Tag: tumkur

  • ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ರಾಮನಗರ-ತುಮಕೂರು ಮಧ್ಯೆ ಹೇಮಾವತಿ ಕಲಹ – ಸರ್ವಪಕ್ಷ ಸಭೆ ಕರೆಯಲು ಬಿಜೆಪಿ ಆಗ್ರಹ

    ಬೆಂಗಳೂರು: ರಾಮನಗರಕ್ಕೆ ಹೇಮಾವತಿ ನೀರು (Hemavati Water) ಖಂಡಿಸಿ ಹೋರಾಟ ನಡೆಸಿದವರ ಮೇಲೆ ಎಫ್‌ಐಆರ್ ಹಾಕಿರುವುದನ್ನು ಬಿಜೆಪಿ ನಾಯಕರು (BJP Leaders) ತೀವ್ರವಾಗಿ ಖಂಡಿಸಿದ್ದಾರೆ.

    ಈ ಕೂಡಲೇ ಸರ್ಕಾರ ಹೋರಾಟಗಾರರ ಮೇಲೆ ಹಾಕಿದ ಕೇಸ್‌ಗಳನ್ನು ವಾಪಸ್ ಪಡೆಯಬೇಕು. ಅಲ್ಲದೇ ಸರ್ವಪಕ್ಷ ಸಭೆ ಕರೆದು ಎರಡೂ ಜಿಲ್ಲೆಗಳ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: Video | ಹೇಮಾವತಿ ಕೆನಾಲ್‌ ಕಾಮಗಾರಿ ವಿರೋಧಿಸಿ ಪ್ರತಿಭಟನೆ; ನೂರಾರು ರೈತಹೋರಾಟಗಾರರ ವಿರುದ್ಧ FIR

    ಬೆಂಗಳೂರಿನಲ್ಲಿ ಮಾತಾಡಿದ ವಿಪಕ್ಷ ನಾಯಕ ಆರ್. ಅಶೋಕ್ (R Ashoka), ರಾಮನಗರಕ್ಕೆ ಹರಿಸುವ ಪ್ರಯತ್ನದ ವಿರುದ್ಧ ಸರ್ಕಾರ ತನ್ನ ಎಡಬಿಡಂಗಿತನದಿಂದ ತುಮಕೂರು, ರಾಮನಗರ ರೈತರನ್ನು ಪರಸ್ಪರ ಎತ್ತಿ ಕಟ್ಟಿದೆ. ಸರ್ಕಾರ ಎರಡೂ ಜಿಲ್ಲೆಗಳ ರೈತರಿಗೆ ಸಮಾಧಾನ ಆಗುವ ಪರಿಹಾರ ಕಂಡುಕೊಳ್ಳಲಿ. ಎರಡೂ ಜಿಲ್ಲೆಗಳ ರೈತ ಪ್ರಮುಖರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು.

    ನಾವು ನೀರು ತಗೊಂಡೇ ಹೋಗ್ತೀವಿ ಅಂತ ಡಿಕೆಶಿ ದಾದಾಗಿರಿ ಮಾಡೋದು ಸರಿಯಲ್ಲ. ಹೋರಾಟಗಾರರ ಮೇಲೆ ಎಫ್ಐಆರ್ ಹಾಕಿ ಹೆದರಿಸಿ ಬೆದರಿಸೋದು ನಡೆಯಲ್ಲ. ಕೂಡಲೇ ಕೇಸ್ ವಾಪಸ್ ಪಡೆಯಲಿ ಎಂದು ಅಶೋಕ್ ಕಿಡಿ ಕಾರಿದ್ರು. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

    ಇನ್ನೂ ಛಲವಾದಿ ನಾರಾಯಣ ಸ್ವಾಮಿ ಮಾತಾಡಿ, ಹೇಮಾವತಿ ನೀರು ಬಗ್ಗೆ ಎರಡೂ ಜಿಲ್ಲೆಗಳ ರೈತರನ್ನು ಸರ್ಕಾರ ಒಪ್ಪಿಸಿ, ಕನ್ವಿನ್ಸ್ ಮಾಡಬೇಕು. ಅದು ಬಿಟ್ಟು ಏಕಾಏಕಿ ಕ್ರಮ ತಗೊಳ್ಳೋದು, ಕೇಸ್ ಹಾಕೋದು ಮಾಡಬೇಡಿ ಎರಡೂ ಜಿಲ್ಲೆಗಳ ಹಿತದ ದೃಷ್ಟಿಯಿಂದ ಸರ್ಕಾರ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್‌ ಗುಂಪು; ವಿಡಿಯೋ ವೈರಲ್‌

    ಇನ್ನು ಎಕ್ಸ್‌ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸ್ವಾಮೀಜಿಗಳು ಸೇರಿ ಶಾಸಕರು ಹಾಗೂ ರೈತ ಹೋರಾಟಗಾರರ ಮೇಲೆ FIR ದಾಖಲಿಸಿರುವ ಕ್ರಮ ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರ ಒಡೆದು ಅಳುವ ನೀತಿ ಅನುಸರಿಸುತ್ತಿದೆ. ಈ ಕೂಡಲೇ ಸರ್ವ ಪಕ್ಷಗಳ ಸಭೆ ಕರೆದು ಸಂಬಂಧಿಸಿದ ಜಿಲ್ಲೆಗಳ ಜನಪ್ರತಿನಿಧಿಗಳು, ಪ್ರಮುಖರು ಹಾಗೂ ರೈತ ಮುಖಂಡರೊಂದಿಗೆ ಚರ್ಚಿಸಲಿ ಎಂದು ಆಗ್ರಹಿಸಿದರು.

  • ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

    ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

    – ನಾವೇನು ಅವರ ಹಕ್ಕನ್ನ ಕಿತ್ತುಕೊಳ್ತಿಲ್ಲ, ನಮ್ಮ ನೀರಿನ ಹಕ್ಕನ್ನು ಕೇಳ್ತಿದ್ದೇವೆ ಎಂದ ಶಾಸಕ
    – ಹೇಮಾವತಿ ಕೆನಾಲ್‌ ಯೋಜನೆ ರೈತರಿಗೆ ಮರಣ ಶಾಸನ; ಸುರೇಶ್‌ ಗೌಡ ಕೆಂಡ

    ರಾಮನಗರ: ಕುಣಿಗಲ್ ಮತ್ತು ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಕಮಿಟ್‌ಮೆಂಟ್‌ ಇದೆ. ಆದರೆ ನೀರನ್ನ ರಾಮನಗರ, ಕನಕಪುರಕ್ಕೆ ತೆಗೆದುಕೊಂಡು ಹೋಗ್ತಾರೆ ಅಂತ ಅಪಪ್ರಚಾರ ಆಗ್ತಿದೆ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna) ಅಸಮಾಧಾನ ಹೊರಹಾಕಿದ್ದಾರೆ.

    ರಾಮನಗರದಲ್ಲಿ (Ramanagara) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಲಿಂಕ್‌ (Hemavathi Express Canal Link) ಯೋಜನೆಗೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು. ನಮಗೆ ಅಲೋಕೇಷನ್ ಆಗಿರೋ 0.6 ಟಿಎಂಸಿ ನೀರನ್ನ ಮಾತ್ರ ನಾವು ಕೇಳ್ತಿದ್ದೇವೆ. ಅದನ್ನ ತರಲು ಲಿಂಕ್ ಕೆನಾಲ್ ಯೋಜನೆ ಮಾಡಲಾಗ್ತಿದೆ. ಇದರ ಬಗ್ಗೆ ವಿರೋಧಿಗಳು ಅಪಪ್ರಚಾರ ಮಾಡ್ತಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ಡಿಕೆಶಿ ಇದನ್ನ ಮಂಜೂರು ಮಾಡಿಸಿದ್ರು. ಬಳಿಕ ಸಮ್ಮಿಶ್ರ ಸರ್ಕಾರ ಬಂದಾಗ ಬಿಜೆಪಿಯವ್ರು ವಜಾ ಮಾಡಿದ್ರು. ಈಗ ನಮ್ಮ ಸರ್ಕಾರ ಬಂದ ಮೇಲೆ ಮತ್ತೆ ಮಂಜೂರಾತಿ ಪಡೆದು ಕೆಲಸ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: 

    ಹೋರಾಟ ಮಾಡೋದ್ರಿಂದ ಪ್ರಯೋಜನ ಇಲ್ಲ
    ರಾಜಕೀಯವಾಗಿ ಮಾತ್ರ ಇದನ್ನ ವಿರೋಧ ಮಾಡ್ತಿದ್ದಾರೆ. ಪರಮೇಶ್ವರ್, ಡಿಕೆಶಿ ನೇತೃತ್ವದಲ್ಲಿ ಯೋಜನೆ ಮಾಡ್ತಿದ್ದಾರೆ. ಪ್ರತಿಭಟನೆ ಮಾಡೋದು ಅವರ ಹಕ್ಕು ಆದರೆ ನಾವೆಲ್ಲ ಅಣ್ಣತಮ್ಮಂದಿರು. ತುಮಕೂರಿನ ಹಾಲು ಬೆಂಗಳೂರು, ಕುದೂರು ಭಾಗದಲ್ಲಿ ಮಾರಾಟ ಆಗುತ್ತೆ. ಅದನ್ನ ಮಾರಾಟ ಮಾಡಬೇಡಿ ಅಂತ ನಾವು ನಿಲ್ಲಿಸಲು ಆಗುತ್ತಾ? ಅದನ್ನ ನಿಲ್ಲಿಸಿದ್ರೆ ಆ ಭಾಗದ ರೈತರಿಗೆ ತೊಂದರೆ ಆಗಲ್ವಾ.? ನಾವೇನು ಅವರ ಹಕ್ಕನ್ನ ಕಿತ್ತುಕೊಳ್ತಿಲ್ಲ, ನಮ್ಮ ನೀರಿನ ಹಕ್ಕು ಕೇಳ್ತಿದ್ದೇವೆ. ಹೋರಾಟ ಮಾಡೋದ್ರಿಂದ ಏನು ಪ್ರಯೋಜನ ಇಲ್ಲ ಎಂದರು. ಇದನ್ನೂ ಓದಿ: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

