Tag: tumkuru

  • ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ತುಮಕೂರು: ಮಾಹಿತಿ ಹಕ್ಕು ಕಾಯ್ದೆಗೆ (Right to Information Act) ಸಂಬಂಧಿಸಿದಂತೆ ಜಿಲ್ಲೆಯ (Tumkuru) 1,323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ.ಮಾಣಿ (Badruddin K Mani) ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೂ ಒಟ್ಟು ಆಯೋಗದಲ್ಲಿ 41,034 ಮೇಲ್ಮನವಿ ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 1,323 ಮೇಲ್ಮನವಿ ಅರ್ಜಿಗಳು ಬಾಕಿಯಿವೆ. ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅರಿವಿನ ಕೊರತೆಯಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಮನವಿ ಅರ್ಜಿಗಳು ಆಯೋಗಕ್ಕೆ ಸ್ವೀಕೃತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಆಯೋಗವು ರಾಜ್ಯದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ RTI ಅರ್ಜಿಗಳ ವಿಲೇವಾರಿ ವಿಳಂಬ: ಬಿ.ಆರ್ ಮಮತಾ

    ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಅರಿತು ಸಕಾಲದಲ್ಲಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಂದ ಸ್ವೀಕೃತ ಅರ್ಜಿಗಳನ್ನು 30 ದಿನದೊಳಗಾಗಿ ವಿಲೇವಾರಿ ಮಾಡಬೇಕು. ಸ್ವೀಕೃತ ಅರ್ಜಿಗಳ ವಿಲೇವಾರಿಯಲ್ಲಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿ 9ನೇ ಸ್ಥಾನದಲ್ಲಿದ್ದು, ಬಾಕಿಯಿರುವ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ವಿಲೇವಾರಿ ಮಾಡಿದಲ್ಲಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಕೆಯಾಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.

    ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ಮಾಹಿತಿ ನೀಡಲು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಇಲಾಖಾ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಅಧಿಕಾರಿಗಳ ವಿಳಂಬ ದೋರಣೆಯಿಂದ ನಷ್ಟ ಉಂಟಾದಲ್ಲಿ ಪರಿಹಾರವಾಗಿ ಅರ್ಜಿದಾರರಿಗೆ 1 ಲಕ್ಷ ರೂ.ಗಳವರೆಗೆ ಪರಿಹಾರ ನೀಡುವಂತೆ ಸೂಚಿಸುವ ಅಧಿಕಾರವನ್ನು ಮಾಹಿತಿ ಆಯೋಗ ಹೊಂದಿದ್ದು, ಈವರೆಗೂ ಒಟ್ಟು 406 ಅಧಿಕಾರಿಗಳ ವಿರುದ್ಧ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಯಡಿ ದಂಡ ಹಾಗೂ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ರಾಜ್ಯ ಮಾಹಿತಿ ಆಯೋಗದ ಮತ್ತೊಬ್ಬ ಆಯುಕ್ತ ಡಾ|| ಹರೀಶ್ ಕುಮಾರ್ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯಡಿ ನಿಯಮಾನುಸಾರ ಪ್ರಥಮ ಮೇಲ್ಮನವಿ ಅರ್ಜಿಗಳು ವಿಲೇವಾರಿಯಾಗದಿದ್ದಾಗ ಅರ್ಜಿದಾರರು ಆಯೋಗಕ್ಕೆ ದ್ವಿತೀಯ ಮೇಲ್ಮನವಿ ಸಲ್ಲಿಸಲಿದ್ದಾರೆ. ಮಾಹಿತಿ ಲಭ್ಯವಿದ್ದು, ಉದ್ದೇಶಪೂರ್ವಕವಾಗಿ ಅರ್ಜಿದಾರರಿಗೆ ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ ವಿಧಿಸಲಾಗುವುದು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅರ್ಜಿದಾರರ ಬಗ್ಗೆ ಕೆಟ್ಟ ಭಾವನೆ ಹೊಂದಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗಳನ್ನು ಆನ್‌ಲೈನ್ ಮ್ಯಾಪಿಂಗ್ ಮಾಡಲು ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌ಐಸಿ)ಕ್ಕೆ ಸೂಚನೆ ನೀಡಬೇಕೆಂದು ಪತ್ರಕರ್ತರು ಮನವಿ ಮಾಡಿದಾಗ ಸ್ಪಂದಿಸಿದ ಅವರು ಸ್ವೀಕೃತ ಮಾಹಿತಿ ಕಾಯ್ದೆ ಅರ್ಜಿಗಳನ್ನು ಆನ್‌ಲೈನ್ ಮ್ಯಾಪಿಂಗ್ ಮಾಡಲು ಎಲ್ಲಾ ಇಲಾಖೆಗಳು ಎನ್‌ಐಸಿಗೆ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಅರ್ಜಿದಾರರಿಗೆ ನಿಖರ ಮಾಹಿತಿ ನೀಡಲು ಸೂಚನೆ : ಇದಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳಿಗಾಗಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಏರ್ಪಡಿಸಿದ್ದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬದ್ರುದ್ದೀನ್ ಕೆ.ಮಾಣಿ ಮಾತನಾಡುತ್ತಾ, ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳು ಮಾಹಿತಿ ಹಕ್ಕು ಕಾಯ್ದೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಬೇಕು. ಜನಸಾಮಾನ್ಯರಿಗೆ ಸಮರ್ಪಕ, ಪಾರದರ್ಶಕ ಮತ್ತು ಸಮಯೋಚಿತ ಮಾಹಿತಿ ನೀಡಲು ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

