Tag: Tube Well

  • ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ಉಕ್ಕಿ ಹರಿದ ನೀರು

    ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ಉಕ್ಕಿ ಹರಿದ ನೀರು

    ಮಂಗಳೂರು: ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿ ಉಕ್ಕಿ ಹರಿದ ನೀರು ಕಂಡು ನಾಗದೇವರ ಪವಾಡ ಎಂದ ಜನ ಹೇಳಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗಾರಾಧನೆಯನ್ನು ಸಾಕಷ್ಟು ಭಯಭಕ್ತಿಯಿಂದ ಮಾಡಲಾಗುತ್ತದೆ. ಆಗೊಮ್ಮೆ ಈಗೊಮ್ಮೆ ನಾಗಶಕ್ತಿಯ ಕಾರಣಿಕವೂ ಇಲ್ಲಿ ಬೆಳಕಿಗೆ ಬರುತ್ತಿರುತ್ತದೆ. ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿಯೂ ನಾಗದೇವರು ಕಾರಣಿಕ ತೋರಿಸಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ.

    ನಾಗನ ಕಟ್ಟೆಯ ಬಳಿಯೇ ಇದ್ದ ಕೊಳವೆ ಬಾವಿಯೊಂದರಲ್ಲಿ ನೀರು ಬತ್ತಿ ಹೋಗಿತ್ತು. ಹೀಗಾಗಿ ನಾಗದೇವರಲ್ಲಿ ಪ್ರಾರ್ಥನೆ ಮಾಡಿ ಅಲ್ಲೇ ಪಕ್ಕದಲ್ಲಿ ಇನ್ನೊಂದು ಕೊಳವೆ ಬಾವಿ ಕೊರೆಯಲಾಯಿತು. ಆದರೆ ಆಶ್ಚರ್ಯ ಎಂಬಂತೆ 200 ಫೀಟ್ ಆಳದಲ್ಲಿಯೇ ಸುಮಾರು ಐದೂವರೆ ಇಂಚು ನೀರು ಲಭ್ಯವಾಗಿದೆ. ಇದಲ್ಲದೆ ಮೊದಲು ಬತ್ತಿ ಹೋಗಿದ್ದ ಕೊಳವೆ ಬಾವಿಯಲ್ಲಿಯೂ ಅದೇ ಸಂದರ್ಭ ನೀರು ಉಕ್ಕಿ ಹರಿದಿದೆ.ಇದನ್ನು ಓದಿ: ದೈವ ಸ್ಥಳಗಳನ್ನು ಅಪವಿತ್ರಗೊಳಿಸಿದ್ದ ಓರ್ವ ರಕ್ತಕಾರಿ ಸಾವು – ಇನ್ನಿಬ್ಬರು ದೈವಗಳ ಮುಂದೆ ಶರಣು

    ಸದ್ಯ ನೀರು ಉಕ್ಕಿ ಹರಿಯುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನಾಗದೇವರ ಕಾರಣಿಕದ ಬಗ್ಗೆ ಸ್ಥಳೀಯರು ಕೊಂಡಾಡುತ್ತಿದ್ದಾರೆ.

  • 73 ಕೋಟಿ ರೂ. ಮೌಲ್ಯದ ನೀರು ಕಳ್ಳತನ

    73 ಕೋಟಿ ರೂ. ಮೌಲ್ಯದ ನೀರು ಕಳ್ಳತನ

    ಮುಂಬೈ: 73 ಕೋಟಿ ರೂ. ಮೌಲ್ಯದ ಅಂತರ್ಜಲ ಕಳ್ಳತನದ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಳ್ಳತನ ಆರೋಪದಡಿಯಲ್ಲಿ ಕಾಲಬಾದೇವಿಯಲ್ಲಿರುವ ಬೋಮಾನಜಿ ಮಾಸ್ಟರ್ ಲೈನ್, ಪಾಂಡ್ಯ ಮೇಂಶನ್ ಮಾಲೀಕನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಳೆದ 11 ವರ್ಷಗಳಲ್ಲಿ ಆರೋಪಿ ನೀರು ಸರಬರಾಜು ವ್ಯಕ್ತಿಗಳ ಜೊತೆ ಸೇರಿ 73.19 ಕೋಟಿ ರೂ. ಮೌಲ್ಯದ ನೀರು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

    ಆರ್‍ಟಿಐ ಕಾರ್ಯಕರ್ತ ಸುರೇಶ್‍ಕುಮಾರ್ ಎಂಬವರು ಪಾಂಡ್ಯ ಮೇಂಶನ್ ಕಂಪನಿ ವಿರುದ್ಧ ಸಾಕ್ಷಿ ಸಮೇತವಾಗಿ ದೂರು ದಾಖಲಿಸಿದ್ದಾರೆ. ಪಾಂಡ್ಯ ಮೇಂಶನ್ ಕಂಪನಿ ಮಾಲೀಕರಾಗಿರುವ ತ್ರಿಪುರಪ್ರಸಾದ್ ಪಾಂಡ್ಯ ಮತ್ತು ಸಹಭಾಗಿತ್ವದ ಕಂಪನಿಯ ನಿರ್ದೇಶಕರಾದ ಪ್ರಕಾಶ್ ಪಾಂಡ್ಯ ಹಾಗೂ ಮನೋಜ್ ಪಾಂಡ್ಯ ತಮ್ಮ ನಿವೇಶನದಲ್ಲಿ ಅಕ್ರಮವಾಗಿ ಕೊಳವೆ ಬಾವಿ ತೆರೆದು ನೀರು ಕಳ್ಳತನ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ಆರೋಪಿಸಿದ್ದಾರೆ.

    6.10 ಲಕ್ಷ ಟ್ಯಾಂಕರ್ ನೀರು ಮಾರಾಟ:
    ಪಾಂಡ್ಯ ಈ ಕೊಳವೆಬಾವಿಗಳಿಗೆ ಪಂಪ್ ಜೋಡಿಸಿ, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡು ನೀರು ಎತ್ತಿದ್ದಾರೆ. ಮೇಲ್ಕೆತ್ತಿದ್ದ ನೀರನ್ನು ಟ್ಯಾಂಕರ್ ಮಾಲೀಕರಾದ ಅರುಣ್ ಮಿಶ್ರಾ, ಶ್ರವಣ್ ಮಿಶ್ರಾ ಮತ್ತು ಧೀರಜ್ ಮಿಶ್ರಾ ಎಂಬವರ ಮುಖಾಂತರ ಮಾರಾಟ ಮಾಡಿದ್ದಾರೆ. 2006ರಿಂದ 2017ರ ನಡುವೆ ಒಟ್ಟು 6.10 ಲಕ್ಷ ಲೀ. ಟ್ಯಾಂಕರ್ ನೀರು ಮಾರಿದ್ದಾರೆ ಎಂದು ಎಫ್‍ಐಆರ್ ದಾಖಲಾಗಿದೆ.

    ಒಂದು ಟ್ಯಾಂಕರ್ 10 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದೆ. ಮಾರುಕಟ್ಟೆಯಲ್ಲಿ ಗ್ರಾಹಕರು ಒಂದು ಟ್ಯಾಂಕರ್ ಅಂದಾಜು 12 ಸಾವಿರ ರೂ. ನೀಡಿ ಖರೀದಿಸುತ್ತಾರೆ. ಈ ಬಾವಿಗಳನ್ನು ಶಾಶ್ವತವಾಗಿ ಮುಚ್ಚುವಂತೆ ಹಸಿರು ನ್ಯಾಯಮಂಡಳಿ ಆದೇಶಿಸಿದೆ.