    ಮುಂದುವರಿದು ನಿಮ್ಮೂರಿನ ಹೆಣ್ಣುಮಕ್ಕಳನ್ನ ನಮ್ಮ ತಾಲೂಕಿಗೆ ಮದುವೆ ಮಾಡಿಕೊಟ್ಟಿದ್ದೀರಿ. ನಿಮ್ಮ ಹೆಣ್ಣುಮಕ್ಕಳ ಬದುಕು ಹಸನಾಗಬೇಕು. ಹಾಗಾಗಿ ಹೋರಾಟಗಾರರು ಯೋಜನೆಗೆ ಸಹಕಾರ ಕೊಡಿ ಅಂತ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಬಿಎಂಟಿಸಿಯ `ದಿವ್ಯ ದರ್ಶನ’ ವಿಶೇಷ ಟೂರ್ ಪ್ಯಾಕೇಜ್ ಆರಂಭ

    ಕೂಡಲೇ ಯೋಜನೆ ರದ್ದು ಮಾಡಬೇಕು: ಸುರೇಶ್‌ಗೌಡ
    ಇನ್ನೂ ತುಮಕೂರು ಗ್ರಾಮಾಂತರದ ಬಿಜೆಪಿ ಶಾಸಕ ಸುರೇಶ್‌ಗೌಡ ಮಾತನಾಡಿ, ಸರ್ಕಾರ ನಿಷೇದಾಜ್ಞೆ ಜಾರಿ ಮಾಡಿದೆ. ಯಾವಾಗ ಸರ್ಕಾರ ರೈತ ವಿರೋಧಿ ನೀತಿ ಮಾಡುತ್ತೋ ಆಗ ರೈತರು ಹೋರಾಟ ಮಾಡ್ತಾರೆ. ಸರ್ಕಾರ ರೈತರ ನಿರ್ಣಯ ಕೇಳಿ ನಿರ್ಧಾರ ಮಾಡಬೇಕು. ಈಗ ಏಕಾಏಕಿ 10 ತಾಲೂಕುಗಳಿಗೆ ನೀರನ್ನ ಕಡಿತ ಮಾಡಿ ಒಂದೇ ಒಂದು ರಾಮನಗರ ಜಿಲ್ಲೆಗೆ ತೆಗೆದುಕೊಂದು ಹೋಗುತ್ತಿರುವುದಕ್ಕೆ ನಮ್ಮ ವಿರೋಧ ಇದೆ. 2 ವರ್ಷದಿಂದ ಡಿಸಿ ಕಚೇರಿ ಎದುರು ಧರಣಿ ಮಾಡ್ತಿದ್ದೀವಿ. ಪಾದಯಾತ್ರೆ ಮಾಡಿದ್ವಿ, ಪರಮೇಶ್ವರ್ ಮನೆ ಎದುರು ಹೋರಾಟ ಮಾಡಿ ಆಯ್ತು. ಅಧಿವೇಶನದಲ್ಲಿ ಗಲಾಟೆ ಮಾಡಿದೆವು. ಆದ್ರೆ ಸರ್ಕಾರ ಸವಾಲಾಗಿ ತೆಗೆದುಕೊಂಡು ಹೋಗುತ್ತಿದ್ದ, ರೈತರ ಬೀದಿಗೆ ಬಂದಿದ್ದೀವಿ. ಇದು ರೈತರಿಗೆ ಮರಣ ಶಾಸನ, ಕೂಡಲೇ ಈ ಯೋಜನೆ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

  • ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

    ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

    – ರಸ್ತೆ ತಡೆದು ಪ್ರತಿಭಟನೆ, ಆಕ್ರೋಶ

    ತುಮಕೂರು: ನಗರದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ (Hemavathi Express Canal Link) ವಿವಾದ ಭುಗಿಲೆದ್ದಿದೆ. ಕುಣಿಗಲ್ ಹೊರತುಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರವು ವಿವಾದ ಬಗೆಹರಿಸದೇ ಕಾಮಗಾರಿ ಮುಂದುವರೆಸಲು ಮುಂದಾಗಿದ್ದು, ಪ್ರತಿಭಟನೆಗೆ (Protest) ಅವಕಾಶವಿಲ್ಲದಂತೆ ನಿಷೇಧಾಜ್ಞೆ ಹೇರಲಾಗಿದೆ.

    ಇಂದು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಾವಿರಾರು ರೈತರೂ (Farmers) ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. 144 ಸೆಕ್ಷನ್‌ ನಿಷೇಧಾಜ್ಞೆ ಹೊರತಾಗಿಯೂ ರೈತರ ಆಕ್ರೋಶ ಮುಂದುವರಿದಿದೆ. ಹೀಗಾಗಿ ಗುಬ್ಬಿ, ನಿಟ್ಟೂರು ಸೇರಿದಂತೆ ಹಲವೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ. 10 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, 4 ಡಿವೈಎಸ್‌ಪಿ, 23 ಇನ್ಸ್‌ಪೆಕ್ಟರ್‌ ಸಹಿತ 900 ಪೊಲೀಸರ ನಿಯೋಜನೆ ಮಾಡಲಾಗಿದೆ.