    ಪ್ರಜಾಪ್ರಭುತ್ವವನ್ನು ಬಲಪಡಿಸಲು ಈ ಕಾಯ್ದೆಯು ಮಹತ್ವದ ಸಾಧನವಾಗಿದ್ದು, ಅಧಿಕಾರಿಗಳು ಜನರ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಬೇಕು. ಅರ್ಜಿದಾರರಿಗೆ ಸುಳ್ಳು ಮಾಹಿತಿಯನ್ನು ನೀಡಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಾಧ್ಯತೆಯಿರುವುದರಿಂದ ಮಾಹಿತಿ ಹಕ್ಕು ಅರ್ಜಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ನಿಖರವಾದ ಮಾಹಿತಿಯನ್ನು ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

    ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಸಂಪೂರ್ಣ ತಿಳುವಳಿಕೆ ಹೊಂದಿರಬೇಕು. ಕಚೇರಿಗಳಲ್ಲಿ ದಾಖಲೆಗಳ ನಿರ್ವಹಣೆಯನ್ನು ಸುರಕ್ಷಿತವಾಗಿಟ್ಟುಕೊಂಡು, ಅರ್ಜಿದಾರರು ಮಾಹಿತಿಗಾಗಿ ಸಲ್ಲಿಸಿದ ಅರ್ಜಿಗೆ 30 ದಿನಗಳೊಳಗೆ ಮಾಹಿತಿಯನ್ನು ಒದಗಿಸುವುದು ಕಡ್ಡಾಯವೆಂದು ತಿಳಿಸಿದರು. ಅಧಿಕಾರಿಗಳು ಮಾಹಿತಿ ನೀಡಲು ಅರ್ಜಿದಾರರನ್ನು ಸತಾಯಿಸಿದಲ್ಲಿ 1 ಲಕ್ಷ ರೂ.ಗಳವರೆಗೆ ಪರಿಹಾರ ಪಾವತಿಗೆ ಗುರಿಯಾಗಬೇಕಾಗುತ್ತದೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಅಧಿಕಾರಿಗಳು ಸರಿಯಾಗಿ ಓದಿ ಅರ್ಥೈಸಿಕೊಳ್ಳುವುದನ್ನು ಕಲಿಯಬೇಕು. ಕಾಯ್ದೆಯನ್ನು ಕಬ್ಬಿಣದ ಕಡಲೆಯೆಂದು ಭಾವಿಸದೆ ಸುಲಭವಾಗಿ ಉತ್ತರಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಅರ್ಜಿ ಸಲ್ಲಿಕೆಯಾದ 30 ದಿನದೊಳಗೆ ಕಡ್ಡಾಯವಾಗಿ ಹಿಂಬರಹ ಇಲ್ಲವೆ ಸೂಕ್ತ ಮಾಹಿತಿಯನ್ನು ನೀಡಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರು ಯಾವುದೇ ಅಧಿಕಾರಿಯ ಆಸ್ತಿ, ವೈಯಕ್ತಿಕ ವಿವರಗಳನ್ನು ಕೇಳಲು ಅವಕಾಶವಿಲ್ಲ ಎಂದು ತಿಳಿಸಿದರು.

    ಆಯೋಗದ ಮತ್ತೊಬ್ಬ ಆಯುಕ್ತ ಡಾ.ಹರೀಶ್ ಕುಮಾರ್ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆ ದುರುಪಯೋಗವಾಗದಂತೆ ಎಚ್ಚರಿಕೆವಹಿಸಬೇಕೆಂದು ತಿಳಿಸಿ, ಮಾಹಿತಿ ನೀಡುವುದು ಅಧಿಕಾರಿಗಳ ಕರ್ತವ್ಯ, ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ಇಲಾಖೆ, ಕಚೇರಿ, ಸಾರ್ವಜನಿಕ ಸಂಸ್ಥೆಗಳಲ್ಲಿ ನಡೆಯುತ್ತಿರುವ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆಯುವ ಹಕ್ಕು ದೊರೆಯುತ್ತದೆ. ಮಾಹಿತಿ ತಿಳಿದುಕೊಳ್ಳುವುದು ಜನರ ಮೂಲಭೂತ ಹಕ್ಕು ಎಂಬ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಬೇಕೆಂದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ, ಎಲ್ಲಾ ಸರ್ಕಾರಿ ಇಲಾಖೆಗಳು ಮಾಹಿತಿ ಹಕ್ಕು ಕಾಯ್ದೆ 4(1)ಎ ಮತ್ತು ಬಿ ಅನ್ವಯ ಕಚೇರಿಗಳಲ್ಲಿ ಅಧಿಕಾರಿ/ ಸಿಬ್ಬಂದಿ ಹಾಗೂ ಅವರ ಕಾರ್ಯವಿಧಾನ, ಸ್ವೀಕೃತ ಅರ್ಜಿ ಹಾಗೂ ವಿಲೇವಾರಿ ಮಾಹಿತಿಯನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಈಶ್ವರಪ್ಪ ಹಾಗೂ ಸಂಜೀವಪ್ಪ, ಉಪ ವಿಭಾಗಾಧಿಕಾರಿಗಳಾದ ನಾಹಿದಾ ಜûಮ್ ಜûಮ್ ಹಾಗೂ ಗೋಟೂರು ಶಿವಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

     

  • ಬೇರೆ ಯುವತಿಯೊಂದಿಗೆ ಪತಿ ಲವ್ವಿಡವ್ವಿ – ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

    ಬೇರೆ ಯುವತಿಯೊಂದಿಗೆ ಪತಿ ಲವ್ವಿಡವ್ವಿ – ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

    ತುಮಕೂರು: ಮದುವೆಯಾದರೂ ಬೇರೆ ಯುವತಿಯೊಂದಿಗೆ ಪತಿ ಸಲುಗೆಯಿಂದ ಇದ್ದಿದ್ದಕ್ಕೆ ಮನನೊಂದು ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾದ (Sira) ಜ್ಯೋತಿನಗರದಲ್ಲಿ ನಡೆದಿದೆ.

    ಪೃಥ್ವಿರಾಣಿ (20) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಶಿರಾ ತಾಲೂಕಿನ ಬುಕಾಪಟ್ಟದ ಪೃಥ್ವಿರಾಣಿ ಅದೇ ತಾಲೂಕಿನ ಪಕ್ಕದ ಊರಾದ ಕಿಲಾರ್ಧಹಳ್ಳಿಯ ಜೈಮಾರುತಿ ನಾಯಕ್ ಎಂಬಾತನನ್ನು ವಿವಾಹವಾಗಿದ್ದರು. ನಾಲ್ಕು ವರ್ಷದ ಪ್ರೀತಿಯ ಬಳಿಕ ನಾಲ್ಕು ತಿಂಗಳ ಹಿಂದೆ ಈ ಜೋಡಿ ಧರ್ಮಸ್ಥಳಕ್ಕೆ ಹೋಗಿ ಮದುವೆಯಾಗಿದ್ದರು. ಇದನ್ನೂ ಓದಿ: ಹಳೇ ಅಕ್ರಮ ಸಂಬಂಧಕ್ಕೆ ಶಿಕ್ಷೆ – ಹೆತ್ತ ತಾಯಿಯನ್ನೇ 2 ಬಾರಿ ಅತ್ಯಾಚಾರಗೈದ ಪಾಪಿ ಮಗ

    ಮದುವೆಯ ಬಳಿಕ ಶಿರಾ ಟೌನ್‌ನ ಜ್ಯೋತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆದ್ರೆ ನನ್ನ ಪ್ರೀತಿಸಿ ಬೇರೊಬ್ಬಳ ಮದುವೆಯಾಗಿದ್ದೀಯಾ ಎಂದು ಜೈಮಾರುತಿಗೆ ಬೇರೊಂದು ಯುವತಿ ಬೆದರಿಕೆ ಹಾಕುತ್ತಿದ್ದಳು. ಬೆದರಿಕೆ ಹಾಕಿದ ಯುವತಿ ಬಗ್ಗೆ ಪೃಥ್ವಿರಾಣಿ ಪತಿಯನ್ನು ಪ್ರಶ್ನಿಸಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಆಕೆ ಮೇಲೆ ಪತಿ ಹಲ್ಲೆ ಮಾಡಿದ್ದ ಆರೋಪ ಕೇಳಿಬಂದಿದೆ. ಇದೇ ವಿಚಾರವಾಗಿ ಪೃಥ್ವಿರಾಣಿ ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಇದನ್ನೂ ಓದಿ: Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

    ಜೈಮಾರುತಿ ಪತ್ನಿ ಕುಟುಂಬಸ್ಥರಿಗೆ ಕರೆ ಮಾಡಿ ನಿಮ್ಮ ಮಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದ. ಕುಟುಂಬಸ್ಥರು ಮನೆಗೆ ಬಂದು ನೋಡಿದಾಗ ಪೃಥ್ವಿರಾಣಿ ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಶವವಾಗಿ ಪತ್ತೆಯಾಗಿದ್ದಳು. ಕುತ್ತಿಗೆಯಲ್ಲಿ ಕಪ್ಪು ಗುರುತು, ಮೂಗಿನಲ್ಲಿ ರಕ್ತ ಕಂಡು ಅನುಮಾನಗೊಂಡು ಕುಟುಂಬಸ್ಥರು ಶಿರಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಸಂಬಂಧ ಶಿರಾ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಇದೀಗ ಶಿರಾ ಪೊಲೀಸರು, ಪತಿಯ ಕಿರುಕುಳ ಆರೋಪ ಹಿನ್ನಲೆ ಜೈಮಾರುತಿಯನ್ನು ಬಂಧಿಸಿ ತನಿಖೆ ನಡೆಸತ್ತಿದ್ದಾರೆ.

  • ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

    ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

    – ಬಿಜೆಪಿಯವರು ಅಂದು ಒಪ್ಪಿಗೆ ಕೊಟ್ಟು, ಇಂದು ವರದಿ ಸರಿಯಿಲ್ಲ ಅಂತಿದ್ದಾರೆ

    ಬೆಂಗಳೂರು: ತುಮಕೂರಿಗೆ (Tumkuru) ತೊಂದರೆ ಆಗಲ್ಲ ಅಂತಾ ತಾಂತ್ರಿಕ ವರದಿ ಕೊಟ್ಟಿದ್ದರು. ಈ ತಾಂತ್ರಿಕ ವರದಿ ಬಂದ ಬಳಿಕವೇ ಕೆಲಸ ಶುರು ಮಾಡಿಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwar) ಹೇಳಿದರು.

    ತುಮಕೂರು ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ (Hemavathi Express Canal) ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಸಚಿವರು, ತುಮಕೂರು ಎಸ್‌ಪಿಯಿಂದ ದೂರವಾಣಿ ಮೂಲಕ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ತುಮಕೂರಿಗೆ ತೊಂದರೆ ಆಗಲ್ಲ ಅಂತಾ ಅಧಿಕಾರಿಗಳು ತಾಂತ್ರಿಕ ವರದಿ ಕೊಟ್ಟಿದ್ದರು. ತಾಂತ್ರಿಕ ವರದಿ ಬಂದ ಬಳಿಕವೇ ಕೆಲಸ ಶುರು ಮಾಡಿದ್ದೇವೆ. ಇದನ್ನ ಬಿಜೆಪಿ ಶಾಸಕರು ಸಹ ಒಪ್ಪಿಕೊಂಡಿದ್ದರು. ಆದರೆ ಈಗ ತಾಂತ್ರಿಕ ವರದಿ ಸರಿ ಇಲ್ಲ ಅಂತಿದ್ದಾರೆ ಎಂದರು. ಇದನ್ನೂ ಓದಿ: ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

    1,000 ಕೋಟಿ ಕೊಟ್ಟಿದ್ದೇವೆ
    ತಾಂತ್ರಿಕ ಸಮಿತಿ ವರದಿ ಬಳಿಕವೇ ಕಾಮಗಾರಿ ಆರಂಭಿಸಲಾಗಿದೆ. ತಾಂತ್ರಿಕವಾಗಿ ಸಮಸ್ಯೆ ಆಗಲ್ಲ ಎಂದು ವರದಿ ಬಂದಿದೆ. ಉಪ ಮುಖ್ಯಮಂತ್ರಿಯವರು ಸಭೆ ನಡೆಸಿದ್ದರು. ಈ ಸಭೆಯಲ್ಲಿ ತುಮಕೂರು ಬಿಜೆಪಿ ಶಾಸಕರು ಇದ್ದರು. ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ಕೆನಾಲ್ ಯೋಜನೆಗೆ 1000 ಕೋಟಿ ರೂ. ಹಣವನ್ನು ಯೋಜನೆಗೆ ಕೊಟ್ಟಿದ್ದೇವೆ, ಹಣ ಕೂಡ ಬಿಡುಗಡೆ ಆಗಿತ್ತು ಎಂದು ಹೇಳಿದರು. ಇದನ್ನೂ ಓದಿ: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

    ಆಗ ತೊಂದರೆ ಆಗುತ್ತೆ ಅಂತಾ ಬಿಜೆಪಿ ಶಾಸಕರು, ಎಲ್ಲರೂ ಹೇಳಿದ್ದರು. ಆದಾದ ಬಳಿಕ ಸರ್ಕಾರ ತಾಂತ್ರಿಕ ಸಮಿತಿ ರಚನೆ ಮಾಡಿತ್ತು. ತಾಂತ್ರಿಕ ಸಮಿತಿಯು ತುಮಕೂರಿಗೆ ತೊಂದರೆಯಾಗಲ್ಲ ಎಂದು ವರದಿ ನೀಡಿದ ಬಳಿಕವೇ ಸರ್ಕಾರ ಕೆಲಸ ಶುರು ಮಾಡಿದೆ ಎಂದರು. ಇದನ್ನೂ ಓದಿ: ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್

    ತುಮಕೂರಿಗೆ ತೊಂದರೆ ಇಲ್ಲ ಅಂತಾ ವರದಿ ಹೇಳಿತ್ತು. ವರದಿಯಲ್ಲಿ ಲಿಂಕ್‌ ಕೆನಾಲ್‌‌ನಿಂದ ತೊಂದರೆ ಆಗುತ್ತದೆ ಎಂದು ಬಂದಿದ್ದರೆ ಮಾಡುತ್ತಿರಲಿಲ್ಲ. ಈಗ ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ವಿರೋಧ ಮಾಡುತ್ತಿದ್ದಾರೆ. ಇವತ್ತಿನ ಪ್ರತಿಭಟನೆ ಬಗ್ಗೆ ವರದಿ ಪಡೆಯುತ್ತೇನೆ. ಮಾಹಿತಿ ಪಡೆದು ಮಾತಾಡುತ್ತೇನೆ ಎಂದರು.

  • ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

    ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

    ಬೆಂಗಳೂರು: ನಮ್ಮ ಮೆಟ್ರೋ ರೈಲಿನ ಜನಪ್ರಿಯತೆಯಿಂದಾಗಿ ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ (Metro)  ರೈಲು ಸಂಪರ್ಕ ಸಾಧ್ಯತೆ ಮುನ್ನೆಲೆಗೆ ಬಂದಿದೆ.

    ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ಅವರು ಹೊಸ ಮೆಟ್ರೋ ಮಾರ್ಗಗಳನ್ನು ಆರಂಭಿಸಲು ಕರ‍್ಯಸಾಧ್ಯತಾ ವರದಿ ತಯಾರಿಗೆ ಮುಂದಾಗಿದ್ದಾರೆ. ಒಂದು ವೇಳೆ ಓಕೆ ಆದರೆ ಬೆಂಗಳೂರಿನ  (Benagluru) ಬಿಐಇಸಿಯಿಂದ ತುಮಕೂರಿಗೆ (Tumkuru)  ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಗೆ (Devanahaali) ಮೆಟ್ರೋ ಸಂಚಾರ ಶುರುವಾಗಬಹುದು. ಸರ‍್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕರ‍್ಯಸಾಧ್ಯತಾವರದಿ ತಯಾರಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಇದನ್ನೂ ಓದಿ:  ಗ್ಯಾರಂಟಿ ಭಾರದ ನಡುವೆ ಸರ್ಕಾರಿ ಇಲಾಖೆಗಳಿಗೆ ಬಂಪರ್‌ – ಯಾವ ಇಲಾಖೆಗೆ ಎಷ್ಟು ಅನುದಾನ?

    ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟ್ರೋ ರೈಲು ಕರ‍್ಯಾಚರಣೆಯು ಲಾಭದಾಯಕವಾಗಿದ್ದು, ಹೆಮ್ಮೆಯ ಸಂಕೇತ ಎಂದು ಸಿಎಂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:  ಬೆಂಗಳೂರು ಸೇರಿ ಈ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟು

    ಪ್ರಸ್ತುತ ಕರ‍್ಯಾಚರಣೆಯಲ್ಲಿರುವ 74 ಕಿಲೋ ಮೀಟರ್‌ ಮಾರ್ಗದೊಂದಿಗೆ 2025ರ ಮಾರ್ಚ್‌  ವೇಳೆಗೆ ಹೆಚ್ಚುವರಿಯಾಗಿ 44 ಕಿಲೋ ಮೀಟರ್‌ ಮೆಟ್ರೋ ಮಾರ್ಗ  ಸರ‍್ಪಡೆಯಾಗಲಿದೆ ಎಂದರು. ಇದನ್ನೂ ಓದಿ:  Karnataka Budget 2024: ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ

  • ರೂಮಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಪರಾರಿ!

    ರೂಮಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಪರಾರಿ!

    ತುಮಕೂರು: ಮನೆಯ ರೂಮಿಗೆ ನುಗ್ಗಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವೊಂದು ತುಮಕೂರು (Tumakuru) ನಗರದ ವಿದ್ಯಾನಗರದಲ್ಲಿ ಬೆಳಕಿಗೆ ಬಂದಿದೆ.

    ವೀಣಾ (23) ಮೃತ ದುರ್ದೈವಿ. ಈಕೆ ಪ್ರಿಯಕರ (Lover) ನಿಂದಲೇ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

    ಮೂಲತಃ ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ಈಕೆ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸವಿದ್ದಳು. ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ಈಕೆಯ ವಾಸವಿದ್ದ ರೂಮಿಗೆ ನುಗ್ಗಿ ಕತ್ತು ಕೊಯ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ.

    ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಕಾರು-ಬಸ್ ನಡುವೆ ಡಿಕ್ಕಿ ; ಐವರ ಸಾವು

    ಕಾರು-ಬಸ್ ನಡುವೆ ಡಿಕ್ಕಿ ; ಐವರ ಸಾವು

    ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರ ನಂದಿಹಳ್ಳಿ ಸಮೀಪ ಶುಕ್ರವಾರ ಇನ್ನೊವಾ ಕಾರಿಗೆ (Car) ಖಾಸಗಿ ಬಸ್‌ (Bus) ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮೃತರನ್ನು ಬೆಂಗಳೂರಿನ ವಿಜಯನಗರ ನಿವಾಸಿ ಕೆಎಸ್‌ಸಿಸಿಎಫ್ ಸಂಸ್ಥೆ ವ್ಯವಸ್ಥಾಪಕ ಗೋವಿಂದ ನಾಯಕ್ (58), ಪತ್ನಿ ತಿಪ್ಪಮ್ಮ (52), ಅವರ ಸಂಬಂಧಿಕರ ಮಕ್ಕಳಾದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ದಿನೇಶ್ (12), ಪಿಂಕಿ (15) ಹಾಗೂ ಕಾರು ಚಾಲಕ ಕುಣಿಗಲ್‌ನ ರಾಜೇಶ್ (40) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸಮನ್ಸ್‌

    ಬೆಂಗಳೂರಿನಿಂದ (Bengaluru) ಜಾಜೂರು ಗ್ರಾಮಕ್ಕೆ ಸಂಬಂಧಿಕರ ಮಕ್ಕಳನ್ನು ಕರೆದುಕೊಂಡು ಗೋವಿಂದ ನಾಯಕ್‌ ತೆರಳುತ್ತಿದ್ದರು. ತುಮಕೂರು ಕಡೆಯಿಂದ ಬಂದ ಖಾಸಗಿ ಬಸ್ ರಸ್ತೆ ಡಿವೈಡರ್‌ಗೆ ಗುದ್ದಿ, ಪಕ್ಕದ ರಸ್ತೆಗೆ ಬಂದು ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆಗಳಲ್ಲಿ ಓಪನ್ ಬಾರ್‌ಗೆ ಅನುಮತಿ ನೀಡಿ – ಚುನಾವಣಾ ಆಯೋಗಕ್ಕೆ ಕೊಡಗಿನ ಜನ ಮನವಿ

  • ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

    ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

    ತುಮಕೂರು: ರಾಜಕಾರಣದಲ್ಲಿ ಜಾತಿ ಮತ್ತು ದುಡ್ಡಿನ ಬಲವೇ ಪ್ರಮುಖ ಪಾತ್ರ ವಹಿಸುತ್ತದೆ. ಅಭಿವೃದ್ಧಿ ನೋಡಿ ಮತ ಹಾಕುವ ಆದ್ಯತೆಯ ಪ್ರಮಾಣ ಕಡಿಮೆ. ಪ್ರಬಲ ಜಾತಿಯ ಮತಗಳೇ ನಿರ್ಣಾಯಕವಾಗಿ, ಕ್ಷೇತ್ರದಿಂದ ಸ್ಪರ್ಧಿಸಿದ ಪ್ರಬಲ ಸಮುದಾಯದ ಅಭ್ಯರ್ಥಿಯೇ ಗೆಲ್ಲೋದು ಹೆಚ್ಚು. ಆದರೆ ಅಪರೂಪಕ್ಕೆ ಎಂಬಂತೆ ಜಾತಿ ಪ್ರಾಬಲ್ಯ ಇಲ್ಲದೇ ಇದ್ದರೂ ಗೆದ್ದು ಸಚಿವ ಸ್ಥಾನ ಅಲಂಕರಿಸಿದವರೂ ಇದ್ದಾರೆ.

    ಸಮುದಾಯದ ಮತ ನಂಬದೇ ಸರಳತೆ, ಕ್ಷೇತ್ರದ ಜನರೊಂದಿಗಿನ ಆಪ್ತತೆ ಹಾಗೂ ಅಭಿವೃದ್ಧಿ ಕೆಲಸದ ಮೂಲಕ ತಿಪಟೂರು (Tiptur) ಶಾಸಕ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಬಿಜೆಪಿಯಿಂದ (BJP) ಎರಡು ಬಾರಿ ಗೆದ್ದು ಸಚಿವರಾಗಿದ್ದಾರೆ.

    ಸಚಿವ ಬಿ.ಸಿ.ನಾಗೇಶ್ ಬ್ರಾಹ್ಮಣ ಸಮುದಾಯದವರು. ತಿಪಟೂರು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಇದೆ. ಸರಿಸುಮಾರು 68 ಸಾವಿರ ನೊಳಂಬ ಲಿಂಗಾಯತರ ಮತಗಳಿವೆ. ಬ್ರಾಹ್ಮಣ ಸಮುದಾಯದ ಮತ ಕೇವಲ 5-8 ಸಾವಿರದ ಆಸುಪಾಸು. ಆದರೂ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮಾಜಿ ಶಾಸಕ ಕೆ.ಷಡಕ್ಷರಿ ಅವರನ್ನು ಪರಾಭವಗೊಳಿಸಿ ಬಿ.ಸಿ.ನಾಗೇಶ್ ಎರಡು ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ.

    ತಿಪಟೂರು ತಾಲೂಕಿನವರಾದ ಬಿ.ಸಿ. ನಾಗೇಶ್ ಅವರು, 2008 ಮತ್ತು 2018ರ ಸಾರ್ವತ್ರಿಕ ಚುನಾವಣೆಯಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ (ಬಿ.ಇ) ಪದವೀಧರರಾಗಿರುವ ಬಿ.ಸಿ ನಾಗೇಶ್ ಅವರು ಕಾಲೇಜು ದಿನಗಳಲ್ಲೇ ಜನ ಸೇವೆ ಮಾಡುವ ಉದ್ದೇಶದಿಂದ ಸಾರ್ವಜನಿಕ ಜೀವನಕ್ಕೆ ಧುಮುಕಿದರು.

    ಸಾಂದರ್ಭಿಕ ಚಿತ್ರ

    ಸ್ವಾತಂತ್ರ್ಯ ಭಾರತದ ಕರಾಳ ಘಟನೆಗಳಲ್ಲಿ ಒಂದಾದ ‘ತುರ್ತು ಪರಿಸ್ಥಿತಿ’ ಹೇರಿಕೆ ವಿರುದ್ಧ ಹೋರಾಟ ನಡೆಸಿದ ಬಿ.ಸಿ. ನಾಗೇಶ್ ಅವರು ಸೆರೆಮನೆ ವಾಸ ಅನುಭವಿಸಿದ್ದಾರೆ. ಬಿ.ಸಿ. ನಾಗೇಶ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಪೂರ್ಣಾವಧಿ ಕಾರ್ಯಕರ್ತರಾಗಿ, ಎಬಿವಿಪಿ ಬೆಂಗಳೂರು ವಿಭಾಗದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೇಶದ ಹಿತಕ್ಕಾಗಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (RSS) ಸ್ವಯಂ ಸೇವಕರಾಗಿ ಬಿ.ಸಿ. ನಾಗೇಶ್ ಅವರು ಅವಿರತ ದುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿಯನ್ನು ನಿಭಾಯಿಸಿರುವ ಬಿ.ಸಿ. ನಾಗೇಶ್ ಹಿಡಿದ ಅಭಿವೃದ್ಧಿ ಕೆಲಸ ಮಾಡಿಯೇ ತೀರುವ ಛಾತಿ ಇದ್ದವರು.

    ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬಳಿಕ ಅಮೂಲಾಗ್ರ ಬದಲಾವಣೆ ತಂದರು. 15 ಸಾವಿರ ಶಿಕ್ಷಕರ ನೇಮಕ, 10 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಿ ಸದ್ದು ಮಾಡಿದ್ದಾರೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ, ಬಿಸಿಯೂಟ ನೌಕರರ ಸಂಬಳವೂ ಹೆಚ್ಚಿಸಿ ಕೈಹಿಡಿದಿದ್ದಾರೆ. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

    ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸದ ಮೇಲೂ ಸಚಿವರು ತೀರಾ ನಿಗಾ ಇರಿಸಿದ್ದರು. ಹೊನ್ನವಳ್ಳಿ ಏತನೀರಾವರಿ ಯೋಜನೆಯ ಎರಡನೇ ಹಂತದ ಅನುಷ್ಠಾನ. ರಾಷ್ಟ್ರೀಯ ಹೆದ್ದಾರಿ 206 ಚತುಷ್ಪಥ ನಿರ್ಮಾಣಕ್ಕೆ 32 ಕೋಟಿ ರೂ., ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಹತ್ತಾರು ಕೆರೆಗಳಿಗೆ ನೀರು ಹರಿಸಿದ್ದಾರೆ. ತಿಪಟೂರು ನೊಣವಿನಕೆರೆ ರಸ್ತೆ, ತಿಪಟೂರು ಹುಳಿಯಾರು ರಸ್ತೆ, ತಿಪಟೂರು-ಹಾಸನ ರಸ್ತೆ ಹೀಗೆ ನೂರಾರು ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿ ಮಾಡಿದ್ದಾರೆ. ದಿ. ಹಾಸ್ಯ ನಟ ನರಸಿಂಹರಾಜು ಅವರ ರಂಗಮಂದಿರ, ಶಾಲಾ ಕಾಲೇಜು ಕಟ್ಟಡ ಹೀಗೆ ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡ ಬಿ.ಸಿ.ನಾಗೇಶ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಇದ್ದಾರೆ.

    ಆದಾಗ್ಯೂ ಪಠ್ಯಪುಸ್ತಕ ರಚನಾ ಸಮಿತಿ ವಿವಾದ, ಹಿಜಬ್ ವಿವಾದಗಳಿಂದ ಸಚಿವರಿಗೆ ಸ್ವಲ್ಪ ಹಿನ್ನಡೆಯಾದರೂ ಈ ಬಾರಿ ಚುನಾವಣೆಯಲ್ಲಿ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ

  • ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ – ಶಾಲಾ ನಿರ್ದೇಶಕ ವಿರುದ್ಧ ದೂರು

    ಕುಡಿದ ಮತ್ತಿನಲ್ಲಿ ಬೆಲ್ಟ್, ದೊಣ್ಣೆಯಿಂದ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ – ಶಾಲಾ ನಿರ್ದೇಶಕ ವಿರುದ್ಧ ದೂರು

    ತುಮಕೂರು: ಕುಡಿದ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಶಾಲೆಯ ಆಡಳಿತ ಮಂಡಳಿಯ ನಿರ್ದೇಶಕ ಮನಸೋ ಇಚ್ಚೆ ದಾಳಿ ಮಾಡಿರುವ ಘಟನೆ ತುಮಕೂರು (Tumkuru) ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ (VishwaBharathi) ವಸತಿ ಶಾಲೆಯಲ್ಲಿ ನಡೆದಿದೆ.

    ಆರೋಪಿಯನ್ನು ಶಾಲೆಯ ಕಾರ್ಯದರ್ಶಿ ಎನ್ ಮೂರ್ತಿಯ ಮಗ ಮತ್ತು ನಿರ್ದೇಶಕ ಭರತ್ ಎಂದು ಗುರುತಿಸಲಾಗಿದ್ದು, ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ನಾಲ್ಕು ದಿನಗಳು ಕಳೆದರೂ ಈ ವಿಚಾರವನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಆದರೆ ನಂತರ ಪೋಷಕರು ವಿಚಾರ ತಿಳಿದು ಮಕ್ಕಳನ್ನು ಭೇಟಿ ಮಾಡಿದ್ದಾರೆ.  ಇದನ್ನೂ ಓದಿ: ಮಧ್ಯದ ಬೆರಳು ತೋರಿಸಿದ ಬೈಕ್ ಸವಾರನಿಗೆ ಮನಬಂದಂತೆ ಥಳಿಸಿದ BMTC ಚಾಲಕ ಅಮಾನತು

    ಕುಡಿತ ಮತ್ತಿನಲ್ಲಿ ಬಂದ ಭರತ್ ಮಕ್ಕಳು ಬೇಗ ಮಲಗಿದ್ದಾರೆಂದು ಮಕ್ಕಳ ತೊಡೆ ಮತ್ತು ಮರ್ಮಾಂಗಗಳ ಮೇಲೆ ಕಾರಣವಿಲ್ಲದೇ ಹಲ್ಲೆ ನಡೆಸಿದ್ದಾನೆ. ರಾತ್ರಿ ಹತ್ತುಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳು ದಮ್ಮಯ್ಯ ಅಂದರೂ, ಕಾಲಿಗೆ ಬಿದ್ದರೂ ಬಿಟ್ಟಿಲ್ಲ. ಎಣ್ಣೆ ನಶೆ ಕಡಿಮೆಯಾಗುವವರೆಗೂ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಒಂದು ಮಗುವಿನ ಕೈ ಮುರಿದು ಹೋಗುವಂತೆ ಥಳಿಸಿದ್ದಾನೆ.

    ಮೂರು ದಿನಗಳ ನಂತರ ಈ ಬಗ್ಗೆ ಮಕ್ಕಳು ಪೋಷಕರಿಗೆ ತಿಳಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ರಾತ್ರೋ ರಾತ್ರಿ ವಸತಿ ಶಾಲೆಗೆ ಬಂದ ಪೋಷಕರು, ಸದ್ಯ ತಲೆ ಮರೆಸಿಕೊಂಡಿರುವ ಭರತ್ ವಿರುದ್ಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಫುಟ್ ಬೋರ್ಡ್‍ನಲ್ಲಿ ವಿದ್ಯಾರ್ಥಿಗಳ ಪ್ರಯಾಣ – ಬಸ್ ಸಿಬ್ಬಂದಿಗೆ 25 ಸಾವಿರ ರೂ. ದಂಡ

    Live Tv
    [brid partner=56869869 player=32851 video=960834 autoplay=true]

  • ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ – ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ

    ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ – ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ

    ಹಾಸನ: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ (Tumkur) ಪತ್ತೆಯಾಗಿದ್ದಾಳೆ.

    ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapattana) ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನವೆಂಬರ್ 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ.

    ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ ಇಟ್ಟುಕೊಂಡು ಹೋಗಿದ್ದರು. ಶುಕ್ರವಾರ ತುಮಕೂರಿನಲ್ಲಿ ಮಹಿಳೆ ಜೊತೆ ದೇವಸ್ಥಾನಕ್ಕೆ ತೆರಳಿದ್ದ ನಂದಿತಾಳನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ತುಮಕೂರಿಗೆ ತೆರಳಿ ಬಾಲಕಿಯನ್ನು ಪೊಲೀಸರು ಕರೆತಂದಿದ್ದಾರೆ. ಇದನ್ನೂ ಓದಿ: ಪೀಸ್ ಪೀಸ್ ಪ್ರೇಮಿಯ ಮತ್ತಷ್ಟು ಕ್ರೂರತೆ ಬಹಿರಂಗ- ದೆಹಲಿ ಮಾತ್ರವಲ್ಲ ಡೆಹ್ರಾಡೂನ್‍ನಲ್ಲೂ ದೇಹದ ತುಂಡು ಎಸೆತ

    ಮೂಲತಃ ಕೆ.ಆರ್.ಪೇಟೆ (K.R.Pete), ತಾಲೂಕಿನ ನಂಜೇಗೌಡ ಮಂಗಳ ದಂಪತಿ ಪುತ್ರಿ ನಂದಿತಾಳನ್ನು ತಾತ ಚನ್ನರಾಯಪಟ್ಟಣ ದಾಸರಹಳ್ಳಿ ಗ್ರಾಮದ ಕುಮಾರ್ ಸಾಕಿಕೊಂಡು ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ನವೆಂಬರ್ 7 ಸೋಮವಾರದಂದು ಶಾಲೆಗೆ ಬಂದಿದ್ದ ನಂದಿತಾ ಸಂಜೆಯವರೆಗೂ ಶಾಲೆ ಮುಗಿಸಿ ವಾಪಸ್ ಹೋಗಿದ್ದಾಳೆ. ಶಿಕ್ಷಕರು ವಿದ್ಯಾರ್ಥಿಗಳೆಲ್ಲಾ ಹೋದ ಕೆಲಹೊತ್ತಿನಲ್ಲೇ ವಾಪಸ್ ಶಾಲೆಗೆ ಬಂದಿರುವ ನಂದಿತಾ ಶಾಲಾ ಆವರಣದಲ್ಲಿ ಬ್ಯಾಗ್ ಇಟ್ಟು ದಿಢೀರ್ ಕಾಣಿಯಾಗಿದ್ದಳು.

    ಈ ಸಂಬಂಧ ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೀಗ ಸಾಕು ಮಗಳು ಹಾಗೂ ವಿದ್ಯಾರ್ಥಿನಿ ಪತ್ತೆಯಾಗಿದ್ದು ಆತಂಕಗೊಂಡಿದ್ದ ಪೋಷಕರು ಹಾಗೂ ಶಿಕ್ಷಕರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಇಂದು ಮಂಗಳೂರಿನಲ್ಲಿ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯಗೌಡರ ಪ್ರತಿಮೆ ಅನಾವರಣ

    Live Tv
    [brid partner=56869869 player=32851 video=960834 autoplay=true]

  • ಜೆಡಿಎಸ್‍ಗೆ ಮಾಜಿ ಶಾಸಕ ಎಚ್.ನಿಂಗಪ್ಪ ಗುಡ್‌ಬೈ

    ಜೆಡಿಎಸ್‍ಗೆ ಮಾಜಿ ಶಾಸಕ ಎಚ್.ನಿಂಗಪ್ಪ ಗುಡ್‌ಬೈ

    ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ (Assembly Constituency) ಮಾಜಿ ಶಾಸಕ ಹಾಗೂ ಹಿರಿಯ ಜೆಡಿಎಸ್ (JDS) ಮುಖಂಡ ಹೆಚ್. ನಿಂಗಪ್ಪ (H. Ningappa) ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದರ ಮೂಲಕ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

    ಈ ಸಂಬಂಧ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂರವರಿಗೆ (CM Ibrahim) ರಾಜೀನಾಮೆ ಪತ್ರವನ್ನು ಬರೆದಿದ್ದು, ತಮ್ಮ ರಾಜೀನಾಮೆಗೆ ಕಾರಣವನ್ನು ವಿವರಿಸಿದ್ದಾರೆ. ನಾನು ಜಾತ್ಯತೀತ ಜನತಾದಳದ ಸಕ್ರಿಯ ಕಾರ್ಯಕರ್ತನಾಗಿದ್ದು ಹತ್ತು ವರ್ಷಗಳ ಕಾಲ ಪಕ್ಷದ ಜಿಲ್ಲಾಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. 2013ನೇ ವಿಧಾನಸಭಾ ಚುನಾವಣೆಯಲ್ಲಿ (Assembly election) ನನಗೆ ಟಿಕೆಟ್ ನೀಡದ ಕಾರಣ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದೆ. ನಂತರದ 2018ನೇ ವಿಧಾನಸಭಾ ಚುನಾವಣೆಯ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (H.D.Devegowda) ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು (H.D.Kumarswamy) ತಮಗೆ ಮತ್ತೆ ಪಕ್ಷಕ್ಕೆ ಆಹ್ವಾನ ನೀಡಿದ್ದು, ಅವರು ತಮ್ಮ ಮೇಲಿಟ್ಟಿದ್ದ ಪ್ರೀತಿ ಮತ್ತು ವಿಶ್ವಾಸಕ್ಕೆ ಮಣಿದು ಮತ್ತೆ ಜೆಡಿಎಸ್ ಸೇರ್ಪಡೆಗೊಂಡು ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಮಾಡಿ ಅಭ್ಯರ್ಥಿಯ ಗೆಲುವಲ್ಲಿ ಕಿಂಚಿತ್ ಸೇವೆ ಸಲ್ಲಿಸಿದೆ.

    ಚುನಾವಣೆಯ ನಂತರದ ವಿದ್ಯಮಾನಗಳನ್ನು ಹಾಗೂ ಆರೋಪಗಳನ್ನು ಮಾಡಲು ಈ ಸಂದರ್ಭದಲ್ಲಿ ನನಗೆ ಇಷ್ಟವಿಲ್ಲ. ನಾನು ಪಕ್ಷಕ್ಕೆ ಮರಳಿದಾಗ ಪ್ರಾಥಮಿಕ ಸದಸ್ಯತ್ವವನ್ನು ಮತ್ತೆ ಪಡೆದಿದ್ದರೂ ಸಹ ಕುಮಾರಸ್ವಾಮಿ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದರು. ಆದರೆ ನನ್ನನ್ನು ಪಕ್ಷದ ಎಲ್ಲ ಚಟುವಟಿಕೆಗಳಿಂದ ದೂರ ಇಡಲಾಯಿತು. ಪ್ರಸ್ತುತ ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ ಎಂದು ಭಾವಿಸಿ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಹೊರಗಿನಿಂದ ಬಂದವರಿಗೆ ಟಿಕೆಟ್ ನೀಡಲು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿರೋಧ

    ಮಾಜಿ ಶಾಸಕ ಹೆಚ್.ನಿಂಗಪ್ಪನವರು ಕಾಂಗ್ರೆಸ್ (Congress) ಪಕ್ಷದ ಕಡೆ ಮುಖ ಮಾಡಿದ್ದು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ತರುವಲ್ಲಿ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೇಸರಿ ರಾಜಕೀಯ ಬಣ್ಣವಾಗೋದು ಬೇಡ – ಸರ್ಕಾರಕ್ಕೆ ಶ್ರೀನಿವಾಸ್ ಪ್ರಸಾದ್ ಸಲಹೆ

    Live Tv
    [brid partner=56869869 player=32851 video=960834 autoplay=true]