪೊಲೀಸ್ ಕ್ಯಾಪ್ ಮೇಲೂ ಕಲ್ಲೆಸೆದಿದ್ದರು.

    ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಮುಂದಾದ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸುವ ಪ್ರಯತ್ನ ನಡೆಸಿದರು.

    ಬೆಳಗ್ಗೆಯಿಂದ ನಿರಂತರವಾಗಿ ಪೊಲೀಸರ ಕಾರ್ಯಕರ್ತರ ನಡುವೇ ವಾಗ್ವಾದ ನಡೆಯುತ್ತಲೇ ಇತ್ತು. ಆದರೂ ಅಯ್ಯಪ್ಪ ದರ್ಶನ ಪಡೆಯಲು ಇಷ್ಟಪಟ್ಟಿದ್ದ ಮಹಿಳಾ ಭಕ್ತರಿಗೆ ಬೀಗಿ ಪೊಲೀಸ್ ಭದ್ರತೆ ನೀಡಿದ್ದ ಪೊಲೀಸರು ಅವರನ್ನು ಅಯ್ಯಪ್ಪ ಬೆಟ್ಟದತ್ತ ಕರೆದ್ಯೊಯಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ಭಕ್ತರು ಪೊಲೀಸ್ ಜೀಪ್ ಸೇರಿದಂತೆ ಕ್ಯಾಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ ಉಳಿಸಿ ಆಂದೋಲನ ಜೋರಾಗಿದೆ.

    ಸುಪ್ರೀಂ ಕೋರ್ಟ್ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಾವೊಬ್ಬ ಮಹಿಳೆಯರು ದೇವಾಲಯಕ್ಕೆ ತೆರಳದಂತೆ ಭಕ್ತರು ಹಾಗೂ ಮಹಿಳಾ ಹೋರಾಟಗಾರರು ಸ್ಥಳದಲ್ಲಿ ಅಡ್ಡಗಟ್ಟಿ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮುಂದಕ್ಕೆ ಬಿಡುತ್ತಿದ್ದಾರೆ. ದೇವಾಲಯದ ಆಡಳಿತ ಮಂಡಳಿಕಾರ್ಯಕರ್ತರು, ಭಕ್ತರು ದೇವಾಲಯದ ಬೆಟ್ಟದ ಕೆಳಭಾಗದ ಅಂದರೆ ದೇವಾಲಯದಿಂದ 20 ಕಿಮೀ ದೂರದ ನಿಳಕ್ಕಲ್ ಬಳಿಯೇ ವಾಹನಗಳನ್ನು ತಡೆಯುತ್ತಿದ್ದಾರೆ.

    ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿರುವ ಭಕ್ತರು ಸ್ಥಳದಲ್ಲಿ ಭದ್ರಕೋಟೆ ನಿರ್ಮಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಮಂಗಳವಾರ ತಿರುವಾಂಕೂರು ಆಡಳಿತ ಮಂಡಳಿ, ಪಂದಳಂ ರಾಜಮನೆತನ ಹಾಗೂ ಸರ್ಕಾರ ನಡುವೆ ಏರ್ಪಡಿಸಿದ್ದ ಸಂಧಾನ ಸಭೆಯೂ ವಿಫಲವಾಗಿದೆ. ಪೊಲೀಸರು ನಡೆಸಬೇಕಾದ ಕಾರ್ಯವನ್ನು ಕಾರ್ಯಕರ್ತರು ಕೈಗೆತ್ತುಕೊಂಡಿದ್ದು ದೇವಾಲಯ ಪ್ರದೇಶದಲ್ಲಿ ಹೈ ಆಲರ್ಟ್ ಘೋಷಣೆ ಮಾಡಲಾಗಿದೆ.

    ಈ ನಡುವೆ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಪತ್ತನಂತಿಟ್ಟಂ ಕ್ಷೇತ್ರದ ಸಂಸದ ಆಂಟೋ ಆ್ಯಂಟನಿ ಅವರು, ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿ ಕೋರ್ಟ್ ತೀರ್ಪು ಜಾರಿಗೆ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ. ದೇವಾಲಯದ ಪ್ರದೇಶದಲ್ಲಿ ಶಾಂತಿ ಕಾಪಾಡಲಿ ಸರ್ಕಾರ ಕೂಡ ಕ್ರಮಕೈಗೊಂಡಿದ್ದು ಜಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಕ ಮಾಡಿ ಪ್ರದೇಶವನ್ನು ವಶಕ್ಕೆ ಪಡೆದಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ವಿಚಾರವಾದಿ ಪ್ರೋ ಭಗವಾನ್, ದೇವಾಲಯ ಪ್ರವೇಶಕ್ಕೆ ತಡೆ ನೀಡಿರುವುದು ಅವೈಜ್ಞಾನಿಕ ನಡೆ. ಮಹಿಳೆಯರಿಗೆ ತಡೆ ನೀಡಿರುವುದು ಕಂದಚಾರ ಆಚರಣೆ ಪ್ರತಿರೂಪ. ಮಹಿಳೆಯಲ್ಲಿ ನಡೆಯುವ ಕ್ರೀಯೆ ಪ್ರಕೃತಿಯ ವರ. ಆದರೆ ಈ ಕಾರಣದಿಂದ ಪ್ರವೇಶ ನಿರಾಕರಿಸಬಾರದು. ಮಹಿಳೆಯರೇ ಅಲ್ಲಿ ಪ್ರತಿಭಟನೆ ನಡೆಸುತ್ತಿರುವುದು ವಿಷಾದನೀಯ. ಆಡಳಿತ ಮಂಡಳಿ ಹಾಗೂ ರಾಜಮನೆತನ ನಡೆ ಕೂಡ ಅವರ ಮೌಢ್ಯವನ್ನು ಬೆಳೆಸುತ್ತಿದೆ. ಆದರೆ ಕೇರಳ ಸರ್ಕಾರ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸದೇ ಇರುವುದು ಉತ್ತಮ ನಡೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರಾಕರಣೆ ಮಾಡಿರುವುದು ವೈಜ್ಞಾನಿಕ ಕಾರಣಕ್ಕೂ ಆಗಿರಬಹುದು, ಏಕೆಂದರೆ ದೇವದಾಸಿ ಪದ್ಧತಿ ಜಾರಿ ಇದ್ದ ವೇಳೆ ಅಂತಹ ಘಟನೆಗಳು ಅಲ್ಲಿ ನಡೆಯಬಾರದು ಎಂಬ ಕಾರಣದಿಂದಲೂ ನಿಷೇಧ ಮಾಡಿರಬಹುದು. ಆದರೆ ಇಂದು ಸಂವಿಧಾನ ಎಲ್ಲಾ ಜನರಿಗೂ ಸಮಾನತೆ ಹಕ್ಕು ನೀಡಿದೆ. ಅದ್ದರಿಂದ ಮಹಿಳೆಯ ಪ್ರವೇಶಕ್ಕೆ ತಡೆ ನೀಡಬಾರದು ಎಂದು ತಿಳಿಸಿದರು.

    ತುಲಾ ಮಾಸದ ಆರಂಭದ ಕಾರಣ ಇಂದಿನಿಂದ 6 ದಿನಗಳ ಕಾಲ ದೇವಾಲಯ ತೆರೆಯಲಾಗುತ್ತದೆ, 6 ದಿನಗಳ ಕಾಲ ನಡೆಯುವ ವಿಶೇಷ ಪೂಜೆಯ ಬಳಿಕ ಮತ್ತೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಪತ್ರಕರ್ತೆಯೊಬ್ಬರು ಕಾರಿನಲ್ಲಿ ತೆರಳಲು ಯತ್ನಿಸಿದ ವೇಳೆ ಮಹಿಳಾ ಪ್ರತಿಭಟನಕಾರರೇ ಕಾರಿನ ಗಾಜನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಕೆಲ ಕಾಲ ಸ್ಥಳದಲ್ಲಿ ಅಂತಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಮಹಿಳೆಯರು ದೇವಾಲಯ ಪ್ರವೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಶಿವಸೇನೆಯ ಮಹಿಳಾ ಕಾರ್ಯಕರ್ತೆಯರು ಬೆದರಿಕೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಾಮಳೆ ತಂದ ಆಪತ್ತು- ಇಲಿ ಜ್ವರಕ್ಕೆ 25 ಮಂದಿ ಸಾವು

    ಮಹಾಮಳೆ ತಂದ ಆಪತ್ತು- ಇಲಿ ಜ್ವರಕ್ಕೆ 25 ಮಂದಿ ಸಾವು

    ತಿರುವನಂತಪುರಂ: ಮಹಾಮಳೆಯ ಪ್ರವಾಹದಿಂದ ತತ್ತರಿಸಿದ್ದ ಕೇರಳ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಈ ವೇಳೆಯೇ ಇಲಿ ಜ್ವರದ ಭೀತಿ ಶುರುವಾಗಿದೆ. ಕಳೆದ 1 ತಿಂಗಳಿನಲ್ಲಿ ಇಲಿ ಜ್ವರಕ್ಕೆ 28 ಮಂದಿ ಸಾವನ್ನಪ್ಪಿದ್ದು, 1 ವಾರದಲ್ಲೇ 9 ಮಂದಿ ಶಂಕಿತ ಜ್ವರಕ್ಕೆ ಬಲಿಯಾಗಿದ್ದಾರೆ.

    ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಶನಿವಾರ ಮೂವರು ಬಲಿಯಾಗಿದ್ದು, ಪ್ರವಾಹ ರಕ್ಷಣಾ ಪರಿಹಾರ ಕಾರ್ಯದಲ್ಲಿ ತೊಡಗಿದ್ದ ಆಂಡಿ, ಶಿವದಾಸನ್ ಹಾಗೂ ಕೃಷ್ಣನ್ ಎಂಬವರು ಕೋಯಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸೋಕಿನಿಂದ ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯೊಂದರಲ್ಲೇ ಮಹಾಮಾರಿಗೆ ಬಲಿಯಾದವರ ಸಂಖ್ಯೆ 20ಕ್ಕೆ ತಲುಪಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    ಕಳೆದ ಮೂರು ದಿನಗಳಲ್ಲಿ 300 ಶಂಕಿತ ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾ ಹಿರಿಯ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಕೇರಳ ಆರೋಗ್ಯ ಇಲಾಖೆ ಇಲಿ ಜ್ವರದ ಬಗ್ಗೆ ಕೋಯಿಕ್ಕೋಡ್, ಪಾಲಕ್ಕಾಡ್, ತ್ರಿಶ್ಶೂರ್, ಮಲಪ್ಪುರಂ, ಎರ್ನಾಕುಲಂ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಹೆಚ್ಚುವರಿ ಔಷಧ ಹಾಗೂ ವೈದ್ಯಕೀಯ ನೆರವಿಗಾಗಿ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮನವಿ ಸಲ್ಲಿಸಿದೆ.

    ಇಲಿ ಜ್ವರ ಹೇಗೆ ಬರುತ್ತೆ?
    ಮನುಷ್ಯನ ಸಂಪರ್ಕಕ್ಕೆ ಸಮೀಪವಿರುವ ಪ್ರದೇಶದಲ್ಲಿ ವಾಸಿಸುವ ಇಲಿ, ಹೆಗ್ಗಣ, ಬೆಕ್ಕು, ನಾಯಿ, ಹಸು ಸೇರಿದಂತೆ ಕೆಲ ಕಾಡು ಪ್ರಾಣಿಗಳ ದೇಹದಲ್ಲಿರುವ ವೈರಸ್ ಮೂತ್ರದ ಮೂಲಕ ನೀರಿನಲ್ಲಿ ಸೇರುತ್ತದೆ. ಇಂಥ ಕಲುಷಿತ ನೀರು ಮನುಷ್ಯರ ದೇಹದ ಸಂಪರ್ಕಕ್ಕೆ ಬಂದಾಗ ವೈರಸ್ ಶರೀರದಲ್ಲಿ ಸೇರ್ಪಡೆಯಾಗಿ 4 ರಿಂದ 19 ದಿನಗಳಲ್ಲಿ ವ್ಯಕ್ತಿ ಆನಾರೋಗ್ಯಕ್ಕೆ ಒಳಗಾಗುತ್ತಾರೆ. ಈ ಜ್ವರಕ್ಕೆ ಮೂಲ ಕಾರಣ ಝೂನೋಟಿಕ್ ವೈರಸ್ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

    ಲಕ್ಷಣಗಳು: ಜ್ವರ, ಮೈಕೈ ನೋವು ಹಾಗೂ ತಲೆನೋವು ಕೆಲವರಲ್ಲಿ ಜಾಂಡೀಸ್ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೇ ಬಾಯಿ, ಮೂಗು ಭಾಗಗಳಲ್ಲಿ ರಕ್ತಸ್ರಾವವಾಗುವ ಸಾಧ್ಯತೆಗಳು ಇದೆ. ಈ ಸೋಂಕು ಮೂತ್ರ ಪಿಂಡಕ್ಕೂ ವಿಸ್ತರಿಸಿ ಮೂತ್ರ ವಿಸರ್ಜನೆ ಪ್ರಮಾಣ ಕಡಿಮೆಯಾಗಬಹುದಾಗಿದೆ.

    ಲಕ್ಷಣ ಕಾಣಿಸಿಕೊಂಡ್ರೆ ಏನು ಮಾಡಬೇಕು?
    ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಬಹುಬೇಗ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಬಹುದು. ಇಲಿ ಜ್ವರ ದೃಢವಾದ ಬಳಿಕ ತಜ್ಞ ವೈದ್ಯರಿಂದ ಕ್ರಮಬದ್ಧ ಚಿಕಿತ್ಸೆ ಪಡೆಯುವುದು ಅಗತ್ಯವಾಗಿರುತ್ತದೆ. ಮುಖ್ಯವಾಗಿ ಸೋಂಕಿಗೆ ಒಳಗಾಗಿರುವ ವ್ಯಕ್ತಿಯಿಂದ ಆರೋಗ್ಯವಂತ ವ್ಯಕ್ತಿಗೆ ಸೋಂಕು ಹರಡುವುದಿಲ್ಲ.

    ಮುನ್ನೆಚ್ಚರಿಕೆ ಕ್ರಮ: ಕುಡಿಯಲು, ಸ್ನಾನ ಮಾಡಲು ಹಾಗೂ ದಿನನಿತ್ಯದ ಬಳಕೆಗೆ ಶುದ್ಧ ನೀರಿನ ಬಳಕೆ. ಸೋಂಕು ಕಾಣಿಸಿಕೊಂಡ ಪ್ರದೇಶದಲ್ಲಿ ಸಾಕು ಪ್ರಾಣಿಗಳನ್ನು ಕೊಳ, ಹೊಂಡ ಇನ್ನಿತರ ಸಾರ್ವಜನಿಕರ ಪ್ರದೇಶಗಳಲ್ಲಿ ಅವುಗಳ ಮೈ ತೊಳೆಯಬಾರದು. ಆಹಾರ ಪದಾರ್ಥಗಳ ರಕ್ಷಣೆ, ಮನೆಯ ಸುತ್ತಲು ನೈರ್ಮಲ್ಯ ಕಾಪಾಡಿಕೊಳ್ಳುವುದು. ಸೋಂಕು ಉಂಟಾದ ಪ್ರದೇಶದಲ್ಲಿ ಚಪ್ಪಲಿ ಧರಿಸಿ ಓಡಾಡುವುದು. ಜ್ವರದ ಬಂದ ಕೂಡಲೇ ನಿರ್ಲಕ್ಷ್ಯ ಮಾಡದೆ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುವುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 1.5 ಲಕ್ಷರೂ. ದೇಣಿಗೆ ನೀಡಿದ್ಳು ಮೀನು ಮಾರಿ ಟ್ರೋಲಾಗಿದ್ದ ಕೇರಳ ಯುವತಿ!

    1.5 ಲಕ್ಷರೂ. ದೇಣಿಗೆ ನೀಡಿದ್ಳು ಮೀನು ಮಾರಿ ಟ್ರೋಲಾಗಿದ್ದ ಕೇರಳ ಯುವತಿ!

    ತಿರುವನಂತಪುರಂ: ಕಳೆದ ಕೆಲ ದಿನಗಳ ಹಿಂದೆ ಕಾಲೇಜು ಶಿಕ್ಷಣ ಪಡೆಯಲು ಮೀನು ಮಾರಾಟ ಮಾಡಿ ಟ್ರೋಲ್ ಆಗಿದ್ದ ಹಾನನ್ ಹಮೀದ್ ಎಂಬ ಯುವತಿ ಕೇರಳ ಪ್ರವಾಹ ಸಂತ್ರಸ್ತ ನಿಧಿಗೆ 1.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಾನನ್ ಹಮೀದ್, ಜನರು ತನಗಾಗಿ ನೀಡಿದನ್ನು ದೇಣಿಗೆಯಾಗಿ ನೀಡಿದ್ದೇನೆ. ನನಗೆ ಸಹಾಯ ಮಾಡಿದ ಹಲವು ಮಂದಿ ಸದ್ಯ ಸಂಕಷ್ಟದಲ್ಲಿದ್ದು. ಅವರ ಸಹಾಯವನ್ನು ಹಿಂದಿರುಗಿಸುವ ಅಗತ್ಯವಿದೆ. ನನ್ನಿಂದ ಇದನ್ನಷ್ಟೇ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

