Tag: tumakuru

  • ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

    ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

    – ಕಾಂಗ್ರೆಸ್ ಪಕ್ಷವನ್ನು ಅವರ ಶಾಸಕರೇ ಹಾದಿಬೀದಿಯಲ್ಲಿ ಟೀಕಿಸುತ್ತಿದ್ದಾರೆ
    – ಡಿಕೆಶಿ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ

    ತುಮಕೂರು: ನವೆಂಬರ್ 14ಕ್ಕೆ ಬಿಹಾರ ಚುನಾವಣೆ (Bihar Election) ನಡೆಯುತ್ತದೆ. ಫಲಿತಾಂಶ ಬಂದ ನಂತರ ಕಾಂಗ್ರೆಸ್ (Congress) ಸರ್ಕಾರ ಪತನ ಆಗುತ್ತದೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ (Suresh Gowda) ಹೇಳಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯ ಸುತ್ತಾಡಿ, ಫಂಡಿಂಗ್ ಮಾಡಿ 138 ಸ್ಥಾನ ಗಳಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ವಾಡಿಕೆಯಂತೆ ಅವರೇ ಸಿಎಂ ಆಗಬೇಕಿತ್ತು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು. ಇದನ್ನೂ ಓದಿ: ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ಡಿಕೆಶಿ ಅವರ ತಾಖತ್‌ನಿಂದ ಫಂಡ್ ಮೊಬಿಲೈಜ್ ಮಾಡಿರೋದ್ರಿಂದ, ಪರಿಶ್ರಮ ಹಾಕಿರೋದ್ರಿಂದ ಸರ್ಕಾರ ಬಂದಿದೆ. ಆದರೆ ಸಿದ್ದರಾಮಯ್ಯ ಸಿಎಂ ಆದರು. ಸಿದ್ದರಾಮಯ್ಯ ಏನಾದರೂ ಫಂಡಿಂಗ್ ಮಾಡಿದ್ರಾ? ಹಣ ಕೊಟ್ಟರ‍್ಯಾರು ಡಿಕೆಶಿ ಅಲ್ಲವೇ? ಡಿಕೆ ಶಿವಕುಮಾರ್ ಪರಿಶ್ರಮಕ್ಕೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಈಗಲೂ ಸಿದ್ದರಾಮಯ್ಯ ಡಿಕೆಶಿಯನ್ನು ಸಿಎಂ ಮಾಡಬಾರದು ಎಂದು ತಂತ್ರ ರೂಪಿಸುತಿದ್ದಾರೆ. ಆದರೆ ಡಿಕೆ ಶಿವಕುಮಾರ್ ಮಾತ್ರ ತಾನು ನೂರಕ್ಕೆ ನೂರು ಸಿಎಂ ಆಗುತ್ತೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    ಆಗಾಗ ಕೊಕ್ಕೆ ಹಾಕುವ ಸಿದ್ದರಾಮಯ್ಯ, ಜಿ ಪರಮೇಶ್ವರ್, ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ.ಪಾಟೀಲ್‌ಗೆ ನೀವುಗಳೇ ಸಿಎಂ ಆಗಿ ಎಂದು ಎತ್ತಿಕಟ್ಟುತ್ತಿದ್ದಾರೆ. ಸಿದ್ದರಾಮಯ್ಯರ ಎಲ್ಲಾ ಸ್ಟ್ರಾಟಜಿ ಡಿ.ಕೆ.ಶಿವಕುಮಾರ್‌ಗೆ ಗೊತ್ತಾಗಿದೆ. ಇಬ್ಬರು ಮೇಲ್ನೋಟಕ್ಕೆ ಚೆನ್ನಾಗಿದ್ದವರಂತೆ ಕಾಣುತ್ತಾರೆ. ಆದರೆ ಸಿದ್ದರಾಮಯ್ಯ ಡಿಕೆಶಿಯನ್ನು ಗೋಡೆಗೆ ತಳ್ಳಿ ಬಕಾ, ಬಕಾ ಎಂದು ದಿನಕ್ಕೊಬ್ಬರನ್ನು ಬಿಟ್ಟು ಬಾಕ್ಸಿಂಗ್ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಮಾತ್ರ ದೇವರ ಥರ ನಿಂತುಕೊಂಡಿದ್ದಾರೆ. ಏನೇ ಇದ್ದರೂ ನವೆಂಬರ್ 14ರ ಬಳಿಕ ಈ ಸರ್ಕಾರ ಪತನ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

  • ಬ್ರಿಟಿಷರ ವಿರುದ್ಧ ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

    ಬ್ರಿಟಿಷರ ವಿರುದ್ಧ ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

    ತುಮಕೂರು: ಜಿಲ್ಲೆಯ ಪಾವಗಡದ (Pavagada) ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ (Freedom Fighter) 103 ವರ್ಷದ ವಿ.ಎನ್ ನರಸರೆಡ್ಡಿ (VN Reddy) ನಿಧನರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿ.ಎನ್ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಪುತ್ರರು, ನಾಲ್ವರು ಪುತ್ರಿಯರಿದ್ದಾರೆ. ಇಂದು ಮೃತರ ಸ್ವಗ್ರಾಮವಾದ ವೆಂಕಟಪುರ ಗ್ರಾಮದ ಸಮೀಪದ ತೋಟದಲ್ಲಿ ಅಂತ್ಯಕ್ರಿಯೆ ನಡೆದಿದೆ. ಇದನ್ನೂ ಓದಿ: ನಾಳೆ ರಫೇಲ್‌ನಲ್ಲಿ ಹಾರಲಿದ್ದಾರೆ ರಾಷ್ಟ್ರಪತಿ ಮುರ್ಮು

    ವಿ.ಎನ್ ರೆಡ್ಡಿಯವರು ಮಾಜಿ ಉಪರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ, ಎ.ಎಂ ಲಿಂಗಣ್ಣ, ಕೊಲ್ಲೂರು ಸುಬ್ಬಾರಾವು, ಪಡಪಲ್ಲಿ ಚಿದಂಬರ ರೆಡ್ಡಿಯವರ ಒಡನಾಡಿಯಾಗಿದ್ದರು. 1951-52ರಲ್ಲಿ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ನಡೆದ ಎಲ್ಲಾ ಚುನಾವಣೆಗಳಲ್ಲೂ ವಿ.ಎನ್ ರೆಡ್ಡಿ ಮತ ಚಲಾಯಿಸಿದ್ದಾರೆ. ಬ್ರಿಟಿಷ್ ಆಳ್ವಿಕೆಯಲ್ಲಿದ್ದ ದಾಖಲೆಗಳನ್ನು ನಾಶಪಡಿಸಲು ಪಾವಗಡ ತಾಲೂಕು ಕಛೇರಿಗೆ ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ದಾಖಲೆಗಳಿರುವ ಕೊಠಡಿಗೆ ಇಲಿಗಳನ್ನು ಬಿಟ್ಟು ದಾಖಲೆಗಳನ್ನು ಸುಟ್ಟಿದ್ದರು. ಇದನ್ನೂ ಓದಿ: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್

    ಈ ಕೃತ್ಯ ಎಸಗಿದ್ದಕ್ಕೆ ರಾತ್ರಿ ಮಲಗಿದ್ದ ವೇಳೆ ಪೊಲೀಸರು ವಿ.ಎನ್ ನರಸರೆಡ್ಡಿ ಅವರನ್ನು ಸೇರಿದಂತೆ ಏಳು ಜನರನ್ನು ಬಂಧಿಸಿ ತುಮಕೂರು ಜೈಲಿಗೆ ಹಾಕಿದ್ದರು. ಅಲ್ಲಿಯೂ ಬ್ರಿಟಿಷರ ಆಳ್ವಿಕೆ ವಿರುದ್ಧ ಪ್ರತಿಭಟನೆ, ಹೋರಾಟಗಳನ್ನು ಮುಂದುವರಿಸಿದ್ದರಿಂದ ತುಮಕೂರು ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಬಂಧಿಸಿ ಒಟ್ಟು 32 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಇದನ್ನೂ ಓದಿ: ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

    ಜೈಲು ಶಿಕ್ಷೆ ಅನುಭವಿಸಿ ಬಂದ ನಂತರ ಪಾವಗಡ ತಾಲೂಕಿನಾದ್ಯಂತ ಎತ್ತಿನಗಾಡಿಯಲ್ಲಿ ಸಂಚರಿಸಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೀತಿಪಾಠ: ಪ್ರಹ್ಲಾದ್ ಜೋಶಿ

  • ಕೋರ್ಟ್‌ನಲ್ಲಿ ದಂಡ ಕಟ್ಟುತ್ತೇನೆ ಎಂದಿದ್ದಕ್ಕೆ ಒಪ್ಪದ ಪೊಲೀಸರು – ಸವಾರ, ಟ್ರಾಫಿಕ್ ಪೊಲೀಸರ ನಡುವೆ ವಾಗ್ವಾದ

    ಕೋರ್ಟ್‌ನಲ್ಲಿ ದಂಡ ಕಟ್ಟುತ್ತೇನೆ ಎಂದಿದ್ದಕ್ಕೆ ಒಪ್ಪದ ಪೊಲೀಸರು – ಸವಾರ, ಟ್ರಾಫಿಕ್ ಪೊಲೀಸರ ನಡುವೆ ವಾಗ್ವಾದ

    – ಬೈಕ್‌ ಸವಾರನನ್ನು ವಶಕ್ಕೆ ಪಡೆದು ಎಫ್‌ಐಆರ್‌

    ತುಮಕೂರು: ಮಿರರ್ (Mirror) ಇಲ್ಲದೆ ಬಂದ ಬೈಕ್ ಸವಾರ ಹಾಗೂ ಟ್ರಾಫಿಕ್ ಪೊಲೀಸರ (Traffic Police) ನಡುವೆ ದಂಡ (Penalty) ಕಟ್ಟುವ ವಿಚಾರವಾಗಿ ವಾಗ್ವಾದ ನಡೆದಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ತುಮಕೂರಿನ ರಿಂಗ್ ರಸ್ತೆಯಲ್ಲಿ ಹರ್ಷ ಎಂಬ ಯುವಕ ಬೆಂಗಳೂರಿಂದ ಅರಸಿಕೆರೆಗೆ ಬೈಕಲ್ಲಿ ಹೋಗುತಿದ್ದ. ಯುವಕನ ಬೈಕ್‌ಗೆ ಎರಡೂ ಮಿರರ್ ಇರಲಿಲ್ಲ. ಹೀಗಾಗಿ ರಿಂಗ್ ರಸ್ತೆಯಲ್ಲಿ ನಗರ ಪೂರ್ವ ಸಂಚಾರಿ ಮಹಿಳಾ ಪಿಎಸ್‌ಐ ಸ್ಪಾಟ್ ಫೈನ್ ಹಾಕಿದ್ದಾರೆ. ಆದರೆ ಯುವಕ ತನ್ನ ಬಳಿ ಹಣ ಇಲ್ಲ, ರಶೀದಿ ಕೊಡಿ ಕೋರ್ಟ್‌ನಲ್ಲಿ ಕಟ್ಟುತ್ತೇನೆ ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ. ಒಪ್ಪದ ಪೊಲೀಸರು ಸ್ಥಳದಲ್ಲೇ ದಂಡ ಕಟ್ಟಬೇಕು ಎಂದು ತಾಕೀತು ಮಾಡಿದ್ದಾರೆ. ಇದರಿಂದ ಪೊಲೀಸರು ಮತ್ತು ಸವಾರನ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ: ಕುರ್ಚಿ ಕದನ, ಅಭಿವೃದ್ಧಿ ಪತನ – 6 ತಿಂಗಳಲ್ಲಿ ಕೇವಲ ಶೇ.30ರಷ್ಟು ಮಾತ್ರ ಪ್ರಗತಿ

    ಪೊಲೀಸರು ದೌರ್ಜನ್ಯ ಮಾಡಿದ್ದಾರೆ ಅಂತ ಯುವಕ ಸ್ಥಳದಲ್ಲೇ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾನೆ. ಇದರಿಂದಾಗಿ ಸುಮಾರು ಅರ್ಧ ಕಿ.ಮೀ ದೂರದಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾರ್ವಜನಿಕರಿಗೆ ತೊಂದರೆ ಆದ ಹಿನ್ನೆಲೆ ಜಯನಗರ ಪೊಲೀಸರು ಹರ್ಷನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

  • ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು

    ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಮನೆ, ಜಮೀನುಗಳಿಗೆ ನುಗ್ಗಿದ ನೀರು

    – ಜನಜೀವನ ಅಸ್ತವ್ಯಸ್ತ

    ಬೆಂಗಳೂರು: ರಾಜ್ಯದಲ್ಲಿ ಮಳೆ (Rain) ಆರ್ಭಟ ಮತ್ತೆ ಮುಂದುವರಿದಿದೆ. ದೀಪಾವಳಿ ಸಂಭ್ರಮದಲ್ಲಿದ್ದ ಜನತೆಗೆ ಮಳೆರಾಯ ಕೊಂಚ ಬೇಸರ ತರಿಸಿದ್ದಾನೆ. ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದ ಬೆಳೆನಾಶವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಿಡುವಂತೆ ಮಾಡಿದೆ.

    ಹಾಸನ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಬಹುತೇಕ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಕೆರೆಯ ಕೋಡಿ ಒಡೆದು ನೂರಾರು ಎಕರೆ ಪ್ರದೇಶದ ರೈತರ ಜಮೀನುಗಳು ಜಲಾವೃತಗೊಂಡಿವೆ. ಅಡಿಕೆ, ತೆಂಗಿನ ತೋಟ, ಹೊಲ, ಗದ್ದೆಗಳಲ್ಲಿ ನೀರು ತುಂಬಿಕೊಂಡಿದೆ.

    ಅರಸೀಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಶಂಕರಲಿಂಗಪ್ಪ ಎಂಬವರ ಮನೆಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ನೀರಿನಲ್ಲಿ ತೇಲಿವೆ. ಹೊಳೆನರಸೀಪುರ ಪಟ್ಟಣದ, ಕಾರ್ಖಾನೆ ಬೀದಿಯಲ್ಲಿರುವ ಮಂಜು ಎಂಬವರ ಮನೆಗೂ ನೀರು ನುಗ್ಗಿ ಅಪಾರ ಹಾನಿ ಆಗಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಮಳೆಗೆ ಹಳ್ಳಕೊಳ್ಳ, ಕೆರೆ ಕಟ್ಟೆಗಳು ತುಂಬಿ ಹರಿದು ಹೊಲ, ಗದ್ದೆಗಳು ಜಲಾವೃತವಾಗಿವೆ.

    ಅರಸೀಕೆರೆ ತಾಲೂಕಿನಲ್ಲೂ ಮಳೆ ಅಬ್ಬರಿಸಿದ್ದು, ಮಳೆನೀರು ಆಸ್ಪತ್ರೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ರೋಗಿಗಳು ಬೆಡ್‌ನಿಂದ ಕೆಳಗೆ ಇಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ರೋಗಿಗಳ ಕಡೆಯವರು ನೀರಿನಲ್ಲೇ ನಿಲ್ಲಬೇಕಾಗಿದೆ.

    ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನವನ್ನ ಅಸವ್ಯಸ್ತಗೊಳಿಸಿದೆ. ದೀಪಾವಳಿ ಹಬ್ಬದಂದೇ ಅಬ್ಬರಿಸಿದ ಮಳೆಗೆ ಮಲೆನಾಡು ಜನರು ಹೈರಾಣಾಗಿದ್ದಾರೆ. ಜಿಲ್ಲೆಯ ಕಳಸ, ಹೊರನಾಡು, ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು. ಹಳ್ಳದಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ವಾಹನ ಸವಾರರು ಪರದಾಡಿದ್ದಾರೆ.

    ಕರಾವಳಿ ಜಿಲ್ಲೆ ಉಡುಪಿಯಲ್ಲೂ ಮಳೆ ಅಬ್ಬರ ಜೋರಾಗಿದೆ. ಗುಡುಗು, ಮಿಂಚು ಸಹಿತ ಸುರಿದ ಭಾರಿ ಮಳೆಗೆ ಉಡುಪಿ ಜನರು ಹೈರಾಣಾಗಿದ್ದಾರೆ. ಬಿರುಗಾಳಿ ಸಹಿತ ಮಳೆಯಾದ ಕಾರಣ. ಜಿಲ್ಲೆಯ ವಿವಿಧೆಡೆ ವಿದ್ಯುತ್‌ನಲ್ಲಿ ವ್ಯತ್ಯಯವಾಗಿದೆ.

    ತುಮಕೂರು ಜಿಲ್ಲಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಜನಜೀವನಕ್ಕೆ ಬ್ರೇಕ್ ಹಾಕಿದೆ. ತಿಪಟೂರಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಗೆ ನುಗ್ಗಿದ ಮಳೆ ನೀರು ಕೃತಕ ಕೆರೆ ಸೃಷ್ಟಿಸಿದೆ. ಕೆರೆಯಂತಾದ ಅಂಡರ್‌ಪಾಸ್‌ನಲ್ಲಿ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣ ಮಾಡಿದೆ. ಅವೈಜ್ಞಾನಿಕ ಕಾಮಗಾರಿಗೆ ವಾಹನ ಸವಾರರು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.

    ಇನ್ನು ಚಿತ್ರದುರ್ಗ ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗಿದ್ದು, ಶೀತ ಹೆಚ್ಚಾಗಿ ಹೂವಿನ ಗಿಡಗಳು ಕೊಳೆರೋಗಕ್ಕೆ ತುತ್ತಾಗಿ ಕೊಳೆಯುತ್ತಿವೆ. ದೀಪಾವಳಿಗೆ ಭರ್ಜರಿ ಲಾಭ ಗಳಿಸುವ ನಿರೀಕ್ಷೆಯಲ್ಲಿದ್ದ ರೈತರು ಕಂಗಲಾಗಿದ್ದಾರೆ. ಮಳೆಯಿಂದಾಗಿ ಸಕಾಲಕ್ಕೆ ಹೂವು ಕೊಯ್ಲು ಮಾಡಲಾಗದೇ ಕಲರ್ ಫುಲ್ ಸೆಂಟಿಲ್ ಹೂವು ಜಮೀನಲ್ಲೇ ಕೊಳೆಯುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ.

  • ಕುಣಿಗಲ್‌ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ

    ಕುಣಿಗಲ್‌ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ

    ನೆಲಮಂಗಲ: ತುಮಕೂರು ಬೆಂಗಳೂರು (Tumakuru- Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ (Kunigal) ಬೈಪಾಸ್ ಫ್ಲೈಓವರ್‌ ರಸ್ತೆಯಲ್ಲಿ ನಡೆದಿದೆ.

    ಕಾರಿನಲ್ಲಿದ್ದ ಆರು ಮಂದಿ ಪವಾಡ ಎಂಬಂತೆ ಪಾರಾಗಿದ್ದು ಸಣ್ಣಪುಟ್ಟ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ (Nelamangala) ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ

     

    ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ಅಪಘಾತವಾಗಿ ಸಾವು ನೋವುಗಳ ಪ್ರಕರಣಗಳು ಸಂಭವಿಸುತ್ತಲೇ ಇದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಕಂಪನಿಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ತೊಂದರೆ ಅನುಭವಿಸುವಂತಾಗಿದೆ.

    ಇದೇ ರಸ್ತೆಯಲ್ಲಿ ಪ್ರತಿನಿತ್ಯ ಸಚಿವರು, ಶಾಸಕರು, ಅಧಿಕಾರಿಗಳು ಸಂಚಾರ ಮಾಡುತ್ತಿದ್ದು ಯಾರಿಗೂ ಅರಿವಿಗೆ ಬಾರದೇ ಇರುವುದು ನಮ್ಮ ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.

  • ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ

    ಈದ್ಗಾ ಮೈದಾನ ಬಳಿ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ, ಪರ್ಮಿಷನ್ ತಗೋತಾರ ಅವ್ರು?: ಕೆ.ಎನ್.ರಾಜಣ್ಣ

    ತುಮಕೂರು: ಆರ್‌ಎಸ್‌ಎಸ್‌ಗೆ (RSS) ಅಂಕುಶ ಹಾಕಲು ಹೊರಟಿದ್ದ ಸರ್ಕಾರದ ಧೋರಣೆಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ‌

    ತುಮಕೂರಿನಲ್ಲಿ (Tumakuru) ಮಾತನಾಡಿದ ರಾಜಣ್ಣ, ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವಾಗ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ. ಹಾಗಾದರೆ ಅವರೆಲ್ಲ ಪರ್ಮಿಷನ್ ತಗೊಂಡೇ ಅಲ್ಲಿ ನಮಾಜ್ ಮಾಡ್ತಾರಾ ಎಂದು ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌, ಬಂಟಿಂಗ್‌ ತೆರವು

    ಪರ್ಮಿಷನ್ ಕೊಡಿ ಅಂತ ಅವ್ರು ಬರಲ್ಲಾ. ಅಥವಾ ಪರ್ಮಿಷನ್ ತಗೊಳಿ ಅಂತ ನಾವು ಕೇಳೋದಿಲ್ಲ. ಹೀಗಾಗಿ, ಜಾರಿ ಮಾಡಲು ಸಾಧ್ಯವಾಗುವಂತಹ ಕಾನೂನನ್ನು ಮಾತ್ರ ತರಬೇಕು. ಅದನ್ನು ಬಿಟ್ಟು ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ರಾಜಣ್ಣ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಆಗಲಿ ಬೇರೆ ಯಾವುದೇ ಸಂಘಟನೆ ಆಗಲಿ ಅನುಮತಿ ಪಡೆದು ಕಾರ್ಯಕ್ರಮ ಮಾಡಿ ಅಂತ ಹೇಳಿದ್ದಾರೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗುತ್ತೆ ಎನ್ನುವುದನ್ನು ನೋಡೋಣ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

  • ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ

    ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ

    ತುಮಕೂರು: ಬಿಹಾರ ಎಲೆಕ್ಷನ್‌ವರೆಗೂ (Bihar Election) ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ (KN Rajanna) ಮಾರ್ಮಿಕವಾಗಿ ನುಡಿದಿದ್ದಾರೆ.

    ತುಮಕೂರಿನಲ್ಲಿ (Tumakuru) ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಹಾರ ಚುನಾವಣೆವರೆಗೂ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ. ಕೆಎನ್ ರಾಜಣ್ಣರ ಈ ಮಾತಿನ ಮರ್ಮ ಹಲವು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಅಲ್ಲದೇ ಸಿಎಂ ಸಿದ್ದರಾಮಯ್ಯರ (Siddaramaiah) ಬಗ್ಗೆ ನನಗೆ ವಿಶ್ವಾಸ ಇದೆ ಎಂದೂ ಮತ್ತೆ ಮಂತ್ರಿಗಿರಿ ಸಿಗಬಹುದು ಅನ್ನೋದನ್ನೂ ಪರೋಕ್ಷವಾಗಿ ಹೇಳಿದ್ದಾರೆ. ಮಂತ್ರಿ ಸ್ಥಾನ ಕೊಡಿ ಎಂದು ನಾನು ಕೇಳಿರಲಿಲ್ಲ. 2018 ರಲ್ಲಿ ನಾನು ಸೋತಾಗ ಸಿಎಂ ಸಿದ್ದರಾಮಯ್ಯ ಹೇಳಿದ್ರು ನೀನು ಗೆದ್ದರೆ ಮಿನಿಸ್ಟರ್ ಆಗ್ತಿದ್ದೆ ಕಣಯ್ಯಾ, ನಿನ್ನ ಬದಲು ತುಕಾರಂನನ್ನು ಮಾಡಿದೆ ಎಂದು ಹೇಳಿದರು. ಈ ಬಾರಿ ಅವರೇ ಕರೆದು ಸಚಿವ ಸ್ಥಾನ ಕೊಟ್ಟರು ಎಂದರು. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

    ಹೈಕಮಾಂಡ್‌ಗೆ ಸತ್ಯದ ಅರಿವಾಗಿದ್ಯಾ ಎಂಬ ಪ್ರಶ್ನೆಗೂ ಉತ್ತರಿಸಿದ ರಾಜಣ್ಣ, ಎಲ್ಲವೂ ಬಿಹಾರ ಎಲೆಕ್ಷನ್ ಕಳೆದ ಮೇಲೆಯೇ ಗೊತ್ತಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ

  • ತುಮಕೂರು ದಸರಾ – ಜಂಬೂ ಸವಾರಿ ಸಂಪನ್ನ

    ತುಮಕೂರು ದಸರಾ – ಜಂಬೂ ಸವಾರಿ ಸಂಪನ್ನ

    ತುಮಕೂರು: ತುಮಕೂರಿನ ಎರಡನೇ ವರ್ಷದ ದಸರಾ (Tumakuru Dasara) ವಿಜೃಂಭಣೆಯಿಂದ ನಡೆಯಿತು. ಅಂಬಾರಿ ಹೊತ್ತ ಆನೆ ಶ್ರೀರಾಮ ಶಾಂತತೆಯಿಂದ ಹೆಜ್ಜೆ ಹಾಕಿ ಎಲ್ಲರ ಕಣ್ಮನ ಸೆಳೆಯಿತು.

    ಮಧ್ಯಾಹ್ನ 12 ಗಂಟೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ನಂದಿ ಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳು, 50ಕ್ಕೂ ಹೆಚ್ಚು ದೇವರುಗಳು, ಪೊಲೀಸ್ ಕುದುರೆ ಸವಾರಿ, ನಾಟಿ ಎತ್ತುಗಳ ಮೆರವಣಿಗೆಯು ನಗರದ ಬಿಜಿಎಸ್ (ಟೌನ್ ಹಾಲ್ ವೃತ್ತ) ವೃತ್ತದಿಂದ ಪ್ರಾರಂಭಗೊಂಡಿತು. ಇದನ್ನೂ ಓದಿ: 5 ವರ್ಷದ ಬಳಿಕ ಭಾರತ, ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ

    ಎರಡು ಲಕ್ಷ್ಮಿ ಆನೆಗಳ ಜೊತೆ ಅಂಬಾರಿ ಹೊತ್ತು ಬಂದ ಶ್ರೀರಾಮ ಆನೆಯ ಮೇಲೆ ನಾಡದೇವತೆಗೆ ಗೃಹ ಸಚಿವ ಪರಮೇಶ್ವರ್ ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿ ಮೆರವಣಿಗೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ: ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಲು ಶಿವಾನಂದ ಪಾಟೀಲ್ ಸೂಚನೆ

    ಅಂಬಾರಿ ಮೆರವಣಿಗೆಯು ಬಿಜಿಎಸ್ ವೃತ್ತದಿಂದ ಕೋಟೆ ಆಂಜನೇಯ ಸ್ವಾಮಿ ಸರ್ಕಲ್‌ನಿಂದ ಕೋತಿತೋಪು, ಅಲ್ಲಿಂದ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಿಂದ ನಗರದ ಹೈಸ್ಕೂಲ್ ಮೈದಾನವನ್ನು ತಲುಪಿತು. ಇದನ್ನೂ ಓದಿ: Anekal | ವಿಜೃಂಭಣೆಯಿಂದ ಜರುಗಿದ ಚೌಡೇಶ್ವರಿ ಜಂಬೂಸವಾರಿ – ಪುಳಕಿತರಾದ ಭಕ್ತ ಸಾಗರ

  • Tumakuru | ಬೈಕ್, ಆಕ್ಟಿವಾ ನಡುವೆ ಭೀಕರ ಅಪಘಾತ – ಮೂವರು ದುರ್ಮರಣ

    Tumakuru | ಬೈಕ್, ಆಕ್ಟಿವಾ ನಡುವೆ ಭೀಕರ ಅಪಘಾತ – ಮೂವರು ದುರ್ಮರಣ

    ತುಮಕೂರು: ಬೈಕ್ (Bike) ಹಾಗೂ ಆಕ್ಟಿವಾ (Honda Activa) ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸವಾರರು ಸಾವನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Sira) ನಗರದ ಸಾಯಿ ಡಾಬಾ ಬಳಿ ನಡೆದಿದೆ.

