Tag: TT

  • ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

    ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

    ಬಳ್ಳಾರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾಕ್ಸಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.

    ಕೃಷ್ಟಪ್ಪ(62) ಮೃತ ದುರ್ದೈವಿ. ಘಟನೆಯಲ್ಲಿ 10 ಜನಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟೆಂಪೋ ಟ್ರಾಕ್ಸಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

    ಕಲುಬುರಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಚಿಕ್ಕಬಳ್ಳಾಪುರದ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದರು. ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು. ಈತ್ತ ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿತ್ತು. ಹೀಗೆ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕಾಲೇಜಿನಲ್ಲಿ ಹಿಜಬ್‌ ನಿಷೇಧ: ಕಾಲೇಜು ನಿರ್ಧಾರ ಎತ್ತಿಹಿಡಿದ ಬಾಂಬೆ ಹೈಕೋರ್ಟ್‌

    ಡಿಕ್ಕಿ ರಭಸಕ್ಕೆ ಟಿಟಿ ನಜ್ಜು- ಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಟಿಟಿಯಲ್ಲಿ ಸಿಲುಕಿಕೊಂಡಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಟ್ಟರು.

    ಈ ಸಂಬಂಧ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಟಿಟಿ ವಾಹನ, ಬೈಕ್ ಮುಖಾಮುಖಿ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

    ಟಿಟಿ ವಾಹನ, ಬೈಕ್ ಮುಖಾಮುಖಿ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

    – ಟಿಟಿ ಚಾಲಕ ಪೊಲೀಸರ ವಶಕ್ಕೆ

    ಹಾಸನ: ಟಿಟಿ (TT) ವಾಹನ ಹಾಗೂ ಬೈಕ್ (Bike) ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

    ಬೇಲೂರು (Belur) ತಾಲೂಕಿನ ಹಳೇಬೀಡು (Halebeedu) ಹೋಬಳಿಯ ಕಲ್ಲಹಳ್ಳಿ ಅರಣ್ಯದ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಶರತ್ (20) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ವೀರೇಶ್ (20) ಸ್ಥಿತಿ ಚಿಂತಾಜನಕವಾಗಿದೆ. ಸುರಪುರ ಗ್ರಾಮದವರಾದ ಶರತ್ ಮತ್ತು ವೀರೇಶ್ ಸ್ಪ್ಲೆಂಡರ್ ಬೈಕ್‌ನಲ್ಲಿ ಬೇಲೂರಿನಿಂದ ಹಳೇಬೀಡು ಕಡೆಗೆ ಬರುತ್ತಿದ್ದರು. ಈ ಸಂದರ್ಭ ಹಳೇಬೀಡಿನಿಂದ ಬೇಲೂರು ಕಡೆಗೆ ಬರುತ್ತಿದ್ದ ಟಿಟಿ ವಾಹನ ಕಲ್ಲಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಇದನ್ನೂ ಓದಿ:‌ 3 ಸಾವಿರಕ್ಕಾಗಿ ಯುವಕನನ್ನು ಹಾಡಹಗಲೇ ಚುಚ್ಚಿ ಚುಚ್ಚಿ ಕೊಂದ!

    ಘಟನೆ ಪರಿಣಾಮ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ವೀರೇಶ್‌ನನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಟಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಣ್ಣೆ ಸಾಲ ಕೊಡಲ್ಲ ಎಂದಿದ್ದಕ್ಕೆ ಕ್ಯಾಶಿಯರ್ ಮೇಲೆ ಬಾಟ್ಲಿಯಿಂದ ಹಲ್ಲೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿ – ಇಬ್ಬರು ಸಾವು, ನಾಲ್ವರಿಗೆ ಗಾಯ

    ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿ – ಇಬ್ಬರು ಸಾವು, ನಾಲ್ವರಿಗೆ ಗಾಯ

    ತುಮಕೂರು: ನಿಂತಿದ್ದ ಬಸ್‌ಗೆ ಟಿಟಿ (TT) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ಕುಣಿಗಲ್ (Kunigal) ತಾಲೂಕಿನ ರಾಜ್ಯ ಹೆದ್ದಾರಿ 33 ಹುಲಿಯೂರು ದುರ್ಗ ಹೋಬಳಿಯ ಡಿ.ಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು, ರಾಯಚೂರು (Raichur) ಜಿಲ್ಲೆ ಸಿಂಧನೂರು (Sindhanur) ನಿವಾಸಿ ಟಿಟಿ ಚಾಲಕ ವೀರೇಶ್ (30), ಶಶಿಕಲಾ (69) ಸಾವನ್ನಪ್ಪಿದ್ದಾರೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷ ಎಂಬವರು ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ- ಸವಾರನ ಕಾಲು ಮುರಿತ, ತಲೆಗೆ ಗಂಭೀರ ಗಾಯ

    ಶಶಿಕಲಾ ಹಾಗೂ ಅವರ ಕುಟುಂಬದ 11 ಮಂದಿ ಸದಸ್ಯರು ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆಂದು ರಾತ್ರಿ ಹೊರಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ (Mysuru) ಹೋಗುತ್ತಿದ್ದ ಸಂದರ್ಭ ಗುರುವಾರ ಬೆಳಗ್ಗೆ ಡಿ.ಹೊಸಹಳ್ಳಿ (D.Hosahalli) ಗ್ರಾಮದ ಬಳಿ ನಿಂತಿದ್ದ ಖಾಸಗಿ ಬಸ್‌ಗೆ ಟಿಟಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ಟಿಟಿ ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಶಶಿಕಲಾ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವು

    ಈ ಕುರಿತು ಹುಲಿಯೂರು ದುರ್ಗ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬೈಕ್ ಅಪಘಾತದಲ್ಲಿ ಕಾಫಿನಾಡಿನ ಎನ್‌ಎಸ್‌ಜಿ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವು 

  • ಇಂದು ಸುವರ್ಣ ದಿನ- ಟೇಬಲ್ ಟೆನಿಸ್‍ನಲ್ಲಿ ಚಿನ್ನ ಗೆದ್ದ ಭಾರತ

    ಇಂದು ಸುವರ್ಣ ದಿನ- ಟೇಬಲ್ ಟೆನಿಸ್‍ನಲ್ಲಿ ಚಿನ್ನ ಗೆದ್ದ ಭಾರತ

    ಬರ್ಮಿಂಗ್‍ಹ್ಯಾಮ್: ಮಂಗಳವಾರ ಕಾಮನ್‍ವೇಲ್ತ್ ಕ್ರೀಡಾಕೂಟದಲ್ಲಿ ಭಾರತದ ಪಾಲಿಗೆ ಸುವರ್ಣ ದಿನವಾಗಿದ್ದು, ಭಾರತವು ಮೊದಲ ಪಂದ್ಯದಲ್ಲಿ, ಮಹಿಳಾ ಫೋರ್ಸ್ ಲಾನ್ ಬೌಲ್ಸ್ ತಂಡವು ಫೈನಲ್‍ನಲ್ಲಿ ದಕ್ಷಿಣ ಆಫ್ರಿಕಾವನ್ನು 17-10 ರಿಂದ ಸೋಲಿಸುವ ಮೂಲಕ ಕ್ರೀಡೆಯಲ್ಲಿ ಐತಿಹಾಸಿಕ ಚಿನ್ನವನ್ನು ಗೆದ್ದುಕೊಂಡಿತ್ತು. ಇದೀಗ ಪುರುಷರ ವಿಭಾಗವು ಟೇಬಲ್ ಟೆನಿಸ್‍ನಲ್ಲಿ ಚಿನ್ನವನ್ನು ಗೆದ್ದಿದೆ.

    ಇದೀಗ ಸಿಂಗಾಪುರ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3-1 ಅಂತರದಲ್ಲಿ ಗೆಲುವು ದಾಖಲಿಸಿರುವ ತಂಡ ಭಾರತಕ್ಕೆ 5ನೇ ಚಿನ್ನದ ಪದಕವನ್ನು ತಂದುಕೊಟ್ಟಿದೆ. ಈ ಮೂಲಕ ಇಂದೇ 2 ಚಿನ್ನ ಹಾಗೂ ಒಂದು ಬೆಳ್ಳಿ ಭಾರತಕ್ಕೆ ಬಂದಿದೆ. ಇದನ್ನೂ ಓದಿ: ಲಾನ್‌ ಬಾಲ್ಸ್‌ನಲ್ಲಿ ಇತಿಹಾಸ ಸೃಷ್ಟಿ – ಚಿನ್ನ ಗೆದ್ದ ವನಿತೆಯರು

    ಚಂತಾ ಕಮಲ್ ನಾಯಕತ್ವದ ತಂಡ ಈ ಹಿಂದೆ ಬಾರ್ಬಡೋಸ್, ಉತ್ತರ ಐರ್ಲೆಂಡ್, ಬಾಂಗ್ಲಾದೇಶದ ವಿರುದ್ಧ ಗೆಲುವು ದಾಖಲಿಸಿತ್ತು.

    ಇನ್ನುಳಿದಂತೆ ಭಾರತದ ಬ್ಯಾಡ್ಮಿಂಟನ್ ತಂಡವು ಮಿಕ್ಸೆಡ್ ಟೀಮ್ ಫೈನಲ್‍ನಲ್ಲಿ ಮಲೇಷ್ಯಾವನ್ನು ಎದುರಿಸುವುದರಿಂದ ಭಾರತಕ್ಕೆ ಮತ್ತೊಂದು ಪದಕ ಬರುವ ನೀರಿಕ್ಷೆಯಿದೆ. ಇದನ್ನೂ ಓದಿ: ಏಷ್ಯಾ ಕಪ್‌ – ಭಾರತ್‌, ಪಾಕ್‌ ಪಂದ್ಯಕ್ಕೆ ಡೇಟ್‌ ಫಿಕ್ಸ್‌

    ಅಥ್ಲೆಟಿಕ್ಸ್‌ನಲ್ಲಿ ಮುರಳಿ ಶ್ರೀಶಂಕರ್ ಮತ್ತು ಮುಹಮ್ಮದ್ ಅನೀಸ್ ಯಾಹಿಯಾ ಪುರುಷರ ಲಾಂಗ್ ಜಂಪ್ ಫೈನಲ್‍ಗೆ ಅರ್ಹತೆ ಪಡೆದಿದ್ದಾರೆ. ಹಾಗೂ ಸ್ಟಾರ್ ಶಾಟ್‍ಪುಟ್ ಆಟಗಾರ್ತಿ ಮನ್‍ಪ್ರೀತ್ ಕೌರ್ ಫೈನಲ್‍ಗೆ ಅರ್ಹತೆ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೇತುವೆ ಮೇಲೆ ಟಿ.ಟಿ ಪಲ್ಟಿ- 14 ಪ್ರಯಾಣಿಕರು ಸೇಫ್

    ಸೇತುವೆ ಮೇಲೆ ಟಿ.ಟಿ ಪಲ್ಟಿ- 14 ಪ್ರಯಾಣಿಕರು ಸೇಫ್

    ಉಡುಪಿ: ಟೆಂಪೋ ಟ್ರಾವೆಲರ್ ಪಲ್ಟಿಯಾಗಿ ಪವಾಡ ಸದೃಶ ರೀತಿಯಲ್ಲಿ 14 ಜನ ಪಾರಾದ ಘಟನೆ ಉಡುಪಿಯ ಸಂತಕಟ್ಟೆ ನಯಂಪಳ್ಳಿ ಸೇತುವೆ ಮೇಲ್ಭಾಗದಲ್ಲಿ ನಡೆದಿದೆ.

    ದಕ್ಷಿಣಕನ್ನಡ ಜಿಲ್ಲೆಯ ಪೂತ್ತೂರಿನಿಂದ ಸುಮಾರು 14 ಮಂದಿ ಪ್ರಯಾಣಿಕರಿದ್ದ ಟೆಂಪೋ ಟ್ರಾವೆಲರ್ ಉಡುಪಿಯ ಸಂತೆಕಟ್ಟೆ ಸಮೀಪದ ನಯಂಪಳ್ಳಿ ಸೇತುವೆ ಸಮೀಪಿಸುತ್ತಿದ್ದಂತೆ ಉರುಳಿ ಬಿದ್ದಿದೆ. ಟಿ.ಟಿ ಒಳಗಡೆ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೆಂಪೋ ಬೀಳುತ್ತಿದ್ದಂತೆ ಒಳಗಿದ್ದವರು ತಾವೇ ಹೊರಗೆ ಬಂದಿದ್ದಾರೆ. ವಾಹನದ ಮುಂಭಾಗದ ಗಾಜು ಪುಡಿಯಾಗಿದ್ದು ಪ್ರಯಾಣಿಕರಿಗೆ ಗಾಯಗಳಾಗಿದೆ.

    ಬೆಳ್ಳಗ್ಗಿನಿಂದ ಮಳೆ ಸುರಿಯುತ್ತಿದ್ದು ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿದೆ ಎನ್ನಲಾಗಿದೆ. ಸೇತುವೆ ಮಧ್ಯದಲ್ಲಿಯೇ ವಾಹನ ಪಲ್ಟಿಯಾದ ಕಾರಣ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ವ್ಯತ್ಯಯವಾಯ್ತು. ಉಡುಪಿ ಮತ್ತು ಬ್ರಹ್ಮಾವರ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಟೆಂಪೋವನ್ನು ಎತ್ತಿ ಬದಿಗಿರಿಸಿದರು.

    ಕೇರಳ- ಮಂಗಳೂರು- ಉಡುಪಿ- ಕಾರವಾರ ಮಾರ್ಗವಾಗಿ ಗೋವಾ ರಾಜ್ಯಕ್ಕೆ ನೂರಾರು ಮೀನಿನ ವಾಹನ ಸಂಚಾರ ಮಾಡುತ್ತವೆ. ಮೀನಿನ ಎಣ್ಣೆ ರಸ್ತೆ ಮೇಲೆಲ್ಲಾ ಬಿದ್ದು ಜಾರುತ್ತಿರುತ್ತದೆ. ಈ ಪ್ರಕರಣದಲ್ಲಿಯೂ ಚಾಲಕನ ನಿಯಂತ್ರಣ ತಪ್ಪಲು ಮೀನಿನೆಣ್ಣೆ ರಸ್ತೆಗೆ ಬಿದ್ದಿದ್ದೇ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ.