Tag: tumkur university

  • ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ: ಪರಮೇಶ್ವರ್ ಭರವಸೆ

    ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ: ಪರಮೇಶ್ವರ್ ಭರವಸೆ

    ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ (Tumakuru University) ಮಹರ್ಷಿ ವಾಲ್ಮೀಕಿ  ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ (G Parameshwar) ಗುರುವಾರ ಭರವಸೆ ನೀಡಿದರು.

    ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ (Valmiki Jayanthi) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು 5 ಸಾವಿರ ವರ್ಷಗಳ ಹಿಂದೆ ಹುಟ್ಟಿದ ವರ್ಣಾಶ್ರಮ ಪದ್ಧತಿಯಿಂದ ಈಗಲೂ ಶ್ರಮಿಕ ವರ್ಗದವರನ್ನು ಕೆಲಸದವರೆಂದು ಗುರುತಿಸುತ್ತಿರುವುದು ನಮ್ಮ ದೌರ್ಭಾಗ್ಯ. ದೇಶದಲ್ಲಿ ಶ್ರಮಿಕ ವರ್ಗ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಶೋಷಣೆ ನಿಂತಿಲ್ಲ. ಸಂವಿಧಾನದಲ್ಲಿ ಸಮಾನತೆ ಹಕ್ಕು ನೀಡಿದ್ದರೂ ಸಮಾಜದಲ್ಲಿ ಮೇಲ್ವರ್ಗ- ಕೆಳವರ್ಗ ಎಂಬ ಭೇದ ಸೃಷ್ಟಿಸಿ ಶೋಷಣೆ ಮುಂದುವರಿದಿದೆ ಎಂದು ವಿಷಾದಿಸಿದರು. ಇದನ್ನೂ ಓದಿ: ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು

    ವ್ಯಕ್ತಿಯ ವ್ಯಕ್ತಿತ್ವವನ್ನು ಜಾತಿಯಿಂದ ಗುರುತಿಸುವುದು ನಿಂತಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಅವರಂತಹ ಮಹನೀಯರ ಜಯಂತಿ ಆಚರಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಸಂಡೂರು ಟಿಕೆಟ್‌ ಯಾರಿಗೆ? – ಬಿಜೆಪಿ, ಕಾಂಗ್ರೆಸ್‌ನಿಂದ ಲಾಬಿ ಜೋರು

    ಸಾಮಾನ್ಯ ವ್ಯಕ್ತಿಯಾಗಿದ್ದ ರತ್ನಾಕರ ನಂತರ ಪರಿವರ್ತನೆ ಹೊಂದಿ ವಾಲ್ಮೀಕಿಯಾಗಿ 24,000 ಶ್ಲೋಕಗಳಿರುವ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ರಾಮಾಯಣ ಕೃತಿಯ ಮೂಲಕ ಮನುಷ್ಯ ಜೀವನವು ಸತ್ಯ, ಧರ್ಮದ ಆಧಾರದ ಮೇಲೆ ನಿಂತಿದೆ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾಋಷಿಯಾಗಿದ್ದಾರೆ. ನಮ್ಮಲ್ಲಿರುವ ದುಷ್ಟ ಗುಣಗಳನ್ನು ಸಂಹಾರ ಮಾಡಿ ಉತ್ತಮ ಗುಣ ಮೈಗೂಡಿಸಿಕೊಳ್ಳಬೇಕು ಎಂಬುದೇ ರಾಮಾಯಣದ ಸಾರವಾಗಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ 10ನೇ ತರಗತಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು. ಇದನ್ನೂ ಓದಿ: ಬೆಳಗಾವಿ ಉದ್ಯಮಿ ಹತ್ಯೆ – ಪತ್ನಿ ಸೇರಿ ಮೂವರು ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್‌

  • ತಾಯಿ ಹೆಸರಲ್ಲಿ ಮರ ನೆಟ್ಟು ಪರಿಸರ ಸಂರಕ್ಷಣೆಗೆ ಮುಂದಾಗಿ: ಗೆಹ್ಲೋಟ್‌

    ತಾಯಿ ಹೆಸರಲ್ಲಿ ಮರ ನೆಟ್ಟು ಪರಿಸರ ಸಂರಕ್ಷಣೆಗೆ ಮುಂದಾಗಿ: ಗೆಹ್ಲೋಟ್‌

    ತುಮಕೂರು: ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕರ್ನಾಟಕದ (Karnataka) ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಹೇಳಿದರು.

    ತುಮಕೂರು ವಿಶ್ವವಿದ್ಯಾಲಯದ (Tumkur University) 17ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. “ತಾಯಿಯ ಹೆಸರಿನಲ್ಲಿ ಒಂದು ಮರ” ಅಭಿಯಾನದಲ್ಲಿ ಮರಗಳನ್ನು ನೆಡುವ ಮೂಲಕ, ಪರಿಸರ ಸಂರಕ್ಷಣೆಗೆ ಪ್ರಮುಖ ಮುಂದಾಗಬೇಕು. ತಾಯಿ ಹೇಗೆ ಮಕ್ಕಳನ್ನು ಪೊಶಿಸುತ್ತಾರೋ ಹಾಗೆ ಸಸಿ ನೆಡುವುದರ ಜೊತೆಗೆ ಪೋಷಿಸಿ ಸಂರಕ್ಷಿಸಬೇಕು ಎಂದು ಹೇಳಿದರು.

    ಪ್ರಾಚೀನ ಕಾಲದಲ್ಲಿ ನಮ್ಮ ಭಾರತ (India) ದೇಶವನ್ನು ವಿಶ್ವ ಗುರು ಎಂದು ಕರೆಯಲಾಗುತ್ತಿತ್ತು. ನಳಂದ, ತಕ್ಷಶಿಲಾ, ವಿಕ್ರಮಶಿಲಾ ಮುಂತಾದ ವಿಶ್ವದರ್ಜೆಯ ಶಿಕ್ಷಣ ಸಂಸ್ಥೆಗಳಿದ್ದವು. ಈ ಸಂಸ್ಥೆಗಳಲ್ಲಿ ಓದಲು ಭಾರತ ಮತ್ತು ವಿದೇಶಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದರು. ತಾಂತ್ರಿಕ ಶಿಕ್ಷಣವು ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ನುರಿತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮೂಲಕ, ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸುವ ಮೂಲಕ, ಜನರ ಜೀವನದ ಗುಣಮಟ್ಟವನ್ನು ಸುಧಾರಿಸುವ ಮೂಲಕ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು.  ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಪ್ರಸ್ತುತ ತಂತ್ರಜ್ಞಾನವು ಊಹಿಸುವುದಕ್ಕಿಂತ ವೇಗವಾಗಿ ಬದಲಾಗುತ್ತಿದೆ. ಆದ್ದರಿಂದ, ನಮ್ಮ ಸಂಶೋಧಕರು, ವಿಜ್ಞಾನಿಗಳು ಮತ್ತು ತಜ್ಞರು ಪ್ರತಿಯೊಂದು ಪ್ರದೇಶವನ್ನು ನಿರೀಕ್ಷಿಸುವುದು ಮತ್ತು ಅದಕ್ಕೆ ಅನುಗುಣವಾಗಿ ಯೋಜಿಸುವುದು ಅವಶ್ಯಕ. ಒನ್ ಇಂಡಿಯಾ, ಬೆಸ್ಟ್ ಇಂಡಿಯಾ ಮತ್ತು ಡೆವಲಪ್ಡ್ ಇಂಡಿಯಾಗಾಗಿ ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಯನ್ನು ಸಾಧಿಸುವಲ್ಲಿ ಯುವಜನತೆ ಕೊಡುಗೆ ನೀಡಬೇಕು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

    ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಶಿಕ್ಷಣ ಸಂಸ್ಥೆಗಳು ಪ್ರಮುಖ ಕೊಡುಗೆಯನ್ನು ಹೊಂದಿವೆ. ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅದನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಮ್ಮ ಸಕ್ರಿಯ ಪ್ರಯತ್ನಗಳು ನಡೆಯಬೇಕು. ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವೆಲ್ಲರೂ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.

    ನಮ್ಮ ಶಿಕ್ಷಣವು ಸಾರ್ವತ್ರಿಕ ಮತ್ತು ಎಲ್ಲರಿಗೂ ಪ್ರಯೋಜನಕಾರಿಯಾಗುವಂತೆ ನಮ್ಮ ಪ್ರಯತ್ನಗಳು ಇರಬೇಕು. ವಿಶ್ವವಿದ್ಯಾಲಯವು ಈ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಈ ದಿನ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಎಂದ ಅವರು, ಗೌರವ ಡಾಕ್ಟರೇಟ್ ಪಡೆದ ಸಾಧಕರ ಸಾಧನೆ ಯುವಪೀಳಿಗೆಗೆ ಸ್ಫೂರ್ತಿಯಾಗಲಿದೆ, ಹಾಗೆ ನಿಮ್ಮ ಸೇವೆ ಸಮಾಜಕ್ಕಾಗಿ ನಿರಂತರವಾಗಿರಲಿ ಎಂದು ಹಾರೈಸಿದರು.

    ಘಟಿಕೋತ್ಸವದಲ್ಲಿ ಸಚಿವರಾದ ಡಾ ಎಂ.ಸಿ. ಸುಧಾಕರ್, ಇಸ್ರೋ ಬೆಂಗಳೂರು ವಿಶ್ರಾಂತ ಅಧ್ಯಕ್ಷರಾದ ಡಾ ಎ.ಎಸ್ ಕಿರಣ್ ಕುಮಾರ್, ಕುಲಪತಿ ಪ್ರೊ.ಎಂ ವೆಂಕಟೇಶ್ವರಲು, ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭ ಕಲ್ಯಾಣ್, ಸಿಇಓ ಪ್ರಭು.ಜಿ ವಿ.ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

     

  • ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತೀವ್ರ ವಿರೋಧ

    ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತೀವ್ರ ವಿರೋಧ

    ತುಮಕೂರು: ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಿ.ಡಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಅಧ್ಯಯನ ಪೀಠ ಸ್ಥಾಪಿಸದಂತೆ ವಿವಿಧ ಸಂಘಟನೆಗಳ ಮುಖಂಡರು ವಿವಿ ಕುಲಪತಿಗೆ ಮನವಿ ಸಲ್ಲಿಸಿದ್ದಾರೆ.

    ಸಾವರ್ಕರ್ ಅಭಿಮಾನಿಗಳು ಬೇಕಿದ್ರೆ ಅವರ ಫೋಟೋವನ್ನು ಅವರವರ ಮನೆಯಲ್ಲಿ ಹಾಕಿಕೊಳ್ಳಲಿ,  ಅದರ ಹೊರತಾಗಿ ವಿವಿಯಲ್ಲಿ ಪೀಠ ಸ್ಥಾಪನೆ ಮಾಡುವುದು ಬೇಡ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಮುಂದಾದ ತುಮಕೂರು ವಿವಿ

    ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸಾವರ್ಕರ್ ಪೀಠ ಮಾಡುತ್ತೇವೆ ಎಂದು ವಿಶ್ವವಿದ್ಯಾನಿಲಯವನ್ನು ರಾಜಕಾರಣದ ಕೇಂದ್ರ ಮಾಡಲು ಹೊರಟಿರುವ ವಿವಿಯ ನಡೆ ನಿಜಕ್ಕೂ ನಾಚಿಕೆ ತರುವಂತದ್ದು. ವಿವಿಯಲ್ಲಿ ಈಗಾಗಲೇ 16 ಅಧ್ಯಯನ ಪೀಠಗಳಿವೆ. ಅವುಗಳನ್ನೇ ನಡೆಸಲು ಅನುದಾನ ಇಲ್ಲ, ಪೀಠೋಪಕರಣಗಳಿಲ್ಲ, ಇನ್ನೂ ಹೊಸ ಕ್ಯಾಂಪಸ್ ಕಟ್ಟಲು ಆಗಿಲಗಲ. ಇಂತಹ ಸಂಧರ್ಭದಲ್ಲಿ ರಾಜಕೀಯ ತೇವಲಿಗೆ ಪೀಠ ಮಾಡುತ್ತಿರುವುದು ವಿಶ್ವವಿದ್ಯಾನಿಲಯದ ಬೌದ್ಧಿಕ ದಾರಿದ್ರ್ಯ, ಹಾಗಾಗಿ ಪೀಠ ಸ್ಥಾಪನೆ ಪೀಠ ಸ್ಥಾಪನೆ ಮಾಡುವುದು ಬೇಡವೆಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

    ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

    ತುಮಕೂರು: ಇಲ್ಲಿನ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮೀಜಿ ನಿರಾಕರಿಸಿದ್ದಾರೆ.

    ವಿವಿಯ 10 ನೇ ಘಟಿಕೋತ್ಸವದ ಅಂಗವಾಗಿ ಇಬ್ಬರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ವಿವಿ ಸಿಂಡಿಕೇಟ್ ನಿರ್ಧರಿಸಿತ್ತು. ಪವಾಡ ರಹಸ್ಯ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಮತ್ತು ಧಾರ್ಮಿಕ ಕ್ಷೇತ್ರದಿಂದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿತ್ತು.

    ಈ ಇಬ್ಬರಿಗೆ ಡಾಕ್ಟರೇಟ್ ನೀಡಲು ರಾಜ್ಯಪಾಲ ವಿಆರ್ ವಾಲಾ ಅನುಮೋದನೆ ಕೂಡಾ ಮಾಡಿದ್ದರು. ಆದರೆ ಧಾರ್ಮಿಕ ಕ್ಷೇತ್ರದಲ್ಲಿ ಸಾಧಿಸುವುದು ಇನ್ನೂ ಬಹಳಷ್ಟಿದೆ ಎಂಬ ಕಾರಣ ನೀಡಿ, ಸಿದ್ಧಲಿಂಗ ಸ್ವಾಮೀಜಿ ಡಾಕ್ಟರೇಟ್ ಪಡೆಯದಿರಲು ನಿರ್ಧರಿಸಿದ್ದಾರೆ.

    ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕ್ರಿಕೆಟ್ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ ದ್ರಾವಿಡ್, ಕ್ರಿಕೆಟ್ ಆಡಿದ್ದಕ್ಕೆ ಡಾಕ್ಟರೇಟ್ ಪದವಿ ನೀಡುವುದು ಬೇಡ. ಕ್ರಿಕೆಟ್‍ಗೆ ಸಂಬಂಧಪಟ್ಟಂತೆ ಶೈಕ್ಷಣಿಕ ಪ್ರಬಂಧ ಮಂಡಿಸಿ ನಾನು ಡಾಕ್ಟರೇಟ್ ಪದವಿಯನ್ನು ಪಡೆಯುತ್ತೇನೆ ಎಂದು ವಿವಿಗೆ ತಿಳಿಸಿ ಗೌರವ ಡಾಕ್ಟರೇಟ್ ನಿರಾಕಸಿದ್ದರು.