    ಶಿರಾದ ಎಮ್ಮೆರಳ್ಳಿ ತಾಂಡಾದ ವಿಷ್ಣು (28), ರಾಮನಗರ ಮೂಲದ ಮುತ್ತುರಾಜ್ (36) ಮತ್ತು ವೆಂಕಟಧನ ಶೆಟ್ಟಿ(64) ಮೃತ ದುರ್ದೈವಿಗಳು. ವಿಷ್ಣು ಬೈಕಲ್ಲಿ ತೆರಳುತಿದ್ದಾಗ ಎದುರುಗಡೆ ಬಂದ ಹೋಂಡಾ ಆಕ್ಟಿವಾ ಡಿಕ್ಕಿ ಹೊಡೆದಿದೆ. ಪರಿಣಾಮ ಆಕ್ಟಿವಾದಲ್ಲಿ ತೆರಳುತಿದ್ದ ರಾಮನಗರ ಮೂಲದ ಇಬ್ಬರು ಸ್ಥಳದಲ್ಲೇ ಅಸುನೀಗಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು – ಕೇರಳ ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ

    ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ವಿಷ್ಣು ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಈ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ಮಾಸ್ಟರ್ ಮೈಂಡ್ ನದೀಮ್ ಅರೆಸ್ಟ್

  • ಧರ್ಮಸ್ಥಳದಲ್ಲಿ ಸಿಕ್ಕ ಅಸ್ಥಿಪಂಜರ ಗುಬ್ಬಿ ಮೂಲದ ವ್ಯಕ್ತಿಯದ್ದು!

    ಧರ್ಮಸ್ಥಳದಲ್ಲಿ ಸಿಕ್ಕ ಅಸ್ಥಿಪಂಜರ ಗುಬ್ಬಿ ಮೂಲದ ವ್ಯಕ್ತಿಯದ್ದು!

    ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ಸಿಕ್ಕ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆಯಾಗಿದೆ.

    ಬಂಗ್ಲೆಗುಡ್ಡ ನೆಲದ ಮೇಲೆ  ಪತ್ತೆಯಾದ ಅಸ್ಥಿಪಂಜರದ  ಬಳಿ ಡ್ರೈವಿಂಗ್ ಲೈಸೆನ್ಸ್ (DL) ಸಿಕ್ಕಿತ್ತು. ಈ ಡ್ರೈವಿಂಗ್‌ ಲೈಸೆನ್ಸ್‌ನಲ್ಲಿ ತುಮಕೂರು (Tumakuru) ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂದು ಹೆಸರು ಇತ್ತು. ಇದನ್ನೂ ಓದಿ: ಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ ನನಗೆ ಗೊತ್ತಿಲ್ಲ ಎಂದ ಪರಮೇಶ್ವರ್‌

    ಡಿಎಲ್‌ ಸಿಕ್ಕಿದ ಹಿನ್ನೆಲೆಯಲ್ಲಿ ಆದಿಶೇಷ ನಾರಾಯಣ ಕುಟುಂಬಸ್ಥರಿಗೆ ವಿಶೇಷ ತನಿಖಾ ತಂಡ (SIT) ವಿಚಾರಣೆಗೆ ಬರುವಂತೆ ಬುಲಾವ್‌ ನೀಡಿತ್ತು.

    ಆದಿಶೇಷ ನಾರಾಯಣ 2013 ಅಕ್ಟೋಬರ್ 2 ರಿಂದ ನಾಪತ್ತೆಯಾಗಿದ್ದ. ಬಾರ್‌ನಲ್ಲಿ ಕ್ಯಾಶಿಯಾರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ನಾಪತ್ತೆ ಸಂಬಂಧ ಕುಟುಂಬಸ್ಥರು ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. ಇದನ್ನೂ ಓದಿಧರ್ಮಸ್ಥಳ ಕೇಸ್‌ ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್  ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

    ಇಂದು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಕುಟುಂಬಸ್ಥರು ಆಗಮಿಸಿ ಹೇಳಿಕೆ ನೀಡಿದ್ದಾರೆ. ವಿಚಾರಣೆಯ ನಂತರ ಡಿಎನ್‌ಎ ಟೆಸ್ಟ್‌ ನಡೆಸಲು ಮತ್ತೊಮ್ಮೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ.

    ನಾಪತ್ತೆಯಾದ ಬಳಿಕ ನಾವು ಆತನನ್ನು ಹುಡುಕಲಿಲ್ಲ. ಮಾನಸಿಕವಾಗಿ ಚೆನ್ನಾಗಿದ್ದ ಎಂದು ಆದಿಶೇಷ ನಾರಾಯಣನ ಕುಟುಂಬಸ್ಥರು ತಿಳಿಸಿದ್ದಾರೆ.