Tag: tuition

  • ಚಿತ್ರದುರ್ಗ| ಕಿಡ್ನ್ಯಾಪ್ ಕೇಸ್‌ಗೆ ಟ್ವಿಸ್ಟ್ – ಹೋಂವರ್ಕ್, ಟ್ಯೂಷನ್‌ನಿಂದ ತಪ್ಪಿಸಿಕೊಳ್ಳಲು ಕಥೆ ಕಟ್ಟಿದ ಬಾಲಕರು

    ಚಿತ್ರದುರ್ಗ| ಕಿಡ್ನ್ಯಾಪ್ ಕೇಸ್‌ಗೆ ಟ್ವಿಸ್ಟ್ – ಹೋಂವರ್ಕ್, ಟ್ಯೂಷನ್‌ನಿಂದ ತಪ್ಪಿಸಿಕೊಳ್ಳಲು ಕಥೆ ಕಟ್ಟಿದ ಬಾಲಕರು

    ಚಿತ್ರದುರ್ಗ: ಟ್ಯೂಷನ್‌ಗೆ (Tuition) ಹೋಗುವುದರಿಂದ ತಪ್ಪಿಸಿಕೊಳ್ಳಲು 11 ವರ್ಷದ ಬಾಲಕರು ಸಿನಿಮಾ ಶೈಲಿಯಲ್ಲಿ ಕಿಡ್ನ್ಯಾಪ್ (Kidnap) ಕಥೆ ಕಟ್ಟಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ನಡೆದಿದೆ.

    ನಿತ್ಯ ಟ್ಯೂಷನ್‌ಗೆ ಹೋಗಿಬರುತ್ತಿದ್ದ ಇಬ್ಬರು ಮಕ್ಕಳು ಟ್ಯೂಷನ್‌ನಲ್ಲಿ ಕೊಟ್ಟಿದ್ದ ಹೋಂವರ್ಕ್ (Homework) ಮಾಡಲಾಗದೇ, ಹೊಸ ಕಥೆಯೊಂದನ್ನು ಹೆಣೆದಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಟ್ಯೂಷನ್‌ಗೆ ತೆರಳಿದ್ದ ಇಬ್ಬರು ಬಾಲಕರು, ನಮ್ಮ ಅಪಹರಣಕ್ಕೆ ಕಳ್ಳರು ಯತ್ನಿಸಿದ್ರು. ಕಳೆದ 15 ದಿನಗಳಿಂದ ಈ ಮಕ್ಕಳ ಅಪಹರಣಕ್ಕೆ ನಾಲ್ವರ ತಂಡ ಸ್ಕೆಚ್ ಹಾಕಿದ್ದು, ಬಹಿರ್ದೆಸೆಗೆ ತೆರಳಿದ್ದವರನ್ನು ರಾಸಾಯನಿಕ ಸ್ಪ್ರೇ ಸಿಂಪಡಿಸಿ ಓಮ್ನಿ ಕಾರಲ್ಲಿ ಕಿಡ್ನಾಪ್ ಮಾಡಿದ್ದು, 10 ಕಿಲೋಮೀಟರ್ ದೂರದಲ್ಲಿ ಬಿಟ್ಟು ಎಸ್ಕೇಪ್ ಆದರು ಎಂದು ಎಲ್ಲರನ್ನು ನಂಬಿಸಿದ್ದರು. ಈ ಪ್ರಕರಣದಿಂದ ಆತಂಕಗೊಂಡ ಮಕ್ಕಳ ಪೋಷಕರು ಅಬ್ಬಿನಹೊಳೆ ಠಾಣೆಗೆ ದೂರು ನೀಡಿ, ಕೂಡಲೇ ಈ ಪ್ರಕರಣ ಭೇದಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಅಪಹರಣಕಾರರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಇದನ್ನೂ ಓದಿ: ಬಾಣಂತಿಯರ ಸಾವು ಪ್ರಕರಣ – ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಪತ್ರ ಬರೆದ ಸಂಸದ ಸುಧಾಕರ್‌

    ಇನ್ನು ಈ ವಿಚಾರ ಕೇಳಿ ಬೆಚ್ಚಿಬಿದ್ದ ಹಿರಿಯೂರು ಡಿವೈಎಸ್ಪಿ ಶಿವಕುಮಾರ್ ಮತ್ತು ತಂಡ ಪ್ರಕರಣದ ಬೆನ್ನತ್ತಿದೆ. ಬಾಲಕರು ಓದುತಿದ್ದ ಶಾಲೆ ಹಾಗೂ ಟ್ಯೂಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಧರ್ಮಪುರದಲ್ಲಿನ ಸಿಸಿಟಿವಿಗಳಲ್ಲಿ ತಲಾಶ್ ನಡೆಸಿದ್ದಾರೆ. ಆದರೆ ಬಾಲಕರು ಹೇಳಿದಂತೆ ಓಮ್ನಿ ಓಡಾಡಿರುವ ಕುರುಹು ಎಲ್ಲೂ ಪತ್ತೆಯಾಗಲಿಲ್ಲ. ಆಗ ಅಲರ್ಟ್ ಆದ ಪೊಲೀಸರು, ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಿ, ಬುದ್ದಿವಂತಿಕೆಯಿಂದ ಮಕ್ಕಳ ವಿಚಾರಣೆ ನಡೆಸಿದಾಗ ಕಿಡ್ನ್ಯಾಪ್ ಕಹಾನಿಯ ಅಸಲಿ ಸತ್ಯವನ್ನು ಬಾಲಕರು ಬಾಯಿ ಬಿಟ್ಟಿದ್ದಾರೆ ಎಂದು ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್; ಆರ್ಥಿಕ ಸುಧಾರಣೆಗೆ ಐದು ವಲಯಗಳಲ್ಲಿ ಬದಲಾವಣೆ ನಿರೀಕ್ಷೆ

  • ಟ್ಯೂಶನ್ ಮುಗಿಸಿ ಹೋಗ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ – ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವು

    ಟ್ಯೂಶನ್ ಮುಗಿಸಿ ಹೋಗ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ – ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವು

    ರಾಮನಗರ: ಟ್ಯೂಶನ್ (Tuition) ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ (Goods Vehicle) ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.

    ಸುಚಿತ್ (10) ಮೃತ ದುರ್ದೈವಿ. ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಅಪಘಾತ ನಡೆದಿದ್ದು, ಸಾವಿನ ಸಂಖ್ಯೆ ಒಟ್ಟು ಮೂರಕ್ಕೆ ಏರಿದೆ. ಆಗಸ್ಟ್ 9ರಂದು ಟ್ಯೂಶನ್ ಮುಗಿಸಿಕೊಂಡು ಐವರು ಮಕ್ಕಳು ಮನೆಗೆ ಹೋಗುತ್ತಿದ್ದ ಸಂದರ್ಭ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದರು. ಇದನ್ನೂ ಓದಿ: ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ಮನನೊಂದು ಯುವಕ ಆತ್ಮಹತ್ಯೆ

    ಘಟನೆಯಿಂದ ಬದುಕುಳಿದ ಮೂವರು ಮಕ್ಕಳಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ಸುಚಿತ್ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕೂಲಿ ಕಾರ್ಮಿಕನ ಕುಟುಂಬದ ಮೇಲೆ ಮೇಸ್ತ್ರಿಯಿಂದ ಮಾರಣಾಂತಿಕ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

    ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

    ಚಂಡೀಗಢ: ಟ್ಯೂಶನ್‍ಗೆಂದು ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಛತ್ತೀಸ್‍ಗಢದ (Chhattisgarh) ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

    11 ಮತ್ತು 12 ವರ್ಷ ಬಾಲಕಿಯರು ಆರೋಪಿಯನ್ನು ತಮ್ಮ ಟ್ಯೂಶನ್ ಟೀಚರ್ ತಂದೆ ಎಂದು ತಿಳಿಸಿದ್ದಾರೆ. ಆಸಾರಾಮ್ ಬಾಪು ನಗರದಲ್ಲಿ ಮಹಿಳೆಯೊಬ್ಬರು ನಡೆಸುತ್ತಿದ್ದ ಟ್ಯೂಶನ್‍ಗೆ 11-12 ವರ್ಷದ ಬಾಲಕಿಯರು ಬರುತ್ತಿದ್ದರು. ಈ ವೇಳೆ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪದಡಿ ಇದೀಗ ಮಹಿಳೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಮುಖ್ಯ ಪೊಲೀಸ್ ಅಧೀಕ್ಷಕ (ಸಿಎಸ್‍ಪಿ) ಕಂಟೋನ್ಮೆಂಟ್ ಪ್ರಭಾತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ಅಸಾರಾಂ ಬಾಪು ನಗರದಲ್ಲಿರುವ (Asaram Bapu Nagar) ಭಿಲಾಯಿಯ ಜಮುಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Bhilai’s Jamul police station area) ಈ ಘಟನೆ ನಡೆದಿದೆ. ಮನೆಯ ಸುತ್ತಮುತ್ತಲಿರುವ ಮಕ್ಕಳಿಗೆ ಮಹಿಳೆಯೊಬ್ಬರು ಟ್ಯೂಶನ್ ಹೇಳಿಕೊಡುತ್ತಿದ್ದರು. ಈ ಮಧ್ಯೆ ಮನೆಕೆಲಸವನ್ನು ಮಾಡಲು ಒಳಗೆ ಹೋದಾಗ, ಮಹಿಳೆಯ ತಂದೆ ಹುಸೇನ್ ಚಾಕೊಲೇಟ್ ನೀಡಿ ಬಾಲಕಿಯರಿಗೆ ಕಿರುಕುಳ ನೀಡುತ್ತಿರುತ್ತಾನೆ ಎಂದು ಐದನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಕುಟುಂಬಸ್ಥರಿಗೆ ಈ ಬಗ್ಗೆ ತಿಳಿಸಿದ್ದಾಳೆ. ಇದಾದ ಬಳಿಕ ಇತರ ಹುಡುಗಿಯರು ಕೂಡ ಈ ವಿಚಾರವನ್ನು ಮನೆಯವರ ಬಳಿ ಹೇಳಿಕೊಂಡಿದ್ದಾರೆ.

    ಬಳಿಕ ಅನೇಕ ಬಾಲಕಿಯರ ಕುಟುಂಬಸ್ಥರು ಜಮುಲ್ ಪೊಲೀಸ್ ಠಾಣೆಗೆ ಆಗಮಿಸಿ ಶಹದತ್ ಹುಸೇನ್ ವಿರುದ್ಧ ದೂರು ದಾಖಲಿಸಿ, ಆತನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ದೂರಿನನ್ವಯ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಮೆರಿಕದ ಬಾರ್‌ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ -12 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ರೇಪ್ ಮಾಡಿ ಬಾಲಕಿಯನ್ನು ಹತ್ಯೆಗೈದ – ಕಾಮುಕ ಕಾಂತರಾಜು ಗಲ್ಲಿಗೆ ಆಗ್ರಹ

    ರೇಪ್ ಮಾಡಿ ಬಾಲಕಿಯನ್ನು ಹತ್ಯೆಗೈದ – ಕಾಮುಕ ಕಾಂತರಾಜು ಗಲ್ಲಿಗೆ ಆಗ್ರಹ

    – ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ
    – ಮರಣೋತ್ತರ ಪರೀಕ್ಷೆಯಲ್ಲಿ ದೃಢ

    ಮಂಡ್ಯ: ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿರುವುದು ದೃಢಪಟ್ಟಿದ್ದು, ಟ್ಯೂಶನ್ ಮೇಲ್ವಿಚಾರಕ ಕಾಂತರಾಜು ಈ ಹೇಯ ಕೃತ್ಯವೆಸಗಿದ್ದಾನೆ ಎಂಬ ಸತ್ಯ ಬಹಿರಂಗಗೊಂಡಿದೆ.

    ಹೌದು, ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malvalli) ಪಟ್ಟಣದಲ್ಲಿ ಮಂಗಳವಾರ ಟ್ಯೂಶನ್‍ಗೆ ಹೋಗಿದ್ದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಳು. ಈ ಸಂಬಂಧ ಮೊದಲು ಸೆಕ್ಷನ್ 302 ಪ್ರಕರಣದಡಿ ಮಳವಳ್ಳಿ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಹಾಗಾಗಿ 302 ಸೆಕ್ಷನ್ ಜೊತೆಗೆ ಪೋಸ್ಕೋ (Posco) ಹಾಗೂ 307 ಪ್ರಕರಣಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದನ್ನೂ ಓದಿ: ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    ಮಂಗಳವಾರ ಟ್ಯೂಶನ್ ಎಷ್ಟು ಗಂಟೆಗಿದೆ ಎಂದು ವಿಚಾರಿಸಲು ಬಾಲಕಿ ಮೇಲ್ವಿಚಾರಕನಿಗೆ ಫೋನ್ ಮಾಡಿದ್ದಳು. ಸಂಜೆ 5 ಗಂಟೆಗೆ ಟ್ಯೂಶನ್ ಇದ್ದರೂ ಬೆಳಗ್ಗೆ 11.30ಕ್ಕೆ ಬರುವಂತೆ ಕಾಂತರಾಜು ಹೇಳಿದ್ದನು. ನಂತರ ಟ್ಯೂಷನ್‍ಗೆ ಬಂದ ಬಾಲಕಿ ಮೇಲೆ ಕಾಂತರಾಜು ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಚಾರ ಬಹಿರಂಗವಾಗುತ್ತದೆ ಎಂದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯ ಕತ್ತು ಹಿಸುಕಿ, ಬಳಿಕ ಕಲ್ಲಿನಿಂದ ತಲೆಯ ಭಾಗಕ್ಕೆ ಹೊಡೆದು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ FIR – ಆರೋಪಿ ಅರೆಸ್ಟ್

    ಕೊಲೆ ನಂತರ ನಿರ್ಮಾಣ ಹಂತದ ಮನೆಯ ಸಂಪ್‍ಗೆ ಮೃತದೇಹ ಹಾಕಿ ಪರಾರಿಯಾಗಿದ್ದನು. ನೀಚ ಕೃತ್ಯ ನಡೆಸಿ ತನಗೇನು ಗೊತ್ತೇ ಇಲ್ಲ ಎಂಬಂತೆ ಬಾಲಕಿಯ ಕುಟುಂಬಸ್ಥರ ಜೊತೆ ಸೇರಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೇ ಪೊಲೀಸರು ಬಂದಾಗಲೂ ಸ್ಥಳದಲ್ಲೇ ಇದ್ದ ಕಾಂತರಾಜು ತನಗೇನು ಗೊತ್ತಿಲ್ಲ ಎಂಬಂತೆ ನಾಟಕ ಮಾಡಿದ್ದಾನೆ. ನಂತರ ಈ ಪ್ರಕರಣಕ್ಕೆ ಸಂಬಂಧ ಕಾಂತರಾಜು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಟ್ಯೂಷನ್ ಮೇಲೆನ ರೂಮ್‍ನಲ್ಲೇ ವಾಸವಿದ್ದ ಕಾಂತರಾಜು ಹೆಂಡತಿ, ಇಬ್ಬರು ಹೆಣ್ಣು ಮಕ್ಕಳಿಂದ ದೂರವಾಗಿ ಬದುಕುತ್ತಿದ್ದನು.

    ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಪೋಷಕರು, ನನ್ನ ಮಗಳು ಡಾಕ್ಟರ್ ಆಗುವ ಕನಸು ಕಂಡಿದ್ದಳು. ನನ್ನ ಮಗಳಿಗೆ ಆದ ಅನ್ಯಾಯ ಮತ್ಯಾರಿಗೂ ಆಗಬಾರದು. ನನ್ನ ಮಗಳಿಗೆ ಆದ ಅನ್ಯಾಯ ಮತ್ಯಾರಿಗೂ ಆಗಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಗೆ ಮರಣ ದಂಡನೆ ವಿಧಿಸಬೇಕೆಂದು ಕಣ್ಣೀರು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಸಂಪ್‍ನಲ್ಲಿ ಶವವಾಗಿ ಪತ್ತೆ

    ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಸಂಪ್‍ನಲ್ಲಿ ಶವವಾಗಿ ಪತ್ತೆ

    ಮಂಡ್ಯ: ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ಪಟ್ಟಣದಲ್ಲಿ ಜರುಗಿದೆ.

    ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ ದಿವ್ಯಾ(10) ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ. ಇಂದು ಬೆಳಗ್ಗೆ 11 ಗಂಟೆಗೆ ಟ್ಯೂಶನ್‍ಗೆ ಎಂದು ಮನೆಯಿಂದ ಹೋದ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಬಾಲಕಿ ಪತ್ತೆಯಾಗಿಲ್ಲ. ಇದಾದ ಬಳಿಕ ಪೋಷಕರು ಎಲ್ಲಾ ಕಡೆ ತಮ್ಮ ಮಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇಷ್ಟಾದರೂ ಸಹ ದಿವ್ಯಾ ಮಾತ್ರ ಪತ್ತೆಯಾಗಿಲ್ಲ.

    POLICE JEEP

    ಇದಾದ ನಂತರ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‍ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಇದನ್ನೂ ಓದಿ: IIT ಉದ್ಘಾಟನೆಗೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ್ದೇನೆ: ಪ್ರಹ್ಲಾದ್ ಜೋಶಿ

    ಸದ್ಯ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಾಳದೊಂದಿಗೆ ಪರಿಶೀಲನೆ ನಡೆಸಿದರು. ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಓಲಾ, ಊಬರ್ ಆಟೋ ಬಂದ್- ಸರ್ಕಾರದಿಂದಲೇ ಆಟೋ ದರ ನಿಗದಿ

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ನಿಯಮ ಗಾಳಿಗೆ ತೂರಿ ಅಕ್ರಮವಾಗಿ ಟ್ಯೂಷನ್- ಸೋಂಕಿನ ಭೀತಿಯಲ್ಲಿ ಮಕ್ಕಳು

    ಕೊರೊನಾ ನಿಯಮ ಗಾಳಿಗೆ ತೂರಿ ಅಕ್ರಮವಾಗಿ ಟ್ಯೂಷನ್- ಸೋಂಕಿನ ಭೀತಿಯಲ್ಲಿ ಮಕ್ಕಳು

    – ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ

    ಗದಗ: ಡೆಡ್ಲಿ ವೈರಸ್‍ನಿಂದ ರಾಜ್ಯದಲ್ಲಿ ಇನ್ನು ಶಾಲೆಗಳು ಶುರುವಾಗಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡಿರೋ ಗದಗ ನಗರದ ಕೆಲ ಶಿಕ್ಷಕರು ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.

    ಕೊರೊನಾ ಭಯದಲ್ಲಿ ಸರ್ಕಾರವೇ ಇನ್ನೂ ಶಾಲೆಗಳನ್ನು ಶುರು ಮಾಡಿಲ್ಲ. ಇನ್ನು ವಠಾರ ಶಾಲೆಯಾದ ವಿದ್ಯಾಗಮ ತರಗತಿಗಳನ್ನು ನಿಲ್ಲಿಸಲಾಗಿದೆ. ಪಾಠಕ್ಕಿಂತ ಮಕ್ಕಳ ಜೀವ ಮುಖ್ಯ. ಹೀಗಾಗಿ ಸರ್ಕಾರವೇ ಶಾಲೆಗಳನ್ನು ತೆರೆಯಲು ಇನ್ನೂ ಧೈರ್ಯ ಮಾಡಿಲ್ಲ. ಆದರೆ ಗದಗದಲ್ಲಿ ಮಾತ್ರ ಟ್ಯೂಷನ್ ಹೆಸರಲ್ಲಿ ಸರ್ಕಾರ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

    ಕೊಠಡಿ ತುಂಬಾ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು, ಯಾವುದೇ ಸಾಮಾಜಿಕ ಅಂತರದವಿಲ್ಲದೆ ಅಕ್ಕಪಕ್ಕದಲ್ಲೇ ಕುಳಿತು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು, ಉಪನ್ಯಾಸಕರೇ ತಮ್ಮ ಮನೆಗಳಲ್ಲಿ, ಚಿಕ್ಕಪುಟ್ಟ ರೂಮ್‍ನಲ್ಲಿ ಟ್ಯೂಷನ್ ನಡೆಸುತ್ತಿದ್ದಾರೆ. ವಿದ್ಯಾದಾನ ಸಮಿತಿ ಶಾಲೆ ಹೈಸ್ಕೂಲ್‍ನ ಶಿಕ್ಷಕ ರಾಮಚಂದ್ರ ಮೋನೆ ಎಂಬುವರು ಈ ರೀತಿ ಮಕ್ಕಳನ್ನು ಗುಡ್ಡೆ ಹಾಕಿಕೊಂಡು ಟ್ಯೂಷನ್ ನಡೆಸುತ್ತಿದ್ದಾರೆ.

    ಒಂದೇ ಕೊಠಡಿಯಲ್ಲಿ 60ಕ್ಕೂ ಹೆಚ್ಚು ಮಕ್ಕಳಿಗೆ ಪಾಠ ಮಾಡ್ತಿದ್ದಾರೆ. 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳು ಇವರ ಬಳಿ ಟ್ಯೂಷನ್‍ಗೆ ಬರುತ್ತಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಶಿಕ್ಷಕರಿಗೆ ಪ್ರಶ್ನೆ ಮಾಡಿದರೇ ಅವರು ಕೊಡುವ ಸಮಜಾಯಿಷಿನೇ ಬೇರೆಯಾಗಿದೆ. ಪೋಷಕರ ಒಪ್ಪಿಗೆ ಪಡ್ಕೊಂಡು ಮಕ್ಕಳು ಟ್ಯೂಷನ್‍ಗೆ ಬಂದಿದ್ದಾರೆ. ಹೀಗಾಗಿ ಅವರಿಗೆ ಕೊರೊನಾ ಬರಲ್ಲ ಎಂದಿದ್ದಾರೆ.

    ಇತ್ತ ಶಿಕ್ಷಕರ ಟ್ಯೂಷನ್ ಫೀಸ್ ಕೇಳಿದರೆ ಶಾಕ್ ಹೋಗುವುದು ಪಕ್ಕ ಏಕೆಂದರೆ, ಶಾಲಾ ಮಕ್ಕಳಿಗೆ ಒಂದು ವಿಷ್ಯಕ್ಕೆ ಪಾಠ ಮಾಡೋದಕ್ಕೆ 5 ಸಾವಿರ. ಗಣಿತ-ವಿಜ್ಞಾನ ಎರಡೂ ವಿಷ್ಯಗಳಿಗೆ ಟ್ಯೂಷನ್ ಮಾಡೋದಕ್ಕೆ 10 ಸಾವಿರ ರೂಪಾಯಿ ತೆಗೆದುಕೊಳ್ಳುತ್ತಿದ್ದಾರೆ. ಹಣದ ದಾಹ ಒಂದು ಕಡೆಯಾದರೆ ಸರ್ಕಾರ ಅನುಮತಿ ಇಲ್ಲದೇ ತರಗತಿಗಳನ್ನು ನಡೆಸುವುದು ಹಾಗೂ ಯಾವುದೇ ಕೊರೊನಾ ಮುನ್ನೆಚ್ಚರಿಕೆ ವಹಿಸದಿರುವುದು ಸೋಂಕು ಹೆಚ್ಚಳವಾಗಲು ಕಾರಣವಾಗುವ ಸಾಧ್ಯತೆ ಇದೆ.

  • ಟ್ಯೂಷನ್ ತರಗತಿ ಬಗ್ಗೆ ಕೇಳುವ ನೆಪದಲ್ಲಿ ಕರೆದು ಯುವಕನನ್ನ ಥಳಿಸಿ ಕೊಂದ್ರು

    ಟ್ಯೂಷನ್ ತರಗತಿ ಬಗ್ಗೆ ಕೇಳುವ ನೆಪದಲ್ಲಿ ಕರೆದು ಯುವಕನನ್ನ ಥಳಿಸಿ ಕೊಂದ್ರು

    – ಯುವತಿಯ ಜೊತೆ ಸಂಬಂಧ ಹೊಂದಿದ್ದಕ್ಕೆ ಸೋದರ ಕೋಪ
    – ಸ್ಥಳೀಯ ಮಕ್ಕಳಿಗೆ ಇಂಗ್ಲಿಷ್ ಟ್ಯೂಷನ್ ಹೇಳಿಕೊಡ್ತಿದ್ದ

    ನವದೆಹಲಿ: ಬೇರೆ ಸಮುದಾಯಕ್ಕೆ ಸೇರಿದ ಯುವತಿಯ ಜೊತೆ ಸಂಬಂಧ ಹೊಂದಿದ್ದ ಆರೋಪದ ಮೇಲೆ 18 ವರ್ಷದ ಟ್ಯೂಷನ್ ಶಿಕ್ಷಕನನ್ನು ಗುಂಪೊಂದು ಥಳಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

    ಈ ಘಟನೆ ವಾಯುವ್ಯ ದೆಹಲಿಯ ಆದರ್ಶ್ ನಗರ ಪ್ರದೇಶದಲ್ಲಿ ನಡೆದಿದೆ. ಮೃತನನ್ನು ರಾಹುಲ್ ರಜಪೂತ್ ಎಂದು ಗುರುತಿಸಲಾಗಿದೆ. ಈತ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿಯನ್ನು ವ್ಯಾಸಂಗ ಮಾಡುತ್ತಿದ್ದು, ಸ್ಥಳೀಯ ಮಕ್ಕಳಿಗೆ ಇಂಗ್ಲಿಷ್ ಟ್ಯೂಷನ್ ನಡೆಸುತ್ತಿದ್ದನು. ಈತ ಬೇರೆ ಸಮುದಾಯಕ್ಕೆ ಸೇರಿದ ಯುವತಿಯ ಜೊತೆ ಸ್ನೇಹ ಬೆಳೆಸಿದ್ದನು. ಹುಡುಗಿಯ ಕುಟುಂಬವು ಇಬ್ಬರ ನಡುವಿನ ಸಂಬಂಧಕ್ಕೆ ವಿರುದ್ಧ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ.

    ರಾಹುಲ್ ರಜಪೂತ್‍ನಿಗೆ ಇಂಗ್ಲಿಷ್ ಟ್ಯೂಷನ್ ತರಗತಿಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಫೋನ್ ಮಾಡಿದ್ದಾರೆ. ಈ ವೇಳೆ ರಜಪೂತ್ ಮನೆಯ ಸಮೀಪದಲ್ಲೇ ಭೇಟಿಯಾಗಲು ತಿಳಿಸಿದ್ದಾರೆ. ಅಲ್ಲಿಗೆ ಹೋದ ರಜಪೂತ್ ಮೇಲೆ 7-8 ಹುಡುಗರೊಂದಿಗೆ ಯುವತಿಯ ಸಹೋದರ ಕೋಲು ಮತ್ತು ದೊಣ್ಣೆಯಿಂದ ಹೊಡೆದಿದ್ದಾನೆ. ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಜಪೂತ್‍ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಜಪೂತ್ ಸಾವನ್ನಪ್ಪಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ.

    ಸುಮಾರು ಒಂದು ತಿಂಗಳ ಹಿಂದೆ ಹುಡುಗಿ ರಾಹುಲ್‍ಗೆ ಫೋನ್ ಮಾಡಿದ್ದಳು. ಆದರೆ ಆಕೆಯ ತಾಯಿ ಮತ್ತೆ ಕರೆ ಮಾಡದಂತೆ ಮಗಳಿಗೆ ಎಚ್ಚರಿಸಿದ್ದರು. ಇಬ್ಬರು ಈ ಹಿಂದೆ ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತರಾಗಿದ್ದರು. ಆದರೆ ಇಬ್ಬರು ಒಟ್ಟಿಗೆ ಮಾತನಾಡುವುದು ನೋಡಿದ ಆಕೆಯ ಸಹೋದರ ಕೋಪಕೊಂಡು ಈ ರೀತಿ ಮಾಡಿದ್ದಾನೆ. ಟ್ಯೂಷನ್ ತರಗತಿಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಕರೆದು ಕೊಲೆ ಮಾಡಿದ್ದಾರೆ. ನಮಗೆ ನ್ಯಾಯ ದೊರಕಿಸಿ ಕೊಡಿ ಎಂದು ರಾಹುಲ್ ತಂದೆ ಸಂಜಯ್ ರಜಪೂತ್ ಕಣ್ಣೀರು ಹಾಕಿದರು.

    ಯುವಕರ ಸಾವಿನ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳು ನಮಗೆ ಮಾಹಿತಿ ನೀಡಿದ್ದಾರೆ. ಹುಡುಗನ ಚಿಕ್ಕಪ್ಪ ನೀಡಿದ ದೂರಿನ ನಂತರ ನಾವು ಪ್ರಕರಣ ದಾಖಲಿಸಿದ್ದೇವೆ. ಈಗಾಗಲೇ ಯುವತಿಯ ಸಹೋದರ ಮೊಹಮ್ಮದ್ ರಾಜ್, ಆಕೆಯ ಸಂಬಂಧಿ ಮನ್ವರ್ ಹುಸೇನ್ ಮತ್ತು ಇತರ ಮೂವರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಟ್ಯೂಷನ್ ನೆಪದಲ್ಲಿ 1ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಶಿಕ್ಷಕ

    ಟ್ಯೂಷನ್ ನೆಪದಲ್ಲಿ 1ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಶಿಕ್ಷಕ

    – ಶಾಲಾ ಶೌಚಾಲಯದಲ್ಲಿ ಕೃತ್ಯವೆಸೆಗಿದ
    – ಅಣ್ಣನಿಗೆ ಚಾಕಲೇಟ್ ಆಸೆ ತೋರಿಸಿ ತಂಗಿ ಮೇಲೆ ರೇಪ್

    ಲಕ್ನೋ: ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಕಾಮುಕ ಶಿಕ್ಷಕನೋರ್ವ 6 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದ ಹೀನಾಯ ಘಟನೆ ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ನಡೆದಿದೆ.

    ಬಾಂಡಾ ಜಿಲ್ಲೆಯ ಟಿಂಡ್ವಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಕಿಶನ್ ಮಿಶ್ರಾ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಶಿಕ್ಷಕ. ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಶಾಲೆಯಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಮಾಡಿದ್ದಾನೆ. ಇದನ್ನೂ ಓದಿ:ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಶುಕ್ರವಾರ ಸಂಜೆ ಶಾಲೆ ಮುಗಿದ ಬಳಿಕ ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಬಾಲಕಿ ಹಾಗೂ ಆಕೆಯ ಅಣ್ಣನನ್ನು ಶಿಕ್ಷಕ ಶಾಲೆಯಲ್ಲಿ ಉಳಿಸಿಕೊಂಡಿದ್ದನು. ಸುಮಾರು 5 ಗಂಟೆ ವೇಳೆಗೆ ಇಬ್ಬರನ್ನು ಮನೆಗೆ ಹೋಗುವಂತೆ ಶಿಕ್ಷಕ ಹೇಳಿದ್ದಾನೆ.

    ಅಣ್ಣಾ, ತಂಗಿ ಮನೆಗೆ ತೆರಳುತ್ತಿದ್ದ ವೇಳೆ ಬಾಲಕಿಗೆ ಚಾಕಲೇಟ್ ತೆಗೆದುಕೊಂಡು ಬಾ ಎಂದು ಹೇಳಿ ಅಂಗಡಿಗೆ ಕಳುಹಿಸಿ, ಬಳಿಕ ಬಾಲಕಿಯನ್ನು ಪುಸಲಾಯಿಸಿ ಶಾಲಾ ಶೌಚಾಲಯಕ್ಕೆ ಶಿಕ್ಷಕ ಕರೆದುಕೊಂಡು ಹೋಗಿ ಆಕೆಯನ್ನು ಅತ್ಯಾಚಾರಗೈದಿದ್ದಾನೆ. ಈ ವೇಳೆ ಹೇಗೋ ಬಾಲಕಿ ಕಾಮುಕ ಶಿಕ್ಷಕನಿಂದ ತಪ್ಪಿಸಿಕೊಂಡು ಮನೆಗೆ ಸೇರಿದ್ದಳು. ಇದನ್ನೂ ಓದಿ:ಅಪ್ರಾಪ್ತೆ ಮೇಲೆ ತಂದೆಯಿಂದಲೇ ಅತ್ಯಾಚಾರ- 8 ವರ್ಷ ಬಳಿಕ ಆರೋಪಿ ಅರೆಸ್ಟ್

    ಮನೆಗೆ ಬಂದ ಬಾಲಕಿ ತಾಯಿಯ ಬಳಿ ನಡೆದ ವಿಚಾರವನ್ನು ಹೇಳಿದ್ದಾಳೆ. ಹೀಗಾಗಿ ಶನಿವಾರ ಬಾಲಕಿ ತಾಯಿ ಪೊಲೀಸರಿಗೆ ಶಿಕ್ಷಕನ ವಿರುದ್ಧ ದೂರು ಕೊಟ್ಟಿದ್ದರು. ತಾಯಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವರದಿ ಬರಬೇಕಿದೆ.

  • ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗ್ಳೂರಿನ ಬಾಲಕರು ಪತ್ತೆ

    ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗ್ಳೂರಿನ ಬಾಲಕರು ಪತ್ತೆ

    ಬೆಂಗಳೂರು: ಸೋಮವಾರ ಸಂಜೆ ಪೋಷಕರಿಗೆ ಟ್ಯೂಷನ್‍ಗೆ ಹೋಗೋದಾಗಿ ಹೇಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಆರು ಮಂದಿ ವಿದ್ಯಾರ್ಥಿಗಳು ಮಾಗಡಿ ಬಳಿಯ ತಾವರೆಕೆರೆಯಲ್ಲಿ ಪತ್ತೆಯಾಗಿದ್ದಾರೆ

    ಬಾಲಕರನ್ನು ಪತ್ತೆ ಹಚ್ಚುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದು, ಮಾಗಡಿ ತಾಲೂಕಿನ ಮರಳುಗೊಂಡ್ಲು ಗ್ರಾಮದಲ್ಲಿ ಮಕ್ಕಳು ಸೋಮವಾರ ರಾತ್ರಿಯೇ ಬಂದಿದ್ದರು ಎಂದು ತಿಳಿದು ಬಂದಿದೆ. ಇದನ್ನು ಓದಿ: ಟ್ಯೂಷನ್‍ಗೆ ಹೋಗುವುದಾಗಿ ಹೇಳಿ ಬೆಂಗ್ಳೂರಿನ ಐವರು ಬಾಲಕರು ನಾಪತ್ತೆ

    ಸೆಂಟ್ ಕ್ಲಾರೆನ್ಸ್ ಶಾಲೆಯ ರಾಕೇಶ್, ಸೃಜನ್, ವರುಣ್, ರೇಣು, ಚಂದನ್, ಹಾಗೂ ಅನೂಪ್ ಪತ್ತೆಯಾದ ವಿದ್ಯಾರ್ಥಿಗಳಾಗಿದ್ದು, ಇವರೆಲ್ಲಾ ರಾಕೇಶ್ ಅವರ ಅತ್ತೆ ಮನೆಯಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ಇನ್ನು, ಮಕ್ಕಳ ಪತ್ತೆಗಾಗಿ ವಿಜಯನಗರ ಎಸಿಪಿ ಪರಮೇಶ್ವರ ಹೆಗ್ಗಡೆ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ಮಕ್ಕಳ ಪತ್ತೆಯಿಂದಾಗಿ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

  • ಟ್ಯೂಷನ್‍ಗೆ ಹೋಗುವುದಾಗಿ ಹೇಳಿ ಬೆಂಗ್ಳೂರಿನ ಐವರು ಬಾಲಕರು ನಾಪತ್ತೆ

    ಟ್ಯೂಷನ್‍ಗೆ ಹೋಗುವುದಾಗಿ ಹೇಳಿ ಬೆಂಗ್ಳೂರಿನ ಐವರು ಬಾಲಕರು ನಾಪತ್ತೆ

    ಬೆಂಗಳೂರು: ಪೋಷಕರಿಗೆ ಟ್ಯೂಷನ್ ಗೆ ಹೋಗೋದಾಗಿ ಹೇಳಿ ನಗರದ ಐವರು ಬಾಲಕರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

    ಸೋಮವಾರ ಸಂಜೆ ಟ್ಯೂಷನ್ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಆದರೆ ತುಂಬಾ ಸಮಯವಾದರೂ ಅವರು ಟ್ಯೂಷನ್ ನಿಂದ ಮನೆಗೆ ವಾಪಸ್ ಬಂದಿಲ್ಲ. ನಂತರ ಮಕ್ಕಳ ನಾಪತ್ತೆಯಿಂದ ಪೋಷಕರು ಕಂಗಾಲಾಗಿದ್ದು, ರಾತ್ರಿಯಿಡೀ ಹುಡುಕಾಡಿ ಕೊನೆಗೆ ಪೊಲೀಸರ ಮೊರೆ ಹೋಗಿದ್ದಾರೆ.

    ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಕ್ಕಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ವಿದ್ಯಾರ್ಥಿಗಳು ಸೆಂಟ್ ಕ್ಲಾರೆನ್ಸ್ ಶಾಲೆಯವರಾಗಿದ್ದು, ಒಂದೇ ಸೆಕ್ಷನ್ ನಲ್ಲಿ ಓದುತ್ತಿದ್ದರು.

    ವಿದ್ಯಾರ್ಥಿಗಳು ಈ ಹಿಂದೆ ಪಾರಿವಾಳ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದು ಅದೇ ಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಿದ್ಯಾರ್ಥಿಗಳು ಮನೆಯಿಂದ ಹೋಗುವಾಗ ಹಣವಾಗಲಿ ಬಟ್ಟೆಯಾಗಲಿ ತಗೆದುಕೊಂಡು ಹೋಗಿಲ್ಲ.

    ಐವರು ಬಾಲಕರಲ್ಲಿ ಓರ್ವನ ಬಳಿ ಮೊಬೈಲ್ ಇದ್ದು, ಅದು ಕಾಮಾಕ್ಷಿಪಾಳ್ಯದಲ್ಲಿ ಸ್ವಿಚ್ ಆಫ್ ಆಗಿದೆ. ಬಾಲಕರ ನಾಪತ್ತೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಆದರೆ ಘಟನೆ ನಡೆದು 6-7 ಗಂಟೆಯಾದರೂ ಮಕ್ಕಳ ಬಗ್ಗೆ ಸುಳಿವು ಸಿಗಲಿಲ್ಲ. ಇದರಿಂದ ಪೋಷಕರು ಕಂಗಲಾಗಿದ್ದಾರೆ.

    ವಿಜಯನಗರ ಎಸಿಪಿ ಪರಮೇಶ್ವರ ಹೆಗ್ಗಡೆ ನೇತೃತ್ವದಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗಾಗಿ ವಿಶೇಷ ತಂಡ ರಚನೆಯಾಗಿದೆ. ಬೆಂಗಳೂರಿನ ವಿವಿಧ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಮಕ್ಕಳಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಕಂಟ್ರೋಲ್ ರೂಮ್ ಗಳಿಗೆ ಮಕ್ಕಳ ಫೋಟೋ ಸಹಿತ ಮಾಹಿತಿ ರವಾನೆ ಮಾಡಲಾಗಿದೆ.