    ನಾನು ಈ ಹಣವನ್ನು ನೇರ ಸಿಎಂ ಅವರ ನಿಧಿಗೆ ವರ್ಗಾಹಿಸುತ್ತಿದ್ದೆ. ಆದರೆ ಸದ್ಯ ಮೊಬೈಲ್ ಹಾಗೂ ಬ್ಯಾಕಿಂಗ್ ಸೇವೆ ಲಭ್ಯವಿಲ್ಲ. ಅದ್ದರಿಂದ ನೇರ ಸಿಎಂ ಬಳಿ ತೆರಳಿ ಚೆಕ್ ನೀಡಲಿದ್ದೆನೆ. ನಾನಿರುವ ಪ್ರದೇಶದಲ್ಲಿ ಓಡಾಟ ನಡೆಸಲು ಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದೆ. ಹಲವರ ಮನೆ ಕೊಚ್ಚಿ ಹೋಗಿದೆ, ಆದರೆ ನನಗೆ ಆ ಸಮಸ್ಯೆ ಇಲ್ಲ. ಏಕೆಂದರೆ ಪ್ರವಾಹದಲ್ಲಿ ಕೊಚ್ಚಿ ಹೋಗಲು ತಮಗೆ ಮನೆಯೇ ಇಲ್ಲ ಎಂದು ಹೇಳಿದ್ದಾರೆ.

    ಅಂದಹಾಗೇ ಕಳೆದ ಆಗಸ್ಟ್ ತಿಂಗಳಿನಲ್ಲಿ ಕಾಲೇಜು ಸಮವಸ್ತ್ರ ಧರಿಸಿ ಮೀನು ಮಾರಾಟ ಮಾಡುತ್ತಿದ್ದರಿಂದ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದರು. ಬಳಿಕ ಶಿಕ್ಷಣಕ್ಕೆ ನೆರವು ಮಂದಿ ಮುಂದೇ ಬಂದು ಸಹಾಯದ ಅಸ್ತ ಚಾಚಿದ್ದರು. ಬಡ ಕುಟುಂಬ ಯುವತಿಯಾಗಿರುವ ಹಮೀದ್ ತನ್ನ ತಾಯಿ ಹಾಗೂ ತಮ್ಮನ ಜೊತೆ ಜೀವನ ನಿರ್ವಹಣೆ ಹಾಗೂ ಶಿಕ್ಷಣಕ್ಕಾಗಿ ಕಾಲೇಜು ಮುಗಿದ ಬಳಿಕ ಸಣ್ಣ ಸಣ್ಣ ಕೆಲಸ ಮಾಡುತ್ತಾ ಹಣ ಗಳಿಸಿ ತಾಯಿಗೆ ನೆರವಾಗುತ್ತಿದ್ದರು. ಈ ವೇಳೆ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಕೊಚ್ಚಿಹೋದ ಸೇತುವೆಗಳಿಗೆ ಕೆಲವೇ ನಿಮಿಷಗಳಲ್ಲಿ ತಾತ್ಕಾಲಿಕ ಮರದ ಸೇತುವೆ ನಿರ್ಮಾಣ – ಯೋಧರ ಕಾರ್ಯಕ್ಕೆ ಶ್ಲಾಘನೆ

    ಕೊಚ್ಚಿಹೋದ ಸೇತುವೆಗಳಿಗೆ ಕೆಲವೇ ನಿಮಿಷಗಳಲ್ಲಿ ತಾತ್ಕಾಲಿಕ ಮರದ ಸೇತುವೆ ನಿರ್ಮಾಣ – ಯೋಧರ ಕಾರ್ಯಕ್ಕೆ ಶ್ಲಾಘನೆ

    ತಿರುವನಂತಪುರಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ದೇವರ ನಾಡು ಕೇರಳದಲ್ಲಿ ಭಾರತೀಯ ಯೋಧರು ಹಾಗೂ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯವನ್ನು ಮುಂದುವರಿಸಿದ್ದು, ಸದ್ಯ ಹಲವು ಪ್ರದೇಶಗಳಲ್ಲಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಸೇತುವೆಗಳಿಗೆ ತಾತ್ಕಾಲಿಕ ಮರದ ಸೇತುವೆಗಳನ್ನು ನಿರ್ಮಾಣ ಮಾಡಿದ್ದಾರೆ.

    ಯೋಧರು ನಿರ್ಮಾಣ ಮಾಡಿರುವ ಹಲವು ತಾತ್ಕಾಲಿಕ ಸೇತುವೆಗಳ ಫೋಟೋಗಳನ್ನ ಎಡಿಜಿ ಪಿಐ-ಇಂಡಿಯನ್ ಆರ್ಮಿ ತನ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಯೋಧರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಕೇರಳ ರಕ್ಷಣಾ ಕಾರ್ಯಾಚರಣೆಗೆ ಅಪರೇಷನ್ ಸಹಯೋಗ್ ಎಂದು ಹೆಸರಿಡಲಾಗಿದೆ. ಇದರಲ್ಲಿ ಭಾರತೀಯ ವಾಯುಪಡೆ, ನೌಕಾಪಡೆ ಹಾಗೂ ಕರಾವಳಿ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.