    10ಕ್ಕೂ ಹೆಚ್ಚು ಪ್ರತಿಭಟನಾಕಾರರು ವಶಕ್ಕೆ:
    ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿರೋಧಿಸಿ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯುವ ಕೆಲಸ ಪೊಲೀಸರು ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಗುಬ್ಬಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ರಾಮನಗರಕ್ಕೆ ನೀರು ಹರಿಸಲು ವಿರೋಧ:
    ಇನ್ನೂ ಕೆನಾಲ್‌ ಯೋಜನೆ ಮೂಲಕ ರಾಮನಗರಕ್ಕೆ ನೀರು ಹರಿಸಲು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಗುಬ್ಬಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನ ಹೊತ್ತೊಯ್ಯಲು ತಂದಿದ್ದ ಸಾರಿಗೆ ಬಸ್‌ ಚಕ್ರಗಳ ಗಾಳಿ ತೆಗೆದು ಆಕ್ರೋಶ ಹೊರಹಾಕಿದ್ದಾರೆ. ಬಸ್ಸನ್ನ ಮಗುಚಿಹಾಕಲೂ ಯತ್ನಿಸಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದುಕೊಂಡೇ ನಾಲೆಯತ್ತ ಹೊರಟಿದ್ದಾರೆ. ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

  • ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಯತ್ನ ಕೇಸ್‌ – 18 ನಿಮಿಷಗಳ ಸುಪಾರಿ ಆಡಿಯೋ FSLಗೆ

    ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಯತ್ನ ಕೇಸ್‌ – 18 ನಿಮಿಷಗಳ ಸುಪಾರಿ ಆಡಿಯೋ FSLಗೆ

    ಬೆಂಗಳೂರು: ಸಚಿವ ರಾಜಣ್ಣ ಪುತ್ರ ರಾಜೇಂದ್ರ (Rajendra Rajanna) ಹತ್ಯೆಗೆ ಯತ್ನ ಪ್ರಕರಣ ತನಿಖೆಯನ್ನು ಕ್ಯಾತಸಂದ್ರ ಪೊಲೀಸರು ಚುರುಕುಗೊಳಿಸಿದ್ದಾರೆ.

    ಎಂಎಲ್‌ಸಿ ರಾಜೇಂದ್ರ ಅವರು ಆರೋಪ ಮಾಡಿದ ಹಾಗೆ 18 ನಿಮಿಷಗಳ ಆಡಿಯೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಡಿಯೋದಲ್ಲಿ (Audio) ಇಬ್ಬರ ಮಾತಿನ ಸಂಭಾಷಣೆ ಇದ್ದು, ಆ ಸಂಭಾಷಣೆಯ ಬಗ್ಗೆ ಒಂದಿಷ್ಟು ಸ್ಪಷ್ಟನೆ ಸಿಗಬೇಕಿದೆ. ಈಗಾಗಲೇ ರಾಜೇಂದ್ರ ಅವರು ಆರೋಪ‌ ಮಾಡಿದ ಹಾಗೇ ಸೋಮ ಮತ್ತು ಭರತ್ ಮಾತುಕತೆನಾ ಅಂತ ಪರಿಶೀಲನೆ ನಡೆಸ್ತಾ ಇದ್ದಾರೆ. ಇದರ ಜೊತೆಗೆ ಆಡಿಯೋವನ್ನ ಎಫ್‌ಎಸ್‌ಎಲ್‌ಗೆ ‌ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಎಂಎಲ್‌ಸಿ ರಾಜೇಂದ್ರ ರಾಜಣ್ಣ ಅವರು, ತನ್ನ ಕೊಲೆಗೆ 70 ಲಕ್ಷ ರೂ.ಗೆ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದರು. 18 ನಿಮಿಗಳ ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದರು. ಇದನ್ನೂ ಓದಿ: ಹೇಮಾವತಿ ಕೆನಾಲ್ ಕದನ – ಡಿಕೆಶಿ ಸಂಬಂಧಿ ನಂಗೆ ಫೋನ್ ಮಾಡಿ ಧಮ್ಕಿ ಹಾಕಿದ್ದಾರೆ: ರಾಜೇಂದ್ರ ರಾಜಣ್ಣ

    ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದರು. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

  • ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    – ಆಡಿಯೋ ಸಾಕ್ಷ್ಯ ಸಹಿತ 2 ಪುಟಗಳ ದೂರು

    ತುಮಕೂರು: ತನ್ನ ಕೊಲೆಗೆ 70 ಲಕ್ಷ ರೂ.ಗೆ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ಸಚಿವ ಕೆ.ಎನ್‌ ರಾಜಣ್ಣ (KN Rajanna) ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ ರಾಜಣ್ಣ (Rajendra Rajanna) ಅವರು ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.

    ಮಧ್ಯಾಹ್ನ 12 ಗಂಟೆ ಸುಮಾರಿಗೆ ತುಮಕೂರು‌ ಎಸ್ಪಿ ಕಚೇರಿಗೆ ತೆರಳಿದ ರಾಜೇಂದ್ರ ರಾಜಣ್ಣ ಅವರು ಎಸ್ಪಿ ಅಶೋಕ್‌ ಕುಮಾರ್‌ ಅವರಿಗೆ ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದಾರೆ. ತುಮಕೂರಿನ ಕಾತ್ಸಂದದ ರಜತಾತ್ರಿ ನಿವಾಸದಲ್ಲಿ ಕಳೆದ ನವೆಂಬರ್‌ನಲ್ಲಿ ನನ್ನ ಹತ್ಯೆಗೆ ಕೊಲೆಯತ್ನ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್‌ ಸಿಡಿಸಿದ ಸಚಿವ ರಾಜಣ್ಣ ಪುತ್ರ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಡಿಜಿ ಅವರ ಸಲಹೆ ಮೇರೆಗೆ ಇಂದು ಎಸ್ಪಿಗೆ ದೂರು ನೀಡಿದ್ದೇನೆ. ಹನಿಟ್ರ‍್ಯಾಪ್ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಅಪರಿಚಿತರಿಂದ ಫೋನ್ ಕಾಲ್ ಮೆಸೆಜ್ ವೀಡಿಯೋ ಕಾಲ್ ಬರುತಿತ್ತು ಅಂತಾ ಅಷ್ಟೇ ಹೇಳಿದ್ದೆ. ಈಗ ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದರ ಬಗ್ಗೆ ದೂರು ನೀಡಿದ್ದೇನೆ, ಎಫ್‌ಐಆರ್‌ ಮಾಡುವಂತೆ ಕೇಳಿಕೊಂಡಿದ್ದೇನೆ. ಕ್ಯಾತಸಂದ್ರ ಠಾಣೆಯಲ್ಲಿ ಎಫ್‌ಐಆರ್ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ – ಡಿಜಿಗೆ ದೂರು ಕೊಡಲು ರಾಜಣ್ಣ ಪುತ್ರಗೆ ಸಿಎಂ ಸೂಚನೆ

    ಮಗಳ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಂದರೆ ಕಳೆದ ನವೆಂಬರ್ ತಿಂಗಳಲ್ಲಿ ಕೊಲೆ ಸಂಚು ರೂಪಿಸಲಾಗಿತ್ತು. ನನ್ನ ಕಾರಿಗೆ ಜಿಪಿಎಸ್ ಅಳವಡಿಸಲು ಪ್ಲಾನ್ ಮಾಡಿದ್ದರು. ಇಡೀ ರಾಜ್ಯದಲ್ಲಿ ನನ್ನ ಮೇಲೆ ಯಾರಿಗೂ ದ್ವೇಷ ಇಲ್ಲ. ನಾನೇನು ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ಯಾಕೆ ಸುಪಾರಿ ಕೊಟ್ಟರು ಗೊತ್ತಿಲ್ಲ? ಅದನ್ನು ತನಿಖೆ ಮಾಡುವಂತೆ ಹೇಳಿದ್ದೇನೆ. ಸೋಮ ಮತ್ತು ಭರತ್ ಅನ್ನುವವರ ಹೆಸರು ಆಡಿಯೋದಲ್ಲಿ ಇದೆ. ಅವರು ಯಾರು ಅಂತಾ ಗೊತ್ತಿಲ್ಲ. ಒಬ್ಬ ಲೇಡಿ ಮತ್ತು ಹುಡುಗ 18 ನಿಮಿಷ ಆಡಿಯೋದಲ್ಲಿ ಮಾತನಾಡುತ್ತಾರೆ. ಮಗಳ ಬರ್ತ್‌ಡೇ ಹಿಂದಿನ ದಿನ ಹತ್ಯೆ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. ಶಾಮಿಯಾನ ಮಾಲೀಕರು ಹೆಸರು ನಾನು ಹೇಳಲ್ಲ. ಮಾಧ್ಯಮದವರಿಂದ ಅವರಿಗೆ ಕಿರಿಕಿರಿ ಆಗಬಾರದು ಎಂಬ ಕಾರಣಕ್ಕೆ ನಾನು ಅವರ ಹೆಸರು ಹೇಳಲ್ಲ ಎಂದು ಹೇಳಿದ್ದಾರೆ.

    ಮುಂದುವರಿದು.. ಹನಿಟ್ರ‍್ಯಾಪ್ ವಿಚಾರ ಸುಪಾರಿ ವಿಚಾರ ಬೇರೆ ಬೇರೆ. ಹನಿಟ್ರ‍್ಯಾಪ್ ವಿಚಾರ ಸಿಐಡಿ ತನಿಖೆ ಆರಂಭವಾಗಿದೆ. ಸಿಐಡಿ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ನಡೀತಿದೆ. ಬೆಂಗಳೂರು ಭೂಗತ ಲೋಕದ ಕೈವಾಡ ಬಗ್ಗೆ ಗೊತ್ತಿಲ್ಲ. ನನಗೆ ಹೆಚ್ಚಿನ ಭದ್ರತೆ ಬೇಕು ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏ.10ರ ಒಳಗಡೆ ಯತ್ನಾಳ್‌ ಉಚ್ಚಾಟನೆ ಆದೇಶ ವಾಪಸ್‌ ಪಡೀರಿ : ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್‌

  • ಹಕ್ಕಿ ಜ್ವರದ ಆತಂಕ – ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

    ಹಕ್ಕಿ ಜ್ವರದ ಆತಂಕ – ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

    – ಬಿಕೋ ಎನ್ನುತ್ತಿವೆ ಚಿಕನ್‌ ಸೆಂಟರ್‌ಗಳು
    – ಯಾವ ಜಿಲ್ಲೆಯ ಪರಿಸ್ಥಿತಿ ಹೇಗಿದೆ?

    ಚಿಕ್ಕಬಳ್ಳಾಪುರ/ಕೋಲಾರ/ಬಳ್ಳಾರಿ: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎಲ್ಲೆಡೆ ಮನೆ ಮಾಡಿದೆ. ಜನ ಚಿಕನ್ ತಿನ್ನೋಕೆ ಯೋಚನೆ ಮಾಡುವಂತಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಹಕ್ಕಿ ಜ್ವರ (Bird Flu) ಕಾಣಿಸಿಕೊಂಡ ವರದಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮಗಳು ಮುಂದುವರೆದಿದೆ. ರೋಗ ಉಲ್ಬಣ ಆಗದಂತೆ ಕೋಳಿಗಳ ಸಾಮೂಹಿಕ ಹತ್ಯೆ ಮಾಡಿ ಪ್ರತಿದಿನವೂ ಸ್ಯಾನಿಟೈಸೇಷನ್ ಮಾಡಲಾಗ್ತಿದೆ.

    ಚಿಕ್ಕಬಳ್ಳಾಪುರದಲ್ಲಿ (Chikkaballapura) 5ನೇ ದಿನವೂ ಸಹ ವರದಹಳ್ಳಿ ಗ್ರಾಮದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಕೋಳಿಗಳ ಹತ್ಯೆ ಮಾಡಿದಂತೆ ಡಿಸ್ ಇನ್‌ಫೆಕ್ಷನ್ ದ್ರಾವಣ ಸಿಂಪಡಿಸಿ ವೈರಸ್ ನಿಯಂತ್ರಣಕ್ಕೆ ಇನ್ನಿಲ್ಲದ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ನಿರಂತರವಾಗಿ ಮೂರು ತಿಂಗಳ ಕಾಲ ಗ್ರಾಮದಲ್ಲಿ ನಿಗಾ ಇಡಲಾಗುತ್ತಿದೆ. ಮೂರು ತಿಂಗಳು ಕೋಳಿಮುಕ್ತ ಗ್ರಾಮವಾಗಿ ವರದಹಳ್ಳಿ ಇರಬೇಕಿದೆ. ಯಾವುದೇ ಹೊಸ ಕೋಳಿ ಸಾಕಾಣಿಕೆಗೆ ಅವಕಾಶವೇ ಇಲ್ಲ. ಸದ್ಯ 1 ಕಿಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ಝೋನ್ ಇದ್ದು.. ಮುಂದಿನ ದಿನಗಳಲ್ಲಿ 10 ಕಿಮೀ ವ್ಯಾಪ್ತಿಯಲ್ಲಿ ಮಾದರಿಗಳನ್ನ ಪ್ರಯೋಗಲಾಯಕ್ಕೆ ಕಳುಹಿಸಿ ವೈರಸ್ ನಿರ್ಮೂಲನೆಗೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

    ಕೋಲಾರ:
    ಕೋಲಾರದಲ್ಲಿ ಹಕ್ಕಿ ಜ್ವರದ ಆತಂಕ ಹಿನ್ನೆಲೆ ಕುಕ್ಕಟೋದ್ಯಮಕ್ಕೆ ಬಿಸಿ ತಟ್ಟಿದ್ದು ಚಿಕನ್‌ಗೆ ಒಂದಷ್ಟು ಬೇಡಿಕೆ ಕಡಿಮೆಯಾಗಿದೆ. ಚಿಕನ್ ಅಂಗಡಿಗಳು ಖಾಲಿಯಾಗಿದ್ದು ಚಿಕನ್ ಪ್ರಿಯರೆಲ್ಲ ಕುರಿ ಮಾಂಸ ಹಾಗೂ ಮೀನಿನ ಮೊರೆ ಹೋಗಿದ್ದಾರೆ.

    ಬಳ್ಳಾರಿ:
    ಜಿಲ್ಲೆಯಲ್ಲೂ ಹಕ್ಕಿ ಜ್ವರ ಆತಂಕ ಮನೆ ಮಾಡಿದ್ದು. ಫಾರಂಗಳಲ್ಲೇ ಕೋಳಿಗಳು ಸಾವಾಗ್ತಿರೋದ್ರಿಂದ ಉತ್ಪಾದನೆ ಕುಂಠಿತಗೊಂಡಿದೆ. ಇದ್ರಿಂದ ಚಿಕನ್ ದರವೂ ಹೆಚ್ಚಾಗಿದೆ.

    ವಿಜಯಪುರ:
    ವಿಜಯಪುರದಲ್ಲೂ ಗ್ರಾಹಕರು ಹಕ್ಕಿ-ಜ್ವರಕ್ಕೆ ಹೆದರಿ ಕೋಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಚಿಕನ್ ಪ್ರಿಯರೆಲ್ಲ ಕುರಿ ಮಾಂಸ ಹಾಗೂ ಮೀನಿನ ಮೊರೆ ಹೋಗಿದ್ದಾರೆ.

    ಕೊಡಗು:
    ಹಕ್ಕಿಜ್ವರ ಹಿನ್ನೆಲೆ ಜನ ವಿವಿಧ ಜಿಲ್ಲೆಗಳಲ್ಲಿ ಚಿಕನ್‌ ತಿನ್ನೋದಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೋಪ್ಪದಲ್ಲಿ ಸಂತೆ ದಿನವಾದ ಕೋಳಿ ಮಾಂಸದ ಅಂಗಡಿಗಳಲ್ಲಿ ಗ್ರಾಹಕರು ಇಲ್ಲದೇ ಕೆಲ ಅಂಗಡಿಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನಾಟಿ ಕೋಳಿಗಳಿಗೆ ಬೇಡಿಕೆ ಇರುವುದರಿಂದ ಕೆಲ ಗ್ರಾಹಕರು ನಾಟಿ ಕೋಳಿಯ ಮೊರೆ ಹೋಗುತ್ತಿದ್ದಾರೆ.

    ತುಮಕೂರು:
    ತುಮಕೂರು ಜಿಲ್ಲೆಯಲ್ಲಿ ಯಾವುದೇ ರೀತಿಯ ಹಕ್ಕಿ ಜ್ವರದ ಪ್ರಕರಣ ಪತ್ತೆಯಾಗಿಲ್ಲ. ಆದರೂ ಜನರಲ್ಲಿ ಆತಂಕ ಶುರುವಾಗಿದೆ. ಇದರ ಪರಿಣಾಮ ಚಿಕನ್ ಸೆಂಟರ್‌ಗಳು ಬಿಕೋ ಎನ್ನುತ್ತಿವೆ.

  • ತುಮಕೂರು | ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಭಯಭೀತರಾದ ಗ್ರಾಮಸ್ಥರು

    ತುಮಕೂರು | ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಭಯಭೀತರಾದ ಗ್ರಾಮಸ್ಥರು

    ತುಮಕೂರು: ಇಲ್ಲಿನ ತುರುವೆಕೆರೆ (Turuvekere) ತಾಲೂಕು ತೊರೆಮಾವಿನಹಳ್ಳಿ (Toremavinahalli) ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಮನೆಯ ಮುಂದಿದ್ದ ನಾಯಿಯನ್ನು ಹೊತ್ತೊಯ್ದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

    ಚಿರತೆ ಬಂದು ಹೋದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೆಲ ದಿನಗಳಿಂದ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿದ್ದ ಚಿರತೆ ತಡರಾತ್ರಿ ತೊರೆಮಾವಿನಹಳ್ಳಿಯ ಶಂಕರಲಿಂಗಯ್ಯ ಎಂಬುವರ ಮನೆಯಂಗಳದಲ್ಲಿ ಕಾಣಿಸಿಕೊಂಡಿದೆ. ಈ ವೇಳೆ ಮನೆಯ ಆವರಣಕ್ಕೆ ನುಗ್ಗಿ ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದಿದೆ. ಇದನ್ನೂ ಓದಿ: ಜನ ಸಾಮಾನ್ಯರ ಬಳಿ ಫಟಾಫಟ್ ವಸೂಲಿ – ಸರ್ಕಾರಿ ಇಲಾಖೆಗಳಿಂದಲೇ 8,000 ಕೋಟಿ ವಿದ್ಯುತ್‌ ಬಿಲ್‌ ಬಾಕಿ!

    ಚಿರತೆ ಓಡಾಟದಿಂದ ಭಯಭೀತರಾಗಿರುವ ಗ್ರಾಮಸ್ಥರು, ರಾತ್ರಿ ವೇಳೆ ಮನೆಯಿಂದ ಹೊರ ಬರಲು ಆತಂಕಪಡುತ್ತಿದ್ದಾರೆ. ಇದನ್ನೂ ಓದಿ: ಭದ್ರತಾ ಖಾತ್ರಿಯಿಲ್ಲದೇ ಕದನ ವಿರಾಮ ಸಾಧ್ಯವಿಲ್ಲ – ಟ್ರಂಪ್‌ಗೆ ಝಲೆನ್ಸ್ಕಿ ಖಡಕ್‌ ಪ್ರತಿಕ್ರಿಯೆ

    ಕೂಡಲೇ ಚಿರತೆಯನ್ನು ಸೆರೆಯಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಟ್ರಂಪ್-ಝೆಲೆನ್ಸ್ಕಿ ನಡ್ವೆ ಮಾತಿನ ಚಕಮಕಿಗೆ ಬೆಚ್ಚಿಬಿದ್ದ ವಿಶ್ವ – ನಿಮ್ಮಿಂದ 3ನೇ ಮಹಾಯುದ್ಧ ಎಂದ ಯುಎಸ್‌ ಅಧ್ಯಕ್ಷ

  • ಕೆರೆಗೆ ಹಾರಿ ಟೆಕ್ಕಿ ಆತ್ಮಹತ್ಯೆ – ಪ್ರೀತಿ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಶಂಕೆ

    ಕೆರೆಗೆ ಹಾರಿ ಟೆಕ್ಕಿ ಆತ್ಮಹತ್ಯೆ – ಪ್ರೀತಿ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಶಂಕೆ

    – ಶೋಧ ಕಾರ್ಯಕ್ಕೆ ಖುದ್ದು ಅಗ್ನಿಶಾಮಕ ದಳದೊಂದಿಗೆ ಕೆರೆಗಿಳಿದ ಶಾಸಕ

    ತುಮಕೂರು: ಸಾಪ್ಟ್‌ವೇರ್‌ ಕಂಪನಿ ಉದ್ಯೋಗಿಯೊಬ್ಬರು ಕುಣಿಗಲ್ (Kunigal) ಪಟ್ಟಣದ ದೊಡ್ಡಕೆರೆಗೆ (Doddakere Lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಕುಣಿಗಲ್ ತಾಲೂಕು ಸೊಬಗನಹಳ್ಳಿ (Sobaganahalli) ಗ್ರಾಮದ ನಿವಾಸಿ ಸುಮಾ (26) ಮೃತ ಟೆಕ್ಕಿ.

    ಸುಮಾ ಶಿವರಾತ್ರಿ ನಿಮಿತ್ತ ಬೆಂಗಳೂರಿನಿಂದ ಊರಿಗೆ ಬಂದಿದ್ದರು. ಗುರುವಾರ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಬಸ್ಸಿನಲ್ಲಿ ಯಾರದ್ದೋ ಜೊತೆ ಫೋನಿನಲ್ಲಿ ಮಾತನಾಡುತ್ತಾ ಜಗಳ ಮಾಡಿಕೊಂಡಿದ್ದಾರೆ. ಜಗಳ ಮಾಡುತ್ತಲೇ ಕುಣಿಗಲ್ ಬಸ್ ನಿಲ್ದಾಣದಿಂದ ದೊಡ್ಡಕೆರೆ ಬಳಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸೆಬಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

    ಕೆರೆ ಏರಿ ಮೇಲೆ ಸುಮಾಳ ಮೊಬೈಲ್, ಪರ್ಸ್ ಸಿಕ್ಕಿದ್ದರಿಂದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಶವ ಪತ್ತೆಯಾಗದ ಕಾರಣ ಮಲ್ಪೆಯಿಂದ ಈಜು ತಜ್ಞರನ್ನು ಕರೆಸಿ ಶೋಧಿಸಿದ ಬಳಿಕ ಶವಪತ್ತೆಯಾಗಿದೆ.

    ಶೋಧ ಕಾರ್ಯಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಸಾಥ್ ನೀಡಿದ್ದು, ಅಗ್ನಿಶಾಮಕ ದಳದೊಂದಿಗೆ ಲೈಫ್ ಜಾಕೆಟ್ ಧರಿಸಿ ಕೆರೆಗೆ ಇಳಿದ ಶಾಸಕ ರಂಗನಾಥ್ ಯುವತಿಗಾಗಿ ಶೋಧಕಾರ್ಯ ನಡೆಸಿದರು. ಇದನ್ನೂ ಓದಿ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್‌

    ಸದ್ಯ ಮೃತದೇಹವನ್ನು ಕುಣಿಗಲ್ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ

  • ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

    ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

    ತುಮಕೂರು: ಮಧುಗಿರಿ ಪಟ್ಟಣದ ರಸ್ತೆ (Madhugiri Town Road) ಮತ್ತು ಚರಂಡಿ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 25 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು.

    ಪಟ್ಟಣದ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತುಮಕೂರು ಗೇಟ್‌ನಿಂದ ಶಿರಾ ರಸ್ತೆವರೆಗೆ, ಗೌರಿಬಿದನೂರು ಬೈಪಾಸ್‌ನಿಂದ ಸಿದ್ದಾಪುರ ಗೇಟ್‌ವರೆಗೆ ಡಬಲ್ ರಸ್ತೆ ಹಾಗೂ ಪಟ್ಟಣದ ಎಲ್ಲಾ ವಾರ್ಡ್‌ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಮಾಡಿಸಲಾಗುವುದು ಎಂದರು.

    ಪಟ್ಟಣದ ಪ್ರಮುಖ ವೃತ್ತಗಳನ್ನು ವಿನೂತನವಾಗಿ ಅಭಿವೃದ್ಧಿ ಪಡಿಸಲಾಗುವುದು. ಹೈಟೆಕ್ ತಂಗುದಾಣ ನಿರ್ಮಾಣ, ವೈಜ್ಞಾನಿಕ ಹಂಪ್‌ ಹಾಗೂ ಪ್ರಮುಖ ರಸ್ತೆಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ

    ರಾಜೀವ್ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿಗೆ 5 ಕೋಟಿ ರೂ. ಮಂಜೂರಾಗಿದೆ. ಈ ಅನುದಾನ‌ದಲ್ಲಿ ಕ್ರೀಡಾಪಟುಗಳು ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲಾಗುವುದು ಹೇಳಿದರು. ಇದನ್ನೂ ಓದಿ: ಶಾಸ್ತ್ರೋಕ್ತವಾಗಿ ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ – ಹೆಸರೇನು ಗೊತ್ತಾ?

  • ತುಮಕೂರಿನಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ

    ತುಮಕೂರಿನಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ

    ತುಮಕೂರು: ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ 2 ತಿಂಗಳ ಬಾಣಂತಿ ಸಾವನ್ನಪ್ಪಿದ್ದಾರೆ (Maternal Death) ಎಂದು ಆರೋಪಿಸಿದ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದರು.

    ಕುದ್ದೂರು ಗ್ರಾಮದ ದೀಪಕ್ ಎಂಬುವವರ ಪತ್ನಿ ಸಿಂಧು (28) ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಬುಧವಾರ ಮಧ್ಯಾಹ್ನ ಖಾಸಗಿ ಆಸ್ಪತ್ರೆಗೆ ಬಂದಿದ್ದರು.

    ರಾತ್ರಿವರೆಗೂ ಚಿಕಿತ್ಸೆ ನೀಡಿದ ವೈದ್ಯರು ನಂತರ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದಿದ್ದಾರೆ. ಆದರೆ ಆಸ್ಪತ್ರೆಯಿಂದ ಸ್ವಲ್ಪ ದೂರ ಹೋಗುವಷ್ಟರಲ್ಲಿ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮುಂದೆ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದರು.

    ಬಾಣಂತಿಯನ್ನು ಐಸಿಯುನಲ್ಲಿ ಇಟ್ಟು ಸಾವಿಗೆ ಕಾರಣರಾಗಿದ್ದಾರೆ ಎಂದು ಮೃತರ ತಂದೆ, ತಾಯಿ ಆರೋಪಿಸಿದರು.