Tag: Truth

  • ಡಿಕೆಶಿ ಸತ್ಯ ಹೇಳಿದ್ರೆ ಇಡಿಯವರು ಸಮಾಧಾನ ಆಗ್ತಾರೆ: ಸಿಟಿ ರವಿ

    ಡಿಕೆಶಿ ಸತ್ಯ ಹೇಳಿದ್ರೆ ಇಡಿಯವರು ಸಮಾಧಾನ ಆಗ್ತಾರೆ: ಸಿಟಿ ರವಿ

    – ಭ್ರಷ್ಟಾಚಾರಿಗಳಿಗೆ ಜಾತಿ ಎಂಬುದಿಲ್ಲ

    ಶಿವಮೊಗ್ಗ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇರುವ ಸತ್ಯ ಹೇಳಿದರೆ ಇಡಿಯವರು ಸಮಾಧಾನವಾಗುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಇಡಿ ಅಧಿಕಾರಿಗಳಿಗೆ ಡಿಕೆಶಿ ಅವರಿಂದ ಸಮಗ್ರ ಮಾಹಿತಿ ಸಿಕ್ಕಿಲ್ಲ ಅನಿಸುತ್ತೆ. ಸತ್ಯ ಹೇಳುವುದಕ್ಕೆ ಬಹಳ ಸಮಯ ಬೇಡ, ಬಹಳ ಎಳೆದುಕೊಂಡು ಹೋದರೆ ಒಳ್ಳೆಯದು ಅಲ್ಲ ಎಂದರು.

    ಇಡಿ ತನಿಖೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯ ವಿಚಾರಣೆಯ ಅವಧಿಯನ್ನು ವಿಸ್ತರಣೆ ಮಾಡಿದೆ. ಇದರಲ್ಲಿ ಬಿಜೆಪಿಯ ಯಾವುದೇ ಹಸ್ತಕ್ಷೇಪ ಇಲ್ಲ. ಇರುವ ಸತ್ಯವನ್ನು ಹೇಳಿದರೆ ಇಡಿಯವರು ಸಮಾಧಾನವಾಗುತ್ತಾರೆ. ಅಲ್ಲದೇ ಇಡಿ ತನಿಖೆ ತಪ್ಪಿಸಿಕೊಂಡು ಮುಂದಿನ ತನಿಖೆಗೆ ಸಿದ್ಧವಾಗಬಹುದು ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

    ಭ್ರಷ್ಟಾಚಾರಿಗಳಿಗೆ ಜಾತಿ ಎಂಬುದಿಲ್ಲ. ಸಮುದಾಯದ ಹಿತ, ಸಮಾಜದ ಹಿತ ಬಯಸಿ ಕೆಲಸ ಮಾಡಿರುವವರನ್ನು ಜನತೆ ನೇತಾರ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಭಟ್ಟಂಗಿಗಳು ಹೊಗಳುವವರನ್ನು, ದುಡ್ಡು ಇದೆ ಎನ್ನುವ ಕಾರಣಕ್ಕೆ ಭವಿಷ್ಯದಲ್ಲಾಗಲಿ, ವರ್ತಮಾನದಲ್ಲಾಗಲಿ ನೇತಾರ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

  • ಉತ್ತರ ಪತ್ರಿಕೆಯಲ್ಲಿ ಬಾಲಕಿ ಬರೆದಳು ಎಲ್ಲರೂ ಬೆಚ್ಚಿಬೀಳಿಸುವ ಸತ್ಯ

    ಉತ್ತರ ಪತ್ರಿಕೆಯಲ್ಲಿ ಬಾಲಕಿ ಬರೆದಳು ಎಲ್ಲರೂ ಬೆಚ್ಚಿಬೀಳಿಸುವ ಸತ್ಯ

    ಗುರುಗ್ರಾಮ: ಅಪ್ರಾಪ್ತೆಯೊಬ್ಬಳು ತನಗಾಗಿರುವ ಅತ್ಯಾಚಾರದ ಬಗ್ಗೆ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಬರೆದು ಎಲ್ಲರನ್ನು ಬೆಚ್ಚಿಬೀಳಿಸಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ

    15 ವರ್ಷದ ಅಪ್ರಾಪ್ತೆಯೊಬ್ಬಳು ತಾನೂ ಅತ್ಯಾಚಾರಕ್ಕೆ ಒಳಗಾಗಿರುವ ಬಗ್ಗೆ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಬರೆದಿದ್ದಳು. ಸದ್ಯ ಬಾಲಕಿಗೆ ಆದ ಅನ್ಯಾಯ ಈಗ ಬೆಳಕಿಗೆ ಬಂದಿದ್ದು, ಪೊಲೀಸರು ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದಾರೆ.

    ನಾನು ಈಗ 10ನೇ ತರಗತಿ ಓದುತ್ತಿದ್ದೇನೆ. ನನ್ನ ಅಪ್ರಾಪ್ತ ಸಹೋದರ ಹಾಗೂ 23 ವರ್ಷದ ಬಾದಶಾಪುರ ಯುವಕನೊಬ್ಬ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ತನ್ನ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಬರೆದು ತನ್ನ ಅಳಲನ್ನು ತೋಡಿಕೊಂಡಿದ್ದಾಳೆ.

    ಅಕ್ಟೋಬರ್ 1ರಂದು ಬಾಲಕಿ ತನ್ನ ಮೇಲೆ ಆಗಿರುವ ಅತ್ಯಾಚಾರದ ಬಗ್ಗೆ ಬರೆದಿದ್ದಳು. ಆಗ ಶಾಲೆಯ ಸಿಬ್ಬಂದಿಯವರು ಬಾಲಕಿಯ ಉತ್ತರ ಪತ್ರಿಕೆ ನೋಡಿ ಆಕೆಗೆ ಆಗಿರುವ ಅನ್ಯಾಯವನ್ನು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಪೊಲೀಸರು ಪೋಸ್ಕೋ ಕಾಯ್ದೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪ್ರಾಪ್ತ ಬಾಲಕ ಹಾಗೂ ಯುವಕ ಈ ಕೃತ್ಯವೆಸಗಿದ್ದು, ಇಬ್ಬರಲ್ಲಿ ಒಬ್ಬ ಬಾಲಕಿಗೆ ಸಹೋದರ ಆಗಬೇಕು. ಬಾಲಕಿಯ ತಾಯಿ ಹಾಗೂ ಆರೋಪಿಯ ತಾಯಿ ಸಹೋದರಿಯರು ಎಂದು ತಿಳಿದು ಬಂದಿದೆ. ಸದ್ಯ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಎಸಿಪಿ ಶಕುಂತಲಾ ಯಾದವ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

    ಬೆಂಗಳೂರು: ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

    1. ನಿಮ್ಮ ಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:
    ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್‍ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್‍ಪ್ಯಾಕ್‍ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

    2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ:
    ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್‍ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

    3. ಸ್ಕ್ರಬ್ ಹಾಗೂ ಫೇಶಿಯಲ್‍ನಿಂದ ಪಿಂಪಲ್ ಫ್ರೀ:
    ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

    4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ:
    ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್‍ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

    5. ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು:
    ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್‍ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.

    ಈ ಎಲ್ಲಾ ಟಿಪ್ಸ್ ಜನರು ನಿಜವೆಂದು ನಂಬಿದ್ದರು. ಆದರೆ ಇದು ಶುದ್ಧ ಸುಳ್ಳು ಎಂಬುದು ಈಗ ಗೊತ್ತಾಗಿದೆ. ಸದ್ಯ ನೀವು ಕೂಡ ಈ ಟಿಪ್ಸ್ ನನ್ನು ಅನುಸರಿಸಿದರೆ ಸುಂದರವಾಗಿ ಕಾಣಿಸಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • Exclusive: ಲವ್ ಜಿಹಾದ್ ಕೇಸ್ ನಲ್ಲಿ ಕರ್ನಾಟಕ ಡಿಸಿ ಕುಟುಂಬವೇ ಭಾಗಿ!

    Exclusive: ಲವ್ ಜಿಹಾದ್ ಕೇಸ್ ನಲ್ಲಿ ಕರ್ನಾಟಕ ಡಿಸಿ ಕುಟುಂಬವೇ ಭಾಗಿ!

    ಬೆಂಗಳೂರು: ಲವ್ ಜಿಹಾದ್ ಕೇಸ್ ನಲ್ಲಿ ಕರ್ನಾಟಕ ಡಿಸಿ ಕುಟುಂಬವೇ ಭಾಗಿಯಾಗಿದ್ದು, ಮನೆ ಮೇಲೆ ದಾಳಿ ಮಾಡಿದಾಗ ಸ್ಫೋಟಕ ರಹಸ್ಯ ಹೊರ ಬಂದಿದೆ.

    ಜನವರಿಯಲ್ಲಿ ದಾಖಲಾದ ಕೇರಳ ಯುವತಿಯ ಲವ್ ಜಿಹಾದ್ ಕೇಸ್ ನಲ್ಲಿ ಕಲಬುರುಗಿಯ ಕಮರ್ಷಿಯಲ್ ಟ್ಯಾಕ್ಸ್ ನ ಡಿಸಿ ಇರ್ಷಾದುಲ್ಲಾ ಖಾನ್ ಪತ್ನಿ ಭಾಗಿಯಾಗಿರುವುದು ತಿಳಿದು ಬಂದಿದೆ. ಯುವತಿ ಕೇರಳದ ಕೊಚ್ಚಿಯಿಂದ ಬೆಂಗಳೂರಿಗೆ ಓದಲೆಂದು ಬಂದಿದ್ದಳು. ಆಗ ಬೆಂಗಳೂರಿನ ಬಿಸಿನೆಸ್‍ಮೆನ್ ನಜೀರ್ ಖಾನ್ ಯುವತಿಯನ್ನು ಪ್ರೀತಿಸಿದ್ದನು. ನಂತರ ಆ ಯುವತಿಯ ತಲೆಕೆಡಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದ. ಮತಾಂತರ ಮಾಡಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆಸಿದ ಬಳಿಕ ನಜೀರ್ ಖಾನ್ ಯುವತಿಯನ್ನು ಡಿಸಿ ಇರ್ಷಾದುಲ್ಲಾ ಖಾನ್ ಮನೆಯಲ್ಲಿ ಇರಿಸಿದ್ದನು.

    ನಜೀರ್ ಯುವತಿಯನ್ನು 15 ದಿನಗಳ ಕಾಲ ಡಿಸಿ ಇರ್ಷಾದುಲ್ಲಾ ಖಾನ್ ಮನೆಯಲ್ಲಿಯೇ ಇರಿಸಿ, ಬಳಿಕ ಆಕೆಯನ್ನು ಸೌದಿಗೆ ಕರೆದುಕೊಂಡು ಹೋಗಿದ್ದನು. ಸೌದಿಯಲ್ಲೂ ಕೂಡ ಯವತಿಯ ಮೇಲೆ ಶೇಖ್ ಗಳಿಂದ ನಿರಂತರ ಅತ್ಯಾಚಾರ ನಡೆದಿದೆ. ಈ ಬಗ್ಗೆ ಯುವತಿ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ನಜೀರ್ ಸೌದಿಯಿಂದ ಬೆಂಗಳೂರಿಗೆ ಮಾರ್ಗ ಮಧ್ಯೆ ಬರುತ್ತಿದ್ದಾಗ ಎನ್‍ಐಎ ತಂಡ ಆತನನ್ನು ಬಂಧಿಸಿ ಯುವತಿ ರಕ್ಷಣೆ ಮಾಡಿ ವಿಚಾರಣೆ ನಡೆಸಿದ್ದಾರೆ.

    ವಿಚಾರಣೆ ನಡೆಸುವಾಗ ಯುವತಿ ಸ್ಫೋಟಕ ಮಾಹಿತಿಯೊಂದನ್ನು ಹೊರ ಹಾಕಿದ್ದು, ಇಡೀ ಲವ್ ಜಿಹಾದ್ ನ ಹಿಂದೆ ಡಿಸಿ ಇರ್ಷಾದುಲ್ಲಾ ಖಾನ್ ಕುಟುಂಬದ ಕೈವಾಡವಿತ್ತು ಎಂದು ತಿಳಿಸಿದ್ದಾಳೆ. ಕೊಚ್ಚಿ ಎನ್‍ಐಎ ಮಾಹಿತಿಯನ್ನು ಆಧರಿಸಿ ಎರಡು ದಿನಗಳ ಹಿಂದೆ ದಾಳಿ ನಡೆಸಿತ್ತು. ದೊಮ್ಮಲೂರು ಬಳಿಯ ಡೈಮಂಡ್ ಡಿಸ್ಟ್ರಿಕ್ಟ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಡಿಸಿ ಇರ್ಷಾದುಲ್ಲಾ ಖಾನ್ ಪತ್ನಿಯ ಅಸಲಿಯತ್ತು ಅನಾವರಣಗೊಂಡಿದೆ. ಡಿಸಿ ಪತ್ನಿಯೇ ಲವ್ ಜಿಹಾದ್ ನ ರೂವಾರಿಯೇ ಎಂದು ಎನ್‍ಐಎ ಮೂಲಗಳು ತಿಳಿಸಿವೆ.

    ಡಿಸಿ ಪತ್ನಿ ಹಿಂದೂ ಯುವತಿಯರ ಹೆಸರಲ್ಲಿ ಫೇಸ್ ಬುಕ್, ಇನ್‍ಸ್ಟಾಗ್ರಾಂ ಖಾತೆ ತೆರೆದಿದ್ದು, ಅಕೌಂಟ್ ಗಳ ಮೂಲಕ ಹಿಂದೂ ಯುವತಿಯರನ್ನು ಸೆಳೆದು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಳು ಎಂಬ ಸತ್ಯ ಬಯಲಿಗೆ ಬಂದಿದೆ. ಸದ್ಯ ಎನ್‍ಐಎ ತಂಡ ಡಿಸಿ ಇರ್ಷಾದುಲ್ಲಾ ಖಾನ್ ಪತ್ನಿಯಿಂದ 8 ಲ್ಯಾಪ್ ಟಾಪ್ ಹಾಗೂ 12 ಮೊಬೈಲ್ ಗಳ ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸುತ್ತಿದ್ದಾರೆ

    ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಡಿಸಿ ಇರ್ಷಾದುಲ್ಲಾ ಖಾನ್, “ಈ ರೀತಿಯ ವಿಚಾರಗಳಿಗೆ ಹೋಗಬೇಡ ಎಂದು ಪತ್ನಿಗೆ ಈ ಹಿಂದೆ ತಿಳಿ ಹೇಳಿದ್ದೇನೆ. ಎನ್‍ಐಎ ತಂಡ ವಿಚಾರಣೆ ನಡೆಸಿದೆ ಹಾಗೂ ಯುವತಿ ನಮ್ಮ ಮನೆಗೆ ಬಂದು ಹೋಗಿದ್ದು ನಿಜ. ನನ್ನ ಪತ್ನಿ ಸಮಾಜ ಸೇವೆಯಲ್ಲಿ ತೊಡಗಿದ್ದು, ಆಕೆಯೇ ಸಹಾಯ ಮಾಡಿರಬಹುದು. ಸದ್ಯ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.