    ಸ್ಥಳೀಯ ಸಂಪನ್ಮೂಲಗಳನ್ನೇ ಬಳಕೆ ಮಾಡಿಕೊಳ್ಳುತ್ತಿರುವ ಯೋಧರು, ಉರುಳಿಬಿದ್ದ ಬೃಹತ್ ಮರಗಳನ್ನು ಬಳಕೆ ಮಾಡಿಕೊಂಡು ಸೇತುವೆ ನಿರ್ಮಾಣ ಮಾಡಿ ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಇದನ್ನೂ ಓದಿ: ಕೇರಳ ನಿರಾಶ್ರಿತರಿಗೆ ಹೊದಿಕೆ ಕೊಟ್ಟು ಹೀರೋ ಆದ ಮಧ್ಯಪ್ರದೇಶದ ಬಡವ್ಯಾಪಾರಿ

    ಕೇರಳ ಪ್ರವಾಹಕ್ಕೆ ದೇಶದ ಹಲವು ಭಾಗಗಳಿಂದ ನೆರವಿನ ಸಹಾಯ ನೀಡಲಾಗಿದ್ದು, ಸಿನಿಮಾ ಸ್ಟಾರ್ ಗಳು ಸೇರಿದಂತೆ ಸಾಮಾನ್ಯ ಜನರು ಸಹ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಕ್ಯಾಂಪ್‍ಗಳನ್ನು ನಿರ್ಮಾಣ ಮಾಡಿ ಆಹಾರ ಹಾಗೂ ವಸತಿ ನೀಡಲಾಗುತ್ತಿದೆ. ಅಲ್ಲದೇ ಅನಾರೋಗ್ಯದಿಂದ ಬಳಲುತ್ತಿದ್ದ ಹಲವರಿಗೆ ವೈದ್ಯಕೀಯ ಸೇವೆ ನೀಡುವ ಕಾರ್ಯವೂ ನಡೆಯುತ್ತಿದೆ.

    ಭಾರತೀಯ ಸೈನ್ಯದ ಕರ್ನಾಟಕ ಹಾಗೂ ಕೇರಳ ಭಾಗದ ತುಕಡಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದೆ. ಇದರಲ್ಲಿ ಪ್ರಮುಖವಾಗಿ ಬೆಂಗಳೂರಿನ ಮಿಲಿಟರಿ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ನ ಎರಡು ಪಡೆಗಳು ಸಹ ಭಾಗವಹಿಸಿದೆ. ಕಳೆದ ಎರಡು ದಿನಗಳ ಹಿಂದೆ ಎನ್‌ಡಿಆರ್‌ಎಫ್ ಯೋಧ ಕನ್ಹಾಯ್ ಕುಮಾರ್ ತಮ್ಮ ಜೀವವನ್ನು ಲೆಕ್ಕಿಸದೆ ಮಗುವನ್ನು ರಕ್ಷಣೆ ಮಾಡಿ ಹೀರೋ ಆಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಇದನ್ನೂ ಓದಿ: ಪ್ರಾಣವನ್ನು ಲೆಕ್ಕಿಸದೇ ಮಗುವನ್ನು ರಕ್ಷಿಸೋದೇ ಗುರಿಯಾಗಿತ್ತು: ಎನ್‍ಡಿಆರ್‌ಎಫ್ ಸಿಬ್ಬಂದಿ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರಾಣವನ್ನು ಲೆಕ್ಕಿಸದೇ ಮಗುವನ್ನು ರಕ್ಷಿಸೋದೇ ಗುರಿಯಾಗಿತ್ತು: ಎನ್‍ಡಿಆರ್‌ಎಫ್ ಸಿಬ್ಬಂದಿ

    ಪ್ರಾಣವನ್ನು ಲೆಕ್ಕಿಸದೇ ಮಗುವನ್ನು ರಕ್ಷಿಸೋದೇ ಗುರಿಯಾಗಿತ್ತು: ಎನ್‍ಡಿಆರ್‌ಎಫ್ ಸಿಬ್ಬಂದಿ

    ತಿರುವನಂತಪುರಂ: ಕೇರಳದ ಸುರಿಯುತ್ತಿರುವ ಭಾರೀ ಮಳೆಯಿಂದ ನದಿಗಳು ಉಕ್ಕಿಹರಿಯುತ್ತಿದ್ದು, ಈ ವೇಳೆ ಪ್ರಾಣದ ಹಂಗು ತೊರೆದು ಎನ್‍ಡಿಆರ್‌ಎಫ್ ಪೇದೆಯೊಬ್ಬರು ಮಗುವನ್ನು ರಕ್ಷಿಸಿದ್ದಾರೆ.

    ಕಳೆದ ನಾಲ್ಕು ದಿನಗಳಿಂದ ಎನ್‍ಡಿಆರ್‌ಎಫ್ ತಂಡ ಕೇರಳದ ಇಡುಕ್ಕಿ, ಅಲಪುಜಾ, ಎರ್ನಾಕುಲಂ ಮತ್ತು ತ್ರಿಶೂರ್ ನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಇಡುಕ್ಕಿ ಪ್ರದೇಶದ ಸೇತುವೆಯೊಂದರ ಬಳಿ ಪುಟ್ಟ ಮಗುವಿನೊಂದಿಗೆ ವ್ಯಕ್ತಿಯೊಬ್ಬರು ರಕ್ಷಣೆಗಾಗಿ ಕಾದು ಕುಳಿತ್ತಿದ್ದರು, ಇದನ್ನು ಕಂಡ ಸಿಬ್ಬಂದಿ ಹರಿಯುತ್ತಿದ್ದ ರಭಸದ ನೀರನ್ನು ಲೆಕ್ಕಿಸದೇ ಸೇತುವೆ ದಾಟಿ ಮಗುವಿನೊಂದಿಗೆ ವಾಪಸ್ ಓಡಿ ಬಂದಿದ್ದಾರೆ. ಈ ವೇಳೆ ಮಗುವಿನ ತಂದೆಯೂ ಕೂಡ ಸಿಬ್ಬಂದಿ ಹಿಂದೆ ಓಡಿ ಬಂದಿದ್ದಾರೆ.

    ಜೀವದ ಹಂಗು ತೊರೆದು ಮಗುವಿನ ರಕ್ಷಣೆ ಮಾಡಿದ ಎನ್‍ಡಿಆರ್‌ಎಫ್ ಸಿಬ್ಬಂದಿ ಕನ್ಹಯ್ಯ ಕುಮಾರ್ ಈಗ ಹೀರೋ ಆಗಿದ್ದಾರೆ. ಕನ್ಹಯ್ಯ ಕುಮಾರ್ ಮೂಲತಃ ಬಿಹಾರ್ ರಾಜ್ಯದವರಾಗಿದ್ದು, ಒಟ್ಟಾರೆ 14 ಎನ್‍ಡಿಆರ್‌ಎಫ್ ತಂಡಗಳು ಕೇರಳದಲ್ಲಿ ಕಾರ್ಯಾಚರಣೆ ನಡೆಸಿದೆ.

    ಕನ್ಹಯ್ಯ ಕುಮಾರ್ ಮಗುವನ್ನು ರಕ್ಷಣೆ ಮಾಡಿದ ಬೆನ್ನಲ್ಲೇ ಸೇತುವೆ ಮುಳುಗಡೆಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರ್, ಆ ಸಮಯದಲ್ಲಿ ನಾನು ಯಾರ ಸಹಾಯ ಪಡೆಯುವ ಹಂತದಲ್ಲಿ ಇರಲಿಲ್ಲ. ಆದರೆ ಅವರು ನೀರಿನ ರಭಸಕ್ಕೆ ಭಯಗೊಂಡಿತ್ತು ಎಂದು ತಿಳಿದಿತ್ತು. ಯಾವುದನ್ನು ಲೆಕ್ಕಿಸದೇ ಅವರ ರಕ್ಷಣೆ ಮಾಡುವುದೇ ನನ್ನ ಮೊದಲ ಗುರಿಯಾಗಿತ್ತು ಎಂದು ಹೇಳಿದ್ದಾರೆ.

    ಕೇರಳದಲ್ಲಿ ಸುರಿಯುತ್ತಿರುವ ಮಳೆಗೆ ಹಲವೆಡೆ ಭೂಕುಸಿತ ಸಂಭವಿಸಿದ್ದು, ಇದುವರೆಗೂ 37 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಕೇರಳ ರಾಜ್ಯ ಸರ್ಕಾರಗಳು ಪ್ರವಾಹದಲ್ಲಿ ಸಿಲುಕಿರುವ ಮಂದಿಯ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಇದೇ ಮೊದಲ ಬಾರಿಗೆ ಕೇರಳದ ಇಡುಕ್ಕಿ ಜಲಾಶಯದ 5 ಐದು ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ.

  • ಪತಿಯ ಮೇಲೆ ಪತ್ನಿಯಿಂದಲೇ ಹೈಟೆಕ್ ಬೇಹುಗಾರಿಕೆ: ಸಿಕ್ಕಿಬಿದ್ದಿದ್ದು ಹೇಗೆ? ಏನಿದು ಆ್ಯಪ್?

    ಪತಿಯ ಮೇಲೆ ಪತ್ನಿಯಿಂದಲೇ ಹೈಟೆಕ್ ಬೇಹುಗಾರಿಕೆ: ಸಿಕ್ಕಿಬಿದ್ದಿದ್ದು ಹೇಗೆ? ಏನಿದು ಆ್ಯಪ್?

    ತಿರುವನಂತಪುರಂ: ಸ್ನೇಹಿತೆಯ ಪತಿಯ ಚಲನವಲನಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಬಂಧಿಸಿರುವ ಘಟನೆ ಕೇರಳ ತಿರುವನಂತಪುರಂ ನಲ್ಲಿ ನಡೆದಿದೆ.

    ಸ್ನೇಹಿತೆಯ ಪತಿಯ ಮೊಬೈಲ್ ನಲ್ಲಿ ರಿಯಲ್ ಟೈಮ್ ಟ್ರ್ಯಾಕಿಂಗ್ ಅಪ್ಲಿಕೇಶನ್ ಅಳವಡಿಸಿದ ಬ್ಯಾಂಕ್ ಉದ್ಯೋಗಿ ಆತನ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ನೀಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಅಜಿತ್ ಎಸ್ (32) ಎಂಬಾತ ಟ್ರ್ಯಾಕ್ ವ್ಯೂ ಎಂಬ ಮೊಬೈಲ್ ಸೆಕ್ಯೂರಿಟಿ ಅಪ್ಲಿಕೇಶನ್ ಬಳಸಿ ಸ್ನೇಹಿತೆಯ ಪತಿಯ ಚಲನವಲನಗಳನ್ನು ದಾಖಲಿಸುತ್ತಿದ್ದ. ಈ ಮೂಲಕ ಸ್ನೇಹಿತೆಯ ಪತಿಯ ಲೋಕೇಶನ್, ಮೊಬೈಲ್ ನಲ್ಲಿ ದಾಖಲಾಗುವ ವಿಡಿಯೋ, ಫೋಟೋ ಮತ್ತು ಕಾಲ್ ರೆರ್ಕಾಡಿಂಗ್ ಮಾಹಿತಿಯನ್ನು ಪಡೆಯುತ್ತಿದ್ದರು.

    ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡಿದ ಕೊಚ್ಚಿ ಪೊಲೀಸ್ ಕಮಿಷನರ್ ಹಿಮೇಂದ್ರನಾಥ್, ಕೇರಳದಲ್ಲಿ ಇಂತಹ ಪ್ರಕರಣ ಇದೇ ಮೊದಲ ಬಾರಿಗೆ ವರದಿಯಾಗಿದೆ. ಸದ್ಯ ಬಂಧಿಸಲಾಗಿರುವ ವ್ಯಕ್ತಿ ವಿಚಾರಣೆ ನಡೆಯುತ್ತಿದ್ದು, ಆತ ಈ ರೀತಿಯ ಮೊಬೈಲ್ ಅಪ್ಲಿಕೇಶನ್ ಬಳಸಿ ಮತ್ತಷ್ಟು ಜನರನ್ನು ಟ್ರ್ಯಾಕ್ ಮಾಡಿರುವ ಶಂಕೆ ಇದ್ದು, ಈ ಕುರಿತು ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಅದ್ವೈತ್ ಆರ್ ವಿ (25) ಹಾಗೂ ಶೃತಿ ದಂಪತಿಗಳಾಗಿದ್ದು, ಇಬ್ಬರ ದಾಂಪತ್ಯದಲ್ಲಿ 7 ಲಕ್ಷ ರೂ, ಹಣದ ಬಗ್ಗೆ ಗೊಂದಲ ನಿರ್ಮಾಣವಾಗಿತ್ತು. ಈ ಕಾರಣದಿಂದ ಶೃತಿ ಗೆ ಸಹಾಯ ಮಾಡಲು ಸ್ನೇಹಿತ ಅಜಿತ್ ಸಹಾಯ ಪಡೆದ ಶೃತಿ ಪತಿ ಅದ್ವೈತ್ ಮೊಬೈಲ್ ಫೋನ್ ನಲ್ಲಿ ಟ್ರ್ಯಾಕಿಂಗ್ ಆಪ್ ಅಳವಡಿಸಿದ್ದಳು. ಈ ವೇಳೆ ಶೃತಿ 15 ದಿನಗಳು ಪತಿಯ ಮನೆ ತೊರೆದು ಹೋಗಿದ್ದಳು. ಇದಾದ ಬಳಿಕ ಪತ್ನಿ ಶೃತಿ ಮನೆಯಲ್ಲಿ ಇಲ್ಲದಿದ್ದರೂ ಪತಿ ಎಲ್ಲಾ ಚಲನವಲನ ಬಗ್ಗೆ ಮಾಹಿತಿ ನೀಡಿ ಪ್ರಶ್ನಿಸುತ್ತಿದ್ದಳು ಎಂದು ಅದ್ವೈತ್ ತಿಳಿಸಿದ್ದಾರೆ.

    ನಾನು ಭೇಟಿ ನೀಡಿದ್ದ ಸ್ಥಳ, ತೆಗೆದುಕೊಂಡ ಆಹಾರ ಹಾಗೂ ಮನೆಯ ರೂಮ್ ನಲ್ಲಿದ್ದ ವೇಳೆ ಏನು ಮಾಡುತ್ತಿದೆ ಎಲ್ಲಾ ಮಾಹಿತಿಯನ್ನು ನೀಡುತ್ತಿದ್ದಳು. ಈ ವೇಳೆ ನನಗೆ ಶಂಕೆ ವ್ಯಕ್ತವಾಗಿ ರೂಮ್‍ನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಳಾ ಎನ್ನುವುದರ ಬಗ್ಗೆಯೂ ಪರಿಶೀಲಿಸಿದೆ. ಬಳಿಕ ಐಟಿ ತಜ್ಞರ ಬಳಿ ನನ್ನ ಮೊಬೈಲ್ ನೀಡಿ ಪರಿಶೀಲನೆ ನಡೆಸಿದ ವೇಳೆ ಪತ್ನಿಯ ಕೃತ್ಯ ತಿಳಿಯಿತು. ಪತ್ನಿ ಸ್ನೇಹಿತನ ಸಹಾಯದಿಂದ ನನ್ನ ಮೊಬೈಲ್ ಅನ್ನು ಆಕೆ ಟ್ರ್ಯಾಕ್ ಮಾಡುತ್ತಿದ್ದಳು ಎಂದು ಅದ್ವೈತ್ ತಿಳಿಸಿದ್ದಾರೆ.

    ಸದ್ಯ ಬಂಧಿತ ಅಜಿತ್ ನೀಡಿರುವ ಮಾಹಿತಿ ಅನ್ವಯ, ಶೃತಿ ಪತಿಯ ಮೇಲೆ ಅನುಮಾನದಿಂದ ಅವರ ಎಲ್ಲಾ ಚಲನವಲನ ಬಗ್ಗೆ ಮಾಹಿತಿ ಪಡೆಯಲು ಕೇಳಿದ್ದರು. ಈ ಮೂಲಕ ಸಂಗ್ರಹಿಸಿದ ಮಾಹಿತಿ ಅನ್ವಯ ಪತಿಯ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಲು ಬಳಕೆ ಮಾಡುವ ಉದ್ದೇಶವಿತ್ತು ಎಂದು ತಿಳಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

    ಪತ್ನಿಯ ಈ ಕೃತ್ಯದಿಂದ ಅಘಾತಕ್ಕೆ ಒಳಗಾಗಿರುವ ಅದ್ವೈತ್ ಯಾವ ಉದ್ದೇಶದಿಂದ ಈ ರೀತಿ ನಡೆಸಿದ್ದಾಳೆ ಎಂಬುದು ತಿಳಿಯುತ್ತಿಲ್ಲ. ಇದು ನಮ್ಮ 6 ವರ್ಷದ ಮಗಳ ಜೀವನವನ್ನು ನಾಶ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಟ್ರ್ಯಾಕ್ ವ್ಯೂ ಹೇಗೆ ಕಾರ್ಯನಿರ್ವಹಿಸುತ್ತದೆ:
    ಟ್ರ್ಯಾಕ್ ವ್ಯೂ ಎಂಬ ಮೊಬೈಲ್ ಆ್ಯಪ್ ಆಂಡ್ರಾಯ್ಡ್ ಮೊಬೈಲ್ ಗಳಲ್ಲಿ ವ್ಯಕ್ತಿಯ ವೈಯಕ್ತಿಕ ಮಾಹಿತಿ ಸಂಗ್ರಹಿಸಲು ಬಳಕೆ ಮಾಡಲಾಗುತ್ತದೆ. ಈ ಆ್ಯಪನ್ನ ವ್ಯಕ್ತಿಯ ಮೊಬೈಲ್ ನಲ್ಲಿ ಅಳವಡಿಸಿದರೆ ಆತ ಮೊಬೈಲ್ ಮೂಲಕ ನಡೆಸುವ ಎಲ್ಲಾ ಮಾಹಿತಿ ಸಂಗ್ರಹಿಸಬಹುದಾಗಿದೆ.

    ಮುಖ್ಯವಾಗಿ ವ್ಯಕ್ತಿಯ ಲೋಕೇಶನ್ ಅನ್ನು ಮೊಬೈಲ್ ಜಿಪಿಎಸ್ ಆಫ್ ಇದ್ದರೂ ಟ್ರ್ಯಾಕ್ ಮಾಡಬಹುದು. ಗೂಗಲ್ ಮ್ಯಾಪ್ ಬಳಸಿ ಆತನ ಸ್ಥಳವನ್ನು ನಿಖರವಾಗಿ ತಿಳಿಯಬಹುದಾಗಿದೆ. ಅಷ್ಟೇ ಅಲ್ಲದೇ ಈ ಆಪ್ ಮೂಲಕ 6 ತಿಂಗಳ ಕಾಲ ಮೊಬೈಲ್ ಹಿಸ್ಟರಿಯನ್ನು ಬ್ಯಾಕಪ್ ಮಾಡಬಹುದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ವಿವೇಕಾನಂದರು ಈಗ ಭಾರತದಲ್ಲಿ ಇದ್ದಿದ್ರೆ ಅವರಿಗೂ ಎಂಜಿನ್ ಆಯಿಲ್ ಎಸೆಯುತ್ತಿದ್ದರು- ಶಶಿತರೂರ್

    ವಿವೇಕಾನಂದರು ಈಗ ಭಾರತದಲ್ಲಿ ಇದ್ದಿದ್ರೆ ಅವರಿಗೂ ಎಂಜಿನ್ ಆಯಿಲ್ ಎಸೆಯುತ್ತಿದ್ದರು- ಶಶಿತರೂರ್

    ನವದೆಹಲಿ: ದೇಶದಲ್ಲಿ ಇಂದು ಸ್ವಾಮಿ ವಿವೇಕಾನಂದರು ಇದ್ದಿದ್ದರೆ ದುಷ್ಕರ್ಮಿಗಳು ಅವರಿಗೂ ಎಂಜಿನ್ ಆಯಿಲ್ ಎಸೆಯುತ್ತಿದ್ದರು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

    ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಶಿತರೂರ್ ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ಸಮರ್ಪಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿಲ್ಲ ಎಂದು ಆರೋಪಿಸಿದರು.

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಶಶಿತರೂರ್ ಈ ಹೇಳಿಕೆ ನೀಡಿದ್ದಾರೆ. ಸ್ವಾಮಿ ವಿವೇಕಾನಂದರು ಇಂದು ಭಾರತದಲ್ಲಿ ನೆಲೆಸಿದ್ದರೆ ದುಷ್ಕರ್ಮಿಗಳು ಅವರನ್ನು ಟಾರ್ಗೆಟ್ ಮಾಡಿ ಎಂಜಿನ್ ಆಯಿಲ್ ಬಳಿಯಲು ಪ್ರಯತ್ನಿಸುತ್ತಿದ್ದರು. ಅಲ್ಲದೇ ಅವರನ್ನು ಬೀದಿಗೆ ತಳ್ಳಲು ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.

    ಕಳೆದ ತಿಂಗಳು ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ಅವರು ಬಿಜೆಪಿ ಹಾಗೂ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು. ಅಲ್ಲದೇ ದೇಶದಲ್ಲಿ ಧರ್ಮದ ಹೆಸರಿನಲ್ಲಿ ನಡೆಯುವ ಹಿಂಸೆ, ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇದು ಕೋಮು ಹಿಂಸಾಚಾರ ಹೆಚ್ಚಾಗಲು ಕಾರಣವಾಗಿದೆ. ಹಲವರ ಮೇಲೆ ಗೋರಕ್ಷಣೆಯ ಹೆಸರಿನಲ್ಲಿ ಹಲ್ಲೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯ ನಂತರ ಮೋದಿ ಸರ್ಕಾರ ಆಡಳಿತಕ್ಕೂ ಬರುವ ಮೊದಲು 70ಕ್ಕೂ ಹೆಚ್ಚು ಹಲ್ಲೆ ಪ್ರಕರಣಗಳು ಗೋ ರಕ್ಷಣೆ ಹೆಸರಿನಲ್ಲಿ ನಡೆದಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಆದರೆ ಕಳೆದ 4 ವರ್ಷಗಳಲ್ಲಿ 2,920 ಗಳು ನಡೆದಿದ್ದಾಗಿ ಕೇಂದ್ರ ಗೃಹ ಇಲಾಖೆ ನೀಡಿದೆ. ಅಂದರೆ 97% ಪ್ರಕರಣಗಳು ಕಳೆದ 4 ವರ್ಷಗಳ ಅವಧಿಯಲ್ಲಿ ನಡೆದಿದ್ದು, ಇದರಲ್ಲಿ 389 ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಇಷ್ಟು ಪ್ರಕರಣಗಳು ವರದಿಯಾದರೂ ಈ ಕುರಿತು ಮಾತನಾಡಲು 68 ಅವಕಾಶಗಳು ಸಿಕ್ಕರೂ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೃತ್ಯಗಳ ಬಗ್ಗೆ ಮೌನ ವಹಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ದೇಶದ ಜನತೆ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತು ಒಮ್ಮೆಯೂ ಮಾತನಾಡಿಲ್ಲ ಎಂದು ದೂರಿದರು.

    ಕಳೆದ ಕೆಲ ತಿಂಗಳ ಹಿಂದೆ 2019 ರ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ಭಾರತ ಹಿಂದೂ ಪಾಕಿಸ್ತಾನ ಆಗಲಿದೆ ಎಂದು ಹೇಳಿಕೆ ನೀಡಿದ ಬಳಿಕ ಶಶಿತರೂರ್ ಮತ್ತೆ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews